<?xml version='1.0' encoding='UTF-8'?><?xml-stylesheet href="http://www.blogger.com/styles/atom.css" type="text/css"?><feed xmlns='http://www.w3.org/2005/Atom' xmlns:openSearch='http://a9.com/-/spec/opensearchrss/1.0/' xmlns:georss='http://www.georss.org/georss' xmlns:gd='http://schemas.google.com/g/2005' xmlns:thr='http://purl.org/syndication/thread/1.0'><id>tag:blogger.com,1999:blog-2037979210344114254</id><updated>2012-02-16T12:17:35.773+05:30</updated><category term='೧೫. ಕಾವ್ಯದ ಕುಣಿತ (ಪ್ರಾಸ ಛಂದಸ್ಸು ಇತ್ಯಾದಿ)'/><category term='೧೨. ಅರ್ಥಚಿಂತನೆ'/><category term='೦೩. ಅನುವಾದಿತ'/><category term='೯೮. ಇತ್ಯಾದಿ...'/><category term='೯೯. ಇತರ ಬ್ಲಾಗ್ ಬರಹ ಸೇರ್ಪಡೆಗಳು'/><category term='೦೯. ಪ್ರವಾಸ'/><category term='೧೧. ವಿಚಾರ'/><category term='೧೦. ವ್ಯಕ್ತಿಗಳು'/><category term='೧೩. ಪುಸ್ತಕ'/><category term='೦೨. ಕವನಗಳು'/><category term='೧೪. ಹನಿ-ಮಿನಿ; ಚೂರು-ಚುಟುಕ'/><category term='೦೫. ಲಹರಿ'/><category term='೦೭. ನಾಟಕ/ಮಾತು-ಕತೆ/ಪ್ರಹಸನ...'/><category term='೦೧. ಒಳಹೋಗುವ ಮುನ್ನ ಒಂದು ನಿಮಿಷ...'/><category term='೦೪. ಪ್ರಚಲಿತ'/><category term='೦೬. ಚುಚ್ಚಿದ್ದು - ಕಚ್ಚಿದ್ದು'/><category term='೦೮. ಭಾಷೆ'/><title type='text'>ನನ್ನ ಬರಹಗಳು</title><subtitle type='html'>ಕತೆ, ಕವನ, (ಕಾಡು) ಹರಟೆ, ಇತ್ಯಾದಿ...</subtitle><link rel='http://schemas.google.com/g/2005#feed' type='application/atom+xml' href='http://nannabaraha.blogspot.com/feeds/posts/default'/><link rel='self' type='application/atom+xml' href='http://www.blogger.com/feeds/2037979210344114254/posts/default?max-results=100'/><link rel='alternate' type='text/html' href='http://nannabaraha.blogspot.com/'/><link rel='hub' href='http://pubsubhubbub.appspot.com/'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><generator version='7.00' uri='http://www.blogger.com'>Blogger</generator><openSearch:totalResults>71</openSearch:totalResults><openSearch:startIndex>1</openSearch:startIndex><openSearch:itemsPerPage>100</openSearch:itemsPerPage><entry><id>tag:blogger.com,1999:blog-2037979210344114254.post-1630996289349244834</id><published>2012-02-01T00:33:00.001+05:30</published><updated>2012-02-01T00:37:47.792+05:30</updated><category scheme='http://www.blogger.com/atom/ns#' term='೧೫. ಕಾವ್ಯದ ಕುಣಿತ (ಪ್ರಾಸ ಛಂದಸ್ಸು ಇತ್ಯಾದಿ)'/><title type='text'>ಕಾವ್ಯದ ಕುಣಿತ - ಮೊದಲ ಹೆಜ್ಜೆಗಳು 3: ಮಾತ್ರೆ-ಗಣ (ಮುಂದುವರೆದಿದೆ)</title><content type='html'>&lt;div style="text-align: justify;"&gt;ಹಿಂದಿನ ಬರಹದಲ್ಲಿ ಲಘು-ಗುರುಗಳ ಬಳಕೆಯನ್ನು ಸ್ವಲ್ಪ ಮಟ್ಟಿಗೆ ನೋಡಿದೆವು; ಬರೀ ಲಘುವನ್ನೇ ಬಳಸಿ ಮತ್ತು ಬರೀ ಗುರುವನ್ನೇ ಬಳಸಿ ಕೆಲವು ಸಾಲುಗಳನ್ನು ಮಾಡಿದೆವು. (ನೋಡಿಲ್ಲದೆ ಇದ್ದರೆ ಆ ಬರಹ &lt;a href="http://nannabaraha.blogspot.in/2012/01/2.html"&gt;ಇಲ್ಲಿದೆ&lt;/a&gt; ನೋಡಿ - right click ಮಾಡಿ ಬೇರೊಂದು ಕಿಟಕಿಯಲ್ಲಿ ತೆಗೆದಿಟ್ಟುಕೊಂಡರೆ ಒಳ್ಳೆಯದು)&lt;br /&gt;&lt;br /&gt;ಸುಮ್ಮನೆ ಒಂದು ಸಲ ನೆನಪಿಸಿಕೊಳ್ಳೋಣ.  ಲಘುವನ್ನೇ ಬಳಸಿ ಎರಡು, ಮೂರು, ನಾಲ್ಕು, ಐದು ಮತ್ತು ಏಳು ಮಾತ್ರೆಗಳ ಗುಂಪಿರುವಂತೆ ಸಾಲುಗಳನ್ನು ರಚಿಸಿದೆವು, ಹಾಗೇ ಗುರುವನ್ನೇ ಬಳಸಿ ಎರಡು, ನಾಲ್ಕು ಮತ್ತು ಆರು ಮಾತ್ರೆಗಳ ಗುಂಪಿರುವಂತೆಯೂ ಸಾಲುಗಳನ್ನು ರಚಿಸಿದೆವು.&lt;br /&gt;&lt;br /&gt;ಆದರೆ ನಾವು ಯಾವಾಗಲೂ ಬರೀ ಲಘುವಿನಲ್ಲಿ ಅಥವಾ ಬರೀ ಗುರುವಿನಲ್ಲಿ ಮಾತಾಡುತ್ತೀವಾ?  ಖಂಡಿತಾ ಇಲ್ಲ.  ನಮ್ಮ ಮಾತಲ್ಲಿ ಲಘು-ಗುರು ಎರಡೂ ರೀತಿಯ ಅಕ್ಷರಗಳು ಇದ್ದೇ ಇರುತ್ತವೆ ಅಲ್ಲವೇ?  ಹಾಗೇ ಪದ್ಯದಲ್ಲೂ ಕೂಡ.  ಯಾವುದೇ ಪದ್ಯವಾದರೂ ಲಘು-ಗುರುಗಳ ಮಿಶ್ರಣ.  ಕೆಲವು ಅಕ್ಷರ ತುಂಡು (ಲಘು), ಕೆಲವಕ್ಕೆ ಎಳೆತ (ಗುರು).  ಮೊದಲು ಮಾಡಿದೆವಲ್ಲ, ಮೂರು, ನಾಲ್ಕು, ಐದು, ಏಳು ಇತ್ಯಾದಿ ಲಯಬದ್ಧ ಗುಂಪು? ಅಲ್ಲಿ ಬರೀ ಲಘು ಅಥವ ಬರೀ ಗುರು ಬಳಸುವ ಬದಲು, ಲಘು ಮತ್ತು ಗುರು ಎರಡನ್ನೂ ಬೇರೆಬೇರೆ ರೀತಿಗಳಲ್ಲಿ ಬಳಸಿ ಬೇರೆ ಬೇರೆ ಲಯಗಳನ್ನು ಸೃಷ್ಟಿಸಬಹುದು. &lt;br /&gt;&lt;br style="font-weight: bold;"&gt;&lt;span style="font-weight: bold;"&gt;ಇಲ್ಲಿ ನೋಡಿ (ಇದನ್ನು ಜೋರಾಗಿ ಹೇಳಿ):&lt;/span&gt;&lt;br /&gt;&lt;br /&gt;ಬಳಸಿ ಬಳಸಿ ನುಡಿಯ ಬೇಡ ನೇರ ನುಡಿಯ ನೂ (ತಕಿಟ ತಕಿಟ ತಕಿಟ ತಕಿಟ ತಾತ ತಕಿಟ ತಾ ಎಂಬಂತೆ) [ಬಳಸಿ (UUU) ಬಳಸಿ (UUU) ನುಡಿಯ (UUU) ಬೇಡ ( _U)  ನೇರ ( _U) ನುಡಿಯ (UUU) ನೂ - ಇಲ್ಲಿ ಮೂರುಮೂರು ಮಾತ್ರೆಯ ಜೊತೆ ಬಂದಿದೆ, ಆದರೆ ಕೆಲವು ಗುಂಪುಗಳಲ್ಲಿ ಎಲ್ಲವೂ ಲಘು, ಕೆಲವರಲ್ಲಿ ಲಘು-ಗುರುಗಳ ಮಿಶ್ರಣ]&lt;br /&gt;&lt;br /&gt;ಗಣಪತಿ ಬಪ್ಪಾ ಬಂದಾ ನೋಡೂ (ತಕತಕ ತಾತಾ ತಾತಾ ತಾತಾ ಎಂಬಂತೆ) [ಗಣಪತಿ (UUUU) ಬಪ್ಪಾ ( _ _ ) ಬಂದಾ ( _ _ ) ನೋಡೂ ( _ _ ) - ನಾಲ್ಕುನಾಲ್ಕು ಮಾತ್ರೆಯ ಜೊತೆ, ಲಘು-ಗುರುಗಳ ಮಿಶ್ರಣ]&lt;br /&gt;&lt;br /&gt;ತೂಕಡಿಸಿ ತೂಕಡಿಸಿ ಬೀಳದಿರು ತಮ್ಮಾ (ತಾತಕಿಟ ತಾತಕಿಟ ತಾತಕಿಟ ತಾತಾ ಎಂಬಂತೆ) [ತೂಕಡಿಸಿ ( _UUU) ತೂಕಡಿಸಿ ( _UUU) ಬೀಳದಿರು ( _UUU) ತಮ್ಮಾ ( _ _ ) - ಐದೈದು ಮಾತ್ರೆಗಳ ಜೊತೆ, ಲಘು ಗುರುಗಳ ಸೊಗಸಾದ ಮಿಶ್ರಣ ಇಲ್ಲಿ]&lt;br /&gt;&lt;br /&gt;ಶಾಲೆಯಲಿ ನೀ ಓತ್ಲ ಹೊಡೆದರೆ ನಾಕು ಬಾರಿಸಿ ಬಿಡುವೆನು (ತಾತಕಿಟತಾ ತಾತಕಿಟತಕ ತಾತತಾಕಿಟ ತಕಿಟತಾ ಎಂಬಂತೆ) [ಶಾಲೆಯಲಿ ನೀ ( _UUU_) ಓತ್ಲ ಹೊಡೆದರೆ ( _UUUUU) ನಾಕು ಬಾರಿಸಿ ( _U_UU) ಬಿಡುವೆನು (UUUU) - ಏಳೇಳು ಮಾತ್ರೆಯ ಜೊತೆ, ಲಘು-ಗುರುಗಳ ಹದವಾದ ಮಿಶ್ರಣ ಇಲ್ಲಿದೆ]&lt;br /&gt;&lt;br /&gt;ಗೆಳೆಯರೇ, ಇಷ್ಟು ಓದಿದಮೇಲೆ, ಹಾಡಿದ ಮೇಲೆ, ನಿಮಗೆ ಮಾತ್ರೆ-ಲಯದ ಮರ್ಮ ಅರ್ಥವಾಗಿರಬೇಕು.  ಇನ್ನು ವಿಜೃಂಭಿಸಿ.  ೧-೨ (ಲಘು-ಗುರು) ಗಳನ್ನು ವಿವಿಧ ರೀತಿಯಲ್ಲಿ ಬಳಸಿ ಎರಡೋ ಮೂರೋ ನಾಲ್ಕೋ ಹೀಗೆ ನಿಮ್ಮ ಮನಸ್ಸಿನಲ್ಲಿ ಮೂಡಿದ ಲಯದಲ್ಲಿ ಸಾಲುಗಳನ್ನು ರಚಿಸಿ.  ನೆನಪಿರಲಿ, ಇದು ಕಾವ್ಯವಾಗಬೇಕಿಲ್ಲ, (ಕಾವ್ಯವಾದರೂ ತಪ್ಪಲ್ಲ)  ಒಟ್ಟಿನಲ್ಲಿ ಲಯಬದ್ಧವಾದ, ಅರ್ಥಬದ್ಧವಾದ ಸಾಲುಗಳು ಬಂದರೆ ಸರಿ. &lt;br /&gt;&lt;br /&gt;&lt;span style="font-weight: bold; font-style: italic;"&gt;ಮತ್ತೆ ನೆನಪಿಸುತ್ತೇನೆ, ಬರೀ ಯಾಂತ್ರಿಕವಾಗಿ ಲಘು ಗುರುಗಳನ್ನು ಲೆಕ್ಕಹಾಕಿ ಬರೆಯಬೇಡಿ.  ನೀವು ಬರೆದದ್ದು ನಿಮಗೇ ತಾಳಹಾಕಿಕೊಂಡು ಓದಲು ಸಿಗಬೇಕು.&lt;/span&gt;  ಲಯ ಮನಸ್ಸಿನಲ್ಲಿ ಮೂಡಬೇಕಷ್ಟೇ ಬರೀ ಲೆಕ್ಕದಲ್ಲಿ ಅಲ್ಲ. &lt;br /&gt;&lt;br /&gt;ಇದು ನಿಮ್ಮ ಹಿಡಿತಕ್ಕೆ ಸಿಕ್ಕಿದ ಮೇಲೆ ಮುಂದೆ ನೋಡೋಣ.&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-1630996289349244834?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/1630996289349244834/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=1630996289349244834&amp;isPopup=true' title='9 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/1630996289349244834'/><link rel='self' type='application/atom+xml' href='http://www.blogger.com/feeds/2037979210344114254/posts/default/1630996289349244834'/><link rel='alternate' type='text/html' href='http://nannabaraha.blogspot.com/2012/02/3.html' title='ಕಾವ್ಯದ ಕುಣಿತ - ಮೊದಲ ಹೆಜ್ಜೆಗಳು 3: ಮಾತ್ರೆ-ಗಣ (ಮುಂದುವರೆದಿದೆ)'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>9</thr:total></entry><entry><id>tag:blogger.com,1999:blog-2037979210344114254.post-3240557059966415374</id><published>2012-01-17T00:53:00.003+05:30</published><updated>2012-01-17T01:01:30.464+05:30</updated><category scheme='http://www.blogger.com/atom/ns#' term='೧೫. ಕಾವ್ಯದ ಕುಣಿತ (ಪ್ರಾಸ ಛಂದಸ್ಸು ಇತ್ಯಾದಿ)'/><title type='text'>ಕಾವ್ಯದ ಕುಣಿತ - ಮೊದಲ ಹೆಜ್ಜೆಗಳು 2: ಮಾತ್ರೆ-ಗಣ</title><content type='html'>&lt;div style="text-align: justify;"&gt;ಹಿಂದಿನ ಬರಹದಲ್ಲಿ ಲಘು-ಗುರು ಅಂದರೆ ಏನು ಅಂತ ತಿಳಿದುಕೊಂಡೆವು (ನೋಡಿಲ್ಲದೇ ಇದ್ದರೆ ಆ ಬರಹ &lt;a href="http://nannabaraha.blogspot.com/2012/01/1.html"&gt;ಇಲ್ಲಿದೆ&lt;/a&gt; ನೋಡಿ - right click ಮಾಡಿ ಬೇರೊಂದು ಕಿಟಕಿಯಲ್ಲಿ ತೆಗೆದಿಟ್ಟುಕೊಂಡರೆ ಒಳ್ಳೆಯದು)&lt;br /&gt;&lt;br /&gt;ಸುಮ್ಮನೇ ಒಂದು ಸಲ ನೆನಪಿಸಿಕೊಳ್ಳೋಣ.  ಲಘು ಅಂದರೆ ಒಂದು ಚಿಟುಕೆ ಹೊಡೆಯುವಷ್ಟು ಕಾಲ.  ಗುರು ಅಂದರೆ ಅದರ ಎರಡರಷ್ಟು ಕಾಲ.  ಆದ್ದರಿಂದ ಸಾಮಾನ್ಯವಾಗಿ ಎಲ್ಲ ಹ್ರಸ್ವಾಕ್ಷರಗಳೂ ಲಘು; ಎಲ್ಲಾ ಧೀರ್ಘಾಕ್ಷರಗಳೂ ಗುರು.  ಒತ್ತಕ್ಷರದ ಹಿಂದಿನ ಅಕ್ಷರ ಅದೇನೇ ಇದ್ದರೂ ಗುರುವೇ.  ಸರಳವಾಗಿ ತಿಳಿಯಲು ಇದಿಷ್ಟು ಈಗ್ಗೆ ಸಾಕು.  ಈಗ ಬಳಕೆಯಲ್ಲಿ ಈ ಲಘು-ಗುರುಗಳನ್ನು ಸ್ವಲ್ಪ ನೋಡೋಣ.&lt;br /&gt;&lt;br /&gt;ಈ ಸಾಲುಗಳನ್ನು ಜೋರಾಗಿ ಓದಿ:&lt;br /&gt;&lt;br /&gt;ಚಿಲಿಪಿಲಿ ಉಲಿಯುತ ನಲಿವುದೆ ಸೊಗಸು (ತಕ ತಕ ತಕ ತಕ ಎಂಬಂತೆ - ಚಿಲಿ| ಪಿಲಿ| ಉಲಿ| ಯುತ| ನಲಿ| ವುದೆ| ಸೊಗ| ಸು - ಇಲ್ಲೆಲ್ಲಾ ಎರಡೆರಡು ಮಾತ್ರೆಯ ಜೊತೆಯಾಗಿ ಬಂದಿದೆ)&lt;br /&gt;&lt;br /&gt;ಇಲಿಯು ಗಣಪಗೊಲಿಯಿತು (ತಕಿಟ ತಕಿಟ ತಕಿಟ ಎಂಬಂತೆ - ಇಲಿಯು| ಗಣಪ| ಗೊಲಿಯಿ| ತು - ಇಲ್ಲಿ ಮೂರುಮೂರು ಮಾತ್ರೆಯ ಜೊತೆಗಳು ಬಂದುವು)&lt;br /&gt;&lt;br /&gt;ತಲೆಯನು ಪರಪರ ಕೆರೆಯುತಲಿಹಳು (ತಕತಕ ತಕತಕ ತಕತಕ ಎಂಬಂತೆ - ತಲೆಯನು| ಪರಪರ| ಕೆರೆಯುತ| ಲಿಹಳು| - ಇಲ್ಲಿ ನಾಲ್ಕು ನಾಲ್ಕು ಮಾತ್ರೆಯ ಜೊತೆ)&lt;br /&gt;&lt;br /&gt;ಮನೆಗೆಲಸ ಮುಗಿಸದೆಯೆ ತರಗತಿಗೆ ಹೊರಟ (ತಕತಕಿಟ ತಕತಕಿಟ ತಕತಕಿಟ ಎಂಬಂತೆ - ಮನೆಗೆಲಸ| ಮುಗಿಸದೆಯೆ| ತರಗತಿಗೆ| ಹೊರಟ| - ಇಲ್ಲಿ ಐದೈದು ಮಾತ್ರೆಯ ಜೊತೆ)&lt;br /&gt;&lt;br /&gt;ಮನೆಯ ಕೆಲಸವ ಬರೆದು ಮುಗಿಸದೆ ತರಗತಿಗೆ ಇವ ಹೊರಟನು (ತಕಿಟತಕತಕ ತಕಿಟತಕತಕ ಎಂಬಂತೆ - ಮನೆಯ ಕೆಲಸವ| ಬರೆದು ಮುಗಿಸದೆ| ತರಗತಿಗೆ ಇವ| ಹೊರಟನು| - ಇಲ್ಲಿ ಏಳೇಳು ಮಾತ್ರೆಯ ಜೊತೆ)&lt;br /&gt;&lt;br /&gt;ಇಲ್ಲಿ ನೀವು ಗಮನಿಸಬೇಕಾದ್ದು ಮೇಲೆ ಬಳಸಿರುವುದೆಲ್ಲಾ ಲಘು (U) ಅಕ್ಷರಗಳೇ!  ಅಂದರೆ ಕೇವಲ ಒಂದು ಮಾತ್ರೆಯ (ಒಂದು ಚಿಟುಕೆ ಹೊಡೆಯುವಷ್ಟೇ) ಅಕ್ಷರಗಳು.&lt;br /&gt;&lt;br /&gt;&lt;span style="font-weight: bold; font-style: italic;"&gt;ಇದೇ ರೀತಿ ಕೆಲವು ಅಭ್ಯಾಸಗಳನ್ನು ಮಾಡೋಣವೇ?  ಮೇಲೆ ಹೇಳಿದ ಯಾವುದಾದರೂ ಲಯದಲ್ಲಿ, ಬರೀ ಲಘು ಅಕ್ಷರಗಳನ್ನೇ ಬಳಸಿ ಏನಾದರೂ ಬರೆಯಿರಿ (ಅದು ಅದ್ಭುತ ಕಾವ್ಯವಾಗಿರಬೇಕಿಲ್ಲ, ಏನಾದರೂ ಆಗಬಹುದು)&lt;/span&gt;&lt;br style="font-weight: bold; font-style: italic;"&gt;&lt;br /&gt;ಈಗ ಈ ಸಾಲುಗಳನ್ನು ಜೋರಾಗಿ ಓದೋಣ.&lt;br /&gt;&lt;br /&gt;ಕಾ ಕಾ ಕಾಗೇ ಬಂತೂ ನೋಡೀ (ತಾ ತಾ ತಾ ತಾ ಎಂಬಂತೆ - ಕಾ| ಕಾ| ಕಾ| ಗೇ| ಬಂ| ತೂ| ನೋ| ಡೀ| - ಇಲ್ಲಿ ಎರಡೆರಡು ಮಾತ್ರೆಗಳು ಬಂದಿದಿವೆ, ಆದರೆ ಒಂದೊಂದರ ಎರಡು ಲಘುವಿನ ಬದಲು ಒಂದೇ ಗುರು ಬಂದಿದೆ)&lt;br /&gt;&lt;br /&gt;ಬಂದಾ ಬಂದಾ ಚಂದಾ ಮಾಮಾ (ತಾತಾ ತಾತಾ ತಾತಾ ತಾತಾ ಎಂಬಂತೆ - ಬಂದಾ| ಬಂದಾ| ಚಂದಾ| ಮಾಮಾ| - ಇಲ್ಲಿ ನಾಲ್ಕು ನಾಲ್ಕು ಮಾತ್ರೆಯ ಜೊತೆ, ಅಂದರೆ ಒಂದೊಂದು ಗುಂಪಿನಲ್ಲೂ ಎರಡೆರಡು ಗುರು)&lt;br /&gt;&lt;br /&gt;ರಂಗಯ್ಯಾ ಬಂದವ್ನೇ ಬಾಗ್ಲಲ್ಲೀ ನಿಂದವ್ನೇ (ತಾತಾತಾ ತಾತಾತಾ ತಾತಾತಾ ತಾತಾತಾ ಎಂಬಂತೆ - ರಂಗಯ್ಯಾ| ಬಂದವ್ನೇ| ಬಾಗ್ಲಲ್ಲೀ| ನಿಂದವ್ನೇ| - ಇಲ್ಲಿ ಆರಾರು ಮಾತ್ರೆಯ ಜೊತೆ, ಅಂದರೆ ಒಂದೊಂದು ಗುಂಪಿನಲ್ಲೂ ಮೂರುಮೂರು ಗುರು)&lt;br /&gt;&lt;br /&gt;ಇಲ್ಲಿ ನೀವು ಗಮನಿಸಬೇಕಾದ್ದು ಮೇಲೆ ಬಳಸಿರುವುದೆಲ್ಲಾ ಗುರು ( _ ) ಅಕ್ಷರಗಳೇ!  ಅಂದರೆ ಎರಡು ಮಾತ್ರೆಯ (ಎರಡು ಚಿಟುಕೆ ಹೊಡೆಯುವಷ್ಟು) ಅಕ್ಷರಗಳು.&lt;br /&gt;&lt;br /&gt;&lt;span style="font-weight: bold; font-style: italic;"&gt;ಇದೇ ರೀತಿ ಕೆಲವು ಅಭ್ಯಾಸಗಳನ್ನು ಮಾಡೋಣವೇ?  ಮೇಲೆ ಹೇಳಿದ ಯಾವುದಾದರೂ ಲಯದಲ್ಲಿ, ಬರೀ ಗುರು ಅಕ್ಷರಗಳನ್ನೇ ಬಳಸಿ ಏನಾದರೂ ಬರೆಯಿರಿ&lt;/span&gt;&lt;br /&gt;&lt;br /&gt;ಗೆಳೆಯರೇ, ಇಲ್ಲಿಂದಾಚೆಗೆ ಇದು ನಿಮ್ಮೆಡೆಯಿಂದ ತುಸು ಅಭ್ಯಾಸವನ್ನು ನಿರೀಕ್ಷಿಸುತ್ತದೆ.  ಅಭ್ಯಾಸರೂಪದ ಪ್ರತಿಕ್ರಿಯೆಗಳು ಬಂದಷ್ಟೂ ಮುಂದುವರೆಸಲು ಹುರುಪು.&lt;br /&gt;&lt;br /&gt;ಇದು ಸ್ವಲ್ಪ ಕೈವಶವಾದ ನಂತರ ಮುಂದುವರೆಯೋಣ.&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-3240557059966415374?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/3240557059966415374/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=3240557059966415374&amp;isPopup=true' title='16 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/3240557059966415374'/><link rel='self' type='application/atom+xml' href='http://www.blogger.com/feeds/2037979210344114254/posts/default/3240557059966415374'/><link rel='alternate' type='text/html' href='http://nannabaraha.blogspot.com/2012/01/2.html' title='ಕಾವ್ಯದ ಕುಣಿತ - ಮೊದಲ ಹೆಜ್ಜೆಗಳು 2: ಮಾತ್ರೆ-ಗಣ'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>16</thr:total></entry><entry><id>tag:blogger.com,1999:blog-2037979210344114254.post-1152654505855764699</id><published>2012-01-09T21:32:00.006+05:30</published><updated>2012-01-10T15:10:29.619+05:30</updated><category scheme='http://www.blogger.com/atom/ns#' term='೧೪. ಹನಿ-ಮಿನಿ; ಚೂರು-ಚುಟುಕ'/><title type='text'>ಚೊಚ್ಚಿಲ ಕಂದನನ್ನು ಕಾಯುತ್ತಾ</title><content type='html'>&lt;p style="text-align: justify;"&gt;&lt;span class="Apple-style-span" style=" line-height: 24px; background-color: rgb(255, 255, 255);font-family:Times,serif;" &gt;"ಪದ್ಯಪಾನ"  ಕಾವ್ಯಕುತೂಹಲಿಗಳ ಜಾಲತಾಣದಲ್ಲಿ (padyapaana.com) ವಿವಿಧ ಛಂದಸ್ಸುಗಳಲ್ಲಿ "ಚೊಚ್ಚಿಲ ಬಸಿರಿನ" ಬಗ್ಗೆ ಪದ್ಯಗಳನ್ನು ರಚಿಸುವ ಆಹ್ವಾನವಿತ್ತು.  &lt;/span&gt;ಕವಯಿತ್ರಿಗಿರುವ ಅನುಭವ ಸಂಪತ್ತು ಈ ವಿಷಯದಲ್ಲಿ ಕವಿಗಿಲ್ಲವೆನ್ನುವುದೇನೋ ನಿಜ.  ಆದರೂ ಕವಿಗಿರುವ ಕಲ್ಪನಾಸ್ವಾತಂತ್ರ್ಯವನ್ನು  ತುಸು (ದುರ್)ಉಪಯೋಗ ಪಡಿಸಿಕೊಂಡಿದ್ದೇನೆ.  ಇದರಲ್ಲಿ ’ಬುರುಡೆ-ಬುಡುಬುಡಿಕೆ’ಕಂಡುಬಂದರೆ ತಾಯಂದಿರು  ಮನ್ನಿಸಿ.&lt;span class="Apple-style-span" style=" line-height: 24px; background-color: rgb(255, 255, 255);font-family:Times,serif;" &gt;&lt;/span&gt;&lt;/p&gt;&lt;p&gt;&lt;span style="font-weight: bold;"&gt;ಪಂಚಮಾತ್ರಾ ಚೌಪದಿ&lt;/span&gt;&lt;br style="font-weight: bold;"&gt;ಮುಗಿಲ ಮೊದಲನೆ ಮಳೆಗೆ ನೆನೆದ ಮಣ್ಣಿನ ಕಂಪು&lt;br /&gt;ಮುಗಿದ ಹಚ್ಚನೆ ಮೊಗ್ಗು ಬಿರಿವ ಕೆಂಪು&lt;br /&gt;ಬಗೆ-ಮೈಗಳುಬ್ಬೆ ಮೊದಲಬ್ಬೆತನದಾ ಪೆಂಪು&lt;br /&gt;ನಗೆಸೂಸಿ ಹರಡುತಿದೆ ಮನೆಗೆ ತಂಪು.&lt;br /&gt;&lt;br /&gt;&lt;span style="font-weight: bold;"&gt;ಉತ್ಫಲಮಾಲಾ&lt;/span&gt;&lt;br /&gt;ಬೆಚ್ಚನೆ ರಾತ್ರೆಯೊಳ್ ಮನದಿ ಶಂಕೆಯು ಹಿಗ್ಗುತ ಚುಚ್ಚಿ ಕಾಡಿರಲ್&lt;br /&gt;ಬೆಚ್ಚುತ ಚಿಂತಿಪಳ್ ಮಗುವಿದೇಂ ಮಲಗಿಪ್ಪುದೊ ಸತ್ತುದೊ ಕಾಣೆನೇ ಶಿವಾ&lt;br /&gt;ಮುಚ್ಚಿದ ಕಂಗಳೊಳ್ ನಿದಿರೆ ಬಾರದೆ ಬೇಗುದಿ ಭಾರವಾಗಿರಲ್&lt;br /&gt;ಕೆಚ್ಚನೆ ಕಾಲೊಳೊದ್ದು ಬಸಿರಂ ತನಯಂ ಹಿರಿ ಚಿಂತೆನೀಗುವಂ&lt;br /&gt;&lt;br /&gt;&lt;span style="font-weight: bold;"&gt;ಕಂದ&lt;/span&gt;&lt;br /&gt;ಕಂದಂ ಬಸಿರೊದೆವಂದಂ&lt;br /&gt;ಬಂಧುರಮೀ ತಾಯ್ ಕುಲಾವಿಗನಸಿನ ಚಂದಂ&lt;br /&gt;ಕಂದಂ ನಸುನಗುವೋಲ್ ಮೇಣ್&lt;br /&gt;ಮುಂದೋಡುತ ಬಿಳ್ದು ಭೋರಿಡುವವೋಲ್ ನೆನೆವಳ್&lt;br /&gt;&lt;br /&gt;&lt;span style="font-weight: bold;"&gt;ಮತ್ತೇಭವಿಕ್ರೀಡಿತ&lt;/span&gt;&lt;br /&gt;ಮೆರೆವಳ್ ಮೋದದಿ ಮತ್ತೆ ಮೈಯ ಮರೆವಳ್ ಮತ್ತಾಲಸಂ ಬಾಧಿಸಲ್&lt;br /&gt;ಒರಗುತ್ತುಂ ಕಿರು ಮಂಚದೊಳ್ ನಲುಮೆ ತೋಳ್ ಸಾಂಗತ್ಯಮಂ ಧೇನಿಪಳ್&lt;br /&gt;ಕಿರಿದೊಂದೇ ಕ್ಷಣದೊಳ್ ಮನೋನಯನದೊಳ್ ಕಂದಂ ನಗುತ್ತೈತರಲ್&lt;br /&gt;ಸಿರಿಯಂ ಕಂಡವೊಲಾಗಿ ಕಂಡ ಕನಸೊಳ್ ತೇಲುತ್ತಲಾನಂದಿಪಳ್&lt;br /&gt;&lt;br /&gt;&lt;span style="font-weight: bold;"&gt;ರಗಳೆ&lt;/span&gt;&lt;br /&gt;ಮೊದಲಿನ ಹಿಗ್ಗದು ಆಗಸಮುಟ್ಟಲ್&lt;br /&gt;ಬೆದರಿಪ ಭಯವದು ಮೈ ಮನ ತಟ್ಟಲ್&lt;br /&gt;ಬಗೆಬಗೆ ಬಯಕೆಯ ತೆನೆಯೊಡೆಯುತಿರಲ್&lt;br /&gt;ಚಿಗುರುವ ಲತೆಯೊಲ್ ಬಸಿರದು ಬೆಳೆಯಲ್&lt;br /&gt;ತೆಗೆವಾ ನೋವದು ಬೆಳೆದಿರೆ ಒಡಲೊಳ್&lt;br /&gt;ಬಗೆಯೊಳ್ ಕಂದಂ ನೋವ ಮರೆಸಿರಲ್&lt;br /&gt;ಬೆವರುತ ಸುಖದೊಳ್ ಬೆದರುತ ಭಯದೊಳ್&lt;br /&gt;ನವೆವಳ್ ಬೆಳೆವಳ್ ಚೊಚ್ಚಲ ಬಸಿರೊಳ್&lt;br /&gt;&lt;/p&gt;&lt;div&gt;&lt;div style="text-align: justify;"&gt;&lt;span class="Apple-style-span" style="line-height: 24px; background-color: rgb(255, 255, 255);font-family:Times, serif;" &gt;&lt;span style="font-weight: bold;"&gt;ಕೊ:&lt;/span&gt; ಗೆಳೆಯ ಚಂದ್ರಮೌಳಿಯವರು ಮೇಲಿನ ಉತ್ಫಲಮಾಲಾ ವೃತ್ತದ ಎರಡನೆಯ ಸಾಲಿನಲ್ಲಿ ಮೂರಕ್ಷರ ಹೆಚ್ಚಾಗಿ ಬಂದಿದೆಯೆಂಬುದನ್ನು &lt;a href="http://padyapaana.com/?p=855#comment-2719"&gt;ಗಮನಿಸಿದರು&lt;/a&gt;.  ಇದನ್ನು ಸರಳವಾಗಿ ಸರಿಪಡಿಸಬಹುದಾದರೂ, &lt;/span&gt; ಅದೇಕೋ ಇದನ್ನು ಸರಿಪಡಿಸಲು ಮನಸ್ಸೊಪ್ಪುತ್ತಿಲ್ಲ.  ಈ ಹೆಚ್ಚಿನ ಗಣವನ್ನು ಗರ್ಭಸ್ಥ ಶಿಶುವಿನ ಪ್ರತೀಕವೆಂದು ಹಾಗೆಯೇ ಉಳಿಸಿಕೊಳ್ಳುತ್ತೇನೆ:&lt;br /&gt;&lt;/div&gt;&lt;br /&gt;ಆರರ ಮೇಲಿನೊಂದು ಗಣ ದೋಷಮದುತ್ಫಲ ಮಾಲೆಗೆಂದಪರ್&lt;br /&gt;ಮೀರಿರೆ ಪದ್ಯದಂದಗಿಡುಗುಂ ಸರಿ ತೋರದು ಛಂದಕೆಂದಿರಲ್&lt;br /&gt;ಆರನೆ ಕಾಲ್ವೆರಲ್ ದೊರೆಯ ಕಂದನ ಚಂದವ ಕೀಳುಗಟ್ಟಿತೇಂ&lt;br /&gt;ಮೀರಿದ ಭಾರಮುತ್ಫಲಿತ ಗರ್ಭಕೆ ಶೋಭೆಯ ತರ್ಪುದೇ ದಿಟಂ&lt;br /&gt;&lt;br /&gt;ಮರೆಯಲ್ ಭಾವದದೊಂದು ಜೋರ ಸೆಳೆಯೊಳ್ ಮೇಲಾಗಿ ಮೂರಕ್ಕರಂ&lt;br /&gt;ನೆರೆಯಲ್ ತಾಳವು ತಪ್ಪಿ ಮುಗ್ಗರಿಸಲುಂ ಛಂದಸ್ಸದೇಂ ಬೇರೆಯೇಂ?&lt;br /&gt;ಸರಿಯೈದೇವೆರಲಿದ್ದೊಡಂ ಮನುಜಗಾರಾಯ್ತೆಂದು ಬೇರಾದನೇಂ?&lt;br /&gt;ಮರೆವೀ ಮಾನವ ಜನ್ಮಜಾತ ಗುಣವೈ ಬ್ರಹ್ಮಾದಿಗಳ್ ಮೀರರೇಂ?&lt;br /&gt;&lt;br /&gt;&lt;div style="text-align: justify;"&gt;ಪದ್ಯದಲ್ಲೊಂದು ಗಣ ಮೀರಿದರೆ ಛಂದಸ್ಸು ಕೆಡುವುದು, ನಿಜ.  ಕಾಲಿಗೆ ಐದೇ ಬೆರಳಾದರೂ ಅಪರೂಪಕ್ಕೆ ಆರು ಬೆರಳಿರುವುದಿಲ್ಲವೇ?  ಅದೇನು ಚಂದ್ರಹಾಸನ ಅಂದಗೆಡಿಸಿತೇ?  ಮೀರಿದ ಭಾರವು ಬಸಿರಿನ ಶೋಭೆಯನ್ನು ಹೆಚ್ಚಿಸುವುದಲ್ಲದೇ ಕೆಡಿಸುವುದೇ?  ಬ್ರಹ್ಮಾದಿಗಳೇ ಮರೆತು ಬೆರಳಿನ ಲೆಕ್ಕವನ್ನು ಹೆಚ್ಚು ಕಡಿಮೆ ಮಾಡುವಾಗ ಮರೆವು ಮನುಜನಿಗೆ ಸಹಜವಲ್ಲವೇ? :)&lt;br /&gt;&lt;/div&gt;&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-1152654505855764699?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/1152654505855764699/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=1152654505855764699&amp;isPopup=true' title='13 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/1152654505855764699'/><link rel='self' type='application/atom+xml' href='http://www.blogger.com/feeds/2037979210344114254/posts/default/1152654505855764699'/><link rel='alternate' type='text/html' href='http://nannabaraha.blogspot.com/2012/01/blog-post.html' title='ಚೊಚ್ಚಿಲ ಕಂದನನ್ನು ಕಾಯುತ್ತಾ'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>13</thr:total></entry><entry><id>tag:blogger.com,1999:blog-2037979210344114254.post-851590960590164251</id><published>2012-01-07T00:23:00.006+05:30</published><updated>2012-01-17T01:03:22.841+05:30</updated><category scheme='http://www.blogger.com/atom/ns#' term='೧೫. ಕಾವ್ಯದ ಕುಣಿತ (ಪ್ರಾಸ ಛಂದಸ್ಸು ಇತ್ಯಾದಿ)'/><title type='text'>ಕಾವ್ಯದ ಕುಣಿತ - ಮೊದಲ ಹೆಜ್ಜೆಗಳು 1: ಲಘು-ಗುರು</title><content type='html'>&lt;div style="text-align: justify;"&gt;ಇತ್ತೀಚಿಗೆ ನಾನು ಛಂದೋಬದ್ಧ ರಚನೆಗಳಿಗೆ ಕೈಹಾಕಿದ ಮೇಲೆ ಇದರಲ್ಲಿ ಆಸಕ್ತಿ ತಳೆದ ಅನೇಕ ಮಿತ್ರರು, ಈ ಬಗ್ಗೆ ಸರಳವಾಗಿ, ಪ್ರಾಕ್ಟಿಕಲ್ ಆಗಿ ಏನಾದರೂ ಏಕೆ ಬರೆಯಬಾರದೆಂದು ಕೇಳಿದರು.  ಛಂದಸ್ಸಿನ ಬಗ್ಗೆ, ಕಾವ್ಯದ ಬಗ್ಗೆ ತಿಳಿಸುವ ಸಾವಿರಾರು ಪುಸ್ತಕಗಳೂ ನೂರಾರು ವೆಬ್ ಸೈಟುಗಳೂ ಇರುವಾಗ ನನ್ನದೊಂದು ಮಾತಿನ ಅಗತ್ಯ ಇಲ್ಲಿ ಇದೆಯೇ ಎನ್ನಿಸಿತು.  ಆದರೂ ಈ ಛಂದಸ್ಸಾಹಿತ್ಯರಾಶಿಯಲ್ಲಿ ನಮಗೆ ಬೇಕಾದ ನಿರ್ದಿಷ್ಟ ಪ್ರಶ್ನೆಗೆ ಉತ್ತರ ಹುಡುಕುವುದಕ್ಕಾದರೂ ಛಂದೋಜಗತ್ತಿನಲ್ಲಿ ತುಸು ಪ್ರವೃತ್ತಿ ಬೇಕಲ್ಲವೇ?  ಅದನ್ನು ಹುಡುಕಿ ಓದುವವರಾರು, ಓದಿದರೂ ಯಾರೊಡನಾದರೂ personal ಆಗಿ ಚರ್ಚಿಸಿದಷ್ಟು ಪರಿಣಾಮ ಬೀರುತ್ತವೆಯೇ?  ಈ ಹಿನ್ನೆಲೆಯೇನೂ ಇಲ್ಲದ, ಆದರೆ ಕಲಿಯುವ/ರಚಿಸುವ ಉತ್ಸಾಹವಂತೂ ಹೇರಳವಾಗಿರುವ ಕವಿಗಡಣಕ್ಕೇನು ದಾರಿ?  ಈ ಅಗತ್ಯವನ್ನೂ ತುಂಬಿ ಕೊಡುವ ಪ್ರಯತ್ನಗಳೂ ಇಲ್ಲದಿಲ್ಲ.  ಪ್ರೊ. ಅ.ರಾ.ಮಿತ್ರರ "ಛಂದೋಮಿತ್ರ" ಇಂಥದ್ದೊಂದು ಪ್ರಯತ್ನ.  ಮಿತ್ರರಿಗೆ ವಿಶಿಷ್ಟವಾದ, ಸುಲಲಿತ ಹಾಸ್ಯಮಿಶ್ರಿತ ಶೈಲಿಯಲ್ಲಿ ಛಂದಶ್ಶಾಸ್ತ್ರದಂಥ ಗಂಭೀರ ವಿಷಯವನ್ನು ಸರಸವಾಗಿ ಹೇಳುವ ಶೈಲಿ ಅನ್ಯಾದೃಶ.  ಆಯಾ ಛಂದಸ್ಸುಗಳನ್ನು ಆಯಾ ಛಂದಸ್ಸಿನ ಪದ್ಯಗಳಲ್ಲೇ ವಿವರಿಸುತ್ತಾ, ಅದೇ ಛಂದಸ್ಸಿನಲ್ಲಿ ಹಾಸ್ಯಮಿಶ್ರಿತವಾದ ಲಕ್ಷಣ ಪದ್ಯವನ್ನೂ ಕೊಡುವ ಈ ಪುಸ್ತಕ ಛಂದಶ್ಶಾಸ್ತ್ರಸಾಹಿತ್ಯದಲ್ಲಿ ಒಂದು ಅಪೂರ್ವ ಪ್ರಯತ್ನ.  ಆದರೂ, ಇಷ್ಟು ಸುಲಲಿತ ಸರಳ ಶೈಲಿಯಿದ್ದಾಗ್ಯೂ ಈ ಪುಸ್ತಕವೂ ಪದ್ಯಭೂಯಿಷ್ಠವೇ ಆದ್ದರಿಂದ ಪದ್ಯವೆಂದರೆ ತುಸು ಕಣ್ಣೆಳೆಯುವ ಗುಂಪಿಗೆ ಇದನ್ನು ಇನ್ನೂ ಸರಳಗೊಳಿಸಿ ಲಲಿತ ಗದ್ಯದಲ್ಲಿ ಹೇಳುವ ಅಗತ್ಯವಿದೆಯೆನ್ನಿಸಿತು.  ಹಾಗೆಯೇ ಛಂದಶ್ಶಾಸ್ತ್ರದ ಪಾಠಗಳನ್ನು ಸರಸ-ಗಂಭೀರವಾಗಿ ಪ್ರಾತ್ಯಕ್ಷಿಕೆಯೊಡನೆ ತಿಳಿಸಿಕೊಡುವ ಶ್ರೀ ಆರ್. ಗಣೇಶರ ವಿಡಿಯೋಗಳೂ ಇವೆ (http://www.padyapaana.com).  ಪದ್ಯಪಾಠದ ಗಂಭೀರ ವಿದ್ಯಾರ್ಥಿಗಳಿಗೆ ಇದಕ್ಕಿಂತ ಹೇಳಿ ಮಾಡಿಸಿದ ತಾಣ ಇನ್ನೊಂದಿರಲಾರದು.  ಈ ಪಾಠಗಳು ಬಹು ಸರಳವಾಗಿ, ಸ್ವಾರಸ್ಯಕರವಾಗಿದ್ದರೂ, ಇಲ್ಲಿಯೂ ಕಾವ್ಯರಚನೆಗೆ ಕೈಹಾಕಬೇಕಾದರೆ ತುಸುವಾದರೂ ಭಾಷಾಸಿದ್ಧತೆ ಬೇಕು.&lt;br /&gt;&lt;br /&gt;ಆದರೆ ನನ್ನ ಈ ಲೇಖನ ಸರಣಿಯ audience ಈ ಗಂಭೀರ ವಿದ್ಯಾರ್ಥಿಗಳೂ ಅಲ್ಲ - ಈಗಷ್ಟೇ ಪದ್ಯರಚನೆಗೆ ಕೈಹಾಕಿ, ನವ್ಯ ಕವನಗಳ ಮಾದರಿಯ ಗದ್ಯರೂಪದ ಪದ್ಯಗಳನ್ನು ಬರೆಯುತ್ತಾ, ಛಂದಸ್ಸು, ಹಳಗನ್ನಡ ಇವುಗಳ ಗಂಧಗಾಳಿಯೂ ಇಲ್ಲದಿದ್ದರೂ ಛಂದೋಬದ್ಧವಾಗಿ ರಚಿಸಬೇಕೆಂಬ ಆಸಕ್ತಿ, ಆದರೆ ಲಘು-ಗುರುಗಳ ಮಾತ್ರೆ ನುಂಗಲು ಹೇವರಿಕೆ ಇವೆರಡೂ ಸಮಾನವಾಗಿ ಸಮ್ಮಿಳಿತವಾಗಿರುವ ಉತ್ಸಾಹೀ ಕವಿ ಕಿಶೋರರಿಗೆ, ಕಿಶೋರ ಕವಿಗಳಿಗೆ ಈ ಸರಣಿ ಅರ್ಪಿತ.  ಅದಕ್ಕೆಂದೇ ತೀರ ತೀರ ಪ್ರಾಥಮಿಕ ಮಟ್ಟದಿಂದ ಆರಂಭಿಸಿ ಛಂದೋಪ್ರಪಂಚದ ಕೆಲವು ಹೊಳಹುಗಳನ್ನಷ್ಟೇ ಕಾಣಿಸುವುದು ಈ ಸರಣಿಯ ಉದ್ದೇಶ.  ಇದರಿಂದ ಕಾವ್ಯಕ್ಕೆ ಲಯಪ್ರಾಸಗಳೂ ರುಚಿಕರ ವ್ಯಂಜನ ಹೌದೆಂಬ ವಿಷಯ ಉತ್ಸಾಹೀ ಓದುಗರ ಮನಕ್ಕೆ ಹತ್ತಿದರೆ, ಛಂದಸ್ಸನ್ನು ಗಂಭೀರವಾಗಿ ಅಧ್ಯಯನಮಾಡಬೇಕೆಂಬ ಹುಕ್ಕಿ ಬಂದರೆ, ನಾನು ಧನ್ಯ.  ಒಮ್ಮೆ ಇದು ಬಂದಮೇಲೆ ಮೇಲ್ಕಾಣಿಸಿದ ಪುಸ್ತಕ-ಜಾಲತಾಣಗಳಿದ್ದೇ ಇವೆ; ಜೊತೆಗೆ ಅಪಾರ ಸಾಹಿತ್ಯವೂ ಇದೆ.&lt;br /&gt;&lt;br /&gt;ಸರಣಿಯ ಹೆಸರೇ ಸೂಚಿಸುವಂತೆ ಕಾವ್ಯದ ಕುಣಿತದ ಭಾಗವನ್ನು ತೋರಿಸುವುದೇ ಈ ಸರಣಿಯ ಉದ್ದೇಶ.  ಕುಣಿತ ಎಂಬುದರ ಬದಲು ನಡಿಗೆಯೆಂಬುದು ಹೆಚ್ಚು ಗಂಭೀರವಾಗಿರುತ್ತಿತ್ತಲ್ಲವೇ ಎಂಬ ಪ್ರಶ್ನೆಗೆ, "ಹೌದು, ಅದಕ್ಕೇ ನಡಿಗೆಯ ಬದಲು ಕುಣಿತ ಆದದ್ದು" ಎಂಬುದು ನನ್ನ ಉತ್ತರ.  ಮೊದಲೇ ಹೇಳಿದಂತೆ ಕಾವ್ಯದ ಗಂಭೀರ ನಡಿಗೆಯನ್ನೂ ಗಜಗಮನವನ್ನೂ ತೋರಿಸುವ ಅನೇಕ ಪ್ರೌಢಾತಿಪ್ರೌಢ ಗ್ರಂಥಗಳು ಈಗಾಗಲೇ ಇವೆ.  ಆದರೆ ಆಡುವ ಮಕ್ಕಳಿಗೆ ಬ್ರಹ್ಮಸೂತ್ರದಿಂದೇನು ಪ್ರಯೋಜನ?&lt;br /&gt;&lt;br /&gt;ಮೊದಲೇ ಹೇಳಿದಂತೆ ಈ ಸರಣಿ ಕೇವಲ ಆರಂಭಿಕರಿಗೋಸ್ಕರ.  ಪರಿಭಾಷೆಯನ್ನು ಆದಷ್ಟು ಕಡಿಮೆಗೊಳಿಸುವುದು ಇಲ್ಲಿ ಉದ್ದೇಶ.  ಹಾಗೂ ಬಳಸಿದ ಪರಿಭಾಷೆಯಲ್ಲಿ ಸೂಕ್ಷ್ಮ ಅದಲುಬದಲು (interchange) ಆಗಲೂ ಬಹುದು.  ಈ ಸರಣಿಯಲ್ಲಿ ಒಂದೊಂದು ಲೇಖನವೂ ಒಂದೊಂದು ಹೊಸ ವಸ್ತು-ವಿಷಯವನ್ನೊಳಗೊಂಡಿರುತ್ತದೆ.  ಬರೆದಿದ್ದಕ್ಕೆ ತಕ್ಕಷ್ಟು ಉದಾಹರಣೆಗಳನ್ನೂ ಕೊಡುತ್ತೇನೆ.  ಇದರ ಉದ್ದೇಶ ಸುಮ್ಮನೇ ಬರೆದು ಮರೆಯುವುದಲ್ಲ.  ಆಸಕ್ತರು ತಾವೂ ಆಯಾ ಪ್ರಕಾರದಲ್ಲಿ ಪದ್ಯವನ್ನು ರಚಿಸಲು ಪ್ರಯತ್ನಿಸಬಹುದು.  ನಿಜಕ್ಕೂ ಇದೊಂದು ಆಟದಂತೆ, ಹರಟೆ ಕಟ್ಟೆಯಂತೆ ಚೇತೋಹಾರಿಯಾಗಬೇಕೆಂದು ನನ್ನ ಆಸೆ.  ಇಲ್ಲಿ ನೀವು ಮಾಮೂಲಾಗಿ ಹರಟಿದರೂ ಅಡ್ಡಿಯಿಲ್ಲ, ಒಬ್ಬರು ಇನ್ನೊಬ್ಬರ ಕಾಲೆಳೆದರೂ ಅಡ್ಡಿಯಿಲ್ಲ, ಆದರೆ ಒಂದೇ ಒಂದು ಶರತ್ತೆಂದರೆ ಹರಟಿದರೂ ಪದ್ಯದಲ್ಲೇ ಹರಟಬೇಕು, ಕಾಲೆಳೆದರೂ ಪದ್ಯದಲ್ಲೇ ಕಾಲೆಳೆಯಬೇಕು, ಒದ್ದರೂ ಪದ್ಯದಲ್ಲೇ ಒದೆಯಬೇಕು [:)]&lt;br /&gt;&lt;br /&gt;ಇನ್ನು ಮುಂದುವರೆಯೋಣ.  ಮೊದಲಿಗೆ, ಛಂದಸ್ಸು ಅಂದ್ರೆ ಏನು?  ಛಂದಸ್ಸು ಅಂದ್ರೆ, ಕವನಕ್ಕೆ ಬೇಕಾದ ಲಯ, ಪ್ರಾಸಗಳ ಕಟ್ಟುಪಾಡು.  ಅರೇ, ಒಂದು ನಿಮಿಷ!  ಈ ಲಯ ಅಂದ್ರೆ ಏನಪ್ಪಾ?!!&lt;br /&gt;&lt;br /&gt;&lt;span style="font-weight: bold;"&gt;ಈ ಕೆಳಗಿನ ಸಾಲುಗಳನ್ನು ನೋಡಿ (ಜೋರಾಗಿ ಹೇಳಿ, ಬೇಕಿದ್ರೆ ಕೈ ಚಪ್ಪಾಳೆ ಹಾಕಿಕೊಂಡು ಹೇಳಿ):&lt;/span&gt;&lt;br /&gt;&lt;br /&gt;ಅನಂತದಿಂ ದಿಗಂತದಿಂ&lt;br /&gt;ಅನಂತದಾ ದಿಗಂತದಿಂ|&lt;br /&gt;&lt;br /&gt;ಏನಿದು ಧೂಳೀ ಓಹೋ ಗಾಳೀ&lt;br /&gt;ಸುರ್ರನೆ ಬಂತೈ ಸುಂಟರಗಾಳೀ|&lt;br /&gt;&lt;br /&gt;ಆಟಕ್ಕುಂಟೂ ಲೆಕ್ಕಕ್ಕಿಲ್ಲಾ|&lt;br /&gt;&lt;br /&gt;ಬಂದಾ ಬಂದಾ ಸಣ್ ತಮ್ಮಣ್ಣಾ|&lt;br /&gt;&lt;br /&gt;ಬೇಕೇ ಬೇಕೂ&lt;br /&gt;ನ್ಯಾಯಾ ಬೇಕೂ|&lt;br /&gt;&lt;br /&gt;ಲಗ್ಗ ಲಗಾ ಲಗಾ ಲಗಾ&lt;br /&gt;ಲಗ್ಗ ಲಗಡಿ ಲಗಾ ಲಗಾ|&lt;br /&gt;&lt;br /&gt;ಇಲ್ಲೊಂದು ಕುಣಿತದ ಸ್ಥಿತಿ ಕಾಣುತ್ತದೆ ಅಲ್ಲವೇ? ಅದೇ ಲಯ/rhythm.  ಅದು ಹೇಗೆ ಬಂತು?  ಹೇಗೆ ಅಂದ್ರೆ, ಕೆಲವು ಅಕ್ಷರಗಳು ಚಿಕ್ಕವು, ಕೆಲವು ಉದ್ದ; ಕೆಲವಕ್ಕೆ ಕಡಿಮೆ ಕಾಲ ತೆಗೆದುಕೊಂಡರೆ ಕೆಲವಕ್ಕೆ ಜಾಸ್ತಿ ಕಾಲ.  ಅದಕ್ಕೇ ಅಲ್ಲೊಂದು ಕುಣಿತದ ಲಯ ಮೂಡಿಬರುತ್ತದೆ.  ಅನೇಕ ವೇಳೆ ನಮಗೆ ಅರಿವಿಲ್ಲದೇ ನಾವು ಲಯಬದ್ಧವಾಗಿ ಮಾತಾಡಿಬಿಡುತ್ತೇವೆ.  ಇನ್ನು ಮೇಲಿನ ಉದಾಹರಣೆ ತಗೊಂಡ್ರೆ, "ಅನಂತ" ಅನ್ನೋ ಪದಾನೇ ನೋಡಿ.  ಅ ಎನ್ನುವ ಅಕ್ಷರದ ಎರಡರಷ್ಟು ಸಮಯ ನಂ ಅನ್ನುವ ಅಕ್ಷರಕ್ಕೆ ಬಂತು; ಹಾಗೇ ತ ಎಂಬ ಅಕ್ಷರವು ಅ ಎಂಬ ಅಕ್ಷರದಷ್ಟೇ ಸಮಯ ತೆಗೆದುಕೊಂಡಿತು.  ಹೀಗೆ ಒಂದು ಎರಡರಷ್ಟು ಸಮಯ ತೆಗೆದುಕೊಳ್ಳುವ ಅಕ್ಷರಗಳನ್ನು ಯಾವುದೋ ಕ್ರಮದಲ್ಲಿ ಜೋಡಿಸಿದರೆ ಅಲ್ಲಿ ಲಯ ಮೂಡುತ್ತದೆ.  ಉದಾಹರಣೆಗೆ ಲ(2)ಗ್ಗ(1) = 3; ಲ(1)ಗಾ(2) = 3; ಲ(1)ಗಾ(2) = 3; ಲ(1)ಗಾ(2) = 3 ಇಲ್ಲಿ ಮೂರುಮೂರಕ್ಷರದ 123,123,123,123 ಎನ್ನುವ ಲಯವನ್ನು ಕಾಣುತ್ತೇವಲ್ಲವೇ (ಮತ್ತೆ ಜೋರಾಗಿ ಓದಿ ನೋಡಿ)?&lt;br /&gt;&lt;br /&gt;ಅಂದರೆ ಅಕ್ಷರಗಳನ್ನು ನುಡಿಯುವ ಕಾಲಾವಧಿಯೇ ಲಯಕ್ಕೆ ಮೂಲ ಎಂದಾಯಿತು.  ಈ ಕಾಲಾವಧಿಯನ್ನೇ ಮಾತ್ರಾಕಾಲ ಅಂತೀವಿ.  ಮಾತ್ರೆ ಎಂದರೆ ಒಂದು ಚಿಟಿಕೆ ಹಾಕುವಷ್ಟು ಕಾಲ (ಮಾತ್ರೆ ಅಂದ್ರೆ tablet ಅನ್ಕೊಂಡೀರಿ ಮತ್ತೆ [:)] ).&lt;br /&gt;&lt;br /&gt;ಈ ಅಕ್ಷರಗಳನ್ನು ಎಲ್ಲೂ ನಿಲ್ಲಿಸದೇ ಜೋರಾಗಿ ಹೇಳಿ ನೋಡಿ:&lt;br /&gt;&lt;br /&gt;ಅ, ಇ, ಉ, ಋ, ಎ, ಒ&lt;br /&gt;ಕ, ಖ, ಗ, ಘ, ಙ, ಯ, ರ, ಲ, ವ...&lt;br /&gt;&lt;br /&gt;ಇವನ್ನು ಹೇಳಲು ಒಂದು ಚಿಟಿಕೆಯಷ್ಟು ಕಾಲವಷ್ಟೇ ಬೇಕಾಗುವುದು.  ಇದಕ್ಕೆ ಛಂದಸ್ಸಿನ ಭಾಷೆಯಲ್ಲಿ "ಲಘು" ಎನ್ನುತ್ತೇವೆ.  ಬರಹದಲ್ಲಿ ಇದನ್ನು &lt;span style="font-weight: bold;"&gt;( U ) &lt;/span&gt;ಎಂದು ಸೂಚಿಸುತ್ತೇವೆ.&lt;br /&gt;&lt;br /&gt;ಇನ್ನು ಇವನ್ನು ಜೋರಾಗಿ ಹೇಳಿ:&lt;br /&gt;&lt;br /&gt;ಆ, ಈ, ಊ, ೠ, ಏ, ಐ, ಓ, ಔ, ಅಂ, ಅಃ,&lt;br /&gt;ಕಾ, ಖಾ, ಗಾ, ಘಾ, ಗೀ, ಮೀ, ಯೂ, ಲೇ, ರೌ...&lt;br /&gt;&lt;br /&gt;ಇವನ್ನು ಹೇಳಲು ಮೇಲಿನ ಎರಡರಷ್ಟು ಕಾಲ ಬೇಕಾಗುವುದು (ಎರಡು ಚಿಟಿಕೆಯಷ್ಟು ಎನ್ನೋಣ).  ಇದಕ್ಕೆ ಛಂದಸ್ಸಿನ ಭಾಷೆಯಲ್ಲಿ "ಗುರು" ಎನ್ನುತ್ತೇವೆ.  ಬರಹದಲ್ಲಿ ಇದನ್ನು&lt;span style="font-weight: bold;"&gt; ( _ )&lt;/span&gt; ಎಂದು ಸೂಚಿಸುತ್ತೇವೆ.&lt;br /&gt;&lt;br /&gt;&lt;span style="font-weight: bold; font-style: italic;"&gt;ಗಮನಿಸಿ:&lt;/span&gt; ಯಾವುದಾದರೂ ಒತ್ತಕ್ಷರದ ಹಿಂದಿರುವ ಅಕ್ಷರ ಸಹಜವಾಗಿಯೇ ಎಳೆಯುತ್ತದೆ.  ಉದಾಹರಣೆಗೆ, ಅಣ್ಣ.  ಇಲ್ಲಿ ಅ ಎನ್ನುವುದು ಒಂದೇ ಚಿಟುಕೆಯಲ್ಲಿ ಪೂರೈಸುವ ಅಕ್ಷರವಾದರೂ ಮುಂದೆ ಣ್ಣ ಇರುವುದರಿಂದ ಅ ಎಂಬ ಅಕ್ಷರ ಆ ಎಂಬಷ್ಟೇ ಕಾಲವನ್ನು ತೆಗೆದುಕೊಳ್ಳುತ್ತದೆ.&lt;br /&gt;&lt;br /&gt;ಈ ಪದಗಳನ್ನು ಜೋರಾಗಿ ಹೇಳಿ ನೋಡಿ: ಅಣ - ಅಣ್ಣ, ಹಿಗು - ಹಿಗ್ಗು; ಬಕ - ಭಕ್ಷ್ಯ - ಇಲ್ಲೆಲ್ಲಾ ಮೊದಲನೆಯ ಪದದಲ್ಲಿ ಅ ಎನ್ನುವ ಅಕ್ಷರ ಮಾಮೂಲಾಗೇ ಬಂತು.  ಎರಡನೆಯ ಪದಗಳಲ್ಲಿ ಅ ಎನ್ನುವುದು ಎರಡರಷ್ಟು ಸಮಯ ತೆಗೆದುಕೊಂಡಿತು.&lt;br /&gt;&lt;br /&gt;&lt;span style="font-weight: bold; font-style: italic;"&gt;ಆದ್ದರಿಂದ ಒತ್ತಕ್ಷರದ ಹಿಂದಿನ ಅಕ್ಷರವು ಲಘುವಾಗಿದ್ದರೂ ಅದನ್ನು ಗುರುವೆಂದೇ ಲೆಕ್ಕಹಾಕಬೇಕು&lt;br /&gt;&lt;br /&gt;&lt;/span&gt;&lt;span&gt;ಈ ಸರಣಿಯ ಮುಂದಿನ ಬರಹ &lt;a href="http://nannabaraha.blogspot.com/2012/01/2.html"&gt;ಇಲ್ಲಿದೆ&lt;/a&gt;.&lt;/span&gt;&lt;span style="font-weight: bold; font-style: italic;"&gt;&lt;br /&gt;&lt;/span&gt;&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-851590960590164251?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/851590960590164251/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=851590960590164251&amp;isPopup=true' title='13 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/851590960590164251'/><link rel='self' type='application/atom+xml' href='http://www.blogger.com/feeds/2037979210344114254/posts/default/851590960590164251'/><link rel='alternate' type='text/html' href='http://nannabaraha.blogspot.com/2012/01/1.html' title='ಕಾವ್ಯದ ಕುಣಿತ - ಮೊದಲ ಹೆಜ್ಜೆಗಳು 1: ಲಘು-ಗುರು'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>13</thr:total></entry><entry><id>tag:blogger.com,1999:blog-2037979210344114254.post-4180673442118823870</id><published>2011-12-21T12:23:00.002+05:30</published><updated>2012-01-09T21:30:22.224+05:30</updated><category scheme='http://www.blogger.com/atom/ns#' term='೧೫. ಕಾವ್ಯದ ಕುಣಿತ (ಪ್ರಾಸ ಛಂದಸ್ಸು ಇತ್ಯಾದಿ)'/><title type='text'>ಹಾಯ್ಕುಗಳು</title><content type='html'>ಹಾಯ್ಕು ಎನ್ನುವುದು ಒಂದು ಜಪಾನಿ ಕಾವ್ಯ ಪ್ರಕಾರ; ನಮ್ಮಲ್ಲಿನ ಹನಿಗವನ ಮಿನಿಗವನ ಇತ್ಯಾದಿ ಚಿಕ್ಕ ಕವನ ಇದೆಯಲ್ಲ ಹಾಗೆ. ಯಾವುದಾದರೊಂದು ವಿಷಯ, ಅದರಲ್ಲೊಂದು ಪಂಚ್ ಲೈನ್, ಅರ್ಥದ ಮಿಂಚು. ತೀರ ಚಿಕ್ಕ ಪದ್ಯವಾದ್ದರಿಂದ ಈ ಅರ್ಥದ ಮಿಂಚು ಬಹಳ ಮುಖ್ಯ. ಅರ್ಥದ ಸೊಗಸು ಪದೇಪದೇ ಮನಸ್ಸಿನಲ್ಲಿ ಮೂಡುವಂತಿರಬೇಕು. ಜಪಾನಿನಲ್ಲಿ ಬಹು ಜನಪ್ರಿಯ ಪ್ರಕಾರ ಇದು.&lt;br /&gt;&lt;br /&gt;ನಮ್ಮ ಹನಿಗವನಗಳಂತೆ ಅಂದೆ, ಆದರೆ ನಮ್ಮ ಹನಿಗವನಗಳಂತೆ ಅಳತೆಯಿಲ್ಲದ ಕವನಗಳಲ್ಲ ಇವು. ನಮ್ಮ ಹಳೆಗನ್ನಡದ ಕಂದಪದ್ಯಗಳಂತೆ ಚುಟುಕು, ಆದರೆ ಲೆಕ್ಕಾಚಾರದಿಂದ ಕೂಡಿದ ಪದ್ಯಗಳು. ಆದರೆ ನಮ್ಮ ಕಂದಪದ್ಯಗಳಲ್ಲಿ ಮಾತ್ರಾಕಾಲವನ್ನು ಪರಿಗಣಿಸುತ್ತೇವೆ, ಹಾಯ್ಕುಗಳಲ್ಲಿ ಅಕ್ಷರಗಳನ್ನು.&lt;br /&gt;&lt;br /&gt;ಹಾಯ್ಕುಗಳು ಮೂರುಸಾಲಿನವು. ಮೊದಲನೆಯ ಸಾಲಿನಲ್ಲಿ ೫, ಎರಡನೆಯ ಸಾಲಿನಲ್ಲಿ ೭ ಮತ್ತು ಮೂರನೆಯ ಸಾಲಿನಲ್ಲಿ ೫ ಅಕ್ಷರಗಳು. ಜಪಾನೀಯರು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಮತ್ತೆ ಮೊದಲೇ ಹೇಳಿದಂತೆ ಅಲ್ಲೊಂದು ಪಂಚ್ ಇರಲೇಬೇಕು, ಆದರೆ ನಮ್ಮ ಕಂದಪದ್ಯಗಳಲ್ಲಿ ಈ ನಿಯಮವೇನೂ ಇಲ್ಲ.&lt;br /&gt;&lt;br /&gt;ಹಾಯ್ಕುಗಳ ಅಕ್ಷರವಿನ್ಯಾಸದ ಬಗ್ಗೆ ಹೇಳಿದ್ದೆ (ಮೊದಲ, ಎರಡನೆಯ ಮತ್ತು ಮೂರನೆಯ ಸಾಲುಗಳಲ್ಲಿ ಕ್ರಮವಾಗಿ ೫,೭ ಮತ್ತು ೫ ಅಕ್ಷರಗಳು). ಆದರೆ ಇಲ್ಲಿ ಒಂದು ವಿಷಯವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಜಪಾನೀ ಭಾಷೆ ಕನ್ನಡದಂತಲ್ಲ. It is a highly phonetic language (ಅಂದರೆ ಸ್ವರಬದ್ಧವಾದ ಭಾಷೆ). ಆದ್ದರಿಂದ ಅಲ್ಲಿನ ಅಕ್ಷರಗಳ ಎಣಿಕೆ ನಮ್ಮ ಕನ್ನಡದ ಅಕ್ಷರದ ಎಣಿಕೆಯಂತಲ್ಲ. ನಾವು ಕಣ್ಣಿಗೆ ಕಾಣುವ ಅಕ್ಷರಗಳನ್ನು ಎಣಿಸಿದರೆ ಅವರು ಉಚ್ಛಾರಣೆಯಲ್ಲಿ ಬರುವ ಘಟಕಗಳನ್ನು (syllableಗಳನ್ನು) ಎಣಿಸುತ್ತಾರೆ. Syllable ಎಂದರೆ ಒಂದೇ ಉಚ್ಚಾರಣೆಯ ಪ್ರಯತ್ನದಲ್ಲಿ ಉಚ್ಚರಿಸಲ್ಪಡುವ ಶಬ್ದ. ಅದು ಒಂದೇ ಅಕ್ಷರವಿರಬಹುದು, ಅಥವ ಒಂದಕ್ಕಿಂತ ಹೆಚ್ಚು ಅಕ್ಷರಗಳ ಗುಂಪೂ ಇರಬಹುದು. ಇದನ್ನು ಕೆಲವು ಉದಾಹರಣೆಗಳೊಂದಿಗೆ ಹೀಗೆ ವಿವರಿಸೋಣ:&lt;br /&gt;&lt;br /&gt;"ಲವ್ (love)" ಇಲ್ಲಿ ಕಣ್ಣಿಗೆ ಕಾಣುವುದು ಕನ್ನಡದಲ್ಲಿ ಎರಡು ಅಕ್ಷರಗಳು, ಇಂಗ್ಲಿಷಿನಲ್ಲಿ ನಾಲ್ಕು ಅಕ್ಷರಗಳು. ಆದರೆ ಉಚ್ಚಾರಣೆಯ unit (syllable) ಕೇವಲ ಒಂದೇ (ಲೌ). ಆದ್ದರಿಂದ ಹಾಯ್ಕುಗಳ ವಿಷಯದಲ್ಲಿ ಇದನ್ನು ಒಂದು ಎಂದು ಎಣಿಸಬೇಕು.&lt;br /&gt;&lt;br /&gt;"ಕಣ್" ಇದೂ ಹಾಗೆಯೇ, ಎರಡು ಅಕ್ಷರಗಳು ಕಂಡರೂ ಉಚ್ಚಾರಣೆಯ syllable ಒಂದೇ. ಆದ್ದರಿಂದ ಹಾಯ್ಕಿನಲ್ಲಿ ಇದು ಒಂದೇ ಅಕ್ಷರವೆಂದಾಗುತ್ತದೆ.&lt;br /&gt;&lt;br /&gt;"ಜಂಪ್" ಎನ್ನುವುದೂ ಹಾಗೇ.  ಆದರೆ "ಜಂಪು" ಎಂದಾಗ ಮಾತ್ರ ಅಲ್ಲಿ ಎರಡು syllables ಬರುತ್ತವೆ, ಜಂ ಮತ್ತು ಪು.&lt;br /&gt;&lt;br /&gt;ಹಾಗೆಯೇ "ಬಂಪರ್ (bumper)" ಎನ್ನುವುದರಲ್ಲಿ 3 (ಇಂಗ್ಲಿಷಿನ 6) ಅಕ್ಷರಗಳು ಆದರೆ ಎರಡೇ syllableಗಳು (ಬಂ + ಪರ್), ಆದರೆ "ಬಂಪರು" ಎನ್ನುವುದರಲ್ಲಿ ಮೂರು syllables ಮತ್ತು ಮೂರು ಅಕ್ಷರಗಳು.&lt;br /&gt;&lt;br /&gt;"ಕಾವೇರಿ" ಇಲ್ಲಿ ಕಣ್ಣಿಗೆ ಕಾಣುವುದೂ ಮೂರು ಅಕ್ಷರ, ಉಚ್ಚಾರಣೆಯಲ್ಲೂ ಮೂರು ಅಕ್ಷರ (3 letters and 3 syllables).&lt;br /&gt;&lt;br /&gt;ಆದ್ದರಿಂದ ಹಾಯ್ಕುಗಳನ್ನು ಬರೆಯುವಾಗ ೧,೨ ಮತ್ತು ೩ನೆಯ ಸಾಲುಗಳಲ್ಲಿ ೫,೭ ಮತ್ತು ೫ ಅಕ್ಷರಗಳನ್ನು ಎಣಿಸುವ ಬದಲಿಗೆ ೫,೭ ಮತ್ತು ೫ ಸಿಲೆಬಲ್ಲುಗಳನ್ನು ಎಣಿಸುವುದು ಸೂಕ್ತ.&lt;br /&gt;&lt;br /&gt;ಹೀಗೆ ಹಾಯ್ಕುಗಳ ಸಾಮಾನ್ಯ format ಹೀಗಿರಬಹುದು:&lt;br /&gt;&lt;br /&gt;ನನ ನನನ&lt;br /&gt;ನನ ನನ ನನನ&lt;br /&gt;ನನ ನನನ&lt;br /&gt;&lt;br /&gt;(ಮೇಲೆ ಹೇಳಿದಂತೆ ಅದು ಹ್ರಸ್ವಾಕ್ಷರವೇ ಆಗಬೇಕಿಲ್ಲ, "ನ" ಅನ್ನುವುದರ ಬದಲು "ನಾ" ಎಂದು ಕೂಡ ಆಗಬಹುದು, ಅಥವ "ನನ್" ಕೂಡ ಆಗಬಹುದು)&lt;br /&gt;&lt;br /&gt;ಮತ್ತೆ, ಮೊದಲೇ ಹೇಳಿದಂತೆ ಜಪಾನೀ ನುಡಿ ಕನ್ನಡಕ್ಕಿಂತ ಹೆಚ್ಚು phonetic ನುಡಿಯಾದ್ದರಿಂದ ಅವರು ಈ ಎಣಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಾರೆ. ಕನ್ನಡದ ಜಾಯಮಾನ ಹಾಗಲ್ಲವಾದ್ದರಿಂದ ನಾವು ಅದನ್ನು ಅಷ್ಟು ಕಟ್ಟುನಿಟ್ಟಾಗಿ ಅನುಸರಿಸಬೇಕಿಲ್ಲವೆಂಬುದು ನನ್ನ ಅನಿಸಿಕೆ. ಆದರೂ ಆದಷ್ಟು ಈ ಲಕ್ಷಣಗಳನ್ನು ಅನುಸರಿಸುವುದು ಒಳ್ಳೆಯದು. ಒಂದೋ ಎರಡೋ ಸಿಲೆಬಲ್ಲುಗಳು ಹೆಚ್ಚು ಕಡಿಮೆಯಾದರೆ ಪರವಾಗಿಲ್ಲ, ಆದರೆ ತೀರ ಎಣಿಕೆಗೇ ಸಿಗದಂತಿರಬಾರದೆಂಬುದು ನನ್ನ ನಿಲುವು.&lt;br /&gt;&lt;br /&gt;ಮತ್ತೆ, ಪ್ರಾಸದ ಬಗ್ಗೆ ಯಾವ ನಿಯಮವೂ ಇದ್ದಂತಿಲ್ಲ, ಆದರೆ ಪ್ರಾಸವಿರಬಾರದೆಂದೇನೂ ಇಲ್ಲ.  ಅರ್ಥದ ಮಿಂಚಿಗೆ ಮತ್ತಷ್ಟು ಹೊಳಪು ಸೇರಿಸುವುದಾದರೆ ಏಕಿರಬಾರದು?  ಹೀಗೇ ಗೀಚಿದ ಕೆಲವು ಹಾಯ್ಕುಗಳು ಇಲ್ಲಿವೆ:&lt;br /&gt;&lt;br /&gt;ಐದು ಏಳರ&lt;br /&gt;ಮೇಲೈದುಲಿಯಂ ಹಾಕು&lt;br /&gt;ಬಂದಿತು ಹಾಯ್ಕು&lt;br /&gt;&lt;br /&gt;ಬಂಪರ್ ಟು ಬಂಪರ್&lt;br /&gt;ಜೋರಾಗಿ ಗುದ್ದಿದರೆ&lt;br /&gt;ಬಂಪರ್ ಹೊಡೆತ&lt;br /&gt;&lt;br /&gt;ನಿನ್ನ ನಗೆ ಹೂ&lt;br /&gt;ಮೊಲ್ಲೆಯ ಚೆಲ್ಲಿಬಿಡು&lt;br /&gt;ಹೂಮಂಚವೇಕೆ?&lt;br /&gt;&lt;br /&gt;ಆ ಕಣ್ಣು ತುಟಿ&lt;br /&gt;ಹೀರಿ ತೂರಾಡುವನು&lt;br /&gt;ಇವ, ಕುಡುಕ!&lt;br /&gt;&lt;br /&gt;ನಗೆಯ ಮಿಂಚ&lt;br /&gt;ಮುಂದೆ ಮಳೆಯ ಮಿಂಚು&lt;br /&gt;ಮಂಕಾಯಿತಲ್ಲ!&lt;br /&gt;&lt;br /&gt;ಮಳೆ ಗುಡುಗು&lt;br /&gt;ಮಿಂಚಿ ತೋರಿಸಿದ್ದೇನು?&lt;br /&gt;ಊಳಿಡೋ ದೆವ್ವ!&lt;br /&gt;&lt;br /&gt;ಕಣ್ಣ ಮುಚ್ಚಿದೆ&lt;br /&gt;ನಿದ್ದೆಯಲೂ ನೀ ಬಂದೆ&lt;br /&gt;ನಿದ್ದೆ ಬಿಟ್ಟೆದ್ದೆ&lt;br /&gt;&lt;br /&gt;ಕಾಡದಿರು ನೀ&lt;br /&gt;ಗೆಳತಿ, ನೋಡುವಳು&lt;br /&gt;ನಿನ್ನ ಸವತಿ!&lt;br /&gt;&lt;br /&gt;ಕಾಡೆ ನೀ ಹೀಗೆ,&lt;br /&gt;ಬೇಜಾರುಗೊಳ್ಳುವನು&lt;br /&gt;ಶನಿರಾಯನು&lt;br /&gt;&lt;br /&gt;ಎಕ್ಸಾಮಂದ್ರಿಷ್ಟೇ,&lt;br /&gt;ಜಸ್ಟ್ ಕಾಪಿ ಪೇಸ್ಟ್, ಕಾಪಿ ಪೇಸ್ಟ್&lt;br /&gt;ಓದೋದೆಲ್ಲಾ ವೇಸ್ಟ್&lt;br /&gt;&lt;br /&gt;ದೆವ್ವದ್ ಕತೇಲೇ&lt;br /&gt;ಹೆದ್ರುಸ್ತಿದ್ದಾ ನಂ ತಾತ&lt;br /&gt;ಈಗವ್ನೇ ಭೂತಾ!&lt;br /&gt;&lt;br /&gt;ಎತ್ತಣ ಮಾವೋ&lt;br /&gt;ಎತ್ತಣ ಕೋಗಿಲೆಯೋ&lt;br /&gt;ಬಂದೂಕು ಶಬ್ದ!&lt;br /&gt;&lt;br /&gt;ಹೊಟ್ಗಿಲ್ಲ ಅನ್ನಾ&lt;br /&gt;ತಿರ್ಕೊಂಡ್ ತಿನ್ನೋದ್ ಏನ್ ಚೆನ್ನ?&lt;br /&gt;ಹಾಕ್ತೀನಿ ಕನ್ನ&lt;br /&gt;&lt;br /&gt;ಹಾಯ್ಕುವಿನ ಗಮ್ಮತ್ತೇ ಅದು. ಸುಮ್ನೇ ಚಾಟ್ ಮಾಡಿದಹಾಗೆ ಬರೀತಾನೇ ಹೋಗಬಹುದು.&lt;br /&gt;&lt;br /&gt;ಈ ಮಾತೇ ಮುತ್ತು&lt;br /&gt;ಮಾತೇ ಮತ್ತು, ಮಾತಲ್ಲೇ&lt;br /&gt;ಕಾಣೋ ಗಮ್ಮತ್ತು&lt;br /&gt;&lt;br /&gt;ಚಾಟ್ ಮಾಡ್ದಾಗೆ, ಚಾಟ್&lt;br /&gt;ತಿಂದ್ ಹಾಗೆ, ಚಾಟೀ ಹಾಯ್ಕೊಂಡ್&lt;br /&gt;ಬಂದ್ ಹಾಗ್ ಮಾತು&lt;br /&gt;&lt;br /&gt;ನೀನಾಡೋ ಮಾತ್ನೇ&lt;br /&gt;ಕಟ್ ಕಟ್ ಮಾಡು, ಹಾಯ್ಕೊಂದಲ್&lt;br /&gt;ಬಂದಯ್ತೆ ನೋಡು&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-4180673442118823870?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/4180673442118823870/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=4180673442118823870&amp;isPopup=true' title='23 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/4180673442118823870'/><link rel='self' type='application/atom+xml' href='http://www.blogger.com/feeds/2037979210344114254/posts/default/4180673442118823870'/><link rel='alternate' type='text/html' href='http://nannabaraha.blogspot.com/2011/12/blog-post.html' title='ಹಾಯ್ಕುಗಳು'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>23</thr:total></entry><entry><id>tag:blogger.com,1999:blog-2037979210344114254.post-8619573572239809381</id><published>2011-11-29T04:39:00.003+05:30</published><updated>2011-11-29T04:45:59.941+05:30</updated><category scheme='http://www.blogger.com/atom/ns#' term='೯೯. ಇತರ ಬ್ಲಾಗ್ ಬರಹ ಸೇರ್ಪಡೆಗಳು'/><title type='text'>ಭಾವಸಿಂಚನ - ಪುಸ್ತಕ ಬಿಡುಗಡೆ ಸಮಾರಂಭ</title><content type='html'>ಈ ಮೊದಲೇ ತಿಳಿಸಿದಂತೆ 26ರಂದು "ಭಾವಸಿಂಚನ" ಕವನ ಸಂಕಲನದ ಬಿಡುಗಡೆ ಸಮಾರಂಭದಲ್ಲಿ ಅತಿಥಿಯಾಗಿ ಭಾಗಹಿಸಿದ್ದೆ.  ಇದೊಂದು ವಿನೂತನ ಪ್ರಯೋಗ.  ೩ಕೆ ಎಂಬ ಆರ್ಕುಟ್ ಸಮುದಾಯದ ಉತ್ಸಾಹಿ ಯುವ ಕವಿ-ಕವಯಿತ್ರಿಯರು ಸೇರಿ ಆ ಸಮುದಾಯದಲ್ಲಿ ಆಗಾಗ್ಗೆ ಪ್ರಕಟವಾದ ಕವನಗಳನ್ನು ಹೊರತಂದಿದ್ದಾರೆ.&lt;br /&gt;&lt;br /&gt;ಆ ಸಮಾರಂಭದ ಕೆಲವು ಚಿತ್ರಗಳು &lt;a href="https://picasaweb.google.com/ksmanjunatha/Bhavasinchana?authuser=0&amp;amp;authkey=Gv1sRgCJuwz7m2o-aKTA&amp;amp;feat=directlink"&gt;ಇಲ್ಲಿವೆ&lt;/a&gt; (ಚಿತ್ರ ಕೃಪೆ, ತಂಡದ ಸದಸ್ಯರು)&lt;br /&gt;&lt;br /&gt;ಆಸಕ್ತರು ಈ ಪುಸ್ತಕಗಳನ್ನು ಬೆಂಗಳೂರಿನ ಸಪ್ನಾ ಪುಸ್ತಕ ಮಳಿಗೆ ಮತ್ತಿತರ ಕಡೆಗಳಲ್ಲಿ ಪಡೆಯಬಹುದು.  ಯಾವುದೇ ಕನ್ನಡ ಪುಸ್ತಕದ ಖರೀದಿಯೊಂದಿಗೆ ಈ ಪುಸ್ತಕ ಉಚಿತವಾಗಿ ದೊರೆಯುತ್ತದೆ ಎಂದು ಸಮುದಾಯದ ಪ್ರಕಟಣೆ ಹೇಳುತ್ತದೆ.&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-8619573572239809381?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/8619573572239809381/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=8619573572239809381&amp;isPopup=true' title='3 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/8619573572239809381'/><link rel='self' type='application/atom+xml' href='http://www.blogger.com/feeds/2037979210344114254/posts/default/8619573572239809381'/><link rel='alternate' type='text/html' href='http://nannabaraha.blogspot.com/2011/11/blog-post_29.html' title='ಭಾವಸಿಂಚನ - ಪುಸ್ತಕ ಬಿಡುಗಡೆ ಸಮಾರಂಭ'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>3</thr:total></entry><entry><id>tag:blogger.com,1999:blog-2037979210344114254.post-8724479380126663530</id><published>2011-11-21T01:27:00.002+05:30</published><updated>2011-11-21T01:31:30.185+05:30</updated><category scheme='http://www.blogger.com/atom/ns#' term='೦೨. ಕವನಗಳು'/><title type='text'>ಕೆಲವು ವಚನಗಳು</title><content type='html'>&lt;span class="z19Dle" id="col-z133zxxivxazg5e5w04cdj2xfnaqshq5wtc0k"&gt;&lt;span class="zo"&gt;(೧)&lt;br /&gt;ಕಾಗೆ ಕರುಬಿ ಮಾವಿನ ಚಿಗುರುಂಬೊಡೆ&lt;br /&gt;ಬಾಯಿ ಕಹಿಗೊಂಡಿತ್ತಲ್ಲದೆ&lt;br /&gt;ಕೋಗಿಲೆಯ ಸೊಲ್ಲು ದೊರಕೊಂಡಿತೇ&lt;br /&gt;ಕಾಡ ಮಂಗ ಸಿರಿಗಂಧದ ಮರಕೆ ಜೋತೊಡದರ ನಡೆ ಸಿರಿಗೊಂಡಿತೇ?&lt;br /&gt;ಭಾವದ ಮಿಂಚೊಡೆದ ಬೆಡಗಿಂಗೆ ಮೈಯಿಕ್ಕದೆ ಮನವೀಯದೆ&lt;br /&gt;ಬರಿದೇ ನುಡಿನುಡಿಯೆಂದುರೆ ಬೊಬ್ಬೆ ಹೊಯ್ದೊಡೆ&lt;br /&gt;ಆ ಬೊಬ್ಬೆ ನುಡಿಯೇ? ಹೊಯ್ದವ ನುಡಿಗನೇ? ನುಡಿ ಕನ್ನುಡಿಯೇ?&lt;br /&gt;ನುಡಿಯೊಳನುಡಿ&lt;wbr&gt;ತವ ಕೇಳದೆ ಮಿಡಿತವನರಿಯದೆ&lt;br /&gt;ನಾನೀನೆಂದು ಗಳಹುವ ಬಾಯಿಬಡುಕರನೇನೆಂಬೆನಯ್ಯಾ&lt;br /&gt;ದಮ್ಮಪುರದ ಮಂಜಯ್ಯಾ ನಿಮ್ಮ ನುಡಿಯೆಮಗೆ ಶರಣು.&lt;br /&gt;&lt;br /&gt;(೨)&lt;br /&gt;ಈ ನುಡಿ ಕನ್ನುಡಿಯೆಂಬರು&lt;br /&gt;ಮತ್ತಾನುಡಿ ಪರನುಡಿಯೆಂಬರು,&lt;br /&gt;ತೊದಲುವ ಕಂದನ ನುಡಿಯಾವುದಯ್ಯಾ&lt;br /&gt;ಬಿರಿವೂವಿ&lt;wbr&gt;ನ, ಚೆಲುನಗುವಿನ, ಎದೆಯೊಲವಿನ ನುಡಿಯಾವುದಯ್ಯಾ&lt;br /&gt;ನುಡಿವುಟ್ಟುವ, ಹೊಮ್ಮುವ, ನೆಗೆಯುವ, ಚಿಮ್ಮುವ ಜೀವದ ನಡೆಯರಿಯದೆ,&lt;br /&gt;ಪೆಣಕೆ ದಾರವನಿಕ್ಕಿ ಜಾತಿಯ ಹೊಲಸುಂಬರಯ್ಯಾ&lt;br /&gt;ಅಯ್ಯಾ ನಿಮ್ಮ ಕರುಣೆಯದಾವ ನುಡಿ&lt;br /&gt;ಕಡುಮೌನವದಾವ ನುಡಿ ಪೇಳಾ ದಮ್ಮಪುರದ ಮಂಜಯ್ಯಾ&lt;/span&gt;&lt;/span&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-8724479380126663530?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/8724479380126663530/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=8724479380126663530&amp;isPopup=true' title='20 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/8724479380126663530'/><link rel='self' type='application/atom+xml' href='http://www.blogger.com/feeds/2037979210344114254/posts/default/8724479380126663530'/><link rel='alternate' type='text/html' href='http://nannabaraha.blogspot.com/2011/11/blog-post_21.html' title='ಕೆಲವು ವಚನಗಳು'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>20</thr:total></entry><entry><id>tag:blogger.com,1999:blog-2037979210344114254.post-7486939456147927783</id><published>2011-11-20T00:33:00.003+05:30</published><updated>2011-11-20T00:41:19.888+05:30</updated><category scheme='http://www.blogger.com/atom/ns#' term='೯೯. ಇತರ ಬ್ಲಾಗ್ ಬರಹ ಸೇರ್ಪಡೆಗಳು'/><title type='text'>ಭಾವಸಿಂಚನ - ಕವಿಗಳಲ್ಲದವರ ಕವನಗಳು</title><content type='html'>ಆರ್ಕುಟ್ ನ "3K ಬಳಗ"ದ ಉತ್ಸಾಹೀ ನವಕವಿಗಳು ಈ ಬಳಗದ ವೇದಿಕೆಯಲ್ಲಿ ಆಗಾಗ ಪ್ರಕಟಿಸಿದ ಆಯ್ದ ಕವನಗಳ  ಸಂಕಲನವೊಂದನ್ನು ಹೊರತರುತ್ತಿದ್ದಾರೆ.  ಇದು ಸಂತೋಷದ ವಿಷಯ.  ನಾನೂ ಹೋಗುತ್ತಿದ್ದೇನೆ.  ನೀವೂ ಬನ್ನಿ.&lt;br /&gt;&lt;br /&gt;ದಿನಾಂಕ: ೨೬/೧೧/೨೦೧೧, ಶನಿವಾರ&lt;br /&gt;ಸಮಯ: ಸಂಜೆ ೬ ಗಂಟೆ&lt;br /&gt;ಸ್ಥಳ: ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು.&lt;br /&gt;&lt;br /&gt;&lt;a onblur="try {parent.deselectBloggerImageGracefully();} catch(e) {}" href="http://4.bp.blogspot.com/-9SMa7Y_gWr4/Tsf-9ycnbHI/AAAAAAAAA5w/4g-yuzWMi94/s1600/bhavasinchana.jpg"&gt;&lt;img style="display:block; margin:0px auto 10px; text-align:center;cursor:pointer; cursor:hand;width: 400px; height: 275px;" src="http://4.bp.blogspot.com/-9SMa7Y_gWr4/Tsf-9ycnbHI/AAAAAAAAA5w/4g-yuzWMi94/s400/bhavasinchana.jpg" alt="" id="BLOGGER_PHOTO_ID_5676786192791071858" border="0" /&gt;&lt;/a&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-7486939456147927783?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/7486939456147927783/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=7486939456147927783&amp;isPopup=true' title='12 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/7486939456147927783'/><link rel='self' type='application/atom+xml' href='http://www.blogger.com/feeds/2037979210344114254/posts/default/7486939456147927783'/><link rel='alternate' type='text/html' href='http://nannabaraha.blogspot.com/2011/11/blog-post.html' title='ಭಾವಸಿಂಚನ - ಕವಿಗಳಲ್ಲದವರ ಕವನಗಳು'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><media:thumbnail xmlns:media='http://search.yahoo.com/mrss/' url='http://4.bp.blogspot.com/-9SMa7Y_gWr4/Tsf-9ycnbHI/AAAAAAAAA5w/4g-yuzWMi94/s72-c/bhavasinchana.jpg' height='72' width='72'/><thr:total>12</thr:total></entry><entry><id>tag:blogger.com,1999:blog-2037979210344114254.post-4108859712964219450</id><published>2011-10-27T01:20:00.002+05:30</published><updated>2011-10-27T01:37:45.697+05:30</updated><category scheme='http://www.blogger.com/atom/ns#' term='೦೨. ಕವನಗಳು'/><title type='text'>ಬೆಳಕಿನ ಹಾಡು</title><content type='html'>&lt;div style="text-align: justify;"&gt;ಇತ್ತೀಚಿಗೆ ಅದೇಕೋ ಲಯಬದ್ಧ ಕವನಗಳ ಕಡೆ ಮನ ವಾಲಿದೆ.  ದೀವಳಿಗೆಯ ಲಯಕ್ಕೆ ಹೊಂದುವಂತೆ ಕೆಲವು ಲಯಗಳು ಮನಕ್ಕೆ ಹೊಳೆದುವು.  ಇದರ ಫಲವೇ ಈ ಕವನ.  ಇದು ನಡುಗನ್ನಡದ "ರಗಳೆ" ಛಂದಸ್ಸನ್ನು ಬಹುತೇಕ ಹೋಲುತ್ತದೆಯಾದರೂ ಅಲ್ಲಲ್ಲಿ ಕವನದ ಓಟಕ್ಕೆ ತಕ್ಕಂತೆ ಛಂದಸ್ಸನ್ನು ಬದಲಿಸಿಕೊಳ್ಳುವ ಸ್ವಾತಂತ್ರ್ಯ ವಹಿಸಿದ್ದೇನೆ.  ಉತ್ಸಾಹ ರಗಳೆ, ಮಂದಾನಿಲ ರಗಳೆ ಮತ್ತು ಲಲಿತ ರಗಳೆಗಳು ಇಲ್ಲಿ ಕಾಣಬರುವ ಛಂದೋರೂಪಗಳು.  ಈ ಪದ್ಯದ ಉದ್ದೇಶವೇ ಹಬ್ಬದ, ಸಂಭ್ರಮದ, ಸ್ವಚ್ಛಂದದ ಅಂದವನ್ನು ಹಿಡಿಯುವುದಾದ್ದರಿಂದ ಪದ್ಯದ ಗಾತ್ರವನ್ನು ನಿಯಂತ್ರಿಸಲು ನಾನು ಯತ್ನಿಸಿಲ್ಲ.  ಆದ್ದರಿಂದ ಪದ್ಯ ತುಸು ಉದ್ದವೇ ಬೆಳೆದಿದೆಯೆನ್ನಬೇಕು.  ಪಟಾಕಿ ಹೊಡೆಯುವ ಮಕ್ಕಳ ಸಂಭ್ರಮವನ್ನು ಮೊಟಕುಗೊಳಿಸಿ ಊಟಕ್ಕೆಳೆದುಕೊಂಡು ಬಂದರೆ ಇಷ್ಟಪಡುವರೇ?&lt;/div&gt;&lt;div&gt;&lt;br /&gt;&lt;/div&gt;&lt;div&gt;ಚುಕ್ಕಿ ಬೆಳಕ ಚೆಲ್ಲುವಲ್ಲಿ&lt;/div&gt;&lt;div&gt;ಹಕ್ಕಿ ಹಾಡು ಮೂಡುವಲ್ಲಿ&lt;/div&gt;&lt;div&gt;ಕತ್ತಲೊಡನೆ ತೆಕ್ಕೆಬಿದ್ದು&lt;/div&gt;&lt;div&gt;ಎತ್ತಲಾಗೊ ಹೊರಳುತಿದ್ದ&lt;/div&gt;&lt;div&gt;ಬೆಳಕ ಹಬ್ಬವೆದ್ದಿತೈ&lt;/div&gt;&lt;div&gt;ಹೊಳೆವ ಮೈಯ ಮುರಿದಿತೈ&lt;/div&gt;&lt;div&gt;&lt;br /&gt;&lt;/div&gt;&lt;div&gt;ಒಳಗೆ ಬಚ್ಚಲಲ್ಲಿ ನೀರು&lt;/div&gt;&lt;div&gt;ಮರಳಿ ಮರಳಿ ಕುದಿವ ಜೋರು&lt;/div&gt;&lt;div&gt;ಕಾದ ಎಣ್ಣೆ ಸೌಟ ಹಿಡಿದು&lt;/div&gt;&lt;div&gt;ಸೀದ ಜಗುಲಿಯೆಡೆಗೆ ನಡೆದು&lt;/div&gt;&lt;div&gt;ಬಂದಳಿವಳು ಸರಸರ&lt;/div&gt;&lt;div&gt;ಚಂದವವಳ ಸಡಗರ&lt;/div&gt;&lt;div&gt;&lt;br /&gt;&lt;/div&gt;&lt;div&gt;ಕೈಯನೆತ್ತಿ ತಲೆಯ ಸುತ್ತಿ&lt;/div&gt;&lt;div&gt;ಮೈಯ ಸವರಿ ಮೊಗವನೊತ್ತಿ&lt;/div&gt;&lt;div&gt;ಕಾದ ಎಣ್ಣೆ ಸುಡಲು ನೆತ್ತಿ&lt;/div&gt;&lt;div&gt;ಆಹ ಬಡಿಯೆ ಕೈಯನೆತ್ತಿ&lt;/div&gt;&lt;div&gt;ಉಜ್ಜುತಿರಲು ಗಸಗಸ&lt;/div&gt;&lt;div&gt;ತೋರುತಿತ್ತು ಗರಗಸ&lt;/div&gt;&lt;div&gt;&lt;br /&gt;&lt;/div&gt;&lt;div&gt;ಕುದಿವ ನೀರ ಮೈಯಿಗೆರಚಿ&lt;/div&gt;&lt;div&gt;ಅಯ್ಯೊ ಬೇಡವೆಂದು ಅರಚಿ&lt;/div&gt;&lt;div&gt;ಕಣ್ಣ ತುಂಬ ತುಂಬಿ ಸೀಗೆ&lt;/div&gt;&lt;div&gt;ಆಗಬಹುದೆ ಇಂದು ಹೀಗೆ&lt;/div&gt;&lt;div&gt;ಕೊನೆಗು ಬಂತೆ ಬಿಡುಗಡೆ&lt;/div&gt;&lt;div&gt;ಆಹ ಎಂಥ ನಿಲುಗಡೆ!&lt;/div&gt;&lt;div&gt;&lt;br /&gt;&lt;/div&gt;&lt;div&gt;ಹೊಸತು ಬಟ್ಟೆ ಹೊಸತು ಹೂ&lt;/div&gt;&lt;div&gt;ಹೊಸತು ಗಂಧ ಎಂಥ ಚಂದ&lt;/div&gt;&lt;div&gt;ಹೊಸತು ಬೆಳಕು ಬಣ್ಣ ಬಿಳುಪು&lt;/div&gt;&lt;div&gt;ಕಣ್ಣುಗಳಲಿ ಹೊಳೆವ ಹೊಳಪು&lt;/div&gt;&lt;div&gt;ನಮಿಸಿ ದೇವ ದೇವಗೆ&lt;/div&gt;&lt;div&gt;ಗಮನವಾ ಪಟಾಕಿಗೆ&lt;/div&gt;&lt;div&gt;&lt;br /&gt;&lt;/div&gt;&lt;div&gt;ಮಗನಿಗಾ ಪಟಾಕಿ ಕೇಪು&lt;/div&gt;&lt;div&gt;ಒಳಗೆ ನಡುಗಿ ಕಿರುಚೆ ಪಾಪು&lt;/div&gt;&lt;div&gt;ಇವಳಿಗೆ ಸುರುಬತ್ತಿ ಕುಂಡ&lt;/div&gt;&lt;div&gt;ಬಾಣ ಬಿರುಸು ಬರಿಯ ದಂಡ&lt;/div&gt;&lt;div&gt;ಸಮಯವೀಗ ಊಟಕೆ&lt;/div&gt;&lt;div&gt;ಸಗ್ಗದ ರಸದೂಟಕೆ&lt;/div&gt;&lt;div&gt;&lt;br /&gt;&lt;/div&gt;&lt;div&gt;ಪಾಯಸ ಪುಳಿಯೋಗರೆ ಗೊಜ್ಜುಗಳೇನ್&lt;/div&gt;&lt;div&gt;ರಾಯತ ಕೋಸಂಬರಿ ಪಲ್ಯಗಳೇನ್&lt;/div&gt;&lt;div&gt;ಬಾಯೊಳು ನೀರೊಡೆಸುವ ಚಕ್ಕುಲಿಯೇನ್&lt;/div&gt;&lt;div&gt;ಕಾಯೊಬ್ಬಟ್ಟಿನ ಗಮಗಮ ಕಂಪೇನ್&lt;/div&gt;&lt;div&gt;ರಾಯನಡುಗೆಯೇಂ ಸಮನೆ ಇದಕೆ ಪೇಳ್&lt;/div&gt;&lt;div&gt;ಬಾಯ ತುಂಬ ನೀಂ ತಿಂದುಣ್ಣುತ ಬಾಳ್&lt;/div&gt;&lt;div&gt;&lt;br /&gt;&lt;/div&gt;&lt;div&gt;ಹಗಲಿನ ಕೊನೆಗಿರಣಗಳಾಡುತಿರಲ್&lt;/div&gt;&lt;div&gt;ಹೆಗಲಿನ ಭಾರವ ರವಿ ಕೊಡವುತಿರಲ್&lt;/div&gt;&lt;div&gt;ಬೆವರಿದನೆನೆ ಹನಿಯೆರಡುದುರುತಿರಲ್&lt;/div&gt;&lt;div&gt;ಅವನಿಯ ಮೇಲ್ಕತ್ತಲೆ ಸೆರಗಿಕ್ಕಲ್&lt;/div&gt;&lt;div&gt;&lt;br /&gt;&lt;/div&gt;&lt;div&gt;ಓಹೊ ಬೆಳಕು ಹರಿಯಿತೇಂ&lt;/div&gt;&lt;div&gt;ಬಾನು ಬಣ್ಣ ತಳೆಯಿತೇಂ&lt;/div&gt;&lt;div&gt;ಏಳುಬಣ್ಣದಿಂದ್ರಚಾಪ&lt;/div&gt;&lt;div&gt;ಬೆಳಕ ಸೆಳೆದು ಬಿಟ್ಟಿತೇಂ&lt;/div&gt;&lt;div&gt;ಹಳದಿ ಕೆಂಪು ಹಸಿರು ನೀಲಿ&lt;/div&gt;&lt;div&gt;ಬಿಳುಪ ಬಸಿರ ಸೀಳಿ ಸೀಳಿ&lt;/div&gt;&lt;div&gt;ತಮದ ಮಹಾಭಿತ್ತಿಯಲ್ಲಿ&lt;/div&gt;&lt;div&gt;ಗಮನಸೆಳೆವ ರಂಗವಲ್ಲಿ&lt;/div&gt;&lt;div&gt;ಸುರರ ಕಲ್ಪತರುವೆ ಹಿಗ್ಗು&lt;/div&gt;&lt;div&gt;ತರಳಿ ಹೂವ ಬಿಟ್ಟಿತೇಂ&lt;/div&gt;&lt;div&gt;ಮನದಿ ಮನೆಯ ಕಟ್ಟಿತೇಂ&lt;/div&gt;&lt;div&gt;ಮನದ ಕದವ ತಟ್ಟಿತೇಂ&lt;/div&gt;&lt;div&gt;&lt;br /&gt;&lt;/div&gt;&lt;div&gt;ಮಂದಾನಿಲ ತಣ್ಣಗೆ ಬೀಸುತಿರಲ್&lt;/div&gt;&lt;div&gt;ಸುಂದರ ಕನಸೆನೆ ಹಬ್ಬವು ಕರಗಲ್&lt;/div&gt;&lt;div&gt;ಹಿತಮಿತದಿರುಳೂಟದ ಸವಿಯೆರೆಯಲ್&lt;/div&gt;&lt;div&gt;ಅತಿ ಹಿತದೊಳ್ ಮೆದು ಹಾಸಿಗೆ ಕರೆಯಲ್&lt;/div&gt;&lt;div&gt;ಹಬ್ಬದ ಬೆಳಕದು ಕಣ್ಣೊಳ್ ಕುಣಿಯಲ್&lt;/div&gt;&lt;div&gt;ತಬ್ಬಿದ ನಿದಿರೆಯ ತೋಳೊಳ್ ಜಾರಲ್&lt;/div&gt;&lt;div&gt;&lt;br /&gt;&lt;/div&gt;&lt;div&gt;ಮುಗಿದಿತ್ತಾ ಸವಿ ದೀವಳಿಗೆ&lt;/div&gt;&lt;div&gt;ಸೊಗವನು ಹಂಚುತಲೀಯಿಳೆಗೆ&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-4108859712964219450?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/4108859712964219450/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=4108859712964219450&amp;isPopup=true' title='17 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/4108859712964219450'/><link rel='self' type='application/atom+xml' href='http://www.blogger.com/feeds/2037979210344114254/posts/default/4108859712964219450'/><link rel='alternate' type='text/html' href='http://nannabaraha.blogspot.com/2011/10/blog-post_27.html' title='ಬೆಳಕಿನ ಹಾಡು'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>17</thr:total></entry><entry><id>tag:blogger.com,1999:blog-2037979210344114254.post-8297302284946470687</id><published>2011-10-12T17:07:00.002+05:30</published><updated>2011-10-12T17:11:42.036+05:30</updated><category scheme='http://www.blogger.com/atom/ns#' term='೧೪. ಹನಿ-ಮಿನಿ; ಚೂರು-ಚುಟುಕ'/><title type='text'>ಹೂರಣದಿ ಹುಲ್ಲು ಕಲ್ಲುಗಳಿಗೂ ಹಿರಿಮೆಯುಂಟು</title><content type='html'>&lt;span class="Apple-style-span" style="font-family: Times, serif; line-height: 24px; background-color: rgb(255, 255, 255); "&gt;"ಪದ್ಯಪಾನ" ಕಾವ್ಯಕುತೂಹಲಿಗಳ ಜಾಲತಾಣದಲ್ಲಿ (padyapaana.com) ಪಂಚಮಾತ್ರೆಯ ಚೌಪದಿಯಲ್ಲಿ "ಹೂರಣದಿ ಹುಲ್ಲು ಕಲ್ಲುಗಳಿಗೂ ಹಿರಿಮೆಯುಂಟು" ಎಂಬ ಸಾಲನ್ನು ಬಳಸಿ ಸಮಸ್ಯೆಯನ್ನು ಪೂರ್ತಿಗೊಳಿಸುವ  ಸವಾಲಿತ್ತು.  ಅದಕ್ಕಾಗಿ ರಚಿಸಿದ್ದು ಈ ಚೌಪದಿಗಳು:&lt;/span&gt;&lt;div&gt;&lt;span class="Apple-style-span" style="font-family: Times, serif; line-height: 24px; background-color: rgb(255, 255, 255); "&gt;&lt;br /&gt;&lt;/span&gt;&lt;/div&gt;&lt;div&gt;&lt;span class="Apple-style-span" style="background-color: rgb(255, 255, 255); "&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;ಬೆಲ್ಲಬೇಳೆಯ ಸೊಗಸಿನೊಬ್ಬಟ್ಟು ಹೂರಣದಿ&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;ಕಲ್ಲು ದೊರಕಿರಲು ನೀಂ ಕಡಿಯದಿರು ಹಲ್ಲ&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;ಬಲ್ಲವರದಾರು ಈ ಬದುಕೆಂಬ ಹೂರಣದಿ&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;ಹುಲ್ಲುಕಲ್ಲುಗಳಿಗೂ ಹಿರಿಮೆಯುಂಟು&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;&lt;br /&gt;&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;ಹುಲ್ಲಿರದೆ ಪಶುವಿಹುದೆ ಕಲ್ಲಿರದೆ ಮನೆಯಹುದೆ&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;ಹುಲ್ಲೆಂದು ಕಲ್ಲೆಂದು ಜರಿಯದಿರು ಮೂಢಾ&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;ಬಲ್ಲವರು ಪೇಳುವರು ಜಗವೆಂಬ ಹೂರಣದಿ&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;ಹುಲ್ಲುಕಲ್ಲುಗಳಿಗೂ ಹಿರಿಮೆಯುಂಟು&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;&lt;br /&gt;&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;ಹುಲ್ಲ ಮಂತ್ರಿಸೆ ಕೊಲ್ವ ಕಣೆಯಾಯ್ತು ಕದನದೊಳು&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;ಕಲ್ಲಿನಿಂದರಿಸೇನೆ ಮಡಿದೊರಗಿತು&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;ನಲ್ಲೆಮುಡಿಗಷ್ಟೆ ತಗುವುದು ದಂಡೆ ಹೂ ರಣದಿ&lt;/span&gt;&lt;/span&gt;&lt;/div&gt;&lt;div&gt;&lt;span class="Apple-style-span" &gt;&lt;span class="Apple-style-span" style="line-height: 24px;"&gt;ಹುಲ್ಲುಕಲ್ಲುಗಳಿಗೂ ಹಿರಿಮೆಯುಂಟು&lt;/span&gt;&lt;/span&gt;&lt;/div&gt;&lt;div style="font-family: Times, serif; line-height: 24px; "&gt;&lt;br /&gt;&lt;/div&gt;&lt;/span&gt;&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-8297302284946470687?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/8297302284946470687/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=8297302284946470687&amp;isPopup=true' title='12 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/8297302284946470687'/><link rel='self' type='application/atom+xml' href='http://www.blogger.com/feeds/2037979210344114254/posts/default/8297302284946470687'/><link rel='alternate' type='text/html' href='http://nannabaraha.blogspot.com/2011/10/blog-post_12.html' title='ಹೂರಣದಿ ಹುಲ್ಲು ಕಲ್ಲುಗಳಿಗೂ ಹಿರಿಮೆಯುಂಟು'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>12</thr:total></entry><entry><id>tag:blogger.com,1999:blog-2037979210344114254.post-2646676092446556020</id><published>2011-10-02T10:55:00.000+05:30</published><updated>2011-10-02T10:59:23.313+05:30</updated><category scheme='http://www.blogger.com/atom/ns#' term='೧೪. ಹನಿ-ಮಿನಿ; ಚೂರು-ಚುಟುಕ'/><title type='text'>ಸ್ತನ ದೊಡ್ಡತನದಲ್ಲಿ ಶೋಭಿಸಿಹುದು</title><content type='html'>&lt;br /&gt;"ಪದ್ಯಪಾನ" ಕಾವ್ಯಕುತೂಹಲಿಗಳ ಜಾಲತಾಣದಲ್ಲಿ (padyapana.com) ಪಂಚಮಾತ್ರೆಯ ಚೌಪದಿಯಲ್ಲಿ "ಸ್ತನ ದೊಡ್ಡತನದಲ್ಲಿ ಶೋಭಿಸಿಹುದು" ಎಂಬ ಸಾಲನ್ನು ಬಳಸಿ ಸಮಸ್ಯೆಯನ್ನು ಪೂರ್ತಿಗೊಳಿಸುವ &amp;nbsp;ಸವಾಲಿತ್ತು. &amp;nbsp;ಅದಕ್ಕಾಗಿ ರಚಿಸಿದ್ದು ಈ ಚೌಪದಿಗಳು:&lt;br /&gt;&lt;br /&gt;ಮನೆಗಲ್ಲದೆಯೆ ನೆಂಟ ಮಠಕೆ ಬರುವನೆ ಪೇಳು&lt;br /&gt;ಒಣಮರಕೆ ಬಹುದೆ ಕೋಗಿಲೆಯು ಗಿಳಿವಿಂಡು&lt;br /&gt;ಮನದಣಿಯೆ ಉಣಬಡಿಪ ಸಿರಿವನೆಯು ಮನೆತನ-&lt;br /&gt;ಸ್ತನ ದೊಡ್ಡತನದಲ್ಲಿ ಶೋಭಿಸಿಹುದು.&lt;br /&gt;&lt;br /&gt;ಇನಸುತಗೆ ತಿಳಿದೊಡೇಂ ತನ್ನ ಹುಟ್ಟಿನ ಹಿರಿಮೆ&lt;br /&gt;ಅನುಮಾನವಿನಿತಿಲ್ಲ ಜೀಯನೊಲವಿನೊಳು&lt;br /&gt;ಧನವದುವೆ ಕೌರವನ ಮಾನಧನ ನಂಬಿಕ-&lt;br /&gt;ಸ್ತನ ದೊಡ್ಡತನದಲ್ಲಿ ಶೋಭಿಸಿಹುದು.&lt;br /&gt;&lt;br /&gt;ವನಕೆ ಹೆಮ್ಮರ ಸೊಗಸು ಗಿರಿಗಾ ಶಿಖರ ಸೊಗಸು&lt;br /&gt;ಮನೆಗೆ ಹಿರಿಗಂಬದಾಲಂಬ ಸೊಗಸು&lt;br /&gt;ಇನಿವೆಣ್ಣಿನೊಡಲಿಗಾಲಂಬವೆನೆ ಚೆಲುವಿನಾ&lt;br /&gt;ಸ್ತನ ದೊಡ್ಡತನದಲ್ಲಿ ಶೋಭಿಸಿಹುದು.&lt;br /&gt;&lt;br /&gt;ಜನಕಗಲ್ಲದೆ ಶುನಕಕಹುದೆ ರಾಮನ ನಂಟು&lt;br /&gt;ಘನಶೈಲಿ ಶೂಲಿ ಹುಲು ಮೊರಡಿ ಬಯಸುವನೇ&lt;br /&gt;ವನಮಾಲಿಯಲ್ತೆ ಸಾಗರನಳಿಯ?ಹಿರಿನಂಟ-&lt;br /&gt;ತನ ದೊಡ್ಡತನದಲ್ಲಿ ಶೋಭಿಸಿಹುದು&lt;br /&gt;&lt;br /&gt;ಕೊನೆಯ ಚೌಪದಿ “ಸ್ತನ ದೊಡ್ಡತನದಲ್ಲಿ ಶೋಭಿಸಿಹುದು” ಎಂದು ಬಳಸಿದರೆ ಮೂರನೆಯ ಸಾಲಿನ ಛಂದಸ್ಸು ಕೆಡುತ್ತದೆಯಾದ್ದರಿಂದ ಅದು ಸಮಸ್ಯೆಯನ್ನು ಯಥಾವತ್ತಾಗಿ ಪೂರೈಸುವುದಿಲ್ಲ, ಆದರೂ ಉಳಿದ ಸಾಲುಗಳು ಬಂದುವಲ್ಲ ಎಂದು ಪೋಸ್ಟಿಸಿದೆ ಅಷ್ಟೇ.&lt;br /&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-2646676092446556020?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/2646676092446556020/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=2646676092446556020&amp;isPopup=true' title='18 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/2646676092446556020'/><link rel='self' type='application/atom+xml' href='http://www.blogger.com/feeds/2037979210344114254/posts/default/2646676092446556020'/><link rel='alternate' type='text/html' href='http://nannabaraha.blogspot.com/2011/10/blog-post.html' title='ಸ್ತನ ದೊಡ್ಡತನದಲ್ಲಿ ಶೋಭಿಸಿಹುದು'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>18</thr:total></entry><entry><id>tag:blogger.com,1999:blog-2037979210344114254.post-4279532375965660619</id><published>2011-09-23T06:34:00.001+05:30</published><updated>2011-10-02T10:48:49.410+05:30</updated><category scheme='http://www.blogger.com/atom/ns#' term='೦೨. ಕವನಗಳು'/><title type='text'>ಪ್ರಭಾತ ಚತುರ್ಮುಖ</title><content type='html'>"ಪದ್ಯಪಾನ" ಕಾವ್ಯಕುತೂಹಲಿಗಳ ಜಾಲತಾಣದಲ್ಲಿ (padyapana.com) ಪಂಚಮಾತ್ರೆಯ ಚೌಪದಿಯಲ್ಲಿ ಮುಂಜಾವಿನ ವರ್ಣನೆಯ ಬಗೆಗೊಂದು ಸವಾಲಿತ್ತು. &amp;nbsp;ಅದಕ್ಕಾಗಿ ರಚಿಸಿದ್ದು ಈ ಚೌಪದಿಗಳು:&lt;br /&gt;&lt;br /&gt;&lt;br /&gt;(೧)&lt;br /&gt;ಸೋರೆ ಕತ್ತಲ ಸಾರ ನೇಸರನ ಮೆಲ್ಬರವ&lt;br /&gt;ಸಾರೆ ಗಗನಾಂಗನೆಯ ಕೆಂಪು ಕದಪು|&lt;br /&gt;ವಾರಿಜದ ಮೊಗವರಳಿ ಮಲಗಿದಿಬ್ಬನಿ ಹೊರಳಿ&lt;br /&gt;ಕೋರಿದುವು ಮಂಗಳದ ಮುಂಬೆಳಗನು||&lt;br /&gt;&lt;br /&gt;(೨)&lt;br /&gt;ತಂಗದಿರನಗಲಿಕೆಯ ವಿರಹಕಾಡಲು ರಾತ್ರಿ&lt;br /&gt;ಯಂಗನೆಯ ಕೆನ್ನೆ ತುಸು ಬಿಳುಪಡರಿದೆ|&lt;br /&gt;ಸಂಗಡಲೆ ರವಿಯು ಝುಮ್ಮನೆ ಸೋಂಕೆ ಬಿಸುಪಿನಾ&lt;br /&gt;ಲಿಂಗನದಿ ನಾಚಿ ಮೊಗ ಕೆಂಪೇರಿದೆ||&lt;br /&gt;&lt;br /&gt;(೩)&lt;br /&gt;ಮುಂಗೋಳಿ ಕೂಗಿರಲು, ಹಕ್ಕಿಗಳು ಹಾಡಿರಲು&lt;br /&gt;ರಂಗೋಲಿ ನಗುತಲಿವೆ ಅಂಗಳದೊಳು|&lt;br /&gt;ಅಂಗಡಿಯು ತೆರೆಯುತಿದೆ, ತರಕಾರಿ ಕೂಗು ಮನೆ&lt;br /&gt;ಮುಂಗಡೆಯೆ ಸಾಗುತಿದೆ ಏನು ಬೇಕು?&lt;br /&gt;&lt;br /&gt;(೪)&lt;br /&gt;ಮಾಗಿಯಿರುಳಿನ ಕೊನೆಗೆ ಮೂಡಣದಿ ನಸುವೆ ಬೆಳ&lt;br /&gt;ಗಾಗೆ ಜಗವೆದ್ದು ಚಡಪಡಿಸುತಿಹುದು|&lt;br /&gt;ಸಾಗೆ ಭರಗುಟ್ಟಿ ಮೋಟಾರುಗಳು ಒಣಮರದ&lt;br /&gt;ಕೋಗಿಲೆಯೆ ಶ್ರುತಿಗೆಟ್ಟು ಕಾಗುತಿಹುದು||&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-4279532375965660619?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/4279532375965660619/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=4279532375965660619&amp;isPopup=true' title='14 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/4279532375965660619'/><link rel='self' type='application/atom+xml' href='http://www.blogger.com/feeds/2037979210344114254/posts/default/4279532375965660619'/><link rel='alternate' type='text/html' href='http://nannabaraha.blogspot.com/2011/09/blog-post_23.html' title='ಪ್ರಭಾತ ಚತುರ್ಮುಖ'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>14</thr:total></entry><entry><id>tag:blogger.com,1999:blog-2037979210344114254.post-6626408901891400540</id><published>2011-09-09T02:55:00.024+05:30</published><updated>2011-09-14T16:02:01.836+05:30</updated><category scheme='http://www.blogger.com/atom/ns#' term='೧೧. ವಿಚಾರ'/><title type='text'>ದ್ವೈತ - ಅದ್ವೈತ: ಒಂದು ಚಿಂತನೆ</title><content type='html'>&lt;div style="text-align: justify;"&gt;ಇದೊಂದು ಸ್ವತಂತ್ರ ಲೇಖನವಲ್ಲ. ಗೆಳೆಯ ಶ್ರೀ ಸುಬ್ರಹ್ಮಣ್ಯರು ಶ್ರೀ ಶಂಕರಾಚಾರ್ಯರ ವಿವೇಕಚೂಡಾಮಣಿಯ ಬಗ್ಗೆ ಸೊಗಸಾಗಿ ಬರೆಯುತ್ತಿದ್ದಾರೆ.  ಈ ಸರಣಿಯಲ್ಲಿ ಸಾಧನಚತುಷ್ಟಯದ ಬಗ್ಗೆ ಒಂದು ಲೇಖನವಿದೆ.   ಅಲ್ಲಿ ಬಂದಿರುವ ದ್ವೈತ-ಅದ್ವೈತ-ವಿಶಿಷ್ಟಾದ್ವೈತಗಳ ತುಲನೆಯ ವಿಷಯದಲ್ಲಿ ನನ್ನ ಕೆಲವು ಅನಿಸಿಕೆಗಳನ್ನು ಬರೆಯುತ್ತಿದ್ದಾಗ ಅದು ತೀರ ಬೆಳೆದು ತಾನೇ ಒಂದು ಸ್ವತಂತ್ರ ಬರಹವಾಗಬಹುದೆನ್ನಿಸಿತು.  ಅದರ ಪರಿಣಾಮವೇ ಈ ಲೇಖನ. &lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಇದು ಮೂಲತಃ ದ್ವೈತವು ಸರಿಯೋ ಅದ್ವೈತವೋ ಎಂಬ ಚರ್ಚೆಯಲ್ಲ (ಏಕೆಂದರೆ ಶಂಕರರ ಸಿದ್ಧಾಂತದ ಬಗೆಗೆ ಹೇಗೋ ಹಾಗೆ ಮಧ್ವರ ಸಿದ್ಧಾಂತಗಳ ಬಗೆಗೂ ನನ್ನದೇ ಅನೇಕ ಪ್ರಶ್ನೆಗಳಿದ್ದು ಅದರ ನಿವಾರಣೆಗೆ ಬೇಕಾದ ಬುದ್ಧಿ/ಜ್ಞಾನ ಸಾಮಗ್ರಿ ನನ್ನಲ್ಲಿಲ್ಲ).    ಆದ್ದರಿಂದ ಇವು ಮೇಲಿನ ಲೇಖನದಲ್ಲಿ ಕಂಡ ವಿವಿಧ ಸಿದ್ಧಾಂತಗಳ ತುಲನೆಯ ಬಗೆಗಿನ ನನ್ನ ಅನಿಸಿಕೆಗಳು ಮಾತ್ರ.  ಇದು ಮೇಲಿನ ಲೇಖನಕ್ಕೆ ಪ್ರತಿಕ್ರಿಯೆಯಾದ್ದರಿಂದ ಆ ಲೇಖನವನ್ನು ಓದದೇ ಇದು ಪೂರ್ಣವಾಗುವುದಿಲ್ಲ.  ಆದ್ದರಿಂದ &lt;a href="http://chudamaniviveka.blogspot.com/2011/09/blog-post.html"&gt;ಮೂಲ ಲೇಖನ&lt;/a&gt;ವನ್ನು ಮೊದಲು ಓದಬೇಕಾಗಿ ಕೋರಿಕೆ (ದಯವಿಟ್ಟು ರೈಟ್ ಕ್ಲಿಕ್ ಮಾಡಿ ಬೇರೊಂದು ಕಿಟಕಿಯಲ್ಲಿ ತೆರೆದಿಟ್ಟುಕೊಳ್ಳಿ).&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಮೊದಲಿಗೆ ದ್ವೈತ-ಅದ್ವೈತ ಎನ್ನುವ ಪದಗಳು ಆಯಾ ಆಚಾರ್ಯರು ಚಾಲ್ತಿಗೆ ತಂದದ್ದಲ್ಲ.  ಉದಾಹರಣೆಗೆ ನಾವು ಅದ್ವೈತವೆಂದು ಕರೆಯುವ ತತ್ವವನ್ನು ಸ್ವತಃ ಶಂಕರರು "ಔಪನಿಷದ ದರ್ಶನ"ವೆಂದು ಕರೆಯುತ್ತಾರೆ ("ತಸ್ಮಾತ್ ಸಮಂಜಸಮಿದಂ ಔಪನಿಷದಂ ದರ್ಶನಂ" - ಸೂತ್ರ ಭಾಷ್ಯ.೨.೧.೯) - ವೇದಾಂತದ (ಉಪನಿಷತ್ತುಗಳ) ಪಾರಮಾರ್ಥಿಕ ದೃಷ್ಟಿ ಮತ್ತು ಬ್ರಹ್ಮೈಕತ್ವವನ್ನು ಎತ್ತಿಹಿಡಿಯುವುದರಿಂದ ಇದು ಔಪನಿಷದ ದರ್ಶನ.   ಗೌಡಪಾದಕಾರಿಕೆಯಲ್ಲಿ "ಮಾಯಾಮಾತ್ರಮಿದಂ ದ್ವೈತಂ ಅದ್ವೈತಂ ಪರಮಾರ್ಥತಃ" ಎಂಬ ಮಾತು ಬರುತ್ತದೆ.  ಆದರೆ ಇಲ್ಲಿ ಬರುವ ದ್ವೈತ ಅದ್ವೈತ ಪದಗಳು ಒಂದು ಸಿದ್ಧಾಂತವನ್ನು ಸೂಚಿಸದೇ ಕೇವಲ ಎರಡು ಸ್ಥಿತಿಗಳನ್ನಷ್ಟೇ ಸೂಚಿಸುತ್ತದೆ (ಏಕೆಂದರೆ ಶಂಕರಾಚಾರ್ಯರ ಕಾಲಕ್ಕೆ ನಾವೀಗ ನೋಡುವ "ದ್ವೈತಸಿದ್ಧಾಂತ"ದ ಪ್ರತಿಪಾದನೆಯೇ ಆಗಿರಲಿಲ್ಲ!).    ಸುಮಾರು ಹದಿನೈದನೆಯ ಶತಮಾನದ "ಅದ್ವೈತದೀಪಿಕೆ", "ಅದ್ವೈತಬೋಧ", "ಭೇದ ಧಿಕ್ಕಾರ" ಇತ್ಯಾದಿ ಗ್ರಂಥಗಳು, ಮತ್ತು ಮುಂದೆ ಮಧುಸೂದನ ಸರಸ್ವತಿಗಳ "ಅದ್ವೈತಸಿದ್ಧಿ" ಇತ್ಯಾದಿ ಗ್ರಂಥಗಳಲ್ಲಿ ಸ್ಪಷ್ಟವಾಗಿ ಕಂಡುಬರುವ ದ್ವೈತ-ಅದ್ವೈತ ಸೈದ್ಧಾಂತಿಕ ಚರ್ಚೆಗಳನ್ನು ಉದಹರಿಸುವ ಸಾಲಿ ರಾಮಚಂದ್ರರಾಯರು, ಶಂಕರರ ಔಪನಿಶದ ದರ್ಶನಕ್ಕೆ ಅದ್ವೈತ ಸಿದ್ಧಾಂತವೆಂಬ ವ್ಯವಹಾರ ಬಂದದ್ದು ಬಹುಶಃ ಹದಿನೈದನೆಯ ಶತಮಾನದಿಂದೀಚಿಗಿರಬಹುದು ಎಂದು ಅಭಿಪ್ರಾಯ ಪಡುತ್ತಾರೆ (ದರ್ಶನ ಪ್ರಬಂಧ - ಅದ್ವೈತ ಸಿದ್ಧಾಂತ: ಸಾ.ಕೃ.ರಾ).&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ವಿಶಿಷ್ಟಾದ್ವೈತವೆಂಬ ನಿರ್ದೇಶನವೂ ರಾಮಾನುಜರು ಬಳಕೆಗೆ ತಂದದ್ದಲ್ಲ, ಏಕೆಂದರೆ ರಾಮಾನುಜರ ಮತಕ್ಕೆ ಶ್ರೀವೈಷ್ಣವ ಮತವೆಂದೇ ಬಳಕೆ.  ಈ ವೈಷ್ಣವ ಮತದಲ್ಲಿ ಹರಿಗಷ್ಟೇ ಅಲ್ಲ, ಲಕ್ಷ್ಮಿಗೂ ಬಹಳಷ್ಟು ಪ್ರಾಮುಖ್ಯವಿರುವುದರಿಂದ ಇದು ಶ್ರೀ-ವೈಷ್ಣವ.   ಆಳ್ವಾರರ ಭಕ್ತಿಪಂಥ ಮತ್ತು ನಾಥ-ಯಾಮುನರ ವೈದಿಕ ವಿಚಾರಧಾರೆಗಳನ್ನು ಕ್ರೋಢೀಕರಿಸಿ ಅದಕ್ಕೊಂದು ವೈದಿಕ ದರ್ಶನದ ಅಂತಸ್ತು ನೀಡಿದ ಹೆಗ್ಗಳಿಕೆ ರಾಮಾನುಜರದು.  ಬ್ರಹ್ಮ-ಚಿತ್-ಅಚಿತ್ ಸಂಬಂಧವನ್ನು ದೇಹಿ-ದೇಹ (ಶೇಷಿ-ಶೇಷ)ದ ಪರಿಭಾಷೆಯಲ್ಲಿ ನಿರೂಪಿಸುವುದರ ಮೂಲಕ (ಬ್ರಹ್ಮವು ದೇಹಿ, ಜಗತ್ತು ದೇಹ; ಜಗತ್ತಿನ ಪ್ರತಿಯೊಂದು ಚಿದಚಿದ್ವಸ್ತುವೂ ಈ ಬ್ರಹ್ಮನ ಒಂದು ಭಾಗ/ಅಂಶ) ಬ್ರಹ್ಮವೂ ಜಗತ್ತೂ ಹೇಗೆ ಬೇರೆಬೇರೆ ಮತ್ತು ಅದೇ ಸಮಯದಲ್ಲಿ ಹೇಗೆ ಒಂದೇ ಎಂಬುದನ್ನು ಪ್ರತಿಪಾದಿಸುವುದರಿಂದ ಇದಕ್ಕೆ ಮುಂದೆ ವಿಶಿಷ್ಟಾದ್ವೈತವೆಂಬ ಹೆಸರು ದೊರಕೊಂಡಿರುವಂತೆ ತೋರುತ್ತದೆ. ಈ ಹೆಸರಿನ ಬಳಕೆ ವೇದಾಂತದೇಶಿಕರಲ್ಲಿ ಮತ್ತು ಸುದರ್ಶನ ಸೂರಿಗಳಲ್ಲಿ ಮೊದಲಿಗೆ ಬಳಕೆಗೆ ಬಂದಂತೆ ಕಂಡುಬರುತ್ತದೆ (ಕ್ರಿ.ಶ.೧೩-೧೪ - ಬಹುಶಃ ಮಧ್ವಾಚಾರ್ಯರ ಕಾಲದ ಸರಿಸುಮಾರಿನಲ್ಲಿ).  ಆದ್ದರಿಂದ ಆ ಹೊತ್ತಿಗಾಲೇ ಔಪನಿಶದ ದರ್ಶನವು "ಅದ್ವೈತ"ವೆಂಬ ಹೆಸರಿನಲ್ಲಿ ಬಳಕೆಗೆ ಬಂದಿರಬೇಕು.  (ಶಂಕರರ ಅದ್ವೈತದಿಂದ ಪ್ರತ್ಯೇಕವಾಗಿ ಗುರುತಿಸಲಿಕ್ಕಾಗಿ ವಿಶಿಷ್ಟಾದ್ವೈತಿಗಳು ಶಂಕರರ ಅದ್ವೈತವನ್ನು "ಕೇವಲಾದ್ವೈತ" ಎಂದು ನಿರ್ದೇಶಿಸುತ್ತಾರೆ).&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಇನ್ನು ದ್ವೈತದ ವಿಷಯಕ್ಕೆ ಬಂದರೆ, ಇದೂ ಮೂಲತಃ ದ್ವೈತಸಿದ್ಧಾಂತವೆಂದು ಕರೆಯಲ್ಪಟ್ಟದ್ದಲ್ಲ.  ಇದರ ಮೂಲ ಹೆಸರು "ತತ್ವವಾದ".  ದ್ವೈತಿಗಳು ಅದ್ವೈತ ಸಿದ್ಧಾಂತವನ್ನು ಮಾಯಾವಾದವೆಂದು ನಿರ್ದೇಶಿಸುತ್ತಾರೆ (ಜಗತ್ತು ಮಾಯೆಯೆಂಬುದರಿಂದ).  ಅದಕ್ಕೆ ಪ್ರತಿಯಾಗಿ ಈ ವಾದದ ಮುಖ್ಯನಿಲುವು ಸತ್ಯತ್ವ.   ಬ್ರಹ್ಮನಷ್ಟೇ ಅಲ್ಲ, ಬ್ರಹ್ಮನಿಂದ ನಿರ್ಮಿತವಾದ ಜಗತ್ತೂ, ಅವುಗಳ ನಡುವಿನ ಸಾಮ್ಯ, ವೈಷಮ್ಯ, ತಾರತಮ್ಯಗಳೂ, ಸ್ವರೂಪ-ಸ್ವಭಾವಗಳೂ ಸತ್ಯ ಹಾಗೂ ನಿತ್ಯವೆಂದೇ ಸಾರುವುದರಿಂದ ಇದು ತತ್ವವಾದ.  ಈ ತತ್ತ್ವವಾದವೇ ಆರ್ಷೇಯದರ್ಶನವೆಂದೂ, ಕಾಲಕ್ರಮದಲ್ಲಿ ಬೇರೆಬೇರೆ ಸಿದ್ಧಾಂತಗಳ ವಿಜೃಂಭಣೆಯಿಂದ ತತ್ವವಾದದ ಬೆಳಕು ಮರೆಯಾಯಿತೆಂದೂ, ಮುಂದೆ ಹದಿಮೂರನೆಯ ಶತಮಾನದಲ್ಲಿ ಬಂದ ಮಧ್ವಾಚಾರ್ಯರು (ಇವರ ಆಶ್ರಮನಾಮ ಪೂರ್ಣಪ್ರಜ್ಞತೀರ್ಥರು; ಬಳಿತ್ಥಾಸೂಕ್ತದ ಮಧ್ವ ಆಧವೇ ಎಂಬ ವಾಕ್ಯದಿಂದ ಮಧ್ವಾಚಾರ್ಯರೆಂದು ಪ್ರಸಿದ್ಧಿ - "ಯದೀಮನು ಪ್ರದಿವೋ ಮಧ್ವ ಆಧವೇ ಗುಹಾ ಸಂತಂ ಮಾತರಿಶ್ವಾ ಮಥಾಯತಿ") ಈ ಮರೆಯಾಗಿದ್ದ ತತ್ವವಾದವನ್ನು ಪುನರುಜ್ಜೀವಿಸಿ ಪ್ರಚುರಗೊಳಿಸಿದರೆಂದೂ ದ್ವೈತ ಸಂಪ್ರದಾಯ ನಂಬುತ್ತದೆ.  ಆದ್ದರಿಂದ ಇದಕ್ಕೆ ಪೂರ್ಣಪ್ರಜ್ಞದರ್ಶನವೆಂದೂ ಹೆಸರು.  ೧೩-೧೪ನೆಯ ಶತಮಾನದ ಮಾಧವಾಚಾರ್ಯರ "ಸರ್ವದರ್ಶನ ಸಂಗ್ರಹ"ದಲ್ಲೂ ಈ ದರ್ಶನ ಪೂರ್ಣಪ್ರಜ್ಞದರ್ಶನವೆಂದೇ ಕರೆಯಲ್ಪಟ್ಟಿದೆ.  ದ್ವೈತಸಿದ್ಧಾಂತವೆಂಬ ಹೆಸರು ಮೇಲಿನ ಆತ್ಮೈಕತ್ವದ (ಅದ್ವೈತದ) ಪ್ರತಿಯಾಗಿ ಬಳಕೆಗೆ ಬಂದ ವ್ಯವಹಾರವಿರಬೇಕು.  ಶಂಕರರ ಸೂತ್ರಭಾಷ್ಯಗಳಲ್ಲೂ ದ್ವೈತಿಗಳ ಉಲ್ಲೇಖ ಬಂದಿದ್ದರೂ ಸ್ಪಷ್ಟವಾಗಿಯೇ ಅದು ಮಧ್ವಸಿದ್ಧಾಂತದ ಉಲ್ಲೇಖವಲ್ಲ, ಬದಲಿಗೆ ಅದು ಸಾಂಖ್ಯ ಮತ್ತು ಯೋಗದರ್ಶನಗಳನ್ನು ಕುರಿತದ್ದು (ದ್ವೈತಿನೋ ಹಿ ತೇ ಸಾಂಖ್ಯಾ ಯೋಗಾಶ್ಚ - ಸೂತ್ರ ಭಾಷ್ಯ.೨.೧.೩).  ದ್ವೈತವೆಂಬಲ್ಲಿ ಒತ್ತು ಎರಡು ಎಂಬ ಸಂಖ್ಯೆಯ ಮೇಲಲ್ಲ, ಬದಲಿಗೆ ನಾನಾತ್ವದ ಮೇಲೆ.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಅದೇನೇ ಇದ್ದರೂ ಈ ಮೂರೂ ದರ್ಶನಗಳು ಸಮನ್ವಯಿಸಲೇ ಸಾಧ್ಯವಿಲ್ಲದಷ್ಟು ವಿಭಿನ್ನ ಧೋರಣೆಯನ್ನು ತಳೆದದ್ದು. &amp;nbsp;ಆದರೆ ಪ್ರಸ್ತುತ ಲೇಖನವನ್ನು ಓದುವಾಗ ಅದು ಎಲ್ಲೋ ಒಂದೆಡೆ ಈ ಮೂರೂ ಮತಗಳನ್ನು ಸಮನ್ವಯಿಸಲೆಳಸುತ್ತದೆಯೆನ್ನಿಸಿತು.ಉದಾಹರಣೆಗೆ ಇದನ್ನು ನೋಡಿ:&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;&lt;i&gt;&lt;span class="Apple-style-span"&gt;&lt;b&gt;"ರಾಮಾನುಜಾಚಾರ್ಯರ ವಿಶಿಷ್ಟಾದ್ವೈತಕ್ಕೂ ಅದ್ವೈತಕ್ಕೂ ಹೆಚ್ಚೇನೂ ಭಿನ್ನತೆಯಿಲ್ಲದಿದ್ದರೂ "ವಿಶ್ವಮಾನವರೆಲ್ಲರೂ ಪರಮಾತ್ಮನ ಸ್ವರೂಪರೇ" ಎನ್ನುವ ಅದ್ವೈತವನ್ನು ಬಿಟ್ಟು ಎಲ್ಲವೂ ಶ್ರೀ ಹರಿಯೇ , ಅವನೊಬ್ಬನೇ ಶೇಷಿ ಮಿಕ್ಕದ್ದೆಲ್ಲಾ ಶೇಷ ಎಂದು ಹೇಳುತ್ತಾರೆ" &lt;/b&gt;&lt;/span&gt;&lt;/i&gt;&lt;/div&gt;&lt;div style="text-align: justify;"&gt;&lt;i&gt;&lt;span class="Apple-style-span"&gt;&lt;br /&gt;&lt;/span&gt;&lt;/i&gt;&lt;/div&gt;&lt;div style="text-align: justify;"&gt;&lt;i&gt;&lt;span class="Apple-style-span"&gt;- &lt;/span&gt;&lt;/i&gt;ಆದರೆ "ವಿಶ್ವಮಾನವರೆಲ್ಲರೂ ಪರಮಾತ್ಮನ ಸ್ವರೂಪರೇ" ಎನ್ನುವುದಕ್ಕೂ "ಶ್ರೀಹರಿಯು ಶೇಷಿ, ಮಿಕ್ಕದ್ದೆಲ್ಲಾ ಶೇಷ" ಎನ್ನುವುದಕ್ಕೂ ಅಗಾಧವಾದ ಅಂತರವುಂಟು.  ಆದ್ದರಿಂದ&lt;b&gt; &lt;span class="Apple-style-span"&gt;"ವಿಶಿಷ್ಟಾದ್ವೈತಕ್ಕೂ ಅದ್ವೈತಕ್ಕೂ ಹೆಚ್ಚೇನೂ ಭಿನ್ನತೆಯಿಲ್ಲ"&lt;/span&gt;&lt;/b&gt;ವೆಂಬ ಸಮನ್ವಯ ತುಸು ಕಷ್ಟದ್ದೆನಿಸುತ್ತದೆ.  ಜಗತ್ತು ಮಿಥ್ಯೆ, ಮಾಯೆ; ಈ ಮಾಯಾಪ್ರಪಂಚದಲ್ಲಿ ಸಿಲುಕಿರುವ ಜೀವನ ನಿಜಸ್ವರೂಪವೆಂದರೆ ಪರಮಾತ್ಮನೇ; ಜೀವನಿಗೂ ಪರಮಾತ್ಮನಿಗೂ ಕಾಣಬರುವ ಭೇದ ಕೇವಲ ಪರಮಾತ್ಮನ ಮಾಯಾವಿಕಾರ; ಹೀಗೆಂಬ ತಿಳಿವೇ ಮುಕ್ತಿ (ಸ್ವಸರೂಪದರ್ಶನ, ಯಥಾರ್ಥ ಜ್ಞಾನ) - ಇದು ಸ್ಥೂಲವಾಗಿ ಶಂಕರರ ನಿಲುವು.  &lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಆದರೆ ರಾಮಾನುಜರ ಶೇಷಿ-ಶೇಷ ಪರಿಕಲ್ಪನೆ ಹಾಗಲ್ಲ. ಇಲ್ಲಿ ಮೂರು ಮುಖ್ಯ ಅಂಶಗಳಿವೆ: ಆತ್ಮ, ಚೇತನ (ಚಿದ್ವಸ್ತು) ಮತ್ತು ಅಚೇತನ (ಅಚಿದ್ವಸ್ತು). ವೇದಪ್ರತಿಪಾದ್ಯವಾದ ಆತ್ಮವೆನ್ನುವುದು ಒಂದೇ - ಅದೇ ಬ್ರಹ್ಮ, ಅದೇ ಸತ್ಯ. ವಿವಿಧಜೀವಿಗಳಲ್ಲಿ ಬೇರೆಬೇರೆ ತೋರುವುದು ವಿವಿಧ ಆತ್ಮಗಳಲ್ಲ, ಬದಲಿಗೆ ಈ ಪರಮಾತ್ಮನದೇ ಒಂದು ಅಂಶವಷ್ಟೇ. ಅದು ಚೇತನ (ಚಿದ್ವಸ್ತು - ಆತ್ಮನ ಒಂದು ತುಣುಕು). ಇನ್ನು ಈ ಇಡೀ ಜಗತ್ತು (ಅಚೇತನ-ಅಚಿದ್ವಸ್ತುಗಳ ಮೊತ್ತ) ಪರಮಾತ್ಮನ ದೇಹ.  ಅದಕ್ಕೆಂದೇ ಪರಮಪುರುಷನು ಸಹಸ್ರಪಾದ, ಸಹಸ್ರಾಕ್ಷ, ಸಹಸ್ರಶಿರ, ಸಹಸ್ರೋರು ಮತ್ತು ಸಹಸ್ರಬಾಹುವೆನ್ನಿಸಿಕೊಳ್ಳುತ್ತಾನೆ. ಹೀಗೆ ಆತ್ಮ-ಪರಮಾತ್ಮರ ಭೇದವನ್ನೂ, ಆತ್ಮದ ಬಹುತ್ವವನ್ನೂ ನಿರಾಕರಿಸಿ, ಪ್ರತಿಯೊಂದು ಜೀವಿಯಲ್ಲಿರುವುದು ಒಂದೇ ಪರಮಾತ್ಮನ ಅಂಶ(ಶೇಷ)ವೆಂದೂ, ಆತ್ಮ(ಶೇಷಿ)ವೊಂದೇ ಎಂದೂ ಆತ್ಮೈಕತ್ವವನ್ನು ಪ್ರತಿಪಾದಿಸುವುದರಿಂದ ಅದು "ಅದ್ವೈತ"; ಆದರೆ ಕಾಣಬರುವ ವಿವಿಧ ಆತ್ಮಗಳ ಭೇದವನ್ನು ಮಾಯೆಯೆನ್ನದೇ ಅದು ಸತ್ಯವೆಂದೂ ವಿರಾಟ್ ಆತ್ಮದ ಅಂಶಮಾತ್ರವೆಂದೂ ಪ್ರತಿಪಾದಿಸುವುದರಿಂದ ಅದು "ವಿಶಿಷ್ಟಾದ್ವೈತ".   ಇದಕ್ಕೂ, ಬ್ರಹ್ಮನನ್ನುಳಿದು ಮಿಕ್ಕದ್ದೆಲ್ಲವೂ ಮಾಯೆಯೆನ್ನುವ ಅದ್ವೈತದ ನಿಲುವಿಗೂ ಅಜಗಜಾಂತರ ವ್ಯತ್ಯಾಸವಿದೆ.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಇನ್ನು ಶಂಕರರ ಸಿದ್ಧಾಂತಕ್ಕೂ ಮಧ್ವಸಿದ್ಧಾಂತಕ್ಕೂ ಮೇಲಿನಷ್ಟು ಸಾಮ್ಯವೂ ಇಲ್ಲ - ಭೂಮ್ಯಾಕಾಶಗಳ ಅಂತರ.  ಎರಡೂ ಪಕ್ಷಗಳು ಒಪ್ಪುವ ಒಂದೇ ವಾಕ್ಯವೆಂದರೆ "ಬ್ರಹ್ಮ ಸತ್ಯ"  ಅದು ಬಿಟ್ಟರೆ ಮಿಕ್ಕಿದ್ದೆಲ್ಲವೂ ತದ್ವಿರುದ್ಧವೇ!  ಆದರೆ ಈ ಎರಡು ಸಿದ್ಧಾಂತಗಳನ್ನು ಹೋಲಿಸುತ್ತಾ, ಲೇಖನ ಹೀಗೆ ಹೇಳುತ್ತದೆ:&lt;/div&gt;&lt;div style="text-align: justify;"&gt;&lt;i&gt;&lt;span class="Apple-style-span"&gt;&lt;br /&gt;&lt;/span&gt;&lt;/i&gt;&lt;/div&gt;&lt;div style="text-align: justify;"&gt;&lt;span class="Apple-style-span"&gt;&lt;i&gt;&lt;span class="Apple-style-span"&gt;&lt;b&gt;"ದ್ವೈತದಲ್ಲಿಯೂ ಸಹ 'ಹರಿ ಸರ್ವೋತ್ತಮ' ಎನ್ನುವುದು ಅಂತಿಮ ನಿಶ್ಚಯ. ಬ್ರಹ್ಮವೆಂದರೆ ಬೇರೇನೂ ಅಲ್ಲ, ಜಗತ್ತಿನ ನಿಯಾಮಕನೂ ಸರ್ವಶಕ್ತನೂ ಆದ ಶ್ರೀಹರಿಯೇ ಮತ್ತು ಅವನೊಬ್ಬನೇ ಎಂದು ನಿರೂಪಿಸುತ್ತಾರೆ. ಹರಿಯೊಬ್ಬನೆ ಸ್ವತಂತ್ರ ಸತ್ಯ ಇನ್ನುಳಿದದ್ದೆಲ್ಲಾ ಅಧೀನ ಸತ್ಯ ಎನ್ನುವ ಪ್ರತಿಪಾದನೆಯನ್ನು ಕಾಣಬಹುದಾಗಿರುತ್ತದೆ. ಇಲ್ಲಾದರೂ ಸಹ ನಾವು ಶಂಕರರ ತತ್ವವನ್ನೇ ಕಾಣಬಹುದಾಗಿರುತ್ತದೆ. ಬ್ರಹ್ಮವೊಂದೇ ಸತ್ಯ ಜಗತ್ತು ಮಿಥ್ಯೆ ಎನ್ನುವ ಶಂಕರರ ಅದ್ವೈತಕ್ಕೂ ಹರಿಯೊಬ್ಬನೇ (ಸಗುಣ ಬ್ರಹ್ಮ) ಸತ್ಯ ಉಳಿದುದೆಲ್ಲವೂ ಅನಿತ್ಯ ಅಥವಾ ಅಧೀನ ಸತ್ಯ (ಅಸ್ವತಂತ್ರ ಸತ್ಯ) ಮತ್ತು ಹರಿಯಿಂದಲೇ ಜಗತ್ತು ನೆಡೆಯುವುದು ಎನ್ನುವಾಗ 'ಜಗತ್ತು' ಕೂಡಾ ಹರಿಯ ಮಾಯೆಯೇ ಎನ್ನುವುದು ನಿರೂಪಿತವಾಗುತ್ತದೆ ಮತ್ತು ಹೆಚ್ಚು ವ್ಯತ್ಯಾಸವೂ ಕಾಣದಾಗುತ್ತದೆ. ಇದು ನಿತ್ಯ ಅದು ಅನಿತ್ಯ ಎನ್ನುವ ಪೃಥಃಕರಣ ಎನ್ನಬಹುದು. (ಅರ್ಜುನನ ಗುರಿಯು ಪಕ್ಷಿಯ ಅಕ್ಷಿಯೊಂದೇ ಆಗಿದ್ದಾಗ ಉಳಿದ ಅಂಗಗಳೆಲ್ಲಾ ಆತನಿಗೆ ನಿಮಿತ್ತವಾಗಿತ್ತು ಎನ್ನುವುದನ್ನು ನೆನಪಿಸಿಕೊಳ್ಳಬಹುದು)"&lt;/b&gt;&lt;/span&gt;&lt;/i&gt; &lt;/span&gt;&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;- ಇಲ್ಲಿ ಉಭಯಮತಸಮನ್ವಯದ ಪ್ರಯತ್ನ ಕಾಣುತ್ತದೆ, ಆದರೆ ತಾತ್ವಿಕವಾಗಿಯಾದರೂ ಈ ಸಮನ್ವಯ ಸಾಧ್ಯವೇ ನೋಡೋಣ.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;&lt;i&gt;&lt;span class="Apple-style-span"&gt;&lt;b&gt;"ದ್ವೈತದಲ್ಲಿಯೂ ಸಹ 'ಹರಿ ಸರ್ವೋತ್ತಮ' ಎನ್ನುವುದು ಅಂತಿಮ ನಿಶ್ಚಯ. ಬ್ರಹ್ಮವೆಂದರೆ ಬೇರೇನೂ ಅಲ್ಲ, ಜಗತ್ತಿನ ನಿಯಾಮಕನೂ ಸರ್ವಶಕ್ತನೂ ಆದ ಶ್ರೀಹರಿಯೇ ಮತ್ತು ಅವನೊಬ್ಬನೇ ಎಂದು ನಿರೂಪಿಸುತ್ತಾರೆ"&lt;/b&gt;&lt;/span&gt;&lt;/i&gt; - ಇದರಲ್ಲಿ ಎರಡು ಮಾತಿಲ್ಲ.  &lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಮುಂದೆ &lt;i&gt;&lt;b&gt;&lt;span class="Apple-style-span"&gt;"ಹರಿಯೊಬ್ಬನೆ ಸ್ವತಂತ್ರ ಸತ್ಯ ಇನ್ನುಳಿದದ್ದೆಲ್ಲಾ ಅಧೀನ ಸತ್ಯ ಎನ್ನುವ ಪ್ರತಿಪಾದನೆಯನ್ನು ಕಾಣಬಹುದಾಗಿರುತ್ತದೆ"&lt;/span&gt;&lt;/b&gt;&lt;/i&gt; ಇಲ್ಲಿ ಸ್ವತಂತ್ರ ಸತ್ಯ ಮತ್ತು ಅಧೀನ ಸತ್ಯ ಎಂಬುವು ತತ್ವವಾದದ ಪರಿಭಾಷೆಯಲ್ಲವಾದರೂ ಅದರ ಆಶಯಕ್ಕೆ ಮುಕ್ಕಾಗಿಲ್ಲವಾದ್ದರಿಂದ ಒಪ್ಪಿ ಮುಂದುವರೆಯಬಹುದು.  ಅದನ್ನೇ ತತ್ವವಾದದ ಪರಿಭಾಷೆಯಲ್ಲಿ ಹೇಳುವುದಾದರೆ "ಹರಿಯೊಬ್ಬನೇ ಸ್ವತಂತ್ರ, ಮಿಕ್ಕೆಲ್ಲಾ ಹರಿಯ ಅಧೀನ; ಬ್ರಹ್ಮನೂ, ಅವನಿಂದ ಸೃಷ್ಟಿಸಲ್ಪಟ್ಟ ಜಗತ್ತೂ, ಅದರ ಭೇದವೂ ತಾರತಮ್ಯವೂ ಸತ್ಯ." ಇದನ್ನು ಹೀಗೇಕೆ ಮಾರ್ಪಡಿಸಬೇಕಾಯಿತೆಂದರೆ, ಮೇಲಿನ ವಾಕ್ಯದ ಆಶಯ ಅದೇ ಆದರೂ ಸ್ವತಂತ್ರ ಸತ್ಯ ಮತ್ತು ಅಧೀನ ಸತ್ಯವೆಂಬ ಪರಿಭಾಷೆ ತತ್ವವಾದವನ್ನು ಅದ್ವೈತವಾದದತ್ತ ತುಯ್ಯುತ್ತದೆ.  ಏಕೆಂದರೆ "ಹರಿ ಸ್ವತಂತ್ರ, ಮಿಕ್ಕಿದ್ದು ಅಧೀನ, ಮತ್ತು ಎರಡೂ ಸತ್ಯ" ಎನ್ನುವುದಕ್ಕೂ "ಹರಿಯು ಸ್ವತಂತ್ರ ಸತ್ಯ, ಮಿಕ್ಕಿದ್ದು ಅಧೀನ ಸತ್ಯ" ಎನ್ನುವುದಕ್ಕೂ ಬಹಳ ವ್ಯತ್ಯಾಸವಿದೆ.  ಮೊದಲ ಸಾಲಿನಲ್ಲಿ ನಾವು ವಸ್ತುವಿನ ಸ್ವಾತಂತ್ರ್ಯದ ಬಗೆಗೆ ಮಾತಾಡುತ್ತೇವೆ, ಎರಡನೆಯದರಲ್ಲಿ ಸತ್ಯದ ಸ್ವಾತಂತ್ರ್ಯದ ಬಗ್ಗೆ.  ಮಿಕ್ಕಿದ್ದು ಅಧೀನಸತ್ಯ (dependent/conditional truth) ಎಂದುಬಿಟ್ಟರೆ ಸ್ವತಂತ್ರ ಸತ್ಯದ ಮರ್ಜಿಯಲ್ಲಿ ಅಧೀನ ಸತ್ಯವೂ ಮಿಥ್ಯೆಯಾಗಿಬಿಡಬಹುದೆನ್ನುವ ಅಭಿಪ್ರಾಯ ಬಂದುಬಿಡುತ್ತದೆ (ಜಗತ್ತು ಬ್ರಹ್ಮದ ಮಾಯೆ, ಅದರೊಳಗಿರುವವರಿಗೆ ಮಾತ್ರ ಅದು ಸತ್ಯ (ವ್ಯಾವಹಾರಿಕ-ಅಧೀನ ಸತ್ಯ), ಬ್ರಹ್ಮನಿಗಲ್ಲ).  ಇದು ಖಂಡಿತಾ ತತ್ವವಾದದ ನಿಲುವಲ್ಲ.  ಇಷ್ಟು ಹೇಳಿ ಮುಂದೆ ನೋಡೋಣ:&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;&lt;i&gt;&lt;span class="Apple-style-span"&gt;&lt;b&gt;"ಬ್ರಹ್ಮವೊಂದೇ ಸತ್ಯ ಜಗತ್ತು ಮಿಥ್ಯೆ ಎನ್ನುವ ಶಂಕರರ ಅದ್ವೈತಕ್ಕೂ ಹರಿಯೊಬ್ಬನೇ (ಸಗುಣ ಬ್ರಹ್ಮ) ಸತ್ಯ ಉಳಿದುದೆಲ್ಲವೂ ಅನಿತ್ಯ ಅಥವಾ ಅಧೀನ ಸತ್ಯ (ಅಸ್ವತಂತ್ರ ಸತ್ಯ) ಮತ್ತು ಹರಿಯಿಂದಲೇ ಜಗತ್ತು ನೆಡೆಯುವುದು ಎನ್ನುವಾಗ 'ಜಗತ್ತು' ಕೂಡಾ ಹರಿಯ ಮಾಯೆಯೇ ಎನ್ನುವುದು ನಿರೂಪಿತವಾಗುತ್ತದೆ ಮತ್ತು ಹೆಚ್ಚು ವ್ಯತ್ಯಾಸವೂ ಕಾಣದಾಗುತ್ತದೆ"&lt;/b&gt;&lt;/span&gt;&lt;/i&gt; - ಇದು ಹೇಗೆ?&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;&lt;i&gt;&lt;span class="Apple-style-span"&gt;"ಹರಿಯೊಬ್ಬನೇ (ಸಗುಣಬ್ರಹ್ಮದ ವಿಷಯವನ್ನು ಮುಂದೆ ಮಾತಾಡೋಣ) ಸತ್ಯ, ಉಳಿದುದೆಲ್ಲವೂ ಅನಿತ್ಯ (ಹಿಂದಿನ ಅಧೀನಸತ್ಯವು ಇಲ್ಲಿ ಅನಿತ್ಯವೆಂದು ಕರೆಯಲ್ಪಟ್ಟಿತು)"&lt;/span&gt;&lt;/i&gt; ಎಂದಾಗ ಅದು ಹರಿಯ ಮಾಯೆಯೆಂದು ಎಲ್ಲಿ ನಿರೂಪಿತವಾಯಿತು?  ಅನಿತ್ಯವೆಂದರೆ ಕ್ಷಣಿಕ (not-eternal, but mortal);  ಕ್ಷಣಿಕ ಹೌದು, ಆದರೆ ಮಾಯೆಯೇ?  ನಡೆಯುವಾಗ ಎಡವಿ ಬಿದ್ದರೆ ನೋವು ಕ್ಷಣಿಕ, ಅನಿತ್ಯ, ಆದರೆ ಅದು ಮಾಯೆಯಲ್ಲವಲ್ಲ!  &lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಮತ್ತೆ ಹರಿಯಿಂದಲೇ ಜಗತ್ತು ನಡೆಯುವುದು ಎನ್ನುವಾಗ ಜಗತ್ತು ಹರಿಯ ಮಾಯೆಯೆಂದು ನಿರೂಪಿತವಾಗದು?  ಹೆಚ್ಚೆಂದರೆ ಅದನ್ನು ಹರಿಯ ಲೀಲೆಯೆನ್ನಬಹುದಲ್ಲವೇ?  ಬ್ರಹ್ಮನ ಲೀಲಾಮಾತ್ರದಿಂದ ಜಗತ್ತು ಸೃಷ್ಟಿಯಾಯಿತು ಎನ್ನುವುದು ಉಭಯ ದರ್ಶನಗಳೂ ಒಪ್ಪುವ ವಿಚಾರ.  ಆದರೆ ಈ ಲೀಲಾಮಾತ್ರ ಸೃಷ್ಟಿ ಮಾಯಾಸೃಷ್ಟಿಯೋ ನೈಜವೋ ಎಂಬಲ್ಲಿಯೇ ತಕರಾರು.  ಇಲ್ಲಿ ಜಗನ್ನಾಥದಾಸರ ಹರಿಕಥಾಮೃತಸಾರದಿಂದ ಒಂದು ಸಾಲು ನೆನಪಿಗೆ ಬರುತ್ತದೆ &lt;i&gt;"ಏನು ಕರುಣಾನಿಧಿಯೊ ಹರಿ ಮತ್ತೇನು ಭಕ್ತಾಧೀನನೋ ಇನ್ನೇನು ಈತನ ಲೀಲೆ ಇಚ್ಛಾಮಾತ್ರದಲೆ ಜಗವ ತಾನೆ ಸೃಜಿಸುವ ಪಾಲಿಸುವ ನಿರ್ಮಾಣ ಮೊದಲಾದಖಿಲ ಲೋಕಸ್ಥಾನದಲಿ ತನ್ನವರನಿಟ್ಟಾನಂದ ಪಡಿಸುವನು"&lt;/i&gt;&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಜಗತ್ಸತ್ಯತ್ವವನ್ನು ವ್ಯಾವಹಾರಿಕ ಸ್ತರದಲ್ಲಿ ಶಂಕರರರೂ ಒಪ್ಪುವರಾದರೂ ಪರಮಾರ್ಥದಲ್ಲಿ ಅದು ಮಾಯೆಯೇ ಸರಿ.  ಆದರೆ ಮಧ್ವರ ನಿಲುವೋ, ಜಗತ್ತು ಸತ್ಯವಷ್ಟೇ ಅಲ್ಲ, ನಿತ್ಯವೂ - ಅದರ ರೂಪ ಬದಲಾಗಬಹುದು, ಎಲ್ಲವೂ ನಾಶಹೊಂದಿ ಪರಮಾತ್ಮನಲ್ಲಿ ಅಡಗಬಹುದು, ಆದರೆ ಮಾಯವಾಗದು.  ಬೀಜರೂಪದಲ್ಲಾದರೂ ಅದರ ಅಸ್ತಿತ್ವವಿದ್ದೇ ಇರುತ್ತದೆ.  ಎಂದಮೇಲೆ ಜಗನ್ಮಿಥ್ಯಾತ್ವ ಮತ್ತು ಸತ್ಯತ್ವಗಳ ನಡುವಿನ ಸಮನ್ವಯವಿರಲಿ, ಹೋಲಿಕೆಯಾದರೂ ಹೇಗೆ?&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಇನ್ನು ಆಚಾರ್ಯರಿಬ್ಬರೂ "ಒಪ್ಪುವ" ಬ್ರಹ್ಮಸತ್ಯತ್ವದ ವಿಷಯವನ್ನೊಂದಿಷ್ಟು ನೋಡೋಣ.  ಅದಾದರೂ ನಿರ್ವಿವಾದವೇ ಎಂದರೆ, ಅಲ್ಲವೆಂದೇ ಹೇಳಬೇಕಾಗುವುದು. "ಒಪ್ಪಿಗೆ" ವಾಕ್ಯದ ಮಟ್ಟದಲ್ಲಷ್ಟೇ! ವಾಕ್ಯಾರ್ಥದ ಮಟ್ಟಕ್ಕಿಳಿದರೆ ಅಲ್ಲೂ ತಕರಾರೇ! ಶಂಕರರ ಪ್ರಕಾರ ಬ್ರಹ್ಮನು ನಿರ್ಗುಣ, ನಿರಾಕಾರ, ನಿರುಪಾಧಿಕ. ಗುಣ, ಆಕಾರ, ಉಪಾಧಿ ಎಲ್ಲವೂ ಜೀವಕ್ಕೆ ಮಾತ್ರ.  ಆದರೆ ಈಗಾಗಲೇ ಜೀವನು ಪರಬ್ರಹ್ಮಸ್ವರೂಪಿಯೆಂದೂ ಪರಬ್ರಹ್ಮನು ನಿರ್ಗುಣ, ನಿರಾಕಾರ, ನಿರುಪಾಧಿಕನೆಂದೂ ಒಪ್ಪಿಬಿಟ್ಟಿರುವುದರಿಂದ, ಜೀವನಲ್ಲಿ ಕಾಣುವ ಈ ಗುಣ, ಆಕಾರ, ಉಪಾಧಿಗಳೆಲ್ಲಾ ಬರೀ ತೋರಿಕೆಯೆಂದೂ ಮಾಯೆಯೆಂದೂ ಹೇಳಬೇಕಾಗುವುದು - ಇದು ತರ್ಕ.  ಹಾಗೆಂದಮಾತ್ರಕ್ಕೆ ಅದ್ವೈತಸಾಧನೆಯಲ್ಲಿ ಬ್ರಹ್ಮನ ಸಗುಣೌಪಾಸನೆಯಿಲ್ಲವೆಂದಲ್ಲ.  ಗುಣ, ಆಕಾರ, ಉಪಾಧಿಭರಿತವಾದ ಜೀವಕ್ಕೆ ಅವೆಲ್ಲಾ ಮಾಯೆಯೆಂಬ ಜ್ಞಾನವಾಗದೆ ನಿರ್ಗುಣದ ಅರಿವು ಸಾಧ್ಯವಿಲ್ಲ.  ಅದುವರೆಗೂ ಜೀವಕ್ಕೆ ತನ್ನ ಉಪಾಧಿಗನುಗುಣವಾಗಿ ಸಗುಣೌಪಾಸನೆಯೇ ಮಾರ್ಗ.  ಭಕ್ತಿ ಇದಕ್ಕೆ ಸಾಧನ.  ಇದರಿಂದ ಚಿತ್ತಶುದ್ಧಿ, ತನ್ಮೂಲಕ ಜ್ಞಾನಾರ್ಹತೆ, ಜ್ಞಾನ, ಮುಂದೆ ನಿರ್ಗುಣೋಪಾಸನೆ - ಇದು ಶಂಕರರ ಮಾರ್ಗ.  ಇದಕ್ಕೆ ಮಧ್ವರ ಆಕ್ಷೇಪಣೆಯೋ ಎಂದರೆ, ಗುಣ, ಆಕಾರ, ಉಪಾಧಿಗಳೇನೂ ಇಲ್ಲದ ಬ್ರಹ್ಮನನ್ನು ಏನೆಂದು ನಿರ್ದೇಶಿಸುವುದು?  "ಇಲ್ಲ"ವೆಂದೇ?  ಇದು ಆತ್ಯಂತಿಕವಾಗಿ ಬ್ರಹ್ಮನೂ ಇಲ್ಲವೆಂದೇ ಹೇಳಿದಂತಲ್ಲವೇ?  ಇದಕ್ಕೆ ಪ್ರತಿಯಾಗಿ ಮಧ್ವರ ಪರಿಕಲ್ಪನೆಯೆಂದರೆ, ಬ್ರಹ್ಮ ಗುಣರಹಿತನಲ್ಲ, ನಿರಾಕಾರನಲ್ಲ, ಉಪಾಧಿರಹಿತನಲ್ಲ; ಹಾಗೆಯೇ ಆತ್ಮನೂ ಗುಣ/ಆಕಾರ/ಉಪಾಧಿರಹಿತನಲ್ಲ.  ಹಾಗಿದ್ದರೆ ಬ್ರಹ್ಮನಿಗೂ ಜೀವನಿಗೂ ವ್ಯತ್ಯಾಸವೇನು?  ಜೀವನ ಗುಣ/ಆಕಾರ/ಉಪಾಧಿಗಳು ಸಂಪೂರ್ಣವೂ ಕಳಂಕರಹಿತವೂ ಅಲ್ಲ.  ಅದಕ್ಕೆ ಅಪೂರ್ಣತ್ವವಿದೆ, ದೋಷಬಾಧೆಯಿದೆ.  ಆದರೆ ಬ್ರಹ್ಮನೋ, ಸರ್ವದೋಷವಿವರ್ಜಿತ.  "ಅನಂತಕಲ್ಯಾಣಗುಣ ಪರಿಪೂರ್ಣ, ಕ್ಷೀರಾಬ್ಧಿಶಾಯಿ, ನಿರ್ದೋಷ ಜ್ಞಾನಾನಂದಾತ್ಮಕ ವಿಷ್ಣುರ್ಮೇ ಸ್ವಾಮಿನ್" ಎಂದೇ ನಿರ್ದೇಶನ.  ಗುಣಪೂರ್ಣನಾದ್ದರಿಂದ ಈತನಿಗೊಂದು ಹೆಸರಿದೆ, ಅದೇ ಹರಿ; ಅವನಿಗೊಂದು ರೂಪ ಕೂಡ ಇದೆ.  ಹರಿಯ ರೂಪಾತಿಶಯಗಳ, ದೇಹದ ಅಂಗಾಂಗಗಳ ವರ್ಣನೆಗೆಂದೇ ಮಧ್ವಾಚಾರ್ಯರು ತಮ್ಮ ದ್ವಾದಶಸ್ತೋತ್ರದ ಇಡೀ ಒಂದು ಅಧ್ಯಾಯವನ್ನೇ ಮೀಸಲಿಟ್ಟಿದ್ದಾರೆ.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಆದ್ದರಿಂದ  ಕೇವಲ ಕೆಲವೇ ಕೆಲವು ಗೌಣ ವಿಷಯಗಳ ಬಗೆಗೆ ಬಿಟ್ಟರೆ ಆಚಾರ್ಯದ್ವಯರಲ್ಲಿ (ಅಥವ ಆಚಾರ್ಯತ್ರಯರಲ್ಲಿಯೂ) ಕಂಡುಬರುವುದು ಅಡಿಯಿಂದ ಮುಡಿಯವರೆಗೂ ಭಿನ್ನತೆಯೇ!  ಇದರರ್ಥ ಯಾರು ಸರಿ ಯಾರು ತಪ್ಪೆಂದು ಚರ್ಚಿಸಬೇಕೆಂದೋ ನಿರ್ಧರಿಸಬೇಕೆಂದೋ ಅಲ್ಲ, ಕೇವಲ ಹೋಲಿಕೆಗಳ ಸ್ಪಷ್ಟತೆಗಾಗಿಯಷ್ಟೇ ಈ ಚರ್ಚೆ.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಇದು ಲೇಖನದಲ್ಲಿನ ಹೋಲಿಕೆಗಳ ವಿಷಯದ ಮಾತಾಯಿತು.  ಇನ್ನು ಲೇಖನದಲ್ಲೇ ಒಡಮೂಡಿರುವ ಮತ್ತೊಂದು ವಿಚಾರದ ಬಗ್ಗೆ ನನ್ನ ಅನಿಸಿಕೆಗಳನ್ನು ಮಂಡಿಸುವೆ.  ಅದೆಂದರೆ ಅನಿತ್ಯ-ಮಿಥ್ಯ ವಿಚಾರ.  ಮೊದಲೇ ಚರ್ಚಿಸಿದಂತೆ ಅನಿತ್ಯವು ಮಿಥ್ಯೆಯಾಗಬೇಕಿಲ್ಲ ಅಲ್ಲವೇ?  ಲೇಖನವೂ &lt;i&gt;&lt;span class="Apple-style-span"&gt;&lt;b&gt;"'ಅನಿತ್ಯ' ಎನ್ನುವುದೇನೋ ಸರಿ ಆದರೆ, ಮಿಥ್ಯೆ ಎನ್ನುವುದು ಎಷ್ಟು ಸರಿ?"&lt;/b&gt;&lt;/span&gt;&lt;/i&gt; ಎಂದು ಪ್ರಶ್ನೆಯನ್ನೇನೋ ಕೈಗೆತ್ತಿಕೊಳ್ಳುತ್ತದೆ, ಆದರೆ ಉತ್ತರ ಮನದಟ್ಟಾಗಲಿಲ್ಲ.  &lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;&lt;span class="Apple-style-span"&gt;&lt;i&gt;&lt;b&gt;"ಆತ್ಮಾಭ್ಯಾಸಿಯು ಅನಿತ್ಯವಾದ ಜಗತ್ತನ್ನು ನೆಚ್ಚಿ ಕುಳಿತರೆ ತನ್ನ ಪರಮಾರ್ಥದ ಉದ್ದೇಶವನ್ನು ನೆರವೇರಿಸಿಕೊಳ್ಳಲು ಸಾಧ್ಯವಾಗದು. ಆತನ ಲಕ್ಷ್ಯವೇನಿದ್ದರೂ ಬ್ರಹ್ಮದೆಡೆಗೆ ಮಾತ್ರ ಇರಬೇಕಾಗುತ್ತದೆ. ಹೀಗೆ ಗಟ್ಟಿಯಾಗುತ್ತಾ ಸಾಗಿದಂತೆ ಮೊಟ್ಟಮೊದಲ ವೈರಾಗ್ಯವು(=ಅನಾಸಕ್ತಿ, ತಟಸ್ಥ ಭಾವ) ಹುಟ್ಟುತ್ತದೆ... ಮಿಥ್ಯಾಪ್ರಂಪಚದ ಗೊಡವೆಯಿಂದ ಪರಮಾರ್ಥ ಚಿಂತನೆಯು ಸಾಧ್ಯವಾಗುವುದಿಲ್ಲ ಎಂಬ ಭಾವವನ್ನು ಇಲ್ಲಿ ವ್ಯಕ್ತಪಡಿಸಿದ್ದಾರೆ ಎಂದುಕೊಳ್ಳಬಹುದು.  "ವೈರಾಗ್ಯವು ತಪ್ಪದೆ ಹುಟ್ಟುವುದಕ್ಕಾಗಿ ಬ್ರಹ್ಮವು ನಿತ್ಯ ಜಗತ್ತು ಅನಿತ್ಯ ಎಂದು ಹೇಳದೆ ಬ್ರಹ್ಮವು ಸತ್ಯ ಜಗತ್ತು ಮಿಥ್ಯೆ ಎಂದು ಹೇಳಿದ್ದಾರೆ " ಎಂಬುದು ಸದ್ಗುರು ಚಂದ್ರಶೇಖರ ಭಾರತಿಗಳ ವಿವರಣೆ."&lt;/b&gt;&lt;/i&gt;&lt;/span&gt; ಇದು ಅಷ್ಟು ಸಮರ್ಪಕವೆನಿಸುವುದಿಲ್ಲ.  ಕೇವಲ ವೈರಾಗ್ಯವು ತಪ್ಪದೇ ಹುಟ್ಟಬೇಕೆಂಬ ಕಾರಣಕ್ಕಾಗಿ ಅನಿತ್ಯವನ್ನು ಮಿಥ್ಯೆಯೆಂದು ಹೇಳುತ್ತಾರೆಯೇ?  ಹಾಗಿದ್ದರೆ ಸತ್ಯವನ್ನೂ ಮಿಥ್ಯೆಯೆಂದೇ ಹೇಳಿಬಿಡಬಹುದಲ್ಲವೇ?  ಯಥಾರ್ಥಜ್ಞಾನವೇ ಪರಮಾರ್ಥವೆಂದು ಸಾಧಿಸುವ ಬೋಧಿಸುವ ಮಹಾಮನೀಷಿಗಳು ಕೇವಲ ಮುಮುಕ್ಷುಗಳ ವೈರಾಗ್ಯಲಾಭಕ್ಕಾದರೂ ಅನಿತ್ಯವನ್ನು ಮಿಥ್ಯೆಯೆನ್ನುವ ಆಮಿಷವೊಡ್ಡುವರೇ? ಶ್ರೀ ಶಂಕರರ ವಿಷಯದಲ್ಲಿ ನನಗೇನೋ ಇದು ಮನಸ್ಸಿಗೊಪ್ಪುವ ಮಾತಲ್ಲ.  ಬದಲಿಗೆ ಇದರ ಸಮನ್ವಯ ಹೀಗಿರಬಹುದು:&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಸಾಧನಚತುಷ್ಟಯದ ಮೊದಲ ಸಾಧನ, ನಿತ್ಯಾನಿತ್ಯವಸ್ತುವಿವೇಕ.  ಯಾವುದು ನಿತ್ಯ (eternal) ಮತ್ತು ಯಾವುದು ಅನಿತ್ಯ (mortal).  ಬ್ರಹ್ಮನೇನೋ ಸತ್ಯವೂ, ನಿತ್ಯವೂ ಹೌದು (ಸತ್ಯ, ಮತ್ತು ಅನಾದ್ಯನಂತ).  ಇದಕ್ಕೆ ವಿರುದ್ಧವಾಗಿ ಜಗತ್ತು ಮಿಥ್ಯೆ, ಮತ್ತು ಅನಿತ್ಯ. ಆದರೆ ಇಲ್ಲಿ ಮಿಥ್ಯೆಯೆಂದುಬಿಟ್ಟಮೇಲೆ ನಿತ್ಯಾನಿತ್ಯದ ಪ್ರಶ್ನೆಯೇ ಏಳುವುದಿಲ್ಲವಲ್ಲ! ಏಕೆಂದರೆ "ಇಲ್ಲ"ದಿದ್ದುದು ನಿತ್ಯವೋ ಅನಿತ್ಯವೋ ಆಗುವುದಾದರೂ ಹೇಗೆ?  ಅದೇನಿದ್ದರೂ ಸತ್ಯವಸ್ತುವಿನ ಗೊಡವೆಯಲ್ಲವೇ?  ಹೌದು.  ಮತ್ತಿದರ ಪರಿಹಾರ?  ಜಗತ್ತು ಪರಮಾರ್ಥದಲ್ಲಿ ಮಿಥ್ಯವೇನೋ ಸರಿ, ಆದರೆ ವ್ಯಾವಹಾರಿಕ ಸ್ತರದಲ್ಲಿ (ಜೀವನಿಗೆ ಯಥಾರ್ಥಜ್ಞಾನವಾಗುವವರೆಗಾದರೂ) ಸತ್ಯವೇ ತಾನೆ? ಅಂದಮೇಲೆ ಆ "ಸತ್ಯ"ದ ಪರಿಧಿಯಲ್ಲಿ ವಸ್ತುವು ನಿತ್ಯವೋ ಅನಿತ್ಯವೋ ಎಂಬ ಪ್ರಶ್ನೆಬಂದೇಬರುತ್ತದೆ.  ಜೀವನ ಆತ್ಯಂತಿಕ ಗುರಿ ಪರಮಾರ್ಥವಾದ್ದರಿಂದ, ಯಥಾರ್ಥಜ್ಞಾನವಾದೊಡನೆ ಜಗತ್ತಿನ ವ್ಯಾವಹಾರಿಕ ಸತ್ಯದ ಪೊರೆ ಹರಿಯುವುದರಿಂದ ಈ ವ್ಯಾವಹಾರಿಕ ಜಗತ್ತು ನಿತ್ಯವಲ್ಲ, ಬದಲಿಗೆ ಅನಿತ್ಯ. ಬಹುಶಃ ಇದು ಆಚಾರ್ಯ ಶಂಕರರ ನಿಲುವು.  ಆದ್ದರಿಂದ ಇದನ್ನು ಹೀಗೆ ಸಂಗ್ರಹಿಸಬಹುದು: ಬ್ರಹ್ಮವು ಸತ್ಯ, ಮತ್ತು ನಿತ್ಯ; ಜಗತ್ತು, ಪರಮಾರ್ಥದಲ್ಲಿ ಮಿಥ್ಯೆಯಾದರೂ ವ್ಯವಹಾರದಲ್ಲಿ ಸತ್ಯ ಆದರೆ ಈ ವ್ಯಾವಹಾರಿಕತೆಯೇ ಮಿಥ್ಯೆಯಾದ್ದರಿಂದ, ಎಂದಿದ್ದರೂ ಹರಿದುಹೋಗುವುದರಿಂದ ಈ ಜಗತ್ತು ಅನಿತ್ಯ. ಆದ್ದರಿಂದ ಈ ಸಂದರ್ಭದಲ್ಲಿ ನಿಜಕ್ಕೂ ಶ್ರೀ ಶಂಕರರ ಉದ್ದೇಶ ನಿತ್ಯಾನಿತ್ಯವಸ್ತುವಿನ ಬಗ್ಗೆ ತಿಳಿಯಪಡಿಸುವುದೇ ಹೊರತು ಮಿಥ್ಯೆಯ ಬಗೆಗಲ್ಲ (ಅದರ ಸಂದರ್ಭವೇ ಬೇರೆ).  "ಜಗತ್ತು ಅನಿತ್ಯವೆಂಬುದನ್ನು ಮೊದಲು ಅರಿತುಕೋ, ಮುಂದಿನ ಅರಿವು ಆಮೇಲಾಗಲಿ" ಇದು ಶಂಕರರ ಆಶಯವಿರಬೇಕು; ಆದ್ದರಿಂದಲೇ ಇದನ್ನು "ನಿತ್ಯಾನಿತ್ಯವಸ್ತುವಿವೇಕ"ವೆಂದಿದ್ದಾರೆ, ತಪ್ಪಿದ್ದರೆ ದಯವಿಟ್ಟು ತಿಳಿಯಪಡಿಸಬೇಕೆಂದು ಕೋರುತ್ತೇನೆ.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;&lt;b&gt;&lt;u&gt;ಅನುಬಂಧ:&lt;/u&gt;&lt;/b&gt;&lt;/div&gt;&lt;div style="text-align: justify;"&gt;ಇನ್ನು ಕೊನೆಯದಾಗಿ, ಲೇಖನದಲ್ಲಿ ಪ್ರಾಸ್ತಾವಿಕವಾಗಿ ಮಾಧ್ವಪ್ರಮೇಯಗಳ ಬಗ್ಗೆ ವಿವರಿಸುವಲ್ಲಿ ಈ ಕೆಳಕಂಡ ಶ್ಲೋಕವನ್ನು ಉದಹರಿಸಲಾಗಿದೆ.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಶ್ರೀಮನ್ಮಧ್ವಮತೇ ಹರಿಃ ಪರತರಃ ಸತ್ಯಂ ಜಗತ್ತತ್ತ್ವತೋ&lt;/div&gt;&lt;div style="text-align: justify;"&gt;ಭೇದೋ ಜೀವಗಣಾಃ ಹರೇರನುಚರಾಃ ನೀಚೋಚ್ಛಭಾವಂ ಗತಾಃ|&lt;/div&gt;&lt;div style="text-align: justify;"&gt;ಮುಕ್ತಿರ್ನೈಜಸುಖಾನುಭೂತಿರಮಲಾ ಭಕ್ತಿಶ್ಚ ತತ್ಸಾಧನಂ&lt;/div&gt;&lt;div style="text-align: justify;"&gt;ಹ್ಯಕ್ಷಾದಿ ತ್ರಿತಯಂ ಪ್ರಮಾಣಮಖಿಲಾಮ್ನಾಯೈಕವೇದ್ಯೋ ಹರಿಃ||&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಇದಕ್ಕೆ ತುಸು ವಿವರಣೆ ನೀಡಬೇಕೆನ್ನಿಸಿತು.  ವಿವರಣೆ ಇಲ್ಲಿದೆ:&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಮಾಧ್ವತತ್ವದ ಒಂಬತ್ತೂ ಪ್ರಮೇಯಗಳನ್ನು ಸಾರಭೂತವಾಗಿ ಮಂಡಿಸುವ ಈ ಶ್ಲೋಕದ ಕರ್ತೃ ಹರಿದಾಸಸಾಹಿತ್ಯದ ಹರಿಕಾರರೂ, ಕವಿಗಳೂ ಸ್ವತಃ ಪ್ರಕಾಂಡ ಪಂಡಿತರೂ ಆದ ಶ್ರೀ ವ್ಯಾಸರಾಜರು. ಈ ಶ್ಲೋಕದ ಅರ್ಥ/ಅನ್ವಯ ಹೀಗಿದೆ:&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಶ್ರೀಮನ್ ಮಧ್ವಮತೇ;&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;&lt;ul&gt;&lt;li&gt;ಹರಿಃ ಪರತರಃ&lt;/li&gt;&lt;li&gt;ಸತ್ಯಂ ಜಗತ್&lt;/li&gt;&lt;li&gt;ತತ್ತ್ವತೋ ಭೇದಃ&lt;/li&gt;&lt;li&gt;ಜೀವಗಣಾಃ ಹರೇರನುಚರಾಃ&lt;/li&gt;&lt;li&gt;ನೀಚೋಚ್ಛ ಭಾವಂ ಗತಾಃ&lt;/li&gt;&lt;li&gt;ಮುಕ್ತಿಃ ನೈಜ ಸುಖಾನುಭೂತಿಃ, ಅಮಲಾ&lt;/li&gt;&lt;li&gt;ಭಕ್ತಿಶ್ಚ ತತ್ಸಾಧನಂ&lt;/li&gt;&lt;li&gt;ಅಕ್ಷಾದಿ ತ್ರಿತಯಂ ಹಿ ಪ್ರಮಾಣಂ&lt;/li&gt;&lt;li&gt;ಅಖಿಲಾಮ್ನಾಯೈಕ ವೇದ್ಯೋ ಹರಿಃ&lt;/li&gt;&lt;/ul&gt;&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಇದರ ಆಧಾರದಮೇಲೆ ಮಧ್ವಮತವನ್ನು ಸಂಗ್ರಹಿಸಿ ಹೇಳಬಹುದಾದರೆ, &lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;&lt;ul&gt;&lt;li&gt;ಹರಿಯೇ ಪರದೈವ; &lt;/li&gt;&lt;li&gt;ಜಗತ್ತು ಸತ್ಯ; &lt;/li&gt;&lt;li&gt;ಭೇದವು ಬ್ರಹ್ಮ-ಜಗತ್ತುಗಳ ಸ್ವಭಾವ (ತತ್ವ)ದಲ್ಲೇ ಇದೆ.  ಆಚಾರ್ಯರು ಪಂಚಭೇದಗಳನ್ನು ನಿರೂಪಿಸುತ್ತಾರೆ ಬ್ರಹ್ಮ-ಜೀವ, ಬ್ರಹ್ಮ-ಜಡ, ಜೀವ-ಜೀವ, ಜೀವ-ಜಡ ಮತ್ತು ಜಡ-ಜಡ; &lt;/li&gt;&lt;li&gt;ಸಕಲಜೀವರೂ ಹರಿಯ ಅನುಚರರು (ಇಲ್ಲಿ ಅನುಚರ ಅನ್ನುವುದನ್ನು ಅದರ ನಿಜ ಅರ್ಥದಲ್ಲಿ ಬಳಸಲಾಗಿದೆ, ಹರಿಯ ಅನುವರ್ತಿ, ವಶವರ್ತಿ, ಅಧೀನ ಎಂಬ ಅರ್ಥದಲ್ಲಿ, ಜೊತೆಗಾರರು ಎಂಬರ್ಥದಲ್ಲಲ್ಲ); &lt;/li&gt;&lt;li&gt;ಮೇಲೆ ಹೇಳಿದ ಬ್ರಹ್ಮ-ಜೀವ, ಬ್ರಹ್ಮ-ಜಡ, ಜೀವ-ಜೀವ, ಜೀವ-ಜಡ ಮತ್ತು ಜಡ-ಜಡಗಳಲ್ಲಿ ಕೇವಲ ಭೇದವಷ್ಟೇ ಅಲ್ಲ ತಾರತಮ್ಯ ಕೂಡ ಇದೆ; ಒಂದು ಮತ್ತೊಂದಕ್ಕೆ ಸಮನಲ್ಲ (ಅಸಮಭವ ಕಾಗಿನೆಲೆಯಾದಿಕೇಶವರಾಯ - ಕನಕದಾಸರು); &lt;/li&gt;&lt;li&gt;ಕುಂದಿಲ್ಲದ (flawless) ನೈಜ ಸುಖಾನುಭೂತಿಯೇ ಮುಕ್ತಿ (ಇಲ್ಲಿ ನೈಜ ಎನ್ನುವುದನ್ನು ಜೀವದ ಸ್ವಭಾವಕ್ಕೆ ನಿಜವಾದ (ತಕ್ಕುದಾದ) ಎಂದು ಅರ್ಥೈಸಲಾಗುತ್ತದೆ.  ಅಂದರೆ ಮುಕ್ತಿ ಸಹ ಎಲ್ಲ ಜೀವರಿಗೂ ಒಂದೇ ಅಲ್ಲ, ಬೇರ‍ೆಬೇರೆ - ಅದರ ನೆಲೆ ಬೇರೆ, ಆಳ-ಅಗಲಗಳು ಬೇರೆ, ತೀವ್ರತೆ ಬೇರೆ ಇತ್ಯಾದಿ)  ಆದ್ದರಿಂದ ಮೇಲೆ ಹೇಳಿದ ಭೇದವೂ ತಾರತಮ್ಯವೂ ಮುಕ್ತಿಯಲ್ಲೂ ಇರುತ್ತದೆ.  ಜೀವರು ಮಾತ್ರ ಮುಕ್ತಿಯೋಗ್ಯರು, ಜಡವಲ್ಲ.  ಮತ್ತೆ ಜೀವರಲ್ಲಿ ಅವರವರ ಸ್ವಾಭಾವಿಕ ಭೇದಕ್ಕನುಗುಣವಾಗಿ (ತತ್ತ್ವತೋ ಭೇದಃ) ಅವರವರ ಮುಕ್ತಿಯೋಗ್ಯತೆಯೂ ನಿರ್ಧರಿತವಾಗುತ್ತದೆ.  ಮತ್ತೆ ಇದರಲ್ಲಿ ಸತ್ವ, ರಜಸ್ ತಮೋಗುಣಗಳ ವರ್ಗೀಕರಣ ಬರುತ್ತದೆ, ಮತ್ತು ಅದಕ್ಕನುಗುಣವಾಗಿ ಜೀವವೊಂದು ತಮೋಯೋಗ್ಯವೋ, ನಿತ್ಯಸಂಸಾರಿಯೋ ಅಥವಾ ಮುಕ್ತಿಯೋಗ್ಯವೋ ಇರಬಹುದು ("ಸಾತ್ವರಿಗೆ ಸುಖ;  ಸಂಸಾರ ಮಿಶ್ರರಿಗೆ; ಅಧಮ ಜನರಿಗಪಾರ ದುಃಖಗಳೀವ" - ಹರಿಕಥಾಮೃತಸಾರ, ಜಗನ್ನಾಥದಾಸರು);&lt;/li&gt;&lt;li&gt;ಹೀಗೆ ಮುಕ್ತಿಯೋಗ್ಯವಾದ ಜೀವಿಗೆ ಮುಕ್ತಿ ತಾನೇತಾನಾಗಿ ದೊರೆಯುವುದಿಲ್ಲ.  ಅದಕ್ಕೆ ಹರಿಕೃಪೆ ಬೇಕು.  ಅದಕ್ಕಿರುವ ಮಾರ್ಗವೆಂದರೆ, ಭಕ್ತಿ (ಹರಿಯ ಗುಣಗಳ ಜ್ಞಾನದಿಂದ ಭಕ್ತಿಯ ಹುಟ್ಟು - ಜ್ಞಾನಚಂದ್ರಿಕೆ ಬೆಳಗೆ ಭಕ್ತಿವಾರಿಧಿಯುಕ್ಕೆ ಮನಚಕೋರವು ವಿಷ್ಣುಪಥದಿ ನಲಿಯೆ; ದೀನಜನಭಯವಡಗೆ ತಾಪತ್ರಯಗಳೋಡೆ ಮಧ್ವೇಂದು ಶ್ರೀಕೃಷ್ಣ ನೋಡಿ ತಾ ನಲಿಯೆ - ವ್ಯಾಸರಾಜರು)&lt;/li&gt;&lt;li&gt;ಇದಕ್ಕೆ ಪ್ರಮಾಣವೇನು?  ಅಕ್ಷಾದಿ ತ್ರಿತಯಂ ಹಿ.  ಅಂದರೆ ಪ್ರತ್ಯಕ್ಷ, ಅನುಮಾನ ಮತ್ತು ಆಗಮಗಳೆಂಬ ಈ ಮೂರೇ ಪ್ರಮಾಣ.  ಇಲ್ಲೂ ಆಗಮೈಕಪ್ರಮಾಣವೆನ್ನುವ ಬದಲು ಪ್ರತ್ಯಕ್ಷ ಮತ್ತು ಆಗಮಗಳಿಗೆ ಸಮಾನ ಪ್ರಾಮುಖ್ಯ ಕಲ್ಪಿಸಿದ್ದಾರೆ ಆಚಾರ್ಯರು.  ಪ್ರತ್ಯಕ್ಷ ಮತ್ತು ಆಗಮಪ್ರಮಾಣಗಳಲ್ಲಿ ವಿರೋಧವಿರದು ಎಂದು ಅಭಿಪ್ರಾಯ.  ಮತ್ತೂ ವಿರೋಧ ಕಂಡುಬಂದರೆ ಲೌಕಿಕ ವಿಷಯಗಳಲ್ಲಿ ಪ್ರತ್ಯಕ್ಷವೂ ಅಲೌಕಿಕ ವಿಷಯಗಳಲ್ಲಿ ಆಗಮವೂ ಪ್ರಾಮುಖ್ಯವನ್ನು ಪಡೆಯುವುದು (ಇದು ನನ್ನ ಊಹೆ, ತಿಳಿದವರು ತಿದ್ದಬೇಕು).  ಹಾಗೆ ಯಾವುದೇ ಪ್ರತ್ಯಕ್ಷವಿಷಯವನ್ನೋ ಆಗಮವಾಕ್ಯವನ್ನೋ ಪ್ರಮಾಣವೆಂದು ಒಪ್ಪಿಕೊಳ್ಳುವ ಮೊದಲು ಆ "ಪ್ರಮಾಣ" ಶುದ್ಧವಿರಬೇಕು (ಬೇರೆಬೇರ‍ೆ ಪ್ರತ್ಯಕ್ಷ ಪ್ರಮಾಣಗಳಲ್ಲಿ ವಿರೋಧಾಭಾಸವಿರಬಾರದು; ಹಾಗೇ ಆಗಮವಾಕ್ಯಗಳ "ಪ್ರಮಾಣ"ಗಳಲ್ಲಿ ವಿರೋಧಾಭಾಸವಿರಬಾರದು.  ಅಪೌರುಷೇಯವಾದ ವೇದವಾಕ್ಯಗಳಲ್ಲಿ ವಿರೋಧವಿರಲು ಸಾಧ್ಯವಿಲ್ಲ, ಆದರೆ ಮೇಲ್ನೋಟಕ್ಕೆ ಕಾಣಬರುವ ವಿರೋಧಾಭಾಸಗಳನ್ನು ಅನುಮಾನ ಮತ್ತು ಬೇರೆ ಪ್ರಮಾಣಗಳ ಮೂಲಕ ಸಮನ್ವಯಿಸಿಕೊಳ್ಳಬೇಕು, ಸಮನ್ವಯವೊದಗುವಂತೆ ಅರ್ಥೈಸಬೇಕು). &lt;/li&gt;&lt;li&gt;ಹರಿಯೇ ಸಕಲ ವೇದಪ್ರತಿಪಾದ್ಯನಾದ, ಸತ್ಯಸ್ವರೂಪನಾದ ಬ್ರಹ್ಮ.&lt;/li&gt;&lt;/ul&gt;&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-6626408901891400540?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/6626408901891400540/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=6626408901891400540&amp;isPopup=true' title='20 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/6626408901891400540'/><link rel='self' type='application/atom+xml' href='http://www.blogger.com/feeds/2037979210344114254/posts/default/6626408901891400540'/><link rel='alternate' type='text/html' href='http://nannabaraha.blogspot.com/2011/09/blog-post_09.html' title='ದ್ವೈತ - ಅದ್ವೈತ: ಒಂದು ಚಿಂತನೆ'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>20</thr:total></entry><entry><id>tag:blogger.com,1999:blog-2037979210344114254.post-5878068624124343891</id><published>2011-09-06T12:32:00.005+05:30</published><updated>2011-11-23T21:58:51.493+05:30</updated><category scheme='http://www.blogger.com/atom/ns#' term='೯೯. ಇತರ ಬ್ಲಾಗ್ ಬರಹ ಸೇರ್ಪಡೆಗಳು'/><title type='text'>ಗಣೇಶ ೨೦೧೧</title><content type='html'>ಪ್ರತಿ ವರ್ಷದಂತೆಯೇ ಈ ವರ್ಷವೂ ಗಣೇಶನ ಹಬ್ಬಕ್ಕಾಗಿ ಗಣೇಶನ ಮೂರ್ತಿಯನ್ನು ಮನೆಯಲ್ಲೇ ತಯಾರಿಸಿದ್ದೆ.  ಅದರ ಕೆಲವು ಚಿತ್ರಗಳು ಇಲ್ಲಿವೆ.  ಈ ವರ್ಷ ಇಡೀ ಚಟುವಟಿಕೆಯ ವಿಡಿಯೋ ಕೂಡ ಮಾಡಿರುವೆ, ಅದನ್ನು ಸಧ್ಯದಲ್ಲೇ ಪೋಸ್ಟ್ ಮಾಡುತ್ತೇನೆ.&lt;br /&gt;&lt;br /&gt;ಫೋಟೋಗಳಿಗಾಗಿ &lt;a href="https://picasaweb.google.com/115932169871837685701/Ganesha2011?authkey=Gv1sRgCO7s3I2Eu6-Y6gE"&gt;ಇಲ್ಲಿ&lt;/a&gt; ಕ್ಲಿಕ್ಕಿಸಿ&lt;br /&gt;&lt;br /&gt;ಎಂದಿನಂತೆ ನಿಮ್ಮ ಅನಿಸಿಕೆಗಳಿಗೆ ಸ್ವಾಗತ.&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-5878068624124343891?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/5878068624124343891/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=5878068624124343891&amp;isPopup=true' title='6 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/5878068624124343891'/><link rel='self' type='application/atom+xml' href='http://www.blogger.com/feeds/2037979210344114254/posts/default/5878068624124343891'/><link rel='alternate' type='text/html' href='http://nannabaraha.blogspot.com/2011/09/blog-post.html' title='ಗಣೇಶ ೨೦೧೧'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>6</thr:total></entry><entry><id>tag:blogger.com,1999:blog-2037979210344114254.post-7546084429701145997</id><published>2011-08-14T23:54:00.008+05:30</published><updated>2011-08-15T00:11:50.732+05:30</updated><category scheme='http://www.blogger.com/atom/ns#' term='೦೩. ಅನುವಾದಿತ'/><title type='text'>ವಂದೇ ಮಾತರಂ (ತಾಯೇ ಬಾಗುವೆ)</title><content type='html'>&lt;a href="http://2.bp.blogspot.com/-Rfb0l7Qjfkw/TkgWbzSkGZI/AAAAAAAAAzc/bSyn1-a00c8/s1600/india%2Bflag.jpg" onblur="try {parent.deselectBloggerImageGracefully();} catch(e) {}"&gt;&lt;img style="display:block; margin:0px auto 10px; text-align:center;cursor:pointer; cursor:hand;width: 400px; height: 300px;" src="http://2.bp.blogspot.com/-Rfb0l7Qjfkw/TkgWbzSkGZI/AAAAAAAAAzc/bSyn1-a00c8/s400/india%2Bflag.jpg" border="0" alt="" id="BLOGGER_PHOTO_ID_5640783200161896850" /&gt;&lt;/a&gt;&lt;br /&gt;&lt;div&gt;"ವಂದೇ ಮಾತರಂ" ಕೇಳಿ ಭಾವುಕನಾಗದ ಭಾರತೀಯನಾರು?  ಬಂಕಿಮಚಂದ್ರರ ಕ್ರಾಂತಿಕಾರೀ ಬಂಗಾಳೀ ಕಾದಂಬರಿ ಆನಂದಮಠದಲ್ಲಿ ಬರುವ ಈ ಸುಂದರ ಸಂಸ್ಕೃತ ಗೀತೆ ತನ್ನ ನವಿರಾದ ಕಾವ್ಯಗುಣದಿಂದ ಮನಮುಟ್ಟುತ್ತದೆ.  ರಾಷ್ಟ್ರಗೀತೆಯ ಸ್ಥಾನ ಸಿಗದಿದ್ದರೇನಂತೆ, ಉಜ್ವಲ ರಾಷ್ಟ್ರಪ್ರೇಮವನ್ನು ಬಿಂಬಿಸುವ ಈ ಗೀತೆ ಅದರ ನಿಜ ಅರ್ಥದಲ್ಲಿ ರಾಷ್ಟ್ರಗೀತೆಯೇ ಆಗಿದೆ.  ಚಾಲ್ತಿಯಲ್ಲಿರುವ ಭಾಗವನ್ನಷ್ಟೇ ಈ ಕೆಳಗೆ  ಕೊಟ್ಟಿದ್ದೇನೆ:&lt;br /&gt;&lt;br /&gt;ವಂದೇ ಮಾತರಂ&lt;br /&gt;ಸುಜಲಾಂ ಸುಫಲಾಂ ಮಲಯಜ ಶೀತಲಾಂ&lt;br /&gt;ಸಸ್ಯಶಾಮಲಾಂ ಮಾತರಂ&lt;br /&gt;ವಂದೇ ಮಾತರಂ...&lt;br /&gt;&lt;br /&gt;ಶುಭ್ರಜ್ಯೋತ್ಸ್ನಾಪುಲಕಿತ ಯಾಮಿನೀಂ&lt;br /&gt;ಫುಲ್ಲಕುಸುಮಿತಧ್ರುಮದಳ ಶೋಭಿನೀಂ&lt;br /&gt;ಸುಹಾಸಿನೀಂ ಸುಮಧುರ ಭಾಷಿಣೀಂ&lt;br /&gt;ಸುಖದಾಂ ವರದಾಂ ಮಾತರಂ&lt;br /&gt;ವಂದೇ ಮಾತರಂ...&lt;br /&gt;====================&lt;br /&gt;&lt;br /&gt;&lt;a href="http://3.bp.blogspot.com/-XrSwaGhI4f4/TkgU0QuP62I/AAAAAAAAAzU/e90sAk-kFd0/s1600/kannada%2Bflag.jpg" onblur="try {parent.deselectBloggerImageGracefully();} catch(e) {}"&gt;&lt;img style="display:block; margin:0px auto 10px; text-align:center;cursor:pointer; cursor:hand;width: 400px; height: 267px;" src="http://3.bp.blogspot.com/-XrSwaGhI4f4/TkgU0QuP62I/AAAAAAAAAzU/e90sAk-kFd0/s400/kannada%2Bflag.jpg" border="0" alt="" id="BLOGGER_PHOTO_ID_5640781421356247906" /&gt;&lt;/a&gt;&lt;br /&gt;ಇದರ ಕನ್ನಡ ಅವತರಣಿಕೆ ಇಲ್ಲಿದೆ.  ಮೂಲದ ಸೊಬಗನ್ನು, ಅಷ್ಟೇ ತುಸುಮಾತುಗಳಲ್ಲಿ ಕನ್ನಡದಲ್ಲಿ ಹಿಡಿದಿಡುವುದು ಕಷ್ಟವೇ ಸರಿ.  ಆದರೂ ಮೂಲದ ಭಾವವನ್ನಾದರೂ ಹಿಡಿದಿಟ್ಟಿದ್ದೇನೆನಿಸುತ್ತದೆ.  ಭಾವಾನುವಾದದ ಅನುಕೂಲಕ್ಕಾಗಿ, ಮೂಲದ ದ್ವಿತೀಯಾ ವಿಭಕ್ತಿಯನ್ನು ("ಅನ್ನು") ಕನ್ನಡದಲ್ಲಿ ಸಂಬೋಧನೆಯಾಗಿ ಬದಲಿಸಿಕೊಂಡಿದ್ದೇನೆ.  ಗೆಳೆಯ ಭರತಕುಮಾರರು ಗೂಗಲ್ ಬಜ಼್ ನಲ್ಲಿ  "ನಲ್ನೀರು ನಲ್ವಣ್ಣು ತಾಯಿಯೇ ಬಾಗುವೇ ತಾಯಿಯೇ" ಎಂದು ಹೇಳಿ ಸುಮ್ಮನಾಗಿದ್ದರು.  ಇಲ್ಲಿನ ಅನುವಾದಕ್ಕೆ ಈ ಒಂಟಿ ಸಾಲೇ ಸ್ಫೂರ್ತಿ.  ಇದಕ್ಕಾಗಿ ಭರತಕುಮಾರರಿಗೆ ನನ್ನಿ.&lt;br /&gt;&lt;br /&gt;ತಾಯೇ ಬಾಗುವೆ&lt;br /&gt;ಸವಿನೀರ್, ತನಿವಣ್, ತಂಬೆಲರೀವಳೇ&lt;br /&gt;ಸಿರಿಹಸಿರವಳೇ, ಬಾಗುವೆ&lt;br /&gt;ತಾಯೇ ಬಾಗುವೆ...&lt;br /&gt;&lt;br /&gt;ಮುಂಜಾವದ ಬಿಳಿ ಸೋನೆಯ ಚುಮಚುಮವೇ&lt;br /&gt;ಅರಳಿ ನಗುವ ಹೂ ಮರಗಳ ಗಮಗಮವೇ&lt;br /&gt;ಮೆಲುನಗೆಯೇ, ನಲ್ನುಡಿಗಾತಿಯೇ&lt;br /&gt;ಸೊಗವೀವಳೆ ವರವೀವಳೇ&lt;br /&gt;ತಾಯೇ ಬಾಗುವೆ...&lt;br /&gt;&lt;br /&gt;ಇದರ ಧ್ವನಿಮುದ್ರಿಕೆಯನ್ನು ಸ್ವಾತಂತ್ರ್ಯದಿನಾಚರಣೆಯ ಈ ದಿನವೇ ಪ್ರಕಟಿಸಬೇಕೆಂದಿದ್ದೆ, ಸಾಧ್ಯವಾಗಲಿಲ್ಲ.  ಇಷ್ಟರಲ್ಲೇ ಪ್ರಕಟಿಸುತ್ತೇನೆ.&lt;br /&gt;&lt;br /&gt;ನಿಮಗೆಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-7546084429701145997?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/7546084429701145997/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=7546084429701145997&amp;isPopup=true' title='12 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/7546084429701145997'/><link rel='self' type='application/atom+xml' href='http://www.blogger.com/feeds/2037979210344114254/posts/default/7546084429701145997'/><link rel='alternate' type='text/html' href='http://nannabaraha.blogspot.com/2011/08/blog-post.html' title='ವಂದೇ ಮಾತರಂ (ತಾಯೇ ಬಾಗುವೆ)'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><media:thumbnail xmlns:media='http://search.yahoo.com/mrss/' url='http://2.bp.blogspot.com/-Rfb0l7Qjfkw/TkgWbzSkGZI/AAAAAAAAAzc/bSyn1-a00c8/s72-c/india%2Bflag.jpg' height='72' width='72'/><thr:total>12</thr:total></entry><entry><id>tag:blogger.com,1999:blog-2037979210344114254.post-7076773630512327606</id><published>2011-06-27T16:03:00.005+05:30</published><updated>2011-06-27T18:50:11.969+05:30</updated><category scheme='http://www.blogger.com/atom/ns#' term='೦೩. ಅನುವಾದಿತ'/><title type='text'>ಮರಳು ಜೇನಳೂ ಮತ್ತು ಪಾದ್ರಿಯೂ (ಮತ್ತೊಂದು ಅನುವಾದ)</title><content type='html'>&lt;div style="text-align: justify;"&gt;&lt;span class="Apple-style-span"&gt;ಬಹಳ ಹಿಂದೆ ನಾನು ಮಾಡಿದ &lt;/span&gt;&lt;span class="Apple-style-span" style="font-family: Times, serif; line-height: 24px; "&gt;&lt;em&gt;&lt;strong&gt;W.B.Yeats&lt;/strong&gt;&lt;/em&gt;&lt;/span&gt;&lt;span class="Apple-style-span"&gt; ಕವನವೊಂದರ ಅನುವಾದವನ್ನು ತುಸು ಬದಲಿಸಿ ಮರುಬರೆದಿದ್ದೇನೆ.  ಮೊದಲ ಅನುವಾದವನ್ನು ನೋಡಲು &lt;a href="http://nannabaraha.blogspot.com/2007/03/crazy-jane-talks-with-bishop.html"&gt;ಇಲ್ಲಿ&lt;/a&gt; ಕ್ಲಿಕ್ಕಿಸಿ (right click ಮಾಡಿ ಬೇರೊಂದು ಕಿಟಕಿಯಲ್ಲಿ ತೆರೆದಿಟ್ಟುಕೊಂಡರೆ ಅನುಕೂಲ)&lt;/span&gt;&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;&lt;i&gt;ದಾರಿಯಲ್ಲಿ ಆ ಪಾದ್ರಿ ಸಿಕ್ಕಿದ್ದ&lt;/i&gt;&lt;/div&gt;&lt;div style="text-align: justify;"&gt;&lt;i&gt;ಅದೂ ಇದೂ ಮಾತಾಡಿದೆವು.&lt;/i&gt;&lt;/div&gt;&lt;div style="text-align: justify;"&gt;&lt;i&gt;"ಎಂಥ ಮೊಲೆ, ಹೇಗೆ ಬತ್ತಿಹೋಗಿವೆ ನೋಡು,&lt;/i&gt;&lt;/div&gt;&lt;div style="text-align: justify;"&gt;&lt;i&gt;ನರಗಳಿನ್ನೇನು ಸೊರಗುವುವು;&lt;/i&gt;&lt;/div&gt;&lt;div style="text-align: justify;"&gt;&lt;i&gt;ನಡೆಯಿನ್ನಾದರು ಸ್ವರ್ಗದಲಿ ಬದುಕು&lt;/i&gt;&lt;/div&gt;&lt;div style="text-align: justify;"&gt;&lt;i&gt;ಸಾಕೀ ನರಕದ ಕೊಳೆ ಬದುಕು"&lt;/i&gt;&lt;/div&gt;&lt;div style="text-align: justify;"&gt;&lt;i&gt;&lt;br /&gt;&lt;/i&gt;&lt;/div&gt;&lt;div style="text-align: justify;"&gt;&lt;i&gt;"ಕೊಳಕಿಗು ಥಳುಕಿಗು ಬಿಡದಿಹ ನಂಟು&lt;/i&gt;&lt;/div&gt;&lt;div style="text-align: justify;"&gt;&lt;i&gt;ಅಗಲಿ ಇರವು ಅವು" - ಚೀರಿದೆ ನಾನು,&lt;/i&gt;&lt;/div&gt;&lt;div style="text-align: justify;"&gt;&lt;i&gt;"ಸಖರು ಹೋದರೂ ಗೋರಿಯೂ ತಿಳಿದಿದೆ&lt;/i&gt;&lt;/div&gt;&lt;div style="text-align: justify;"&gt;&lt;i&gt;ಸುಖದ ಶಯ್ಯೆಯೂ ನಿಜವಿದನು.&lt;/i&gt;&lt;/div&gt;&lt;div style="text-align: justify;"&gt;&lt;i&gt;ಈ ಪತಿತ ದೇಹದಲೆ, ವಿನಯದಿ ಹೆಮ್ಮೆಯ&lt;/i&gt;&lt;/div&gt;&lt;div style="text-align: justify;"&gt;&lt;i&gt;ಮನದಿ ಅರಿತೆನೀ ಸತ್ಯವನು"&lt;/i&gt;&lt;/div&gt;&lt;div style="text-align: justify;"&gt;&lt;i&gt;&lt;br /&gt;&lt;/i&gt;&lt;/div&gt;&lt;div style="text-align: justify;"&gt;&lt;i&gt;"ಹೆಣ್ಣು ಉಬ್ಬುವಳು ಸೆಡೆತು ಬೀಗುವಳು&lt;/i&gt;&lt;/div&gt;&lt;div style="text-align: justify;"&gt;&lt;i&gt;ಪ್ರೇಮದುನ್ನತಾವಸ್ಥೆಯಲಿ;&lt;/i&gt;&lt;/div&gt;&lt;div style="text-align: justify;"&gt;&lt;i&gt;ಆದರಾ ಪ್ರೇಮ ಸೌಧದ ನೆಲೆಯೋ&lt;/i&gt;&lt;/div&gt;&lt;div style="text-align: justify;"&gt;&lt;i&gt;ಹೊಲಸೇ ತುಂಬಿದ ಠಾವಿನಲಿ!&lt;/i&gt;&lt;/div&gt;&lt;div style="text-align: justify;"&gt;&lt;i&gt;ಹರಿಯದ ಬಿರಿಯದ ಒಂದಿದ್ದರೆ ಅದ&lt;/i&gt;&lt;/div&gt;&lt;div style="text-align: justify;"&gt;&lt;i&gt;ಹೊಲೆವುದು ತಾನೇ ಎಲ್ಲಿ?"&lt;/i&gt;&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;&lt;b&gt;&lt;u&gt;ಟಿಪ್ಪಣಿ: &lt;/u&gt;&lt;/b&gt;&lt;/div&gt;&lt;div style="text-align: justify;"&gt;ಕೊನೆಯ ಎರಡು ಸಾಲುಗಳಿಗೆ ಮೂಲದಲ್ಲಿರುವ ನುಡಿ:&lt;/div&gt;&lt;div style="text-align: justify;"&gt;For nothing can be sole or whole&lt;/div&gt;&lt;div style="text-align: justify;"&gt;That has not been rent?&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಸೋಲ್ (sole) ಮತ್ತು ಹೋಲ್ (whole) ಎನ್ನುವ ಪದಗಳನ್ನು ಉಚ್ಚರಿಸಿದಾಗ ಅವು soul ಮತ್ತು hole ಎನ್ನುವ ಧ್ವನಿಗಳನ್ನೂ ಹೊರಡಿಸುವ ಮೂಲಕ ಮುಂದಿನ ಸಾಲಿನಲ್ಲಿ ಬರುವ rent ಅನ್ನುವ ಪದಕ್ಕೆ ವಿವಿಧಾರ್ಥಗಳನ್ನು ಕೊಡುತ್ತದೆ; ಅದೇ ಇಲ್ಲಿನ ಸ್ವಾರಸ್ಯ - rent ಅನ್ನುವ ಪದಕ್ಕೇ ಬಾಡಿಗೆಗೆ ಕೊಡು/ಹರಿದುಹಾಕು (rend p.p. rent) ಅನ್ನುವ ಅರ್ಥಗಳಿರುವುದನ್ನೂ ಮತ್ತು ಈ ಕವನದಲ್ಲಿ ಬರುವ ಜೇನ್ ಓರ್ವ ವೇಶ್ಯೆಯೆನ್ನುವುದನ್ನೂ ಗಮನಿಸಿದರೆ rent ಅನ್ನುವುದರ ಸ್ವಾರಸ್ಯ ಹೊಳೆಯುತ್ತದೆ.  ಹರಿಯದೇ ಹೊಲೆಯುವುದಕ್ಕಾಗುವುದೇ ಎಂಬ ಅರ್ಥದ ಜೊತೆ, ಇಲ್ಲಿ "ಹರಿಯದೇ ತೂತಾಗುವುದೇ" ಅನ್ನುವ ವ್ಯಂಗ್ಯಾರ್ಥವೂ ಮತ್ತು "ಹರಿದಿದ್ದಕ್ಕೇ ತಾನೆ ಒಂದಾಗುವ ಅಗತ್ಯ?" ಎಂಬ ಅರ್ಥವೂ ಕೂಡಿ ಬರುತ್ತದೆ. ಜೊತೆಗೆ, ತನ್ನ ಈ ಹರಿದ (ಮಾರಿಕೊಂಡ) ಜೀವನದ ಪಾಪಕೂಪವೇ ನನ್ನ ಆತ್ಮೋನ್ನತಿಯ ದಾರಿ ಎಂಬ ಧ್ವನಿಯೂ ಇದೆ (soul ಅನ್ನುವ ಉಚ್ಚಾರಣೆಯ ಭ್ರಮೆ ಇದನ್ನೇ ಧ್ವನಿಸುತ್ತದೆ).  ಇದಕ್ಕೆ ಇಂಬುಕೊಡುವಂತೆ ಈ ಮೊದಲ ನಾಲ್ಕು ಸಾಲುಗಳನ್ನು ಗಮನಿಸಬಹುದು:&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಹೆಣ್ಣು ಉಬ್ಬುವಳು ಸೆಡೆತು ಬೀಗುವಳು&lt;/div&gt;&lt;div style="text-align: justify;"&gt;ಪ್ರೇಮದುನ್ನತಾವಸ್ಥೆಯಲಿ;&lt;/div&gt;&lt;div style="text-align: justify;"&gt;ಆದರಾ ಪ್ರೇಮ ಸೌಧದ ನೆಲೆಯೋ&lt;/div&gt;&lt;div style="text-align: justify;"&gt;ಹೊಲಸೇ ತುಂಬಿದ ಠಾವಿನಲಿ!&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;("A woman can be proud and stiff&lt;/div&gt;&lt;div style="text-align: justify;"&gt;When on love intent;&lt;/div&gt;&lt;div style="text-align: justify;"&gt;But love has pitched his mansion in&lt;/div&gt;&lt;div style="text-align: justify;"&gt;The place of excrament;)&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಪ್ರೇಮದ ಉತ್ಕಟಸ್ಥಿತಿಯೇ ಆತ್ಮದ ಉನ್ನತಿಯೆನ್ನುತ್ತಾರೆ, ಆದರೆ ಆ "ಪ್ರೇಮ" ಅರಳುವುದೇ ಹೊಲಸಿನ ಕೂಪದಲ್ಲಿ ಅನ್ನುತ್ತಾಳೆ ಜೇನ್.  ಶಿಷ್ಟ/ಪವಿತ್ರ ಜೀವನವನ್ನು ಪ್ರತಿನಿಧಿಸುವ ಪಾದ್ರಿಯ ಉಪದೇಶದ ಭಾಷೆಗೆ ಸವಾಲೆಸೆವಂತೆ ಮೈಮಾರಿ ಬದುಕುವ ಹೆಂಗಸಿನ ಒರಟು (rude and crude) ಭಾಷೆಯನ್ನೂ, ಆ ಭಾಷೆಯ ಒರಟುತನದಲ್ಲೇ ಅರಳುವ ತಲೆದೂಗಿಸುವ ತರ್ಕದ ಸೂಕ್ಷ್ಮತೆಯನ್ನೂ ಇಲ್ಲಿ ಗಮನಿಸಬಹುದು.  ಕೆಸರಿನ ಕಮಲದಂತೆ ಒರಟು ಮಾತಿನಲ್ಲಿ ಅರಳುವ ಈ ಸೂಕ್ಷ್ಮ, ಜೇನಳೇ ಹೇಳುವಂತೆ ಹೊಲಸಿನಲ್ಲರಳುವ ಸೊಗಸು, ಕಾಮದ ಕೆಸರಿನಲ್ಲಿ ಹುಟ್ಟಿ ಮೇಲೇರುವ ಪ್ರೇಮದ ಔನ್ನತ್ಯವನ್ನೂ ಧ್ವನಿಸುತ್ತದೆ.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಆದರೆ sole ಮತ್ತು whole ಗಳನ್ನು soul ಮತ್ತು hole ಎಂದೂ ಅರ್ಥ ಸ್ಫುರಿಸುವಂತೆ ಉಚ್ಚರಿಸುವ ಸೌಲಭ್ಯ ಕನ್ನಡದಲ್ಲಿ ಇಲ್ಲವಾದ್ದರಿಂದ ಈ ಸ್ವಾರಸ್ಯವನ್ನು ಕನ್ನಡದ ಅನುವಾದದಲ್ಲಿ ತರುವುದು ಕಷ್ಟ; ಆದ್ದರಿಂದ ಬರೀ ಅರ್ಥವನ್ನು ಮಾತ್ರ ಉಳಿಸಿಕೊಂಡಿದ್ದೇನೆ.  ಈ ದೃಷ್ಟಿಯಿಂದ ಈ ಅನುವಾದದ ಬಗೆಗೆ ನನಗೆ ಅತೃಪ್ತಿಯಿದೆ.&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-7076773630512327606?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/7076773630512327606/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=7076773630512327606&amp;isPopup=true' title='23 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/7076773630512327606'/><link rel='self' type='application/atom+xml' href='http://www.blogger.com/feeds/2037979210344114254/posts/default/7076773630512327606'/><link rel='alternate' type='text/html' href='http://nannabaraha.blogspot.com/2011/06/blog-post_27.html' title='ಮರಳು ಜೇನಳೂ ಮತ್ತು ಪಾದ್ರಿಯೂ (ಮತ್ತೊಂದು ಅನುವಾದ)'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>23</thr:total></entry><entry><id>tag:blogger.com,1999:blog-2037979210344114254.post-3583346162628525387</id><published>2011-06-14T14:12:00.001+05:30</published><updated>2011-06-14T14:14:42.357+05:30</updated><category scheme='http://www.blogger.com/atom/ns#' term='೦೨. ಕವನಗಳು'/><title type='text'>ಅದು ನೀನಲ್ಲ</title><content type='html'>ಎಂದೋ ಬಿಡಿಸಿದ ಚಿತ್ರ - &lt;br /&gt;ಹಿಂದೊಂದು ಕಾಲದಲಿ, ದೇಶದಲಿ,&lt;br /&gt;ವರ್ತಮಾನದಿ ಸುಳಿವ ಭೂತದಲ್ಲಿ.&lt;br /&gt;ಕುಡಿಹುಬ್ಬು, ಸುಳಿಗಣ್ಣು&lt;br /&gt;ಮೂಗು ಸಂಪಿಗೆಯೆಸಳು&lt;br /&gt;ನಗೆಯ ಮಲ್ಲಿಗೆಯರಳು&lt;br /&gt;ಮುದ್ದು ಸುರಿಯುವ ಗಲ್ಲ,&lt;br /&gt;ಆಗೆಲ್ಲ;&lt;br /&gt;&lt;br /&gt;ಹಾಲ್ಬಿಳುಪು, ಕಡುಗಪ್ಪು,&lt;br /&gt;ಚೆಂಗುಲಾಬಿಯ ಕೆಂಪು,&lt;br /&gt;ನರುಗಂಪು;&lt;br /&gt;ಮಳೆಸುರಿವ ಮುಗಿಲು&lt;br /&gt;ನವಿಲು&lt;br /&gt;ಗರಿ&lt;br /&gt;ಕಾಮನಬಿಲ್ಲು&lt;br /&gt;ಎಲ್ಲೆಲ್ಲು;&lt;br /&gt;ಎಲೆ ಹಸಿರು ಚೆಲ್ಲಾಡಿ,&lt;br /&gt;ಹಳದಿ ಕಿತ್ತಳೆ ಮೋಡಿ;&lt;br /&gt;ಬಣ್ಣಗಳ ರಾಡಿ,&lt;br /&gt;ನೆತ್ತರಿನ ಕಡುಗೆಂಪು-&lt;br /&gt;ಸುರಿಯುವ ಕಣ್ಣ&lt;br /&gt;ನೀರಿಗದ್ದಿದ ಕುಂಚ&lt;br /&gt;ತೊಳೆದಿಟ್ಟು,&lt;br /&gt;ಬಿಸಿಲಿಗಿಕ್ಕಿದ ಚಿತ್ರ;&lt;br /&gt;ಒಣಗಿ ರಟ್ಟು-&lt;br /&gt;ಗಟ್ಟಿದ ನೂರು ಪತ್ರ-&lt;br /&gt;ಗಳ&lt;br /&gt;ಕೆಳಗೆಲ್ಲೋ ಹೂತು ಪೆಟ್ಟಿಗೆಯ &lt;br /&gt;ಬೀಗವ ಜಡಿದು&lt;br /&gt;ಕಳೆದಿದ್ದೆನಲ್ಲ&lt;br /&gt;ಕೈ!&lt;br /&gt;&lt;br /&gt;ಆ ಮೇಲೆ &lt;br /&gt;ಸವೆದದ್ದೆಷ್ಟು ವೈಶಾಖ&lt;br /&gt;ಸುರಿದು ಸರಿದದ್ದೆಷ್ಟು ಆಷಾಢ &lt;br /&gt;ಶಿಶಿರ!&lt;br /&gt;ಕಿತ್ತೊಗೆದ ಸುಳಿಬಳ್ಳಿ ಮತ್ತೆಲ್ಲೋ ಬೇರಿಳಿಸಿ&lt;br /&gt;ಮರವನೊಂದನು ಹಬ್ಬಿ,&lt;br /&gt;ಹೂತು, ಮಿಡಿ ಕಾಯಾಗಿ&lt;br /&gt;ತೂಗು ತೊಟ್ಟಿಲು ತೂಗಿ,&lt;br /&gt;ನನಗೊಬ್ಬ ಪುಟ್ಟ, ನಿನಗೆ ಪುಟ್ಟಿ.&lt;br /&gt;&lt;br /&gt;ಮೊನ್ನೆ,&lt;br /&gt;ಅದೇನೋ, ತುಕ್ಕಿಡಿದ ತಗಡಿನ ಪೆಟ್ಟಿಯೊಳಗಿಂದ&lt;br /&gt;ದಡದಡನೆ ತಟ್ಟಿದಂತಾಗಿ,&lt;br /&gt;ಕ್ಷಣ ಎದೆ ನಡುಗಿ&lt;br /&gt;ತೆರೆದು ನೋಡಿದರೆ&lt;br /&gt;ನೀನು,&lt;br /&gt;ನಗುತ್ತಲಿದ್ದಿ!&lt;br /&gt;"ನೀ ಒಂಚೂರೂ ಬದಲಾಗಿಲ್ಲ"ವೆಂದಿ&lt;br /&gt;"ಬದಲಾಗು" ಎಂದಿ&lt;br /&gt;ಅದ ಅರಗಿಸಿಕೊಳಲು ನಾನಿಲ್ಲಿ ಹೆಣ-&lt;br /&gt;ಗುತ್ತಿರಲು&lt;br /&gt;ನೀ ಆರಾಮ&lt;br /&gt;ಮಾತಾಡುತ್ತಲೇ ಹೋದಿ - &lt;br /&gt;ಪುಟ್ಟನಿಗೆ ವಯಸೆಷ್ಟು? ಪುಟ್ಟಿಯೇನೋದುವಳು;&lt;br /&gt;ಮನೆ, ಗಂಡ, ಕಾರು, ಹೆಂಡತಿ-&lt;br /&gt;ಪಟ್ಟ&lt;br /&gt;ಆನೆ ಬಂತೊಂದಾನೆ...&lt;br /&gt;ಹೌದೇ? ಅದು ನೀನೇನೆ?&lt;br /&gt;ಆ ಕೆನ್ನೆ, ಆ ಕದಪು&lt;br /&gt;ಆ ಚೆದುರು, ನುಡಿ-ನವಿರು,&lt;br /&gt;ಬರಿಯ ಕಿರುನೋಟದೊಳೆ ಸುತ್ತೆಲ್ಲ ಎಳೆಚಿಗುರು - &lt;br /&gt;ಒಳಗೇ ಹೋಲಿಸಿಕೊಂಡೆ;&lt;br /&gt;ಇಲ್ಲ, &lt;br /&gt;ಅದು ನೀನಲ್ಲವೆಂದು ಹೊಳೆದು,&lt;br /&gt;ಎಂದೂ ಅದು ನೀನಾಗಿರಲೇ ಇಲ್ಲೆಂದು ತಲೆಗಿಳಿದು,&lt;br /&gt;ನೆಮ್ಮದಿಯ ನಿಟ್ಟುಸಿರ ಹೊರದಬ್ಬಿದೆ;&lt;br /&gt;ಮತ್ತಷ್ಟು ಖುಶಿಯಿಂದ ನಿನ್ನೊಡನೆ ಹರಟಿ&lt;br /&gt;ಲೋಕಾಭಿರಾಮದಾರಾಮ &lt;br /&gt;ಅನುಭವಿಸಿದೆ;&lt;br /&gt;ಕೊನೆಗೊಮ್ಮೆ ಸ್ಟೈಲಾಗಿ ಬೈ ಹೇಳಿ&lt;br /&gt;ಪೆಟ್ಟಿಗೆಯ ಮೇಲೆ ಮತ್ತೊಂದು&lt;br /&gt;ಹೂವಿಟ್ಟು ಹಗುರಾಗಿ&lt;br /&gt;ನಿದ್ದೆಹೋದೆ.&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-3583346162628525387?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/3583346162628525387/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=3583346162628525387&amp;isPopup=true' title='36 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/3583346162628525387'/><link rel='self' type='application/atom+xml' href='http://www.blogger.com/feeds/2037979210344114254/posts/default/3583346162628525387'/><link rel='alternate' type='text/html' href='http://nannabaraha.blogspot.com/2011/06/blog-post_14.html' title='ಅದು ನೀನಲ್ಲ'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>36</thr:total></entry><entry><id>tag:blogger.com,1999:blog-2037979210344114254.post-1978226615575854375</id><published>2011-06-02T19:03:00.009+05:30</published><updated>2011-06-04T17:36:44.985+05:30</updated><category scheme='http://www.blogger.com/atom/ns#' term='೦೮. ಭಾಷೆ'/><title type='text'>ಸಕ್ಕದಮೋ ಕನ್ನಡಮೋ ನುಡಿಯೋ...</title><content type='html'>&lt;div style="text-align: justify;"&gt;ಮೊನ್ನೆ ನಯಸೇನನ ಈ ಸಾಲುಗಳು ಕಣ್ಣಿಗೆ ಬಿತ್ತು:&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಸಕ್ಕದಮಂ ಪೇೞ್ವೊಡೆ ನೆಱೆ&lt;/div&gt;&lt;div style="text-align: justify;"&gt;ಸಕ್ಕದಮಂ ಪೇೞ್ಗೆ ಶುದ್ಧ ಕನ್ನಡದೊಳ್ ತಂ&lt;/div&gt;&lt;div style="text-align: justify;"&gt;ದಿಕ್ಕುವುದೆ ಸಕ್ಕದಂಗಳ&lt;/div&gt;&lt;div style="text-align: justify;"&gt;ತಕ್ಕುದೆ ಬೆರಸಲ್ಕೆ ಘೃತಮುಮಂ ತೈಲಮುಮಂ&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಇದನ್ನು google buzz ನಲ್ಲಿ ಹಂಚಿಕೊಂಡಾಗ ಗೆಳೆಯ &lt;a href="https://profiles.google.com/hamsanandi/about"&gt;ಹಂಸಾನಂದಿ&lt;/a&gt; ಇಂತೆಂದರು.  "True - for today we should also say the same thing about English!"&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಅಲ್ಲವೇ ಮತ್ತೆ?  ಅಟ್ಟುವುದಾದರೆ ಸಂಸ್ಕೃತವೊಂದನ್ನೇ ಏಕೆ?  ನಯಸೇನನ ಕಾಲದಲ್ಲಿ ಆಂಗ್ಲದ ಹಾವಳಿಯಿರಲಿಲ್ಲ.  ಇದ್ದಿದ್ದರೆ ಅವ ಹೀಗೆ ಹೇಳಿರಬಹುದಿತ್ತೇ?&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಆಂಗಿಲಮಂ ಪೇೞ್ವೊಡೆ ನೆಱೆ&lt;/div&gt;&lt;div style="text-align: justify;"&gt;ಆಂಗಿಲಮನೆ ಪೇೞ್ಗೆ ಬೆರೆಸಿ ಕಿಡಿಸುವುದೇಂ ತಾ&lt;/div&gt;&lt;div style="text-align: justify;"&gt;ಮಂಗಳಮೆ ಚೊಕ್ಕ ಕನ್ನಡ&lt;/div&gt;&lt;div style="text-align: justify;"&gt;ಕಾಂಗಿಲಮಂ ತುಪ್ಪದೊಳಿರದೆಣ್ಣೆಬೆರೆಪವೋಲ್&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಮೊದಲು ಹೇಳಿದ ನಯಸೇನನ ಸಾಲುಗಳೂ ಮತ್ತು ಅದರ ಅಭಿಪ್ರಾಯಭೂತವಾಗಿ ನಾನು ಬರೆದ ಮೇಲಿನ ಸಾಲುಗಳೂ, ಸವಿಗನ್ನಡದಲ್ಲಿ ಕಟಕಟೆಯೆನಿಸುವಷ್ಟು ಅಸಹಜವಾಗಿ ಸಕ್ಕದ/ಆಂಗ್ಲಗಳನ್ನು ಬಳಸುವ ಬಗೆಗೆನ್ನುವುದು ಸ್ಪಷ್ಟ.  ಆದರೆ ಸಕ್ಕದದ ಮೈಲಿಗೆಯಿಂದ ಕನ್ನಡವನ್ನೇ ಬುಡಮಟ್ಟ clean ಮಾಡಿಬಿಡಬೇಕೆನ್ನುವ ಇಂದಿನ ಅರ್ಥಹೀನ ಕೂಗಿಗೂ ಇವೇ ಸಾಲುಗಳು ಆಧಾರವಾದೀತಲ್ಲವೇ?  ಈ ದಿಕ್ಕಿನಲ್ಲಿ ಯೋಚಿಸುತ್ತಿದ್ದಾಗ ಮೂಡಿದುವು ಈ ಕೆಳಗಿನ ಕಂದಗಳೈದು.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಸಜ್ಜಿಗೆಗೆರೆಯದೆ ತುಪ್ಪಮ&lt;/div&gt;&lt;div style="text-align: justify;"&gt;ನೊಜ್ಜೆಯೊಳೇಂ ಮಜ್ಜಿಗೆಗೆರೆವರೆ ರುಚಿಯರಿಗರ್ &lt;/div&gt;&lt;div style="text-align: justify;"&gt;ಮಜ್ಜನಕೆಣ್ಣೆಯನೆರೆಯದೆ&lt;/div&gt;&lt;div style="text-align: justify;"&gt;ಉಜ್ಜುವವೋಲ್ ತಲೆಗೆ ತುಪ್ಪಮನ್ ಸಕ್ಕರೆಯನ್ ೧&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಎಣ್ಣೆಯೆ ರುಚಿಯೋಗರಕೆನೆ&lt;/div&gt;&lt;div style="text-align: justify;"&gt;ಬೆಣ್ಣೆಯದರ ಸವಿಯನೆತ್ತದೇಂ ಕಿಡಿಸುಗುಮೇ&lt;/div&gt;&lt;div style="text-align: justify;"&gt;ಎಣ್ಣೆಯಬೆಣ್ಣೆಯ ಸವಿಯರಿ&lt;/div&gt;&lt;div style="text-align: justify;"&gt;ದುಣ್ಣುವರಸಿಗನ್ ರುಚಿವೆರಸುವನಡುಗೆಯದನ್ ೨&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ನುಡಿಯೇಂ ಬರಿ ಪದಮೇ ಕ&lt;/div&gt;&lt;div style="text-align: justify;"&gt;ನ್ನಡವೊಟ್ಟಲ್ ಸಕ್ಕದಮದನಕ್ಕಜದೊಳೆ ಮುಂ&lt;/div&gt;&lt;div style="text-align: justify;"&gt;ಬಡಿದಟ್ಟಲ್ಕಾನುಡಿ ಕ&lt;/div&gt;&lt;div style="text-align: justify;"&gt;ನ್ನುಡಿಯಪ್ಪುದೆ ಮರುಳೆ ಕನ್ನಡಮದನೆ ಮರೆವಾ ೩&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಪದನರಿದುಲಿಯದೆ ಸವಿಯದೆ&lt;/div&gt;&lt;div style="text-align: justify;"&gt;ಪದವಿಡಿದಿದು ಸಕ್ಕದಮಿದು ಮೇಣ್ ಕನ್ನಡಮೆಂ&lt;/div&gt;&lt;div style="text-align: justify;"&gt;ದದರುೞಿವಿಡಿಯಲ್ ಕಬ್ಬದ&lt;/div&gt;&lt;div style="text-align: justify;"&gt;ಪದಗೆಟ್ಟೞಿಯದೆ ಪುೞಿವಿಡಿದೞಿಯುವಪಾಲೊಲ್ ೪&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ನುಡಿಯೊಳನುಡಿತಕೆ ಗಮನಂ&lt;/div&gt;&lt;div style="text-align: justify;"&gt;ಗುಡುವನ್ ನಾದದೊಳನುನಯದಿ ಮನಂಗುಡುವನ್&lt;/div&gt;&lt;div style="text-align: justify;"&gt;ನುಡಿಯರಿಗನ್ ಗಮನಂಗಿಡೆ&lt;/div&gt;&lt;div style="text-align: justify;"&gt;ನುಡಿದರಿಗನದಂತರಿವುದು ನುಡಿಗದೆ ಲಕ್ಷ್ಯಂ ೫&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-1978226615575854375?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/1978226615575854375/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=1978226615575854375&amp;isPopup=true' title='9 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/1978226615575854375'/><link rel='self' type='application/atom+xml' href='http://www.blogger.com/feeds/2037979210344114254/posts/default/1978226615575854375'/><link rel='alternate' type='text/html' href='http://nannabaraha.blogspot.com/2011/06/blog-post.html' title='ಸಕ್ಕದಮೋ ಕನ್ನಡಮೋ ನುಡಿಯೋ...'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>9</thr:total></entry><entry><id>tag:blogger.com,1999:blog-2037979210344114254.post-8358472736607168931</id><published>2011-05-11T13:40:00.007+05:30</published><updated>2011-05-11T15:39:28.526+05:30</updated><category scheme='http://www.blogger.com/atom/ns#' term='೧೧. ವಿಚಾರ'/><title type='text'>ಅರಿವಿನ ದಾರಿ</title><content type='html'>&lt;div style="text-align: justify;"&gt;ತೈತ್ತಿರೀಯೋಪನಿಷತ್ತಿನ ಭೃಗುವಲ್ಲಿಯೆಂಬ ಭಾಗದಲ್ಲಿ ಒಂದು ಸುಂದರ ಸಂವಾದವಿದೆ.  ವರುಣನ ಮಗನಾದ ಭೃಗು, ಬ್ರಹ್ಮಜ್ಞಾನವನ್ನು ಹೊಂದುವ ಕುತೂಹಲದಿಂದ, ತಂದೆಯ ಬಳಿ ಸಾರಿ ಹೀಗೆ ಕೇಳುತ್ತಾನೆ:&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;"ಭಗವನ್, ನನಗೆ ಬ್ರಹ್ಮನ ಬಗ್ಗೆ ತಿಳಿಸಿಕೊಡಿ"  ಸಂಬಂಧದಿಂದ ತಂದೆಯೇ ಹೌದಾದರೂ ಕಾರ್ಯನಿಮಿತ್ತ ಗುರು, ವರುಣ.  ಅದರಿಂದ ಗುರುವನ್ನು ಸಂಬೋಧಿಸುವ ರೀತಿ "ಭಗವನ್... "&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ವಿಷಯವೋ ಅತಿ ಗಹನ.  ಭೃಗುವಿನದ್ದು ಒಂದು ಸಾಲಿನ ಪ್ರಶ್ನೆ.  ಆದರೆ ಉತ್ತರವೋ?  ವರುಣನಾದರೋ ಅದು ಯಾವ ಸಿದ್ಧ ಉತ್ತರ ಹೇಳಿಯಾನು?&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;"ಮಗೂ, ಅನ್ನ, ಪ್ರಾಣ, ಕಣ್ಣು, ಕಿವಿ, ಮನಸ್ಸು ಮಾತು, ಇವು ಬ್ರಹ್ಮನನ್ನು ತಿಳಿಯುವ ಸಾಧನಗಳು" ಒಗಟಿನ ರೀತಿಯಲ್ಲಿ ನುಡಿಯುತ್ತಾನೆ ವರುಣ "ಯಾವುದರಿಂದ ಸಕಲಭೂತಗಳೂ ಜನಿಸುತ್ತವೆಯೋ, ಹೀಗೆ ಹುಟ್ಟಿದವು ಯಾವುದರಿಂದ ಜೀವಿಸುತ್ತವೆಯೋ, ಕೊನೆಗೆ ಯಾವುದನ್ನು ಸೇರಿ ಅದರಲ್ಲೇ ಲೀನವಾಗುತ್ತವೆಯೋ, ಅದನ್ನು ಕುರಿತು ಚಿಂತಿಸು; ಅದೇ ಬ್ರಹ್ಮ"&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಹೀಗೆ ಬ್ರಹ್ಮನನ್ನು ತಿಳಿಯುವ ಸಾಧನಗಳನ್ನೂ ಬ್ರಹ್ಮನ ಸುಳುಹನ್ನೂ ತಂದೆಯಿಂದ ಅರಿತ ಭೃಗು ಈ ಕುರಿತು ಚಿಂತಿಸಲು (ತಪಸ್ಸನ್ನಾಚರಿಸಲು) ನಿಶ್ಚಯಿಸಿ ಹಿಂದಿರುಗುತ್ತಾನೆ.  ಕೆಲಕಾಲದ ತಪಸ್ಸಿನಿಂದ ಉತ್ತರವೊಂದು ಮನಸ್ಸಿನಲ್ಲಿ ಮೂಡುತ್ತದೆ: ಅನ್ನವೇ ಬ್ರಹ್ಮ.  ಏಕೆಂದರೆ ಸಕಲಭೂತಗಳೂ ಕೇವಲ ಅನ್ನದಿಂದಲೇ ಜನಿಸುತ್ತವೆ, ಹೀಗೆ ಹುಟ್ಟಿದವು ಅನ್ನದಿಂದಲೇ ಜೀವಿಸುತ್ತವೆ.  ಕೊನೆಗೆ ಅನ್ನವನ್ನೇ ಸೇರಿ ಅದರಲ್ಲಿ ಲೀನವಾಗುತ್ತವೆ (ಮತ್ತೊಂದಕ್ಕೆ ಅನ್ನವಾಗುತ್ತವೆ - ಆಹಾರ ಸರಪಳಿ ಅದೇ ಅಲ್ಲವೇ? ಅನ್ನವಿಲ್ಲದೇ ಜಗತ್ತಿಲ್ಲ; ಜಗತ್ತೇ ಅನ್ನಮಯ!).  ಆದ್ದರಿಂದ ಅನ್ನವೇ ಬ್ರಹ್ಮ ಇರಬೇಕು.  ಹೀಗೆ ತರ್ಕಿಸಿ ಭೃಗು ಮತ್ತೆ ತಂದೆಯ ಬಳಿ ಬರುತ್ತಾನೆ, ಅದೇ ಪ್ರಶ್ನೆ ಕೇಳುತ್ತಾನೆ:&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;"ಭಗವನ್, ನನಗೆ ಬ್ರಹ್ಮನ ಬಗ್ಗೆ ತಿಳಿಸಿಕೊಡಿ" &lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಅದಕ್ಕೆ ವರುಣನ ಉತ್ತರ "ಮಗೂ, ತಪಸ್ಸಿನಿಂದ ಬ್ರಹ್ಮನನ್ನು ತಿಳಿ, ತಪಸ್ಸೇ ಬ್ರಹ್ಮ" &lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಭೃಗುವಿಗೆ ತನ್ನ ತರ್ಕದಲ್ಲೇನೋ ಕೊರತೆಯಿರಬಹುದೆಂದು ಅರಿವಾಗುತ್ತದೆ.  ತಂದೆ ಹೇಳಿದ ಬ್ರಹ್ಮನ ಲಕ್ಷಣಗಳೆಲ್ಲಾ ಅನ್ನಕ್ಕಿದ್ದರೂ, ಅದಕ್ಕೆ ಹುಟ್ಟೂ ಇದೆಯಲ್ಲವೇ?  ಆದರೆ ಬ್ರಹ್ಮನಾದರೋ ಅನಾದಿ!  ಸರಿ, ಮತ್ತೆ ತಪಸ್ಸನ್ನು ಮುಂದುವರೆಸಲು ನಿಶ್ಚಯಿಸಿ ಹಿಂದಿರುಗುತ್ತಾನೆ ಭೃಗು.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಕೆಲಕಾಲದ ತಪಸ್ಸಿನಿಂದ ಹೊಸದೊಂದು ಉತ್ತರ ಮೂಡುತ್ತದೆ: ಪ್ರಾಣವೇ ಬ್ರಹ್ಮ.  ಏಕೆಂದರೆ ಸಕಲಭೂತಗಳೂ ಕೇವಲ ಪ್ರಾಣದಿಂದಲೇ ಜನಿಸುತ್ತವೆ, ಹೀಗೆ ಹುಟ್ಟಿದವು ಪ್ರಾಣದಿಂದಲೇ ಜೀವಿಸುತ್ತವೆ.  ಕೊನೆಗೆ ಪ್ರಾಣವನ್ನೇ ಸೇರಿ ಅದರಲ್ಲಿ ಲೀನವಾಗುತ್ತವೆ.  ಆದ್ದರಿಂದ ಪ್ರಾಣವೇ ಬ್ರಹ್ಮ ಇರಬೇಕು.  (ಉಸಿರಿಲ್ಲದೇ ಜೀವವೊಂದು ಹುಟ್ಟುವುದು, ಬದುಕುವುದಾದರೂ ಹೇಗೆ?  ಮತ್ತು ಕೊನೆಗೆ ಅದು ವಿರಾಟ್ ಸ್ವರೂಪಿಯಾದ ಪ್ರಾಣದಲ್ಲಲ್ಲವೇ ಲೀನವಾಗಬೇಕು?).  ಈ ಹೊಸ ಉತ್ತರದೊಡನೆ ಭೃಗು ಮತ್ತೆ ತಂದೆಯ ಬಳಿ ಬರುತ್ತಾನೆ,&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;"ಭಗವನ್, ನನಗೆ ಬ್ರಹ್ಮನ ಬಗ್ಗೆ ತಿಳಿಸಿಕೊಡಿ" &lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಮತ್ತೆ ವರುಣನಿಂದ ಅದೇ ಉತ್ತರ "ಮಗೂ, ತಪಸ್ಸಿನಿಂದ ಬ್ರಹ್ಮನನ್ನು ತಿಳಿ, ತಪಸ್ಸೇ ಬ್ರಹ್ಮ"  ಮತ್ತೆ ವರುಣನು ಹೀಗಂದದ್ದು ಕೇಳಿ, ಮತ್ತೂ ತಪಸ್ಸನ್ನು ಮುಂದುವರೆಸಲು ನಿಶ್ಚಯಿಸಿ ಹಿಂದಿರುಗುತ್ತಾನೆ ಭೃಗು.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಮತ್ತೆ ಕೆಲಕಾಲದ ತಪಸ್ಸಿನಿಂದ ಅವನಿಗನ್ನಿಸುತ್ತದೆ; ಅರೆ, ಎಲ್ಲದರ ಹುಟ್ಟು ಬದುಕು ನಾಶಕ್ಕೆ ಮನಸ್ಸೇ ಕಾರಣವಲ್ಲವೇ?  ಏಕೆಂದರೆ ಕೇವಲ ಮನಸ್ಸಿನ ಕಾರಣದಿಂದಲೇ ಸಕಲಭೂತಗಳೂ  ಜನಿಸುತ್ತವೆ, ಹೀಗೆ ಹುಟ್ಟಿದವು ಮನೋಮಾತ್ರದಿಂದಲೇ ಜೀವಿಸುತ್ತವೆ.  ಕೊನೆಗೆ ಮನಸ್ಸನ್ನೇ ಸೇರಿ ಅದರಲ್ಲಿ ಲೀನವಾಗುತ್ತವೆ.  ಆದ್ದರಿಂದ ಮನಸ್ಸೇ ಬ್ರಹ್ಮ!  (ಕೇವಲ ಅನ್ನ, ಪ್ರಾಣಗಳಿದ್ದು ಮನಸ್ಸಿನ ಸಂಕಲ್ಪವಿಲ್ಲದಿದ್ದರೆ ಯಾವುದು ಸಾಧ್ಯ!)  ಮತ್ತೆ ತಂದೆಯ ಬಳಿ ಸಾರುತ್ತಾನೆ ಭೃಗು; ಮತ್ತೆ ಅದೇ ಪ್ರಶ್ನೆ:&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;"ಭಗವನ್, ನನಗೆ ಬ್ರಹ್ಮನ ಬಗ್ಗೆ ತಿಳಿಸಿಕೊಡಿ" &lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಆದರೆ ಉಹುಂ... ವರುಣನಿಂದ ಮತ್ತೆ ಅದೇ ಉತ್ತರ! "ಮಗೂ, ತಪಸ್ಸಿನಿಂದ ಬ್ರಹ್ಮನನ್ನು ತಿಳಿ, ತಪಸ್ಸೇ ಬ್ರಹ್ಮ" &lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಮತ್ತೆ ತಪಸ್ಸು!  ಸರಿ, ಮತ್ತೂ ತಪಸ್ಸನ್ನು ಮುಂದುವರೆಸಲು ನಿಶ್ಚಯಿಸಿ ಹಿಂದಿರುಗುತ್ತಾನೆ ಭೃಗು.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಕೆಲಕಾಲದ ತಪಸ್ಸಿನನಂತರ ಮತ್ತೊಂದು ಹೊಳಹು:  ಅನ್ನ, ಪ್ರಾಣ, ಮನಸ್ಸುಗಳಿದ್ದರೂ ತನ್ನ ಸುತ್ತೆಲ್ಲ ನಡೆಯುವ ವ್ಯಾಪಾರದ ಹಿಂದೆ ವಿಶೇಷವಾದ ಜ್ಞಾನವೊಂದಿರಲೇಬೇಕಲ್ಲವೇ?  ಕೇವಲ ಈ ವಿಜ್ಞಾನದ  ಕಾರಣದಿಂದಲೇ ಸಕಲಭೂತಗಳೂ  ಜನಿಸುತ್ತವೆ, ಹೀಗೆ ಹುಟ್ಟಿದವು ವಿಜ್ಞಾನದ ಬಲದಿಂದಲೇ ಜೀವಿಸುತ್ತವೆ.  ಕೊನೆಗೆ ವಿಜ್ಞಾನವನ್ನೇ ಸೇರಿ ಅದರಲ್ಲಿ ಲೀನವಾಗುತ್ತವೆ.  (ಕೇವಲ ಸಂಕಲ್ಪಮಾತ್ರದಿಂದ ಎಲ್ಲವೂ ನಡೆಯುತ್ತವೆಯೇ? ಸೃಷ್ಟಿ, ಸ್ಥಿತಿ ಲಯಗಳಿಗೂ ಅದೊಂದು ಕ್ರಿಯೆಯಿದೆ, ಕ್ರಮವಿದೆ, ಅದರ ಹಿಂದೊಂದು ವಿಜ್ಞಾನವಿದೆಯಲ್ಲವೇ?)  ಆದ್ದರಿಂದ ಬ್ರಹ್ಮನೆಂದರೆ ಸರ್ವವ್ಯಾಪಿಯಾದ ಈ ವಿಜ್ಞಾನವೇ ಹೌದು!  ಹೀಗೆ ತಿಳಿದು ಭೃಗು ಮತ್ತೆ ತಂದೆಯ ಬಳಿ ಬರುತ್ತಾನೆ, ಮತ್ತೆ ಅದೇ ಪ್ರಶ್ನೆ!&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಇಲ್ಲ, ಈ ಬಾರಿಯೂ ವರುಣನ ಉತ್ತರ ಅದೇ!!  ಬಂದದಾರಿಗೆ ಸುಂಕವಿಲ್ಲವೆಂಬಂತೆ ಮರಳುವ ಭೃಗು ಮತ್ತೆ ತಪಸ್ಸನ್ನು ಮುಂದುವರೆಸುತ್ತಾನೆ.  ಸಾಕಷ್ಟು ತಪಸ್ಸಿನ ನಂತರ ಕೊನೆಗೊಮ್ಮೆ ಅವನಿಗೆ ಹೊಳೆಯುತ್ತದೆ, ಜಗತ್ತಿನ ಎಲ್ಲದರ ಮೂಲ, ಆಧಾರ, ಗಮ್ಯ ಏನು?  ಆನಂದವಲ್ಲವೇ?  ಕೇವಲ ಆನಂದದ ಕಾರಣದಿಂದಲೇ ಸಕಲಭೂತಗಳೂ ಜನಿಸುತ್ತವೆ.  ಹೀಗೆ ಹುಟ್ಟಿದವು ಆನಂದಕ್ಕಾಗಿಯೇ ಜೀವಿಸುತ್ತವೆ, ಕೊನೆಗೆ ಪರಮಾನಂದದಲ್ಲಿ ಲೀನವಾಗುತ್ತವೆ ಅಲ್ಲವೇ?  ಆನಂದದ ಅಪೇಕ್ಷೆಯಿಲ್ಲದೇ ಸೃಷ್ಟಿಕ್ರಿಯೆಯಿಲ್ಲ.  ಅದರ ಅವಲಂಬನೆಯಿಲ್ಲದೆಯೇ ಬದುಕಿಲ್ಲ.  ಇದೆಲ್ಲವನ್ನೂ ಒಳಗೊಂಡ ಪರಮಾನಂದ (eternal bliss ಅನ್ನೋಣ)ವೊಂದಿದೆ; ಅದು ಸರ್ವವ್ಯಾಪಿ, ಕೊನೆಗೆ ಎಲ್ಲವೂ ಅದರಲ್ಲೇ ಲೀನವಾಗಬೇಕು.  ಆದ್ದರಿಂದ ಜಗತ್ತೆಲ್ಲವೂ ಆನಂದಮಯವಲ್ಲವೇ?  ಆದ್ದರಿಂದ ಬ್ರಹ್ಮನೆಂದರೆ ಈ ಪರಮಾನಂದವಲ್ಲದೇ ಮತ್ತೇನು? &lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಇದು, ವರುಣನಿಂದ ಪ್ರೇರಿತವಾದ, ಭೃಗುವು ಅರಿತ ವಿದ್ಯೆ ("ಸೈಷಾ ಭಾರ್ಗವೀ ವಾರುಣೀ ವಿದ್ಯಾ") ಎನ್ನುತ್ತದೆ ಉಪನಿಷತ್ತು.  ಹೃದಯದ ಆಳದಲ್ಲಿ ಪ್ರತಿಷ್ಠಿತವಾದ ಈ "ಬ್ರಹ್ಮ"ನನ್ನು ಯಾವನು ಅರಿಯುತ್ತಾನೋ ಅವನು ಅದೇ ಬ್ರಹ್ಮನಲ್ಲಿ (ಪರಮಾನಂದದಲ್ಲಿ) ನೆಲೆನಿಲ್ಲುತ್ತಾನೆ; ಸ್ವಕೀಯವಾದ ಈ ಆನಂದದ ಹೊರಗುರುತಾಗಿ, ಇಹದಲ್ಲಿ ಅವನು ಅನ್ನವಂತನೂ ಅದನ್ನು ಭೋಗಿಸುವವನೂ ಆಗುತ್ತಾನೆ; ಜನಸಂಪತ್ತಿನಿಂದಲೂ, ಪಶುಸಂಪತ್ತಿನಿಂದಲೂ, ಬ್ರಹ್ಮವರ್ಚಸ್ಸಿನಿಂದಲೂ ಕೂಡಿ ಮಹಾ ಕೀರ್ತಿವಂತನಾಗುತ್ತಾನೆ ಎನ್ನುವುದು ಉಪನಿಷತ್ತಿನ ಮಾತು.  ಮುಂದುವರೆಯುವ ಉಪನಿಷತ್ತು ಅನ್ನದ ವಿವಿಧ ಆಯಾಮಗಳನ್ನೂ, ಬ್ರಹ್ಮೌಪಾಸನೆಯ ವಿವಿಧ ರೂಪಗಳನ್ನೂ, ಆತ್ಮಸಾಕ್ಷಾತ್ಕಾರದ ವಿವಿಧ ಮಜಲುಗಳನ್ನೂ ವಿವರಿಸುತ್ತದೆ.&lt;/div&gt;&lt;div style="text-align: justify;"&gt;&lt;br /&gt;&lt;/div&gt;&lt;div style="text-align: justify;"&gt;ಮೇಲಿನ ಸಂವಾದದಲ್ಲಿ ಗಮನಸೆಳೆಯುವ ಅಂಶವೆಂದರೆ ಜ್ಞಾನಸಾಧನೆಯಲ್ಲಿ ಚಿಂತನೆಗೆ/ತಪಕ್ಕೆ ಇರುವ ಮಹತ್ವ; ಆರ್ಷೇಯವಾಗಿ ಬಂದದ್ದು ಇದು.  ಭೃಗುವು ವರುಣನಬಳಿ ಹೋದಾಗಲೆಲ್ಲಾ ಅವನಿಗೆ ಸಿಗುವ ಉತ್ತರ ಒಂದೇ?  "ತಪಸಾ ಬ್ರಹ್ಮ ವಿಜಿಜ್ಞಾಸಸ್ವ..."; ಎಷ್ಟು?  "ತಪಸ್ಸೇ ಬ್ರಹ್ಮ" ಎನ್ನುವಷ್ಟು.  ಕೊನೆಯಲ್ಲಿ ಭೃಗು ಅರಿಯುವ ಸತ್ಯ ವರುಣನಿಗೆ ಮೊದಲೇ ತಿಳಿದಿದ್ದರೆ ಅದನ್ನು ಆಗಲೇ ಹೇಳಿಬಿಡಬಹುದಿತ್ತಲ್ಲವೇ?  ಈ ಪ್ರಶ್ನೆ ಸಹಜ.  "Why re-invent the wheel" ಅನ್ನುವ ಯುಗ ನಮ್ಮದು.  ಆದರೆ ಸನಾತನ ವಿದ್ಯಾಭ್ಯಾಸದ ರೀತಿ ಅದಲ್ಲ.  ಈ ಅಂತಿಮ ಸತ್ಯ ವರುಣನಿಗೇ ಗೊತ್ತಿತ್ತೋ ಅನ್ನುವುದೂ ಬೇರೆಯ ವಿಷಯ.  ಹಾಗೊಂದುವೇಳೆ ಅವನಿಗೆ ಗೊತ್ತಿದ್ದೂ ಅದನ್ನು ಅವನೇ ಹೇಳಿದ್ದರೆ, ಅದು ಅವನದೇ ಸತ್ಯವಾಗಿ ಉಳಿಯುತ್ತಿತ್ತೇ ಹೊರತು ಭೃಗುವಿನದಾಗುತ್ತಿರಲಿಲ್ಲ.  ಸತ್ಯದ ದಾರಿಯನ್ನಷ್ಟೇ ಗುರು ಸೂಚಿಸಬಲ್ಲ; ಸುಳುಹುಗಳನ್ನು ನೀಡಬಲ್ಲ, ದಾರಿ ತಪ್ಪುವಲ್ಲಿ ತಿದ್ದಬಲ್ಲ, ಆದರೆ ಆ ದಾರಿಯಲ್ಲಿ ಸ್ವತಃ ನಡೆದು ಸತ್ಯವನ್ನು ಕಂಡುಕೊಳ್ಳುವ ಜವಾಬ್ದಾರಿ ಶಿಷ್ಯನದೇ.  ಸತ್ಯ ಅವನದಾಗುವುದು ಹಾಗೆ.  ಈ ದಾರಿಯಲ್ಲಿ ಕಷ್ಟಗಳೇ ಅವನ ಆಹಾರ.  ಬೆಂಬಿಡದ ಛಲ, ಸತ್ಯವಾದಿತ್ವ, ಕಷ್ಟಸಹಿಷ್ಣುತೆಗಳೇ ಅವನ ಕಾಪು.  ಬದುಕು-ಸಾವುಗಳ ರಹಸ್ಯವನ್ನರಿಯಲು ಯಮನಿಗೇ ಬೆನ್ನು ಬಿದ್ದ ನಚಿಕೇತನಾಗಲಿ, ತನ್ನ ವಂಶವೇ ಗೊತ್ತಿಲ್ಲದೆಯೂ ಗೊತ್ತಿಲ್ಲವೆಂಬುದನ್ನೇ ನಿರ್ಭೀತಿಯಿಂದ ಹೇಳುವ ಸತ್ಯಕಾಮ ಜಾಬಾಲಿಯಾಗಲೀ, ಗುರುವಿನ ಮಾತಿಗಾಗಿ ತಮ್ಮನ್ನೇ ಕೊಟ್ಟುಕೊಳ್ಳುವ ಉಪಮನ್ಯು ಆರುಣಿಗಳಾಗಲೀ ನಮಗೆ ತಿಳಿಸುವುದು ಇದನ್ನೇ.  ಇದು ವಿದ್ಯೆ ಗಳಿಕೆಗೆ ಅರ್ಹತೆ; ಇದು ಅರಿವಿನ ದಾರಿ, ಅನ್ವೇಷಿಗಳ ದಾರಿ, ಋಷಿಗಳ ದಾರಿ, ವೇದಗಳ ದಾರಿ.  ಹಾಗೆ ಕಡುಕಷ್ಟದ ಹಾದಿಯಲ್ಲಿ ನಡೆದಾಗಲಷ್ಟೇ ಅವನಿಗೆ ಬ್ರಹ್ಮಸ್ವರೂಪದ ಆನಂದದ ಅನುಭೂತಿ ದೊರಕಬಹುದೇ ಹೊರತು, ಅದನ್ನು ಯಾರೋ ಹೇಳಿಕೊಟ್ಟಾಗಲ್ಲ.  ಮರುಭೂಮಿಯಲ್ಲಿ ದೊರಕುವ ಓಯಸಿಸ್ಸಿನ ಬೆಲೆ ಕೂತಲ್ಲೇ ಕೈಚಾಚಿದಾಗ ಸಿಕ್ಕುವ ನೀರಿನ ಬಾಟಲಿಗಿಲ್ಲವಷ್ಟೆ?  ಈ ವಿದ್ಯೆ/ಅರಿವು ಬ್ರಹ್ಮಜ್ಞಾನವಿರಬಹುದು, ವೈದ್ಯಕೀಯವಿರಬಹುದು, ವಿಜ್ಞಾನ, ಗಣಿತ, ಅರ್ಥ, ಮತ್ತಾವುದೇ ಶಾಸ್ತ್ರವಿರಬಹುದು, ಇಲ್ಲಿ short cuts, ಗೈಡು, ಟ್ಯುಟೋರಿಲ್ಲುಗಳಿಲ್ಲ, "100% results guaranteed" ಅನ್ನುವ ಬೋರ್ಡುಗಳಿಲ್ಲ, ಸೀಟು, ಡೊನೇಶನ್ನು ವ್ಯವಹಾರಗಳಿಲ್ಲ; ಇಲ್ಲಿ ಗುರು ರಾಜಕೀಯಮಾಡುವುದಿಲ್ಲ (ಕೈಚಾಚಿದರೆ ಅದು ಆಶೀರ್ವದಿಸುವುದಕ್ಕಷ್ಟೇ), ಶಿಷ್ಯ strike ಮಾಡುವುದಿಲ್ಲ, ಅಪ್ಪ-ಅಮ್ಮಂದಿರು ಗುರುಗಳನ್ನು ಜಬರಿಸುವುದೂ ಇಲ್ಲ!  ಇರುವುದೆಲ್ಲಾ ಕೇವಲ ವಿದ್ಯೆ, ದಾನ, ಆದಾನ!  "ಆಚಾರ್ಯಃ ಪೂರ್ವರೂಪಮ್, ಅಂತೇವಾಸ್ಯುತ್ತರ ರೂಪಮ್, ವಿದ್ಯಾ ಸಂಧಿಃ, ಪ್ರವಚನಗ್ಂ ಸಂಧಾನಮ್"&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-8358472736607168931?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/8358472736607168931/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=8358472736607168931&amp;isPopup=true' title='15 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/8358472736607168931'/><link rel='self' type='application/atom+xml' href='http://www.blogger.com/feeds/2037979210344114254/posts/default/8358472736607168931'/><link rel='alternate' type='text/html' href='http://nannabaraha.blogspot.com/2011/05/blog-post.html' title='ಅರಿವಿನ ದಾರಿ'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>15</thr:total></entry><entry><id>tag:blogger.com,1999:blog-2037979210344114254.post-7482043554797620919</id><published>2010-11-22T01:45:00.002+05:30</published><updated>2010-11-22T01:49:39.342+05:30</updated><category scheme='http://www.blogger.com/atom/ns#' term='೯೯. ಇತರ ಬ್ಲಾಗ್ ಬರಹ ಸೇರ್ಪಡೆಗಳು'/><title type='text'>ಗೀತಾವಿಚಾರ ಲಹರಿ: ಕುತಸ್ತ್ವಾ ಕಶ್ಮಲಮಿದಂ?</title><content type='html'>ಇಲ್ಲಿ ಕ್ಲಿಕ್ ಮಾಡಿ&lt;br /&gt;&lt;br /&gt;&lt;a href="http://geethavicharalahari.blogspot.com/2010/11/blog-post.html"&gt;http://geethavicharalahari.blogspot.com/2010/11/blog-post.html&lt;/a&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-7482043554797620919?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/7482043554797620919/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=7482043554797620919&amp;isPopup=true' title='0 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/7482043554797620919'/><link rel='self' type='application/atom+xml' href='http://www.blogger.com/feeds/2037979210344114254/posts/default/7482043554797620919'/><link rel='alternate' type='text/html' href='http://nannabaraha.blogspot.com/2010/11/blog-post_22.html' title='ಗೀತಾವಿಚಾರ ಲಹರಿ: ಕುತಸ್ತ್ವಾ ಕಶ್ಮಲಮಿದಂ?'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>0</thr:total></entry><entry><id>tag:blogger.com,1999:blog-2037979210344114254.post-2868577280376198737</id><published>2010-11-17T16:11:00.006+05:30</published><updated>2010-11-18T12:09:34.710+05:30</updated><category scheme='http://www.blogger.com/atom/ns#' term='೧೪. ಹನಿ-ಮಿನಿ; ಚೂರು-ಚುಟುಕ'/><title type='text'>ಎರಡು ಸಂಸ್ಕೃತ ಶ್ಲೋಕಗಳು</title><content type='html'>&lt;div align="justify"&gt;ಕನ್ನಡ ಸಂಸ್ಕೃತ ಛಂದಸ್ಸುಗಳು ನನ್ನನ್ನು ಯಾವಾಗಲೂ ಆಕರ್ಷಿಸಿವೆ. ಹೀಗೇ ಆಗೀಗ ಅವುಗಳಲ್ಲಿ ಸುಮ್ಮನೇ ಕೈಯಾಡಿಸುವುದುಂಟು. ಮೊನ್ನೆ ಮೊನ್ನೆ ಗೆಳೆಯ ಶ್ರೀಕಾಂತರು "ಪ್ರಗತಿ" ಎಂಬ ಪದವಿರುವಂತೆ ಸರಸ್ವತಿ ಮತ್ತು ಗಣಪತಿಯಮೇಲೆ ಒಂದು ಸಂಸ್ಕೃತ ಶ್ಲೋಕವನ್ನು ರಚಿಸುವುದು ಸಾಧ್ಯವೇ ಎಂದು ಕೇಳಿದ್ದರು. ಸಂಸ್ಕೃತ ಯಾವತ್ತೂ ನನ್ನ ಭಾಷೆಯಾಗಿರಲಿಲ್ಲವಾದರೂ ಅದೊಂದು ಸಾಕಷ್ಟೇ ಪರಿಚಿತಭಾಷೆಯೇ ಸರಿ. ನೆರೆಮನೆಯ ಭಾಷೆಯೆಂಬ ಸಲುಗೆಯಿಂದ ಹೊಸೆದದ್ದು ಈ ಶ್ಲೋಕಗಳು&lt;br /&gt;&lt;br /&gt;&lt;strong&gt;&lt;u&gt;ಸರಸ್ವತೀ:&lt;br /&gt;&lt;/u&gt;&lt;/strong&gt;ವಂದೇ ವಾಗೀಶ ವಾಣೀವಿಲಸಿತ ವರ ಚತ್ವಾರಿ ವಾಣೀಂ ಪುರಾಣೀಂ&lt;br /&gt;ವಂದೇಹಂ ಹಂಸಿನೀಂ ತಾಂ ಸದಮಲ ಧವಳಾಂ ಸರ್ವವರ್ಣಾಂ ಸುವಾಣೀಂ&lt;br /&gt;ಯುಕ್ತಿಸ್ಸಂಧಾನವಾದಾದ್ಯಖಿಲ ಪಟುಕಲಾ ಕಾರಿಣೀಂ ಚಾರುವಾಣೀಂ&lt;br /&gt;ಬ್ರಹ್ಮಾಣೀಂ ಬ್ರಾಹ್ಮಣೀಂ ಸತ್ಪ್ರಗತಿವಿಗತಿ ಸಂದಾಯಿನೀಂ ಭಾವಯೇಹಂ - ಸ್ರಗ್ಧರಾವೃತ್ತ&lt;br /&gt;&lt;br /&gt;&lt;strong&gt;&lt;u&gt;ಗಣಪತಿ:&lt;br /&gt;&lt;/u&gt;&lt;/strong&gt;ಗಜವಕ್ತ್ರಂ ಸುಜನಾಳಿವಂದಿತಲಸತ್ಪದ್ಮಾರುಣಶ್ರೀಪದಂ&lt;br /&gt;ದುರಿತಾರಿಷ್ಟಸಮಸ್ತಮಸ್ತಕದಳೀಮತ್ತೇಭವಿಕ್ರೀಡಿತಂ&lt;br /&gt;ಸಕಲಾರಂಭ ಸುಪೂಜಿತಂ ಶುಭಕಲಾ ಸೌಭಾಗ್ಯರತ್ನಾಕರಂ&lt;br /&gt;ಅಖಿಳಾರ್ಥಪ್ರಗತಿಪ್ರದಂ ಶುಭಕರಂ ವಂದೇ ಸದಾ ಶ್ರೀಕರಂ - ಮತ್ತೇಭವಿಕ್ರೀಡಿತವೃತ್ತ&lt;br /&gt;&lt;br /&gt;ಇದು ಮತ್ತೇಭವಿಕ್ರೀಡಿತವೃತ್ತದಲ್ಲಿದೆ (ಮತ್ತ + ಇಭ = ಮತ್ತೇಭ, ಮದಿಸಿದ ಆನೆ; ಅರಿಷ್ಟವೆಂಬ ಹೆಬ್ಬಾಳೆಯ ವನಕ್ಕೆ ಹೊಕ್ಕ ಮದಿಸಿದ ಆನೆ ಎಂಬ ಎರಡನೆಯ ಸಾಲು ಇದನ್ನೇ ಸೂಚಿಸುತ್ತದೆ, ಜೊತೆಗೆ ಇದರ ಛಂದಸ್ಸನ್ನೂ)&lt;br /&gt;&lt;br /&gt;&lt;em&gt;ವಿ ಆರ್ ಭಟ್ಟರ ಕೋರಿಕೆಯ ಮೇರೆಗೆ ಮತ್ತೊಂದು ತರಲೆ ಪ್ರಯತ್ನ, ಮೇಲಿನ ಗಣಪತಿ ಸ್ತುತಿಯನ್ನು &lt;strong&gt;ಶಾರ್ದೂಲವಿಕ್ರೀಡಿತವೃತ್ತ&lt;/strong&gt;ದಲ್ಲಿ ಅಂದರೆ ಹೇಗಿರುತ್ತದೆ? ಹೀಗೆ:&lt;/em&gt;&lt;br /&gt;&lt;br /&gt;ವಿಘ್ನೇಶಂ ಸುರಮೌಳಿಮಂಡಿತಲಸತ್ಪದ್ಮಾರುಣಶ್ರೀಪದಂ&lt;br /&gt;ವಿಘ್ನಾರಿಷ್ಟಸಮಸ್ತಮಸ್ತಕದಳೀವಿಧ್ವಂಸವಿಕ್ರೀಡನಂ&lt;br /&gt;ಸರ್ವಾರಂಭ ಸುಪೂಜಿತಂ ಶುಭಕಲಾ ಸೌಭಾಗ್ಯರತ್ನಾಕರಂ&lt;br /&gt;ಸರ್ವಾರ್ಥಪ್ರಗತಿಪ್ರದಂ ಶುಭಕರಂ ವಂದೇ ಸದಾಶಂಕರಂ&lt;br /&gt;&lt;br /&gt;ಮೊದಲಿನ ಶ್ಲೋಕವನ್ನೇ ತುಸು ಮಾರ್ಪಡಿಸಿದ್ದೇನಷ್ಟೇ. ನಿಜಹೇಳಬೇಕೆಂದರೆ, ಇದೇ ನಾನು ಮೊದಲು ರಚಿಸಿದ್ದು. ಆಮೇಲೆ ಕದಳಿಯ ಸಾಲಿನಲ್ಲಿ "ಮತ್ತೇಭವಿಕ್ರೀಡಿತ" ಅನ್ನುವ ಪದ ಉತ್ತಮ ಪ್ರತಿಮೆಯಾಗಬಹುದಲ್ಲವೇ ಅನ್ನಿಸಿತು. ಅದು ಛಂದಸ್ಸನ್ನು ಸೂಚಿಸುವುದು ಕೂಡ. ಅದನ್ನು ಬಳಸುವ ಮನಸ್ಸು ಮಾಡಿದ್ದರಿಂದ ಇಡೀ ಶ್ಲೋಕವನ್ನು ತುಸು ಮಾರ್ಪಡಿಸಿ ಶಾರ್ದೂಲವಿಕ್ರೀಡಿತದಿಂದ ಮತ್ತೇಭವಿಕ್ರೀಡಿತವೃತ್ತವನ್ನಾಗಿ ಮಾರ್ಪಡಿಸಿದೆ&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-2868577280376198737?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/2868577280376198737/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=2868577280376198737&amp;isPopup=true' title='15 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/2868577280376198737'/><link rel='self' type='application/atom+xml' href='http://www.blogger.com/feeds/2037979210344114254/posts/default/2868577280376198737'/><link rel='alternate' type='text/html' href='http://nannabaraha.blogspot.com/2010/11/blog-post_17.html' title='ಎರಡು ಸಂಸ್ಕೃತ ಶ್ಲೋಕಗಳು'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>15</thr:total></entry><entry><id>tag:blogger.com,1999:blog-2037979210344114254.post-3533784775530434604</id><published>2010-11-02T09:52:00.003+05:30</published><updated>2010-11-26T14:43:23.257+05:30</updated><category scheme='http://www.blogger.com/atom/ns#' term='೦೨. ಕವನಗಳು'/><title type='text'>ಸ್ಥಬ್ದ ಚಿತ್ರ</title><content type='html'>ನಿನ್ನ ಕಣ್ಣಿನ ಮಿಂಚಿನಂಚಿನೊಳಗಿಂದೇನೊ&lt;br /&gt;ಹೊಸ ಹೊಳಪು ಹೊಳೆಯುತಿಹುದು;&lt;br /&gt;ಬೀಸುಗತ್ತಿಯು ಕೂಡ ಕೂರಲಗ ಮೊನೆಯಿಂದ&lt;br /&gt;ಹೂಮಿಂಚನೆಸೆಯುತಿಹುದು.&lt;br /&gt;&lt;br /&gt;ಇರುಳಿಡೀ ಸೋನೆಯಲಿ ಮಿಂದು ಚಳಿಹಿಡಿದ ಮುಂ-&lt;br /&gt;ಜಾವೀಗ ನಗುತಲಿಹುದು;&lt;br /&gt;ಎಳೆಬಿಸಿಲ ಕಾಯಿಸುತ ಮಿಡಿಯ ನಾಗರವೊಂದು&lt;br /&gt;ಹೆಡೆಬಿಚ್ಚಿ ತೂಗುತಿಹುದು.&lt;br /&gt;&lt;br /&gt;ಹೊಡೆಯುವುದೆ, ಬೇಡ ಬಿಡು; ಎಷ್ಟು ಚೆನ್ನಿದೆ ನೋಡು,&lt;br /&gt;ಕಾಣಿಸದು ರೋಷ ಲೇಶ;&lt;br /&gt;ಏಕೆ ಬಂದಿತೊ ಏನೊ ಸರಿದುಹೋಗಲಿ ತಾನೆ&lt;br /&gt;ನಮಗೇಕೆ ನಾಗದೋಷ.&lt;br /&gt;&lt;br /&gt;ಹರಿದ ಹಾದಿಯನಳೆದ ಸೌರಮಾನಗಳೆಷ್ಟೊ&lt;br /&gt;ಸಪ್ತಪದಬಂಧದೊಳಗೆ;&lt;br /&gt;ವೈಶಾಖದಿರುಳುಗಳ ಚಂದಿರನು ಕೂಡೆ ಬೆಳ&lt;br /&gt;ದಿಂಗಳೊಂಭತ್ತರೊಳಗೆ.&lt;br /&gt;&lt;br /&gt;ಇಬ್ಬರೊಳಗೊಂದಾಗಿ ಕೂಡಿದೆವು ಕಾಡಿದೆವು&lt;br /&gt;ಬೇಡಿದೆವು ದೇವನಲ್ಲಿ;&lt;br /&gt;ಚೆಂಗುಲಾಬಿಯ ಮೇಲೆ ಇಬ್ಬನಿಯು ನಗುತಿತ್ತು&lt;br /&gt;ಕಂಪೊಡನೆ ತಂಪ ಚೆಲ್ಲಿ.&lt;br /&gt;&lt;br /&gt;ಇಲ್ಲಿಬಾ, ತುಸುಹೊತ್ತು ಕೂರೋಣ ನಾವಿಲ್ಲಿ&lt;br /&gt;ಹಚ್ಚಿ ಗಲ್ಲಕ್ಕೆ ಗಲ್ಲ;&lt;br /&gt;ಅಮೃತಗಳಿಗೆಯನಿಂತು ಕಳೆಯುವುದು ತರವಲ್ಲ&lt;br /&gt;ನಲ್ಲೆ ನಾ ನಿನ್ನ ನಲ್ಲ&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-3533784775530434604?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/3533784775530434604/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=3533784775530434604&amp;isPopup=true' title='23 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/3533784775530434604'/><link rel='self' type='application/atom+xml' href='http://www.blogger.com/feeds/2037979210344114254/posts/default/3533784775530434604'/><link rel='alternate' type='text/html' href='http://nannabaraha.blogspot.com/2010/11/blog-post.html' title='ಸ್ಥಬ್ದ ಚಿತ್ರ'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>23</thr:total></entry><entry><id>tag:blogger.com,1999:blog-2037979210344114254.post-4865248187268467132</id><published>2010-10-17T16:13:00.003+05:30</published><updated>2010-10-17T16:32:53.360+05:30</updated><category scheme='http://www.blogger.com/atom/ns#' term='೧೩. ಪುಸ್ತಕ'/><title type='text'>ಸಾಂಸ್ಕೃತಿಕ ಅನ್ವೇಷಣೆಯ ಸಾಹಿತಿ---ಎಸ್. ಎಲ್. ಭೈರಪ್ಪ?</title><content type='html'>&lt;div align="justify"&gt;ಇದು ಸುನಾಥರ "&lt;a href="http://sallaap.blogspot.com/2010/10/blog-post_12.html"&gt;ಸಾಂಸ್ಕೃತಿಕ ಅನ್ವೇಷಣೆಯ ಸಾಹಿತಿ---ಎಸ್. ಎಲ್. ಭೈರಪ್ಪ&lt;/a&gt;" ಎಂಬ ಲೇಖನಕ್ಕೆ ನನ್ನ ಪ್ರತಿಕ್ರಿಯೆ. ಪ್ರತಿಕ್ರಿಯೆ ತುಸು ಉದ್ದವಾದ್ದರಿಂದ ಅವರ ಲೇಖನಕ್ಕೆ ಕಾಮೆಂಟಾಗಿ ಹಾಕುವ ಬದಲು ಇಲ್ಲಿ ಪ್ರಕಟಿಸುತ್ತಿದ್ದೇನೆ. ಈ ಲೇಖನದಲ್ಲಿ ಬರುವ ಅನೇಕ ಪ್ರಸ್ತಾಪಗಳು ಮೂಲ ಲೇಖನದ ಭಾಗಗಳನ್ನು ಸೂಚಿಸುವುದರಿಂದ, ಇದನ್ನು ಓದುವ ಮೊದಲು ಮೂಲ ಲೇಖನವನ್ನು ಓದಬೇಕೆಂದು ಕೋರಿಕೆ.&lt;br /&gt;&lt;br /&gt;ಭೈರಪ್ಪನವರ ಕಾದಂಬರಿಗಳ ಪ್ರಾತಿನಿಧಿಕ ಸೊಗಸಾದ ಕಿರುಪರಿಚಯ ಮಾಡಿಕೊಡುತ್ತಾ ಕೊನೆಗೆ "ಅವರನ್ನು ನಮ್ಮ ಸಾಂಸ್ಕೃತಿಕ ಅನ್ವೇಷಕ" ಎಂದು ಕರೆಯುತ್ತಾರೆ ಲೇಖಕರು. ನಾನು ಮತ್ತೊಂದು ಹೆಜ್ಜೆ ಮುಂದೆ ಹೋಗಿ ಅವರನ್ನು ನಮ್ಮ ಸಾಂಸ್ಕೃತಿಕ ಪ್ರತಿಪಾದಕನೆಂದು ಕರೆಯುತ್ತೇನೆ. ಏಕೆಂದರೆ ಅನ್ವೇಷಣೆಯಲ್ಲಿ ನಮಗೆ ತಿಳಿಯದ/ಹೊಸದಾಗಿ ತಿಳಿಯುವ, ಹಾಗೆ ತಿಳಿದಿದ್ದನ್ನು ಮುಕ್ತವಾಗಿ ಒಪ್ಪುವ ಅಂಶವಿರುತ್ತದೆ, ಚಿಂತನೆಯ ಅಂಶವಿರುತ್ತದೆ. ಆದರೆ ಭೈರಪ್ಪನವರಿಗೆ ನಮ್ಮ (ಹಾಗೇ ಪರ)ಸಂಸ್ಕೃತಿಯಬಗ್ಗೆ ಈಗಾಗಲೇ ಪ್ರಬಲವಾದ ಅಭಿಪ್ರಾಯಗಳಿರುವುದರಿಂದ, ಅದರ ಬಗ್ಗೆ ಅನ್ವೇಷಣೆ/"ಚಿಂತನೆ" ಈಗಾಗಲೇ ಆಗಿಹೋಗಿದೆ. ಅದರ ಪ್ರತಿಪಾದನೆಯೇ ಅವರ (ಕೊನೆಯ ಪಕ್ಷ ಇತ್ತೀಚಿನ) ಕಾದಂಬರಿಗಳ ಗುರಿಯಾದಂತೆನಿಸುತ್ತದೆ. ಸುನಾಥರೇ ಮುಂದೊಂದುಕಡೆ ಬಳಸುವಂತೆ, "ವಕಾಲತ್ತು" ಎನ್ನುವ ಪದ ಹೆಚ್ಚು ಸೂಕ್ತವೆನಿಸುತ್ತದೆ. ವಕೀಲನಿಗೆ ಚಿಂತನೆಗಿಂತಾ ಪ್ರತಿಪಾದನೆಯೇ ಮುಖ್ಯವಾಗುತ್ತದೆ.&lt;br /&gt;&lt;br /&gt;ಅದೇನೇ ಇರಲಿ ಕಾದಂಬರಿಯ ತಂತ್ರಗಾರಿಕೆ, ಕತೆ ಹೇಳುವ ಅನನ್ಯಶೈಲಿ, ಕತೆಯ ಓಟಕ್ಕೆ ಭಂಗತಾರದೆ ಪಾತ್ರಗಳ ತಾತ್ವಿಕ/ನೈತಿಕ ಒಳತೋಟಿಗಳಲ್ಲಿ ಓದುಗರನ್ನು ಒಳಗೊಳಿಸುವ ಪರಿ ಇತ್ಯಾದಿ ಕಾರಣಗಳಿಗಾಗಿ ಭೈರಪ್ಪ ನನ್ನ ನೆಚ್ಚಿನ ಲೇಖಕರಲ್ಲಿ ಒಬ್ಬರು, ಇಂದಿಗೂ ಕೂಡ. ಅವರ ಈ ಹಿಂದಿನ ಕಾದಂಬರಿಗಳ ಬಗ್ಗೆ ನನ್ನ (ಮತ್ತು ನನ್ನಂತಹ ಇತರರ) ತಕರಾರೆಂದರೆ ಇದು: ಪ್ರಸ್ತುತ ವ್ಯವಸ್ಥೆಯೊಡನೆ ಬದಲಾದ ಪರಿಸ್ಥಿತಿಯ ಮುಖಾಮುಖಿ, ಅದು ಪಾತ್ರಗಳಲ್ಲಿ ತಂದೊಡ್ಡುವ ಸಂಘರ್ಷ, ಉಸಿರುಗಟ್ಟಿಸುವ ಪರಿಸ್ಥಿತಿ ಇವುಗಳನ್ನು ಭೈರಪ್ಪನವರು ವಸ್ತುವನ್ನಾಗಿಸಿಕೊಂಡರೂ, ಇಷ್ಟೆಲ್ಲಾ ತುಮುಲ/ಒಳತೋಟಿಗಳನ್ನನುಭವಿಸಿಯೂ ಅವರ ಪಾತ್ರಗಳು ಈ ಉಸಿರುಗಟ್ಟಿಸುವ ವ್ಯವಸ್ಥೆಯಿಂದ ಹರಿದುಕೊಂಡು ಹೊರಬರದೇ ಕೊನೆಗೆ ಅದಕ್ಕೇ ಜೋತುಬಿದ್ದುಬಿಡುತ್ತವೆಂಬುದು. ಆ ಕಾರಣಕ್ಕೇ ಭೈರಪ್ಪನವರು ಸನಾತನ ಜೀವನಶೈಲಿ ಎತ್ತಿಹಿಡಿಯುವ ಭರದಲ್ಲಿ ಹಳೆಯ ಕಂದಾಚಾರಕ್ಕೇ ಶರಣು ಹೊಡೆದುಬಿಡುತ್ತಾರೆಂಬುದು ಒಂದು ಅನಿಸಿಕೆಯಾಗಿತ್ತು. ಇಂಥದ್ದೊಂದು "ಕ್ರಾಂತಿ" ಆ ಪಾತ್ರ ಅನುಭವಿಸುವ ತುಮುಲಕ್ಕೆ ಅತಿ ಸಹಜವಾದ ಹೊರಹರಿವಾಗಿದ್ದರೂ ಕೊನೆಯ ಗಳಿಗೆಯಲ್ಲಿ ಅದು ಹಿಂದಿರುಗಿ ಬಂದುಬಿಡುತ್ತದೆ, ಮತ್ತು ಅದೊಂದು ರೀತಿಯ ರಸಾತ್ಮಕ ಅಸಮಾಧಾನ/ಅಸಂತುಷ್ಟಿಯನ್ನು ಓದುಗನಲ್ಲಿ ಉಳಿಸಿಬಿಡುತ್ತವೆ. ಹಾಗಿದ್ದಮೇಲೆ ಅಂಥದ್ದೊಂದು ಸಂಘರ್ಷವನ್ನು ಕಾದಂಬರಿಯ ಸಮಸ್ಯೆಯನ್ನಾಗಿ ತೆಗೆದುಕೊಳ್ಳುವ ಅಗತ್ಯವಾದರೂ ಏನು? ಆದರೆ ನಮ್ಮ ಈ ಭಿನ್ನಾಭಿಪ್ರಾಯವೇನಿದ್ದರೂ ತಾತ್ವಿಕ ಮಟ್ಟದಲ್ಲಿ ಮಾತ್ರವೇ ಹೊರತು, ಕಾದಂಬರಿಗಳ ಕಲಾದೃಷ್ಟಿಯ ಬಗ್ಗೆ ಮಾತ್ರ ಎರಡು ಮಾತಿರಲಿಲ್ಲ.&lt;br /&gt;&lt;br /&gt;ಆದರೆ ಆವರಣದಿಂದೀಚಿನ ಕಾದಂಬರಿಗಳ ಬಗೆಗೆ ಇಷ್ಟೇ ಹೇಳಿ ಸುಮ್ಮನಾಗಲು ಬರುವುದಿಲ್ಲ. ಅವರ ಹಳೆಯ ಕಾದಂಬರಿಗಳ ಕಲಾದೃಷ್ಟಿ, ಸೂಕ್ಷ್ಮ ಪ್ರಬುದ್ಧ ಮಂಡನೆ ಇಲ್ಲಿ ಮರೆಯಾಗಿದೆ. ಪಾತ್ರಗಳ ಒಳತೋಟಿ, ಅದರ ವೈಯಕ್ತಿಕ ಸೂಕ್ಷ್ಮ ಕಳೆದುಕೊಂಡು ಎರಡು ಪಂಗಡಗಳ/ಜನಾಂಗಗಳ/ಸಮಾಜಗಳ/ಲಿಂಗಗಳ ಜೋರುಬಾಯಿಯಾಗಿ ಪರಿವರ್ತನೆಗೊಂಡಿದೆ. ಈ ಇಡೀ ಸಮಾಜಗಳ ಭಾರವನ್ನು ಕೇವಲ ಒಂದೆರಡು ದುರ್ಬಲ ಪಾತ್ರಗಳು ತಡೆದುಕೊಳ್ಳುವುದು ಸಾಧ್ಯವಾಗದೇ, ಪಾತ್ರಗಳಾಗಿ ಅವು ಕುಸಿದಿವೆ. ಪಾತ್ರವೊಂದು ಗುಣವೊಂದರ ಪ್ರತಿನಿಧಿಯಾಗಿ ಕೆಲಸಮಾಡುವುದು ಅಷ್ಟು ಸುಲಭವೂ ಅಲ್ಲ, ಮತ್ತು ಇದೇ ಮೊದಲೂ ಅಲ್ಲ. ವ್ಯಾಸರು ಇದನ್ನು ಬಹು ಯಶಸ್ವಿಯಾಗಿ ಮಾಡಿದ್ದಾರೆ; ರನ್ನ-ಪಂಪರು ಮಾಡಿದ್ದಾರೆ; ಅಷ್ಟೇಕೆ, ಸ್ವತಃ ಭೈರಪ್ಪನವರೇ ಇದನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ, ಪರ್ವದಲ್ಲಿ. ಆದರೆ ಆವರಣದೀಚೆಯ ಅವರ ಕಾದಂಬರಿಗಳಲ್ಲಿ ಈ ಕೌಶಲ ಸಂಪೂರ್ಣ ಮರೆಯಾಗಿದೆಯೆಂದೇ ಹೇಳಬೇಕು. ಅಲ್ಲಿ ಪಾತ್ರಗಳು ಪಾತ್ರಗಳಾಗಿ ಉಳಿದಿಲ್ಲ. ಅಷ್ಟೇಕೆ, ರಾತ್ರಿ ಗಂಡಹೆಂಡಿರು ಪಕ್ಕಪಕ್ಕ ಮಲಗಿದಾಗಲೂ, ಮಿಲನದ ವೇಳೆಯಲ್ಲೂ ಮಾತಾಡುವುದು ಆ ಎರಡು ದೇಹಗಳಲ್ಲ, ಎರಡು ಮನಸ್ಸುಗಳಲ್ಲ, ಬದಲಿಗೆ ಎರಡು ಸಮಾಜಗಳು, ಎರಡು ಧರ್ಮಗಳು (ಆವರಣ)! ಕಾದಂಬರಿಯಲ್ಲಿ ಭೈರಪ್ಪನವರದ್ದೇ ಛಾಪು ಹೊತ್ತು ಮೂಡಿರುವ ತಲೆದೂಗಿಸುವ ಕಥನತಂತ್ರವೂ ಈ ಅಧ್ವಾನವನ್ನು ಮುಚ್ಚುವಲ್ಲಿ ಯಶಸ್ವಿಯಾಗುವುದಿಲ್ಲ.&lt;br /&gt;&lt;br /&gt;"ನನ್ನ ದೃಷ್ಟಿ ಬಹುಜನದ ದೃಷ್ಟಿ, ಆದ್ದರಿಂದ ನನ್ನದು ಸರಿ, ಆದ್ದರಿಂದಲೇ ನಿನ್ನದು ತಪ್ಪು, ಆದ್ದರಿಂದಲೇ ನಿನ್ನದೆಂಬುದೆಲ್ಲವೂ ತಪ್ಪೇ, ನಿನ್ನ ಅಪ್ಪ, ತಾತ ಮುತ್ತಾತಂದಿರೆಲ್ಲಾ ತಪ್ಪು" ಮತ್ತು ಇನ್ನೊಂದು ರೀತಿಯಿಂದ "ನಿನ್ನ ಅಪ್ಪ, ತಾತ ಮುತ್ತಾತಂದಿರು ನಮಗೆ ಹೀಗೆ ಹೀಗೆ ಮಾಡಿದರು ( ಐತಿಹಾಸಿಕ ಪುರಾವೆ); ಆದ್ದರಿಂದ ನೀವೆಲ್ಲರೂ ನಮ್ಮೆಲ್ಲರನ್ನೂ ನಾಶ ಮಾಡಿದಿರಿ, ಮಾಡುತ್ತಿದ್ದೀರಿ, ಮಾಡುವಿರಿ; ಆದ್ದರಿಂದ ನಿಮ್ಮದೆಲ್ಲವೂ ತಪ್ಪೇ; ನಾನು ಸನಾತನ ಧರ್ಮದ ಪ್ರತಿನಿಧಿ, ನೀನು ನಮ್ಮನ್ನು ನಾಶಮಾಡಿದ ಪಾಶವೀ ಧರ್ಮದ ಪ್ರತಿನಿಧಿ" ಈ ರೀತಿಯ ವಾದಸರಣಿಗಳು ಚರ್ಚಾಸ್ಪರ್ಧೆಗೆ ಸರಿಹೊಂದಬಹುದೇ ಹೊರತು ಕಾದಂಬರಿಯಂಥ ಸೂಕ್ಷ್ಮ ವೈಯಕ್ತಿಕ ಬರವಣಿಗೆಗಲ್ಲ; ಮತ್ತು ಈ ವಾದಸರಣಿಯನ್ನು ಸಮರ್ಥಿಸಲೆಂದೇ ಸೃಷ್ಟಿಗೊಂಡ ಪಾತ್ರನಿರೂಪಣೆ ಘಟನಾವಳಿಗಳು. ಇತಿಹಾಸವೇ ಪ್ರಧಾನವಾದರೆ ಒಂದು ಸಂಶೋಧನ ಗ್ರಂಥವನ್ನು ಬರೆದರೆ ಅದಕ್ಕೊಂದು ಗಾಂಭೀರ್ಯ; ಇಲ್ಲ ವೈಯಕ್ತಿಕ ದೃಷ್ಟಿಕೋನವೇ ಪ್ರಧಾನವಾದರೆ ಅದನ್ನು ಪ್ರತಿಪಾದಿಸಿ ಒಂದು ಲೇಖನ ಪ್ರಕಟಿಸಿದರೆ ಅದರ ಬಗ್ಗೆ ಚರ್ಚಿಸಬಹುದು; ಆದರೆ ಕಾದಂಬರಿ ಬರೆದಾಗ ಅದರ ಪ್ರಥಮ ಬದ್ಧತೆ ಕಲಾದೃಷ್ಟಿಗೇ ಹೊರತು ಮತ್ತಾವುದಕ್ಕೋ ಅಲ್ಲ, ಅಲ್ಲವೇ? ಅದು ಬಿಟ್ಟು ಕೇವಲ ವೈಯಕ್ತಿಕ ದೃಷ್ಟಿಕೋನವನ್ನು "ಎಲ್ಲರೂ ಒಪ್ಪುವಂತೆ" ಪ್ರತಿಪಾದಿಸಲು ಕಾದಂಬರಿಯ ಹೊದಿಕೆಯಲ್ಲಿ ಇತಿಹಾಸವನ್ನು ತುರುಕಿದರೆ, ಅಷ್ಟಾಗಿಯೂ ಅದು ಒಂದು ದೃಷ್ಟಿಕೋನದ ಲೇಖನವಾಗಿ ಉಳಿದೀತೇ ಹೊರತು ಕಾದಂಬರಿಯಾಗುವುದಿಲ್ಲ, ಅಲ್ಲವೇ? ಹಾಗೆ ಲೇಖನವಾಗಿಯೇ ಬರೆಯುವುದಾದರೆ ಅದನ್ನು ಸಾಫ ಸೀದಾ ಹೇಳುವುದರ ಬದಲು ಕಾದಂಬರಿಯೊಂದರ ಕಲಾತ್ಮಕ ಅಸ್ಪಷ್ಟತೆ, ಮಾಯದ ಮುಸುಕು (fictionality) ಏಕೆ? ಅಂದರೆ ನಮ್ಮ ತಾತ್ವಿಕ ವಿರೋಧ, ಧರ್ಮ ಮತ್ತು ಅದರ ಸಾಮಾಜಿಕ ಆಯಾಮಗಳ ಬಗೆಗಿನ ಭೈರಪ್ಪನವರ ನಿಲುವಿನ ಬಗೆಗಲ್ಲ, ಬದಲಿಗೆ ಅದನ್ನು ಅವರು "ಕಾದಂಬರಿ"ಯನ್ನಾಗಿಸಲೆತ್ನಿಸುವ ಪರಿಯ ಬಗೆಗೆ. ಇಂಥದ್ದೊಂದು ಇತಿಹಾಸ, ವಿಚಾರ ಮತ್ತು ಕತೆಯ ಅಂಶಗಳ ಕಲಸುಮೇಲೋಗರ, ಆ ಅಂಶಗಳ ಪರಸ್ಪರ ಮೈಲಿಗೆಯಿಂದಾಗಿಯೇ ಆ ಬರಹಕ್ಕೆ ಇತಿಹಾಸಗ್ರಂಥವೊಂದರ authenticityಯನ್ನಾಗಲೀ ವೈಚಾರಿಕ ಬರಹವೊಂದರ ಗಾಂಭೀರ್ಯವನ್ನಾಗಲಿ ಕತೆಯ ಸೌಂದರ್ಯ/ಕಲಾತ್ಮಕತೆಯನ್ನಾಗಲಿ ದೊರಕಿಸಲು ವಿಫಲವಾಗುತ್ತದೆ. ಇದಕ್ಕೆ ಸರಿದೊರೆಯಾದ ಉದಾಹರಣೆಯಾಗಿ ತರಾಸು ಅವರ ಐತಿಹಾಸಿಕ ಕಾದಂಬರಿಗಳನ್ನು ನೆನೆಯೋಣ. ಅಲ್ಲೆಲ್ಲೂ ಕಾದಂಬರಿಯ ಪಾತ್ರವೊಂದು ಇಷ್ಟೆಲ್ಲಾ "ಐತಿಹಾಸಿಕ ಸಂಶೋಧನೆ"ಗಳನ್ನು ಮಾಡಿ, ತನ್ನದೇ ಕತೆಯ ಕೊನೆಯಲ್ಲಿ ತನ್ನ ಐತಿಹಾಸಿಕ ಸಂಶೋಧನೆಗಳ bibliography ಕೊಟ್ಟದ್ದು ಕಾಣಬರುವುದಿಲ್ಲ. ಇಷ್ಟಕ್ಕೂ ಇದೆಲ್ಲಾ ಚರ್ಚೆ, ಈ ಕಾದಂಬರಿಗಳ "ಕಾದಂಬರಿತನ"ವನ್ನು ಕುರಿತದ್ದೇ ಹೊರತು ಭೈರಪ್ಪನವರ ನಿಲುವು/"ಪ್ರತಿಪಾದನೆ"ಗಳ ಕುರಿತದ್ದಲ್ಲ (ಅವು ಬೇರೆಯೇ ಚರ್ಚೆಯ ವಿಷಯ).&lt;br /&gt;&lt;br /&gt;ಇನ್ನು ಅನಂತಮೂರ್ತಿಯವರ ಬಗ್ಗೆ ಬಂದರೆ, ಭೈರಪ್ಪನವರ ಬಗೆಗಿನ ಚರ್ಚೆಯಲ್ಲಿ ಅನಂತಮೂರ್ತಿಯ ಪ್ರಸ್ತಾಪ ಬರಬೇಕಾದ ಯಾವುದೇ ಸಾಹಿತ್ಯಕ ಕಾರಣಗಳೂ ನನಗಂತೂ ಕಾಣುವುದಿಲ್ಲ. ಇಬ್ಬರ ಬರಹಗಳ ದಿಕ್ಕು ದೆಸೆಗಳು ನೀತಿ-ನಿಲುವುಗಳು, ಸೊಗಸುಗಳು ಬೇರೆಯೇ. ಜಿಲೇಬಿಯೇ ರುಚಿ, ಖೀರು ಅಲ್ಲ ಎನ್ನಲಾದೀತೇ? ಭೈರಪ್ಪನವರ ನಿಲುವಿನಲ್ಲಿ ಅದೆಷ್ಟೇ ಕುಂದುಗಳಿದ್ದಾಗ್ಯೂ ನಮ್ಮ ಕನ್ನಡ ಕಾದಂಬರಿಯ ಸಂದರ್ಭದಲ್ಲಿ ಭೈರಪ್ಪನವರೊಂದು ಮೈಲಿಗಲ್ಲು ಎಂಬುದನ್ನು ಅಲ್ಲಗಳೆಯುವಂತಿಲ್ಲ. ಅಂತೆಯೇ ಸಣ್ಣ ಕತೆಗಳ ಸಂದರ್ಭದಲ್ಲಿ ಅನಂತಮೂರ್ತಿಯವರು. ಆದರೆ ಇಬ್ಬರಿಗೂ ಎಲ್ಲಿಂದೆಲ್ಲಿಯ ಹೋಲಿಕೆ? ಆನಂದಭೈರವಿಗೂ ಕಲ್ಯಾಣಿಗೂ ಹೋಲಿಕೆಯೇ? ಆದರೆ ಇವತ್ತು ಭೈರಪ್ಪನವರ ಚರ್ಚೆ ಅನಂತಮೂರ್ತಿಯವರ ಪ್ರಸ್ತಾಪವಿಲ್ಲದೇ ಪೂರ್ಣಗೊಳ್ಳುವುದೇ ಇಲ್ಲ. ಇದಕ್ಕೆ ನಾವು ಕಾಣುವ ಒಂದೇ ಅಸಾಹಿತ್ಯಕ ಕಾರಣವೆಂದರೆ, ಅನಂತಮೂರ್ತಿಯವರು ಭೈರಪ್ಪನವರ ಕಾದಂಬರಿಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು, ಅದು ವಿವಾದವಾಯಿತು, in retaliation, ಅನಂತಮೂರ್ತಿಯವರ ಸಾಹಿತ್ಯದ "ಪುನರ್ವಿಮರ್ಶೆ" ನಡೆಯಿತು, ಹೊಸ ದೃಷ್ಟಿಕೋನದಿಂದ! ಮತ್ತೆ ಎರಡೂ ಬಣಗಳೂ ವೈಯಕ್ತಿಕ ನಿಂದನೆಗಳಲ್ಲಿ ತೊಡಗಿದುವು. ಇದು ಎಷ್ಟರಮಟ್ಟಿಗೆ ಸರಿ?&lt;br /&gt;&lt;br /&gt;ಇನ್ನು specific ಆಗಿ "ಸಂಸ್ಕಾರ"ದ ಬಗ್ಗೆ ಮಾತಾಡುವುದಾದರೆ, ಸಂಸ್ಕಾರದ ಕತೆ ಅಥವ ಅದರ "ಒಳಕತೆ"ಯಲ್ಲಿ, ಹಾಗೆ ಅದನ್ನು ಬಳಸುವ ತಂತ್ರಗಾರಿಕೆಯಲ್ಲಿ ಲೇಖಕರು ಹೇಳುವ ದೂರ್ತತನವಾಗಲೀ ಅಥವ ಆ ದೂರ್ತತನ ಮಾಡುವ ಅಗತ್ಯವಾಗಲೀ ಕಾಣಬರುವುದಿಲ್ಲ. ಕತೆಯ ರೀತಿಯೇ ಅದಲ್ಲವೇ? ಹೇಳುವುದನ್ನು ಸಾಫ ಸೀದಾ ಹೇಳಿಬಿಟ್ಟರೆ ಅದು ಕತೆಯಾಗುವುದಿಲ್ಲ, ಬದಲಿಗೆ ಲೇಖನವೋ ಭಾಷಣವೋ ಇನ್ನೇನೋ ಆಗುವುದು, ಅಲ್ಲವೇ? ಆದರೆ ಇಲ್ಲಿ ಕತೆಗಾರನ ಉದ್ದೇಶ ಇದನ್ನು ಲೇಖನವೋ ಭಾಷಣವೋ ಆಗಿಸುವುದಲ್ಲ, ಬದಲಿಗೆ ಕತೆಯಾಗಿಯೇ ಉಳಿಸಿಕೊಳ್ಳುವುದು. ಮತ್ತು ಇದರಲ್ಲಿ ದೂರ್ತತನವನ್ನು ಆರೋಪಿಸುವ ಮೊದಲು ಸಂಸ್ಕಾರದ ಕತೆ ಬಂದ ಕಾಲಘಟ್ಟವನ್ನು ಗಮನಿಸಬೇಕು. ಅವತ್ತಿನ ಸಮಾಜ ಇವತ್ತಿನಷ್ಟು liberal ಆಗಿರಲಿಲ್ಲ. ಸಂಸ್ಕಾರದ "ಪ್ರತಿಭಟನೆ" ಅವತ್ತಿನ ಕಾಲಘಟ್ಟಕ್ಕಂತೂ ಖಂಡಿತಾ ಪ್ರಸ್ತುತವಾಗಿತ್ತು. ವ್ಯವಸ್ಥೆಯೇ ಬಲವಾಗಿದ್ದಾಗ ಅದರ ಬಗೆಗಿನ ಪ್ರತಿಭಟನೆ "ಲೇವಡಿ"ಯೆನ್ನಿಸಿಕೊಳ್ಳುವುದೇ? ಆದರೆ ಇವತ್ತು ಕಾಲ ಬದಲಾಗಿದೆ. ಸಮಾಜ ಹೆಚ್ಚು liberal ಆಗಿದೆ, ವ್ಯವಸ್ಥೆ ಮೊದಲಿನಷ್ಟು ಬಲವಾಗಿಲ್ಲ. ಆದ್ದರಿಂದ ಅದೇ ಕತೆ ಇವತ್ತಿನ ಕಾಲಘಟ್ಟದಲ್ಲಿ ಬಂದರೆ, ಬದಲಾದ ಬ್ರಾಹ್ಮಣ ಸಮಾಜದ ಹಿನ್ನೆಯಲ್ಲಿ ಅನಂತಮೂರ್ತಿಯವರ ಅಂಥ ಪ್ರಯತ್ನ ದೂರ್ತತನವೂ ಬ್ರಾಹ್ಮಣ ಸಮಾಜದ ಲೇವಡಿಯೂ ಖಂಡಿತ ಆಗುತ್ತಿತ್ತು, ಆದರೆ ಸಂಸ್ಕಾರದ ಅವತ್ತಿನ ಕಾಲಘಟ್ಟದಲ್ಲಿ ಅಲ್ಲ.&lt;br /&gt;&lt;br /&gt;ಇದರ ಅರ್ಥ ಅನಂತಮೂರ್ತಿಯವರ ಇಂದಿನ ಅನೇಕ ಸಾಹಿತ್ಯೇತರ ಸಾಮಾಜಿಕ ನಿಲುವುಗಳಲ್ಲಿ ದೂರ್ತತನವಿಲ್ಲವೆಂದಲ್ಲ, ಅದನ್ನು ನಾನು ಸಮರ್ಥಿಸುತ್ತೇನೆಂದೂ ಅಲ್ಲ. ಅವರ "ಅಲ್ಪಸಂಖ್ಯಾತ" ಧ್ವನಿಯನ್ನು ತಾತ್ವಿಕವಾಗಿ ನಾನು ಸಮರ್ಥಿಸಿದರೂ ಅದು ಅತಿರೇಕಕ್ಕೆ ಹೋದಾಗೆಲ್ಲಾ ಕಟುವಾಗಿ ವಿರೋಧಿಸಿದವರಲ್ಲಿ ನಾನೂ ಒಬ್ಬ. ಆದರೂ ವ್ಯಕ್ತಿಯೊಬ್ಬನಿಗೆ ಸಾರಾಸಗಟಾಗಿ ದೂರ್ತ/ಸರಳ ಎಂಬ ಹಣೆಪಟ್ಟಿ ಹಚ್ಚುವುದಾಗಲೀ ಆ "ದೂರ್ತತನ/ಸರಳತೆ"ಗಳನ್ನು ಅವನ ಎಲ್ಲಾ (ಕಾಲಘಟ್ಟಗಳ) ಬರವಣಿಗೆಗೂ ಸಾರಾಸಗಟಾಗಿ ಅನ್ವಯಿಸುವುದು ಸಾಹಿತ್ಯಕ್ಕೆ, ಸೃಜನಶೀಲತೆಗೆ ಅಪಚಾರವಲ್ಲವೇ? ಅಂಥ ಸಾಹಿತ್ಯ/ಸೃಜನಶೀಲತೆ ಅನಂತಮೂರ್ತಿಯವರದ್ದಿರಬಹುದು, ಅಥವ ಭೈರಪ್ಪನವರದ್ದಿರಬಹುದು ಅಥವ ಇನ್ನಾರದೇ ಇರಬಹುದು.&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-4865248187268467132?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/4865248187268467132/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=4865248187268467132&amp;isPopup=true' title='5 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/4865248187268467132'/><link rel='self' type='application/atom+xml' href='http://www.blogger.com/feeds/2037979210344114254/posts/default/4865248187268467132'/><link rel='alternate' type='text/html' href='http://nannabaraha.blogspot.com/2010/10/blog-post.html' title='ಸಾಂಸ್ಕೃತಿಕ ಅನ್ವೇಷಣೆಯ ಸಾಹಿತಿ---ಎಸ್. ಎಲ್. ಭೈರಪ್ಪ?'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>5</thr:total></entry><entry><id>tag:blogger.com,1999:blog-2037979210344114254.post-781348336246534083</id><published>2010-09-12T01:33:00.011+05:30</published><updated>2010-09-12T02:05:47.864+05:30</updated><category scheme='http://www.blogger.com/atom/ns#' term='೧೨. ಅರ್ಥಚಿಂತನೆ'/><title type='text'>ಪರಪ್ಪನ ಅಗ್ರಹಾರ</title><content type='html'>&lt;div align="justify"&gt;ಇಲ್ಲ, ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನ ಬಗೆಗಿನ ಲೇಖನವಲ್ಲ ಇದು.&lt;br /&gt;&lt;br /&gt;ಗೂಗಲ್ ಬಝ್ ನಲ್ಲಿ ಗೆಳೆಯ &lt;a href="http://www.google.com/profiles/116261552480996514711#buzz"&gt;ಬರತ್ ಕುಮಾರ್&lt;/a&gt; "ಪರಪ್ಪನ ಅಗ್ರಹಾರ"ದ ಮೂಲದ ವಿಶ್ಲೇಷಣೆ ಮಾಡಿದ್ದರು. ಅವರ ಪ್ರಕಾರ:&lt;br /&gt;&lt;br /&gt;ಪಾರ್ = ನೋಡಿಕೊಳ್ಳು = look after.... ಪಾರ್ + ಅಪ್ಪ =&gt; ಎಲ್ಲರನ್ನು ನೋಡಿಕೊಳ್ಳುವ ಅಪ್ಪ ==&gt; ದೇವರು&lt;br /&gt;ಪಾರಪ್ಪ = ದೇವರು = ಕಡವ&lt;br /&gt;&lt;br /&gt;ಅದಕ್ಕೆ &lt;a href="http://www.google.com/profiles/112399267580951295039#about"&gt;ಹಂಸಾನಂದಿಗಳ&lt;/a&gt; ಪ್ರತಿಕ್ರಿಯೆ ಹೀಗಿತ್ತು:&lt;br /&gt;&lt;br /&gt;ಪಾರು (ಮಾಡುವ, ಗಾಣಿಸುವ) ಅಪ್ಪ -&gt; ದಾಟಿಸುವ ಅಪ್ಪ = ದೇವರು&lt;br /&gt;&lt;/div&gt;&lt;div align="justify"&gt;&lt;/div&gt;&lt;div align="justify"&gt;ಹೀಗಿರಬಾರದೇಕೆ ? ಪಾರು ಅನ್ನೋದಕ್ಕೆ ತಮಿಳಿನಲ್ಲಿ ನೋಡು ಅನ್ನುವ ಅರ್ಥವಿದ್ದರೂ, ಕನ್ನಡದ ಆಡು ಮಾತಿನ ಬಳಕೆಯಲ್ಲಿ ಅದು ಇರುವುದು ನನಗೆ ನೆನಪಿಗೆ ಬರುತ್ತಿಲ್ಲ.&lt;br /&gt;&lt;/div&gt;&lt;div align="justify"&gt;&lt;/div&gt;&lt;div align="justify"&gt;&lt;br /&gt;ಇದೇ ರೀತಿ ಪಾರ್ವ, ಹಾರುವ -ಇಲ್ಲೂ ದಾಟು ಅನ್ನುವ ಅರ್ಥವೇ ಇರುವುದನ್ನೂ ಗಮನಿಸಬಹುದು.&lt;br /&gt;&lt;br /&gt;ಇದಕ್ಕೆ ನನ್ನ ಪ್ರತಿಕ್ರಿಯೆ ಇದಾಗಿತ್ತು:&lt;br /&gt;&lt;br /&gt;ಪಾರು ಅನ್ನುವುದಕ್ಕೆ ಕನ್ನಡದಲ್ಲೂ ನೋಡು (rather (ಕೊನೆಮುಟ್ಟಿಸುವಂತೆ) ನೋಡಿಕೋ, take care) ಅನ್ನುವುದೇ ಅರ್ಥ (ಪಾರು+ಪತ್ತೆ=ಪಾರುಪತ್ತೆ/ಪಾರುಪತ್ಯೆ). ತಮಿಳಿನಲ್ಲೂ ಇದು ಇದೇ ಅರ್ಥದಲ್ಲಿ ಬಳಕೆಯಲ್ಲಿದ್ದು ಅಮೇಲಾಮೇಲೆ ನೋಡು ಎನ್ನುವ ಸಾಮಾನ್ಯಾರ್ಥವೂ ದಕ್ಕಿದಂತೆ ತೋರುತ್ತದೆ.&lt;br /&gt;&lt;br /&gt;ಇನ್ನು ಅಪ್ಪ ಅನ್ನುವುದು ಅದರ ಹಿಗ್ಗಿಸಿದ ಅರ್ಥದಲ್ಲಿ ದೇವರು ಎಂದಾದರೂ ಅದನ್ನು ಅಷ್ಟು ಹಿಗ್ಗಿಸುವ ಅಗತ್ಯವೇ ಇಲ್ಲ ಎನ್ನಿಸುತ್ತದೆ. ಪಾರು + ಅಪ್ಪ = ಪಾರುಪತ್ತೇದಾರ, ಯಜಮಾನನ ಅಗ್ರಹಾರ, sounds more practical interpretation&lt;br /&gt;&lt;br /&gt;ಈ ಚರ್ಚೆ ನನ್ನಲ್ಲೆಬ್ಬಿಸಿದ ಆಲೋಚನಾತರಂಗಗಳ ಲೇಖನರೂಪವೇ ಇದು.&lt;br /&gt;&lt;br /&gt;ಪಾರು (=ನಾಮಪದ: ಗಡಿ/ಸೀಮೆ; ಕ್ರಿಯಾಪದ: ಗಡಿದಾಟು) ಎನ್ನುವುದು ಪಾರ ಎನ್ನುವ ಸಂಸ್ಕೃತ ಶಬ್ದದಿಂದ ಬಂದಂತೆನಿಸುತ್ತದೆ. ಇದು ಸಂಸ್ಕೃತದ "ಪರ್" ಧಾತುವಿನಿಂದ ಬಂದಿರಬೇಕು. ಪರ ಅಂದರೆ, ಹೊರಗಿನದ್ದು. ಪಾರ = "ಸ್ವ" ವನ್ನು "ಪರ"ದಿಂದ ಬೇರ್ಪಡಿಸುವ ಸೀಮಾರೇಖೆ/ಗಡಿ (ವರ-ವಾರ; ಭರ-ಭಾರ; ಧರ-ಧಾರ ಇತಿವತ್); ಅಪಾರ = ಪಾರವಿಲ್ಲದ್ದು, ಬಹುಪಾರ = ಅನೇಕ ಗಡಿಯುಳ್ಳದ್ದು/ವಿಸ್ತಾರವಾದ ಗಡಿಯುಳ್ಳದ್ದು; ವ್ಯಾಪಾರ (ವಿ+ಆಪಾರ) = ಗಡಿಯಾಚಿನ ವ್ಯವಹಾರ (ಆಮದು), ಇತ್ಯಾದಿ ಸಂಸ್ಕೃತ ಪದಗಳನ್ನು ಗಮನಿಸಿ.&lt;br /&gt;&lt;br /&gt;ಮನುಷ್ಯನ ಮೂಲಭೂತ ಅಡಚಣೆ/ಪರಿಮಿತಿಯೇ ವೇಗ. ಈ ಅಡಚಣೆಯೇ ಅವನ ಮಿತಿ/ಪಾರ. ಅದನ್ನು ದಾಟಬೇಕಾದರೆ ಮೇಲೆ ನೆಗೆಯಬೇಕು. ಆದ್ದರಿಂದ ಈ ಲಂಘನೆಯೇ "ಪಾರು"/"ಹಾರು" ಆಗಿರಬೇಕು. (ಪಾರ್ವ/ಹಾರುವ ಗಮನಿಸಿ. ಅದರ ಅರ್ಥ "ಹಾರಾಡು"ವವನಲ್ಲ, ಬದಲಿಗೆ ದಾಟುವವನು) ಆದ್ದರಿಂದ ಪಾರು ಎಂಬುದಕ್ಕೆ ಗಡಿದಾಟುವಂತೆ ನೆಗೆ/ದಾಟು ಎಂಬ ಅರ್ಥವಿದ್ದು, ಅದರಲ್ಲಿ ಬಲವೂ ವೇಗವೂ ಸೇರಿರುವುದರಿಂದ ಮುಂದೆ ಪಾರು ಎಂಬ ಪದಕ್ಕೆ ವೇಗವಾಗಿ ಚಲಿಸು ಎಂಬ ಅರ್ಥ ದೊರಕೊಂಡಂತೆ ತೋರುತ್ತದೆ. ಆದ್ದರಿಂದಲೇ ಕೇವಲ ನೆಗೆತವಲ್ಲದ ಹಕ್ಕಿಯ ಸ್ವಚ್ಛಂದ ಹಾರಾಟವೂ "ಪಾರು"/"ಹಾರು" ಎಂದೇ ಸೂಚಿತವಾಯಿತು. ಇನ್ನು ತೆಲುಗಿನ ಪಾರು = ಬಹುವೇಗವಾಗಿ ಓಡು ಎಂಬ ಪ್ರಯೋಗವನ್ನೂ ಗಮನಿಸಬಹುದು. ಇಲ್ಲೆಲ್ಲಾ ಒತ್ತು ಗಮ್ಯವನ್ನು ತಲುಪುವುದೇ.&lt;br /&gt;&lt;br /&gt;ಅದೇನೇ ಇರಲಿ, ಹೀಗೆ ಗಮ್ಯವನ್ನು ತಲುಪಿಸುವ (ಕಾಣಿಸುವ) ಜವಾಬ್ದಾರಿಗೆ ಕನ್ನಡದಲ್ಲಿ "ಪಾರಗಾಣಿಸು", "ಪಾರುಪತ್ತೆ ನೋಡು" ಇತ್ಯಾದಿ ಬಳಕೆಯಿದೆ. ಜವಾಬ್ದಾರಿ ನಿರ್ವಹಿಸುವುದಕ್ಕೆ "ನೋಡಿಕೋ, ನೋಡು" ಎಂಬ ಬಳಕೆ ತಮಿಳಿನಲ್ಲೂ ಇರುವುದರಿಂದ ಕನ್ನಡದ ಪಾರಗಾಣು ಎನ್ನುವದಕ್ಕೆ ಸಮಾನಾರ್ಥಕವಾದ "ಪಾರಂಗಾಮಿಚ್ಚು/ಪಾರಂಗಾಣ್" ಎಂಬ ಬಳಕೆ ಮುಂದೆ ಚುಟುಕಾಗಿ "ಪಾತ್ತುಕೋ/ಪಾರ್" ಎಂದಾದಂತೆಯೂ, ಅದರ "ನೋಡಿಕೋ (look after)" ಎನ್ನುವ ಅರ್ಥದಿಂದ ಮುಂದೆ ಪಾತ್ತುಕೋ ಎನ್ನುವುದರ ಧಾತುವಾದ "ಪಾರ್" ಎನ್ನುವುದಕ್ಕೆ ನೋಡು ಎಂಬ ಸಾಮಾನ್ಯಾರ್ಥ ಬಂದಂತೆಯೂ ಕಾಣುತ್ತದೆ.&lt;br /&gt;&lt;br /&gt;ಈ ಭಾಷಾಸಾಮ್ಯಗಳನ್ನು ಗಮನಿಸಿದಾಗ ತಮಿಳಿನ ಪಾರ್ ಎನ್ನುವುದರ ಇವತ್ತಿನ ಅರ್ಥ "ನೋಡು" ಮೂಲತಃ ಕನ್ನಡದಿಂದ ತಮಿಳಿಗೆ ಹೋದಂತೆಯೂ, ಹಾರು ಎನ್ನುವ ಅರ್ಥ ಕನ್ನಡ/ತೆಲಗು ದ್ರಾವಿಡಮೂಲದ್ದಾದರೂ ಭೌತಿಕ ಪದ ಸಂಸ್ಕೃತ ಮೂಲದಿಂದ ದ್ರಾವಿಡಕ್ಕೆ ಬಂದಂತೆಯೂ ಕಾಣುತ್ತದೆ. &lt;br /&gt;&lt;br /&gt;ಅಷ್ಟಾದರೂ ಇಲ್ಲೇ ಹುಟ್ಟಿ ಬೆಳೆದು ನೆಲೆನಿಂದ "ಪಾರಪ್ಪ/ಪರಪ್ಪ" ನಮ್ಮವನೇ ಎನ್ನಲಡ್ಡಿಯಿಲ್ಲ.  ಆದರೆ ಪರಪ್ಪನ ಅಗ್ರಹಾರ ನಮ್ಮದೆಂದರೆ ಮಾತ್ರ ತುಸು ಇರುಸುಮುರುಸಾಗಬಹುದೇನೋ.&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-781348336246534083?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/781348336246534083/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=781348336246534083&amp;isPopup=true' title='4 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/781348336246534083'/><link rel='self' type='application/atom+xml' href='http://www.blogger.com/feeds/2037979210344114254/posts/default/781348336246534083'/><link rel='alternate' type='text/html' href='http://nannabaraha.blogspot.com/2010/09/blog-post_12.html' title='ಪರಪ್ಪನ ಅಗ್ರಹಾರ'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>4</thr:total></entry><entry><id>tag:blogger.com,1999:blog-2037979210344114254.post-5169977277274904920</id><published>2010-09-07T01:34:00.005+05:30</published><updated>2011-04-15T00:20:48.731+05:30</updated><category scheme='http://www.blogger.com/atom/ns#' term='೦೫. ಲಹರಿ'/><title type='text'>ನಾನೇಕೆ ಬರೆಯುವುದಿಲ್ಲ</title><content type='html'>&lt;div align="justify"&gt;ನಾನು ಕೈಯಲ್ಲಿ ಪೆನ್ನೋ ಪುಸ್ತಕವೋ ಹಿಡಿದು ಎಷ್ಟುದಿನವಾಯಿತು? ತಿಂಗಳು? ವರ್ಷ?&lt;br /&gt;&lt;br /&gt;ದಿನಬೆಳಗಾದರೆ ಬೇಕಾದಷ್ಟು ಪೇಪರುಗಳನ್ನು "ಹ್ಯಾಂಡಲ್" ಮಾಡುತ್ತೇನೆ, ಪೆನ್ನು ಹಿಡಿದು ಅನೇಕ ಸಹಿ ಹಾಕುತ್ತೇನೆ, ನೋಟ್ ಪ್ಯಾಡ್ ಹಿಡಿದು ಅನೇಕ "ನೋಟು"ಗಳನ್ನು ಬರೆದುಕೊಳ್ಳುತ್ತೇನೆ, ಅಲ್ಲ, ನಾನು ಅದರ ಬಗ್ಗೆ ಮಾತಾಡುತ್ತಿಲ್ಲ. ನಾನು ಹೇಳುತ್ತಿರುವುದು serious ಆದ ಓದು-ಬರಹದ ಬಗ್ಗೆ. ಸುಮಾರು ಒಂದು ಸಾವಿರದಷ್ಟಿರುವ ನನ್ನ ಪುಸ್ತಕ ಸಂಗ್ರಹ ಎರಡು ಮೂರುಕಡೆ ಹಂಚಿಹೋಗಿದೆ, ಈ ಎರಡು-ಮೂರು ವರ್ಷದಲ್ಲಿ ನಾನು ಅದರಲ್ಲಿ ಒಂದು ಪುಸ್ತಕವನ್ನೂ ಮುಟ್ಟಿದಂತಿಲ್ಲ, ಹಾಗೆಂದು ನನ್ನ ಓದುವ ಹವ್ಯಾಸವೇನು ಬಿಟ್ಟಿಲ್ಲ. ಅಂತರ್ಜಾಲದಲ್ಲಿ ಯಾವಾಗಲೂ ಅದು ಇದು ಓದುತ್ತಲೇ ಇರುತ್ತೇನೆ. ಇನ್ನು ಬರೆಯುವ ವಿಷಯಕ್ಕೆ ಬಂದರೆ, ನಾನು ಪೆನ್ನು ಪೇಪರು ಉಪಯೋಗಿಸಿ ಬರೆದ ಕೊನೆಯ ಬರಹವೆಂದರೆ ಅದೊಂದು ಕವನ, "&lt;a href="http://nannabaraha.blogspot.com/2007/09/blog-post.html"&gt;ಶ್ರಾವಣ ಮುಗಿದಮೇಲೊಂದು ಸಂಜೆ&lt;/a&gt;", ೨೦೦೭ ಸೆಪ್ಟೆಂಬರಿನಲ್ಲಿ - ಸುಮಾರು ಹತ್ತಿರ ಹತ್ತಿರ ಮೂರು ವರ್ಷ. ಅದಾದಮೇಲೆ ಮತ್ತೆ ಎರಡು ಕವನ, ಮತ್ತು ಸುಮಾರು ಇಪ್ಪತ್ತೋ ಇಪ್ಪತ್ತೆರಡೋ ಬರಹಗಳನ್ನು 'ಬರೆ'ದೆ, ಆದರೆ ಅವೆಲ್ಲಾ ನಿಜಕ್ಕೂ ಬರೆದಿದ್ದಲ್ಲ, ನೇರವಾಗಿ ಬ್ಲಾಗಿನಲ್ಲಿ ಟೈಪು ಮಾಡಿದ್ದು! ನನ್ನ ಬರಹಗಳನ್ನೆಲ್ಲಾ ಸಂಗ್ರಹಿಸಿಡಲು ಒಂದು ಪುಸ್ತಕವನ್ನಿಟ್ಟಿದ್ದೆ. ಅದರಲ್ಲಿ ಕೊನೆಯದಾಗಿ ದಾಖಲಾಗಿರುವುದು ಈ ಕವನವಷ್ಟೇ. ಹಾಗಾದರೆ ನಿಜಕ್ಕೂ ಬರೆಯುವ ಹವ್ಯಾಸ ತಪ್ಪಿಹೋಗಿದೆಯೇ? ಬ್ಲಾಗಿಂಗ್ ಎಂಬ ಅಂತರ್ಜಾಲ ಬರಹದ ತಂತ್ರ ಜನಪ್ರಿಯಗೊಳ್ಳುತ್ತಿದ್ದಂತೆ ನಮ್ಮ ಬರಹಗಾರರನೇಕರು ಬ್ಲಾಗುಗಾರರಾಗಿಬಿಟ್ಟಿದ್ದಾರೆ. ಹೊಸ ಹೊಸ ಬ್ಲಾಗುಗಳು ಹುಟ್ಟಿಕೊಳ್ಳುತ್ತಿವೆ, ಬ್ಲಾಗಿಗರ ದೊಡ್ಡ ಪಡೆಯೇ ಸಿದ್ಧವಾಗಿದೆ. ಬರಹದ ಬಳಕೆ ತಪ್ಪಿದ್ದು ನನ್ನೊಬ್ಬನ ಅನುಭವವಲ್ಲ. ನೀವು ಇತರ ಬ್ಲಾಗಿಗರನ್ನು ಕೇಳಿನೋಡಿ, ಅವರಲ್ಲಿ ಬಹುತೇಕರ ಅನುಭವ ಇದೇ ಆಗಿರುತ್ತದೆ. ಬರೆಯುವಷ್ಟಿಲ್ಲ, ಬರೆದದ್ದನ್ನು ಹೊಡೆದುಹಾಕುವಷ್ಟಿಲ್ಲ, ಮತ್ತೊಮ್ಮೆ "ನೀಟ್" ಪ್ರತಿ ಮಾಡುವಷ್ಟಿಲ್ಲ; ಸುಮ್ಮನೇ ಮನಸ್ಸಿಗೆ ತೋಚಿದ್ದನ್ನು draft modeನಲ್ಲಿ 'ಗೀಚಿ'ಇಟ್ಟಿದ್ದರಾಯಿತು. ಮತ್ತೆ ಮನಬಂದಾಗ ಮನಬಂದಷ್ಟು ಬಾರಿ ಅದನ್ನು edit ಮಾಡಿ, ತೃಪ್ತಿಯೆನಿಸಿದಾಗ ಪ್ರಕಟಿಸಿದರಾಯಿತು. ಪತ್ರಿಕೆಗಳಿಗೆ ಕಳಿಸಬೇಕಾದರೂ ಬರೆಯಬೇಕಿಲ್ಲ. ಸುಮ್ಮನೇ copy &amp;amp; paste ಮಾಡಿ e-ಅಂಚೆಯಲ್ಲಿ ಕಳಿಸಿಬಿಟ್ಟರಾಯಿತು. ಮರುಕ್ಷಣ ಅದು ಸಂಪಾದಕನ ಬುಟ್ಟಿಯಲ್ಲಿ (ಅಥವಾ ಕಸದ ಬುಟ್ಟಿಯಲ್ಲಿ - ಅದೂ e-ಬುಟ್ಟಿಯೇ!) ಬಿದ್ದಿರುತ್ತದೆ. ಎಂದರೆ "ಹಲಗೆ ಬಳಪವ ಪಿಡಿಯದೊಂದಗ್ಗಳಿಕೆ, ಪದವಿಟ್ಟಳುಪದೊಂದಗ್ಗಳಿಕೆ... ಬಳಸಿ ಬರೆಯಲು ಕಂಠಪತ್ರದ ಉಲುಹು ಕೆಡದಗ್ಗಳಿಕೆ" ಎಂದೆಲ್ಲಾ ಕುಮಾರವ್ಯಾಸನು ಅಷ್ಟು ಹೊಗಳಿಕೊಂಡದ್ದನ್ನು ನಾವು ಪ್ರಯತ್ನವೇ ಇಲ್ಲದೇ ಸಾಧಿಸಿಬಿಟ್ಟೆವೇ?&lt;br /&gt;&lt;br /&gt;ಖ್ಯಾತ ಲೇಖಕ-ಕತೆಗಾರ ರಸ್ಕಿನ್ ಬಾಂಡ್ ರನ್ನು ಪತ್ರಕರ್ತರೊಬ್ಬರು ಕೇಳಿದರಂತೆ "ಕಂಪ್ಯೂಟರ್, ಇಂಟರ್ ನೆಟ್ ಇತ್ಯಾದಿ ತಾಂತ್ರಿಕ ಪ್ರಗತಿಯ ಈ ಯುಗದಲ್ಲೂ ನೀವಿನ್ನೂ ಒಂದು ನೋಟ್ ಪ್ಯಾಡು ಪೆನ್ಸಿಲು ಹಿಡಿದಿರುವಿರಲ್ಲ, ಅದಕ್ಕೇನು ಕಾರಣ?" ತುಸು ಯೋಚಿಸಿ ಬಾಂಡ್ ಹೇಳಿದರಂತೆ, "ನೋಡೀ, ಬರೆಯುವಾಗ ಏನೂ ಹೊಳೆಯದಿದ್ದರೆ, ನಾನು ಪೆನ್ಸಿಲಿನ ತುದಿಯನ್ನು ಬಾಯಲ್ಲಿ ಹಾಕಿ ಕಚ್ಚುತ್ತಿರುತ್ತೇನೆ, ಕಂಪ್ಯೂಟರನ್ನು ಹಾಗೆ ಕಚ್ಚಲು ಬರುವುದಿಲ್ಲ"&lt;br /&gt;&lt;br /&gt;ತುಸು ಸೂಕ್ಷ್ಮವಾಗಿ ನಿರುಕಿಸಿ ನೋಡಿದರೆ, ಬರೆಯುವ ಕ್ರಿಯೆಗೆ ಭೌತಿಕ ಸಾಧನಗಳಾದ ಪೆನ್ಸಿಲು ಪೇಪರು ಇತ್ಯಾದಿಗಳು ದೊರಕಿಸಿಕೊಡುವ ಅದೊಂದು ಬಗೆಯ ಆಪ್ಯಾಯತೆಯನ್ನು ಸೂಚಿಸುತ್ತವೆ ಈ ಮಾತುಗಳು. ಬರೆಯುವವನಿಗೆ ಪೆನ್ನು ಪೇಪರು ಕೇವಲ ಸಲಕರಣೆಯಲ್ಲ, ಆತ್ಮೀಯ ಸಂಗಾತಿ. ಅದರೊಡನೆ ನೀವು ಯಾವ ಸಲುಗೆಯನ್ನು ಬೇಕಾದರೂ ತೆಗೆದುಕೊಳ್ಳಬಹುದು. ಅದರಮೇಲೆ ನಿಮ್ಮ ಸಂಪೂರ್ಣ ನಿಯಂತ್ರಣವಿದೆ. ಅದನ್ನು ಹಿಡಿದೇ ನೀವು ಬರೆಯುವುದನ್ನು ಕಲಿತಿದ್ದೀರಿ. ಕಂಪ್ಯೂಟರಿನ ಕೀಬೋರ್ಡ್ ಮೇಲೆ ನೀವು ಹೇಗೇ ಬಡಿದರೂ ಆಯಾ ಅಕ್ಷರ ಆಯಾರೀತಿಯೇ ಅಚ್ಚಾಗುತ್ತದೆ. ಆದರೆ ನಿಮ್ಮ ಲೇಖನಿ ಹಾಗಲ್ಲ. ನಿಮ್ಮ ಕೈಬರಹ ನಿಮ್ಮ ವ್ಯಕ್ತಿತ್ವವನ್ನು ಬಿಂಬಿಸುತ್ತದೆ, ನಿಮ್ಮ ವ್ಯಕ್ತಿತ್ವ ನಿಮ್ಮ ಬರಹವನ್ನು ರೂಪಿಸುತ್ತದೆ. ಅದಕ್ಕೆಂದೇ 'ಬರಹ'ಕ್ಕೆ ನಮ್ಮ ವಿದ್ಯಾಭ್ಯಾಸಕ್ರಮದಲ್ಲಿ ಇವತ್ತಿಗೂ ಅತಿ ಪ್ರಮುಖ ಸ್ಥಾನ. ಬರಹ "ದುಂಡಗೆ"ಇಲ್ಲವೆಂದು ಕೈ ಗಿಣ್ಣಿನ ಮೇಲೆ ಹೊಡೆಯುತ್ತಿದ್ದ ನಮ್ಮ ಮೇಷ್ಟ್ರು ಇವತ್ತೂ ನಮಗೆ ಪೂಜನೀಯರು. ಬರಹದ ಬಳಕೆ ತಪ್ಪಿಹೋಗಿ ಇವತ್ತಿನ ನನ್ನ hand writing ನೋಡಿದರೆ ಮನಸ್ಸಿಗೆ ಪಿಚ್ಚೆನಿಸುತ್ತದೆ. ಬರಹವು ಭಾಷೆಯೊಡನೆಯೇ ಬೆಳೆಯಿತಲ್ಲವೇ? ವಿವಿಧ ಜನಾಂಗಗಳ ಮಾತು-ಬರಹಗಳ ಬಳಕೆಯ ಸೌಲಭ್ಯಪ್ರಜ್ಞೆಯನ್ನನುಸರಿಸಿಯೇ ತಾನೇ ಇವತ್ತು ಇಷ್ಟೊಂದು ಭಾಷೆ, ಇಷ್ಟೊಂದು ಲಿಪಿ. ಅದಕ್ಕಲ್ಲವೇ ಇಂಗ್ಲಿಷಿನ R ಮತ್ತು ದೇವನಾಗರಿಯ र ಅಷ್ಟೊಂದು ಬೇರೆಯಾಗಿ ಬೆಳೆದದ್ದು? ಅದಕ್ಕಲ್ಲವೇ ವಿವಿಧ ಭಾಷೆಗಳ ನಡುವಿನ ಇಷ್ಟೊಂದು ಸಾಮ್ಯ-ವ್ಯತ್ಯಾಸಗಳು. ಮಾತಿನಂತೆಯೇ ಬರಹ ನಿರಂತರ ಚಲನಶೀಲ. ಕಾಲದಿಂದ ಕಾಲಕ್ಕೆ, ದೇಶದಿಂದ ದೇಶಕ್ಕೆ ಪರಿವರ್ತನೆಹೊಂದುತ್ತಾ, ಎರಡು ವಿಭಿನ್ನ ಕಾಲಘಟ್ಟಗಳಲ್ಲಿ, ದೇಶಮಾನಗಳಲ್ಲಿ ಬೇರೆಯೇ ಆಗಿಬಿಡುತ್ತದೆ. ಆದ್ದರಿಂದ ಲಿಪಿಯೊಂದರ ಅವತಾರ ಜನಾಂಗವೊಂದರ ಬರೆಯುವಿಕೆಯ ವೈಶಿಷ್ಟ್ಯದ ಮೇಲೆ ಅವಲಂಬಿಸಿರುತ್ತದೆ. ಬರೆಯುವುದನ್ನು ನಿಲ್ಲಿಸಿ ಇರುವ ಲಿಪಿಯನ್ನು ಮುದ್ರಣಕ್ಕೆ ಅಳವಡಿಸಿ ಅದನ್ನು "standardise" ಮಾಡಿದ ಮೇಲೆ ಹೊಸ ಲಿಪಿಗಳು ಇನ್ನೆಲ್ಲಿ? ಅದರಿಂದಲೇ ಬಹುಶಃ ಮುದ್ರಣ ಮಾಧ್ಯಮ ಅಸ್ತಿತ್ವಕ್ಕೆ ಬಂದಮೇಲೆ ಮತ್ತಾವುದೂ ಹೊಸ ಲಿಪಿ ಬೆಳೆಯಲೇ ಇಲ್ಲವೇನೋ, ಬೆಳೆಯುವುದೂ ಇಲ್ಲವೇನೋ!&lt;br /&gt;&lt;br /&gt;ಒಂದು ಕಂಪ್ಯೂಟರು ಸಾವಿರ ಪುಸ್ತಕಗಳನ್ನು ಅಡಗಿಸಿಕೊಂಡಿರಬಹುದು, ಆದರೆ ಅದನ್ನು ಪುಸ್ತಕವೆನ್ನಲಾದೀತೇ? ಸಾವಿರ ಪುಸ್ತಕಗಳನ್ನು ಹೊದಿಕೆ ಹೊಚ್ಚಿ ಒಪ್ಪಗೊಳಿಸಿ ಶೋಕೇಸಿನಲ್ಲಿಡುವಂತೆ ಕಂಪ್ಯೂಟರನ್ನು ಇಡಲಾದೀತೇ? ಕಂಪ್ಯೂಟರು ಯಾರಬಳಿಯಾದರೂ ಇರಬಹುದು. ಆದರೆ ಅದರ ಹೂರಣ ಹೊರಗೆ ಕಾಣುತ್ತದೆಯೇ? ಅದರಲ್ಲಿ ಪುಸ್ತಕಗಳೇ ಇರಬಹುದು, ಕೆಲಸಕ್ಕೆ ಬಾರದ ಮತ್ತೇನೇ ಇರಬಹುದು, ಅದೇನಿದ್ದರೂ ಅದು ಕಂಪ್ಯೂಟರ್ ಆಗಿಯೇ ಉಳಿಯುತ್ತದೆಯೇ ಹೊರತು ಅದರ ಹೂರಣವೇ ಅದಾಗಲಾರದು. ಇವತ್ತಿಗೂ ನಾವು ಸರಸ್ವತಿಯೆಂದು ಪುಸ್ತಕವನ್ನು ಪೂಜಿಸುತ್ತೇವೆಯೇ ಹೊರತು ಕಂಪ್ಯೂಟರನ್ನಲ್ಲ. ಕಂಪ್ಯೂಟರಿನ ಬಳಕೆಯಿಲ್ಲದ ನನ್ನ ಲೇಖಕಮಿತ್ರರೊಬ್ಬರು ಅವರ ಎರಡುಸಾವಿರ ಪುಸ್ತಕಗಳ ಲೈಬ್ರರಿಯಲ್ಲಿ (ಸದಾ ಸ್ವಚ್ಛ) ಟೇಬಲಿನ ಮೇಲೆ ಲಕ್ಷಣವಾಗಿ ಒಂದು ಹದಿನೈದಿಪ್ಪತ್ತು ಬಿಳೀ ಹಾಳೆಗಳನ್ನೊಳಗೊಂಡ ಒಂದು ಬರಹದ ಪ್ಯಾಡ್ ಮತ್ತು ಒಂದು ಪೆನ್ನು ಸಿದ್ಧವಾಗಿ ಇಟ್ಟಿರುತ್ತಾರೆ. ಅಲ್ಲಿ ಕುಳಿತು ಬರೆಯುವುದೇ ಒಂದು ಆನಂದ (ತಲೆಗೆ ಏನಾದರು ಹೊಳೆದರೆ). ಹೀಗೆ ಹೇಳುವಾಗ ನ್ಯೂಸ್ ಪೇಪರಿನ ಅನಿವಾರ್ಯತೆ ಕುರಿತ ಜಾಹೀರಾತೊಂದು ನೆನಪಿಗೆ ಬರುತ್ತದೆ. ನ್ಯೂಸ್ ಪೇಪರನ್ನು ಶೌಚಾಲಯದಲ್ಲಿ ಕೂಡ ಕೂತು ತೆರೆದು ಓದಬಹುದು, ಆದರೆ e-ಪತ್ರಿಕೆಯನ್ನು ಹಾಗೆ ಓದಬರುವುದಿಲ್ಲ ಎನ್ನುತ್ತದೆ ಆ ಜಾಹೀರಾತು (ಅಪವಾದವೆಂದರೆ, ನನ್ನ ಸಹೋದ್ಯೋಗಿಯೊಬ್ಬ ಲ್ಯಾಪ್ ಟಾಪ್ ತೆಗೆದುಕೊಂಡು ಶೌಚಕ್ಕೆ ಹೋಗಿ ಅಲ್ಲೇ ಕೂತು ದಿನ'ಪತ್ರಿಕೆ' ಓದಿ ಮುಗಿಸಿ ಬರುತ್ತಿದ್ದನೆನ್ನಿ).&lt;br /&gt;&lt;br /&gt;ಅದೆಷ್ಟೇ ಅನುಕೂಲವಾದರೂ ಈ ಕಂಪ್ಯೂಟರ್, ಲ್ಯಾಪ್ ಟಾಪ್, ಇತ್ಯಾದಿ ಸಾಧನಗಳು ನಿಮ್ಮಿಂದ ಅದೊಂದುಬಗೆಯ 'ಮರ್ಯಾದೆ'ಯನ್ನು ನಿರೀಕ್ಷಿಸುತ್ತದೆ. ಲ್ಯಾಪ್ ಟಾಪ್ ಅನ್ನು ಎಲ್ಲೆಂದರಲ್ಲಿ ಹೊತ್ತೊಯ್ಯುವಂತಿಲ್ಲ; ಅದಕ್ಕೆ ವಿದ್ಯುತ್ ಸರಬರಾಜು ಬೇಕು, ಅದಿಲ್ಲದಿದ್ದರೂ ಅದರ ಬ್ಯಾಟರಿ ಜೀವನ ಒಂದೋ ಎರಡೋ ಗಂಟೆಗಳು. ಅಷ್ಟರೊಳಗೆ ನಿಮ್ಮ 'ಓದು/ಬರಹ'ದ ಕರ್ಮವನ್ನು ಮುಗಿಸಿ ಬರಬೇಕು; ಇಲ್ಲವೆಂದರೆ ಲ್ಯಾಪ್ ಟಾಪ್ ನೊಂದಿಗೆ ಅದರ ಸಕಲ ಪರಿಕರಗಳನ್ನೂ ಹೊತ್ತೊಯ್ಯಬೇಕು, ಹೋದರೂ ಅಲ್ಲೆಲ್ಲಾದರೂ ವಿದ್ಯುತ್ ಪೂರೈಕೆ ಇರುವ ಜಾಗೆಯಲ್ಲೇ ಕುಳಿತು ಬರೆಯಬೇಕು; ನಮ್ಮಿಷ್ಟಬಂದಂತೆ ಬೆಟ್ಟವೋ, ಕಾಡೋ ನದಿಯೋ ಎಲ್ಲೆಂದರೆ ಅಲ್ಲಿ ಕೂಡುವಂತಿಲ್ಲ. ಅದರಲ್ಲೂ, ಅದನ್ನು ಎಲ್ಲೆಂದರೆ ಅಲ್ಲಿ ಇಡುವಂತಿಲ್ಲ. ಟೇಬಲ್ಲೇ ಆಗಬೇಕು, ಇಲ್ಲವೆಂದರೆ ನಿಮ್ಮ ತೊಡೆ; ಅದನ್ನು ಇಡುವ ರೀತಿಯೋ ಅಷ್ಟೇ - ಅದರ ಫ್ಯಾನಿನ ಗಾಳಿಗೆ ಅಡಚಣೆ ಬರಬಾರದು, ಇಲ್ಲವೆಂದರೆ ಲ್ಯಾಪ್ ಟಾಪ್ ಬಿಸಿಯೇರಿ ನಿಂತೇಹೋಗಿಬಿಡುತ್ತದೆ. ಬರಹದ ಸಿದ್ಧತೆಯೇ ಇಷ್ಟು ಔಪಚಾರಿಕವಾಗಿಬಿಟ್ಟರೆ, ಬರಹ ಹೊಮ್ಮುವುದೆಂತು? ಈ ಬರಹದ ಸ್ಪೂರ್ತಿಯೋ, ಬೇರೆಲ್ಲ ಸ್ಪೂರ್ತಿಗಳಂತೆಯೇ ಅದೂ ಕೂಡ, ಹೊತ್ತಿಲ್ಲ ಗೊತ್ತಿಲ್ಲ. ಮನಸ್ಸಿಗೆ ಬಂದಾಗ ಮೇಲೇರಿ ಸವಾರಿ ಮಾಡುತ್ತದೆ. ಆಗ ಬಂದ ಹದ ಮತ್ತೊಮ್ಮೆ ಬರದು. "ಸದಮಲ ಜ್ಞಾನದ ಕುದಿ ಉಕ್ಕಿ ಬರುವಾಗ ನದರಿಟ್ಟು ನಿನ್ನೊಳು ಸದಮಲ ತತ್ವದಿ ಬರಕೋ ಪದಾ ಬರಕೋ" ಅನ್ನುತ್ತಾನೆ ಶಿಶುನಾಳ ಶರೀಫ. ಅದನ್ನು ಗುರುತು ಹಾಕಿಕೊಳ್ಳಬೇಕೆಂದು ಲ್ಯಾಪ್ ಟಾಪ್ ಶುರುಮಾಡುತ್ತಾ ಕುಳಿತುಕೊಳ್ಳುವುದುಂಟೇ? ಆದರೆ ಪೇಪರು ಪೆನ್ಸಿಲಿನ ವಿಷಯ ಹಾಗಲ್ಲ. ಅದನ್ನು ಪಕ್ಕದಲ್ಲೇ ಇಟ್ಟುಕೊಳ್ಳಬಹುದು, ಇಲ್ಲದಿದ್ದರೂ ಎದ್ದುಹೋಗಿ ಒಂದು ಪೇಪರು ಪೆನ್ಸಿಲು ತಂದು ಬರೆದುಕೊಳ್ಳಬಹುದು. ಪೇಪರಿನ ಕಂತೆಯನ್ನು ಕಿಸೆಯಲ್ಲಿ ತುರುಕಿಕೊಂಡು, ಪೆನ್ಸಿಲನ್ನು ಕೊನೆಗೆ ಕಿವಿಯಲ್ಲಿ ಕೂಡ ಸಿಕ್ಕಿಸಿಕೊಂಡು ಎಲ್ಲಿ ಬೇಕಾದರೂ ಹೋಗಬಹುದು. ನೀವು ಬರೆಯಲೆಂದೇ ಎಲ್ಲೂ ಹೋಗಬೇಕಿಲ್ಲ, ಹೋದಮೇಲೆ ಬರೆಯಲೂ ಬೇಕಿಲ್ಲ. ಸುಮ್ಮನೆ ಹೊರಗೆ ಹೋಗುವಾಗ ಇವನ್ನು ಒಯ್ದರೆ ಆಯಿತು. ಬರುವಾಗ ತಂದರೆ ಆಯಿತು. ಡಿವಿಜಿಯವರ ಜ್ಞಾಪಕ ಚಿತ್ರಶಾಲೆಯಲ್ಲೋ ಹಕ್ಕಿಯ ಪಯಣ ಸರಣಿಯಲ್ಲೋ ಎಲ್ಲೋ ಓದಿದ ಪ್ರಸಂಗ. ಖ್ಯಾತ ಸಂಗೀತವಿದ್ವಾಂಸರೊಬ್ಬರು ಯಾವಾಗಲೂ ತಮ್ಮೊಡನೆ ಒಂದು ಕಟ್ಟು ಪೇಪರು ಪೆನ್ಸಿಲು ಒಯ್ಯುತ್ತಿದ್ದರಂತೆ. ಯಾವುದೋ ಸೊಗಸಾದ ಪಲುಕೋ ಸಂಗ್ತಿಯೋ ನೆರವಲೋ ಎತ್ತುಗಡೆಯೋ ಹೊಳೆದರೆ ಅದನ್ನು ಅಲ್ಲಿಯೇ ಗುರುತು ಹಾಕಿಕೊಳ್ಳುವುದು, ಅದನ್ನೇ ಪದೇಪದೇ ಪಲುಕುತ್ತಾ ಗಟ್ಟಿಮಾಡಿಕೊಳ್ಳುವುದು, ಅದನ್ನು ಮುಂದಿನ ಸಂಗೀತ ಕಚೇರಿಯಲ್ಲಿ ಬಳಸುವುದು ಅವರ ವಾಡಿಕೆ. ಹೀಗೊಮ್ಮೆ ಹೊರಗೆ ಹೋದಾಗ ಅವತ್ತು ಎಂದೂ ಇಲ್ಲದ ಅದ್ಭುತವಾದ ರಾಗಸಂಚಾರವೊಂದು ಹೊಳೆದುಬಿಟ್ಟಿದೆ; ವಾಡಿಕೆಯಂತೆ ಬರೆದುಕೊಳ್ಳಲು ಪೇಪರು ಪೆನ್ಸಿಲು ಹುಡುಕುತ್ತಾರೆ, ಆದರೆ ಅವತ್ತೇ ಅದನ್ನು ಮರೆತಿರಬೇಕೇ? ಸಂಚಾರದ ನಡೆಯೋ ಕ್ಲಿಷ್ಟಾತಿ ಕ್ಲಿಷ್ಟ, ನೆನಪಿನಲ್ಲೂ ಉಳಿಯುವುದಲ್ಲ, ಬರೆದುಕೊಳ್ಳೋಣವೆಂದರೆ ಪೇಪರು ಪೆನ್ನು ಇಲ್ಲ. ಚಡಪಡಿಸಿ ಹೋದರಂತೆ. ಕೊನೆಗೆ ಇವರ ಪಾಡು ಗಮನಿಸಿದ ಯಾರೋ ಸಹೃದಯರು ಅದೆಲ್ಲಿಂದಲೋ ಒಂದು ಪೇಪರು ಪೆನ್ಸಿಲು ಸಂಪಾದಿಸಿ ತಂದಿತ್ತ ಮೇಲೇ ಸಮಾಧಾನ ಆ ವಿದ್ವಾಂಸರಿಗೆ. ಈ ಸ್ಪೂರ್ತಿದೇವತೆಯರ ಉಪಟಳವೇ ಹಾಗೆ. ಅವರು ಬಂದಾಗ ನೀವು ತಯಾರಾಗಿರಬೇಕೇ ಹೊರತು ನಿಮಗೆ ಬೇಕಾದಾಗ ಅವರು ಬರುವುದಿಲ್ಲ. ಗೆಳೆಯ ಜಯಂತರು ಅಲ್ಲೂ hifi technology ಬಿಟ್ಟುಕೊಡರು. ಹೀಗೆ "ಸದಮಲ ಜ್ಞಾನದ ಕುದಿ ಉಕ್ಕಿ ಬರುವಾಗ" ಅದನ್ನು ಅವರು ಮೊಬೈಲಿನಲ್ಲಿ ನಮೂದಿಸಿಕೊಳ್ಳುತ್ತಾರಂತೆ, ಮತ್ತೆ ಯಾವಾಗಲಾದರೂ lap top ಗೆ ವರ್ಗಾಯಿಸಿದರಾಯಿತು! ನಾನಂತೂ ಇನ್ನೂ ತಾಂತ್ರಿಕವಾಗಿ ಅಷ್ಟು ಮುನ್ನಡೆ ಸಾಧಿಸಿಲ್ಲ; ಲ್ಯಾಪ್ ಟಾಪಿನಲ್ಲಿ ಟೈಪು ಮಾಡಿ ಒಗ್ಗಿದ ನನ್ನ ಬೆರಳಿಗೆ ಇನ್ನೂ ಮೊಬೈಲಿನ ಅಕ್ಷರಗಳು ಒಗ್ಗಿಲ್ಲ, ಇರಲಿ.&lt;br /&gt;&lt;br /&gt;ಕಾವ್ಯದಷ್ಟು ಸೃಜನಶೀಲವಲ್ಲದ (ಲೇಖನ, ಪ್ರಬಂಧ, ವಿಚಾರ ಎಂದಿಟ್ಟುಕೊಳ್ಳೋಣ) ಬರಹಕ್ಕೆ ಬೇಕಾದ ಸಾಧನ ಸಲಕರಣೆಗಳೇ ಬೇರೆ. ಅದಕ್ಕೆ ಸ್ಫೂರ್ತಿಯ ಅಂಶ ಕಡಿಮೆ. ಅಲ್ಲಿ ವಿಚಾರದ ಪ್ರಖರತೆ, ಹರಿವು, ಸುಸಂಬದ್ಧತೆ ಮುಖ್ಯವೇ ಹೊರತು ಭಾವದ ತೀವ್ರತೆಯಲ್ಲ. ಅದಕ್ಕೆ ಈಗಾಗಲೇ ಓದುಗರ ಗುಂಪೊಂದಿದೆ. ಬರಹಗಾರ ಆ ಗುಂಪನ್ನು ಮನಸ್ಸಿನಲ್ಲಿಟ್ಟೇ ತನ್ನ ವಾದಸರಣಿಯನ್ನು ಮಂಡಿಸುತ್ತಾನೆ. ಅದು ಹುಟ್ಟುವುದು ಅವನ ಮನಸ್ಸಿನಲ್ಲಾದರೂ ಬೆಳೆಯುವುದು ಗುಂಪಿನ ಮಧ್ಯೆಯೇ. ಆ ದೃಷ್ಟಿಯಿಂದ ಅದು ಬಹಿರ್ಮುಖಿ. ಆದ್ದರಿಂದಲೇ ಲೇಖನವೊಂದಕ್ಕೆ ಸ್ಫೂರ್ತಿಗಿಂತಾ ಪ್ರಯತ್ನ ಮುಖ್ಯವಾಗುತ್ತದೆ, ಆದರೆ ಕಾವ್ಯಕ್ಕೆ ಸ್ಫೂರ್ತಿಯೇ ಮುಖ್ಯ (ಅದನ್ನು ಅಲಂಕರಿಸುವಲ್ಲಿ ಪ್ರಯತ್ನವಿದ್ದರೂ, ಕಾವ್ಯದ ಜೀವವಿರುವುದು ಸ್ಫೂರ್ತಿಯಲ್ಲೇ). ಆದ್ದರಿಂದ ನೀವು ಕಂಪ್ಯೂಟರಿನಮುಂದೆಯೋ ಪೆನ್ನು ಪೇಪರು ಹಿಡಿದೋ ದಿನಗಟ್ಟಲೆ ಕುಳಿತು ಪುಟಗಟ್ಟಲೆ ಲೇಖನ ಬರೆಯಬಹುದು, ಆದರೆ ಕಾವ್ಯವನ್ನಲ್ಲ. ಇನ್ನು ಕತೆಯ ವಿಷಯ ನನಗೆ ಗೊತ್ತಿಲ್ಲ. ಕತೆಯೊಂದು ಮನಸ್ಸಿನ ಗಜಗರ್ಭದಲ್ಲಿ ೧೨ ವರ್ಷ ಕಳೆದು ಅದೆಲ್ಲೋ ಕರಗಿಯೇ ಹೋಯಿತು. ಮತ್ತೊಂದು ಕತೆ ತುಸುಕಾಲ ಸೊಗಸಾಗಿ ಬರೆಯಿಸಿಕೊಂಡಿತಾದರೂ ಅದೇಕೋ ಮುಂದುವರೆಯಲೊಲ್ಲದು. ಅದೂ ಕಾವ್ಯದಂತೆಯೇ ಸ್ಫೂರ್ತಿಜನ್ಯವಾದರೂ ಕಾವ್ಯದಂತೆ ಒಮ್ಮೆ ಮಿಂಚಿ ಮರೆಯಾಗಿಬಿಡುವುದಲ್ಲ. ಸ್ಫೂರ್ತಿ ಕತೆಗೆ ಕಾಲಿದ್ದಂತೆ. ಅದು ಉದ್ದಕ್ಕೂ ಹೊಳೆಯುತ್ತಲೇ ಹೋಗಬೇಕು. ಜೊತೆಗೆ ಅದಕ್ಕೆ ಗದ್ಯದ ಸುಸಂಬದ್ಧತೆಯೂ (ಅದಕ್ಕೆ ಬೇಕಾದ ನಿರಂತರ ಪ್ರಯತ್ನವೂ) ಜೊತೆಗೆ ತನ್ನದೇ ಆದ ತಂತ್ರಗಾರಿಕೆಯೂ ಬೇಕು. ಆದರೆ ಕಾವ್ಯ ಹಾಗಲ್ಲ. ಯಾವುದೋ ಘಳಿಗೆ ಮಿಂಚಿ ಮರೆಯಾಗುತ್ತದೆ. ಅದನ್ನು ಹಿಡಿದಿಟ್ಟುಕೊಂಡಿರೋ ಸರಿ, ಇಲ್ಲದಿದ್ದರೆ ಇಲ್ಲ. ಅದು ಒಂದು ಸಲಕರಣೆಯಾಗಿ ನಿಮ್ಮಿಂದ ಬಯಸುವುದು, ಹೊಳೆದಾಗ ಗುರುತು ಹಾಕಿಕೊಳ್ಳಲು ಕೇವಲ ಒಂದು ಸೀಸದ ಕಡ್ಡಿ ಮತ್ತು ಕಾಗದದ ತುಂಡು ಮಾತ್ರ. ಯಾರೋ ಲೇಖಕಿಯೊಬ್ಬರ ಪುಟ್ಟ ಕವನವೊಂದರಲ್ಲಿ (ಕವನವೋ ಕತೆಯೋ ನೆನಪಿಲ್ಲ, ಲೇಖಕಿಯ ಹೆಸರೂ ನೆನಪಿಲ್ಲ) ಅದರ ನಾಯಕಿ ತನ್ನ ಬ್ರಾ ದ ಸ್ಟ್ರಾಪಿನ ಮೇಲೆ ಕವನದ ಸಾಲೆರಡನ್ನು ಬರೆದಿಟ್ಟು ಅದನ್ನು ಒಗೆದಂತೆಲ್ಲಾ ಕರಗುವ ಆ ಸಾಲುಗಳನ್ನು ನೋಡುತ್ತಾ ವಿಷಾದವನ್ನನುಭವಿಸುತ್ತಾಳೆ. ಸಂವೇದನೆಯ ಅನೇಕ ಸ್ತರಗಳನ್ನೊಳಗೊಂಡ ಆ ಪ್ರತಿಮೆ ನನಗೆ ತುಂಬಾ ಹಿಡಿಸಿತು. ಕಾವ್ಯವೊಂದು ಹುಟ್ಟುವುದು ಕವಿಯ ಅತ್ಯಂತ ಖಾಸಗಿ ಕ್ಷಣದಲ್ಲಿ, ಬೆಳೆಯುವುದು ಅವನ/ಳ ಏಕಾಂತದಲ್ಲಿ, ಸೂಕ್ಷ್ಮ ಸಂವೇದನೆಗಳಲ್ಲಿ. ಅಲ್ಲಿ ಅವನಿಗೆ ಓದುಗರಿಲ್ಲ, ಚಪ್ಪಾಳೆಗಳಿಲ್ಲ, ಸ್ಪರ್ಧೆಯಿಲ್ಲ, ಅದನ್ನವನು ಯಾವ ಪತ್ರಿಕೆಗೂ ಕಳಿಸಬೇಕಿಲ್ಲ, ಬ್ಲಾಗಿನಲ್ಲೂ ಪ್ರಕಟಿಸಬೇಕಿಲ್ಲ. ಅಲ್ಲಿ ಬೇರೆ ಯಾರೂ ಇಲ್ಲದಿರುವುದರಿಂದ ಅವನು ಸರ್ವತಂತ್ರಸ್ವತಂತ್ರ. ಮನಕ್ಕೆ ಬಂದದ್ದನ್ನು ಬರೆಯಬಹುದು. ಚಂದ ಕಂಡದ್ದನ್ನು ಉಳಿಸಿಕೊಳ್ಳಬಹುದು. ಲಕ್ಷಣಕ್ಕೆ ಪ್ರಾಸ, ಲಯ, ಛಂದಸ್ಸುಗಳೇನಿದ್ದರೂ ಹೊರಗೆ ತೋರಿಸುವ ಅಲಂಕಾರ ಅಷ್ಟೇ. ಕಾವ್ಯ ಆಗತಾನೇ ಹುಟ್ಟಿದ ಮಗುವಿನಂತೆ, ಬೆತ್ತಲೆ. ಅಲಂಕಾರ ಆಮೇಲೆ. ಅದನ್ನು ಅಲ್ಲಿ ಇಲ್ಲಿ ಪ್ರಕಟಿಸುವುದೋ, ಪ್ರದರ್ಶಿಸುವುದೋ ಆಮೇಲೆ. ಈ ಸೃಜನದ ಏಕಾಂತಕ್ಕೆ, ಧ್ಯಾನಕ್ಕೆ, ತಾದಾತ್ಮ್ಯಕ್ಕೆ ಪೆನ್ನು ಪೇಪರಿನಂತಹ ಸುಲಭ ಸರಳ ಸಲಕರಣೆಗಳೇ least disturbing ಎಂದು ನನ್ನ ಅನಿಸಿಕೆ.&lt;br /&gt;&lt;br /&gt;ಈ ದಿಕ್ಕಿನಲ್ಲಿ ಯೋಚಿಸುತ್ತಾ ನನ್ನದೇ ಬರಹಗಳನ್ನು ಗಮನಿಸುತ್ತಿದ್ದಾಗ ಮತ್ತೊಂದು ಅಂಶ ನನ್ನ ಗಮನಕ್ಕೆ ಬಂತು. ಮೇಲೆ ತಿಳಿಸಿದ ಸೆಪ್ಟೆಂಬರು ೨೦೦೭ ರ ವರಿಗಿನ ಕವನಗಳೆಲ್ಲಾ ಹಳೆಯವು, ಕಂಪ್ಯೂಟರಿನ ಬಳಕೆ ಅಷ್ಟಾಗಿ ಇಲ್ಲದ ಕಾಲದಲ್ಲಿ ಬರೆದು ಆಮೇಲೆ ಬ್ಲಾಗಿನಲ್ಲಿ ಹಾಕಿದ್ದು. ಸೆಪ್ಟೆಂಬರ್ ೨೦೦೭ರ ಮೇಲೆ ಮೇಲೆ ನಾನು ಬರೆದದ್ದು ಕೇವಲ ಎರಡೇ ಎರಡು ಕವನ, ಅದೂ ನನಗೆ ಚೆನ್ನಾಗಿ ನೆನಪಿರುವಂತೆ ಎಲ್ಲೋ ಪೇಪರಿನಮೇಲೆ ಗೀಚಿ ಇಟ್ಟುಕೊಂಡಿದ್ದು, ಬಿಡುವಾದಾಗ ಪರಿಷ್ಕರಿಸಿ ಬ್ಲಾಗಿಗೆ ಹಾಕಿದ್ದು. ಅದು ಬಿಟ್ಟರೆ ಆ ನಂತರ ನಾನು ಬರೆದದ್ದೆಲ್ಲಾ (ಅಷ್ಟೊಂದು ಸೃಜನಶೀಲವೆನ್ನಲಾಗದ) ಲೇಖನಗಳೇ! ಅವಕ್ಕೆ ಬರೆದು, ಹೊಡೆದು, ಹರಿದುಹಾಕುವ ಪೆನ್ನು ಪೇಪರಿಗಿಂತ, ಕಟ್ ಕಾಪಿ ಪೇಸ್ಟ್ ಸಾಮರ್ಥ್ಯವನ್ನೊಳಗೊಂಡ ಕಂಪ್ಯೂಟರೇ ಸುಲಭವೆನ್ನಿಸಿದ್ದೂ ನಿಜ, ಅದನ್ನು ಕೂಡಲೇ ಬ್ಲಾಗಿನಲ್ಲಿ ಪ್ರಕಟಿಸುವ ಅನುಕೂಲವಿದ್ದದ್ದೂ ನಿಜ.&lt;br /&gt;&lt;br /&gt;ಸ್ಫೂರ್ತಿಗಾಗಿ ಧ್ಯಾನಿಸುವುದಕ್ಕಿಂತಾ ಸುಮ್ಮನೇ ಕುಳಿತು ಯೋಚಿಸಿ ಬರೆಯುವುದು ನನಗೀಗ ಸುಲಭವಾದ್ದರಿಂದ ಸ್ಪೂರ್ತಿಯನ್ನಪೇಕ್ಷಿಸುವ ಕಾವ್ಯ ಹಿಂದೆ ಸರಿದು ಬರಹಗಳ ಹರಿವು ಮುಂಚೂಣಿಗೆ ಬಂತೇ? ಅಥವಾ ಕಾವ್ಯದ ಬುಗ್ಗೆ ಸೊರಗಿದ್ದರ ಕೊರತೆಯನ್ನು ನೀಗಲೆಂದೇ ಇಷ್ಟೆಲ್ಲಾ ಬರೆಯುತ್ತಿದ್ದೇನೆಯೇ? ತುಸು ದಿನ ಬರೆಯುವುದು ಬಿಟ್ಟರೆ ಮತ್ತೆ ನಾನು ಕಾವ್ಯದ ದಾರಿಗೆ ಹೊರಳಿಕೊಳ್ಳಬಹುದೇ? ಪ್ರಶ್ನೆಗಳು ಹಲವು. ಉತ್ತರ ಕಂಡುಕೊಳ್ಳಬೇಕು.&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-5169977277274904920?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/5169977277274904920/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=5169977277274904920&amp;isPopup=true' title='20 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/5169977277274904920'/><link rel='self' type='application/atom+xml' href='http://www.blogger.com/feeds/2037979210344114254/posts/default/5169977277274904920'/><link rel='alternate' type='text/html' href='http://nannabaraha.blogspot.com/2010/09/blog-post.html' title='ನಾನೇಕೆ ಬರೆಯುವುದಿಲ್ಲ'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>20</thr:total></entry><entry><id>tag:blogger.com,1999:blog-2037979210344114254.post-1317552043231747943</id><published>2010-08-09T06:35:00.001+05:30</published><updated>2010-08-09T06:39:03.467+05:30</updated><category scheme='http://www.blogger.com/atom/ns#' term='೯೯. ಇತರ ಬ್ಲಾಗ್ ಬರಹ ಸೇರ್ಪಡೆಗಳು'/><title type='text'>ಗೀತಾವಿಚಾರ ಲಹರಿ: ಸೇನಯೋರುಭಯೋರ್ಮಧ್ಯೇ...</title><content type='html'>ಇಲ್ಲಿ ಕ್ಲಿಕ್ ಮಾಡಿ&lt;br /&gt;&lt;br /&gt;&lt;a href="http://geethavicharalahari.blogspot.com/2010/08/blog-post.html"&gt;http://geethavicharalahari.blogspot.com/2010/08/blog-post.html&lt;/a&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-1317552043231747943?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/1317552043231747943/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=1317552043231747943&amp;isPopup=true' title='0 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/1317552043231747943'/><link rel='self' type='application/atom+xml' href='http://www.blogger.com/feeds/2037979210344114254/posts/default/1317552043231747943'/><link rel='alternate' type='text/html' href='http://nannabaraha.blogspot.com/2010/08/blog-post_09.html' title='ಗೀತಾವಿಚಾರ ಲಹರಿ: ಸೇನಯೋರುಭಯೋರ್ಮಧ್ಯೇ...'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>0</thr:total></entry><entry><id>tag:blogger.com,1999:blog-2037979210344114254.post-8570905555914161088</id><published>2010-08-08T06:38:00.006+05:30</published><updated>2010-08-20T02:49:55.492+05:30</updated><category scheme='http://www.blogger.com/atom/ns#' term='೧೦. ವ್ಯಕ್ತಿಗಳು'/><title type='text'>ಕಿ ರಂ ನಾಗರಾಜ್ ಇನ್ನಿಲ್ಲ !</title><content type='html'>&lt;a href="http://3.bp.blogspot.com/_piVpH4odgRA/TF4HufnxcXI/AAAAAAAAAsM/5tga0TYD3us/s1600/kiram.bmp"&gt;&lt;img id="BLOGGER_PHOTO_ID_5502844290037018994" style="DISPLAY: block; MARGIN: 0px auto 10px; WIDTH: 333px; CURSOR: hand; HEIGHT: 383px; TEXT-ALIGN: center" alt="" src="http://3.bp.blogspot.com/_piVpH4odgRA/TF4HufnxcXI/AAAAAAAAAsM/5tga0TYD3us/s400/kiram.bmp" border="0" /&gt;&lt;/a&gt;&lt;br /&gt;&lt;div align="justify"&gt;ದಿಗ್ಭ್ರಮೆಯಾಗಿದೆ. ಇದಕ್ಕೆ ಕಾರಣವೂ ಇಲ್ಲದಿಲ್ಲ. ನೆನ್ನೆ ಸಂಜೆಯಷ್ಟೇ ಗೆಳೆಯ ಶ್ರೀಕಾಂತರೊಡನೆ ಮಾತಾಡುತ್ತಾ ಮಾತು ಕಿ ರಂ ಬಗ್ಗೆ ತಿರುಗಿತ್ತು. ಶ್ರೀಕಾಂತ್ ಆಗಷ್ಟೇ ಸುಚಿತ್ರಾ ಚಲನಚಿತ್ರ ಸೊಸೈಟಿಯ ಆವರಣದಲ್ಲಿ ನಡೆದ "ಮತ್ತೆ ಬಂತು ಶ್ರಾವಣ" ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದಾರೆ. ಕಾರ್ಯಕ್ರಮ ಸುಮಾರು ೭.೩೦ ಕ್ಕೆ ಮುಗಿದಿದೆ. ಕಾರ್ಯಕ್ರಮ ಮುಗಿದ ನಂತರ ಇನ್ನೊಬ್ಬ ಗೆಳೆಯ ಸತ್ಯ ಅವರಿಗೆ ಕಿ ರಂ ಅವರನ್ನು ಪರಿಚಯಿಸಿದ್ದಾರೆ, ಅವರೊಂದಿಗೆ ಮಾತಾಡಿದ ಶ್ರೀಕಾಂತ್ ಮನೆಗೆ ಬಂದೊಡನೆ gtalkನಲ್ಲಿ ನನ್ನೊಡನೆ ಮಾತಾಡುತ್ತಾ ಕಾರ್ಯಕ್ರಮದ ಬಗ್ಗೆ ಹೇಳಿದ್ದಾರೆ. ಆಗಿನ್ನೂ ರಾತ್ರಿ ೮.೩೦. ಮಾತು ಕಿ ರಂ ಅವರ ಕಾವ್ಯಾಸಕ್ತಿಯ ಬಗ್ಗೆ, ಕನ್ನಡದೆಡೆಗೆ ಅವರ ನಿಲುವಿನ ಬಗ್ಗೆ ಸಾಗಿದೆ, ಹೀಗೇ ಸುಮಾರು ಎರಡು ಗಂಟೆ ಹರಟಿದ್ದೇವೆ. ಅದಾದನಂತರ ಗೆಳೆಯ ಜಯಂತರ ಬ್ಲಾಗನ್ನೋದುತ್ತಾ ಅಲ್ಲಿ ಸಿಕ್ಕಿದ "ಅವಧಿ"ಯ ಲಿಂಕ್ ಹಿಡಿದು ಅಲ್ಲಿಗೆ ಹೋದರೆ ಕಿ ರಂ - ಲಂಕೇಶರಬಗ್ಗೆ ಒಂದು ಫೋಟೋ ಲೇಖನ. ಮತ್ತೆ ತುಸುಹೊತ್ತಿನ ಬಳಿಕ ಬೇರಾವುದೋ ಕವನದ ಲಿಂಕ್ ಅನುಸರಿಸಿ "ಕೆಂಡಸಂಪಿಗೆ" ಈ-ಪತ್ರಿಕೆಗೆ ಹೋದರೆ ಅಲ್ಲಿ ಕಿ ರಂ ಬಗೆಗೆ ಮತ್ತೊಂದು ಲೇಖನ, ಅಬ್ದುಲ್ ರಶೀದರಿಂದ. ಅದೇಕೋ ಮನಸ್ಸಿನಲ್ಲಿ ಕಿ ರಂ ಏನಾದರೂ ಸತ್ತುಹೋದರೋ ಎಂಬ ಭಾವನೆ ಬಂದು ಹೋಯಿತು. ಎಷ್ಟೆಂದರೆ ಈ ಲೇಖಕ್ಕೆ "ಕಿ ರಂ ಕ್ಷೇಮವಷ್ಟೇ" ಎಂದು ಕಾಮೆಂಟ್ ಹಾಕಹೊರಡುವಷ್ಟು. ಲೇಖನವೂ ಶ್ರದ್ಧಾಂಜಲಿಯಂತೆಯೇ ಇತ್ತು. ಆದರೆ ಅದು ಶ್ರದ್ಧಾಂಜಲಿಯಾಗಿರಲಿಲ್ಲ, ಅದು ಪ್ರಕಟವಾದ ಸಮಯ ಶುಕ್ರವಾರ ಮಧ್ಯರಾತ್ರೆ; ನಾನು ನೋಡುತ್ತಿದ್ದದ್ದು almost ಭಾನುವಾರ ಬೆಳಗಿನ ಜಾವ.&lt;br /&gt;&lt;br /&gt;ಆದರೂ ಕಿರಂ ಬಗ್ಗೆ ಇದೇನು ಇಷ್ಟೊಂದು ಇವತ್ತು ಎನಿಸಿ ಕಿ ರಂ ನಾಗರಾಜ್ ಎಂದು ಗೂಗಲಿಸಿದವನಿಗೆ ಭಾರಿ ಶಾಕ್ ಕಾದಿತ್ತು, ಕಿ ರಂ ನಾಗರಾಜ್ ಇನ್ನಿಲ್ಲ! ಅವತ್ತು update ಆದ ವೆಬ್ ಪುಟಗಳ ಸಂಖ್ಯೆ ೪, ಅದರಲ್ಲಿ ಸಾವಿನ ಸುದ್ದಿ ಹೊತ್ತದ್ದು ಒಂದೇ ಪುಟ, ಆಗಷ್ಟೇ ಎರಡು-ಮೂರು ಗಂಟೆಗಳ ಹಿಂದೆ ಪ್ರಕಟವಾದದ್ದು&lt;br /&gt;&lt;br /&gt;ಕನ್ನಡದ ಹಿರಿಯ ವಿಮರ್ಶಕ, ಚಿಂತಕ ಕಿ ರಂ ನಾಗರಾಜ್ ಬಗ್ಗೆ, ಅವರ ಕಾವ್ಯಪ್ರೀತಿಯಬಗ್ಗೆ, ಮಾತಿನಲ್ಲೇ ರನ್ನ ಪಂಪ ಬೇಂದ್ರೆಯರನ್ನು ಪುನಃಸೃಷ್ಟಿಸುತ್ತಿದ್ದ ಅವರ ವೈಖರಿಯ ಬಗ್ಗೆ ತನ್ಮಯರಾಗಿ ನೆನೆಸುವ, ಹೇಳುವ ಬರೆಯುವ ಅವರ ಸಾವಿರಾರು ಶಿಷ್ಯರಿದ್ದಾರೆ. ಕಿ ರಂ ಕಾವ್ಯದ ಬಗ್ಗೆ ಮಾತಾಡಿದರೆ ಅದೊಂದು ಬೇರೆಯೇ ಲೋಕವಿದ್ದಂತೆ ಎನ್ನುವ ಗೆಳೆಯ ಸತ್ಯರಿಗಂತೂ ಕಿ ರಂ ಅಂದರೆ ದೇವರೇ ಸರಿ. ಅವರನ್ನು ಪರಿಚಯಿಸಿಕೊಡುವಂತೆ ಸತ್ಯರಿಗೆ ಅನೇಕಬಾರಿ ದುಂಬಾಲು ಬಿದ್ದಿದ್ದೇನೆ. ಆದರೂ ನನ್ನದೇ ಸೋಮಾರಿತನವೋ ಅದೇನೋ, ಅದೇಕೋ ಆಗಿಬರಲಿಲ್ಲ. ಕಿ ರಂ ಬಾಯಲ್ಲಿ ಕಾವ್ಯ ಕೇಳುವ ಪುಣ್ಯ ಕೊನೆಗೂ ಒದಗಲಿಲ್ಲ, ಇನ್ನು ಒದಗುವುದೂ ಇಲ್ಲ. ಜೀವನದಲ್ಲಿ ಹೀಗೇ ಅನೇಕ ಬಸ್ಸುಗಳನ್ನು ಮಿಸ್ ಮಾಡಿಕೊಂಡಿದ್ದೇನೆ.&lt;br /&gt;&lt;br /&gt;ಎರಡೋ ಮೂರೋ ವರ್ಷಗಳ ಹಿಂದೆ ಬಿ ಪಿ ವಾಡಿಯ ರಸ್ತೆಯಲ್ಲಿ ಬ್ಲಾಗ್ ಬರಹಗಾರರ ಪುಟ್ಟದೊಂದು ಸಮಾವೇಶ ಜರುಗಿತು. ಆಗ ಅಲ್ಲಿಗೆ ಬಂದ ಕಿ ರಂ ತಮ್ಮ ಚಿಕ್ಕ ಭಾಷಣದಲ್ಲಿ ಕನ್ನಡ ಲಿಪಿ ಸುಧಾರಣೆಯ ಬಗ್ಗೆ ಮಾತಾಡಿದರು. ಆ ಬಗ್ಗೆ ಅವರ ನಿಲುವುಗಳು ನನಗೆ ಸರಿಬೀಳಲಿಲ್ಲ, ಜೊತೆಗೆ ತುಸು ಆಶ್ಚರ್ಯವನ್ನೂ ತಂದಿತು. ಪ್ರಶ್ನೆಗಳನ್ನು ರೂಪಿಸಿಕೊಂಡು ಎದ್ದು ನಿಂತು ಪ್ರಸ್ತುತಪಡಿಸುವಷ್ಟರಲ್ಲಿ ಮಾತು ಮುಗಿಸಿದ ಕಿ ರಂ ಕೂಡಲೇ ಹೊರಟುಬಿಟ್ಟಿದ್ದರು.&lt;br /&gt;&lt;br /&gt;ಈ ಬಗ್ಗೆ ಈಗ ೫-೬ ಗಂಟೆಗಳ ಹಿಂದಷ್ಟೇ ಶ್ರೀಕಾಂತರೊಡನೆ ಮಾತಾಡುತ್ತಾ ನಗೆಯಾಡಿದ್ದೆ. ಕಿ ರಂ ಎದುರು ಎಂದಾದರೂ ಈ ಪ್ರಶ್ನೆಗಳನ್ನು ಎತ್ತಬೇಕೆಂದಿದ್ದೆ. ಇವತ್ತು ಕಿ ರಂ ಈ ಲೋಕವನ್ನೇ ಬಿಟ್ಟು ಹೊರಟುಬಿಟ್ಟಿದ್ದಾರೆ, ನನ್ನ ಪ್ರಶ್ನೆಗಳು ಹಾಗೆಯೇ ಉಳಿದಿವೆ.&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-8570905555914161088?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/8570905555914161088/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=8570905555914161088&amp;isPopup=true' title='2 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/8570905555914161088'/><link rel='self' type='application/atom+xml' href='http://www.blogger.com/feeds/2037979210344114254/posts/default/8570905555914161088'/><link rel='alternate' type='text/html' href='http://nannabaraha.blogspot.com/2010/08/blog-post.html' title='ಕಿ ರಂ ನಾಗರಾಜ್ ಇನ್ನಿಲ್ಲ !'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><media:thumbnail xmlns:media='http://search.yahoo.com/mrss/' url='http://3.bp.blogspot.com/_piVpH4odgRA/TF4HufnxcXI/AAAAAAAAAsM/5tga0TYD3us/s72-c/kiram.bmp' height='72' width='72'/><thr:total>2</thr:total></entry><entry><id>tag:blogger.com,1999:blog-2037979210344114254.post-8333986172005756226</id><published>2010-07-26T04:29:00.006+05:30</published><updated>2011-04-15T00:08:25.654+05:30</updated><category scheme='http://www.blogger.com/atom/ns#' term='೦೫. ಲಹರಿ'/><title type='text'>ಕಿಟಕಿ ಪಕ್ಕದ ಸೀಟು</title><content type='html'>&lt;div align="justify"&gt;ಮೊನ್ನೆ ಬೆಂಗಳೂರಿನಿಂದ ಮೈಸೂರಿಗೆ ಬರುವಾಗ ನನ್ನ ಮಡದಿ ತಾನಾಗಿಯೇ ನನಗೆ ಕಿಟಕಿ ಸೀಟನ್ನು ಬಿಟ್ಟುಕೊಟ್ಟದ್ದು ಅದೇಕೋ ಮನಸ್ಸಿಗೆ ನಾಟಿತು. ಅವಳು ಹಾಗೆ ನನಗೆ ಕಿಟಕಿ ಸೀಟು ಬಿಟ್ಟುಕೊಟ್ಟದ್ದೇನು ಮೊದಲನೆಯ ಸಲವೂ ಅಲ್ಲ, ಹೊಸದೂ ಅಲ್ಲ. ಆದರೆ ಈ ಔದಾರ್ಯ ಯಾವಾಗ ಶುರುವಾಯಿತೋ ನೆನಪಿಲ್ಲ. ಕಿಟಕಿ ಸೀಟಿಗಾಗಿ ನಾವು ಕೊನೆಯ ಸಲ ಕಿತ್ತಾಡಿದ್ದು ಯಾವಾಗ? ನೆನಪಿಗೆ ಬರುತ್ತಿಲ್ಲ, ಕಿತ್ತಾಡುತ್ತಿದ್ದಂತೂ ನಿಜ. ಬಹಳಷ್ಟೇ ದಿನ ನಡೆದುಕೊಂಡುಬಂದ ಈ ಕಿತ್ತಾಟ ಅದು ಯಾವುದೋ ಮಾಯದಲ್ಲಿ ನನ್ನ ಗಮನಕ್ಕೇ ಬರದೇ ಕೊನೆಗೊಂಡಿತ್ತು.&lt;br /&gt;&lt;br /&gt;ಹತ್ತು ವರ್ಷದ ಹಿಂದೆ ನಾವು ಮಧುಚಂದ್ರಕ್ಕಾಗಿ ದಿಲ್ಲಿಯಿಂದ ಮನಾಲಿಗೆ ಪಯಣಿಸುತ್ತಿದ್ದಾಗಿನ ಘಟನೆ ನೆನಪಿಗೆ ಬರುತ್ತದೆ. ಇದು ನಾವಿಬ್ಬರೂ ಬಹಳ ಆಸ್ತೆಯಿಂದ ಯೋಜಿಸಿದ್ದ ಪ್ರವಾಸವಾಗಿತ್ತು. ಅಲ್ಲದೇ ಹಿಮಾಲಯದ ದರ್ಶನ ನನ್ನ ಬಹುದಿನಗಳ ಹೆಬ್ಬಯಕೆಯಾಗಿತ್ತು ಕೂಡ. ಬೆಟ್ಟಗಳು ಬೆಳ್ಳಗೂ ಇರುತ್ತವೆ ಎಂಬುದು ನನ್ನ ಜ್ಞಾನ ಪ್ರಪಂಚದಲ್ಲಿ ನಮೂದಾದ್ದ ವಿಷಯವೇ ಹೊರತು, ನನ್ನ ಭಾವಪ್ರಪಂಚದಿಂದ ಅದು ಸಂಪೂರ್ಣ ಹೊರಗು. ಹೀಗಾಗಿ ಬೆಳ್ಳಿ ಬೆಟ್ಟದ ಬೆರಗನ್ನು ನೋಡಲು ಮನಸ್ಸು ಬಹಳ ಉತ್ಸುಕವಾಗಿತ್ತು. ದಿಲ್ಲಿಯಿಂದ ರಾತ್ರಿ ಹೊರಟ ಬಸ್ಸು ಕುಲು ಕಣಿವೆಯನ್ನು ಪ್ರವೇಶಿಸುವ ಹೊತ್ತಿಗೆ ಅರುಣೋದಯದ ಸಮಯ. ಇವಳಿಗೆ ತಡೆಯದಷ್ಟು ನಿದ್ದೆ. ಕಣಿವೆಯ ಕೊನೆಯಲ್ಲಿ ನಿಧಾನಕ್ಕೆ ಕೆಂಪಾಗುತ್ತಿತ್ತು. ಬೆಳ್ಳನೆಯ ಗೋಡೆಗಳಂತೆ ನಿಂತಿದ್ದ ಹಿಮಶೀತಲ ಶೈಲಗಳನ್ನು ಮುಟ್ಟುವುದೋ ಬೇಡವೋ ಎಂಬಂತೆ ಸೂರ್ಯನ ಪ್ರಥಮ ಕಿರಣಗಳು ಅದರ ತುದಿಯನ್ನು ತುಸುವೇ ಸೋಂಕಿ ಸೋಂಕಿ ಹಿಂಜರಿಯುತ್ತಿದ್ದವು. ಬೆಟ್ಟವೂ ಸ್ವಲ್ಪಹೊತ್ತು ತನ್ನ ಸ್ವಭಾವಸಿದ್ಧವಾದ ದಿವ್ಯ ಶೀತಲತೆಯನ್ನು ನಟಿಸಿತು. ಆದರೇನು? ರವಿಗೆ ಕರಗದ ಮಂಜೇ? ಸ್ಪರ್ಶಕ್ಕೆ ನಾಚಿ ನಿಧಾನಕ್ಕೆ, ಬಹು ನಿಧಾನಕ್ಕೆ ಹಿಮಗಿರಿಯ ತುದಿಗಳು ಕೆಂಪೇರತೊಡಗಿದ್ದುವು. ಜುಮ್ಮೆನ್ನುವ ಮಲಯ ಮಾರುತಕ್ಕೆ ಕುಲು ಕಣಿವೆಯ ಹೂ ಗಿಡ ಮರಗಳು ಪುಳಕಿತಗೊಂಡು ತಲೆದೂಗುತ್ತಿದ್ದವು. ನೋಡನೋಡುತ್ತಿದ್ದಂತೆ ಇದುವರೆಗೂ ತಮೋನೀರಸವಾಗಿದ್ದ ಇಡೀ ಕಣಿವೆ ತನ್ನ ಸೌಂದರ್ಯ ಸಮಸ್ತವನ್ನು ಮರೆಮಾಚಿದ್ದ ನಿಷೆಯ ಜವನಿಕೆಯನ್ನು ಕಿತ್ತೊಗೆದು ತನ್ನೆಲ್ಲ ವರ್ಣ ವೈವಿಧ್ಯದೊಂದಿಗೆ ಮುಂಜಾವಿನ ಸೊಬಗನ್ನು ಸ್ವಾಗತಿಸಲು ಎದ್ದು ನಿಂತಿತು. ಶುಭ್ರ ಶ್ವೇತ ಗಿರಿ ಪಂಕ್ತಿ, ನಡುವಿನ ಬಿಡುವಿನಲ್ಲಿ ತುಸುವೇ ಕೆಂಪೇರಿದ ನಸುಗಪ್ಪು ನೀಲಿ ಆಕಾಶ, ಅಲ್ಲೊಂದು ಇಲ್ಲೊಂದು ತುಂಡು ಮೋಡಗಳು, ಕ್ಷಣಕ್ಕೊಮ್ಮೆ ರಂಗು ಬದಲಿಸುತ್ತಿದ್ದ ಸೂರ್ಯ, ಇವೆಲ್ಲಾ, ಮೊದಲೇ ವರ್ಣಮಯವಾದ ಕಣಿವೆಯ ಮೇಲೆ ತಮ್ಮ ಕುಂಚವಾಡಿಸಿ ಅದೊಂದು ಹೊಸ ಲೋಕವನ್ನು ನಿರ್ಮಿಸಿದ್ದುವು.&lt;br /&gt;&lt;br /&gt;ಗಳಿಗೆಗೊಂದು ಹೊಸ ರಂಗು, ರೂಪ ತಳೆಯುತ್ತಿದ್ದ ಈ ಚೇತೋಹಾರಿ ದೃಶ್ಯಾವಳಿಯನ್ನು ಸೆರೆಹಿಡಿಯುತ್ತಾ, ಹಿಮಾಲಯದ ಮಹೋನ್ನತ ಶಿಖರಗಳ ಭವ್ಯತೆಗೆ ಬೆರಗಾಗುತ್ತಾ ಮೈಮರೆತಿದ್ದಾಗ ಒಂದು ವಿಷಯ ನನ್ನ ಗಮನಕ್ಕೆ ಬಂತು. ಇಡೀ ಬಸ್ಸಿನಲ್ಲಿ ಕುಳಿತಿದ್ದ ಸುಮಾರು ಮೂವತ್ತು ಜೋಡಿಗಳಲ್ಲಿ, ಕಿಟಕಿಯ ಪಕ್ಕ ಕುಳಿತಿದ್ದ ಗಂಡು ನಾನೊಬ್ಬನೇ. ಉಳಿದವರೆಲ್ಲಾ ಆ ಜಾಗವನ್ನು ತಂತಮ್ಮ ಮಡದಿಯರಿಗೆ ಒಪ್ಪಿಸಿ ಕೊಟ್ಟು ತಾವು ನಿದ್ದೆ ಹೊಡೆಯುತಿದ್ದರು. ನನ್ನ ಪುರುಷಪ್ರಜ್ಞೆ ಸ್ವಲ್ಪ ನಾಚಿತು; ಇವಳ ಮುಖ ನೋಡಿದೆ. ಅವಳೂ ಈ ವಿಷಯವನ್ನು ನನಗಿಂತ ಮುಂಚೆಯೇ ತುಸು ಅಸಮಾಧಾನದಿಂದ ಗಮನಿಸಿದ್ದಂತೆ ಕಂಡಿತು. ಹೊಸ ಪರಿಚಯ, ಕೇಳುವುದು ಹೇಗೆ ಎಂದು ಸುಮ್ಮನಿದ್ದಿರಬಹುದು. ಗಂಡಾಗಿ ನಾನೇ ಈ etiquette ಯನ್ನು ಅರ್ಥಮಾಡಿಕೊಳ್ಳಲಿ ಎಂಬ ನಿರೀಕ್ಷೆಯೂ ಇರಬಹುದು. ಎಷ್ಟುಹೊತ್ತು ಕಳೆದರೂ ನಾನು ಆ ಸಭ್ಯತೆಯನ್ನು ತೋರಿಸದಿದ್ದುದು ಕಂಡು, ಇದೆಂಥಾ ವಡ್ಡನ ಜೊತೆ ಗಂಟುಬಿತ್ತೆಂದು ಅನಿಸಿರಲೂ ಸಾಕು. ನನಗೋ, ಪುರುಷರು ಮಹಿಳೆಯರಿಗೆ ಕಿಟಕಿ ಸೀಟು ಬಿಟ್ಟುಕೊಡಬೇಕೆನ್ನುವ ಈ ಅಲಿಖಿತ ಅರ್ಥಹೀನ ಕಂದಾಚಾರ, ಈ ಸ್ವರ್ಗಸದೃಶ ಪಯಣದಲ್ಲಿ, ಮೊಸರನ್ನದಲ್ಲಿ ಸಿಕ್ಕ ಕಲ್ಲಿನಂತೆ ದೊಡ್ಡ ಕಿರಿಕಿರಿಯನ್ನೇ ಉಂಟುಮಾಡಿತು. Once in a life time ಎನಿಸುವ ಪಯಣವೊಂದುಕಡೆ, etiquette ಪಾಲಿಸಲಿಲ್ಲವೆಂದು ಮುಖವೂದಿಸಿಕೊಂಡು ಕುಳಿತ ಮುದ್ದಿನ ಮಡದಿಯೊಂದುಕಡೆ (ಅತ್ತ ದರಿಯೇನೋ ಸರಿ, ಇತ್ತ ಪುಲಿ ಎನ್ನಲಾದೀತೇ). ಆದರೂ, ಜೀವನದ ಪ್ರತಿಯೊಂದನ್ನೂ ಹಂಚಿಕೊಂಡು ಬದುಕಬೇಕಾದ ನಾವು ಈ ಆನಂದವನ್ನೂ ಹಂಚಿಕೊಳ್ಳಬೇಕಲ್ಲವೇ? ಅಷ್ಟೇ ಏನು, ಕಿಟಕಿಯಪಕ್ಕ ಕೂಡುವುದು ಅವಳ ಹಕ್ಕೂ ಅಲ್ಲವೇ? ಒಬ್ಬಳೇ ಬಂದಿದ್ದರೆ ಅವಳು ಆ ಹಕ್ಕನ್ನು ನಿರ್ಭಿಡೆಯಿಂದ ಚಲಾಯಿಸುತ್ತಿದ್ದಳಲ್ಲವೇ? ಇಬ್ಬರೂ ಒಟ್ಟಿಗೇ ಪಯಣಿಸುತ್ತಿದ್ದರಿಂದ ಈ ಕಿಟಕಿ ಸೀಟಿನ ಆನಂದ ಇಬ್ಬರಿಗೂ ಸಮಾನವಾಗಿ ದಕ್ಕಬೇಕಾದ್ದೇ ನ್ಯಾಯ. ಹೇಗೂ ನಾನು ಕಿಟಕಿಯ ಪಕ್ಕದಲ್ಲಿ ಒಂದು ಕಾಲು ಭಾಗದಷ್ಟು ದಾರಿ ಪಯಣಿಸಿದ್ದಾಗಿದೆ. ಅವಳೊಂದುಸ್ವಲ್ಪ ಹೊತ್ತು ಕೂಡಲಿ, ಮತ್ತೆ ಅವಳೇ ನನಗೆ ಬಿಟ್ಟುಕೊಡುತ್ತಾಳೆ; ಇಷ್ಟಕ್ಕೂ ಅವಳಿಗೆ ಅಸಮಾಧಾನವಾಗಿದೆ ಎನ್ನುವುದು ಕೇವಲ ನನ್ನ ಭ್ರಮೆಯಿರಬಹುದು; ನಾನು ಅದುವರೆಗೂ ಆ ದೃಶ್ಯವೈಭವವನ್ನು ನೋಡುತ್ತಾ ಚಿಕ್ಕ ಹುಡುಗರಂತೆ ಹಿಗ್ಗುತ್ತಿದ್ದುದನ್ನು ಅದೊಂದು ರೀತಿಯ ಆತ್ಮೀಯತೆಯಿಂದ ಗಮನಿಸುತ್ತಿದ್ದಳಲ್ಲವೇ. ನಾನೇನು ಬೇರೆಯವನೇ, ಅವಳಿಗೆ ಬೇಕಿದ್ದರೆ ಕೇಳಿಯೇ ಕೇಳುತ್ತಿದ್ದಳು - ಉಳಿದಂತೆ ಎಷ್ಟು ಕೇಳಿಲ್ಲ; ಆದರೂ ಇರಲಿ ಯಾವುದಕ್ಕೂ ವಿಚಾರಿಸಿ ನೋಡುವಾ; ಅವಳಿಗೆ ಬೇಕಾದರೆ ಬಿಟ್ಟುಕೊಡುತ್ತೇನೆ, ಇಲ್ಲದಿದ್ದರೆ ನಾನೇ ಇಲ್ಲಿ ಮುಂದುವರೆಯುತ್ತೇನೆ ಎಂದೆಲ್ಲಾ ಯೋಚಿಸಿ, "ಕಿಟಕಿ ಪಕ್ಕ ಕೂತ್ಕೋಬೇಕಾ?" ಎಂದು ಕೇಳಿದೆ. ಅವಳು ಹೂಂಗುಟ್ಟಿದಳು. "ಎಲ್ಲರೂ ಅವರವರ ಹೆಂಡತಿಯರಿಗೆ window seat ಬಿಟ್ಟುಕೊಟ್ಟಿದ್ದಾರೆ, ನಾನು ಮಾತ್ರ ನಿನ್ನ ಕೇಳಲೂ ಇಲ್ಲ ಅಂತ ಕೋಪಾನಾ?" ಎಂದು ಕೇಳಿದೆ. ಮುಗುಳ್ನಕ್ಕು ಅದಕ್ಕೂ ಹೂಂ ಎಂದಳು. ಸರಿ, ಇನ್ನು ಬೇರೆ ದಾರಿಯೇ ಇಲ್ಲ. ಕಿಟಕಿ ಸೀಟನ್ನು ಅದೊಂದು ಮಾಣಿಕ್ಯವೋ ಎಂಬಂತೆ ಅವಳಿಗೆ ಹಸ್ತಾಂತರಿಸಿ ನಾನು ಈಚೆ ಬದಿಗೆ ಬಂದು ಕುಂತೆ.&lt;br /&gt;&lt;br /&gt;ತರ್ಕದಿಂದ ಈ "ತ್ಯಾಗ"ಕ್ಕೆ ನನ್ನ ಬುದ್ಧಿಯನ್ನು ಒಲಿಸಿದೆನಾದರೂ ಅದೇಕೋ ಭಾವ ಮಾತ್ರ ಬುದ್ಧಿಗೇಡಿ ಮಗುವಿನಂತೆ ಮುಸುಗುಡುತ್ತಲೇ ಇತ್ತು, "ಕಿಟಕಿ ಸೀಟು... ಕಿಟಕಿ ಸೀಟೂಊ" ಎಂದು. ಇವಳಾದರೋ, ಜಾಗ ಬದಲಿಸಿದವಳೇ ಒಂದೈದು ನಿಮಿಷ ಹೊರಗೆ ನೋಡುತ್ತಿದ್ದವಳು ಮತ್ತೆ ನನ್ನೆಡೆ ತಿರುಗಿ ಹೆಗಲ ಮೇಲೆ ತಲೆಯಿಟ್ಟು ಹಾಗೇ ನಿದ್ದೆಹೋದಳು; ದೈವವೇ ಎದುರು ನಿಂತಿರಲು, ಚರುಪು ಪಡೆಯಲು ಪೂಜಾರಿಯ ಹಿಂದೆ ಓಡುವಂತೆ. ಈಗಂತೂ ದೂರದ ಬೆಳ್ಳಿಯ ಶಿಖರ ಹೊತ್ತಿಕೊಂಡು ಉರಿಯುತ್ತಿದೆಯೋ ಎಂಬಂತೆ ಕಿತ್ತಳೆ ಬಣ್ಣದೊಂದಿಗೆ ಜಗಜಗಿಸುತ್ತಿತ್ತು. ಅನ್ಯಾಯ ಇಷ್ಟು ಅಮೂಲ್ಯವಾದ ದೃಶ್ಯವನ್ನು ಕಳೆದುಕೊಳ್ಳುತ್ತಿದ್ದಾಳಲ್ಲಾ ಈ ಪೆದ್ದು ಹುಡುಗಿ - ನನಗೂ ಇಲ್ಲ, ತನಗೂ ಇಲ್ಲ - ಎನ್ನಿಸಿದರೂ ಮಗುವಿನಂತೆ ನಿದ್ರಿಸುತ್ತಿದ್ದ ಅವಳ ಮುಖವನ್ನೇ ಕೆಲಹೊತ್ತು ನಿಟ್ಟಿಸಿದೆ. ಈಗ ಅವಳ ಮುಖದಮೇಲೆ ನಲಿಯುತ್ತಿದ್ದ ಸೂರ್ಯ ಕಿರಣ, ಮುಖದ ಚೆಲುವನ್ನು ಇಮ್ಮಡಿಸಿತ್ತು. ಆದರೆ ಈ ಸೌಖ್ಯ ಬಹುಕಾಲ ಉಳಿಯಲಿಲ್ಲ. ಅವಳು ಎಚ್ಚೆತ್ತು "ಮುಖಕ್ಕೆ ಗಾಳಿ ಹೊಡೆಯುತ್ತಿದೆ, ಕಿಟಕಿ ಮುಚ್ಚಿ, ನಾನು ಸ್ವಲ್ಪ ನಿದ್ದೆ ಮಾಡುತ್ತೇನೆ" ಎಂದಾಗ ಮಾತ್ರ ನನಗೆ ಎಲ್ಲಿಲ್ಲದ ಕೋಪ ಬಂತು. ಆದರೇನು, courtship etiquette ಮೀರಲಾದೀತೇ - ಸಮಯ, ಸಂದರ್ಭ. ಕೊನೆಗೂ ತನ್ನ ಹಕ್ಕಿನ ವಿಂಡೋ ಸೀಟನ್ನು ಪಡೆದ ನೆಮ್ಮದಿಯಲ್ಲಿ ಕಿಟಕಿ ಮುಚ್ಚಿ ನಿದ್ದೆ ಹೋದಳು ಹುಡುಗಿ.&lt;br /&gt;&lt;br /&gt;ಕಿಟಕಿ ಸೀಟಿಗಾಗಿ ಹೀಗೆ ಶುರುವಾದ ನಮ್ಮ ಕಾದಾಟ ಬಹಳಷ್ಟು ದಿನ ಮುಂದುವರಿಯಿತೆನ್ನಿಸುತ್ತದೆ. ಪ್ರತಿ ಬಾರಿಯೂ ನಾನೇ ತ್ಯಾಗ ಮಾಡಿ ದೊಡ್ಡವನಾಗುತ್ತಿದ್ದೆ. ಆಗೊಮ್ಮೆ ಈಗೊಮ್ಮೆ ನಾನು ಹಾಗೆ ತ್ಯಾಗ ಮಾಡದಿದ್ದರೆ "ನೀವು 'ಯಾವಾಗಲೂ' ಹೀಗೆಯೇ" ಎನ್ನುವ ಬಾಣ ಸಿದ್ಧವಾಗಿರುತ್ತಿತ್ತು. ಹಾಗೆಂದು ಅವಳಿಗೇನು ಕಿಟಕಿಯ ಬಳಿ ಕೂಡುವ ಹುಚ್ಚೇನೂ ಇದ್ದಂತಿರಲಿಲ್ಲ. ಇನ್ನು ಕಿಟಕಿಯ ಹೊರಗೆ ನೋಡುವ ವಿಚಾರವಂತೂ ದೂರವೇ ಉಳಿಯಿತು. ಬೇರೆ ಯಾರ ಜೊತೆ ಹೋದರೂ ಕಿಟಕಿಯ ಬಗ್ಗೆ ಚಕಾರವನ್ನೂ ಎತ್ತುತ್ತಿರಲಿಲ್ಲ. ಬಹಳಷ್ಟು ಸಾರಿ ತನಗೆ ಗಾಳಿ ಆಗುವುದಿಲ್ಲ ಎಂದು ಹೇಳಿ ಅವರಿಗೇ ಬಿಟ್ಟುಕೊಡುತ್ತಿದ್ದಳು. ಅವಳ ತಕರಾರೆಲ್ಲಾ ನನ್ನೊಡನೆ ಪಯಣಿಸುವಾಗ ಮಾತ್ರ. ಆಗ ಮಾತ್ರ ಕಿಟಕಿ ಅವಳಿಗೆ ಹಕ್ಕಿನ ವಿಷಯವಾಗುತ್ತಿತ್ತು.&lt;br /&gt;&lt;br /&gt;ಹಾಗೆಂದು ಕಿಟಕಿಗೋಸ್ಕರ ನನ್ನದೇನು ಹಕ್ಕಿನ ಕಾದಾಟವಲ್ಲ; ಅಥವ ಅದೊಂದು ಅನಿವಾರ್ಯವೂ ಅಲ್ಲ. ಪ್ರಯಾಣ ಅನಿವಾರ್ಯವಾದಾಗ ಎಲ್ಲೋ ಹೇಗೋ ನಿಂತುಕೊಂಡೂ ಪಯಣಿಸಿದ್ದಿದೆ. ಆದರೆ ಕಿಟಕಿಯ ಪಕ್ಕ ಕುಳಿತೂ ಅದರ ಸದುಪಯೋಗ ಪಡೆಯದಿದ್ದರೆ ಮಾತ್ರ ಹೊಟ್ಟೆ ಉರಿಯುತ್ತದೆ. ಹಾಗೆ ನೋಡಿದರೆ ಕಿಟಕಿಯೊಂದೇ ಅಲ್ಲ, ಪಯಣದ ಬಗ್ಗೆ ನನಗೆ ನನ್ನದೇ ಆದ ಅನೇಕ ಗೊತ್ತುಪಾಡುಗಳಿವೆ. ಪಯಣ ತೀರ ಅನಿವಾರ್ಯವಲ್ಲದಿದ್ದರೆ ನಾನು ಈ ಗೊತ್ತುಪಾಡುಗಳನ್ನು ಸಾಕಷ್ಟೇ ಕಟ್ಟುನಿಟ್ಟಾಗಿ ಅನುಸರಿಸುತ್ತೇನೆ, ಮತ್ತು ಅಂಥಾ ಪ್ರಯಾಣಕ್ಕಾಗಿ ಕಾಯುತ್ತೇನೆ, ಒಂದು ಬಸ್ಸು ಮಿಸ್ಸಾದರೂ ಪರವಾಗಿಲ್ಲ (ಅದರಿಂದಲೇ ನಾನು ತೀರಾ 'ನಚ್ಚು' ಎಂಬ ಹಣೆಪಟ್ಟಿಯನ್ನೂ ಸಂಪಾದಿಸಿದ್ದೇನೆ).&lt;br /&gt;&lt;br /&gt;ಪ್ರಯಾಣಕ್ಕೆ ಬಸ್ಸಿಗಿಂತ ರೈಲಾದರೆ ಸೂಕ್ತ; ಅದು ಸ್ವಚ್ಚವಾಗಿ ಥಳಥಳಿಸುತ್ತಿರಬೇಕಿಲ್ಲವಾದರೂ ಗಲೀಜಾಗಿರಬಾರದು; ಬಸ್ಸೇ ಆದರೆ ಅದು ವಿಡಿಯೋ ಕೋಚ್ ಆಗಿರಬಾರದು; 'ಸಂಗೀತ'ದ ಗಲಾಟೆಯಿರಬಾರದು; ಬಸ್ಸಿನಲ್ಲಿ ತೀರ ಹಿಂದಲ್ಲದ ತೀರಾ ಮುಂದಲ್ಲದ ಮಧ್ಯ ಭಾಗದ ಸೀಟಾದರೆ ಉತ್ತಮ; ಒಬ್ಬನೇ ಪಯಣಿಸುವಾಗ ಇಬ್ಬರ ಸೀಟಾದರೆ ಒಳ್ಳೆಯದು; ಅಷ್ಟಾದರೂ ಆ ಎರಡನೆಯ ಸೀಟಿಗೆ ಬರುವವರು ಯಾರೋ ಎಂಬ ಟೆನ್ಷನ್ ತಪ್ಪಿದ್ದಲ್ಲ. ಯಾರೂ ಬರದಿದ್ದರೆ ಒಳ್ಳೆಯದು. ಹಾಗೊಂದುವೇಳೆ ಬಂದರೂ ಅದು ಕಿರಿಕಿರಿಯ ಪ್ರಯಾಣಿಕನಲ್ಲದಿದ್ದರೆ ನಾನು ಧನ್ಯ. ಅದೇನೇ ಇರಲಿ, ಆ ಪ್ರಾಣಿ ಬಂದು ಕೂಡುವವರೆಗೂ ಜೀವಕ್ಕೆ ನೆಮ್ಮದಿಯಿಲ್ಲ.&lt;br /&gt;&lt;br /&gt;ಇದು ನಿಮಗೆ ತಮಾಷೆಯೆನ್ನಿಸಬಹುದು. ಆದರೆ ನಗಬೇಡಿ, ಅನುಭವದಿಂದ ಹೇಳುತ್ತೇನೆ; ನಿಮ್ಮ ಆ "ಸಹ" ಪ್ರಯಾಣಿಕರಿಗೆ ನಿಮ್ಮ ಪಯಣವನ್ನೇ ಗಬ್ಬೆಬ್ಬಿಸಿಬಿಡುವ ತಾಕತ್ತಿರುತ್ತದೆ. ಈ ಪಕ್ಕಪಯಣಿಗರ ತರಹೇವಾರಿ ರಖಂಗಳನ್ನು ನೋಡಿಬಿಟ್ಟಿದ್ದೇನೆ. ಕೆಲವರಿರುತ್ತಾರೆ. ಅವರು ನಿಮ್ಮ ಪಕ್ಕ ಕುಳಿತಿರುವುದೇ ಗೊತ್ತಾಗುವುದಿಲ್ಲ ನಿಮಗೆ. ತಾವಾಯಿತು, ತಮ್ಮ ಪುಸ್ತಕವೋ/ಮ್ಯಾಗಜೀನೋ ಆಯಿತು. ಇನ್ನು ಕೆಲವರು ನಿಮ್ಮತ್ತ ಒಂದು ಸೌಜನ್ಯದ ಮುಗುಳ್ನಗು ಎಸೆಯುತ್ತಾರೆ; ಹಿತಮಿತವಾಗಿ ಮಾತಾಡುತ್ತಾರೆ. ಆಸಕ್ತಿ ಕುದುರಿದರೆ ಪಯಣದುದ್ದಕ್ಕೂ ಒಳ್ಳೆಯ ಕಂಪನಿಯಾಗಬಲ್ಲರು ಇವರು. ಆದರೆ ಈ ಎರಡೂ ತರಹೆಯ ಜನ ಅಲ್ಪಸಂಖ್ಯಾತರು. ಇವರಿಗಿಂತಲೂ ಮುಂದುವರೆದ ಇನ್ನೊಂದು ಪಂಗಡವಿದೆ. ಇವರಿಗೆ ಮೌನವೆಂದರೆ ಆಗದು. ಯಾರಾದರೂ ಸುಮ್ಮನೆ ಇರುವುದನ್ನು ಕಂಡರೆ ಆಗದು. ವಿನಾಕಾರಣ ನಿಮ್ಮನ್ನು ಮಾತಿಗೆಳೆಯುತ್ತಾರೆ. ನಿಮ್ಮ ವೈಯಕ್ತಿಕ ವಿವರಗಳೆಲ್ಲ ಇವರಿಗೆ ಬೇಕು. ನೀವು ಕೆಲಸ ಮಾಡುವುದೆಲ್ಲಿ (ಕೆಲಸ ಮಾಡುತ್ತೀರಾ?), ಸಂಬಳ ಎಷ್ಟು, ಎಷ್ಟು ಇನ್ಕಂ ಟ್ಯಾಕ್ಸ್ ಕಟ್ಟುತ್ತೀರಿ, ಮಕ್ಕಳೆಷ್ಟು, ಕೊನೆಗೆ ಹೆಂಡತಿಯರೆಷ್ಟು ಎನ್ನುವವರೆಗೂ ಎಲ್ಲ ವಿವರಗಳೂ ಬೇಕು. ಅಷ್ಟೆಲ್ಲ ಕೇಳಿದಮೇಲೂ ಕೊನೆಗೆ "ನೀವು ಬಿಡೀಪ್ಪಾ, ಐಟಿ ಜನ. ನಿಮ್ಮಿಂದಲೇ ಬೆಲೆಯೆಲ್ಲ ಜಾಸ್ತಿಯಾಗಿ ನಮ್ಮಂಥ ಬಡವರ ಹೊಟ್ಟೆ ಮೇಲೆ ಒದ್ದೆಬಟ್ಟೆ" ಎಂದು ಮೂತಿ ದಬ್ಬುತ್ತಾರೆ.&lt;br /&gt;&lt;br /&gt;ಇದು ಒಂದು ತರಹೆಯಾದರೆ ಇನ್ನು ಕೆಲವರಿರುತ್ತಾರೆ. ಅವರಿಗೆ ನಿಮ್ಮ ಅಸ್ತಿತ್ವವೇ ಲೆಕ್ಕಕ್ಕಿರುವುದಿಲ್ಲ. ಬಂದವರೇ ನಿಮ್ಮನ್ನೂ ಒತ್ತರಿಸಿಕೊಂಡು ಧೊಪ್ಪನೆ ಕೂತಿದ್ದೇ ಸೈ. ಇದು ಇಬ್ಬರ ಸೀಟು, ನನ್ನ ಭಾಗ ಇದರ ಅರ್ಧ ಮಾತ್ರ ಎಂದು ಅವರಿಗೆ ಅನಿಸುವುದೇ ಇಲ್ಲ. ತಮ್ಮದೇ ಸೀಟಿನ ಮೂಲೆಯಲ್ಲಿ ನೀವೊಂದು ಕಸದಂತೆ ಬಂದು ಕುಳಿತಿದ್ದೀರೆಂದೇ ಅವರ ಅನಿಸಿಕೆ. ಆದ್ದರಿಂದಲೇ ನಿಮ್ಮನ್ನು ಆದಷ್ಟು ಒತ್ತರಿಸಿ ಉಳಿದ ಜಾಗದ ಸದುಪಯೋಗ ಮಾಡಿಕೊಳ್ಳುತ್ತಾರೆ. ಸಣ್ಣಗಿರುವುದು ಎಷ್ಟು ಹೀನಾಯ ಎಂದು ನಿಮಗನ್ನಿಸುವುದೇ ಆಗ. ಕೂತವರು ಸುಮ್ಮನೆ ಕೂಡುತ್ತಾರೆಯೇ, ಇಲ್ಲ. ಮೊಬೈಲ್ ತೆಗೆದು ಯಾರೊಡನೆಯೋ ಜೋರಾಗಿ ಸಂಭಾಷಿಸತೊಡಗುತ್ತಾರೆ, ಎಲ್ಲ ಹಾವಭಾವಗಳೊಡನೆ. ಆ ಕಡೆ ಇರುವ ಪ್ರಾಣಿಗೆ ತಮ್ಮ ಕೈಕರಣಗಳೊಂದೂ ಕಾಣದು ಎಂದು ಇವರಿಗೆ ಅನಿಸದು. ನಿಸ್ಸಂಕೋಚವಾಗಿ ನಿಮ್ಮ ಕರ್ಣಪಟಲದ ಮೇಲೆ ದಾಳಿಗೈಯುತ್ತಾ ಅವರ ವೈಯಕ್ತಿಕ ವಿವರಗಳನ್ನೆಲ್ಲಾ ನಿಮ್ಮ ಮುಂದರಚುತ್ತಾರೆ - ಅದು ಪ್ರೇಯಸಿಯೊಡನಿನ ಲಲ್ಲೆಯಿರಬಹುದು, ಅತ್ತೆಸೊಸೆಯರ ಜಗಳವಿರಬಹುದು, ಸಾಲ ವಸೂಲಿಯಿರಬಹುದು, ಆಸ್ತಿ ತಗಾದೆಯಿರಬಹುದು. ಇಲ್ಲದಿದ್ದರೆ ಮೊಬೈಲಿನಿಂದ ಜೋರಾಗಿ ಸಂಗೀತಸುಧೆಯನ್ನು ಹರಿಸತೊಡಗುತ್ತಾರೆ. ನಿಮ್ಮ ಮುಂದೆ ಅವರ ಮೊಬೈಲ್ ಕಿಂದರಿ ಏನೂ ಉಪಯೋಗವಿಲ್ಲವೆಂದು ಅವರಿಗೆ ತಿಳಿಯುವುದೇ ಇಲ್ಲ. ಇದೇನೂ ಇಲ್ಲದಿದ್ದರೂ ಕುಳಿತಹಾಗೇ ನಿಮಗೊರಗಿ ನಿಶ್ಚಿಂತೆಯಿಂದ ನಿದ್ದೆಹೋಗುತ್ತಾರೆ. ಕಿಟಕಿಯ ಪಕ್ಕ ಕುಳಿತವರು ನೀವಾದರೂ, ಅದರ ಬಾಗಿಲಿನ ಸ್ವಾಮ್ಯ ಮಾತ್ರ ಅವರದೇ. ಅದನ್ನು ಅವರಿಗೆ ಬೇಕಾದಾಗ ಮುಚ್ಚುವುದು, ತೆರೆಯುವುದು ಮಾತ್ರ ನಿಮ್ಮ ಕರ್ತವ್ಯ. ನಿಮ್ಮ ದುರದೃಷ್ಟಕ್ಕೆ ನಿಮಗೆ ಸೆಖೆಯಾದಾಗ ಅವರಿಗೆ ಚಳಿಯೂ, ನಿಮಗೆ ಚಳಿಯಾದಾಗ ಅವರಿಗೆ ಸೆಖೆಯೂ ಆಗುತ್ತದೆ.&lt;br /&gt;&lt;br /&gt;ಇದನ್ನೆಲ್ಲಾ ಹೇಗೋ ಸಹಿಸಿಕೊಳ್ಳೋಣವೆಂದರೆ ಇನ್ನೊಂದು ಬಾಧೆಯಿದೆಯಲ್ಲ, ಅದು ಮಾತ್ರ ಸಹಿಸಲಸದಳ. ಅದು ಜರದಾ-ಬೀಡಾ ಜಗಿಯುವವರದ್ದು. ಸದಾ ಸರ್ವದಾ ಜಗಿಯುತ್ತಲೇ ಇರಬೇಕು, ಉಗಿಯುತ್ತಲೇ ಇರಬೇಕು. ಇವರ ಪಾಲಿಗೆ ಕಿಟಕಿ ಕೇವಲ ಪೀಕುದಾನಿಯಷ್ಟೇ. ಮೊದಲುಮೊದಲು ನಿಮ್ಮ ಅನುಮತಿ ಕೇಳುತ್ತಾರೆಂದುಕೊಂಡರೂ ಎಷ್ಟು ಸಲ ಅಂತ ಅನುಮತಿ ಕೇಳುತ್ತಲೇ ಇರುವುದು? ನೀವಾದರೂ ಏನಂದುಕೊಳ್ಳುತ್ತೀರಿ. ಆದ್ದರಿಂದ ನಿಮ್ಮ ಅನುಮತಿಗೂ ಕಾಯದೇ ಎದ್ದು ನಿಮ್ಮ ಮೇಲೆ ಬಗ್ಗಿ ತಲೆ ಹೊರಚಾಚಿ ಸರಿಯಾಗಿ ತುಪ್ಪಿ ಕುಳಿತುಕೊಳ್ಳುತ್ತಾರೆ, ಮತ್ತೊಂದು ಗುಕ್ಕಿಗೆ (ಕೆಳಗೆ ಯಾರಾದರೂ ಬಿಳೀಬಟ್ಟೆ ಧರಿಸಿ ಹೋಗುತ್ತಿದ್ದರೆ, ಗೋವಿಂದ). ಒಂದುರೀತಿಯಲ್ಲಿ ಅವರು ನಿಮ್ಮ ಅನುಮತಿ ಕೇಳದಿರುವುದೇ ಸರಿ. ಅನುಮತಿ ಕೇಳಲು ನಿಮ್ಮ ಮುಂದೆ ಬಾಯಿಬಿಟ್ಟರೆ ನಿಮಗೇ ಕಷ್ಟ.&lt;br /&gt;&lt;br /&gt;ಇನ್ನು ನೀವೇನಾದರೂ ಘಾಟ್ ಸೆಕ್ಷನ್ನಿನಲ್ಲಿ ಪಯಣಿಸುತ್ತಿದ್ದರೋ, ನಿಮ್ಮನ್ನು ದೇವರೇ ಕಾಪಾಡಬೇಕು. ಘಟ್ಟದ ರುದ್ರಸೌಂದರ್ಯವನ್ನು ಸವಿಯಬೇಕೆಂದು ನೀವು ಬಸ್ಸಿನಲ್ಲಿ ಪಯಣಿಸುವಿರಾದರೆ ನೀವು ಅಷ್ಟು ಆಸೆಯಿಟ್ಟುಕೊಳ್ಳದಿರುವುದೇ ಒಳ್ಳೆಯದು. ಬಸ್ಸು ಒಂದೆರಡು ತಿರುವು ತಿರುಗಿದ್ದೇ ತಡ, ಪಕ್ಕದಿಂದ ಬೇಡಿಕೆ ಬರುತ್ತದೆ "ವಾಂತಿ ಮಾಡಬೇಕು" ಪ್ರಕೃತಿಯ ಕರೆ, ಇಲ್ಲ ಅನ್ನುವಂತೆಯೇ ಇಲ್ಲ. ಅದೇನು ಬಸ್ಸಿನಲ್ಲಿ ವಾಂತಿಮಾಡುವುದು ಸಾಂಕ್ರಾಮಿಕ ರೋಗವೋ ಏನೋ, ಮತ್ತೊಂದೆರಡು ತಿರುವು ಹೋಗುವಷ್ಟರೊಳಗೆ ಇಡೀ ಬಸ್ಸಿಗೆ ಬಸ್ಸೇ ಕಿಟಕಿಯಿಂದ ತಲೆ ಹೊರಚಾಚಿ ವಾಂತಿಮಾಡಿಕೊಳ್ಳುತ್ತಿರುತ್ತದೆ. ಆಗಂತೂ ನೀವು ವಾಂತಿ ಮಾಡದಿದ್ದರೂ ಕಿಟಕಿಯನ್ನು ಮುಚ್ಚಿ ತೆಪ್ಪಗೆ ಕೂತುಕೊಳ್ಳುವುದೇ ವಾಸಿ. ಇನ್ನು, ಹಿಂದಿನವರಿಗೆ ಯಾವುದೇ ಪೂರ್ವಸೂಚನೆ ಕೊಡದೆ ತಲೆ ಹೊರಹಾಕಿ ವಾಂತಿಮಾಡುವ ಭೂಪ-ಭೂಪತ್ನಿಯರೂ (ವೈಯಾಕರಣರು ಮನ್ನಿಸಬೇಕು) ಇರುತ್ತಾರೆ. ಆಗಂತೂ ಮನೆ ತಲುಪಿದ ಮೇಲೆ ನಿಮಗೆ ಸಚೇಲಸ್ನಾನವೇ ಗಟ್ಟಿ. ಅದುವರೆಗೂ ಮತ್ತೊಮ್ಮೆ ಮುಖಪ್ರಕ್ಷಾಳನವಾಗದಂತೆ ಕಿಟಕಿ ಭದ್ರಮಾಡಿಕೊಂಡು ಮನೆಯ ಬರವನ್ನೇ ಹಾರೈಸುತ್ತಾ ಮುದುರಿ ಕೂಡುವುದಷ್ಟೇ ನಿಮ್ಮ ಕೆಲಸ. ಕಿಟಕಿಗೆ ಆಸೆಪಟ್ಟಿರಲ್ಲವೇ, ಅದರ ಫಲ ಇದು. ಆಸೆಯೇ ದುಃಖಕ್ಕೆ ಮೂಲಕಾರಣ ಎಂದು ಬುದ್ಧ ಹೇಳಿದ್ದ, ಆದರೆ ನಿಮಗಂತು ಬುದ್ಧಿ ಬರಲಿಲ್ಲ. "ಅವಶ್ಯಮನುಭೋಕ್ತವ್ಯಂ ಕೃತಂ ಕರ್ಮ ಶುಭಾಶುಭಂ..."&lt;br /&gt;&lt;br /&gt;ಇಷ್ಟಾದರೂ ಕಿಟಕಿಯ ಸೆಳೆತವಂತೂ ಹೋಗದು. ಕಿಟಕಿ ಪಕ್ಕದ ಸೀಟಿನಲ್ಲಿ ಏನೋ ಆಕರ್ಷಣೆ ಇದೆ. ಈ ಮಾತನ್ನು ನಿಮ್ಮಲ್ಲಿ ಬಹಳಷ್ಟು ಮಂದಿ ಒಪ್ಪುತ್ತೀರಿ ಎಂದು ನನಗೂ ಗೊತ್ತು. ಪಯಣಕ್ಕೆ ಯಾವ ಸೀಟಾದರೇನು, ಅದು ಎತ್ತಿ ಹಾಕದಿದ್ದರೆ ಸರಿ ಎನ್ನುವ ಸೌಕರ್ಯವಾದಿಗಳೂ ಸಹ, ಅವಕಾಶ ಸಿಕ್ಕರೆ ಕಿಟಕಿಯ ಸೀಟನ್ನೇ ಬಯಸುತ್ತಾರೆನ್ನುವುದು ನನ್ನ ಅನುಭವಕ್ಕೆ ಬಂದ ಸತ್ಯ. ಇಷ್ಟಕ್ಕೂ ಅಂಥಾದ್ದೇನಿದೆ ಕಿಟಕಿ ಪಕ್ಕದಲ್ಲಿ? ಇನ್ನೇನಿಲ್ಲದಿದ್ದರೂ ಆರಾಮವಾಗಿ ಪಕ್ಕಕ್ಕೊರಗಿ ಕೂಡಲು ಆಧಾರ ಸಿಗುತ್ತದೆ. ಮತ್ತೆ ತುಂಬಿದ ಬಸ್ಸಿನಲ್ಲಿ ನೀವು ಕಿಟಕಿಯ ಅಕ್ಕದ (ಕಿಟಕಿ ಪಕ್ಕದ ಪಕ್ಕ!) ಸೀಟಿನಲ್ಲೇನಾದರೂ ಕುಳಿತರೆ ನಿಮ್ಮ ತಲೆಯಮೇಲೇ ಬುಟ್ಟಿಯನ್ನಿಟ್ಟು ನಿಮ್ಮ ಹೆಗಲಮೇಲೆ ಪೃಷ್ಠವನ್ನೂರಿ ನಿಂತೇ ಪಯಣಿಸುವವರ ಕೋಟಲೆಯಿದೆ. ಅದರಿಂದ ತಪ್ಪಿಸಿಕೊಳ್ಳಬೇಕಾದರೆ ಕಿಟಕಿ ಪಕ್ಕದ ಸೀಟೇ ಉತ್ತಮ. ಅಲ್ಲದೇ ಕಿಟಕಿ ಪಕ್ಕ ಒಳ್ಳೆ ಗಾಳಿಯಾಡುತ್ತದೆ. ಅಷ್ಟು ಬಿಟ್ಟರೆ ಕಿಟಿಕಿ ಸೀಟಿನ "ಐಹಿಕ"ಉಪಯೋಗಗಳೇನೂ ಕಾಣೆ. ಆದರೆ ಕಿಟಕಿ ಪಕ್ಕದ ಪ್ರಯಾಣದ ನಿಜವಾದ ಸುಖವೇ ಬೇರೆ.&lt;br /&gt;&lt;br /&gt;ಮೇಲೆ ಹೇಳಿದ ಕೋಟಲೆ-ಕಿರಿಕಿರಿಗಳೊಂದೂ ಇಲ್ಲದ ಕಿಟಕಿ ಸೀಟು ನಿಮಗೆ ದಕ್ಕಿತೆಂದುಕೊಳ್ಳಿ. ನಿಮ್ಮ ಮುಂದಿನ ಮೂರೋ ಐದೋ ಹತ್ತೋ ಗಂಟೆಗಳ ಪಯಣದದಾರಿ, ನಿಮ್ಮದೇ ಭಾವಪ್ರಪಂಚದ ಪಯಣಕ್ಕೆ ರಹದಾರಿ. ಬಸ್ಸು ಹೊರಟ ಮೊದಲ ಹತ್ತು-ಹದಿನೈದು ನಿಮಿಷದ ಗದ್ದಲ ಗಲಿಬಿಲಿ ಶಾಂತವಾಗುತ್ತಿದ್ದಂತೆ ನಿಧಾನವಾಗಿ ಬಸ್ಸಿನ ಒಳ ಆವರಣ ಮರೆಯುತ್ತಾ ಹೋಗುತ್ತದೆ. ಹೊರಗಡೆ ಕಿಟಕಿಯ ಚೌಕಟ್ಟಿನ ಮಧ್ಯೆ ಓಡುವ ದೃಶ್ಯಾವಳಿ, ತೀಡುವ ಗಾಳಿ, ಬಸ್ಸಿನ ಎಂಜಿನ್ನಿನ ಏಕತಾನದ ನಾದ ಎಲ್ಲವೂ ಸೇರಿ ನಿಧಾನಕ್ಕೆ ಹೊಸದೊಂದು ಪ್ರಪಂಚವನ್ನು ತೆರೆದಿಡುತ್ತದೆ. ಹೊರಗೆ ಓಡುತ್ತಿರುವ ಬಸ್ಸಿಗೆ ಸಮಾನಾಂತರವಾಗಿ ನಿಮ್ಮ ಮನಸ್ಸಿನಲ್ಲೂ ಆಲೋಚನೆಗಳ ಬಸ್ಸು ಓಡತೊಡಗುತ್ತದೆ. ಆಲೋಚನೆಗಳು ನಿಧಾನವಾಗಿ ಕಲ್ಪನೆಗಳಾಗುತ್ತವೆ, ಕನಸಾಗುತ್ತವೆ. ಹಾಗೆಂದು ನೀವೇನು ನಿದ್ದೆ ಮಾಡಿಲ್ಲ. ಹೊರಗೆ ನಡೆಯುವ ಪ್ರತಿಯೊಂದು ವಿದ್ಯಮಾನಗಳನ್ನೂ ಗಮನಿಸುತ್ತಿದ್ದೀರಿ, ಅವೆಲ್ಲವೂ ನಿಮ್ಮ ಭಾವಪ್ರಪಂಚದಲ್ಲಿ ದಾಖಲಾಗುತ್ತಿವೆ - ಓಡುವ ಮರ-ಗಿಡಗಳು, ರಸ್ತೆ ಕಲ್ಲುಗಳು, ವಿದ್ಯುತ್ ಕಂಬಗಳು, ಕಂಬದಿಂದ ಕಂಬಕ್ಕೆ ಏರುತ್ತಾ ಇಳಿಯುತ್ತಾ ನರ್ತಿಸುವ ತಂತಿಗಳು, ಮಧ್ಯೆ ಮಧ್ಯೆ ಬಂದುಹೋಗುವ ಊರುಗಳು, ಅಲ್ಲೆಲ್ಲಾ ಕಳ್ಳೇಕಾಯಿ, ಸೌತೇಕಾಯಿ, ಮಿಠಾಯಿ ವಡೆ ಮಾರುವ ಹುಡುಗರು, ಊರು ಬದಲಾಗುತ್ತಿದ್ದಂತೆಯೇ ಬದಲಾಗುವ ಅವರ ವೇಷಭೂಷಣಗಳು, ನಡೆ-ನುಡಿಗಳು, ದಾರಿಯಲ್ಲಿ ಅಡ್ಡಹಾಯುವ ಬೆಟ್ಟಗುಡ್ಡ, ನದಿಗಳು, ದಾರಿಯುದ್ದಕ್ಕೂ ಹಾದುಹೋಗುವ ಸುಂದರವಾದ ಹಳ್ಳಿಗಳು, ಮನೆಗಳ ಚಿಮಣಿಯಿಂದ ಏಳುತ್ತಿರುವ ತೆಳ್ಳನೆ ಹೊಗೆ, ಹೊಲದಲ್ಲಿ ಕಣ್ಣಿ ಕಿತ್ತುಕೊಂಡು ಕಿವಿಯಲ್ಲಿ ಗಾಳಿಹೊಕ್ಕಂತೆ ಓಡುತ್ತಿರುವ ಬಿಳೀ ಕರು, ಕನಸಿನೂರಿನ ದಾರಿಗಳಂತೆ ಅಂಕುಡೊಂಕಾಗಿ ಏರಿಳಿದು ಮರೆಯಾಗುವ ಒಳದಾರಿಗಳು; ಕೆಲವೊಮ್ಮೆಯಂತೂ ಅಲ್ಲೇ ಇಳಿಯಬೇಕೆನ್ನಿಸುತ್ತದೆ, ಆದರೆ ನೀವು ಟಿಕೇಟು ತೆಗೆದುಕೊಂಡಿರುವುದು ಕೊನೆಯ ಸ್ಟಾಪಿಗೆ. ಇಲ್ಲಿ ಇಳಿದರೆ ಮತ್ತೆ ನಿಮ್ಮೂರು ಸೇರುವುದು ಕಷ್ಟ.&lt;br /&gt;&lt;br /&gt;ಚಲಿಸುತ್ತಿರುವ ಬಸ್ಸಿನ ಎಂಜಿನ್ನಿನ ಏಕತಾನದ ನಾದವೂ ಮನಸ್ಸಿನಲ್ಲಿ ಅದೊಂದು ಆಧಾರಶ್ರುತಿಯನ್ನು ನಿರ್ಮಿಸುತ್ತದೆ. ಸಾಮಾನ್ಯವಾಗಿ ನನ್ನಷ್ಟಕ್ಕೆ ನಾನು ಪಯಣಿಸುತ್ತಿರುವಾಗ ಮನಸ್ಸಿನಲ್ಲಿ ಯಾವುದೋ ರಾಗವೋ ರಚನೆಯೋ ಗುನುಗುತ್ತಿರುತ್ತಿದೆ. ಅನೇಕ ಸಲ ಎಚ್ಚೆತ್ತು ಗಮನಿಸಿದಾಗ ಅದು ಎಂಜಿನ್ನಿನ ಶ್ರುತಿಗೆ ಅನುಸಾರವಾಗಿ ಹೋಗುತ್ತಿರುವುದನ್ನು ಗಮನಿಸಿ ಆಶ್ಚರ್ಯಪಟ್ಟಿದ್ದೇನೆ. ಅಷ್ಟೇಅಲ್ಲ, ನೀವು ನಿಯಮಿತ ದಾರಿಯಲ್ಲಿ ಪಯಣಿಸುತ್ತಿದ್ದೀರಾದರೆ ನಿಮ್ಮ ಆಲೋಚನೆಯ ಅಲೆಯೂ ಅದೊಂದು ರೀತಿಯ ನಿಶ್ಚಿತತೆಯನ್ನು ಪಡೆಯುತ್ತದೆ. ಉದಾಹರಣೆಗೆ ನಾನು ಸಾಮಾನ್ಯವಾಗಿ ಮೈಸೂರು ಬೆಂಗಳೂರು ಮಾರ್ಗವಾಗಿ ಪಯಣಿಸುವಾಗೆಲ್ಲಾ ಒಂದೊಂದು ಊರು ಬರುವಹೊತ್ತಿಗೆ ಆಲೋಚನೆ ಕೆಲವೊಂದು ನಿರ್ಧರಿತ ದಿಕ್ಕಿಗೆ ಹೊರಳಿಕೊಳ್ಳುತ್ತದೆ. ಚನ್ನಪಟ್ಟಣ ಬಂದಂತೆಲ್ಲ ನಮ್ಮ ತಾತನವರ ಮನೆ, ನನ್ನ ಬಾಲ್ಯದ ನೆನಪುಗಳು ದಟ್ಟವಾಗುತ್ತಾ ಹೋಗುತ್ತದೆ. ಅವರ ಮನೆಯ ಕೊಟ್ಟಿಗೆ, ಅಲ್ಲಿ ತುಂಗೆ ಕರುವಿನೊಡನೆ ಗಂಟೆಗಟ್ಟಲೆ ಹರಟುತ್ತಾ ಕಳೆಯುತ್ತಿದ್ದುದು, ತಾತನವರ ಮನೆಯ ದೇವರಪೂಜೆಯ ವೈಭವ, ಪೂಜೆಯ ಸಮಯದಲ್ಲಿ ನಡೆಯುತ್ತಿದ್ದ ವೇದಘೋಷ, ಮತ್ತೆ ನಾನೂ ನನ್ನ ಓರಗೆಯ ಕಿಟ್ಟಿಯೂ ಅನೇಕಬಾರಿ ಅಭಿನಯಿಸುತ್ತಿದ್ದ ಕರ್ಣಾರ್ಜುನರ ಯುದ್ಧ, ಭೀಮ-ದುರ್ಯೋಧನರ ಕಾಳಗ - ಮನೆಯ ಅಂಗಳವೇ ನಮ್ಮ ರಣರಂಗ, ಮಟ್ಟಾಳೆ ಕಸಬರಿಕೆಯ ಕಡ್ಡಿಯೇ ಬಿಲ್ಲು ಬಾಣ, ಹಾಕಿದ್ದ ಶರಟಿನ ಹಿಂಬದಿಯೇ ನಮ್ಮ ಅಕ್ಷಯ ತೂಣೀರ; ಆಗೀಗ ಮನೆಯ ಮುಂದೆ ಕಟ್ಟಿರುತ್ತಿದ್ದ ಬಾಳೆಯ ಕಂದೇ ಗದೆ. ಹೀಗೊಮ್ಮೆ ದುರ್ಯೋಧನನಾದ ನಾನು (ನನಗೆ ದಕ್ಕುತ್ತಿದ್ದದ್ದು ಯಾವಾಗಲೂ ಕೆಟ್ಟ ಪಾತ್ರಗಳೇ), ಭೀಮನಾದ ಕಿಟ್ಟಿಯ ಮುಖಕ್ಕೆ ಬಾಳೆ ಕಂದಿನ ಗದೆಯಿಂದ ಅಪ್ಪಳಿಸಿದ್ದರ ಪರಿಣಾಮವಾಗಿ ಅವನ ಕಣ್ಣು ಹೋಗಿಬಿಡುವುದರಲ್ಲಿತ್ತು. ತತ್ಪರಿಣಾಮವಾಗಿ ಇಬ್ಬರಿಗೂ ಭೀಷ್ಮಪಿತಾಮಹರಿಂದ ಸರಿಯಾಗಿ ಲಾತಾಗಳೂ ಬಿದ್ದಿದ್ದವು.&lt;br /&gt;&lt;br /&gt;ಸರಿ, ಇನ್ನೇನು ಮದ್ದೂರು ಬಂತು. ಇಳಿದು ಊಟಮುಗಿಸಿ ಮತ್ತೆ ಗಾಡಿ ಹತ್ತಿದರೆ ಮಂಡ್ಯದವರೆಗು ಒಂದಿಪ್ಪತ್ತು ನಿಮಿಷ ಸಣ್ಣ ಜೋಂಪು. ಪಯಣದುದ್ದಕ್ಕೂ ಮನಸ್ಸು ಯಾವುದಾದರೂ ರಾಗವನ್ನೋ ರಚನೆಯನ್ನೋ ಗುನುಗುತ್ತಿರುತ್ತದೆ ಎಂದೆನಷ್ಟೇ. ಈ ಮಾರ್ಗದಲ್ಲಿ ಅದರಲ್ಲೂ ಒಂದು ನಿರ್ದಿಷ್ಟ pattern ಇದೆ ಎಂಬುದನ್ನು ಇತ್ತೀಚೆಗಷ್ಟೇ ಗಮನಿಸಿದೆ. ಮಂಡ್ಯ ಬಿಟ್ಟು ಒಂದು ಹತ್ತು ಹದಿನೈದು ನಿಮಿಷ ಬಾಬುರಾಯನ ಕೊಪ್ಪಲು ಬರುವ ಹೊತ್ತಿಗೆ, ಅದೇನೇ ಯೋಚಿಸುತ್ತಿದ್ದರೂ ಮನಸ್ಸು ಅಪ್ರಯತ್ನತಃ ತೋಡಿ ರಾಗದ ಮಟ್ಟುಗಳನ್ನು ಗುನುಗುನಿಸತೊಡಗುತ್ತದೆ. ಇದನ್ನು ಬಹುಕಾಲ ಗಮನಿಸಿರಲಿಲ್ಲ, ಆದರೆ ಎರಡುಮೂರು ಬಾರಿ ಗಮನಿಸಿದಾಗ ಆಶ್ಚರ್ಯವಾಗಿತ್ತು, ಅದೇಕೆ ಆ ಸ್ಥಳದಲ್ಲೇ ಇದೇ ರಾಗ ನೆನಪಿಗೆ ಬರುತ್ತದೆ? ಉತ್ತರಮಾತ್ರ ಹೊಳೆದಿರಲಿಲ್ಲ. ಮನಸ್ಸಿನಲ್ಲೇ ಒಂದು ಕಿರು ಆಲಾಪನೆ ಮುಗಿದು, ಪಲುಕು ತಾನಾಗೇ "ಕಂಗಳಿದ್ಯಾತಕೋ ಕಾವೇರಿ ರಂಗನ ನೋಡದ..." ಎಂದು ಶುರು ಮಾಡುವ ಹೊತ್ತಿಗೆ ಬಸ್ಸು ಕಾವೇರಿಯ ಮೊದಲ ಕವಲನ್ನು ದಾಟಿ ಶ್ರೀರಂಗಪಟ್ಟಣದಲ್ಲಿರುತ್ತದೆ. ಕಾವೇರಿಗೂ, ಶ್ರೀರಂಗನಿಗೂ ಈ ಹಾಡಿಗೂ ಸಂಬಂಧವಿದ್ದರೂ, ತೋಡಿ ರಾಗದ ಈ ಹಾಡಿಗೆ ಪೀಠಿಕೆಯಾಗಿಯೇ ಆ ರಾಗ ಅಷ್ಟುಹೊತ್ತಿನಿಂದ ಮನಸ್ಸಿನಲ್ಲಿ ತೊಡಗಿದ್ದು ಎಂದು ಹೊಳೆದಾಗಮಾತ್ರ ನನಗಾದ ಆಶ್ಚರ್ಯ ಅಷ್ಟಿಷ್ಟಲ್ಲ. ಈ ಅಚ್ಚರಿ ಅಷ್ಟಕ್ಕೇ ಮುಗಿಯುವುದಿಲ್ಲ. ಬಸ್ಸು ಕಾವೇರಿಯ ಮತ್ತೊಂದು ಕವಲನ್ನು ದಾಟಿ ಶ್ರೀರಂಗಪಟ್ಟಣವನ್ನು ಬಿಡುವಹೊತ್ತಿಗೆ ಆ ಹಾಡು (ಅಥವ ಒಂದು ಚರಣ) ಮುಗಿದು, ಹಾಡು "ರಂಗ ನಾಯಕಂ... ಭಾವಯೇ..." (ನಾಯಕೀ ರಾಗ) ಎಂದು ತಿರುಗಿರುತ್ತದೆ. ಅದರನಂತರ ಅದೇ ರಾಗವನ್ನು ತುಸುಹೋಲುವ "ದರ್ಬಾರು" (ಇದಕ್ಕೂ ಮೈಸೂರು ದರ್ಬಾರಿಗೂ ಸಂಬಂಧವಿದೆಯೇ, ದೇವರೇ ಬಲ್ಲ), ಅದರನಂತರ "ದರ್ಬಾರೀ ಕಾನಡ" ಶೇಷಣ್ಣನವರ ತಿಲ್ಲಾನದ್ದೊಂದು ಪಲುಕು... ಕೊನೆಗೆ ಬಿಲಹರಿಯದೊಂದು ತುಣುಕು, "ಶ್ರೀ ಚಾಮುಂಡೇಶ್ವರಿ ಪಾಲಯ ಮಾಂ" ಎಂದು ಮುಗಿಸುವಹೊತ್ತಿಗೆ ಮೈಸೂರು ಬಸ್ ನಿಲ್ದಾಣ ಬಂದಿರುತ್ತದೆ. ಈಗಂತೂ ಅದನ್ನು ನಾನು ಗಮನಿಸಿಬಿಟ್ಟಿರುವುದರಿಂದ ಮೊದಲಿನಷ್ಟು ನಿಶ್ಚಿತತೆ, spontaneity ಇಲ್ಲ.&lt;br /&gt;&lt;br /&gt;ಅದೇನೇ ಇರಲಿ, ಮನಸ್ಸಿನ ಮಾರ್ಗಗಳನ್ನು ಕಂಡು ಬೆರಗಾಗಿದ್ದೇನೆ. ಅದು ತನ್ನನ್ನು ತಾನೇ ರಂಜಿಸಿಕೊಳ್ಳುವ, ಕಲ್ಪನೆ ಕಟ್ಟುವ, ಕಂಪನಿ ಕೊಟ್ಟುಕೊಳ್ಳುವ ಪರಿ ನಿಜಕ್ಕೂ ಅದ್ಭುತ. ಒಳಗಿನ ’ನಿಶ್ಶಬ್ದ’ಕ್ಕೆ ಹೆದರಿ ಹೊರಗೆ ಗದ್ದಲದ "ಸಂಗೀತ"ಕ್ಕೆ ಮರೆಹೊಗುವವರನ್ನು ಕಂಡಾಗ ಮರುಕವುಂಟಾಗುತ್ತದೆ. ಈ ಗದ್ದಲವನ್ನು ಒಂದೇ ಕ್ಷಣ ಬಂದು ಮಾಡಿ, ನಿಮ್ಮೊಳಗಿನ ದನಿಯನ್ನು ಆಲಿಸಿ ನೋಡಿ, ಅದೇ ಒಂದು ಲೋಕ. ಅಲ್ಲಿ ನಿಮಗೆ "ಬೋರ್"ಎಂಬುದು ಆಗಲು ಸಾಧ್ಯವೇ ಇಲ್ಲ. ಈ ಲೋಕ ತೆರೆದುಕೊಳ್ಳುವ ಅಂಥ ಒಂದು ಸಂದರ್ಭ, ಕಿಟಕಿ ಪಕ್ಕದ ಸೀಟು. ಮುಂದಿನ ಸಲ ಪಯಣಿಸುವಾಗ ಪುಸ್ತಕಕ್ಕೋ ಐಪೋಡಿಗೋ ಮರೆಹೊಗಬೇಡಿ. ಸುಮ್ಮನೇ ಕಿಟಿಕಿಯಾಚೆ ಕಣ್ಣುಕೀಲಿಸಿ ಓಡುವ ಬಸ್ಸಿನೊಡನೆ ನಿಮ್ಮ ಮನಸ್ಸನ್ನು ಹರಿಯಬಿಡಿ. ಆಮೇಲೆ ನೋಡಿ.&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-8333986172005756226?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/8333986172005756226/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=8333986172005756226&amp;isPopup=true' title='28 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/8333986172005756226'/><link rel='self' type='application/atom+xml' href='http://www.blogger.com/feeds/2037979210344114254/posts/default/8333986172005756226'/><link rel='alternate' type='text/html' href='http://nannabaraha.blogspot.com/2010/07/blog-post.html' title='ಕಿಟಕಿ ಪಕ್ಕದ ಸೀಟು'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>28</thr:total></entry><entry><id>tag:blogger.com,1999:blog-2037979210344114254.post-3407822734233337179</id><published>2010-05-05T14:28:00.006+05:30</published><updated>2010-05-06T12:05:26.430+05:30</updated><category scheme='http://www.blogger.com/atom/ns#' term='೦೬. ಚುಚ್ಚಿದ್ದು - ಕಚ್ಚಿದ್ದು'/><title type='text'>ಹೀಗೊಂದು ಬಿಕರೀ ನೋಟೀಸು</title><content type='html'>&lt;div align="justify"&gt;ಮೊನ್ನೆ ಸತ್ಯ ಇದ್ದಕ್ಕಿದ್ದಹಾಗೆ ಫೋನಾಯಿಸಿ "ನನ್ನ ಲೈಬ್ರರಿ sale ಮಾಡಬೇಕು ಅಂತಿದೀನಿ ಮಂಜು" ಅಂದಾಗ ಒಂದು ಕ್ಷಣ ಅವರು ಜೋಕ್ ಮಾಡುತ್ತಿದ್ದಾರೆನ್ನಿಸಿತು. ಕೂಲಾಗಿ "ಸರಿ ಮಾಡಿ, ಎಷ್ಟು ಬೇಕು ಹೇಳಿ ಕೊಡೋಣ" ಎಂದೆ. ನಾವು ಆಗಾಗ ಭೆಟ್ಟಿಯಾದಾಗೆಲ್ಲಾ ಅದೂ ಇದು ಕಾಡುಹರಟೆಯ ನಡುವೆ ಏನಾದರೂ ಹಣಕಾಸಿನ ಕಷ್ಟ-ಸುಖದ ವಿಷಯ ಬಂದರೆ "ನನ್ನ ಲೈಬ್ರರಿ ತಗೊಂಡು ಎರಡು ಸಾವಿರ ಕೊಡಿ ಮಂಜು" ಎನ್ನುವುದು, ನಾನು "ಅದು ತುಂಬಾ ಜಾಸ್ತಿಯಾಯಿತು" ಎಂದು ನಗೆಯಾಡುವುದು ವಾಡಿಕೆ. ಒಂದು ಕ್ಷಣ ಮೌನದ ನಂತರ ಹೇಳಿದರು "ಇಲ್ಲ ಮಂಜು, ನಾನು serious ಆಗಿ ಹೇಳ್ತಾ ಇದೀನಿ". ಅರೇ, ಹೌದಲ್ಲ. ಮೊನ್ನೆ ತಾನೆ ಹಠಾತ್ತಾಗಿ ತಮ್ಮನನ್ನು ಕಳೆದುಕೊಂಡ ದುಃಖದಲ್ಲಿದ್ದ ಸತ್ಯ ಜೋಕ್ ಮಾಡುವ ಮನಸ್ಥಿತಿಯಲ್ಲೇನೂ ಇಲ್ಲ ಎಂದು ಹೊಳೆಯಿತು. ಮತ್ತೆ? ನಿಜಕ್ಕೂ ಲೈಬ್ರರಿ ಮಾರಿಬಿಡುತ್ತಿದ್ದಾರೆಯೇ? ಕ್ಷಣ ನಂಬಲಾಗಲಿಲ್ಲ. ಹಾಗೊಂದುವೇಳೆ ಇದು ಜೋಕ್ ಅಲ್ಲವೆಂದಾದರೆ, ಈ ಮಾತು ಸತ್ಯನ ಬಾಯಲ್ಲಿ ಬರಲು ಸಾಧ್ಯವೇ ಇರಲಿಲ್ಲ. ಏಕೆಂದರೆ ನಾನು ಬಾಲ್ಯದಿಂದಲೂ ಬಲ್ಲ ಈತ ತಮ್ಮ ಪುಟ್ಟ ಲೈಬ್ರರಿ ಕಟ್ಟಿ ಬೆಳೆಸಿಕೊಂಡಿದ್ದ ಪರಿಯನ್ನು ಕಣ್ಣಾರೆ ಕಂಡಿದ್ದೆ.&lt;br /&gt;&lt;br /&gt;ಚಿಕ್ಕಂದಿನಲ್ಲೇ ಸಿನೆಮಾ-ನಾಟಕ-ಸಾಹಿತ್ಯಗಳ ಗೀಳು ಹತ್ತಿಸಿಕೊಂಡು, ಮುಂದೊಮ್ಮೆ ಅದೇನೋ ಸಾಧಿಸುವ ಕನಸು ಕಣ್ಣಲ್ಲಿಟ್ಟುಕೊಂಡು ಓದು ಬಿಟ್ಟು ಊರು ಬಿಟ್ಟು ಬೆಂಗಳೂರು ಸೇರಿದ ಹುಡುಗ, ಕಲಾವಿದನಾಗಿ ಸಾಕಷ್ಟು ಬೆಳೆಯುತ್ತಾ, ಸಿಜಿಕೆ, ಬಿ.ವಿ.ಕಾರಂತ ಇತ್ಯಾದಿ ಘಟಾನುಘಟಿಗಳೊಂದಿಗೆ ದುಡಿಯುತ್ತಾ ಕಲೆಯ ಬದುಕನ್ನು ರೂಪಿಸಿಕೊಂಡರು. ಹವ್ಯಾಸಿ ರಂಗಭೂಮಿ ವಲಯದಲ್ಲಿ "ಕತ್ಲು ಸತ್ಯ" ಎಂದೇ ಹೆಸರಾಗಿದ್ದ ಸತ್ಯನಾರಾಯಣ, "ಬಾವಿ", "ಡಾಂಬರು ಬಂದದ್ದು" ಇತ್ಯಾದಿ ಸ್ವತಃ ಕೆಲವು ನಾಟಕಗಳನ್ನೂ ರಚಿಸಿದ್ದಲ್ಲದೇ, ರಂಗಕರ್ಮಿ/ನಿರ್ದೇಶಕರಾಗಿ ಕೂಡ ಸಾಕಷ್ಟು ಹೆಸರು ಮಾಡಿದರು.&lt;br /&gt;&lt;br /&gt;ಅರಸನ ಅಂಕೆಯಿಲ್ಲದೆ ದೆವ್ವದ ಕಾಟವಿಲ್ಲದೆ ಮನಸ್ಸಿಗೆ ಸರಿಕಂಡದ್ದನ್ನು ಮಾಡುತ್ತಾ, ತನಗಿಷ್ಟವಾದ ಬದುಕು ಬದುಕುವ, ಸರಳಾತಿಸರಳ ಜೀವನ ಶೈಲಿಯ ಸತ್ಯ ನಮಗೆಲ್ಲಾ ಒಂದುರೀತಿ ಅಸೂಯೆ ಹುಟ್ಟಿಸಿದ್ದ ವ್ಯಕ್ತಿ. ಈ ಸಿನಿಮಾ-ನಾಟಕಗಳ ಗೀಳಿಗೆ ಹತ್ತಿಕೊಂಡಂತೆ ಬಂದಿದ್ದ ಮತ್ತೊಂದು ಗೀಳು ಪುಸ್ತಕಗಳದು. ನಾವೆಲ್ಲಾ ಬೇಜಾರಾದಾಗ TV, ಸಿನೆಮಾ ನೋಡಿದರೆ ಈ ಮನುಷ್ಯ ಸುಳಿಯುತ್ತಿದ್ದುದು ಪುಸ್ತಕದ ಅಂಗಡಿಗಳ ಮುಂದೆ. ಊರಲ್ಲಿ ಎಲ್ಲಿ ಪುಸ್ತಕ ಮೇಳವಾದರೆ ಅಲ್ಲಿ ಸತ್ಯ ಹಾಜರು, ಕೈಗೊಂದು ಐದೋ ಆರೋ ಪುಸ್ತಕ ಖರೀದಿಸಿದ್ದೇ ಸೈ. ಕೊಳ್ಳಲು ಸೆಕೆಂಡ್ ಹ್ಯಾಂಡ್, ಫಸ್ಟ್ ಹ್ಯಾಂಡ್, ಅಗ್ಗ, ದುಬಾರಿಯ ಪ್ರಶ್ನೆ ಬರುತ್ತಲೇ ಇರಲಿಲ್ಲ. ಪುಸ್ತಕ ಅಪರೂಪದ್ದಾದರೆ, ಮೌಲಿಕವಾದದ್ದಾದರೆ ಅದು ಮನೆ ಸೇರಲೇಬೇಕು; ಪುಸ್ತಕದ ಆಯ್ಕೆಯಲ್ಲಿ, ಆಟದ ಸಾಮಾನು ಆಯ್ದುಕೊಳ್ಳುವ ಹುಡುಗನ ತನ್ಮಯತೆ ಇರುತ್ತಿತ್ತು. ತಂದದ್ದು ಅಲಂಕಾರಕ್ಕಲ್ಲ, ಮುಂದೆರಡು ಮೂರು ದಿನ ಪಟ್ಟು ಹಿಡಿದು ಅದನ್ನು ಓದಿ ಮುಗಿಸಬೇಕು. ಬಹಳಷ್ಟು ಪುಸ್ತಕಗಳನ್ನು ಪುಸ್ತಕಮೇಳಗಳಲ್ಲೇ ಖರೀದಿಸುತ್ತಿದ್ದುದರಿಂದ, ಅದರಲ್ಲಿ ಬಹಳಷ್ಟು "ಭಾರಿ" ಪುಸ್ತಕಗಳೇ ಆದ್ದರಿಂದ ಇದೊಂದು ದುಬಾರಿ ಹವ್ಯಾಸವಾಗಿ ಪರಿಣಮಿಸಿತ್ತು. ಇವತ್ತು ಒಂದು ನೂರು ರುಪಾಯಿ ಉಳಿದರೆ ಒಂದು ಪುಸ್ತಕ್ಕಾದರೂ ಆಗುತ್ತದೆ ಎಂದು ಯೋಚಿಸುತಿದ್ದ ಸತ್ಯ, ಗಳಿಸಿದ, ಉಳಿಸಿದ ಹಣವನ್ನೆಲ್ಲಾ ಪುಸ್ತಕ ಕೊಳ್ಳಲು ಸುರಿಯುತ್ತಿದ್ದರು. ಹೀಗಾಗಿ ಈ ಪುಟ್ಟ ಲೈಬ್ರರಿ ಕೇವಲ ಲೈಬ್ರರಿ ಆಗಿರದೆ ಅವರ ವ್ಯಕ್ತಿತ್ವದ ಒಂದು ಭಾಗವಾಗಿತ್ತು. ಸುಮಾರು ೨೫೦೦ ಪುಸ್ತಕಗಳಿರುವ ಆ ಲೈಬ್ರರಿಯಲ್ಲಿ ಒಂದೊಂದು ಪುಸ್ತಕವೂ ಎಲ್ಲೆಲ್ಲಿ ಇದೆ, ಯಾವಾಗ ಕೊಂಡದ್ದು, ಅದರ ಹೂರಣವೇನು, ಯಾವ ಪುಸ್ತಕದ ಅಟ್ಟೆ ಎಲ್ಲಿ, ಯಾವಾಗ, ಏಕೆ ಹರಿದಿದೆ ಇತ್ಯಾದಿ ವಿವರಗಳನ್ನೆಲ್ಲಾ ಕರಾರುವಾಕ್ಕಾಗಿ ತಿಳಿಸಬಲ್ಲಷ್ಟು ತಾದಾತ್ಮ್ಯ ಸಿದ್ಧಿಸಿತ್ತು ಆ ಪುಸ್ತಕಗಳ ಜೊತೆ. ಬಂದವರೆದುರು ಈ ಸಂಗ್ರಹವನ್ನು ಪ್ರದರ್ಶಿಸುವುದೇ ಹೆಮ್ಮೆ. ಅದು ನಿಜ ಕೂಡ. Afterall, the collection was an owner's pride.&lt;br /&gt;&lt;br /&gt;ಇಂಥಾ ಮನುಷ್ಯ ತಾನು ಕಟ್ಟಿ ಬೆಳೆಸಿದ ಈ ಪುಟ್ಟ ಭಂಡಾರವನ್ನು ಮಾರಿಬಿಡಬೇಕೆಂದರೆ, ಬಂದಿರುವ ತುರ್ತು ಸಾಕಷ್ಟು serious ಆಗಿರಲೇ ಬೇಕೆನ್ನಿಸಿತು. ಈ ವೈಯಕ್ತಿಕ ಪ್ರಶ್ನೆಯನ್ನು ನಾನು ಕೇಳದಿದ್ದರೂ, ಅವರು ತಮ್ಮದೇ ಆಗಿ ಉಳಿದಿದ್ದ ಈ ಏಕಮಾತ್ರ "ಆಸ್ತಿ"ಯನ್ನು ಮಾರಿಬಿಡುವ ನಿರ್ಧಾರಕ್ಕೆ ಬರುವ ಮುನ್ನ ಸುಮಾರು ಎರಡು ತಿಂಗಳ ಕಾಲ ತೊಳಲಾಟವನ್ನನುಭವಿಸಿದ್ದರೆನ್ನುವುದು ತಿಳಿಯುತ್ತಿತ್ತು. ಬಂದ ಕುತ್ತು ಕ್ಷಣಿಕವೇ ಇರಬಹುದು, ಸ್ವಲ್ಪ ಉಸಿರು ಕಟ್ಟಿ ತಡೆದರೆ ಆ ಕುತ್ತು ಹೊರಟುಹೋಗಬಹುದು, ಆದರೆ ಇದು ಮಾತ್ರ ಖಂಡಿತ ಆಗಬಾರದು, ಏಕೆಂದರೆ ಇದು ವ್ಯಕ್ತಿತ್ವದ ಒಂದು ಭಾಗ, ಐಹಿಕ ಸಮಸ್ಯೆಗಳಿಗೋಸ್ಕರ ಮಾರಿಕೊಳ್ಳುವುದಲ್ಲ. ತಾತ್ಕಾಲಿಕವಾಗಿಯಾದರೂ ಏನಾದರೂ ಮಾಡಿ, ಈ ಪುಸ್ತಕಭಂಡಾರವನ್ನು ಉಳಿಸಿಕೊಡಲು ಸಾಧ್ಯವೇ ಇತ್ಯಾದಿ ಯೋಚಿಸಿದೆ. ಆದರೆ ನಾವು ಯಾರೂ ಏನೂ ಮಾಡಲು ಸಾಧ್ಯವಾಗದಷ್ಟು ದೊಡ್ಡದಿತ್ತು ಅವರ ಆರ್ಥಿಕ ಅಗತ್ಯಗಳು; ಮತ್ತೂ ಈ ಲೈಬ್ರರಿಯ ಮಾರಾಟ ಕೂಡ ಅವರ ಇಡೀ ಅಗತ್ಯದಲ್ಲಿ ಕೇವಲ ತುರ್ತಿನ ಅಗತ್ಯಗಳಿಗೆ ಮಾತ್ರ ಸರಿಹೊಂದುವಂತಿತ್ತು. ಲೈಬ್ರರಿ ಮಾರದೆ ಬೇರೆ ದಾರಿಯೇ ಇರಲಿಲ್ಲ. ನಾನು ಇಷ್ಟೆಲ್ಲಾ ಚಿಂತಿಸುತ್ತಿರುವಾಗ ಸತ್ಯ ಹೇಳಿದ ಮಾತು ಇದು. "ನೀವಿರುವ ಈ ಪರಿಸ್ಥಿತಿಯಲ್ಲಿ ಈ ಲೈಬ್ರರಿ ಕೊಂಡುಕೊಳ್ಳಲು ಸಾಧ್ಯವಿಲ್ಲ ಎಂದು ನನಗೆ ಗೊತ್ತು, ಆದರೆ ನಾನು ನಿಮ್ಮನ್ನು ಕೇಳುತ್ತಿರುವುದು ಈ ಬಗ್ಗೆ ಬರೆಯಿರಿ ಅಂತ ಮಾತ್ರ. ನನಗೆ ಗೊತ್ತು, ನನ್ನಷ್ಟೇ ಹುಚ್ಚರು ಯಾವಯಾವುದೋ ಮೂಲೆಯಲ್ಲಿ ಬಹಳಷ್ಟು ಜನ ಇರುತ್ತಾರೆ, ಅವರೊಂದಿಗೆ ಸಂಪರ್ಕ ಸಾಧಿಸುವುದು ಮಾತ್ರ ನಮ್ಮ ಸಧ್ಯದ ಕೆಲಸ; ನಿಮಗೂ ನನ್ನಂಥದೇ ಆಸಕ್ತಿಯಿರುವುದರಿಂದ ನಿಮ್ಮ ಮಿತ್ರರ ಗುಂಪಿನಲ್ಲಿ ಖಂಡಿತಾ ಸಮಾನ ವ್ಯಸನಿಗಳು ಇದ್ದಾರು ಎನ್ನುವುದು ನನ್ನ ನಂಬಿಕೆ" &lt;/div&gt;&lt;div align="justify"&gt;&lt;/div&gt;&lt;div align="justify"&gt;&lt;/div&gt;&lt;div align="justify"&gt;ನನಗೆ ಹೌದೆನ್ನಿಸಿತು.&lt;br /&gt;&lt;br /&gt;ಇನ್ನು ನೇರ ವ್ಯವಹಾರಕ್ಕೆ. ಪ್ರಾಚೀನ ಸಾಹಿತ್ಯದಿಂದ ಹಿಡಿದು ಆಧುನಿಕ ಸಾಹಿತ್ಯದವರೆಗೆ, ಪಾಶ್ಚಾತ್ಯದಿಂದ ಪೌರ್ವಾತ್ಯದವರೆಗೆ, ಕಾವ್ಯ, ನಾಟಕ, ಇತಿಹಾಸ, ಆಧ್ಯಾತ್ಮ, ವಿಜ್ಞಾನ, ಕಲೆ, ರಂಗಭೂಮಿ ಹೀಗೆ ಹತ್ತು ಹಲವು ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು ಎರಡೂವರೆ ಸಾವಿರಕ್ಕೂ ಹೆಚ್ಚು ಪುಸ್ತಕಗಳಿರುವ ಈ ಲೈಬ್ರರಿಗೆ ಅವರು ನಿರೀಕ್ಷಿಸುವ ಒಟ್ಟಂದದ ಬೆಲೆ ಎರಡು ಲಕ್ಷ ರುಪಾಯಿಗಳು (ಸರಾಸರಿ ಪುಸ್ತಕವೊಂದಕ್ಕೆ ೮೦ ರುಪಾಯಿಗಳು). ಪುಸ್ತಕವೊಂದರ ಮೌಲ್ಯ ಯಾವಾಗಲೂ ಅದರ ಮುಖಬೆಲೆಗಿಂತ ಬಹು ಹೆಚ್ಚಿನದು, ಮತ್ತು ಒಂದೊಂದು ಪುಸ್ತಕಗಳ ಬೆಲೆಯ ಮೊತ್ತಕ್ಕಿಂತಾ ಇಡೀ ಪುಸ್ತಕ ಭಂಡಾರದ "ಸಂಗ್ರಹ" ಹೆಚ್ಚು ಬೆಲೆ ಬಾಳುವಂಥದ್ದು ಎಂಬುದು ಯಾವುದೇ ಪುಸ್ತಕಪ್ರೇಮಿಗೆ ತಿಳಿದ ವಿಷಯ. ಮಾರಾಟಕ್ಕಿರುವುದು ಇಡೀ ಲೈಬ್ರರಿಯೇ ಹೊರತು individual ಪುಸ್ತಕಗಳಲ್ಲ. ಒಬ್ಬ ವ್ಯಕ್ತಿ, ಅಲ್ಲದಿದ್ದರೆ ಒಂದು ಗುಂಪು ಕೂಡ ಇದನ್ನು ಖರೀದಿಸಬಹುದು, ಆದರೆ ಇಡೀ ಲೈಬ್ರರಿಯನ್ನು ಒಟ್ಟಿಗೆ ಖರೀದಿಸಬೇಕೆನ್ನುವುದಷ್ಟೇ ಷರತ್ತು, ಇಲ್ಲವೆಂದರೆ ಅದು ತಮ್ಮ ಹಣಕಾಸಿನ ಅಗತ್ಯವನ್ನು ಪೂರೈಸದು, ಹಾಗೂ ಪುಸ್ತಕಗಳನ್ನು ಹರಿದು ಹಂಚುವುದು ಭಾವನಾತ್ಮಕವಾಗಿ ನೋವಿನ ವಿಷಯ ಎಂದು ಅವರ ಅಭಿಪ್ರಾಯ. ಹಾಗೂ ಕೊಂಡವರು ಕೂಡ ಆ ಸಂಗ್ರಹವನ್ನು ಹಾಗೆಯೇ ನೋಡಿಕೊಂಡಾರೆನ್ನುವುದು ಆಶಯ ಕೂಡ.&lt;br /&gt;&lt;br /&gt;ಪುಸ್ತಕ ಸಂಗ್ರಹದ ಕೆಲವು ಚಿತ್ರಗಳು &lt;a href="http://picasaweb.google.co.in/ksmanjunatha/SatyaLibrary"&gt;http://picasaweb.google.co.in/ksmanjunatha/SatyaLibrary&lt;/a&gt;# ಇಲ್ಲಿವೆ.&lt;br /&gt;&lt;br /&gt;ಆಸಕ್ತರು ಸತ್ಯನಾರಾಯಣರನ್ನು ನೇರವಾಗಿ ಸಂಪರ್ಕಿಸಬಹುದು ಮತ್ತು ಬೆಂಗಳೂರಿನಲ್ಲಿರುವ ಅವರ ಮನೆಗೆ ಭೇಟಿನೀಡಿ ಪುಸ್ತಕ ಸಂಗ್ರಹವನ್ನು ನೋಡಬಹುದು. ಅವರ ಮೊಬೈಲ್ ಸಂಖ್ಯೆ + ೯೧ ೯೪೪೮೭ ೦೩೮೬೪ (+ 91 94487 03864)&lt;br /&gt;&lt;br /&gt;ಪುಸ್ತಕ ಸಂಗ್ರಹವನ್ನು ಮಾರುವ ನಿರ್ಧಾರವೇ ನೋವಿನ ನಿರ್ಧಾರ; ಕೊನೆಯ ಪಕ್ಷ ಅದನ್ನು ಮಾರುವ ಪ್ರಕ್ರಿಯೆ ಹೆಚ್ಚು ನೋವಿಲ್ಲದೆಯೇ ನಡೆಯಲೆಂಬುದು ವೈಯಕ್ತಿಕವಾಗಿ ನನ್ನ ಹಾರೈಕೆ. ಏಕೆಂದರೆ ಇದು ಕೇವಲ ಲೈಬ್ರರಿಯೊಂದನ್ನು ಮಾರುವ/ಕೊಳ್ಳುವ ಪ್ರಶ್ನೆಯಲ್ಲ, ಬದಲಿಗೆ ಜೀವನ ಶೈಲಿ/ಮೌಲ್ಯವೊಂದರ ಬಗೆಗಿನ ನಂಬಿಕೆಯ ಪ್ರಶ್ನೆ. ವ್ಯಕ್ತಿಯೊಬ್ಬ materialistic ಆಯಾಮಗಳಿಲ್ಲದೆಯೂ ಆತ್ಮಸಂತೋಷಕ್ಕೋಸ್ಕರವೇ ಬದುಕಬಹುದು ಎಂಬ ನಂಬಿಕೆಗೆ ಪೆಟ್ಟಾಗುವುದಾದರೆ ಅಂಥಾ ಜೀವನಶೈಲಿಯ ಬಗ್ಗೆ ನಾವು ಪುಟಗಟ್ಟಲೆ ಬರೆಯುವುದು, ವರ್ಷಗಟ್ಟಲೆ ಕನಸುವುದು ಎಲ್ಲ ವ್ಯರ್ಥವೆಂದೇ ನನ್ನ ನಂಬಿಕೆ.&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-3407822734233337179?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/3407822734233337179/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=3407822734233337179&amp;isPopup=true' title='4 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/3407822734233337179'/><link rel='self' type='application/atom+xml' href='http://www.blogger.com/feeds/2037979210344114254/posts/default/3407822734233337179'/><link rel='alternate' type='text/html' href='http://nannabaraha.blogspot.com/2010/05/blog-post.html' title='ಹೀಗೊಂದು ಬಿಕರೀ ನೋಟೀಸು'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>4</thr:total></entry><entry><id>tag:blogger.com,1999:blog-2037979210344114254.post-4912753196700753874</id><published>2010-01-07T03:21:00.012+05:30</published><updated>2010-01-08T01:47:49.384+05:30</updated><category scheme='http://www.blogger.com/atom/ns#' term='೦೯. ಪ್ರವಾಸ'/><title type='text'>ಕಾವುದಾನತಜನವ ಗದುಗಿನ ವೀರನಾರಯಣ...</title><content type='html'>&lt;div align="justify"&gt;ಕಳೆದ ವಾರ ರಜಾ ಸೀಸನ್ ಆದ್ದರಿಂದ ಪುಣೆಯಿಂದ ಮೈಸೂರಿಗೆ ಯಾವ ಬಸ್ಸೂ ಸಿಕ್ಕಿರಲಿಲ್ಲ. ಇನ್ನು ಟ್ರೈನಿನ ಮಾತಂತೂ ದೂರವೇ ಉಳಿಯಿತು, ಮಾಮೂಲಿನ ದಿನಗಳಲ್ಲೂ ಅದರ "ವೈಟಿಂಗ್ ಲಿಸ್ಟ್" ಮೊಟಕಾಗಿದ್ದೇ ಇಲ್ಲ. ವಿಮಾನಯಾನದ ದರವಂತೂ ವಿಮಾನದೊಂದಿಗೇ ಗಗನಗಾಮಿಯಾಗಿತ್ತು. ಇನ್ನು ಉಳಿದದ್ದೊಂದೇ, ಕಟ್ ರೂಟಿನ ಹೆಜ್ಜೆಸಾಲಿನ ಪಯಣ. ಹೇಗೂ ದೀರ್ಘ ರಜೆಯಿದ್ದುದರಿಂದ ಪಯಣ ಸ್ವಲ್ಪ ಎಳೆದರೂ ಪರವಾಗಿಲ್ಲವೆಂದುಕೊಂಡು, ಪುಣೆ - ಹುಬ್ಬಳ್ಳಿ - ಬೆಂಗಳೂರು - ಮೈಸೂರು ಹೀಗೆ ಪಯಣವನ್ನು ತುಂಡರಿಸಿಕೊಂಡೆ. ರಾತ್ರೆ ಪುಣೆಯಿಂದ ಹೊರಡುವ ಬಸ್ಸು ಬೆಳಗ್ಗೆ ೭ಕ್ಕೆ ಹುಬ್ಬಳ್ಳಿ ಸೇರುವುದಿತ್ತು. ಅಲ್ಲಿಂದ ಬೆಂಗಳೂರಿಗೆ ಸಂಜೆ ೫ರವರೆಗೂ ಯಾವ ಟ್ರೈನೂ ಖಾಲಿಯಿಲ್ಲ. ಈ ಹತ್ತು ಗಂಟೆಗಳನ್ನು ಕಳೆಯುವುದು ಹೇಗೆ? ಆಗ ಇದ್ದಕ್ಕಿದ್ದಂತೆ ನನ್ನ ಬಹುದಿನದ ಕನಸು ನೆನಪಿಗೆ ಬಂತು. ಬಾಲ್ಯದಿಂದಲೂ ಭಾವನಾತ್ಮಕವಾಗಿ ನನ್ನ ಒಡನಾಡಿಯಾದ ಗದುಗಿನ ಭಾರತ, ಅದರ ಕರ್ತೃ ಕುಮಾರವ್ಯಾಸ, ಅವನ ಸ್ಪೂರ್ತಿಯ ಸೆಲೆಯಾದ ವೀರನಾರಾಯಣನನ್ನು ದರ್ಶಿಸುವುದು, ಕವಿಯ ನೆನಪಿಗೆ ಕಾವ್ಯವಾಚನದ ಅಂಜಲಿಯನ್ನು ಸಲ್ಲಿಸುವುದು ಇದು ನನ್ನ ಬಹುದಿನದ ಕನಸಾಗಿತ್ತು. ಅನೇಕಬಾರಿ ಗದುಗಿಗೆ ಹೋಗಬೇಕೆಂದಿದ್ದರೂ ಸಾಧ್ಯವಾಗಿರಲಿಲ್ಲ; ಹೀಗೆ ನಾನು ಹೋಗಬೇಕೆಂದು ಎಣಿಸಿರುವ ಸ್ಥಳಗಳ ಪಟ್ಟಿಯೇ ಬಹಳ ದೊಡ್ಡದಿದ್ದುದರಿಂದ, ಆ ಪಟ್ಟಿಯಲ್ಲಿ ಇದೂ ಒಂದು ಹೆಸರಾಗಿ ಉಳಿದಿತ್ತಷ್ಟೇ. ಮೊನ್ನೆ ಪವನನ ಮದುವೆಗೆ ಧಾರವಾಡಕ್ಕೆ ಹೋದಾಗಲೂ ಗದುಗಿಗೆ ಹೋಗೋಣವೆಂದುಕೊಂಡೆ, ಆದರೆ ಜೊತೆಯಿದ್ದ ಗುಂಪಿನ ಆಸಕ್ತಿಗಳಿಗೆ ಈ ಆಲೋಚನೆ ಕೊಂಚವೂ ಪ್ರಸ್ತುತವಿರಲಿಲ್ಲವಾದ್ದರಿಂದ ಆ ಯೋಜನೆ ಮನಸ್ಸಿನಲ್ಲೇ ಉಳಿಯಿತು. ಆದರೆ ಅದಕ್ಕೆ ಈಗ ಇದ್ದಕ್ಕಿದ್ದಂತೆ ಸಮಯ ಕೂಡಿಬಂದಿತ್ತು. ಹುಬ್ಬಳ್ಳಿಯಿಂದ ಗದುಗಿಗೆ ೭೦ ಕಿಲೋಮೀಟರು, ಒಂದೂವರೆ ಗಂಟೆ ಪಯಣ. ಬೆಳಗ್ಗೆ ೮ಕ್ಕೆ ಹುಬ್ಬಳ್ಳಿ ಬಿಟ್ಟರೂ ೯.೩೦ಕ್ಕೆಲ್ಲಾ ಗದುಗಿನಲ್ಲಿರುತ್ತೇನೆ, ೧೦ಕ್ಕೆ ದೇವಾಲಯ. ಸ್ವಲ್ಪ ಬೇಗ ಹೋದರೆ ಜನವಿಲ್ಲದೆ ಪ್ರಶಾಂತವಾಗಿದ್ದರೆ ಅಂದುಕೊಂಡಂತೆ ಕಾವ್ಯವಾಚನಮಾಡುವ ಅವಕಾಶವೂ ಇರುತ್ತದೆ, ಇದು ನನ್ನ ಆಲೋಚನೆ. ಈ ಭಾವನಾತ್ಮಕ ಪ್ರೈವೆಸಿಯ ವಿಷಯದಲ್ಲಿ ದುರ್ಯೋಧನನ ಅಭಿಮಾನದ ಅಂಶ ನನ್ನಲ್ಲಿ ತುಸು ಹೆಚ್ಚಾಗೇ ಇದೆ. ಸ್ನಾನದ ಮನೆಯ ಹಾಡುಗಾರಿಕೆಗೂ ಸೌಂಡ್ ಪ್ರೂಫಿಂಗ್ ಇದ್ದರೆ ಒಳ್ಳೆಯದೆನ್ನುವ ಗುಂಪಿಗೆ ಸೇರಿದವನು ನಾನು. ಅವಕಾಶವೊದಗಿದರೆ ಇರಲಿ ಎಂದು ಕುಮಾರವ್ಯಾಸಭಾರತದ ಒಂದು ಪ್ರತಿಯನ್ನು ಬ್ಯಾಗಿನಲ್ಲಿರಿಸಿದೆ. ಸಾಮಾನ್ಯವಾಗಿ ನಾನು ಪ್ರಯಾಣದಲ್ಲಿ ಏನನ್ನೂ ಹೊತ್ತೊಯ್ಯುವುದಿಲ್ಲವಾದ್ದರಿಂದ ಇದೊಂದು ಪುಸ್ತಕದಿಂದ ಹೆಚ್ಚಿನ ಭಾರವೇನು ಆಗುವಂತಿಲ್ಲ. ಅಲ್ಲದೇ ಕುಮಾರವ್ಯಾಸನೇ ಹೇಳಿದ್ದಾನಲ್ಲ "ಭಾರತದ ಕಥನಪ್ರಸಂಗವ ಕ್ರೂರಕರ್ಮಿಗಳೆತ್ತಬಲ್ಲರು" ನನಗಂತೂ ಅದು ಎತ್ತಲು ಸುಲಭವಾಗಿತ್ತು!&lt;br /&gt;&lt;br /&gt;ಪುಣೆಯಿಂದ ಹುಬ್ಬಳ್ಳಿವರೆಗಿನ ರಾತ್ರಿ ಪ್ರಯಾಣದಲ್ಲಿ ನಿದ್ದೆ ಬರಲಿಲ್ಲ. ಮನಸ್ಸು ತುಸು ಉದ್ವೇಗಗೊಂಡಿತ್ತು. ನನ್ನ ನೆಚ್ಚಿನ ಕವಿ, ಕಾವ್ಯವನ್ನು ರಚಿಸಿದ ಜಾಗದಲ್ಲೇ ಕುಳಿತು ಅದನ್ನು ವಾಚಿಸುವ, ಅರ್ಪಿಸುವ ಕಲ್ಪನೆಯೇ ಮನವನ್ನು ಮುದಗೊಳಿಸಿತ್ತು. ಮರುದಿನ ಅಂದುಕೊಂಡದ್ದಕ್ಕಿಂತ ಮುಂಚೆಯೇ ಹುಬ್ಬಳ್ಳಿ ತಲುಪಿದವನು, ಬೆಳಗ್ಗೆ ೯ಕ್ಕೆಲ್ಲಾ ಗದುಗಿನಲ್ಲಿದ್ದೆ. ಬಸ್ ಸ್ಟಾಂಡಿನಲ್ಲಿಳಿದು ಅಲ್ಲಿ ಇಲ್ಲಿ ವಿಚಾರಿಸುತ್ತಾ ಕೊನೆಗೊಮ್ಮೆ ದೇವಾಲಯವನ್ನು ತಲುಪಿದಾಗ ಅದರ "ಜನ ಜಂಗುಳಿ"ಯ ಬಗ್ಗೆ ಇದ್ದ ವಿಪರೀತ ಕಲ್ಪನೆಯೆಲ್ಲಾ ಹಾರಿಹೋಯಿತು. &lt;a href="http://3.bp.blogspot.com/_piVpH4odgRA/S0UH4X4uphI/AAAAAAAAAmU/2ohvFhEhAYg/s1600-h/DSCN1940.JPG"&gt;&lt;img id="BLOGGER_PHOTO_ID_5423749991303652882" style="FLOAT: left; MARGIN: 0px 10px 10px 0px; WIDTH: 200px; CURSOR: hand; HEIGHT: 150px" alt="" src="http://3.bp.blogspot.com/_piVpH4odgRA/S0UH4X4uphI/AAAAAAAAAmU/2ohvFhEhAYg/s200/DSCN1940.JPG" border="0" /&gt;&lt;/a&gt;ಗದುಗಿನ ಸಂದಿಗೊಂದಿ ಗಲ್ಲಿ ಗಲ್ಲಿ ಸುತ್ತಿ ಅದೊಂದು ಕಡೆ ಎಡಕ್ಕೆ ಹೊರಳಿದರೆ ಧುತ್ತನೆ ಪ್ರತ್ಯಕ್ಷವಾಗುತ್ತದೆ, ವೀರನಾರಾಯಣನ ಗೋಪುರ. ಎರಡು ಗಲ್ಲಿ ಕೂಡುವೆಡೆಯಲ್ಲಿ ಮೂಲೆಯಲ್ಲಿರುವ ದೇವಾಲಯದ ಗೋಪುರವನ್ನು ಅದರ ಮುಂದೆ ಬೆಳೆದಿರುವ ದೊಡ್ಡ ಅರಳೀ ಮರ ಮುಚ್ಚಿದ್ದರೆ, ದೇವಾಲಯದ ಉಳಿದ ಭಾಗವನ್ನು ಅದರ ಮುಂದೆ ಅಡ್ಡಾದಿಡ್ಡಿ "ಪಾರ್ಕ್"ಮಾಡಿರುವ ಟ್ರಕ್ಕುಗಳು ಮುಚ್ಚಿರುತ್ತವೆ. ಆದರೂ ಅಲ್ಲೊಂದು ಇಲ್ಲೊಂದು ರಸ್ತೆಸೂಚಿಗಳಿರುವುದರಿಂದ ದೇವಾಲಯವನ್ನು ಕಂಡುಹಿಡಿಯುವುದು ಅಷ್ಟೇನು ಕಷ್ಟವಲ್ಲ, ಅಲ್ಲದೆ ಊರೂ ಚಿಕ್ಕದು. ದೇವಾಲಯ ನಿರ್ಜನವಾಗಿತ್ತು. ಬಹುಶಃ ಭಕ್ತ ನಾರಣಪ್ಪನಂತೆಯೇ ದೈವ ವೀರನಾರಾಯಣನೂ ಊರಿಗೆ ಅಜ್ಞಾತನಿರಬಹುದು. ಅದೇನೇ ಇರಲಿ, ಈ ಅಜ್ಞಾತತೆಯಿಂದ ಒಂದು ಅನುಕೂಲವಂತೂ ಇತ್ತು. ಬೇರೆ ಟೂರಿಸ್ಟ್ ಸ್ಪಾಟ್ ಅಥವಾ ಯಾತ್ರಾಸ್ಥಳಗಳಂತೆ ಇಲ್ಲಿ ಗಜಿಬಿಜಿ ಗಲೀಜುಗಳಾಗಲಿ, ಅದರೊಂದಿಗೆ ಬರುವ ಸ್ಥಳಮಹಾತ್ಮೆ, ಭಕ್ತಿಗೀತೆಗಳ ಕ್ಯಾಸೆಟ್ಟು ಸಿ.ಡಿ., ಬುಕ್ಕುಗಳನ್ನು ಮಾರುವ ಅಂಗಡಿ-ಮುಂಗಟ್ಟುಗ&lt;a href="http://3.bp.blogspot.com/_piVpH4odgRA/S0UJA2GoOHI/AAAAAAAAAmc/bJo5WN3M_CE/s1600-h/DSCN1922.JPG"&gt;&lt;img id="BLOGGER_PHOTO_ID_5423751236365596786" style="FLOAT: right; MARGIN: 0px 0px 10px 10px; WIDTH: 150px; CURSOR: hand; HEIGHT: 200px" alt="" src="http://3.bp.blogspot.com/_piVpH4odgRA/S0UJA2GoOHI/AAAAAAAAAmc/bJo5WN3M_CE/s200/DSCN1922.JPG" border="0" /&gt;&lt;/a&gt;ಳ ಗಲಾಟೆಗಳಾಗಲಿ ಇಲ್ಲಿರಲಿಲ್ಲ. ಕೇವಲ ಹರಕೆ ಮಾತ್ರದಿಂದ ಭಕ್ತರ ಭವರೋಗಗಳನ್ನೆಲ್ಲಾ ಜಾಲಾಡಿ ಬಿಸಾಕುವ "ಪವರ್ ಫುಲ್" ದೈವಗಳು ಸಾಕಷ್ಟಿರುವಾಗ, ಈ ಬಡ ಗದಾಧರನನ್ನು ಹುಡುಕಿಕೊಂಡು ಯಾವ ಭಕ್ತಗಡಣವೂ ಗದುಗಿನ ಈ ಮೂಲೆಗೆ ಬರುವಂತಿಲ್ಲ. ಹೀಗಾಗಿ ಬಹುತೇಕ ಸ್ಥಳೀಯ ದೈವವಾದ ವೀರನಾರಾಯಣ, ಆ ಅರ್ಥದಲ್ಲಿ ಊರನಾರಾಯಣನೇ ಸರಿ, ನಮ್ಮೂರ ನಾರಾಯಣಸ್ವಾಮಿಯಂತೆ. ಅವನಂತೆ ಇವನಿಗೂ ಸ್ಥಳಪುರಾಣವಿದೆ, "ಹೊರಗಿನವ"ರಿಗೆ ಅದನ್ನು ಅರ್ಚಕರು ಹೇಳುತ್ತಾರೆ, ಈ ಪುರಾಣದ ಮಧ್ಯೆ ಕ್ವಚಿತ್ತಾಗಿ ಕುಮಾರವ್ಯಾಸನು ಇಲ್ಲಿ ಕಾವ್ಯ ಬರೆದನೆನ್ನುವ "ಪ್ರತೀತಿ"ಯೂ ಸುಳಿದು ಹೋಗುತ್ತದೆ. ಅದು ಬಿಟ್ಟರೆ "ಕು&lt;a href="http://2.bp.blogspot.com/_piVpH4odgRA/S0UKEKKyjBI/AAAAAAAAAmk/b7vxoDEDQe0/s1600-h/DSCN1934.JPG"&gt;&lt;img id="BLOGGER_PHOTO_ID_5423752392802995218" style="FLOAT: left; MARGIN: 0px 10px 10px 0px; WIDTH: 200px; CURSOR: hand; HEIGHT: 150px" alt="" src="http://2.bp.blogspot.com/_piVpH4odgRA/S0UKEKKyjBI/AAAAAAAAAmk/b7vxoDEDQe0/s200/DSCN1934.JPG" border="0" /&gt;&lt;/a&gt;ಮಾರವ್ಯಾಸನ ಕಂಬ" ಎಂಬ ಬೋರ್ಡು ಹೊತ್ತ ಒಂದು ಕಂಬ, ಹೊರಗೆ ಅಂಗಳದಲ್ಲಿ "ಕುಮಾರವ್ಯಾಸಮಂಟಪ" ಎಂಬ ಹೆಸರು ಹೊತ್ತ ಒಂದು ಮಂಟಪ, ಆಲಯದ ಒಳಬಾಗಿಲ ಮೇಲೆ "ಶ್ರೀ ವನಿತೆಯರಸನೆ..." ಪದ್ಯ ಮತ್ತು ಅದಕ್ಕಿಂತಲೂ ಮುಖ್ಯವಾಗಿ "ಸೇವೆ: ಕೆನರಾ ಬ್ಯಾಂಕ್" ಎಂಬ ಎಚ್ಚರಿಕೆಯನ್ನು ಹೊತ್ತ ಫಲಕ, ಇವಿಷ್ಟೇ ಕುಮಾರವ್ಯಾಸನ ಬಗ್ಗೆ "ಸ್ಥಳೀಯ" ನೆನಪು. ಊರಿನ ಧಾರ್ಮಿಕ ಕುಟುಂಬಗಳು ದಿನಕ್ಕೊಂದೋ ಎರಡೋ ಬಾರಿ ಗುಡಿಗೆ ಬಂದು ನಮಸ್ಕಾರ ಹಾಕಿದರೆ ಮುಗಿಯಿತು; ವರ್ಷಕ್ಕೊಂದೋ ಎರಡೋ ಜಾತ್ರೆ-ಉತ್ಸವ; ಇಷ್ಟು ಬಿಟ್ಟರೆ ಉಳಿದಂತೆ ಭಕ್ತರ ಗಲಾಟೆಯಿಲ್ಲದ ಪ್ರಶಾಂತಮೂರ್ತಿ ಇವ. ಅಜ್ಞಾತವೆನ್ನುವುದಕ್ಕಿಂತ ಅತಿ ಪರಿಚಯದ ಉಪೇಕ್ಷೆಯೆಂದರೆ ಹೆಚ್ಚು ಸೂಕ್ತ; ಬಹುಶಃ ಇದೇ ವಿವರಣೆ ನಾರಣಪ್ಪನಿಗೂ ಅನ್ವಯಿಸುತ್ತದೆ. ಇನ್ನು ಆಗೀಗ ಬರುವ "ಹೊರಗಿನವ"ರೆಂದರೆ ಕುಮಾರವ್ಯಾಸನ ಕಾವ್ಯವನ್ನು ಆನಂದಿಸಿ, ಅವನ ನೆನಪಿಗೆ ಒಂದು ಭಕ್ತಿಯ ಕಾಣಿಕೆ ಸಲ್ಲಿಸಬಯಸುವ ಒಂದಷ್ಟು ಸಾಹಿತ್ಯಾಸಕ್ತರು, ನನ್ನಂತೆ.&lt;br /&gt;&lt;br /&gt;ನಾನು ದೇವಾಲಯಕ್ಕೆ ಬೇಗ ಬಂದಿದ್ದರಿಂದ ಬೆಳಗಿನ ಪೂಜಾಕೈಂಕರ್ಯಗಳನ್ನು ವೀಕ್ಷಿಸುವ ಅವಕಾಶವೊದಗಿತ್ತು. ನಿರಾಲಂಕೃತವಾದ ಶಂಖಚಕ್ರಗದಾಭಯ ಮೂರ್ತಿಯ ವಿಶ್ವರೂಪ ದೃಶ್ಯ ಮನೋಹರವಾಗಿತ್ತು. ಇದು ನಾನು ನೋಡಿದ ಬಹು "expressive"ಆದ ನಾರಾಯಣಮೂರ್ತಿಗಳಲ್ಲೊಂದು. ಕುಮಾರವ್ಯಾಸನ ಭಾರತದಲ್ಲಿಡೀ ನಮ್ಮ-ನಿಮ್ಮಂತೆ ನಡೆದಾಡುವ, ಮಾತಾಡುವ, ಕಪಟನಾಟಕದ ಸೂತ್ರ ಹಿಡಿದಾಡಿಸುವ, ಏನೂ ಅರಿಯದಂತೆ ನಸುನಗುವ "ಸಿರಿಮೊಗದ, ಕಿರುಬೆಮರ, ತೇಜಿಯ ಖುರಪುಟದ ಕೆಂದೂಳಿ ಸೋಂಕಿದ ಸಿರಿಮುಡಿಯ, ಕುಡಿಮೀಸೆಯಲಿ ಕೆಂಪಡರ್ದ ರೇಣುಗಳ", ದೇವದೇವನಾದರೂ ಶ್ರೇಷ್ಠ ಮಾನವಭಾವಗಳನ್ನು ಪ್ರದರ್ಶಿಸುವ ಕೃಷ್ಣಮೂರ್ತಿಯ ಕಲ್ಪನೆಯ ಸೆಲೆ ನಸುನಗುವ ಈ ವೀರನಾರಾಯಣನೇ ಸರಿ.&lt;br /&gt;&lt;br /&gt;ಭಾವದ ಸಂದರ್ಭದ ಉತ್ಕಟತೆಯನ್ನು ಕಟ್ಟಿಕೊಡುವುದರಲ್ಲಿ ಕುಮಾರವ್ಯಾಸನದು ಎತ್ತಿದ ಕೈ. ಅದರಲ್ಲೂ ಕೃಷ್ಣನ ಬರವನ್ನು ವರ್ಣಿಸುವ ಒಂದು ಅವಕಾಶವನ್ನೂ ಕವಿ ಕಳೆದುಕೊಳ್ಳುವುದೇ ಇಲ್ಲ. ಮಾತು ನಿರರ್ಗಳವಾಗುತ್ತದೆ. "ನಂದಗೋಪಕುಮಾರ ಗೋಪೀವೃಂದ ವಲ್ಲಭ ದೈತ್ಯ ಮಥನ ಮುಕುಂದ ಮುರಹರ ಭಕ್ತವತ್ಸಲ ಘನ ಕೃಪಾಜಲಧಿ" ಎಂದು ದ್ರೌಪದಿ ಮೊರೆಯಿಡುತ್ತಾಳೆ; "ಒಲಿದವರನುಜ್ಜೀವಿಸುವ ಬಗೆ ಬಲುಹು ಮುರಮಥನಂಗೆ"; ಮುಂದೆ ಸಂಧಾನಕ್ಕಾಗಿ ದೇವರ ದೇವ ದುರ್ಯೋಧನನ ಅರಮನೆಗೆ ಬರುವ ಪರಿ ನೋಡಿ "ದೇವಬಂದನು ತನ್ನ ನೆನೆವರ ಕಾವ ಬಂದನು ದೈತ್ಯಕುಲವನದಾವ ಬಂದನು ಭಾಗವತಜನ ಲೋಲುಪನು ಬಂದ, ಭಾವಿಸುವೊಡಘಹಾರಿ ಬಂದನು ಓವಿ ಬಂದರೆ ತನ್ನ ನೀಡುವ ದೇವ ಬಂದನು ವೀರ ನರಯಣ ಬಂದನರಮನೆಗೆ" ಎನ್ನುತ್ತಾನೆ.&lt;br /&gt;&lt;br /&gt;&lt;/div&gt;&lt;div align="justify"&gt;&lt;/div&gt;&lt;div align="justify"&gt;ನಿರಾಲಂಕೃತವಾದ ಮೂರ್ತಿಗೆ ಶಂಖ ಚಕ್ರಗಳನ್ನೇರಿಸಿ, ಶುಭ್ರವಾದ ಬಿಳೀ ಪಂಚೆಯುಡಿಸಿ, ಸರಳವಾಗಿ ಸೇವಂತಿಗೆಯನ್ನೇರಿಸಿ ಅಲಂಕಾರವನ್ನು ಮುಗಿಸುವ ವೇಳೆಗೆ ಅಂದು ನಾನು ವಾಚನಮಾಡಬೇಕಾದ ಭಾಗ ಮನದಲ್ಲಿ ಮೂಡಿತ್ತು. ಬೆಳಗಿನ ಮಂಗಳಾರತಿಗಾಗಿ ಬಂದಿದ್ದ ನಾಲ್ಕೈದು ಜನ ಸ್ಥಳೀಯರು ಖಾಲಿಯಾದರು. ಹೊರಗಿನಿಂದ ಬಂದಿದ್ದ ಒಂದಿಬ್ಬರು ದರ್ಶನ ಮುಗಿಸಿಕೊಂಡು ದೇವಸ್ಥಾನದ ಹೊರ ಅಂಗಳಕ್ಕೆ ನಡೆದರು. ನನ್ನಷ್ಟಕ್ಕೆ ನಾನು ಹಾಡಿಕೊಳ್ಳುವುದಿರಲಿ, ಜೋರಾಗಿ ಅರಚಿದರೂ ಯಾರೂ ಕೇಳುವವನಿರಲಿಲ್ಲ. ಗರ್ಭಗುಡಿಯ ಹೊರಪ್ರಾಂಗಣದಲ್ಲಿ ಕುಮಾರವ್ಯಾಸನು ಕುಳಿತು ಕಾವ್ಯ ರಚಿಸುತ್ತಿದ್ದನೆನ್ನಲಾದ ಕಂಬದೆಡೆ ನಡೆದೆ. ಅದೊಂದು ವಿಧದ ಹೆಸರಿಲ್ಲದ ಭಾವದಿಂದ ಮನಸ್ಸು ಉತ್ಕಂಠಿತವಾಗಿತ್ತು. ಕಂಬಕ್ಕೊರಗಿ ಕುಳಿತು, ಪುಸ್ತಕವನ್ನು ತೆರೆದಿಟ್ಟು ನನ್ನಷ್ಟಕ್ಕೆಂಬ ಕೆಳದನಿಯಲ್ಲಿ ಮಂಗಳಾಚರಣೆಯ ಭಾಗಗಳನ್ನು ಶುರುಮಾಡಿದೆ. "ಶ್ರೀ ವನಿತೆಯರಸನೆ..."; "ತಿಳಿಯಹೇಳುವೆ ಕೃಷ್ಣಕಥೆಯನು... "; "ಅರಸುಗಳಿಗಿದು ವೀರ..." ಗುಡಿಗೆ ಆಗೊಬ್ಬರು ಈಗೊಬ್ಬರು ಜನ ಬರುತ್ತಿದ್ದರು. ಕುತೂಹಲದಿಂದ ಈ ಕಡೆ ನೋಡಿದಾಗೆಲ್ಲಾ ಅದೊಂದು ರೀತಿಯ ಸ್ವಪ್ರಜ್ಞೆ ಜಾಗೃತವಾಗಿ ದನಿ ಕುಗ್ಗುವುದು. ಆಗೆಲ್ಲಾ ಐದಾರು ಶತಕಗಳ ಹಿಂದೆ, ಪ್ರಾಯಶಃ ಇದೇ ಜಾಗದಲ್ಲಿ ಕಾವ್ಯಾವೇಶಭರಿತನಾಗಿ ಮೈಮರೆತು ಹಾಡುತ್ತಿದ್ದ ಭಕ್ತ ಕವಿಯ ಚಿತ್ರ ಕಣ್ಮುಂದೆ ಬರುವುದು, ಮನಸ್ಸು ಮತ್ತೆ ಕಾವ್ಯದಲ್ಲಿ ಹೊಗುವುದು. ಅವತ್ತು ನಾನು ವಾಚಿಸಲು ಆಯ್ದುಕೊಂಡ ಭಾಗ ಉದ್ಯೋಗಪರ್ವದ ಎಂಟನೆಯ ಸಂಧಿ, ಸಂಧಾನಕ್ಕಾಗಿ ಹಸ್ತಿನಾವತಿಗೆ ಆಗಮಿಸುವ ಕೃಷ್ಣ ವಿದುರನ ಮನೆಗೆ ಬಂದ ಪ್ರಸಂಗ. ಪಯಣದ ಆಯಾಸದಿಂದ ನಸುವೇ ಬಾಡಿದ ಸಿರಿಮೊಗದ ಮೂರ್ತಿ; ಭಕ್ತ್ಯುದ್ರೇಕದಿಂದ ಮನೆಯನ್ನೇ ಮುರಿದೀಡಾಡುವ ವಿದುರ; ಅದರ ಹುಚ್ಚಾಟವನ್ನು ನೋಡಿ ನಸುನಗುತ್ತಾ "ಹಸಿದು ನಾವೈತಂದರೀ ಪರಿ ಮಸಗಿ ಕುಣಿದಾಡಿದೊಡೆ ಮೇಣೀ ವಸತಿಯನು ಸುಗಿದೆತ್ತಿ ಬಿಸುಟರೆ ತನಗೆ ತಣಿವಹುದೇ? ವಸುಮತಿಯ ವಲ್ಲಭರು ಮಿಗೆ ಪ್ರಾರ್ಥಿಸಿದೊಡೊಲ್ಲದೆ ಬಂದೆವೈ, ನಾಚಿಸದಿರೈ ಬಾ ವಿದುರ" ಎಂದು ಅವನನ್ನು ಸಂತೈಸಿ ಒಳಗೆ ಕರೆದೊಯ್ಯುವ ಕೃಷ್ಣ. ವಾಚನದ ಕೊನೆಗೆ "ವೇದಪಾರಾಯಣದ ಫಲ..." ಹಾಡಿ ಕೈ ಮುಗಿಯುವಹೊತ್ತಿಗೆ ಸಂಪೂರ್ಣ ತಾದಾತ್ಮ್ಯ ಲಭಿಸಿತ್ತು. ಬಹುದಿನದ ಕನಸು ನನಸಾಗಿತ್ತು. ಗುಡಿಗೆ ಬಂದವರು ಹಾಗೇ ಆಲಿಸುತ್ತಾ ಕುಳಿತ ಒಂದಿಬ್ಬರು "ಸೂರಿಗಳು ಸನಕಾದಿಗಳು ಜಂಗಮ ಜನಾರ್ದನರು" ಒಳನಿಂತಿದ್ದ ಕವಿ ವೀರನಾರಾಯಣನಿಗೆ ನಮಿಸಿ ತೆರಳಿದರು. ನಾನು "ಲಿಪಿಕಾರ ಕುವರವ್ಯಾಸ"ನ ಪುಣ್ಯಸ್ಮೃತಿಯೊಂದಿಗೆ ಊರ ದಾರಿ ಹಿಡಿದೆ.&lt;br /&gt;&lt;br /&gt;&lt;strong&gt;&lt;u&gt;ಅಡಿಟಿಪ್ಪಣಿ:&lt;br /&gt;&lt;/u&gt;&lt;/strong&gt;ಊರಿಗೆ ಪಯಣಿಸುತ್ತಾ ಮನಸ್ಸಿನಲ್ಲಿ ಮೂಡಿದ ಯೋಚನೆ ಇದು. ಇಡೀ ಕುಮಾರವ್ಯಾಸಭಾರತವನ್ನು ಧ್ವನಿರೂಪದಲ್ಲಿ ಸಂಗ್ರಹಿಸಿಡಲು ಸಾಧ್ಯವೇ? ಊರಿಗೆ ಬಂದಮೇಲೆ ಗೆಳೆಯ ಶ್ರೀಕಾಂತರೊಡನೆ ಚರ್ಚಿಸುತ್ತಿದ್ದಾಗ ಅವರಿಂದ ಅದಕ್ಕೆ ಪೂರಕವಾಗಿ ಅದಕ್ಕೂ ಪ್ರಾಥಮಿಕವಾಗಬಹುದಾದ ಮತ್ತೊಂದು ಯೋಚನೆಯೂ ಬಂತು, ಕುಮಾರವ್ಯಾಸಭಾರತವನ್ನು ಎಲೆಕ್ಟ್ರಾನಿಕ್ ಪುಸ್ತಕವಾಗಿ ಸಂಗ್ರಹಿಸಬಾರದೇಕೆ? ಅಂತರ್ಜಾಲದಲ್ಲೆಲ್ಲೂ ಗದುಗಿನ ಭಾರತ e-book ಇರುವಂತೆ ಕಾಣಲಿಲ್ಲ. ಎರಡೂ ಯೋಜನೆಗಳು ಕಷ್ಟಸಾಧ್ಯವಾದರೂ ಇದ್ದುದರಲ್ಲಿ ಮೊದಲನೆಯ ಯೋಜನೆಗಿಂತಲೂ ಎರಡನೆಯ ಯೋಜನೆ ಸುಲಭವೆಂದು ಕಂಡಿತು. ಆದ್ದರಿಂದ ಪ್ರಾರಂಭಿಕವಾಗಿ ಎಲೆಕ್ಟ್ರಾನಿಕ್ ಪುಸ್ತಕದ ಯೋಜನೆಯನ್ನು ಕೈಗೊಳ್ಳುವುದೆಂದೂ, ಅದರ ಯಶಸ್ಸನ್ನು ಅವಲಂಬಿಸಿ ಧ್ವನಿರೂಪದ ಯೋಜನೆಯನ್ನು ಕೈಗೆತ್ತಿಕೊಳ್ಳಬಹುದೆಂದೂ ತೀರ್ಮಾನಿಸಿದೆವು. ಮುಂದುವರೆದು, ಇಡೀ ಕಾರ್ಯ ನಮ್ಮಿಬ್ಬರಿಂದಲೇ ಆಗುವುದಲ್ಲವೆಂದೂ, ನಮ್ಮಿಬ್ಬರದೇ ಆಗಿ ಉಳಿಯಬಾರದೆಂದೂ ಅರಿತೆವು. ಜನಪ್ರಿಯವಾದ ಗದುಗಿನ ಭಾರತದ ಇ-ಆವೃತ್ತಿ ಬಹು ಜನರ ಪ್ರಯತ್ನದಿಂದಲೇ ಸಾಕಾರಗೊಳ್ಳುವುದು ಸಾಧುವೆಂದು ನಮ್ಮ ಅನಿಸಿಕೆ. ಸ್ಥೂಲವಾಗಿ ಎರಡು ಹಂತಗಳ ಯೋಜನೆ ಹೀಗೆ:&lt;br /&gt;&lt;br /&gt;&lt;strong&gt;೧. ಇ-ಪುಸ್ತಕ:&lt;/strong&gt; ಸುಮಾರು ೬೦೦ ಪುಟಗಳ ಗದುಗಿನ ಭಾರತದಲ್ಲಿ ೧೦ ಪರ್ವಗಳಿವೆ. ಒಬ್ಬರು ಒಂದೊಂದು ಪರ್ವವನ್ನು ವಹಿಸಿಕೊಂಡರೂ, ದಿನಕ್ಕೊಂದು ಪುಟದಂತೆ ಟೈಪು ಮಾಡಿದರೂ ಹತ್ತು ಜನ ಇದನ್ನು ಎರಡು ತಿಂಗಳಲ್ಲಿ ಮುಗಿಸಬಲ್ಲರೆಂದು ಅಂದಾಜು. ಇವೆಲ್ಲವನ್ನೂ ಒಂದು ಕಡೆ ಕಲೆಹಾಕಿ, ಕರಡು ತಿದ್ದಿ ಕ್ರಮಪಡಿಸಿದರೆ ಇ-ಪುಸ್ತಕವನ್ನು ಅಂತರ್ಜಾಲದಲ್ಲಿ ಉಚಿತವಾಗಿ ದೊರೆಯುವಂತೆ ಪ್ರಕಟಿಸಬಹುದು. ಸಲಕರಣೆಗಾಗಿ ನಮಗೆ ಬೇಕಾದ್ದೆಲ್ಲಾ ಒಂದು unicode ತಂತ್ರಾಂಶ (ಬರಹ ಇತ್ಯಾದಿ), ಗದುಗಿನ ಭಾರತದ ಪ್ರತಿ, ಬರೆಯಲು ಸಮಯ ಮತ್ತು ಉತ್ಸಾಹ. ಈ ಉದ್ದೇಶಕ್ಕಾಗಿ ಬ್ಲಾಗೊಂದನ್ನು ಸಿದ್ಧಪಡಿಸಿದ್ದೇವೆ &lt;a href="http://gaduginabharata.blogspot.com/"&gt;http://gaduginabharata.blogspot.com/&lt;/a&gt;. ಸಧ್ಯಕ್ಕೆ ಶ್ರೀಕಾಂತ್ ಆದಿಪರ್ವವನ್ನೂ ನಾನು ಸಭಾಪರ್ವವನ್ನೂ ಕೈಗೆತ್ತಿಕೊಂಡಿದ್ದೇವೆ. ಉತ್ಸಾಹಿಗಳು ಉಳಿದ ಪರ್ವಗಳನ್ನು ಕೈಗೆತ್ತಿಕೊಳ್ಳಲು ಮುಂದೆ ಬಂದಲ್ಲಿ ಬ್ಲಾಗಿನ authorship ಪಡೆಯಲು ಸ್ವಾಗತ.&lt;br /&gt;&lt;br /&gt;&lt;strong&gt;೨. ದ್ವನಿರೂಪದ ಸಂಗ್ರಹ:&lt;/strong&gt; ಇದು ಮೂಲತಃ ಕಾವ್ಯವಾಚನದ ಯೋಜನೆ, ಆದರೆ ಸಿ.ಡಿ. ಹೊರತರುವುದೋ, ಭಾಗಶಃ ವಾಚನ-ವ್ಯಾಖ್ಯಾನವೋ ಅಲ್ಲ. ಮೇಲೆ ಹೇಳಿದ ಇ-ಪುಸ್ತಕದಂತೆಯೇ ಇದು ಧ್ವನಿ ಪುಸ್ತಕ. ಮೇಲಿನಂತೆಯೇ ಒಂದಷ್ಟು ಜನ ಉತ್ಸಾಹಿ ಗಮಕಿಗಳ ಗುಂಪು ಭಾರತದ ಒಂದೊಂದು ಭಾಗವನ್ನು ಹಾಡಿ ಧ್ವನಿಮುದ್ರಿಸಿ ಒಂದು ಕಡೆ ಕಲೆಹಾಕುತ್ತಾ ಹೋಗುವುದು. ಮುಂದೆ ಅವೆಲ್ಲವನ್ನೂ ಪರಿಷ್ಕರಿಸಿ ಕರ್ಣಾಟಭಾರತ ಕಥಾಮಂಜರಿ ಧ್ವನಿ ಅವತರಣಿಕೆ ಹೊರತರಲು ಸಾಧ್ಯ. ಇದೂ ಇ-ಪುಸ್ತಕದಂತೆಯೇ ಅಂತರ್ಜಾಲದಲ್ಲಿ ಉಚಿತವಾಗಿ ಲಭ್ಯವಿರಬೇಕೆಂದು ಆಶಯ. ಆದರೆ ಇದಕ್ಕೆ ಮೇಲಿನದಕ್ಕಿಂತ ಹೆಚ್ಚು ಜನ ಬೇಕಾಗುತ್ತದೆ ಎನ್ನುವುದಂತೂ ನಿಜ. ಆದರೆ ಭಾಗವಹಿಸುವವರು ಉತ್ತಮ ಸಂಗೀತಗಾರರೋ, ವೃತ್ತಿಪರ ಗಮಕಿಗಳೋ ಆಗಿರಬೇಕೆಂದೇನೂ ಇಲ್ಲ. ಕಾವ್ಯವನ್ನು ಆಸ್ವಾದಿಸುವ, ಅದನ್ನು ಸುಶ್ರಾವ್ಯವಾಗಿ ಭಾವಪೂರ್ಣವಾಗಿ ಹಾಡಿ ಪ್ರಸ್ತುತಪಡಿಸುವ, ಆ ಕ್ರಿಯೆಯನ್ನು ಆನಂದಿಸುವ ಮನಸ್ಸುಳ್ಳವರಾದರೆ ಸಾಕು. ಮತ್ತು ಸಲಕರಣೆಯಾಗಿ ನಮಗೆ ಬೇಕಾದ್ದೆಲ್ಲಾ ಗದುಗಿನ ಭಾರತದ ಪ್ರತಿ, ಒಂದು audacity ತಂತ್ರಾಂಶ (ಅಂತರ್ಜಾಲದಲ್ಲಿ ಉಚಿತವಾಗಿ ದೊರೆಯುತ್ತದೆ), ಒಂದು ಶ್ರುತಿಪೆಟ್ಟಿಗೆ/ತಂಬೂರಿ, ಗೊತ್ತುಪಡಿಸಿದ ಒಂದು ಸಾಮಾನ್ಯ ಶ್ರುತಿ, ಧ್ವನಿಮುದ್ರಿಸಲು ಪ್ರಶಾಂತವಾದ ಸ್ಥಳ, ಎಲ್ಲವನ್ನು ಕಲೆಹಾಕಲು ಒಂದು rapid share ಅಥವ ಅಂಥದ್ದೊಂದು ಖಾತೆ. ಈ ಯೋಜನೆ ಇನ್ನೂ ಆಲೋಚನೆಯ ಹಂತದಲ್ಲಿದೆ. ಸಲಹೆ ಸೂಚನೆಯನ್ನೂ ಒಳಗೊಂಡು ಎಲ್ಲಾ ವಿಧದ ಭಾಗವಹಿಸುವಿಕೆಗೆ ಸ್ವಾಗತ.&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-4912753196700753874?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/4912753196700753874/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=4912753196700753874&amp;isPopup=true' title='8 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/4912753196700753874'/><link rel='self' type='application/atom+xml' href='http://www.blogger.com/feeds/2037979210344114254/posts/default/4912753196700753874'/><link rel='alternate' type='text/html' href='http://nannabaraha.blogspot.com/2010/01/blog-post.html' title='ಕಾವುದಾನತಜನವ ಗದುಗಿನ ವೀರನಾರಯಣ...'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><media:thumbnail xmlns:media='http://search.yahoo.com/mrss/' url='http://3.bp.blogspot.com/_piVpH4odgRA/S0UH4X4uphI/AAAAAAAAAmU/2ohvFhEhAYg/s72-c/DSCN1940.JPG' height='72' width='72'/><thr:total>8</thr:total></entry><entry><id>tag:blogger.com,1999:blog-2037979210344114254.post-2177596693726076253</id><published>2009-11-10T23:16:00.002+05:30</published><updated>2009-11-10T23:24:35.217+05:30</updated><category scheme='http://www.blogger.com/atom/ns#' term='೦೪. ಪ್ರಚಲಿತ'/><title type='text'>ಏರಿ ನೀರುಂಬೊಡೆ, ಬೇಲಿ ಹೊಲವ ಮೇದಡೆ...</title><content type='html'>&lt;div align="justify"&gt;ಮೊನ್ನೆ ಬೆಂಗಳೂರಿನಲ್ಲಿ ನಡೆದ ವಕೀಲರ ದಾಂದಲೆ ಯಾವ ಮಾನವಂತ, ವೃತ್ತಿವಂತ ವಕೀಲನೂ ತಲೆತಗ್ಗಿಸುವಂಥದ್ದು. ದಾಂದಲೆಗೆ ಪ್ರೇರಕವಾದ ಕಾರಣಗಳೇನೇ ಇರಲಿ, ಅವು ಅದೆಷ್ಟೇ ಸಕಾರಣವಾಗಿರಲಿ ಅದಕ್ಕೆ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರವಿರಲಿಲ್ಲವೇ? ಕಾನೂನು ಅರಿಯದ ಸಾಮಾನ್ಯ ಜನ ಗೂಂಡಾಗಿರಿಗಿಳಿದರೆ ಅದು ಅವರ ಕಾನೂನು ಅಜ್ಞಾನ ಅಥವ ವ್ಯವಸ್ಥೆಯ ಬಗ್ಗೆ ಹತಾಶೆ ಎಂದಾದರೂ ಅರ್ಥಮಾಡಿಕೊಳ್ಳಬಹುದು; ಆದರೆ ಕಾನೂನು ಬಲ್ಲ ವಕೀಲರು ಈ ರೀತಿ ಕಾನೂನು ಹೊರಗಿನ ಪರಿಹಾರಕ್ಕೆಳಸಿದರೆ ಅದು ಅವರ ಕಾನೂನು ಅಜ್ಞಾನವೇ, ವ್ಯವಸ್ಥೆಯ ಬಗೆಗಿನ ಹತಾಶೆಯೇ? ಅಜ್ಞಾನವಾದರೆ, ಆ ಅಜ್ಞಾನಿ ನಮಗೆ ಯಾವ ಸಹಾಯ ಮಾಡಿಯಾನು? ಹತಾಶೆಯಾದರೆ, ಸ್ವತಃ ಕಾನೂನಿನಲ್ಲಿ ನಂಬಿಕೆ ಕಳೆದುಕೊಂಡ ವಕೀಲ ನಮಗೆ ಅದಾವ ನಂಬಿಕೆ ಕೊಟ್ಟಾನು? ಕೋರ್ಟಿನಲ್ಲಿ ನಿಂತು ವಾದಿಸುವ ಯೋಗ್ಯತೆಯಾದರು ಇದೆಯೇ ಇವರಿಗೆ? ಅದೂ ಒಬ್ಬ ಇಬ್ಬ ವಕೀಲನಾದರೆ ಹೋಗಲಿ, ಒಂದು ಇಡೀ ವಕೀಲ ಸಮುದಾಯ ಹೀಗೆ ಕಾನೂನಿನಲ್ಲಿ ಅಪನಂಬಿಕೆ ತಳೆದರೆ, ಕಾನೂನೇತರ ಮಾರ್ಗ ಹಿಡಿದರೆ ಸಮಾಜಕ್ಕೆ ಇವರ ಸಂದೇಶವೇನು? ಅಥವಾ ಇದು ಸೂಚಿಸುವಂತೆ, ನಮ್ಮ ಕಾನೂನು ವ್ಯವಸ್ಥೆಯಲ್ಲಿ ನಿಜಕ್ಕೂ ದಮ್ಮೇ ಇಲ್ಲವೇ? ಹಾಗಾದರೆ ಕೋರ್ಟ್ ಏಕೆ, ಪೋಲೀಸ್ ಏಕೆ, ಸರಕಾರವೇಕೆ? ದಿಗ್ಭ್ರಮೆಗೊಂಡ ಒಬ್ಬ ಸಾಮಾನ್ಯ law abiding ನಾಗರಿಕನ ಮನಸ್ಸಿನಲ್ಲಿ ಮೂಡುವ ಪ್ರಶ್ನೆಗಳಿವು. ಉತ್ತರಿಸುವ ಹೊಣೆಗಾರರು ಯಾರಾದರೂ ಇದ್ದಾರೆಯೇ?&lt;br /&gt;&lt;br /&gt;ಒಂದು ಜೋಕು ನೆನಪಿಗೆ ಬರುತ್ತದೆ (ಇದು ಜೋಕು ಮಾಡುವ ವಿಷಯವಲ್ಲ, ಆದರೂ). ಆಸ್ಪತ್ರೆಯೊಂದರಲ್ಲಿ ರೋಗಿಯೊಬ್ಬನಿಗೆ ಆಪರೇಷನ್ ನೆಡೆಯಬೇಕಿತ್ತು, ಎಲ್ಲಾ ಸಿದ್ಧವಾಗಿತ್ತು. ಅರಿವಳಿಕೆ ಕೊಡಲು ನರ್ಸ್ ಹತ್ತಿರ ಬಂದಳು. ಡಾಕ್ಟರು ನರ್ಸ್ ಜೊತೆ ಮಾತಾಡುತ್ತಾ ಆಪರೇಷನ್ ಸಿದ್ಧತೆ ನೆಡೆಸಿದ್ದರು. ಆಪರೇಷನ್ ಟೇಬಲಿನ ಮೇಲೆ ಮಲಗಿದ್ದ ರೋಗಿ ಭಯಗೊಂಡು ಧಡಕ್ಕನೆ ಎದ್ದು ಓಡತೊಡಗಿದ. ಓಡುತ್ತಿದ್ದವನನ್ನು ದಾರಿಯಲ್ಲಿ ಒಬ್ಬ ತಡೆದು ಕಾರಣ ಕೇಳಿದ. ಅವರ ಸಂಭಾಷಣೆ ಹೀಗಿತ್ತು:&lt;br /&gt;&lt;br /&gt;ದಾರಿಹೋಕ: ಯಾಕೆ ಓಡುತ್ತಿದ್ದೀ, ಏನಾಯ್ತು?&lt;br /&gt;ರೋಗಿ: ನಂಗೆ ಆಪರೇಷನ್ ಆಗಬೇಕಿತ್ತು, ನನಗೆ ಭಯವಾಗಿ ಓಡಿಬಂದೆ&lt;br /&gt;ದಾರಿಹೋಕ: ಭಯ ಯಾಕೆ?&lt;br /&gt;ರೋಗಿ: ನರ್ಸ್ ಹೇಳ್ತಿದ್ದಳು "ಏನೂ ಹೆದರಬೇಡಿ, ನಾನಿದೀನಿ, ಏನೂ ಆಗಲ್ಲ"&lt;br /&gt;ದಾರಿಹೋಕ: ಅದಕ್ಕೆ ನಿನಗೆ ಮತ್ತೂ ಧೈರ್ಯ ಬರಬೇಕು, ಹೆದರಿಕೆ ಯಾಕೆ?&lt;br /&gt;ರೋಗಿ: ಯಾಕಂದ್ರೆ, ನರ್ಸ್ ಹಾಗೆ ಹೇಳಿದ್ದು ನನಗಲ್ಲ, ಡಾಕ್ಟರಿಗೆ&lt;br /&gt;&lt;br /&gt;ಏರಿ ನೀರುಂಬೊಡೆ, ಬೇಲಿ ಹೊಲವ ಮೇದಡೆ ಇನ್ನಾರಿಗೆ ದೂರುವೆನಯ್ಯಾ?&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-2177596693726076253?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/2177596693726076253/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=2177596693726076253&amp;isPopup=true' title='2 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/2177596693726076253'/><link rel='self' type='application/atom+xml' href='http://www.blogger.com/feeds/2037979210344114254/posts/default/2177596693726076253'/><link rel='alternate' type='text/html' href='http://nannabaraha.blogspot.com/2009/11/blog-post.html' title='ಏರಿ ನೀರುಂಬೊಡೆ, ಬೇಲಿ ಹೊಲವ ಮೇದಡೆ...'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>2</thr:total></entry><entry><id>tag:blogger.com,1999:blog-2037979210344114254.post-6512193282178574934</id><published>2009-10-29T00:10:00.005+05:30</published><updated>2009-10-29T12:32:06.780+05:30</updated><category scheme='http://www.blogger.com/atom/ns#' term='೦೨. ಕವನಗಳು'/><title type='text'>ಕನ್ಯಾಕುಮಾರಿ</title><content type='html'>(೧)&lt;br /&gt;ಸಂಜೆ ಎಂಟಕೆ ಬಿಡುವ&lt;br /&gt;ಲೌಡ್ ಸ್ಪೀಕರಿನ&lt;br /&gt;someಗೀತ&lt;br /&gt;ಟ್ರಾವೆಲ್ ಬಸ್ಸು;&lt;br /&gt;ಬೆಂಗಳೂರಿಂದ ಹದಿನೆಂಟು ತ್ರಾಸು&lt;br /&gt;ರೆಪ್ಪೆಯಿಲ್ಲದ ಕಿವಿಯ ಮುಚ್ಚಲಾರದ ದಿಟಕೆ&lt;br /&gt;ಕಣ್ಮುಚ್ಚಿ ಕೂತ&lt;br /&gt;ಚಿತ್-&lt;br /&gt;ಭಂಗಿ, ನಿದ್ರಾಯೋಗ&lt;br /&gt;ನಟಿಸಿ, ವಟವಟಿಸಿ ಚಡಪಡಿಸಿ ಸಿಡಿವುದರೊಳಗೆ&lt;br /&gt;ಕನ್ಯಾ&lt;br /&gt;ಕು&lt;br /&gt;ಮಾರಿ&lt;br /&gt;ಬಿಸಿಲು-ಅಂಟು&lt;br /&gt;ಮೈಯೆಲ್ಲ ಉಪ್ಪು&lt;br /&gt;ಕಾರುವ ಕಡಲು&lt;br /&gt;ಅಲೆ&lt;br /&gt;ಯುವ ಮಂದೆ-&lt;br /&gt;ಮಂದಿ&lt;br /&gt;ರ&lt;br /&gt;ದ ಒಳ ಹೊರಗೆ&lt;br /&gt;ಕಡಲ ತಡಿಯಡಿಗಡಿಗೆ&lt;br /&gt;ಕಾಗದ ಚೂರು&lt;br /&gt;ಪ್ಲಾಸ್ಟೀಕು ಕವರು&lt;br /&gt;ಕಚಪಚ ಕೆಸರು&lt;br /&gt;ಚೆಲ್ಲುವ ವಿವೇಕ&lt;br /&gt;ಸಾಗರದ&lt;br /&gt;ನಡುವೆ ತಲೆಯೆತ್ತಿದ&lt;br /&gt;ವಿವೇಕ&lt;br /&gt;ಶಿಲೆಗೆ&lt;br /&gt;ಲಾಂಚರು &lt;br /&gt;ಕಾದುನಿಂತ ಮೈಲುದ್ದ ಕ್ಯೂ!&lt;br /&gt;&lt;br /&gt;(೨)&lt;br /&gt;ವಿವೇಕ ಮಂದಿರದಿ&lt;br /&gt;ಧ್ಯಾನದಾನಂದದಾರಾಮ;&lt;br /&gt;ತಂಪೆರೆವ ನಿಃಶಬ್ದ ನಿರ್ವಾತ ಧಾಮ;&lt;br /&gt;ಗದ್ದಲದ ವಾಕ್ಯದಲಿದೊಂದು&lt;br /&gt;ಅಲ್ಪ ವಿರಾಮ.&lt;br /&gt;&lt;br /&gt;(೩)&lt;br /&gt;ದಿನವೆಲ್ಲ ಉರಿದು ಸುಸ್ತಾಗಿ&lt;br /&gt;ಪಡುಗಡಲಲ್ಲಿ ಮಲಗಲೆಳಸುವ ಸೂರ್ಯ;&lt;br /&gt;ಕಡಲ ಹೊನ್ನೀರ್ ತುಳುಕಿ&lt;br /&gt;ಸುತ್ತೆಲ್ಲ ಬಣ್ಣವೋ ಬಣ್ಣ;&lt;br /&gt;ಸಂಜೆಬಾನಿನ ಕಾಂತಿ,&lt;br /&gt;ಶಿಲೆಯ ನೆಲೆಯಿಂ ಹೊರಟು &lt;br /&gt;ದಿಕ್ಕ ತುಂಬಿದ ಶಾಂತಿ - &lt;br /&gt;ಶ್ರೀ ವಿವೇಕಾನಂದ ಚಿತ್ಛಾಂತಿ&lt;br /&gt;&lt;br /&gt;(೪)&lt;br /&gt;ಮುಂಜಾವಿನರುಣೋದಯದ&lt;br /&gt;ಹೊನ್ನ ಕಿರಣದಲಿ&lt;br /&gt;ತೀಡುತಿಹ ತಂಗಾಳಿ,&lt;br /&gt;ದೇವಿಯ ಕೃಪೆಯ ಸುಯ್ಯುತಿಹ&lt;br /&gt;ಉದಯರಾಗ;&lt;br /&gt;ವರ್ಣಮಯವೀ ಬಾನು&lt;br /&gt;ವರ್ಣಮಯವೀ ಕಡಲು&lt;br /&gt;ವರ್ಣಮಯವದರ ಮಳಲು.&lt;br /&gt;ಮುಂಜಾವ ಸಿಹಿಗನಸಲಿನ್ನೂ ಮಿಸುಗುವ ಸೂರ್ಯ&lt;br /&gt;ಮೈತಿಳಿದು ಕಣ್ಹೊಸಕಿ ಉರಿಯ ಕೆದರುವ ಮುನ್ನ&lt;br /&gt;ಕಟ್ಟುತ್ತೇನೆ ಜೋಳಿಗೆಯ,&lt;br /&gt;ಮುಂದಿನೂರಿಗೆ ಪಯಣ.&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-6512193282178574934?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/6512193282178574934/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=6512193282178574934&amp;isPopup=true' title='4 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/6512193282178574934'/><link rel='self' type='application/atom+xml' href='http://www.blogger.com/feeds/2037979210344114254/posts/default/6512193282178574934'/><link rel='alternate' type='text/html' href='http://nannabaraha.blogspot.com/2009/10/blog-post_29.html' title='ಕನ್ಯಾಕುಮಾರಿ'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>4</thr:total></entry><entry><id>tag:blogger.com,1999:blog-2037979210344114254.post-2285924455405336760</id><published>2009-10-21T23:12:00.012+05:30</published><updated>2011-04-14T19:52:51.642+05:30</updated><category scheme='http://www.blogger.com/atom/ns#' term='೦೮. ಭಾಷೆ'/><title type='text'>ಮಾತು ಒಡೆದರೆ...</title><content type='html'>&lt;div align="justify"&gt;ಮೊನ್ನೆ ಸುಮ್ಮನೇ ಟಿ.ವಿ. ಚಾನೆಲ್ಲುಗಳನ್ನು ತಿರುಗಿಸುತ್ತಿರಬೇಕಾದರೆ ಚಾನೆಲ್ಲೊಂದರಲ್ಲಿ ಬಭ್ರುವಾಹನ ಚಿತ್ರದ ಹಾಡೊಂದು ಬರುತ್ತಿತ್ತು - ರಾಜಕುಮಾರ್ ಜಯಮಾಲಾ ಅಭಿನಯದ ಜನಪ್ರಿಯ ಗೀತೆ, "ಆರಾಧಿಸುವೇ ಮದನಾರಿ". ನಿಮ್ಮಲ್ಲಿ ಅನೇಕರಿಗೆ ಅರಿವಿರುವಂತೆ ಅದೊಂದು ಪ್ರಣಯಸನ್ನಿವೇಶ. ಅರ್ಜುನ ಸನ್ಯಾಸಿ ತನ್ನ ಪೂಜಾ-ಕೈಂಕರ್ಯಗಳಿಗೆಂದು ನಿಯಮಿಸಿದ್ದ ಸುಭದ್ರೆಯೊಡನೆ ಸರಸವಾಡುತ್ತಾ, ಪೂಜೆಯ ನೆವದಲ್ಲಿ ಅವಳೊಡನೆ flirt ಮಾಡುವ ಹಾಡು ಅದು. ಈ ಹಾಡನ್ನು ನಾನು ಮೊದಲು ನೋಡಿದ್ದು ಬಹುಶಃ ಸಿನಿಮಾದಲ್ಲೇ. "ಬಭ್ರುವಾಹನ" ನಮ್ಮೂರಿಗೆ ಬಂದದ್ದು ೭೭ರಲ್ಲೋ ೭೮ರಲ್ಲೋ. ನನಗಾಗ ೮-೧೦ ವಯಸ್ಸಿರಬೇಕು. ಖುಶಿ ಕೊಡುವ ಸಂಗೀತದ ಜೊತೆಗೆ ಸಿನಿಮಾದ ಶ್ರೀಮಂತ ಸೆಟ್, ರಾಜಕುಮಾರರ ಶೃಂಗಾರಭರಿತ ಅಭಿನಯ, 'ಮದನಾರಿ' ಸುಭದ್ರೆಯ ಮದವೇರಿಸುವ ಸೌಂದರ್ಯ, ಒನಪು-ವಯ್ಯಾರ ಇವು ನನ್ನ ಎಳೆಗಣ್ಣಿಗೆ ಕಟ್ಟಿದ್ದ ಅಂಶಗಳು. ಆಮೇಲೆ ಈ ಚಿತ್ರವನ್ನು ಎಷ್ಟೋ ಬಾರಿ ನೋಡಿದ್ದೇನೆ, ಹಾಡನ್ನು ಅದೆಷ್ಟೋ ಬಾರಿ ನೋಡಿದ್ದೇನೆ-ಕೇಳಿದ್ದೇನೆ. ತಲೆಚಿಟ್ಟು ಹಿಡಿಸುವ ಟಿ.ವಿ ಕಾರ್ಯಕ್ರಮಗಳ ನಡುವೆ ಆಗೊಮ್ಮೆ ಈಗೊಮ್ಮೆ ಇಂಥ ಮುದಕೊಡುವ ಹಾಡುಗಳು ಸುಳಿಯುವುದುಂಟು. ಮೊನ್ನೆ ಈ ಹಾಡು ಕೇಳುತ್ತಿದ್ದಾಗ ಮೂವತ್ತು ವರ್ಷಗಳ ಹಿಂದೆ ಇದಕ್ಕೆ ಸಂಬಂಧಿಸಿದ ಮೋಜಿನ ಪ್ರಸಂಗ ನೆನಪಿಗೆ ಬಂತು.&lt;br /&gt;&lt;br /&gt;ಬೆಳಗ್ಗೆ ಎಲ್ಲೋ ಯಾರೋ ರೇಡಿಯೋ ಹಾಕಿದ್ದರು (ಯಾರಾದರೂ ಕೇಳುತ್ತಿದ್ದರೆಂದಲ್ಲ, ಯಾರಾದರು ಕೇಳಲಿ ಕೇಳದಿರಲಿ, ರೇಡಿಯೋ ಮಾತ್ರ ಅರಚುತ್ತಿರಬೇಕು; ಆಗೆಲ್ಲ ರೇಡಿಯೋ ನಮ್ಮ ದಿನಚರಿಯನ್ನು ನಿಯಂತ್ರಿಸುವ calender ಆಗಿತ್ತು). ವಿವಿಧಭಾರತಿ ಇರಬೇಕು, ಚಿತ್ರಗೀತೆಗಳ ಕಾರ್ಯಕ್ರಮದಲ್ಲಿ ಈ ಹಾಡು ಪ್ರಸಾರವಾಗುತ್ತಿತ್ತು. ಅಲ್ಲೆಲ್ಲೋ ಜಗುಲಿಯ ಮೇಲೆ ಕುಳಿತಿದ್ದ ನಮ್ಮ ತಾತನವರು (ಆಗ ಅವರಿಗೆ ಸುಮಾರು ಎಂಬತ್ತು ವರ್ಷ) ಆ ಹಾಡನ್ನು ಆಸ್ವಾದಿಸುತ್ತಾ ತಲೆದೂಗುತ್ತಿದ್ದರು; ಬಾಯಿಂದ "ಭೇಷ್ ಭೇಷ್..." ಎಂಬ ಉದ್ಗಾರ ಬೇರೆ. ಇದನ್ನು ಕಂಡ ನಮ್ಮ ತಾಯಿ, ನಮ್ಮ ಸೋದರತ್ತೆಗೆ (ನಮ್ಮ ತಾತನವರ ಮಗಳಿಗೆ) ಅದನ್ನು ತೋರಿಸಿ ನಗುತ್ತಿದ್ದರು. ನಮ್ಮತ್ತೆಗೋ ಒಂದು ರೀತಿ ಇರುಸುಮುರುಸು, ಮುಜುಗರ. ಸಾತ್ವಿಕರಾದ, ಋಜುಸ್ವಭಾವದವರಾದ, ಸಿನಿಮಾ ಮುಖವನ್ನೇ ನೋಡಿಲ್ಲದ ನಮ್ಮ ತಾತ ಈ ವಯಸ್ಸಿನಲ್ಲಿ ಅದಾವುದೋ ಶೃಂಗಾರದ ಹಾಡನ್ನು ಅಷ್ಟು public ಆಗಿ ಮೆಚ್ಚುವುದೆಂದರೇನು, ತಲೆದೂಗುವುದೆಂದರೇನು!&lt;br /&gt;&lt;br /&gt;ಆದರೆ ನನಗೆ ಆಶ್ಚರ್ಯ, ಅವರು ಆ ಹಾಡನ್ನು ಮೆಚ್ಚಿದರೆ ಇವರಿಗೇನು? ಆ ಹಾಡಿನ ಸಂಗೀತ ಎಷ್ಟು ಸೊಗಸಾಗಿತ್ತೆಂದರೆ, ಸ್ವತಃ ಹಾಡುಗಾರರಾಗಿದ್ದ ನಮ್ಮ ತಾತನವರು ಅದನ್ನು ಮೆಚ್ಚಿ ತಲೆದೂಗದಿರಲು ಸಾಧ್ಯವೇ ಇರಲಿಲ್ಲ. ನಮ್ಮ ಅತ್ತೆ ಮತ್ತು ನಮ್ಮ ತಾತನವರ ಸಂಭಾಷಣೆ ಹೆಚ್ಚು ಕಡಿಮೆ ಹೀಗಿತ್ತು:&lt;br /&gt;&lt;br /&gt;&lt;em&gt;&lt;span style="font-size:85%;"&gt;ನಮ್ಮತ್ತೆ: (ಇರುಸುಮುರುಸಿನಿಂದ, ಅಪ್ಪನ ಬಳಿ ಸಾರಿ) ಏನಪ್ಪ ಇದು ಅಸಹ್ಯ, ಹೋಗಿ ಹೋಗಿ ಈ ಹಾಡಿಗೆ ತಲೆತೂಗುತ್ತ ಇದೀಯಲ್ಲ&lt;br /&gt;&lt;/span&gt;&lt;/em&gt;&lt;/div&gt;&lt;div align="justify"&gt;&lt;br /&gt;&lt;em&gt;&lt;span style="font-size:85%;"&gt;ತಾತ: ಯಾಕೇ ಪುಟ್ಟಾ, ಅದರ ಸಾಹಿತ್ಯ ನೋಡು, ಎಷ್ಟು ಸೊಗಸಾಗಿದೆ (ನನ್ನ ಸ್ವಗತ, ಅರೇ, ಸಾಹಿತ್ಯವೇ? ಅಥವಾ ಸಂಗೀತವೋ? ಸಾಹಿತ್ಯದಲ್ಲೇನಿದೆ!)&lt;br /&gt;&lt;/span&gt;&lt;/em&gt;&lt;br /&gt;&lt;em&gt;&lt;span style="font-size:85%;"&gt;ನಮ್ಮತ್ತೆ: (ತಲೆ ಚಚ್ಚಿಕೊಳ್ಳುತ್ತಾ), ಬಡುಕೋಬೇಕು, ಅದರಲ್ಲೇನಿದೆಯಪ್ಪಾ ಅಂಥಾದ್ದು... ನೀನಂತೂ...&lt;br /&gt;&lt;/span&gt;&lt;/em&gt;&lt;/div&gt;&lt;div align="justify"&gt;&lt;br /&gt;ನಮ್ಮ ತಾತ ಅದಕ್ಕೇನೂ ಉತ್ತರ ಕೊಡುವ ಗೋಜಿಗೆ ಹೋಗಲಿಲ್ಲ. ನಕ್ಕುಕೊಂಡು ಸುಮ್ಮನಾದರೆಂದು ನೆನಪು.&lt;br /&gt;&lt;br /&gt;ಆಮೇಲೂ ಸುಮಾರು ಸಲ ಆ ಹಾಡನ್ನು ನೋಡಿದಾಗೆಲ್ಲ/ಕೇಳಿದಾಗೆಲ್ಲ ನಮ್ಮ ತಾಯಿ-ತಂದೆ ಆ ಘಟನೆಯನ್ನು ನೆನಪಿಸಿಕೊಂಡು ನಕ್ಕದ್ದಿದೆ; ಹಾಗೇ ಆ ಸಾಹಿತ್ಯದಲ್ಲಿ ತಾತನವರು ಮೆಚ್ಚಿದ್ದು ಏನಿದೆಯೆಂದು ನಾನು ತಲೆಕೆಡಿಸಿಕೊಂಡಿದ್ದೂ. ಆಮೇಲೊಂದುದಿನ, (ತಲೆಯಲ್ಲಿ ಕುಳಿತಿದ್ದ ಮದ'ನಾರಿ' ಕ್ಷಣಕಾಲ ಮರೆಯಾದಾಗ) ಇದ್ದಕ್ಕಿದ್ದಂತೆ ಹೊಳೆಯಿತು; ಅರೇ, ಮದನಾರಿಯೆಂದರೆ ಶಿವನಲ್ಲವೇ (ಮದನ + ಅರಿ)! ಜೊತೆಗೇ ನೆನಪಿಗೆ ಬಂತು, ತೆರೆಯಮೇಲೆ ಆ ಮದ'ನಾರಿ'ಯ ಮುಂದೆಯೇ ಕುಳಿತಿದ್ದ ಶಿವನ ಮೂರ್ತಿ; ಅರ್ಜುನ ಪೂಜಿಸುವಂತೆ ಅಭಿನಯಿಸುತ್ತಿದ್ದುದು ಆ ಮದನಾರಿಯನ್ನೇ! ಆಗ ಆ ಹಾಡಿನ ಪೂರ್ಣ ಸ್ವಾರಸ್ಯ ಅರಿವಿಗೆ ಬಂತು. ಈಗ ಮೊನ್ನೆ ಆ ಹಾಡನ್ನು ಮತ್ತೆ ನೋಡಿದಾಗ ಈ ಬಗ್ಗೆ ಬರೆಯಬೇಕೆನ್ನಿಸಿತು. ಕೇವಲ ಅದೊಂದು ಅರ್ಥಪಲ್ಲಟದಿಂದ ಇಡೀ ಹಾಡಿನ ರಸವೇ ಅದುಹೇಗೆ ಶೃಂಗಾರದಿಂದ ಭಕ್ತಿಗೆ ಬದಲಾಗುತ್ತದೆ ನೋಡಿ:&lt;br /&gt;&lt;br /&gt;&lt;em&gt;&lt;span style="font-size:85%;"&gt;ಆರಾಧಿಸುವೇ ಮದನಾರಿ ಆದರಿಸು ನೀ ದಯ ತೋರಿ&lt;br /&gt;&lt;br /&gt;ಅಂತರಂಗದಲಿ ನೆಲೆಸಿರುವೆ ಆಂತರ್ಯ ತಿಳಿಯದೆ ಏಕಿರುವೆ&lt;br /&gt;ಸಂತತ ನಿನ್ನ ಸಹವಾಸ ನೀಡಿ ಸಂತೋಷದಿಂದೆನ್ನ ನಲಿಸೆಂದು ಕೋರುವೆ&lt;br /&gt;&lt;br /&gt;ಮೈದೋರಿ ಮುಂದೆ ಸಹಕರಿಸು ಆ ಮಾರನುರವಣೆ ಪರಿಹರಿಸು&lt;br /&gt;ಪ್ರೇಮಾಮೃತವನು ನೀನುಣಿಸು ತನ್ಮಯಗೊಳಿಸು ಮೈಮರೆಸು&lt;br /&gt;ಚಿನ್ಮಯ ಭಾವ ತುಂಬುತ ಜೀವ ಆನಂದ ಆನಂದ ಆನಂದವಾಗಲಿ &lt;/span&gt;&lt;/em&gt;&lt;br /&gt;&lt;br /&gt;ಇಡೀ ಹಾಡಿನ ಸಾಹಿತ್ಯ, ಎರಡು ಅರ್ಥಗಳಿಗೂ ಸಂಪೂರ್ಣ ಹೊಂದುತ್ತದೆ. ಬಳಸುವುದು ಒಂದೇ ಪದ, ಕೊಡುವುದು ಎರಡು ಅರ್ಥ (ಅದು ನೀವು ಈಗ ನೋಡುವ double-meaning ಅಲ್ಲ!). ಹೀಗೆ ಒಂದೇ ಪದ ಅಥವಾ ಪದಪುಂಜಗಳನ್ನು ಬಳಸಿ ವಿವಿದಾರ್ಥಗಳನ್ನು ಸೂಚಿಸುವುದಕ್ಕೆ ಅಲಂಕಾರದ ಪರಿಭಾಷೆಯಲ್ಲಿ ಶ್ಲೇಷೆಯೆನ್ನುತ್ತಾರೆ.&lt;br /&gt;&lt;br /&gt;ಶ್ಲೇಷಾಲಂಕಾರ ಪ್ರತಿಭಾವಂತ ಕವಿಯೊಬ್ಬನ ಕೈಯಲ್ಲಿ ಉತ್ತಮ ಸಾಧನ. ಪ್ರಾಚೀನ-ಆಧುನಿಕ ಕವಿಗಳು ನಾಟಕಕಾರರು ಶ್ಲೇಷೆಯನ್ನು ಒಂದಿಲ್ಲೊಂದು ರೀತಿಯಲ್ಲಿ ಬಳಸುತ್ತಲೇ ಬಂದಿದ್ದಾರೆ. ಉದಾಹರಣೆಗೆ ಭಾಸನ "ಪ್ರತಿಜ್ಞಾಯೌಗಂಧರಾಯಣ" ನಾಟಕದ ನಾಂದಿ ಪದ್ಯವನ್ನು ನೋಡಿ:&lt;br /&gt;&lt;br /&gt;&lt;em&gt;&lt;span style="font-size:85%;"&gt;ಪಾಂತು ವಾಸವದತ್ತಾಯೋ ಮಹಾಸೇನೋತಿ ವೀರ್ಯವಾನ್&lt;br /&gt;ವತ್ಸರಾಜಸ್ತು ನಾಮ್ನಾ ಸ ಶಕ್ತಿರ್ಯೌಗಂಧರಾಯಣಃ&lt;br /&gt;&lt;br /&gt;(ವಾಸವದತ್ತಾಭ್ಯುದಯ ಮಹಾಸೇನ ಬಹುವೀರ್ಯಯುತ ವತ್ಸರಾಜ&lt;br /&gt;ಶಕ್ತಿಯ ತಳೆದಿಹ ಯೌಗಂಧರಾಯಣ ಕರುಣದಿ ಕಾಪಾಡಲೆಮ್ಮ - ಅನು: ಸಿ.ಪಿ.ಕೆ) &lt;/span&gt;&lt;/em&gt;&lt;br /&gt;&lt;br /&gt;ಸ್ಥೂಲವಾಗಿ ಅದರ ಅರ್ಥ ಹೀಗೆ. ವಾಸವ (ಇಂದ್ರ)ನಿಗೆ ಜೀವನವನ್ನು (ಆಯು = ಜೀವನ, ಅಭ್ಯುದಯ) ನೀಡಿದ, ಅತಿ ವೀರ್ಯವಂತನೂ ವತ್ಸರಾಜನೆಂಬ ಹೆಸರುಳ್ಳವನೂ, ಮಹಾಸೇನನೂ ಆದ ಶಕ್ತಿಯುತನಾದ (ಅಥವ ಶಕ್ತ್ಯಾಯುಧ - ವೇಲಾಯುಧವನ್ನು ತಳೆದ) ಯೌಗಂಧರಾಯಣನು (ಕುಮಾರಸ್ವಾಮಿಯು) ನಮ್ಮನ್ನು ಕಾಪಾಡಲಿ (ಕುಮಾರಸ್ವಾಮಿಗೆ ವತ್ಸರಾಜನೆಂದೂ ಹೆಸರಿದೆ - ಗಣಪತಿಯು ಜ್ಯೇಷ್ಠರಾಜನಾದರೆ, ಅವನ ತಮ್ಮ ಸುಬ್ರಹ್ಮಣ್ಯನು ವತ್ಸರಾಜ; ಹಾಗೆಯೇ ದೇವಸೇನಾನಿಯಾದ ಈತ ಮಹಾಸೇನ; ಅಂತೆಯೇ ಯುಗಂಧರ (ಶಿವ)ನ ಮಗನಾದ್ದರಿಂದ ಯೌಗಂಧರಾಯಣ)&lt;br /&gt;&lt;br /&gt;ಇದು ಕುಮಾರಸ್ವಾಮಿಯನ್ನು ಕುರಿತ ಸ್ತುತಿಯಾದರೆ, ನಾಟಕದ ಮಟ್ಟದಲ್ಲಿ ಅದರ ಮುಖ್ಯಪಾತ್ರಗಳ ಸ್ತುತಿಯೂ ಹೌದು, ಹಾಗೆಯೇ ನಾಟಕದ ಸ್ಥೂಲ ಪೂರ್ವಸೂಚಿಕೆಯೂ ಹೌದು - ವಾಸವದತ್ತೆ (ಮತ್ತವಳ ಅಭ್ಯುದಯ - ವಿವಾಹವೇ ಈ ನಾಟಕದ ವಸ್ತು), ಆಕೆಯ ತಂದೆ ಮಹಾಸೇನ (ಪ್ರದ್ಯೋತ); ವೀರಶ್ರೇಷ್ಠನಾದ ವತ್ಸರಾಜ (ಉದಯನ); ಇವೆಲ್ಲದರ ಜೊತೆಗೆ ಈ ನಾಟಕದ ನಾಯಕ, ಚತುರನೂ ಶಕ್ತಿಯುತನೂ ಆದ ಮಂತ್ರಿ ಯೌಗಂಧರಾಯಣ; ವಾಸವದತ್ತೆಯ ನವಜೀವನಕ್ಕೆ ಕಾರಣವಾಗುವ ಅವನ ಯುಕ್ತಿ-ಚಾತುರ್ಯಗಳು - ಇವನ್ನು ಸೂತ್ರಧಾರ ಸ್ತುತಿಸುತ್ತಾ ನಾಟಕವನ್ನು ಪ್ರಾರಂಭಿಸುತ್ತಾನೆ.&lt;br /&gt;&lt;br /&gt;ಹೀಗೆಯೇ ಈ ನಾಟಕದ ಮುಂದುವರಿಕೆಯಾದ "ಸ್ವಪ್ನವಾಸದತ್ತಾ" ನಾಟಕದಲ್ಲೂ ಇಂಥದ್ದೇ ಶ್ಲೇಷೆಯನ್ನು ಬಳಸುತ್ತಾನೆ ಕವಿ (ಅದು ಬಲರಾಮನ ಬಗ್ಗೆ ಹಾಗೂ ನಾಟಕದ ಪಾತ್ರಗಳ ಬಗ್ಗೆ - ಶ್ಲೋಕ ನೆನಪಿಲ್ಲ)&lt;br /&gt;&lt;br /&gt;ಇನ್ನು ಕಾಳಿದಾಸನ ಬಹು ಪರಿಚಿತ ಸಾಲು &lt;em&gt;&lt;span style="font-size:85%;"&gt;"ಜಗತಃ ಪಿತರೌ ವಂದೇ ಪಾರ್ವತೀಪರಮೇಶ್ವರೌ"&lt;/span&gt;&lt;/em&gt;&lt;br /&gt;&lt;br /&gt;ಜಗನ್ಮಾತಾಪಿತರಾದ (ಪಿತರೌ = ತಂದೆ-ತಾಯಿಯ ಜೋಡಿಯನ್ನು ಒಟ್ಟಾಗಿ ಸೂಚಿಸಿದಾಗ) ಪಾರ್ವತೀ ಪರಮೇಶ್ವರನ್ನು ವಂದಿಸುತ್ತೇನೆ, ಇದು ಒಂದು ಅರ್ಥವಾದರೆ, ಜಗಜ್ಜನಕರಾದ ಪಾರ್ವತೀಪ (ಪಾರ್ವತೀ ಪತಿ = ಶಿವ) ಹಾಗೂ ರಮೇಶ್ವರ (ರಮಾಪತಿ = ವಿಷ್ಣು) ಇವರನ್ನು ವಂದಿಸುತ್ತೇನೆ (ಇಲ್ಲಿ ಕವಿ "ಪಿತರೌ" ಎಂಬ ದ್ವಿ ವಚನವನ್ನು ಎಷ್ಟು ಚಾತುರ್ಯದಿಂದ ಬಳಸಿದ್ದಾನೆ ಎಂಬುದನ್ನು ಗಮನಿಸಬಹುದು)&lt;br /&gt;&lt;br /&gt;&lt;em&gt;&lt;span style="font-size:85%;color:#ff0000;"&gt;[&lt;strong&gt;&lt;u&gt;ಅಡಿಟಿಪ್ಪಣಿ:&lt;/u&gt;&lt;/strong&gt; "ಪಾರ್ವತೀಪ + ರಮೇಶ್ವರೌ" ಎಂಬ ಛೇಧನ "ಜಗತಃ ಪಿತರೌ" ಎಂಬ ದ್ವಿವಚನದ ಸಂದರ್ಭದಲ್ಲಿ ವ್ಯಾಕರಣದ ದೃಷ್ಟಿಯಿಂದ ಅಸಾಧುವೆಂದೂ, "ವಾಕ್" ಎಂಬ ಸ್ತ್ರೀಲಿಂಗಪದಕ್ಕೂ "ಅರ್ಥ" ಎಂಬ ಪುಲ್ಲಿಂಗಪದಕ್ಕೂ ಸಂವಾದಿಯಾಗಿ "ಪಾರ್ವತೀ ಪರಮೇಶ್ವರೌ" ಎಂಬ ಹೋಲಿಕೆ ಬರುವುದರಿಂದ, ಪಾರ್ವತೀಪ ಹಾಗೂ ರಮೇಶ್ವರ ಎಂಬ ದ್ವಿ ಪುಲ್ಲಿಂಗ ಪದಗಳ ಬಳಕೆ ಆಲಂಕಾರಿಕವಾಗೂ ಅಸಾಧುವೆಂದೂ, ತನ್ನ ಕಾವ್ಯಗಳಲ್ಲೆಲ್ಲಾ ಅಸಾಧಾರಣ ವ್ಯಾಕರಣ ಪ್ರಜ್ಞೆ ಮೆರೆಯುವ ಕಾಳಿದಾಸ ಕೇವಲ ಸಣ್ಣ ಕಾವ್ಯಪ್ರಯೋಜನಕ್ಕೆ ಇಂಧಾ ವ್ಯಾಕರಣದೋಷಕ್ಕೆಡೆಗೊಡುವುದು ಅಸಂಭವವೆಂದೂ ಆದ್ದರಿಂದ ಇಲ್ಲಿ ಶ್ಲೇಷೆಯನ್ನು ಹುಡುಕಹೊರಡುವುದು ವ್ಯರ್ಥವೆಂದೂ ವಿದ್ವಾಂಸರ ಅಭಿಪ್ರಾಯ.  ಹೆಚ್ಚಿನ ವಿವರಗಳಿಗೆ ಶ್ರೀ ವಿವೇಕರ ಪ್ರತಿಕ್ರಿಯಾರೂಪದ ಲೇಖನವನ್ನು ನೋಡಿ, ಕಾಮೆಂಟಿನಲ್ಲಿ]&lt;/span&gt;&lt;/em&gt;&lt;/div&gt;&lt;div align="justify"&gt;&lt;/div&gt;&lt;div align="justify"&gt; &lt;br /&gt;&lt;br /&gt;&lt;/div&gt;&lt;div align="justify"&gt;ಇನ್ನು ಕನ್ನಡಕ್ಕೆ ಬಂದರೆ, "ಕವಿರಾಜಮಾರ್ಗ"ದ ಈ ಮಂಗಲಾಚರಣೆಯ ಪದ್ಯವನ್ನು ನೋಡಿ:&lt;br /&gt;&lt;br /&gt;&lt;em&gt;&lt;span style="font-size:85%;"&gt;ಶ್ರೀವಿಶದ ವರ್ಣೆ ಮಧುರಾ&lt;br /&gt;ರಾವೋಚಿತೆ ಚತುರ ರುಚಿರ ಪದರಚನೆ ಚಿರಂ&lt;br /&gt;ದೇವಿ ಸರಸ್ವತಿ ಹಂಸೀ&lt;br /&gt;ಭಾವದಿ ನೆಲೆಗೊಳ್ಗೆ ಕೂರ್ತು ಮನ್ಮಾನಸದೊಳ್&lt;br /&gt;&lt;/span&gt;&lt;/em&gt;&lt;br /&gt;ಶ್ರೀ ವಿಶದವರ್ಣೆ (ಮಂಗಳಕರವಾದ, ಶುಭ್ರವಾದ ಬಿಳೀ ಬಣ್ಣವುಳ್ಳವಳು), ಮಧುರಾರಾವೋಚಿತೆ (ಮಧುರವಾದ ಸ್ತುತಿಗೆ ಅರ್ಹಳು), ಚತುರ ರುಚಿರ ಪದರಚನೆ (ಸುಂದರವಾದ ಸುಲಲಿತವಾದ ನಡೆಯುಳ್ಳವಳು) ಚಿರಂದೇವಿ (ಶಾಶ್ವತಿ - "ಚಿರಂಜೀವಿ"ಯಂತೆ, ಚಿರಂದೇವಿ) ಸರಸ್ವತಿ, ಹಂಸೀ ಭಾವದಿ ನೆಲೆಗೊಳ್ಗೆ ಕೂರ್ತು ಮನ್ಮಾನಸದೊಳ್ (ಹಂಸವು ಮಾನಸ ಸರೋವರದಲ್ಲಿ ನೆಲೆಗೊಳ್ಳುವಂತೆ, ನೀನು ನನ್ನ ಮನಸ್ಸಿನಲ್ಲಿ ನೆಲೆಸು);&lt;br /&gt;&lt;br /&gt;ಮತ್ತೆ, ಶ್ರೀ ವಿಶದವರ್ಣೆ (ಮಂಗಳಕರವಾದ ಸ್ಫುಟವಾದ ಅಕ್ಷರಗಳನ್ನುಳ್ಳವಳು - ವರ್ಣ = ಅಕ್ಷರ), ಮಧುರಾರಾವೋಚಿತೆ (ಮಧುರವಾದ ನುಡಿಯನ್ನು ಹೊಂದಿದವಳು = ಭಾಷೆ ಮಧುರವಾಗಿದೆ ಎಂಬ ಅಭಿಪ್ರಾಯ), ಚತುರ ರುಚಿರ ಪದರಚನೆ (ಸುಂದರವಾದ ಸುಲಲಿತವಾದ ಪದರಚನೆಯ ಸಾಮರ್ಥ್ಯವುಳ್ಳವಳು) ಚಿರಂದೇವಿ (ಶಾಶ್ವತಿ - ಅಕ್ಷರ ಶಾಶ್ವತ "ಅ+ಕ್ಷರ = ನಾಶವಿಲ್ಲದ್ದು) ಸರಸ್ವತಿ (ಭಾಷೆಗೆ ಸರಸ್ವತಿ ಎಂದೂ ಪರ್ಯಾಯವುಂಟು) ಹಂಸೀ ಭಾವದಿ ನೆಲೆಗೊಳ್ಗೆ ಕೂರ್ತು ಮನ್ಮಾನಸದೊಳ್ (ಹಂಸವು ಮಾನಸ ಸರೋವರದಲ್ಲಿ ನೆಲೆಗೊಳ್ಳುವಂತೆ, ನೀನು ನನ್ನ ಮನಸ್ಸಿನಲ್ಲಿ ನೆಲೆಸು) - ಇದು ಮಾತಿನ ಅಧಿದೇವಿಯಾದ ವಾಗ್ದೇವಿಯನ್ನು (ವಾಗ್ದೇವಿ = ಸರಸ್ವತಿ, ಮತ್ತೆ) ಕುರಿತ ಅರ್ಥ. ಮೊದಲ ಅರ್ಥದಲ್ಲಿ ಸರಸ್ವತಿಯ ದೈವೀ ಸ್ವರೂಪದ ವರ್ಣನೆಯಿದ್ದರೆ, ಎರಡನೆಯ ಅರ್ಥದಲ್ಲಿ ಆಕೆಯ ವಾಕ್ ಸ್ವರೂಪದ ವರ್ಣನೆಯಿದೆ. ಈ ರೀತಿ ವಿವಿಧಾರ್ಥಗಳನ್ನು ಹೊಳೆಸುವುದೂ ಮಾತಿನ ಶಕ್ತಿಯೇ ತಾನೆ? ಇದು ವಾಗ್ದೇವಿಯನ್ನು ಸ್ತುತಿಸುವ ಈ ಶ್ಲೋಕದ ಚಮತ್ಕಾರ.&lt;br /&gt;&lt;br /&gt;ಇದೇ ಬಗೆಯ ಶ್ಲೇಷೆಯನ್ನು ಕವಿ ಮುದ್ದಣ ಹೇಗೆ ತರುತ್ತಾನೆ ನೋಡಿ ("ಶ್ರೀರಾಮ ಪಟ್ಟಾಭಿಷೇಕ" ಕಾವ್ಯದ ಮಂಗಲಾಚರಣೆಯಿಂದ):&lt;br /&gt;&lt;br /&gt;&lt;em&gt;&lt;span style="font-size:85%;"&gt;ಹರಿಗೆರಗಿ ಸೋಮನಂ ನುತಿಸುತೆ ಮನಂದಣಿಯೆ&lt;br /&gt;ಹರಿವಾಹನನ ಬಲಂಗೊಂಡು ಹರಿಪುತ್ರರಂ&lt;br /&gt;ಹರಿಸುತಾದ್ಯರ್ಗೆ ತಲೆವಾಗಿ ಗುರು ಕವಿ ಬುಧರ ಪದಕಮಲಮಂ ಧ್ಯಾನಿಸಿ&lt;br /&gt;ಹರಿಗೆರಗಿ ಸೋಮನಂ ನುತಿಸುತೆ ಮನಂದಣಿಯೆ&lt;br /&gt;ಹರಿವಾಹನನ ಬಲಂಗೊಂಡು ಹರಿಪುತ್ರರಂ&lt;br /&gt;ಹರಿಸುತಾದ್ಯರ್ಗೆ ತಲೆವಾಗಿ ಗುರು ಕವಿ ಬುಧರ ಪದಕಮಲಮಂ ಧ್ಯಾನಿಪೆಂ&lt;/span&gt;&lt;/em&gt;&lt;br /&gt;&lt;br /&gt;ಹರಿ (ವಿಷ್ಣು)ಗೆರಗಿ, ಸೋಮ (ಶಿವ)ನಂ ನುತಿಸುತೆ ಮನಂದಣಿಯೆ, ಹರಿವಾಹನನ (ಗರುಡ?) ಬಲಂಗೊಂಡು ಹರಿಪುತ್ರರಂ (ಬ್ರಹ್ಮ) ಹರಿಸುತಾದ್ಯರ್ಗೆ (ಹನುಮನೇ ಮೊದಲಾದ ಕಪಿಶ್ರೇಷ್ಠರಿಗೆ - ಹರಿ = ಕಪಿ) ತಲೆವಾಗಿ ಗುರು (ಗುರುಗಳು) ಕವಿ (ಕವಿಗಳು/ಸಹೃದಯರು) ಬುಧ (ಪಂಡಿತ/ಜ್ಞಾನಿ)ರ ಪದಕಮಲಮಂ ಧ್ಯಾನಿಸಿ; ಮತ್ತೆ ಹರಿ (ಸೂರ್ಯ)ಗೆರಗಿ, ಸೋಮ (ಚಂದ್ರ)ನಂ ನುತಿಸುತೆ, ಮನಂದಣಿಯೆ ಹರಿವಾಹನ (ಮೇಷವಾಹನ = ಮಂಗಳ) ನ ಬಲಂಗೊಂಡು, ಹರಿಪುತ್ರರಂ (ಹರಿ(ಸೂರ್ಯ)ಪುತ್ರ = ಶನಿ) ಹರಿಸುತಾದ್ಯರ್ಗೆ (ಹರಿ=ಹಾವು; ಹಾವಿನಿಂದ ಹುಟ್ಟಿದವರು (?) ರಾಹುಕೇತು) ತಲೆವಾಗಿ, ಗುರು (ಗುರು) ಕವಿ (ಶುಕ್ರ) ಬುಧ (ಕವಿ = ಬುಧ)ರ ಪದಕಮಲಮಂ ಧ್ಯಾನಿಸುವೆ.&lt;br /&gt;&lt;br /&gt;ಷಟ್ಪದಿಯ ಎರಡೂ ಅರ್ಧಗಳಲ್ಲಿ ಒಂದೇ ಪದಗಳನ್ನು ಬಳಸಿದರೂ ಮೊದಲ ಅರ್ಧದಲ್ಲಿ ತ್ರಿಮೂರ್ತಿಗಳು, ಗುರು-ಹಿರಿಯರನ್ನು ವಂದಿಸುವ ಕವಿ, ಎರಡನೇ ಅರ್ಧದಲ್ಲಿ ಅದೇ ಪದಗಳನ್ನು ಬಳಸಿ ನವಗ್ರಹಗಳನ್ನು ವಂದಿಸುತ್ತಾನೆ. ಈ ಷಟ್ಪದಿಯಲ್ಲಿ ವಿಷಯದ ಹರಿವಿನಲ್ಲಿ, ಅನ್ವಯದಲ್ಲಿ ಅಷ್ಟು ಸ್ಪಷ್ಟತೆ ಕಾಣುವುದಿಲ್ಲ, ಆದರೂ ಶ್ಲೇಷೆಗೆ ಇದೊಂದು ಉದಾಹರಣೆಯೆಂದು ಇಲ್ಲಿ ಕೊಟ್ಟಿದ್ದೇನೆ.&lt;br /&gt;&lt;br /&gt;ಇದೆಲ್ಲಾ ಬುದ್ಧಿಯ ಚಮತ್ಕಾರವಾಯಿತು; ಪ್ರಯತ್ನ ಪಟ್ಟು ಬರೆಯದೇ ಬಂದದ್ದಲ್ಲ, ಪ್ರಯತ್ನ ಪಟ್ಟು ಅರಿಯದೇ ಅರ್ಥವಾಗುವುದಲ್ಲ. ಆದರೆ ಸ್ವಯಂಪ್ರಭೆಯಿರುವ ಕಾವ್ಯದ ಮಿಂಚಿಲ್ಲದಿದ್ದರೆ ಅದಾವ ಅಲಂಕಾರ ತಾನೆ ಮಿನುಗೀತು? ಶ್ರೀ ಎನ್ಕೆಯವರು ಬೇಂದ್ರೆಯರ ಬಗ್ಗೆ ಆಗಾಗ ಹೇಳುತ್ತಿದ್ದ ಘಟನೆಯೊಂದು ನೆನಪಿಗೆ ಬರುತ್ತದೆ. ಬೇಂದ್ರೆಯವರು ಕೆಲ ಮಿತ್ರರೊಡನೆ ಇನ್ನೊಬ್ಬ ಮಿತ್ರರ ಮನೆಗೆ ಹೋಗಿದ್ದರಂತೆ. ಮಿತ್ರರು ಹೊರಗೆಲ್ಲೋ ಹೋಗಿದ್ದರಿಂದ, ಸ್ವಲ್ಪ ಕಾಯಬೇಕಾಯಿತು. ಅವರು ಬರುವವರೆಗೆ ಹೀಗೇ ಸ್ವಲ್ಪ ಸುತ್ತಾಡಿ ಬರೋಣ ಎಂದ ಮಿತ್ರರ ಸಲಹೆಗೆ ಒಪ್ಪದ ಬೇಂದ್ರೆ, ಇತರರನ್ನು ಸುತ್ತಲು ಕಳುಹಿಸಿ ಮನೆಯಲ್ಲೇ ಉಳಿದರಂತೆ. ಅವರನ್ನು ಉಪಚರಿಸಲು ಮನೆಯೊಡತಿ ಒಂದು ತಟ್ಟೆಯಲ್ಲಿ ದೊಡ್ಡ ತಂಬಿಟ್ಟು ತಂದಿತ್ತರಂತೆ. ಅದನ್ನು ತಿಂದು ಮುಗಿಸುವ ವೇಳೆಗೆ ಹಿಂದಿರುಗಿದ ಇತರ ಮಿತ್ರರು, ತಮ್ಮನ್ನೆಲ್ಲಾ ಬಿಟ್ಟು ಬೇಂದ್ರೆ ತಂಬಿಟ್ಟು ತಿಂದರು ಎಂದು ಆಕ್ಷೇಪಿಸಿದಾಗ ಬೇಂದ್ರೆ ಉತ್ತರ "ನೀವ್ ನಂಬಿಟ್ ಹ್ವಾದ್ರಿ, ನಾವ್ ತಂಬಿಟ್ ತಿಂದ್ವಿ" (ನೀವು ನಮ್ಮನ್ನ ಬಿಟ್ಟು ಹೋದಿರಿ, ನಾವು ತಮ್ಮನ್ನ ಬಿಟ್ಟು ತಿಂದೆವು)&lt;br /&gt;&lt;br /&gt;ಅ.ರಾ.ಮಿತ್ರರು ಶ್ಲೇಷಾಲಂಕಾರಕ್ಕೆ ಬಹು ಸೊಗಸಾದ ಉದಾಹರಣೆಯೊಂದನ್ನು ರಚಿಸಿ ಕೊಟ್ಟಿದ್ದಾರೆ, ತಮ್ಮ "ಛಂದೋಮಿತ್ರ" ಪುಸ್ತಕದಲ್ಲಿ:&lt;br /&gt;&lt;br /&gt;&lt;em&gt;&lt;span style="font-size:85%;"&gt;ಪೀತವರ್ಣಪ್ರೀತೆ ಗೃಹಪತ್ರಕರ್ತೆ&lt;br /&gt;ದೋಷದ ಕರಡು ತಿದ್ದದ ಮನೆಯ ಸಂಪಾದಕ&lt;br /&gt;ಇಬ್ಬರಿಂ ಹಾಳಾಯ್ತು ಮನೆಯಚ್ಚುಕೂಟ&lt;br /&gt;ಬತ್ತಿ ಹೋಯಿತು ಕೇಳು ಅರ್ಥ ಜೀವನದಿ&lt;br /&gt;&lt;/span&gt;&lt;/em&gt;&lt;br /&gt;ಪೀತ = ಹಳದಿ ಪತ್ರಿಕೋದ್ಯಮ (yellow press - useless gossip), ಚಿನ್ನ ಕೂಡ&lt;br /&gt;ಗೃಹಪತ್ರಕರ್ತೆ = ಗೃಹಿಣಿಯೆಂಬ ಪತ್ರಕರ್ತೆ, ಗೃಹಪತ್ರ (ಮನೆಯ ಖರ್ಚುವೆಚ್ಚ) ನೋಡುವವಳು ಕೂಡ&lt;br /&gt;ಸಂಪಾದಕ = ಪತ್ರಿಕಾ ಸಂಪಾದಕ, ಹಣ ಸಂಪಾದಿಸುವವನು (ಯಜಮಾನ) ಎಂದು ಕೂಡ&lt;br /&gt;ಅರ್ಥ = ಸ್ವಾರಸ್ಯ, ಹಣ ಕೂಡ&lt;br /&gt;ಜೀವನದಿ = ಜೀವನದಲ್ಲಿ, ಜೀವ-ನದಿ ಕೂಡ (ಅರ್ಥ (ಹಣ)ವೆಂಬ ಜೀವನದಿ ಈ ದುಂದುವೆಚ್ಚದಿಂದ ಬತ್ತಿಹೋಯಿತು ಎಂದೂ ಅರ್ಥ)&lt;br /&gt;&lt;br /&gt;ಶ್ಲೇಷೆಯ ಶುದ್ಧ ರೂಪದಲ್ಲಿ, ಒಂದೇ ಪದಕ್ಕೆ ಸಹಜವಾಗೇ ವಿವಿಧ ಅರ್ಥಗಳಿರುತ್ತವೆ. ಈ ಅರ್ಥಗಳು ಸಹಜ ನಿಘಂಟು ಅರ್ಥಗಳೇ ಹೊರತು ಸಾಧಿತ (ವ್ಯಂಗ್ಯ) ಅರ್ಥಗಳಲ್ಲ. ಉದಾ: ಅತ್ತೆ, ನಿನ್ನಿಂದ ನಾನತ್ತೆ.  ಇಲ್ಲಿ ಅತ್ತೆ (ಗಂಡನ ಅಥವ ಹೆಂಡತಿಯ ತಾಯಿ) ಮತ್ತು (ಅತ್ತೆ, ಅಳುವುದರ ಭೂತಕಾಲ) ಎರಡೂ ನಿಘಂಟಿನ ಅರ್ಥಗಳೇ.  ಹೀಗೆ ಪದಗಳನ್ನು ಒಡೆಯದೆಯೇ ಅದರ ವಿವಿಧಾರ್ಥಗಳನ್ನು ಚಮತ್ಕಾರಿಕವಾಗಿ ಬಳಸಿಕೊಳ್ಳುವುದಕ್ಕೆ ಅಭಂಗಶ್ಲೇಷೆ ಎನ್ನುತ್ತಾರೆ.  ದುಂಡಿರಾಜರ ಈ ಹನಿ ನೋಡಿ:&lt;br /&gt;&lt;br /&gt;&lt;em&gt;&lt;span style="font-size:85%;"&gt;ಕ್ಯಾಶ್ ಕೌಂಟರಿನ&lt;br /&gt;ಹುಡುಗಿಯರ&lt;br /&gt;ಮುಖದಲ್ಲಿ ನಗು&lt;br /&gt;ಹುಡುಕಿದರೂ ಸಿಗದು&lt;br /&gt;ಅದಕ್ಕೆ ಇರಬೇಕು&lt;br /&gt;ಹಾಕಿದ್ದಾರೆ ಬೋರ್ಡು&lt;br /&gt;"ನಗದು"&lt;br /&gt;&lt;/div&gt;&lt;/span&gt;&lt;/em&gt;&lt;br /&gt;&lt;br /&gt;ಒಂದೇ ಪದವನ್ನು ಚಮತ್ಕಾರಿಕವಾಗಿ ಒಡೆಯುವುದರ ಮೂಲಕವೂ ಶ್ಲೇಷೆ ಉದಿಸುತ್ತದೆ. ಇದನ್ನು ಸಭಂಗ ಶ್ಲೇಷೆ ಎನ್ನುತ್ತಾರೆ ಉದಾ: ಭೀಮ"ನ ಗದೆ"ಯೆತ್ತುವ ನಿನ್ನ ಸಾಹಸಕೆ ಅವ "ನಗದೆ" ಇರಲು ಹೇಗೆ ಸಾಧ್ಯ?  ಈ ಕೆಳಗಿನ ಸುಂದರ ಸಾಲುಗಳನ್ನು ನೋಡಿ: &lt;br /&gt;&lt;br /&gt;ಯಥಾ ನಯತಿ ಕೈಲಾಸಂ ನಗಂ ಗಾನ ಸರಸ್ವತೀ&lt;br /&gt;ತಥಾ ನಯತಿ ಕೈಲಾಸಂ ನ ಗಂಗಾ ನ ಸರಸ್ವತೀ || &lt;br /&gt;&lt;br /&gt;ಇಲ್ಲಿನ "ನಗಂ ಗಾನ" ಹಾಗೂ "ನ ಗಂಗಾ ನ" ಎಂಬ ಒಡೆಯುವಿಕೆಯನ್ನು ಗಮನಿಸಿ.&lt;br /&gt;&lt;br /&gt;ಮಾತಿನಲ್ಲಿ ಅಲ್ಲಲ್ಲಿ ಹೀಗೆ ಮಿಂಚಿ ಮರೆಯಾಗುವ ಶ್ಲೇಷೆ ಮನಸ್ಸಿಗೆ ಹಿತವೆನ್ನಿಸಿದರೂ, ಅದು ಅತಿಯಾದರೆ ತಲೆಚಿಟ್ಟು ಹಿಡಿಯಬಹುದಲ್ಲವೇ?  ಶ್ಲೇಷೆಯ ಅತಿ ಬಳಕೆ ಚಿತ್ರಕವಿತ್ವವೆಂಬ ಅಧಮ ಕಾವ್ಯಪ್ರಕಾರವಾಗಿಬಿಡುತ್ತದೆಂದು ಆಲಂಕಾರಿಕರ ಮತ.  ಆದ್ದರಿಂದ ಇದನ್ನು ಸೂಕ್ಷ್ಮವಾಗಿ, ರಸಪೂರ್ಣವಾಗಿ ಬಳಸುವ ಔಚಿತ್ಯಪ್ರಜ್ಞೆ ಅತಿ ಅವಶ್ಯಕ.&lt;br /&gt;&lt;br /&gt;ಮೇಲಿನ ಚರ್ಚೆಯಲ್ಲಿ ನಾವು ಗಮನಿಸಿದ ಮುಖ್ಯ ಅಂಶವೆಂದರೆ, ಶ್ಲೇಷೆಯಲ್ಲಿ ಪದವೊಂದನ್ನು ವಿವಿಧಾರ್ಥಗಳಲ್ಲಿ ಬಳಸಿದರೂ, ಆ ವಿವಿಧಾರ್ಥಗಳು ಆ ಪದಕ್ಕೆ ಸಹಜವಾಗಿಯೇ ನಿಘಂಟಿನಲ್ಲಿ ದೊರಕೊಂಡಿರುವುದು; ಅವಾವುವೂ ಸಾಧಿತ ಅಥವ ವ್ಯಂಗ್ಯಾರ್ಥಗಳಲ್ಲ.  ಉದಾಹರಣೆಗೆ ಮಾಮೂಲು ಎಂಬ ಪದಕ್ಕೆ ಇರುವ ಅರ್ಥ, ಸಾಧಾರಣವಾಗಿ, ಸಾಮಾನ್ಯವಾಗಿ, routine, customary ಇತ್ಯಾದಿ.  ಆದರೆ ಅದೇ ಲಂಚವೆಂಬ ವಿಶೇಷಾರ್ಥದಲ್ಲೂ ಬಳಕೆಯಲ್ಲಿದೆ.  ಆದ್ದರಿಂದ ಬಳಕೆಯಲ್ಲಿ ಮಾಮೂಲು ಎನ್ನುವ ಪದವನ್ನು ಹೀಗೆ ಎರಡರ್ಥದಲ್ಲಿ ಬಳಸಿದರೆ, ಅದು ಶ್ಲೇಷೆಯಾಗುವುದಲ್ಲ, ಬದಲಿಗೆ ವ್ಯಂಜನಾವೃತ್ತಿಯೆಂಬ ಮತ್ತೊಂದು ಅಲಂಕಾರವಾಗುತ್ತದೆ.  ವ್ಯಂಜನಾವೃತ್ತಿಯ ಮಿತಿಯೆಂದರೆ, ಈ ವ್ಯಂಗ್ಯಾರ್ಥ ಎಷ್ಟೆಂದರೂ ಸಂದರ್ಭದ ಚಮತ್ಕಾರದಿಂದ ಮೂಡಿರುವ ಅರ್ಥವಾದ್ದರಿಂದ, ಮೊದಲ ಕೆಲವು ಪ್ರಯೋಗಗಳಲ್ಲಿ ಚಮತ್ಕಾರಿಕವಾಗಿ ಸೊಗಸೆನ್ನಿಸಿದರೂ, ಅದರ ಮಿತಿಮೀರಿದ ಬಳಕೆ ತನ್ನ ಹೊಳಪು ಕಳೆದುಕೊಳ್ಳುತ್ತದೆ.  "ಯಡಿಯೂರಪ್ಪನವರ ಸರ್ಕಾರ ’ಶೋಭಾ’ಯಮಾನವಾಗಿ ಮಿನುಗುತ್ತದೆ" ಎಂದಂತೆ!&lt;br /&gt;&lt;br /&gt;&lt;br /&gt;"Pun" ಎನ್ನುವುದು ಶ್ಲೇಷೆ ಮತ್ತು ವ್ಯಂಜನಾವೃತ್ತಿಗಳ ನಡುವೆ ಸಂಚರಿಸುವ ಇಂಗ್ಲಿಷ್ ಸಮಾನಾಂತರ.  Ogden Nash ಪನ್ನಿನ ಅನಂತ ಸಾಧ್ಯತೆಗಳನ್ನು ಪರಿಚಯಿಸಿದ ಕವಿ. ಅವನ ಈ ಸಾಲುಗಳನ್ನು ನೋಡಿ:&lt;br /&gt;&lt;br /&gt;&lt;em&gt;&lt;span style="font-size:85%;"&gt;There was an old man in the trunk&lt;br /&gt;Who inquired of his wife, "Am I drunk?"&lt;br /&gt;She replied with regret&lt;br /&gt;"I'm afraid so, my pet"&lt;br /&gt;And he answered, "It's just as I thunk."&lt;br /&gt;&lt;/span&gt;&lt;/em&gt;&lt;br /&gt;ಕುಡುಕ ಗಂಡ ಹೆಂಡತಿಯನ್ನು ಕೇಳುತ್ತಾನೆ, "ನಾನು ಕುಡಿದಿದ್ದೀನಾ?" ಅವಳು ಉತ್ತರಿಸುತ್ತಾಳೆ, "ಹೌದು ಮುದ್ದೂ". ಅದಕ್ಕವನು ಹೇಳುತ್ತಾನೆ, "ಅದೇ ನಾನೂ ಯೋಚಿಸಿದ್ದು". ಇದು ಭಾಷಾಂತರಕ್ಕೆ ಸಿಕ್ಕುವ pun ಅಲ್ಲ. ಇಲ್ಲಿ ಸ್ವಾರಸ್ಯವಿರುವುದು ಕೊನೇ ಸಾಲಿನ "thunk" ಎನ್ನುವ ಪದದಲ್ಲಿ. Drink ಎನ್ನುವುದು Drunk ಆದಂತೆ, ಕುಡುಕನ ಬಾಯಲ್ಲಿ Think ಅನ್ನುವುದು Thunk (Thought ಬದಲಿಗೆ). ಅದೇ ಇಲ್ಲಿನ Pun. ಪದವನ್ನು ತಿರುಚಿ Pun ಉತ್ಪಾದಿಸುವುದಕ್ಕೆ ಇದು ಉದಾಹರಣೆ. ಮತ್ತೆ ಅವ ಅದೆಷ್ಟು ಕುಡುಕನಾಗಿಬಿಟ್ಟಿದ್ದಾನೆಂದರೆ, ಅವನ ಹೆಂಡತಿಯ ಪಾಲಿಗೆ ಅವನೊಂದು ಪೆಟ್ಟಿಗೆಯಲ್ಲಿ ಹೊತ್ತೊಯ್ಯುವ ಸಾಕುಪ್ರಾಣಿಯಂತೆ (trunk ಮತ್ತು pet ಅನ್ನುವುದರ pun ಇದು). ಅದಕ್ಕೇ ಅವನು "honey" ಅಲ್ಲ, "sweatheart" ಅಲ್ಲ, "pet". ಮತ್ತೆ Trunk - Drunk; (Re)gret - Pet ಈ ಪ್ರಾಸಗಳ ಜೊತೆಗೆ ಕೊನೆಯ ಸಾಲಿನಲ್ಲಿ Thunk ಎನ್ನುವ ವಿಲಕ್ಷಣ ಪ್ರಾಸವೂ ಸೇರಿ ಅದಕ್ಕೆ ಮತ್ತಷ್ಟು ಹಾಸ್ಯದ ಲೇಪ ಕೊಡುತ್ತದೆ.&lt;br /&gt;&lt;br /&gt;ಇದೇ ಉಸಿರಿನಲ್ಲಿ ವೈಯೆನ್ಕೆಯವರ ಒಂದು ಹನಿ ನೆನಪಿಗೆ ಬರುತ್ತದೆ:&lt;br /&gt;&lt;br /&gt;&lt;em&gt;&lt;span style="font-size:85%;"&gt;ಕರುಣಾಳು ಬಾ ಬೆಳಕೆ&lt;br /&gt;ಮಸುಕಿದೀ ಪಬ್ಬಿನಲಿ&lt;br /&gt;ಕೈ ಹಿಡಿದು ಕುಡಿಸೆನ್ನನು&lt;br /&gt;&lt;/span&gt;&lt;/em&gt;&lt;br /&gt;ಸುಪ್ರಸಿದ್ಧವಾದ ಸಾಲೊಂದನ್ನು ತೆಗೆದುಕೊಂಡು ಅದಕ್ಕೆ ವಿಲಕ್ಷಣ ತಿರುವನ್ನು ಕೊಡುವುದು ಇಲ್ಲಿನ pun; ಹಾಗೆಯೇ ನಡೆಯುವನಿಗೆಂತೋ ಅಂತೆಯೇ ಕುಡಿಯುವವನಿಗೂ ಬೇಕು ಬೆಳಕು (ಅವನಿಗೆ ಹೆಚ್ಚೇ ಬೇಕು, ಏಕೆಂದರೆ ಅವನ "ಮಬ್ಬು" ಹೆಚ್ಚು) ಅನ್ನುವುದು ಕೂಡ; ಪಬ್ಬೇ ಮಬ್ಬಾಗುವ pun ಕೂಡ ಇಲ್ಲಿದೆ&lt;br /&gt;&lt;br /&gt;Pun ಸಾಹಿತ್ಯದ ಬೆಳೆ ಆಧುನಿಕ ಕನ್ನಡದಲ್ಲಿ ಸಾಕಷ್ಟು ಹುಲುಸಾಗಿಯೇ ಬೆಳೆದಿದೆ. ಕೈಲಾಸಂರಿಂದ ಹಿಡಿದು ದುಂಡಿರಾಜರವರೆಗೂ ಅನೇಕ punಡಿತರು ನಮ್ಮಲ್ಲಿದ್ದಾರೆ (ಕ್ಷಮಿಸಿ, ಈ punಡಿತ ಎನ್ನುವ ಶ್ಲೇಷೆಯೇ (ಹಾಗನ್ನಬಹುದೇ) ತನ್ನ ಅತಿ ಬಳಕೆಯಿಂದ ಕ್ಲೀಷೆ (cliche)ಯಾಗಿ ಹೋಗಿದೆ)&lt;br /&gt;&lt;br /&gt;Punನ್ನಿನ ವಿಷಯಕ್ಕೆ ಬಂದರೆ ದುಂಡಿರಾಜರನ್ನು ಮರೆಯಲು ಸಾಧ್ಯವೇ ಇಲ್ಲ, ಆದರೆ ಸಮಸ್ಯೆಯೆಂದರೆ ಅವರ ಯಾವ ಹನಿಯನ್ನು ಉದಾಹರಿಸುವುದು ಯಾವುದನ್ನು ಬಿಡುವುದು? ಕಾವ್ಯ ಮಿಂಚಲು ಭಾಮಿನಿಯೇ ಆಗಬೇಕೇ, ಮಿನಿ ಆಗದೇ? ಅವರು ಹೇಳುತ್ತಾರೆ:&lt;br /&gt;&lt;br /&gt;&lt;em&gt;&lt;span style="font-size:85%;"&gt;ಅಯ್ಯಾ ಕುಮಾರವ್ಯಾಸ&lt;br /&gt;ನಾನು ನಿನ್ನ ದಾಸ&lt;br /&gt;ನೀನು ಬರೆದದ್ದು ಭಾಮಿನಿ&lt;br /&gt;ನನ್ನದೋ ಬರೀ 'ಮಿನಿ'&lt;/span&gt;&lt;br /&gt;&lt;/em&gt;&lt;br /&gt;&lt;div align="justify"&gt;ಹಾಗೆಯೇ ಇನ್ನೊಂದು:&lt;br /&gt;&lt;/div&gt;&lt;div align="justify"&gt;&lt;em&gt;&lt;/em&gt;&lt;/div&gt;&lt;div align="justify"&gt;&lt;br /&gt;&lt;em&gt;&lt;span style="font-size:85%;"&gt;ಬ್ಯಾಂಕ್ ಜೀವನದ&lt;br /&gt;ಏಕತಾನದಿಂದ&lt;br /&gt;ರೋಸಿ ಹೋಗಿ&lt;br /&gt;ಎಲ್ಲ ಮರೆತು ಹಾಯಾಗಿ&lt;br /&gt;ಸುತ್ತಾಡಿ ಬರಲೆಂದು&lt;br /&gt;ರೈಲು ಹತ್ತಿದರೆ ಅಲ್ಲೂ&lt;br /&gt;ಅದೇ ಸೊಲ್ಲು&lt;br /&gt;ಚೆಕ್ ಬುಕ್ ಚೆಕ್ ಬುಕ್ ಚೆಕ್ ಬುಕ್&lt;br /&gt;&lt;/span&gt;&lt;/em&gt;&lt;br /&gt;ಶ್ಲೇಷೆ ಅಥವ ಪನ್ನು ಬರೀ ಕಾವ್ಯದ ಪುಸ್ತಕಗಳಲ್ಲಿ ಮಾತ್ರ ಇರುವುದೆಂದು ತಿಳಿಯಬೇಡಿ ಮತ್ತೆ. ಬಹುಶಃ ಯಾವುದೇ ಪದಕ್ಕೂ ಬಳಕೆಯ ಬಲದಿಂದ ಶ್ಲೇಷೆಯ ಅಥವ ಪನ್ನಿನ 'ದಮ್' ಕೊಡಬಹುದೆನ್ನಿಸುತ್ತದೆ. ನಾ. ಕಸ್ತೂರಿಯವರು ಈ ಶ್ಲೇಷಾರ್ಥ ವ್ಯಂಗ್ಯಾರ್ಥಗಳನ್ನು ಸಂಗ್ರಹಿಸಿ ಒಂದು ಅರ್ಥಕೋಶವನ್ನೇ ರಚಿಸಿದ್ದಾರೆ, ಹೆಸರು "ಅನರ್ಥಕೋಶ"! ಅದರ ಒಂದೆರಡು ಎಂಟ್ರಿಗಳನ್ನು ನೋಡಿ:&lt;br /&gt;&lt;br /&gt;&lt;em&gt;&lt;span style="font-size:85%;"&gt;ತುಪ್ಪ = ಪಾತ್ರೆಗೆ ಚಮಚೆಯಿಂದ ಬಡಿದಾಗ ಉಂಟಾಗುವ ಶಬ್ದವಿಶೇಷ&lt;br /&gt;ಕೃದಂತ = ಕೃತಕ ಹಲ್ಲಿನ ಸೆಟ್ಟು&lt;/span&gt;&lt;/em&gt;&lt;br /&gt;&lt;br /&gt;ಯಾರನ್ನಾದರೂ ಮೇಧಾವಿಗಳೆಂದು ಹೇಳಬೇಕಾದರೆ "ಬೃಹಸ್ಪತಿ" ಎನ್ನುತ್ತೇವೆ; ಹೀಯಾಳಿಸಬೇಕಾದರೆ ಕೂಡ! ನಮ್ಮಲ್ಲೊಬ್ಬರು "ಮೇಧಾವಿ" ಎಂಬ ಪದವನ್ನು ಅಪಭ್ರಂಶಿಸಿ "ಮೇದಾವಿ" ಎಂದೇ ಬಳಸುತ್ತಿದ್ದರು. ಈ ಅಪಭ್ರಂಶ ಉದ್ದೇಶಪೂರ್ವಕವೆಂದೇ ನನ್ನ ಗುಮಾನಿ; ಏಕೆಂದರೆ ಈ ಮಾರ್ಪಾಡು ಅವರಿಗೆ ಬೇಕಾದಾಗ ಅದನ್ನು ಶ್ಲೇಷೆಯಾಗಿಯೂ ಬಳಸುವ ಅನುಕೂಲವನ್ನಿತ್ತಿತ್ತು. ಯಾರನ್ನಾದರೂ "ಮೇದಾವಿ" ಎಂದು ಹೊಗಳುವಾಗ ಅದೊಂದು ನಿಷ್ಪಾಪಿ ಕಾಗುಣಿತದ ತಪ್ಪಾಗಿ ಕಾಣುತ್ತಿದ್ದರೂ, ಯಾರನ್ನಾದರೂ ತೆಗಳಬೇಕಾದಾಗ ಅವರು ಅದಕ್ಕಿಡುತ್ತಿದ್ದ ಅರ್ಥ "ಮೇದಾವಿ = ಮೇದುಕೊಂಡು ತಿರುಗುವವನು"&lt;br /&gt;&lt;br /&gt;ಮತ್ತೆ ಕುಡುಕ ಅಪ್ಪನಿಗೆ ಮಗ ಬರೆಯುತ್ತಿದ್ದ ಪತ್ರದ ಒಕ್ಕಣೆ "’ತೀರ್ಥರೂಪು’ ತಂದೆಯವರಿಗೆ..."&lt;br /&gt;&lt;br /&gt;ನನಗೆ ತಿಳಿದ ವಯೋವೃದ್ಧ ಪುರೋಹಿತರೊಬ್ಬರು ಪೌರೋಹಿತ್ಯಕ್ಕಾಗಿ ತಮ್ಮ ಬಳಿ ಬರುತ್ತಿದ್ದ ಕಕ್ಷಿದಾರರನ್ನು ಕೇಳುತ್ತಿದ್ದರು "ಮರ್ಯಾದೆ ಎಷ್ಟು ಕೊಡುತ್ತೀರಿ?" ಇಲ್ಲಿ "ಮರ್ಯಾದೆ" ಎಂದರೆ ದಕ್ಷಿಣೆ ಎಂದರ್ಥ.&lt;br /&gt;&lt;br /&gt;ಎಷ್ಟೊಂದು ಪದಗಳು, ಬಳಸುವವರ ಪ್ರತಿಭಾಚಾತುರ್ಯದಿಂದ, ಬಳಕೆಯ ಸಾಮಾನ್ಯತೆಯಿಂದ ಪನ್ ಆಗಿ ಮಾರ್ಪಟ್ಟಿವೆ ನೋಡಿ - ಮಾಮೂಲು, ದಕ್ಷಿಣೆ, ಸಮಾಜ ಸೇವೆ, ಸತ್ಯಾಗ್ರಹ, ಅಹಿಂಸಾತ್ಮಕ ಹೋರಾಟ... ಅಷ್ಟೇಕೆ, "ಮಣ್ಣಿನ ಮಗ" ಎಂಬುದಕ್ಕಿಂತ ಉತ್ತಮ ಪನ್ ಬೇಕೆ!&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-2285924455405336760?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/2285924455405336760/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=2285924455405336760&amp;isPopup=true' title='21 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/2285924455405336760'/><link rel='self' type='application/atom+xml' href='http://www.blogger.com/feeds/2037979210344114254/posts/default/2285924455405336760'/><link rel='alternate' type='text/html' href='http://nannabaraha.blogspot.com/2009/10/blog-post_21.html' title='ಮಾತು ಒಡೆದರೆ...'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>21</thr:total></entry><entry><id>tag:blogger.com,1999:blog-2037979210344114254.post-2284805751500647480</id><published>2009-10-04T17:09:00.005+05:30</published><updated>2009-10-08T16:09:40.790+05:30</updated><category scheme='http://www.blogger.com/atom/ns#' term='೧೧. ವಿಚಾರ'/><title type='text'>ದ್ವೈತಮು ಸುಖಮಾ...</title><content type='html'>&lt;div align="justify"&gt;ಸ್ನೇಹಿತರ ವಲಯದಲ್ಲಿ ಈ ವಿಷಯ ಒಮ್ಮೆ ಚರ್ಚೆಗೆ ಬಂತು. ತ್ಯಾಗರಾಜರು ಜನ್ಮತಃ ಅದ್ವೈತಿಗಳಾಗಿದ್ದಾಗ್ಯೂ ತಮ್ಮ ಕೃತಿಗಳಲ್ಲಿ ದ್ವೈತವನ್ನೇ ಎತ್ತಿ ಹಿಡಿದಿದ್ದಾರೆಯೇ?&lt;br /&gt;&lt;br /&gt;ಮೊದಲಿಗೆ, ದ್ವೈತ-ಅದ್ವೈತಗಳ ಚರ್ಚೆಯೇ ಆಧ್ಯಾತ್ಮದ ಅತ್ಯುನ್ನತ ಸ್ತರಕ್ಕೆ ಸಂಬಂಧಿಸಿದ್ದು. ಸಾಧಕನು ಆ ಸ್ತರವನ್ನು ಮುಟ್ಟುವವರೆಗೂ, ಅದರಲ್ಲೂ ವ್ಯಾವಹಾರಿಕ ಸ್ತರದಲ್ಲಂತೂ ಇವರಡರ ನಿಲುವಿನಲ್ಲೂ ಆತನಿಗೆ ಹೆಚ್ಚೇನು ವ್ಯತ್ಯಾಸ ಕಾಣದು. ಶಂಕರರು "ಭಜಗೋವಿಂದಂ" ಎಂದರೂ, ಮಧ್ವರು "ಪ್ರೀಣಯಾಮೋ ವಾಸುದೇವಂ" ಎಂದರೂ ಆ ನಮನವು ಮುಟ್ಟುವುದು ಕೇಶವನನ್ನೇ. ಅನುಸಂಧಾನವು ಬೇರೆಯಿರಬಹುದು, ಗಮ್ಯದೃಷ್ಟಿ ಬೇರೆಯಿರಬಹುದು, ಆದರೆ ಇವು ಸಾಧಕನಿಗೆ ಬಿಟ್ಟಿದ್ದಲ್ಲವೇ? ಹೀಗಾಗಿ, ಇನ್ನೂ ಆಧ್ಯಾತ್ಮಸಾಧನೆಯ ತಳದ ಮೆಟ್ಟಿಲಲ್ಲೆಲ್ಲೋ ಇರುವ, ಅಥವ ಶ್ರೀ ರಾಮಾನುಜರು ಹೇಳುವಂತೆ "ಅನಾದಿ ಪಾಪವಾಸನಾಮಹಾರ್ಣವಾಂತರ್ನಿಮಗ್ನ"ರಾದ, "ಕರ್ಮಪಾಶಪ್ರಗ್ರಥಿತ"ರಾದ ನಮಗೆ, ನಮ್ಮ ಈಗಿನ ಮಟ್ಟದಲ್ಲಿ ಈ ಚರ್ಚೆ ಎಷ್ಟು ಪ್ರಸ್ತುತ ಎಂಬ ಬಗ್ಗೆಯೇ ನನಗೆ ಸಂದೇಹವಿದೆ.&lt;br /&gt;&lt;br /&gt;ಇದು ಒಂದುಕಡೆಗಾದರೆ, ತ್ಯಾಗರಾಜಸ್ವಾಮಿಗಳಂಥ ಅನುಭಾವಿಗಳ, ಜೀವನ್ಮುಕ್ತರ ವಿಷಯದಲ್ಲೂ ಈ ಚರ್ಚೆ ಅಪ್ರಸ್ತುತವೆಂದೇ ನನ್ನ ಅನಿಸಿಕೆ. ತ್ಯಾಗರಾಜರಂತೂ ತಮ್ಮ ಕೃತಿಗಳಲ್ಲೆಲ್ಲೂ 'ತತ್ತ್ವ' ವಿಚಾರವನ್ನು ಚರ್ಚಿಸಿದ್ದಾಗಲಿ, ದ್ವೈತವೋ ಅದ್ವೈತವೋ ಅಥವ ಮತ್ತಾವುದೋ ಒಂದು ನಿಲುವನ್ನು ತಳೆದಿದ್ದಾಗಲಿ ಕಾಣೆ. ತಮ್ಮ ಕೃತಿಗಳುದ್ದಕ್ಕೂ ಅವರು ಪ್ರತಿಪಾದಿಸುವ ಏಕೈಕ ನಿಲುವೆಂದರೆ ಭಕ್ತಿ - ಅದಕ್ಕೆ ಸಂವಾದಿಯಾಗಿ ಬರುವ ಆತ್ಮನಿವೇದನೆ. ಈ ಭಕ್ತಿಕೂಡ ಭಾವಪ್ರಪಂಚದಿಂದ ಹೆಕ್ಕಿ ತೆಗೆದ ರತ್ನವೇ ಹೊರತು ಶಾಸ್ತ್ರದ ಮೊಸರು ಕಡೆದು ಪಡೆದ ನವನೀತವಲ್ಲ. ಆ ಭಕ್ತಿಯೂ ಅದೆಷ್ಟು ಉತ್ಕೃಷ್ಟ ಮಟ್ಟದ್ದೆಂದರೆ, ಅವರ ಕೃತಿಗಳಲ್ಲಿ ಎದ್ದು ಕಾಣುವ ಭಕ್ತಿಭಾವವನ್ನು ಮರೆತು ಇತರರ ಸಂಗೀತರಚನೆಗಳಂತೆ ಕೇವಲ ಸಂಗೀತದ ಸೊಬಗನ್ನು ಆಸ್ವಾದಿಸುವುದು ಸಾಧ್ಯವೇ ಇಲ್ಲ ಎನ್ನಬಹುದು.&lt;br /&gt;&lt;br /&gt;ಭಕ್ತಿಯ ಮೂಲ ಅಗತ್ಯವೇ ದ್ವೈತದ ಸ್ಥಿತಿ, ಒಪ್ಪೋಣ. ಆದರೆ ಅದು ಶ್ರೀ ಮಧ್ವರ ಸಂಪೂರ್ಣ, ಅವಿಚ್ಛಿನ್ನ ದ್ವೈತದ ಪ್ರತಿಪಾದನೆಯಲ್ಲ. ತ್ಯಾಗರಾಜರು ಭಕ್ತಿಯನ್ನು ಪ್ರತಿಪಾದಿಸಿದರೂ ಮಾಧ್ವ ಮಹಾಪ್ರಮೇಯಗಳಾದ ಹರಿಸರ್ವೋತ್ತಮತ್ವ, ಜಗತ್ಸತ್ಯತ್ವ, ಪಂಚಭೇದ, ತಾರತಮ್ಯ, ಮೋಕ್ಷದಲ್ಲೂ ನಿರ್ಬಾಧಿತವಾಗಿ ಉಳಿಯುವ ಜೀವೇಶಭೇದದ ಸ್ಥಿತಿ ಇತ್ಯಾದಿ ತಾಂತ್ರಿಕ ವಿವರ (jargon)ಗಳನ್ನು ಎಲ್ಲೂ ಒಪ್ಪಿ ಪ್ರತಿಪಾದಿಸಿದಂತೆ ಕಾಣೆ. ಬದಲಿಗೆ ಈ ಕೆಳಗಿನ ಸಾಲುಗಳನ್ನು ನೋಡಿ&lt;br /&gt;&lt;br /&gt;ಅನ್ನಿ ನೀವನುಚು ಎಂಚಿನವಾಣಿಕಿ ಆಶ್ರಮಭೇದಮುಲೇಲ&lt;br /&gt;ಕನ್ನುಕಟ್ಟು ಮಾಯಲನಿ ಎಂಚುವಾಣಿಕಿ ಕಾಂತಲ ಭ್ರಮಲೇಲ ದಶರಥ ಬಾಲ ೧&lt;br /&gt;&lt;br /&gt;(ಎಲ್ಲಾ ನೀನೇ ಎಂದು ತಿಳಿದವನಿಗೆ ಆಶ್ರಮಭೇದವೇಕೆ, (ಸರ್ವವೂ) ಕಣ್ಣುಕಟ್ಟು, ಮಾಯೆ ಎಂದು ಅರಿತವನಿಗೆ ಹೆಣ್ಣಿನ ಭ್ರಮೆಯೇಕೆ)&lt;br /&gt;&lt;br /&gt;ಇರಲಿ, ಚರ್ಚೆಯಂತೂ ಬಂತು. ಪ್ರಶ್ನೆಯನ್ನೆತ್ತಿದ ಮಿತ್ರರು ತಮ್ಮ ಅಭಿಪ್ರಾಯಕ್ಕೆ ಉದಾಹರಣೆಯಾಗಿ ಪ್ರಸ್ತುತ ಪಡಿಸಿದ್ದು "ದ್ವೈತಮು ಸುಖಮಾ..." ಎಂಬ ಕೃತಿಯನ್ನು. ರೀತಿಗೌಳ ರಾಗದಲ್ಲಿರುವ ಈ ಕೃತಿ ಹೀಗಿದೆ:&lt;br /&gt;&lt;br /&gt;ದ್ವೈತಮು ಸುಖಮಾ ಅದ್ವೈತಮು ಸುಖಮಾ ಪ&lt;br /&gt;ಚೈತನ್ಯಮಾ ವಿನು ಸರ್ವ ಸಾಕ್ಷಿ ವಿಸ್ತಾರಮುಗಾನು ದೆಲ್ಪುಮು ನಾತೋ ಅ.ಪ&lt;br /&gt;&lt;br /&gt;ಗಗನ ಪವನ ತಪನ ಭುವನ ದ್ಯಾವಾನಿಲಲೋ ನಗಧರಾಜ ಶಿವೇಂದ್ರಾದಿ ಸುರುಲಲೋ &lt;br /&gt;ಭಗವದ್ಭಕ್ತವರಾಗ್ರೇಸರುಲಲೋ ಬಾಗ ರಮಿಂಚೇ ತ್ಯಾಗರಾಜಾರ್ಚಿತ ೧&lt;br /&gt;&lt;br /&gt;ಈ ಪ್ರಶ್ನೆಯನ್ನೆತ್ತುವವರೆಲ್ಲ ಸಾಮಾನ್ಯವಾಗಿ ಮುಂದೊಡ್ಡುವ ಕೃತಿಯೇ ಇದು. ಸ್ವಯಂಸ್ಪಷ್ಟವಾಗಿರುವ ಈ ಕೃತಿಯನ್ನು ಮತ್ತಷ್ಟು ತಿಳಿಗೊಳಿಸಿ ಹೇಳಬೇಕಾದರೆ, ಪಂಚಭೂತಗಳಲ್ಲೂ ತ್ರಿಮೂರ್ತಿಗಳಲ್ಲೂ ಭಕ್ತಶಿಖಾಮಣಿಗಳಲ್ಲೂ ಚೈತನ್ಯವಾಗಿ ನಲಿಯುವ ಸರ್ವಸಾಕ್ಷಿಯಾದ ಪರಮಾತ್ಮನನ್ನು ಕೇಳುತ್ತಾರೆ ತ್ಯಾಗರಾಜರು, "ದ್ವೈತವು ಸುಖವೋ ಅದ್ವೈತವೋ, ವಿಸ್ತಾರವಾಗಿ ತಿಳಿಸು"&lt;br /&gt;&lt;br /&gt;"ಪಂಚಭೂತಗಳಲ್ಲೂ ತ್ರಿಮೂರ್ತಿಗಳಲ್ಲೂ ಭಕ್ತಶಿಖಾಮಣಿಗಳಲ್ಲೂ ಚೈತನ್ಯವಾಗಿ ನಲಿಯುವ ಸರ್ವಸಾಕ್ಷಿ"ಯೊಂದು ಜೀವಾತ್ಮಕ್ಕಿಂತ ಪ್ರತ್ಯೇಕ ಅಸ್ಥಿತ್ವಹೊಂದಿದೆಯಿಂದು ಹೇಳಿದಂತಾಯಿತಲ್ಲವೇ? ಅದರಲ್ಲೂ "ದ್ವೈತಮು ಸುಖಮಾ, ಅದ್ವೈತಮು ಸುಖಮಾ" ಎಂಬ ಪಲ್ಲವಿಯ ಹಿನ್ನೆಲೆಯಲ್ಲಿ ಈ ಚರಣ ವ್ಯಂಗ್ಯಾತ್ಮಕವಾಗಿ ದ್ವೈತವನ್ನೇ ಧ್ವನಿಸುವುದಿಲ್ಲವೇ - ಇದು ಸಾಹಿತ್ಯದಲ್ಲೂ ಪ್ರವೃತ್ತಿಯಿರುವ ಮಿತ್ರರ ಪ್ರಶ್ನೆ.&lt;br /&gt;&lt;br /&gt;ಇರಬಹುದು, ತ್ಯಾಗರಾಜರು ದ್ವೈತವನ್ನೇ ಸರಿಯೆಂದಲ್ಲಿ ಅಚ್ಚರಿಯೇನಿದೆ? ಅವರು ಅಷ್ಟು ತೀವ್ರವಾಗಿ ಪ್ರತಿಪಾದಿಸುವ ಭಕ್ತಿ, ದ್ವೈತಚಿಂತನೆಯಲ್ಲದೇ ಮತ್ತೇನು? ದ್ವೈತಭಾವವಿಲ್ಲದೆ ಭಕ್ತಿ ಸಾಧ್ಯವೇ?&lt;br /&gt;&lt;br /&gt;ಆದರೆ ಹೀಗೆ ಅವರು ದ್ವೈತವನ್ನೋ ಅದ್ವೈತವನ್ನೋ ಪ್ರತಿಪಾದಿಸಿದ್ದಾರೆಂದು ಸಾಧಿಸುವಮೊದಲು ಪಲ್ಲವಿಯಯನ್ನು ಮತ್ತೊಮ್ಮೆ ಗಮನಿಸುವುದು ಸೂಕ್ತ. ಅದರ ಸೂಕ್ಷ್ಮ ಅವಗಾಹನೆ ಮತ್ತೊಂದು ದೃಷ್ಟಿಕೋನವನ್ನು ತೆರೆದಿಡುತ್ತದೆ. "ದ್ವೈತಮು ಸುಖಮಾ, ಅದ್ವೈತಮು ಸುಖಮಾ" - ಗಮನಿಸಬೇಕಾದ ಅಂಶವೆಂದರೆ, "ಸುಖಮಾ" ಎನ್ನುವ ಪ್ರಯೋಗ. ದ್ವೈತವು ಸರಿಯೋ ಅದ್ವೈತವೋ ಎಂಬುದನ್ನು ಸಾಧಿಸುವ ಇರಾದೆ ತ್ಯಾಗರಾಜರಿಗಿದ್ದಲ್ಲಿ, "ದ್ವೈತಮು ತರಮಾ, ಅದ್ವೈತಮು ತರಮಾ" (ಅಥವಾ "ನಿಜಮಾ") ಎಂದು ಬಳಸುತ್ತಿದ್ದರೇನೋ! ಆಗ, ಮುಂದೆ ಬರುವ ಚರಣ ದ್ವೈತವೇ ಸತ್ಯವೆಂಬ ನಿಲುವನ್ನು ಮತ್ತಷ್ಟು ಪುಷ್ಟಿಗೊಳಿಸುತ್ತಿತ್ತು. ಆದರೆ "ಸುಖಮಾ" ಎಂಬ ಬಳಕೆಯಿಂದ, ಸರಿ-ತಪ್ಪಿನ ಪ್ರಶ್ನೆಗಿಂತ, ರಾಮಭಕ್ತಿಗೆ ಯಾವ ಭಾವ ಹೆಚ್ಚು ಸುಖ ಎಂಬ ಚಿಂತನೆಯಷ್ಟೇ ಸ್ಫುಟಗೊಳ್ಳುತ್ತದೆ. ಕೇವಲ ಇದೊಂದು ಪದವನ್ನು ಬಳಸುವ ಮುನ್ನ ತ್ಯಾಗರಾಜರು ಇಷ್ಟೆಲ್ಲ ಯೋಚಿಸಿದ್ದಿರಬೇಕೆಂದು ನಾನು ಹೇಳಹೊರಟಿಲ್ಲ. ಆದರೆ ಭಾವವು ಭಾಷೆಯಲ್ಲಿ ರೂಪುಗೊಳ್ಳುವ ಪರಿಯನ್ನಷ್ಟೇ ವಿವರಿಸಹೊರಟಿದ್ದು. ಕವಿಯೊಬ್ಬ ತನ್ನ ಭಾವಲಹರಿಗೆ ಮಾತಿನ ರೂಪ ಕೊಡುವಾಗ ಭಾವಕ್ಕೆ ತಕ್ಕುದಾದ ಹಲವು ಪದಗಳು ಮೂಡಿ ನಿಲ್ಲುತ್ತವೆ. ಮನದಲ್ಲಿ ಮೂಡಿದ ಭಾವಕ್ಕೆ ಅತ್ಯುಚಿತವಾದ ಪದದ ಆಯ್ಕೆ ಕವಿಯಲ್ಲಿ ತಾನೇ ತಾನಾಗಿ ನಡೆಯುತ್ತದೆ - ಇದೊಂದು ಭಾವದ ವ್ಯಾಪಾರ, ಬುದ್ಧಿಯದಲ್ಲ. ಈ ಸಂದರ್ಭಕ್ಕೆ "ಸುಖಮಾ" ಮತ್ತು "ತರಮಾ" ಎರಡೂ ಪದಗಳು ಒಂದೇ ಭಾವದ ಸೂಚಕ ಖಂಡಿತಾ ಅಲ್ಲ. ಆದ್ದರಿಂದ ಕವಿಗೆ ಇಷ್ಟು ಸಹಜವಾಗಿ "ಸುಖಮಾ" ಎಂಬ ಪದ ಮನದಲ್ಲಿ ಹೊಳೆದಿರಬೇಕಾದರೆ, ಅವರ ಮನದಲ್ಲಿ ದ್ವೈತಾದ್ವೈತಗಳ ಸರಿ-ತಪ್ಪುಗಳ ವಿಮರ್ಶೆಗಿಂತಾ ಆ ನಿಲುವುಗಳ ಭಕ್ತಿಸೌಖ್ಯವೇ ಚಿಂತನೆಯ ವಸ್ತುವಾಗಿದ್ದಿರಬೇಕೆನ್ನುವುದು ಸಹಜ. ಅಂತಿಮವಾಗಿ ದ್ವೈತವು ನಿಜವೋ ಅದ್ವೈತವೋ ಅದು ತ್ಯಾಗರಾಜರಿಗೆ ಮುಖ್ಯವಲ್ಲ. ಬದಲಿಗೆ, ಯಾವ ಮಾರ್ಗದಲ್ಲಿ ಭಕ್ತಿ ಹೆಚ್ಚು ತೀವ್ರ, ನಿಶ್ಕಲ್ಮಶ, ಸುಖ - ಇದು ಅವರ ಪ್ರಶ್ನೆಯೆನಿಸುತ್ತದೆ.&lt;br /&gt;&lt;br /&gt;ಅದ್ವೈತ ಚಿಂತನೆಯ ಪರಿಸರದಲ್ಲಿ ಹುಟ್ಟಿ ಬೆಳೆದ ತ್ಯಾಗರಾಜರಿಗೆ, ಅದ್ವೈತವೇ ಅಂತಿಮ ಸತ್ಯವೆಂಬ ಅರಿವಿದೆ. ಆದರೆ ಭಾವುಕ ಮನಸ್ಸೇಕೋ ಇದನ್ನೊಲ್ಲದು. ನಾನೀನೆಂಬ ಭೇದವಳಿದ ಅದ್ವೈತದ ಅರಿವಿನಲ್ಲಿ ಏನಿದೆ? ಏನೂ ಇಲ್ಲ. ಭಕ್ತನೂ ಇಲ್ಲ, ಭಕ್ತಿಯೂ ಇಲ್ಲ. "ರಾಮಭಕ್ತಿಸಾಮ್ರಾಜ್ಯ"ದಲ್ಲಿ ಓಲಾಡುವ ಕವಿಯ ಮನಸ್ಸಿಗೆ, ಈ ನಿರ್ಗುಣ ನಿರುಪಾಧಿಕ ನಿರ್ವೇದಕವಾದ ಅದ್ವೈತ ಸಿದ್ಧಿ ಹೇಗೆ ತಾನೇ ರುಚಿಸೀತು? ಈ ಪರಮಾತ್ಮ-ಜೀವಾತ್ಮ ಭೇದ ತೋರುವ ಮಾಯಾ ಪ್ರಪಂಚದಲ್ಲಿ ಭಕ್ತಿಯೂ ಮಾಯೆಯೇ ಹೌದು, ಉತ್ಕಟ ಭಕ್ತಿ, ಯಥಾರ್ಥ ಜ್ಞಾನಕ್ಕೆ, ತನ್ಮೂಲಕ ಅದ್ವೈತದ ಸಿದ್ಧಿಗೆ ದಾರಿ - ಇರಬಹುದು. ಆದರೆ ಭಕ್ತಿಯ ರಸವನ್ನೀಂಟಿದ ಮನಸ್ಸಿಗೆ, ಗಮ್ಯಕ್ಕಿಂತಾ ಮಾರ್ಗವೇ ರಮ್ಯ, ಅದೇ ಸುಖ. ಆದ್ದರಿಂದ ಭಕ್ತಿಯು ಮಾಯೆಯೆನ್ನುವುದಾದರೆ ಅದ್ವೈತದ 'ವಾಸ್ತವ'ಕ್ಕಿಂತ ದ್ವೈತಸ್ಥಿತಿಯ 'ಮಾಯೆ'ಯೇ ಸುಖವಲ್ಲವೇ? ಇದು, ನನಗನ್ನಿಸುವ ಮಟ್ಟಿಗೆ ಈ ರಚನೆಯ ಕವಿಸಮಯ.&lt;br /&gt;&lt;br /&gt;ತ್ಯಾಗರಾಜರು ಅದೆಂಥಾ ಮೃದುಮನದ, ಹದನುಡಿಯ ಕವಿಯೆಂದರೆ, ಅವರೆಲ್ಲೂ ಈ ತತ್ತ್ವ-ಸಿದ್ಧಾಂತಗಳ ಒಣಚರ್ಚೆಯ ಗೊಡವೆಗೆ ಹೋಗುವುದೇ ಇಲ್ಲ. ಈ ರೀತಿಯ ತತ್ತ್ವದ ಇಬ್ಬಂದಿಗಳು ಎದುರಾದಾಗೆಲ್ಲಾ ಅವರು ಕಂಡುಕೊಳ್ಳುವುದು ತಾರ್ಕಿಕನ ಪರಿಹಾರವಲ್ಲ, ಕವಿಯ ಪರಿಹಾರವನ್ನು. ಈ ಸಾಲುಗಳನ್ನು ನೋಡಿ:&lt;br /&gt;&lt;br /&gt;ಎವರನಿ ನಿರ್ಣಯಿಂಚಿರಿರಾ ನಿನ್ನೆಟ್ಲಾರಾಧಿಂಚಿರಿರಾ, ನರವರು ಪ&lt;br /&gt;ಶಿವುಡನೋ ಮಾಧವುಡನೋ ಕಮಲ ಭವುಡನೋ ಪರಬ್ರಹ್ಮಮನೋ ನಿ ಅ.ಪ&lt;br /&gt;&lt;br /&gt;ಶಿವಮಂತ್ರಮುನಕು ಮಾಜೀವಮು ಮಾಧವ ಮಂತ್ರಮುನಕು ರಾಜೀವಮು ಈ &lt;br /&gt;ವಿವರಮುದೆಲಿಸಿನ ಘನುಲಕು ಮ್ರೋಕ್ಕೆದ ವಿತರಣಗುಣ ತ್ಯಾಗರಾಜವಿನುತ ನಿ ೧&lt;br /&gt;&lt;br /&gt;(ನಿನ್ನನ್ನು ಯಾರೆಂದು ನಿರ್ಣಯಿಸಿದರು (ಕೊನೆಗೆ)? ಶಿವನೆಂದೋ, ಮಾಧವನೆಂದೋ, ಕಮಲಭವನೆಂದೋ ಅಥವಾ ಪರಬ್ರಹ್ಮವೆಂದೋ?&lt;br /&gt;&lt;br /&gt;"ನಮಶ್ಶಿವಾಯ" ಎಂಬ ಶಿವಮಂತ್ರದ ಜೀವಾಕ್ಷರ "ಮ". ಹಾಗೇ "ನಮೋ ನಾರಾಯಣಾಯ" ಎಂಬ ನಾರಾಯಣಮಂತ್ರದ ಜೀವಾಕ್ಷರ "ರಾ" (ಈ ಅಕ್ಷರಗಳನ್ನು ತೆಗೆದರೆ ಆ ಮಂತ್ರಗಳು ವಿರುದ್ಧಾರ್ಥವನ್ನೇ ಕೊಡುತ್ತವೆ, ಆದ್ದರಿಂದ). ಈ ಎರಡು ಜೀವಾಕ್ಷರಗಳು ಕೂಡಿ ಆದದ್ದೇ "ರಾಮ". ಈ ಮರ್ಮವನ್ನು ತಿಳಿದ ಮಹಾತ್ಮರನ್ನು ವಂದಿಸುತ್ತೇನೆ)&lt;br /&gt;&lt;br /&gt;ತಮ್ಮ ಮನೋರಾಜ್ಯಕ್ಕೆ ಪ್ರಸ್ತುತವಲ್ಲದ ಸೈದ್ಧಾಂತಿಕ ಚರ್ಚೆಗಳಿಂದ ಅದೆಷ್ಟು ಸೊಗಸಾಗಿ ತಮ್ಮನ್ನು ಹೊರಪಡಿಸಿಕೊಳ್ಳುತ್ತಾರೆ, ನೋಡಿ. ಭಕ್ತಿಯೋ, ಭಕ್ತನ ಉದ್ಧಾರವೋ ಅಲ್ಲದ ಬೇರಾವ ವಿಚಾರವೂ ಅವರಿಗೆ ಹೊಲ್ಲ. ತಾನಾಯಿತು, ರಾಮನಾಯಿತು, ರಾಮಭಕ್ತಿಯಾಯಿತು. ಆಗೀಗ ತನಗೆ ಸರಿಕಂಡ ಸರಳ ತತ್ತ್ವವನ್ನು ಜನಕ್ಕೆ ಬೋಧಿಸುವುದುಂಟು, ಅದೂ ಸ್ವಗತದ ಧಾಟಿಯಲ್ಲಿ. ಪುರಂಧರ-ಕನಕರೇ ಮೊದಲಾದವರಲ್ಲಿ ಕಾಣಬರುವ ತತ್ತ್ವಬೋಧನೆಯ ಬಿರುಸೂ ಕಟುವೂ ಕಾಣಬರುವುದಿಲ್ಲ ತ್ಯಾಗರಾಜರಲ್ಲಿ. ಬೋಧಿಸಿದ್ದೆಲ್ಲಾ ಸರಳ, ನೇರ, ಚಿಕ್ಕ-ಚೊಕ್ಕ. ಈ ಸಾಲುಗಳನ್ನು ನೋಡಿ:&lt;br /&gt;&lt;br /&gt;"ತುರಕವೀದಿಲೋ ವಿಪ್ರುನಿಕಿ ಪಾನಕ ಪೂಜ ಚೇಸಿ ಏಮಿ ಚೇಯಕುಂಡಿ ಏಮಿ"&lt;br /&gt;&lt;br /&gt;(ತುರಕಬೀದಿಯಲ್ಲಿ ವಿಪ್ರರಿಗೆ ಪಾನಕಪೂಜೆ ಮಾಡಿ ಏನು ಮಾಡದಿದ್ದರೆ ಏನು?)&lt;br /&gt;&lt;br /&gt;ಮತ್ತೆ ಇದು;&lt;br /&gt;&lt;br /&gt;"ಬಹುಜನ್ಮಂಬುನಿ ವಾಸನಯುತುಲೈ ಅಹಿವಿಷಸಮವಿಷಯಾಕೃಷ್ಟುಲೈ&lt;br /&gt;ಬಹಿರಾನನುಲೈ ತ್ಯಾಗರಾಜು ಭಜಿಯಿಂಚೇ ಶ್ರೀ ರಾಮುನಿ ತೆಲಿಯಕ (ಯಜ್ಞಾದುಲು ಸುಖಮನುವಾರಿಕಿ ಸಮಮಜ್ಞಾನುಲು ಗನ ಲೇ)"&lt;br /&gt;&lt;br /&gt;(ಬಹುಜನ್ಮದ ವಾಸನೆಹೊಂದಿ, ಹಾವಿನ ವಿಷದಂಥ ವಿಷಯಗಳಿಂದ ಆಕರ್ಷಿತರಾಗಿ, ಅಂತ್ರರ್ದೃಷ್ಟಿಯನ್ನು ಕಳೆದುಕೊಂಡು ಶ್ರೀ ರಾಮನನ್ನು ತಿಳಿಯದೇ, ಯಜ್ಞಾದಿಗಳೇ ಸುಖವೆನ್ನುವರಂಥ ಅಜ್ಞಾನಿಗಳು ಇಲ್ಲ)&lt;br /&gt;&lt;br /&gt;ಇನ್ನು ಮಂತ್ರ-ತಂತ್ರ, ಶಾಸ್ತ್ರ-ಸಂಪ್ರದಾಯಗಳ ಗೋಜಲಂತೂ ದೂರವೇ ಉಳಿಯಿತು. ಈ ಗೋಜಿನ ಪ್ರಶ್ನೆಗೆ ತ್ಯಾಗರಾಜರ ಉತ್ತರ "ಮನಸು ಸ್ವಾಧೀನಮೈನ ಘನುನಿಕಿ ಮರಿ ಮಂತ್ರ ತಂತ್ರಮುಲೇಲ" (ಮನಸು ಸ್ವಾಧೀನವಿರುವ ಮಹಾತ್ಮನಿಗೆ ಮತ್ತೆ ಮಂತ್ರತಂತ್ರಗಳೇಕೆ)&lt;br /&gt;&lt;br /&gt;ಆದ್ದರಿಂದ ತ್ಯಾಗರಾಜರ ಕೃತಿಗಳಲ್ಲಿ ಶಾಸ್ತ್ರ-ಸಿದ್ಧಾಂತಗಳ ಪ್ರತಿಪಾದನೆಯನ್ನರಸುವುದಕ್ಕಿಂತ ಅಮೃತಪ್ರಾಯವಾದ "ಸ್ವರರಾಗಸುಧಾರಸಯುತ ಭಕ್ತಿ"ಯ ಸೊಬಗನ್ನು ಆಸ್ವಾದಿಸುವುದೇ ಹೆಚ್ಚು ಸುಖವಲ್ಲವೇ?&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-2284805751500647480?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/2284805751500647480/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=2284805751500647480&amp;isPopup=true' title='11 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/2284805751500647480'/><link rel='self' type='application/atom+xml' href='http://www.blogger.com/feeds/2037979210344114254/posts/default/2284805751500647480'/><link rel='alternate' type='text/html' href='http://nannabaraha.blogspot.com/2009/10/blog-post.html' title='ದ್ವೈತಮು ಸುಖಮಾ...'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>11</thr:total></entry><entry><id>tag:blogger.com,1999:blog-2037979210344114254.post-965160082322410621</id><published>2009-08-29T11:07:00.020+05:30</published><updated>2011-10-15T19:03:17.504+05:30</updated><category scheme='http://www.blogger.com/atom/ns#' term='೦೮. ಭಾಷೆ'/><title type='text'>ಕನ್ನಡ ಕಾವ್ಯ ನಡೆದು ಬಂದ ದಾರಿ - ಒಂದು ಹಿನ್ನೋಟ</title><content type='html'>&lt;div align="justify"&gt;ಇದನ್ನು ಈಗ ಬರೆಯುವ ವಿಶೇಷ ಸಂದರ್ಭವೇನು ಇರಲಿಲ್ಲ. ಹೀಗೇ ಸ್ನೇಹಿತರ ವಲಯದಲ್ಲಿ ಪದ್ಯ-ಗದ್ಯ, ನವ್ಯ-ನವೋದಯ ಕಾವ್ಯಮಾರ್ಗಗಳ ಬಗ್ಗೆ ಚರ್ಚೆ ಎದ್ದುದರಿಂದ ಅದರ ಬಗ್ಗೆ ಒಂದೆರಡು ವಿಷಯ ಬರೆಯಹೊರಟೆ. ಆದರೆ ಅದು ಒಂದು ಸಂಪೂರ್ಣ ಲೇಖವವೇ ಆಗಬಹುದೆನಿಸಿತು. ಅದೇ ಇದು.&lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;ಸಾಹಿತ್ಯ, ಜೀವನದ ಪ್ರತಿಫಲನ ಎನ್ನುತ್ತಾರೆ. ಜೀವನ ಎಂದೂ ನಿಲ್ಲದೇ ನಿರಂತರವಾಗಿ ಹರಿಯುವ ನದಿ ಎನ್ನಬಹುದಾದರೆ, ಸಾಹಿತ್ಯ ಕೂಡ ಹಾಗೆಯೇ. ನದಿ, ನಮಗೆ ಯಾವುದೋ ಕಾಲಘಟ್ಟದಲ್ಲಿ ಕಾಣುವಂತೆ ಬರೀ ಹರಿಯುವ ನೀರಲ್ಲ; ಕಾಲಾಂತರದಲ್ಲಿ ನದಿಯೇ ಬದಲಾಗುತ್ತದೆ, ಅದರ ಪಾತ್ರ ಬದಲಾಗಬಹುದು, ಕೆಲವೆಡೆ ಆಳ ಹೆಚ್ಚಬಹುದು, ಮತ್ತೆ ಕೆಲವೆಡೆ ತಗ್ಗಬಹುದು, ನದಿಯೇ ಮಾಯವಾಗಬಹುದು. ಸಾಹಿತ್ಯ ಕೂಡ ಇದರಂತೆಯೇ ನಿರಂತರ ಚಲನಶೀಲ. ಕಾಲಾಂತರದಲ್ಲಿ ಅದರ ನಿಲುವು, ಒಲವು, ಭಾವ-ಭಂಗಿ ನಮೂನೆಗಳೇ ಬದಲಾಗಬಹುದು. ಜೀವನದಂತೆಯೇ ಇಲ್ಲೂ ನಿರಂತರ ಕೊಡುಕೊಳ್ಳುವಿಕೆ ನಡೆದೇ ಇರುತ್ತದೆ. ಸಮಾಜವು ಸಾಹಿತ್ಯವನ್ನೂ, ಸಾಹಿತ್ಯವು ಸಮಾಜವನ್ನೂ ಪ್ರಭಾವಿಸುತ್ತವೆ; ಹಾಗೆಯೇ ಭಾಷೆ ಇನ್ನೊಂದು ಭಾಷೆಯನ್ನು &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;ವೈಯಕ್ತಿಕವಾದ ಅಭಿವ್ಯಕ್ತಿ ಕಾಲಕ್ರಮದಲ್ಲಿ ಸ್ಪಷ್ಟ ರೂಪು-ರೇಷೆ-ಲಕ್ಷಣ-ಶೈಲಿಗಳನ್ನು ರೂಪಿಸಿಕೊಳ್ಳುತ್ತಿದ್ದಂತೆ ಅದಕ್ಕೊಂದು ಸಾರ್ವತ್ರಿಕ ನಮೂನೆ (standard format) ದೊರಕಿತೆನ್ನಿಸುತ್ತದೆ. ಹೀಗೆ ರೂಪಗೊಂಡಿದ್ದು ಛಂದಸ್ಸು, ಅಲಂಕಾರ ಇತ್ಯಾದಿ. ಕಾಲಕ್ರಮದಲ್ಲಿ ಇದು ಸರ್ವಸಮ್ಮತವಾಗಿ, ಕಾವ್ಯ "ಹೀಗೇ" ಇರಬೇಕೆಂದು ಶಾಸ್ತ್ರದ ರೂಪ ಪಡೆದಿರಬೇಕು. ಮುಂದೆ ಒಂದು ಭಾಷೆಯಲ್ಲಿ ಬಳಕೆಯಲ್ಲಿದ್ದ ಛಂದಸ್ಸು, ವೃತ್ತ ಇತ್ಯಾದಿ ಸಾಹಿತ್ಯ ಪರಿಕರಗಳು (literary components) ಮತ್ತೊಂದು ಭಾಷೆಯಲ್ಲೂ ಬಳಕೆಗೆ ಬಂದುವು. ಆದಿಕಾಲದ ಕನ್ನಡ ಸಾಹಿತ್ಯ ಕೂಡ ಹೀಗೆಯೇ ತನ್ನ ಶೈಲಿ-ನಮೂನೆ-ಭಾಷೆಗಳನ್ನು ಸಂಸ್ಕೃತದಿಂದ ಭಾರಿ ಪ್ರಮಾಣದಲ್ಲಿ ಎರವಲು ಪಡೆದದ್ದನ್ನು ಕಾಣುತ್ತೇವೆ.&lt;br /&gt;&lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;ಅದೇನೇ ಇರಲಿ, ಸಾಹಿತ್ಯ ರಚನೆ ಜನಸಾಮಾನ್ಯರ ಮಟ್ಟದಿಂದ ಬಹು ಮೇಲೇರಿ, ಅದೊಂದು ಕಲೆ-ಶಾಸ್ತ್ರದ ಸ್ಥಾನ ಪಡೆದಿದ್ದಂತೂ ನಿಜ. ಕಲೆ ಎಂದಮೇಲೆ ಅದಕ್ಕೊಂದು ಪ್ರತಿಭೆಯೂ, ಶಾಸ್ತ್ರವೆಂದಮೇಲೆ ಅದಕ್ಕೊಂದು ನಿಶ್ಚಿತ ವಿಧಿ-ವಿಧಾನಗಳೂ "ಮಾಡು-ಬೇಡ"ಗಳೂ (do's and dont's) ಇರಬೇಕಲ್ಲವೇ? ಕಾವ್ಯದಲ್ಲಿ ಎಳ್ಳಷ್ಟು "ದೋಷ" ಸುಳಿದರೂ ಕಣ್ಣಿನಲ್ಲಿ ಬಿದ್ದ ಕಸ ಇಡೀ ಕಣ್ಣನ್ನೇ ಮುಚ್ಚುವಂತೆ ಅದು ಇಡಿಯ ಕಾವ್ಯವನ್ನೇ ಕೆಡಿಸುತ್ತದೆ ಎನ್ನುವ ಕಾಲವೊಂದಿತ್ತು. &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;ಅವಗುಣಮಿನಿತಾದೊಡಮಾ ಕವಿತಾಬಂಧಮನಶೇಷಮಂ ದೂಷಿಸುಗುಂ&lt;br /&gt;ಸವಿಳಾಸ ಲೋಲಲೋಚನ ವಿವರಮನೆಡೆವೆತ್ತ ಕಸದ ವೋಲನವರತಂ (ಕವಿರಾಜಮಾರ್ಗ) &lt;/span&gt;&lt;/em&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;&lt;br /&gt;&lt;/span&gt;&lt;/em&gt;&lt;/div&gt;&lt;div align="justify"&gt;&lt;/div&gt;&lt;div align="justify"&gt;ಆದ್ದರಿಂದ ಕಾವ್ಯದೋಷಗಳನ್ನು ನಿವಾರಿಸಲೆಂದೇ ಕಾವ್ಯದ ಗುಣ-ಲಕ್ಷಣ-ದೋಷಗಳನ್ನು ತಿಳಿಸುವ ಗ್ರಂಥಗಳು ಬಂದುವು. ಕವಿರಾಜ ಮಾರ್ಗ (ಕ್ರಿ.ಶ.೯ನೆಯ ಶತಮಾನ) ಅಂತಹ ಒಂದು ಗ್ರಂಥ. ಕನ್ನಡದಲ್ಲಿ ನಮಗೆ ಸಿಗುವ ಮೊದಲ "ಕಾವ್ಯ-ಲಕ್ಷಣ" ಗ್ರಂಥ ಇದು. ಆದರೂ ಕಾವ್ಯದ ಗುಣ ಲಕ್ಷಣಗಳನ್ನು ತಿಳಿಸುವ ಗ್ರಂಥ ಇದಾದ್ದರಿಂದ ಕನ್ನಡದಲ್ಲಿ ಕಾವ್ಯ ಇನ್ನೂ ತುಂಬಾ ಹಿಂದಿನಿಂದಲೇ ಇದ್ದಿರಬೇಕೆಂಬುದು ಸುಲಭವಾದ ತರ್ಕ, ಇರಲಿ. ನಾನು ಹೇಳಹೊರಟಿದ್ದು, ಸುಮಾರು ೮-೯ನೆಯ ಶತಮಾನದಿಂದ ೧೨ನೆಯ ಶತಮಾನದ ವರೆಗಿನ ಹಳೆಗನ್ನಡ ಕಾವ್ಯಕ್ಕೆ ಅದರದೇ ಬಂಧ-ಛಂದಗಳು, ನಿಲುವು-ನಡೆಗಳು, ಭಾಷೆ-ಭಾವ-ರಸಗಳ ಕಟ್ಟುಪಾಡು - ಸಾಕಷ್ಟು ಕಠಿಣವಾಗೇ ಇತ್ತು. ಈ ಎಲ್ಲ ಕಡುಕಟ್ಟುಗಳ ನಡುವೆಯೇ ಕವಿಯ ಪ್ರತಿಭೆ ವಿಜೃಂಬಿಸಬೇಕಿತ್ತು, ವಿಜೃಂಭಿಸಿತು ಕೂಡ. ನಡೆ ತಪ್ಪಿದರೆ ಹೀನಾಯ-ಅವಮಾನ ಕಟ್ಟಿಟ್ಟ ಬುತ್ತಿ. ಕಾವ್ಯಕ್ಕಿಂತಾ ಪಾಂಡಿತ್ಯದ ದರ್ಪವೇ ಹೆಚ್ಚಿದ್ದ ಕಾಲ. ಹೀಗಾಗಿ, ಇದು ಕವಿಯೊಬ್ಬನ 'ಅಹಂ'ನ ಪ್ರಶ್ನೆಯಾಗಿದ್ದರಿಂದ "ದೋಷಾರೋಪಣೆ" ಮಾಡುವಮೊದಲು ವಿಮರ್ಶಕನೂ ಅದೆಷ್ಟು ಎಚ್ಚರ ವಹಿಸಿದ್ದರೂ ಸಾಲದು. "ಫಣಿಪತಿಯ ಫಣಾರತ್ನಮುಮಂ ರನ್ನನ ಕೃತಿರತ್ನಮುಮಂ ಪೇಳ್ ಪರೀಕ್ಷಿಪಂಗೆಂಟೆರ್ದೆಯೇ" (ಹಾವಿನ ಹೆಡೆಯ ರತ್ನವನ್ನೂ ರನ್ನನ ಕೃತಿರತ್ನವನ್ನೂ ಪರೀಕ್ಷಿಸಬೇಕೆನ್ನುವನಿಗೆ ಎಂಟೆದೆಯಿರಬೇಕು) ಎನ್ನುತ್ತಾನೆ ರನ್ನ. ಹೀಗಾಗಿ ಅದು ಕವಿ-ಕವಿಗಳ, ಕವಿ-ವಿಮರ್ಶಕರ, ವಿಮರ್ಶಕ-ವಿಮರ್ಶಕರ ದರ್ಪದ ಗದಾಯುದ್ಧವೇ ಆಗಿತ್ತು. ಕಾವ್ಯಕನ್ನಿಕೆ ಸಂಸ್ಕೃತ ಭೂಯಿಷ್ಟವಾದ ಕಂದ-ವೃತ್ತ-ಚಂಪೂ ಛಂದಸ್ಸಿನ ಗುರು-ಲಘು-ಮಾತ್ರೆ-ಗಣ-ಯತಿಗಳ ಆಭರಣ-ಅಲಂಕಾರಗಳಲ್ಲಿ ಬಂದಿ. ಈ ವಜ್ರದ ಮೇಲ್ಮುಸುಕನ್ನು ಮೆಲ್ಲನೆ ಸರಿಸಿ ನೋಡಿದಾಗಷ್ಟೇ ಅವಳ ಕಣ್ಣ ಮಿಂಚು ಹೊಳೆಯಬೇಕು (ಅದಿದ್ದರೆ). ಹೀಗೆ ಈ ಅಲಂಕಾರಗಳ ವೈಭವವನ್ನೂ ಮೀರಿ ವಿಜೃಂಭಿಸಬೇಕಾದರೆ ಕಾವ್ಯಕ್ಕೆ ನಿಜವಾದ ಸತ್ವವಿರಬೇಕಿತ್ತು. ಹಳೆಗನ್ನಡದ ಪಂಪ, ರನ್ನನೇ ಮುಂತಾದ ಕವಿಪರಂಪರೆ, ಈ ಜರಡಿಯಲ್ಲಿ ಉಳಿದ ಗಟ್ಟಿ ಕಾಳುಗಳು. ಉಳಿದಂತೆ ಕೇವಲ ಛಂದಸ್ಸು-ಪದ-ಅಲಂಕಾರಗಳ ಹಿಂದೆ ಬಿದ್ದು ಕಾವ್ಯಕ್ಕೆ ಎರವಾಗಿ ಕಳೆದುಹೋದ ಪುಡಿ ಕವಿಗಳೆಷ್ಟೋ! &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;ಬದಲಾವಣೆಗೊಳಗಾಗುವುದೇ ಜೀವಂತವಾದ, ಜೀವನಕ್ಕೆ ಸಂಬಂಧಿಸಿದ ಎಲ್ಲದರ ಲಕ್ಷಣ. ಕಾವ್ಯ ಇದಕ್ಕೆ ಹೊರತಲ್ಲ. ಕಾವ್ಯಕ್ಕೆ ಬಿಗಿದ ಸಂಕಲೆಗಳು ಉಸಿರುಗಟ್ಟಿಸತೊಡಗಿ ಕಾವ್ಯ ನಿಂತ ನೀರಾಗತೊಡಗಿದಂತೆ ಈ ಕಟ್ಟುಗಳನ್ನು ತುಸು ಸಡಿಲಿಸಿ, ಕಾವ್ಯಕನ್ನಿಕೆ ಸ್ವಲ್ಪ ಸರಾಗವಾಗಿ ಉಸಿರಾಡಿಸುವ ಅಗತ್ಯ ಕಂಡುಬಂತು. ಭಾಷೆ, ಛಂದಸ್ಸುಗಳೆಲ್ಲವನ್ನೂ ಸಂಸ್ಕೃತದಿಂದ ಸಾರಾಸಗಟಾಗಿ ಎರವಲು ತರುವ ಅಗತ್ಯವಾದರೂ ಏನು? ಉದಾಹರಣೆಗೆ ಯತಿನಿಯಮ. ಪ್ರತಿಯೊಂದು ಪದದಲ್ಲೂ ಯಾವುದೋ ಒಂದು ಅಕ್ಷರದ ಮೇಲೆ ಒತ್ತು ಬೀಳುವ ಮೂಲಕ ಅದರ ಅರ್ಥ ಸ್ಫುಟಗೊಳ್ಳುತ್ತದೆ. ಹೀಗೆ ನಾವು ಮಾತಾಡುವಾಗ ಪ್ರತಿಯೊಂದು ಪದದ ಅರ್ಥಕ್ಕನುಗುಣವಾಗಿ ಕೆಲವು ಅಕ್ಷರದಲ್ಲಿ ನಿಲ್ಲಿಸಿ/ಒತ್ತು ಹಾಕಿ ನುಡಿಯುತ್ತೇವೆ. ಇದು ಯತಿ ನಿಯಮ. ಆದರೆ ಪದ್ಯವೊಂದರ ಛಂದಸ್ಸಿಗೆ ಅದರದೇ ಅಕ್ಷರ ಗಣದ ನಿಯಮವೂ ಇರುತ್ತದೆ (ಅದು ಅರ್ಥವನ್ನನುಸರಿಸಬೇಕೆಂದೇನೂ ಇಲ್ಲ). ಹೀಗಾದಾಗ, ಛಂದೋನಿಯಮಕ್ಕೆ ಕಟ್ಟುಬಿದ್ದು ಪದಗಳನ್ನು ಅರ್ಥಹೀನವಾಗಿ ಒಡೆಯುವ ಸಾಧ್ಯತೆಗಳಿವೆ. ಹೀಗಾಗಬಾರದೆಂದೇ ಛಂದೋಬದ್ಧ ರಚನೆಯಲ್ಲೂ ಯತಿನಿಯಮವನ್ನು ಪಾಲಿಸಬೇಕೆಂಬುದು ಸಂಸ್ಕೃತ ಪದ್ಯ ರಚನೆಯ ನಿಯಮಗಳಲ್ಲೊಂದು. ಉದಾಹರಣೆಗೆ ಈ ಶ್ಲೋಕ ನೋಡಿ:&lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;&lt;span style="font-size:85%;"&gt;ಜ&lt;strong&gt;ಟಾ&lt;/strong&gt;ಟವೀ ಗ&lt;strong&gt;ಳ&lt;/strong&gt;ಜ್ವಲ ಪ್ರ&lt;strong&gt;ವಾ&lt;/strong&gt;ಹಪಾಲಿ&lt;strong&gt;ತ&lt;/strong&gt;ಸ್ಥಲೇ ಗ&lt;strong&gt;ಳೇ&lt;/strong&gt;sವಲಂಬ್ಯ &lt;strong&gt;ಲಂ&lt;/strong&gt;ಬಿತಾಂ ಭು&lt;strong&gt;ಜಂ&lt;/strong&gt;ಗ ತುಂಗ &lt;strong&gt;ಮಾ&lt;/strong&gt;ಲಿಕಾಂ&lt;/span&gt;&lt;br /&gt;&lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;ದಪ್ಪಕ್ಷರದಲ್ಲಿರುವ ಅಕ್ಷರಗಳು ಲಯಕ್ಕೂ ಅರ್ಥಕ್ಕೂ ಅನುಗುಣವಾಗೇ ಒತ್ತನ್ನು ಪಡೆಯುತ್ತವೆ. ಸಂಸ್ಕೃತದಲ್ಲಿ ಇದನ್ನು ಸುಲಭವಾಗಿ ಸಾಧಿಸಬಹುದು, ಏಕೆಂದರೆ ಸಂಸ್ಕೃತದ ಪದಗಳ ಜಾಯಮಾನವೇ ಅದು. ಆದರೆ ಕನ್ನಡದಲ್ಲಿ ಅದು ಕಷ್ಟ. ಉದಾಹರಣೆಗೆ ಪಂಪನ ಈ ಸಾಲುಗಳನ್ನು ನೋಡಿ.&lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;&lt;span style="font-size:85%;"&gt;&lt;strong&gt;ಚಾ&lt;/strong&gt;ಗದ&lt;strong&gt;ಭೋ&lt;/strong&gt;ಗದ&lt;strong&gt;ಕ್ಕ&lt;/strong&gt;ರದ&lt;strong&gt;ಗೇ&lt;/strong&gt;ಯದ&lt;strong&gt;ಗೊ&lt;/strong&gt;ಟ್ಟಿಯ&lt;strong&gt;ಲಂ&lt;/strong&gt;ಪಿನಿಂ&lt;strong&gt;ಪು&lt;/strong&gt;ಗ&lt;br /&gt;&lt;/span&gt;&lt;strong&gt;&lt;br /&gt;&lt;/strong&gt;&lt;/div&gt;&lt;div align="justify"&gt;&lt;strong&gt;&lt;span style="font-size:85%;"&gt;ಳ್ಗಾ&lt;/span&gt;&lt;/strong&gt;&lt;span style="font-size:85%;"&gt;ಗರ&lt;strong&gt;ಮಾ&lt;/strong&gt;ದಮಾ&lt;strong&gt;ನಿ&lt;/strong&gt;ಸರೆ &lt;strong&gt;ಮಾ&lt;/strong&gt;ನಿಸ&lt;strong&gt;ರಂ&lt;/strong&gt;ತವ&lt;strong&gt;ರಾ&lt;/strong&gt;ಗಿ ಪು&lt;strong&gt;ಟ್ಟ&lt;/strong&gt;ದೇ&lt;br /&gt;&lt;/span&gt;&lt;strong&gt;&lt;/strong&gt;&lt;/div&gt;&lt;strong&gt;&lt;br /&gt;&lt;/strong&gt;&lt;div align="justify"&gt;&lt;strong&gt;&lt;span style="font-size:85%;"&gt;ನಾ&lt;/span&gt;&lt;/strong&gt;&lt;span style="font-size:85%;"&gt;ಗಿಯು&lt;strong&gt;ಮೇ&lt;/strong&gt;ನೊತೀ&lt;strong&gt;ರ್ದ&lt;/strong&gt;ಪುದೆ &lt;strong&gt;ತೀ&lt;/strong&gt;ರದೊ&lt;strong&gt;ಡಂ&lt;/strong&gt; ಮರಿ&lt;strong&gt;ದುಂ&lt;/strong&gt;ಬಿಯಾ&lt;strong&gt;ಗಿ&lt;/strong&gt; ಮೇಣ್&lt;br /&gt;&lt;/span&gt;&lt;strong&gt;&lt;br /&gt;&lt;/strong&gt;&lt;/div&gt;&lt;div align="justify"&gt;&lt;strong&gt;&lt;span style="font-size:85%;"&gt;ಕೋ&lt;/span&gt;&lt;/strong&gt;&lt;span style="font-size:85%;"&gt;ಗಿಲೆ&lt;strong&gt;ಯಾ&lt;/strong&gt;ಗಿಪು&lt;strong&gt;ಟ್ಟು&lt;/strong&gt;ವುದು &lt;strong&gt;ನಂ&lt;/strong&gt;ದನ&lt;strong&gt;ದೊ&lt;/strong&gt;ಳ್ ಬನ&lt;strong&gt;ವಾ&lt;/strong&gt;ಸಿ ದೇ&lt;strong&gt;ಶ&lt;/strong&gt;ದೊಳ್&lt;/span&gt;&lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;ಇಲ್ಲಿ ಮೂರಕ್ಷರದ ಅಕ್ಷರಗಣದಿಂದ ಲಯ ಬರುತ್ತದೆ ಆದರೆ ಲಯಬದ್ಧವಾಗಿ ಉಚ್ಛರಿಸಿದಾಗ ಅದರ ಅರ್ಥವುಳಿಯುವುದಿಲ್ಲ. ಮತ್ತೆ ಅರ್ಥಕ್ಕನುಗುಣವಾಗಿ ಪಠಿಸಿದರೆ ಲಯದ ಅನುಭವವಾಗುವುದಿಲ್ಲ. ಕನ್ನಡದಲ್ಲೂ ಯತಿನಿಯಮಗಳನ್ನು ಅನುಸರಿಸಿರುವ ರಚನೆಗಳಿಲ್ಲ ಎಂದಲ್ಲ, ಉದಾಹರಣೆಗೆ, ಸೋಮೇಶ್ವರ ಶತಕದ ಈ ಸಾಲುಗಳನ್ನು ನೋಡಿ:&lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;&lt;span style="font-size:85%;"&gt;ಪ್ರಜೆಯಂ ಪಾಲಿಸ ಬಲ್ಲೊಡಾತನರಸಂ ಕಯ್ಯಾಶೆಯಂ ಮಾಡದಂ&lt;br /&gt;&lt;/span&gt;&lt;/div&gt;&lt;div align="justify"&gt;&lt;span style="font-size:85%;"&gt;ನಿಜಮಂತ್ರೀಶ್ವರ ತಂದೆತಾಯ ಸಲಹಲ್ ಬಲ್ಲಾತನೇ ಧಾರ್ಮಿಕಂ&lt;/span&gt; &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;ಆದರೆ ಅದು ಅಪವಾದ ಅಷ್ಟೇ. ಕವಿರಾಜಮಾರ್ಗಕಾರನೇನೋ ಯತಿವಿಲಂಘನೆಯು ಕನ್ನಡದ ವಿಶೇಷ ಲಕ್ಷಣವೆಂದು ಕರೆದು ಈ ಅಪವಾದವನ್ನು ಸೂತ್ರಬದ್ಧಗೊಳಿಸಿಯೂ ಬಿಟ್ಟ. ಆದರೆ ಒಟ್ಟಂದದಲ್ಲಿ ಈ ನಿಯಮಗಳೆಲ್ಲಾ ಸಂಸ್ಕೃತದ ಜಾಯಮಾನಕ್ಕೆ ಒಗ್ಗೀತೇ ಹೊರತು ಕನ್ನಡದ ಜಾಯಮಾನಕ್ಕಲ್ಲ. ಹಾಗಿದ್ದಮೇಲೆ ಕನ್ನಡಕ್ಕೆ ಒಗ್ಗದ್ದನ್ನೂ ಸಂಸ್ಕೃತದಿಂದ ಎರವಲು ತಂದು ಅದರ ಕಟ್ಟುಪಾಡಿನಲ್ಲಿ ಕಾವ್ಯವನ್ನು ಸಿಲುಕಿಸಬೇಕೇಕೆ? ಕ್ಲಿಷ್ಟವಾದ ಅಕ್ಷರ ಗಣಗಳು, ವೃತ್ತದ ಸುತ್ತುಗಳು ಇಲ್ಲದೆ ಕಾವ್ಯಸೃಷ್ಟಿ ಸಾಧ್ಯವೇ ಇಲ್ಲವೇ? ಮುಂದಿನ ಸುಮಾರು ಮುನ್ನೂರು-ನಾನೂರು ವರ್ಷ (೧೨ರಿಂದ ೧೬ನೆಯ ಶತಮಾನ) ಕಾವ್ಯಮಾರ್ಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆದುವು. ಸರಳ ಸುಂದರವಾದ ಷಟ್ಪದಿ-ರಗಳೆಗಳು ಜನಪ್ರಿಯವಾದದ್ದು ಹೀಗೆ. ಸರಳ ನಡೆ, ತಿಳಿಯಾದ ಭಾಷೆ, ಆದರೆ ಪ್ರಖರವಾದ ಕಾವ್ಯಗುಣ ಹೊಸ ಕಾವ್ಯಮಾರ್ಗದ ವಿಶೇಷವಾಯಿತು. ನಡುಗನ್ನಡ ಕಾವ್ಯದ ಕುಮಾರವ್ಯಾಸ-ಹರಿಹರ-ರಾಘವಾಂಕ; ಜಾನಪದ ಸೊಗಡಿನ ಸಾಂಗತ್ಯಗಳ ರತ್ನಾಕರವರ್ಣಿ; ತ್ರಿಪದಿಗಳ ಸರ್ವಜ್ಞ ಯಾರಿಗೆ ಗೊತ್ತಿಲ್ಲ. ಗದುಗಿನ ಭಾರತ, ತ್ರಿಪದಿ, ಸಾಂಗತ್ಯಗಳು, ದಾಸರ ಪದಗಳು ಜನಸಾಮಾನ್ಯರ ಮನೆ ಮನಗಳಲ್ಲಿ ನಲಿದುವು. ಆದರೂ ಈ ಬದಲಾವಣೆ ಸುಲಭದ್ದೇನಾಗಿರಲಿಲ್ಲ. ಹಳೆಗನ್ನಡದಿಂದ ಬಂದ ಕಾವ್ಯದ ಸತ್ವವನ್ನು ಕಳೆದುಕೊಳ್ಳದೇ, ಅನಗತ್ಯವೆನಿಸಿದ ನಿಯಮಗಳನ್ನು ಮುರಿದು (ಅಥವ ಕೈಬಿಟ್ಟು), ಹೊಸ ನಿಯಮವನ್ನು ಅನುಸರಿಸಿ, ಹೊಸ ನಮೂನೆ-ವಸ್ತುಗಳನ್ನು ಬಳಸಿ ಕಾವ್ಯ ಬರೆಯುವುದು, ಅದರಲ್ಲೂ ಅದು "ಪಂಡಿತ" ಜನರಲ್ಲಿ ಒಪ್ಪಿತಗೊಳ್ಳುವುದು ಒಂದು ಸವಾಲಾಗೇ ಇತ್ತು. ಲಕ್ಷ್ಮೀಶನ ಈ ಸಾಲುಗಳನ್ನು ನೋಡಿ: &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;&lt;/span&gt;&lt;/em&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;ಕೆನೆವಾಲ ಕಡೆದು ನವನೀತಮಂ ತೆಗೆದು ಬಾ&lt;br /&gt;ಯ್ಗಿನಿದಾಗಿ ಸವೆಯದದರೊಳಗೆ ಪುಳಿವಿಡಿದು ರಸ&lt;br /&gt;ವನೆಗೆಡಿಸಿದೊಡೆ ಕರೆದ ಸುರಭಿಗಪ್ಪುದೆ ಕೊರತೆ ಕಾವ್ಯಮಂ ಕೇಳ್ದು ಮಥಿಸಿ&lt;br /&gt;&lt;/span&gt;&lt;/em&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;ಜನಿಸಿದ ಪದಾರ್ಥಮಂ ತಿಳಿದು ನೋಡದೆ ವಿನೂ&lt;br /&gt;ತನ ಕವಿತೆಯೆಂದು ಕುಂದಿಟ್ಟು ಜರಿದೊಡೆ ಪೇಳ್ದ&lt;br /&gt;ವನೊಳಾವದೂಣೆಯಂ ಜಾಣರಿದನರಿದು ಮತ್ಸರವ ಮರೆದಾಲಿಸುವುದು &lt;/span&gt;&lt;/em&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;&lt;br /&gt;&lt;/span&gt;&lt;/em&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;(ಕೆನೆ ಹಾಲನ್ನು ಕಡೆದು ಬೆಣ್ಣೆ ತೆಗೆದರೆ ಅದನ್ನು ಸವಿಯುವುದು ಬಿಟ್ಟು, ಇದು ಹುಳಿಹಿಡಿದ ಹಾಲು, ಆದ್ದರಿಂದ ಚೆನ್ನಲ್ಲ ಎಂದರೆ ಕರೆದ ಹಸುವಿಗೆ ಅದರಿಂದ ಕುಂದೇನು? ಹಾಗೆಯೇ ಕಾವ್ಯವನ್ನು ಕೇಳಿ, ಅದನ್ನು "ಕಡೆದು" ಅದರ ಬೆಣ್ಣೆಯನ್ನು ಸವಿಯದೆ, ಇದು ಹೊಸ ಕವಿತೆ, ಸಾಂಪ್ರದಾಯ ಬಾಹಿರ (ಆದ್ದರಿಂದ ಚೆನ್ನಾಗಿಲ್ಲ) ಎಂದು ಜರಿದರೆ, ಅದರಲ್ಲಿ ಕವಿಯ ತಪ್ಪೇನು? ಆದ್ದರಿಂದ ಜಾಣರಾದವರು ಇದನ್ನು ಅರಿತು, ಮತ್ಸರವನ್ನು ಮರೆತು ಆಲಿಸಿ - ಜೈಮಿನಿ ಭಾರತ) &lt;/span&gt;&lt;/em&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;&lt;br /&gt;&lt;/span&gt;&lt;/em&gt;&lt;/div&gt;&lt;div align="justify"&gt;&lt;/div&gt;&lt;div align="justify"&gt;ನಿಯಮಗಳಲ್ಲಿ ಸಡಿಲಿಕೆ ಬಂದರೂ, ಹೊಸ ನಿಯಮಗಳು ಬಂದರೂ ನಿಯಮಗಳೇ ಇಲ್ಲವಾಗಲಿಲ್ಲ. ಆದರೂ ಇದೇ ಕಾಲಘಟ್ಟದಲ್ಲಿ ಬಂದ ವಚನಸಾಹಿತ್ಯ ಮಾತ್ರ ಸಾಲುಗಳ ಉದ್ದ, ಗಾತ್ರಗಳ ಯಾವ ನಿಯಮವನ್ನೂ ಪಾಲಿಸದೇ, ಅದರ "ಆಳ"ದ ಬಗೆಗೆ ಮಾತ್ರ ಗಮನ ನೀಡಿತು. ಬಸವಣ್ಣನವರ ಮಾತಿನಲ್ಲಿ ಹೇಳುವುದಾದರೆ, "ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು, ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು". ಅದೇ ಅಲ್ಲವೇ ಕಾವ್ಯ? ನುಡಿ ಹಾಗಿದ್ದಮೇಲೆ, ಅದು ಎಷ್ಟು ಉದ್ದ, ಯಾವ ನಡೆಯಲ್ಲಿದ್ದರೆ ಏನು? ಹಾಗೆ ನೋಡಿದರೆ ಇತ್ತೀಚಿನ ದಶಕಗಳಲ್ಲಿ ನಾವು ನವ್ಯದಲ್ಲಿ ಏನು ಪ್ರಯೋಗ ಮಾಡಿದೆವೋ ಅದು ವಚನಗಳಲ್ಲಿ ಆಗಲೇ ನಡೆದಿತ್ತು (atleast, with respect to physical format). ೧೨ನೆಯ ಶತಮಾನದಲ್ಲಿ ನಡೆದ ಈ ಸಾಹಿತ್ಯಕ ಕ್ರಾಂತಿ, ಅವರು ನಡೆಸಿದ ಸಾಮಾಜಿಕ ಕ್ರಾಂತಿಯ ಸಂಕೇತವೂ ಆಗಿತ್ತು. ಆದರೂ ನಡುಗನ್ನಡದ ಸರಳ ನಿಯಮ, ಸರಸ ಕಾವ್ಯಗಳ ಯುಗದಲ್ಲಿ ವಚನಸಾಹಿತ್ಯದ ನಿಯಮರಾಹಿತ್ಯದ ಈ ಕ್ರಾಂತಿ ಒಂದು exception ಆಗಿ ಉಳಿತಷ್ಟೇ ಹೊರತು, ಸಾಹಿತ್ಯದ ಶೈಲಿಯಲ್ಲಿ ಅದು ಮುಂದೆ ಪರಂಪರೆಯಾಗಿ ಬೆಳೆಯಲಿಲ್ಲ. ತದನಂತರದ ನಿಜಗುಣಶಿವಯೋಗಿಗಳಂಥವರೂ ಸಹ (ಕ್ರಿ.ಶ.೧೬೦೦) ಸ್ವರ ವಚನಗಳೆಂಬ ನಿಬದ್ಧ ಪ್ರಕಾರನ್ನೇ ಬಳಸಿಕೊಂಡರು &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;ಮತ್ತೆ ಕೆಲವು ಕಾಲ ಸರಿದಂತೆ ಸಾಹಿತ್ಯ ಮತ್ತೆ ನಿಂತ ನೀರು. ಇದುವರೆಗೂ "ದೇಸೀ" ಆಗಿದ್ದ ಬದುಕು-ಭಾಷೆ-ಸಾಹಿತ್ಯ, ಬ್ರಿಟಿಷರ ಆಳ್ವಿಕೆಯಲ್ಲಿ ಫಕ್ಕನೆ ಪಾಶ್ಚಾತ್ಯ ಪ್ರಭಾವಕ್ಕೊಳಗಾಯಿತು. ೧೯ನೆಯ ಶತಮಾನದ ಕೊನೆಗೆ ಪಡುವಣ ದಿಕ್ಕಿನಿಂದ ಬೀಸಿದ ಈ ಹೊಸ ಗಾಳಿ ನಮ್ಮ ನಡೆ-ನುಡಿ-ನೋಟಗಳಲ್ಲಿ ಹೊಸ ಬದಲಾವಣೆಯನ್ನೇ ತಂದಿತು. ಕಾಲದಿಂದ ಜುಂಗು ಹಿಡಿದು ನಿಂತಿದ್ದ ಶತಮಾನದ ಸಾಹಿತ್ಯಕ್ಕೀಗ "ನವೋದಯ"ವಾಯಿತು. ಆಗ ಇಂಗ್ಲಿಷಿನಲ್ಲಿ ಜನಪ್ರಿಯವಾಗಿದ್ದ ರೊಮಾಂಟಿಕ್ ಸಾಹಿತ್ಯ ಕನ್ನಡ ಸಾಹಿತ್ಯದ ಮೇಲೆ ಪ್ರಭಾವ ಬೀರಿತು. ರೊಮಾಂಟಿಕ್ ಕವಿಗಳಾದ Wordsworth, Shelly, Tennyson ಮುಂತಾದವರಿಂದ ಸ್ಫೂರ್ತಿಗೊಂಡರು ನವೋದಯದ ಕನ್ನಡ ಕವಿಗಳು. ನಡು/ಹಳೆಗನ್ನಡದ ಪುರಾಣ, ಪ್ರಸಿದ್ಧವ್ಯಕ್ತಿಗಳನ್ನು ಬಿಟ್ಟು, ಪ್ರಕೃತಿ, ಪ್ರೀತಿ-ಪ್ರೇಮ, ಅದರ ದೈವಿಕತೆ, (ಸಭ್ಯತೆ ಮೀರದ) ಪ್ರಣಯ, ನವಿರಾದ ಭಾವನೆಗಳು ಇವು ಹೊಸಕಾವ್ಯದ ವಸ್ತುಗಳಾದುವು. ಇಂಗ್ಲಿಷಿನ ಸಾನೆಟ್ ಇತ್ಯಾದಿ ಛಂದಃಪ್ರಕಾರಗಳನ್ನು ಹೋಲುವ ಹೊಸ ಹೊಸ ಛಂದಸ್ಸುಗಳು ಕನ್ನಡದಲ್ಲಿ ಬಳಕೆಗೆ ಬಂದುವು. ಕಾವ್ಯ ಚಿಕ್ಕಚಿಕ್ಕ ಗೀತೆಗಳ ರೂಪ ಪಡೆಯಿತು. ಭಾಷೆ ಜನ ಬಳಕೆಗೆ ಹತ್ತಿರ ಬಂತು. ಮಾತು ಭಾವವನ್ನು ಅನುಸರಿಸಿ ಬರಬೇಕೇ ಹೊರತು ಭಾವ ಮಾತಿಗೆ ಬಂದಿಯಾಗಬಾರದು ಎನ್ನುವ ನಿಲುವು ಮನ್ನಣೆ ಪಡೆಯಿತು. ಇದುವರೆಗೂ ಇದ್ದ ಛಂದೋನಿಯಮಗಳನ್ನು ದಿಕ್ಕರಿಸಿ, ಭಾವಕ್ಕೆ ತಕ್ಕಂಥ ಸಹಜ ನಡೆ/ಲಯಗಳನ್ನು ಬಳಸಿ ಬರೆಯುವ ಕ್ರಮ ಬಂತು. ನಡುಗನ್ನಡದಲ್ಲಿ ಕಾವ್ಯ ಸರಸವಾಗಿದ್ದರೂ, ಜನದ ಮಟ್ಟದಿಂದ ಒಂದು ಹೆಜ್ಜೆ ಮೇಲಿತ್ತು; ಈಗ ಹೊಸಗನ್ನಡದ ನವೋದಯದಲ್ಲಿ ಇದು ಇನ್ನಷ್ಟು ಸರಸವಾಯಿತು, ಜನದ ಮಟ್ಟಕ್ಕೆ ಇಳಿದುಬಂತು, ನಾವು ಸುತ್ತಮುತ್ತಲ ನಿರ್ದಿಷ್ಟ ವಸ್ತು/ವಿಷಯ/ಅನುಭವಗಳಿಗೆ ಚಿನ್ನದ ಕಟ್ಟು ಹಾಕುವ ಕವಿತೆಗಳಾದುವು. ಗೇಯ ಗುಣ, ಭಾವದ ಲಾಲಿತ್ಯ ಈ ಕಾವ್ಯದ ಮುಖ್ಯ ಅಂಶ. ಕುವೆಂಪು, ಬೇಂದ್ರೆ. ಪುತಿನ, ನರಸಿಂಹಸ್ವಾಮಿ ಮುಂತಾದ ಅತ್ಯುತ್ತಮ ಕವಿಗಳನ್ನು ಕೊಟ್ಟಿತು, ಈ ಘಟ್ಟ. &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;ಇದರಂತೆಯೇ ನಮ್ಮ ಮೇಲೆ ಪ್ರಭಾವ ಬೀರಿದ ಮತ್ತೊಂದು ಸಾಹಿತ್ಯವೆಂದರೆ ಗ್ರೀಕ್ ಸಾಹಿತ್ಯ. ಗ್ರೀಕ್ ಪುರಾಣಗಳನ್ನಾಧರಿಸಿದ ರುದ್ರನಾಟಕಗಳು ಕನ್ನಡಕ್ಕೆ ಭಾಷಾಂತರಗೊಂಡುವು. ಆ ನಾಟಕಗಳ ವಸ್ತು-ರೌದ್ರತೆ-ಭಾಷೆಯ ತೂಕಕ್ಕೆ ಸರಿದೂಗಿಸಬಲ್ಲಂತೆ ಅವುಗಳನ್ನು ನಮ್ಮ ಹಳೆಗನ್ನಡ ಭಾಷೆಯಲ್ಲಿ ಭಾಷಾಂತರಿಸಲಾಯಿತು. ಕ.ವೆಂ.ರಾಘವಾಚಾರ್ಯರ ಈಡಿಪಸ್ ಇಂಥಾ ನಾಟಕಗಳಲ್ಲೊಂದು. ಇದು ಭಾಷಾಂತರವಾದರೆ, ಇಡೀ ನಾಟಕದ ವಸ್ತು-ಪಾತ್ರಗಳನ್ನು ನಮ್ಮ ಪೌರಾಣಿಕ ಸನ್ನಿವೇಶ-ಪಾತ್ರಗಳಿಗೆ ಅಳವಡಿಸಿ ಮೂಲ ನಾಟಕವನ್ನು ನಮ್ಮ ಸನ್ನಿವೇಶದಲ್ಲಿ ಪುನಃಸೃಷ್ಟಿಸುವ "ರೂಪಾಂತರ" ಕಾರ್ಯಗಳೂ ನಡೆದುವು. ಬಿಎಂಶ್ರೀಯವರ "ಅಶ್ವತ್ಥಾಮನ್" ಇಂಥದ್ದೊಂದು ಉತ್ತಮ ಕೃತಿ. ಮೂಲ ಗ್ರೀಕ್ ನಾಟಕ ಸಾಪೋಕ್ಲೀಸನ "ಅಯಾಜ್" ನ ರೂಪಾಂತರ ಇದು. &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;ಆದರೆ ಕಾವ್ಯ ಎಂದರೆ ಬರೀ ಪ್ರಕೃತಿ ಸೌಂದರ್ಯ, 'ದೈವೀ'ಪ್ರೇಮ, ನದಿ, ಕಣಿವೆ, ಬೆಟ್ಟ, ಬಾನಾಡಿಗಳನ್ನಷ್ಟೇ ಬಣ್ಣಿಸಿ ತೃಪ್ತಿ ಪಟ್ಟುಕೊಂಡರೆ ಸಾಕೇ? ಕೋಗಿಲೆಯ ಕೂಗನ್ನೇ ಅದೆಷ್ಟುದ್ದ ಎಳೆಯಲು ಸಾಧ್ಯ? ಮನುಷ್ಯನ ಮನದಾಳದಲ್ಲಿ ಕ್ರೂರಮೃಗ ಹೂಂಕರಿಸುತ್ತಿರುವಾಗ ಬರೀ ಅವನ ಔನ್ನತ್ಯವನ್ನಷ್ಟೇ ಕೊಂಡಾಡಿದರೆ ಅದು ಹಸೀ ಸುಳ್ಳಲ್ಲವೇ. ಮನದಾಳದ ವ್ಯಾಪಾರ, ಮನುಷ್ಯ-ಸಮಾಜ-ಪರಿಸರದ ಸಂಬಂಧ, ಕೊಡುಕೊಳ್ಳುವಿಕೆ, ಅವನ ನೂರೆಂಟು ಗೋಳುಗಳು, ಸಣ್ಣಪುಟ್ಟ ನೋವು-ನಲಿವುಗಳಿಗೆ ಕಣ್ಣುಮುಚ್ಚಿ ಬರೀ ಪ್ರಕೃತಿಯನ್ನಾರಾಧಿಸುವವ ಅದೆಂಥ ಕವಿಯಾದಾನು? ಕಾವ್ಯಕ್ಕೂ ಬದುಕಿಗೂ ನಡುವೆ ಕಂಡುಬರುವ ಒಂದು ಬಗೆಯ ವೈರುಧ್ಯ, ಭ್ರಮನಿರಸನಕ್ಕೆಡೆಗೊಟ್ಟಿತು. ಈ ಸರಣಿಯ ಆಲೋಚನೆಗಳು ಜಗತ್ತಿನ ಸಾಹಿತ್ಯವಲಯದಲ್ಲಿ ಹರಿಯತೊಡಗಿ, ಹೊಸಬಗೆಯ ಕಾವ್ಯ ಸೃಷ್ಟಿಗೆ ದಾರಿಗೊಟ್ಟಿತು. ಫ್ರಾಯ್ಡನ ಸುಪ್ತಮನೋವಿಶ್ಲೇಷಣೆಯಿಂದ ಹಿಡಿದು ಮಾರ್ಕ್ಸನ ಸಮತಾವಾದದವರೆಗು ಅನೇಕ ಆಲೋಚನಾಧಾರೆಗಳು ಈ ಕಾವ್ಯಮಾರ್ಗವನ್ನು ರೂಪಿಸಿದುವು; ಹಾಗೆಯೇ ಚಿತ್ರಕಲೆ-ಸಂಗೀತಗಳೇ ಮೊದಲಾದ ಅನೇಕ ಕ್ಷೇತ್ರಗಳಲ್ಲಿ ನಡೆದ ಹೊಸ ಪ್ರಯೋಗಗಳು ತಮ್ಮದೇ ಕೊಡುಗೆಯನ್ನು ನೀಡಿದುವು. ಇದನ್ನೇ ಕನ್ನಡದಲ್ಲಿ ನವ್ಯ ಕಾವ್ಯದ ಯುಗ ಎನ್ನಲಾಯಿತು. ಸ್ವಾತಂತ್ರೋತ್ತರ ದಿನಗಳಲ್ಲಿ ಬಳಕೆಗೆ ಬಂದ ಈ ಪ್ರಕಾರದ ಮೊದಲ ಕವಿ ಬಹುಶಃ ಗೋಪಾಲ ಕೃಷ್ಣ ಅಡಿಗರು. ಸ್ವತಃ ನವೋದಯ ಕವಿಯಾಗಿ "ಯಾವ ಮೋಹನ ಮುರಳಿ ಕರೆಯಿತು", "ನಗು ನನ್ನ ನಲ್ಲೆ" ಇತ್ಯಾದಿ ಸುಂದರ ಕವಿತೆಗಳನ್ನು ನೀಡಿದ ಅಡಿಗರು, ಅನಂತರದ ದಿನಗಳಲ್ಲಿ ನವ್ಯದ ಕಡೆ ಹೊರಳಿದರು. "ಹಿಮಗಿರಿಯ ಕಂದರ", "ಭೂಮಿಗೀತ" ದಂತಹ ಶಕ್ತ ಕವನಗಳು ಹೊರಬಂದವು. ನಿಸಾರ್, ಲಂಕೇಶ್, ರಾಮಚಂದ್ರಶರ್ಮ, ರಾಮಾನುಜಂ ಮುಂತಾದ ಪ್ರಮುಖ ಕವಿಗಳು ನವ್ಯದಲ್ಲಿ ಬರೆದರು. &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;ನವೋದಯದಲ್ಲಿ ನವಿರು ಭಾವಗಳಿಗೂ, ಅವಕ್ಕನುಗುಣವಾದ ಸರಳ, ಸಹಜ, ಸುಂದರ ಲಯಕ್ಕೂ ಒತ್ತುಕೊಟ್ಟಿದ್ದರೆ, ನವ್ಯದ ಮಾರ್ಗದಲ್ಲಿ ಭಾವ, ಅಭಾವ, ಅದರ ತೀವ್ರತೆ-ಸಂಕೀರ್ಣತೆಗಳೇ ಪ್ರಧಾನವಾದುವು. ಅದರ ಸಹಜ ಹರಿವಿಗೆ "ಅಡ್ಡಿ"ಯುಂಟುಮಾಡುವ ಯಾವುದೂ ಕಾವ್ಯದಲ್ಲಿ ಇರತಕ್ಕದ್ದಲ್ಲ. ಆದ್ದರಿಂದ ಕಾವ್ಯ ಮನದಲ್ಲಿ ಧುಮ್ಮಿಕ್ಕುವ ಭಾವದ ಲಯವನ್ನು ಅನುಸರಿಸಬೇಕೇ ಹೊರತು, ಅದಾವುದೋ ಎರವಲು ತಂದ ಮೂರಕ್ಷರದ್ದೋ ಎರಡಕ್ಷರದ್ದೋ ಲಯವನ್ನಲ್ಲ. ಸರ್ವತೋಮುಖ ಸ್ವಾತಂತ್ರ್ಯ, ಸ್ವ'ಚ್ಛಂದ' ನವ್ಯಕಾವ್ಯದ ಹೆಗ್ಗುರುತು. ಅದಕ್ಕೆಂದೇ, ಅದುವರೆಗಿನ "ಶಿಷ್ಟ" ಸಾಹಿತ್ಯದಲ್ಲಿ ಮಡಿವಂತಿಕೆಯಿಂದ ಬಿಟ್ಟಿದ್ದ ಕಾಮ ಇಲ್ಲಿ ಪ್ರಮುಖ ವಸ್ತುವಾಯಿತು. ಇದ್ದದ್ದನ್ನು ಕೆಡವಿ ಹೊಸದನ್ನು ಕಟ್ಟುವ ಉತ್ಸಾಹವೇ ಇಲ್ಲಿನ ಮೂಲಮಂತ್ರ. ಆದ್ದರಿಂದಲೇ, ನವ್ಯಕಾವ್ಯದಲ್ಲಿ ಸ್ವಚ್ಛಂದದ ಇನ್ನೊಂದು ಮುಖವಾದ "ಲಯ"ವಿಹೀನತೆಯೇ ಮುಖ್ಯ ಗುರುತು ಎಂಬಂತಾಯಿತು. ಇದನ್ನೇ ನವ್ಯಕಾವ್ಯದ ವಿಮರ್ಶಕರು "ನಿಯತಿಕೃತ ನಿಯಮ ರಾಹಿತ್ಯ" ಎಂದರು. &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;ಹಾಗಿದ್ದರೆ ಕಾವ್ಯಕ್ಕೂ ಗದ್ಯಕ್ಕೂ ಏನು ವ್ಯತ್ಯಾಸ? "ಪದ್ಯ"ವೆಂದು ಬರೆದ ತುಂಡು ಸಾಲುಗಳನ್ನು ಒಂದರಪಕ್ಕ ಒಂದು ಜೋಡಿಸಿದರೆ ಗದ್ಯವಾಗುವುದಿಲ್ಲವೇ? ಇದು ಸಾಮಾನ್ಯವಾಗಿ ಕೇಳಿಬರುವ ಪ್ರಶ್ನೆ. ಇದಕ್ಕೆ ಸಾಮಾನ್ಯವಾಗಿ "ಹೌದು" ಎಂದು ಉತ್ತರಿಸಲಾಗುತ್ತದೆ. ಆದರೆ, ಅದು ಹಾಗಲ್ಲ. ನವ್ಯಕಾವ್ಯ ನಿಯತಿಕೃತ ನಿಯಮಗಳನ್ನು ಮೀರಿದರೂ ಅದು ಮೊತ್ತವಾಗಿ ನಿಯಮವಿಹೀನವೇನೂ ಅಲ್ಲ. ಅದು ಕಣ್ಣಿಗೆ ಕಾಣುವ (ಅಥವ ಕಿವಿಗೆ ಕೇಳುವ) "ಅಸಹಜ" ಲಯವನ್ನು ನಿರಾಕರಿಸಿತೇ ಹೊರತು, ಸಾರಾಸಗಟಾಗಿ ಲಯವನ್ನೇ ಅಲ್ಲ. ಅದರ ನಿಲುವು, ಕಾವ್ಯ ಭಾವದ ಲಯವನ್ನು ಅನುಸರಿಸಬೇಕೆಂಬುದಷ್ಟೇ. ಕಾವ್ಯವನ್ನು ನಿರ್ದಿಷ್ಟ ಛಂದಸ್ಸಿನಲ್ಲಿ ಇರುಕುವ ಬದಲು, ಕವನವೊಂದು ತನ್ನದೇ ಛಂದಸ್ಸನ್ನು ಕಂಡುಕೊಳ್ಳಬೇಕೆನ್ನುವುದು ಇದರ ಆಶಯ. ಇದನ್ನು ಬಿಟ್ಟರೆ, ಕಾವ್ಯಕ್ಕೆ ಅನ್ವಯಿಸುವ ಮೂಲಭೂತ ನಿಯಮಗಳೆಲ್ಲಾ ಇಲ್ಲಿಯೂ ಅನ್ವಯಿಸುತ್ತವೆ. ಕಾವ್ಯಕ್ಕೆ ಅದರದೇ ಆದ ಭಾಷೆಯಿದೆ - ಅದು matter-of-factly ಎನಿಸುವ ಗದ್ಯದ ಭಾಷೆಗಿಂತ ತುಸು ಭಿನ್ನವಾದ ನಾಟಕೀಯ ಭಾಷೆ (ಉದಾ: ಬರುತ್ತೀಯಾ - ಬರುವೆಯಾ); ಗದ್ಯಕ್ಕೆ ಒಂದು ಭೌತಿಕ ಲಯವಿಲ್ಲ, ಆದರೆ ಕಾವ್ಯದಲ್ಲಿ ಲಯವಿದೆ, ಅದು ಭಾಷೆಯ ಲಯವಿರಬಹುದು, ಭಾವದ ಲಯವಿರಬಹುದು ಅಥವ ಅಕ್ಷರಗಳ ಲಯವಿರಬಹುದು, ಮುಖ್ಯವೆಂದರೆ, ಅದು ಆ ಕವನದ್ದೇ ಆದ ಲಯ, ಹೊರಗಿನಿಂದ ಹೇರಿದ್ದಲ್ಲ. ಈ ದೃಷ್ಟಿಯಿಂದ, ಕಾವ್ಯ ಲಯವಿಹೀನ ಅಲ್ಲವೇ ಅಲ್ಲ; ತಂತ್ರಗಾರಿಕೆಯಿಂದ ಗದ್ಯ-ಕಾವ್ಯಗಳು ಬೇರೆಯೇ. &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;"ನವ್ಯಕಾವ್ಯ ಬರೆಯುವುದಕ್ಕೆ ಛಂದಸ್ಸು, ಪ್ರಾಸ, ಲಯ ಇತ್ಯಾದಿ ನಿಯಮಗಳೇನೂ ಇಲ್ಲ, ಹೇಗೆ ಬೇಕೆಂದರೂ ಬರೆಯಬಹುದು" ಎಂಬ ಮಾತು ಪದೇಪದೇ ಕೇಳಿಬರುತ್ತದೆ. ಹೇಗೆ ಬೇಕಿದ್ದರೂ ಬರೆಯಬಹುದೇನೋ, ಆದರೆ ಅದನ್ನು "ಕಾವ್ಯ"ವೆನ್ನಬಹುದೇ ಎಂಬುದು ಬೇರೆಯೇ ಪ್ರಶ್ನೆ. ಈ ಸಂದರ್ಭದಲ್ಲಿ ಶತಾವಧಾನಿ ರಾ.ಗಣೇಶರ ಮಾತು ನೆನಪಿಗೆ ಬರುತ್ತದೆ:&lt;/div&gt;&lt;div align="justify"&gt;&lt;br /&gt;&lt;span style="font-size:85%;"&gt;&lt;em&gt;"ಇಂದಿನ ಕವಿಲೋಕ ಛಂದಸ್ಸನ್ನರಿಯದೆಯೇ ಅದನ್ನು ಪರಿತ್ಯಜಿಸಿದ ಅಟ್ಟಹಾಸ ಮಾಡಿದೆ. ಪರಿಗ್ರಹಣವಿಲ್ಲದ ಪರಿತ್ಯಾಗಕ್ಕೆ ಬೆಲೆಯೇನು? ಕವಿಗಳಿಗೇ ಇದರ ಅರಿವಿಲ್ಲದಿದ್ದರೆ ಸಹೃದಯರಿಗೆ ತಿಳಿಯುವುದೆಂತು? ಇವರಿಬ್ಬರನ್ನೇ ಅಭ್ಯಸಿಸುವ ವಿದ್ಯಾರ್ಥಿಗಳಿಗಂತೂ ಛಂದದ ಗಂಧವೂ ಇಲ್ಲದಂತಾಗಿದೆ" &lt;/em&gt;- ಅ.ರಾ.ಮಿತ್ರರ "ಛಂದೋಮಿತ್ರ" ಗ್ರಂಥದ ಮುನ್ನುಡಿಯಿಂದ. &lt;/span&gt;&lt;/div&gt;&lt;div align="justify"&gt;&lt;span style="font-size:85%;"&gt;&lt;br /&gt;&lt;/span&gt;&lt;/div&gt;&lt;div align="justify"&gt;&lt;/div&gt;&lt;div align="justify"&gt;&lt;/div&gt;&lt;div align="justify"&gt;ಅಕ್ಷರದ ಲಯ ಅಥವ ಛಂದಸ್ಸುಗಳಿಗೆ ಅಂಟಿಕೊಳ್ಳದಿದ್ದರೂ, ಅಕ್ಷರ, ಭಾವ, ಭಾಷೆಯ ಲಯಗಳನ್ನು ಹದವಾಗಿ ನೆಯ್ದ ನವ್ಯ ಕವನಗಳನ್ನು ಓದಬೇಕಾದರೆ ಅಡಿಗರನ್ನು ಓದಬೇಕು. ಉದಾಹರಣೆಯಾಗಿ ಈ ಸಾಲುಗಳನ್ನು ನೋಡಿ: &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;"ನವಾವತಾರ ಪುರುಷರು:&lt;br /&gt;ವೇದವನ್ನು ಕದ್ದು, ಮತ್ತೆ ಸೋಮಕನಿಗೆ ಕೊಟ್ಟವರು,&lt;br /&gt;ಭೂಗೋಳವ ಬೆನ್ನ ಮೇಲೆ ಹೊತ್ತಾಡುವ ಕಮಠರು,&lt;br /&gt;ಹಿರಣ್ಯವನ್ನು ತೊಡೆದು ತೆಗೆದು ನೋಟಿನ ಮಳೆಗರೆದವರು,&lt;br /&gt;ನೆಲವ ಚಾಪೆ ಬಿಚ್ಚಿ ಮೈ ಚಾಚಿ ಮಲಗಿ ಕೊಂಡವರು;&lt;br /&gt;ಎಡವು ಅಲ್ಲ, ಬಲವು ಅಲ್ಲ;&lt;br /&gt;ಗಾಂಧಿ ಅಲ್ಲ, ಮಾರ್ಕ್ಸೂ ಅಲ್ಲ;&lt;br /&gt;ಅಹಿಂಸೆಯಲ್ಲ, ಹಿಂಸೆಯಲ್ಲ;&lt;br /&gt;ಇಹವಿಲ್ಲದ ಪರವೊಲ್ಲದ&lt;br /&gt;ಅನುಕೂಲಸಿಂಧು ರಚಿಸುತಿರುವ ಅವರ್ಣ್ಯರೂಪ ಭೂಪರು;&lt;br /&gt;ಬಲ್ಲಿದರನ್ನೊತ್ತಿ ತುಳಿದು ಬಡವಗೆ ಕೈ ಕೊಟ್ಟವರು;&lt;br /&gt;ಚಿಂತಕರನ್ನೊರಸಲಿಕ್ಕೆ ಬೀದಿಕೂಗ ಮಸೆದವರು,&lt;br /&gt;ಮೂರು ಬಾರಿ ನಾಡ ಸೋಸಿ ಮರಳಿ ಪಟ್ಟವೇರಿದವರು,&lt;br /&gt;ಆಹಾ ಮಹಾಪುರುಷರು;&lt;br /&gt;ಉಪವಾಸದಿ ಸಮ್ಮ ಹಿಡಿದು ತೃಪ್ತಿ ತೇಗ ಬರಿಸುವವರು,&lt;br /&gt;ಸಾಲ ಮಾಡಿ ತುಪ್ಪ ತಿಂದು ನಮ್ಮ ಮೂತಿಗೊರಸಿದವರು,&lt;br /&gt;ಯೋಜನೆಗಳ ಯಜ್ಞದಲ್ಲಿ ವಪೆಯ ರುಚಿಯನರಿತವರು,&lt;br /&gt;ಕಾನೂನಿನ ಗಾಣದಿಂದ ಮರಳಿನೆಣ್ಣೆ ತೆಗೆಯುವವರು,&lt;br /&gt;ಕತ್ತೆ ಕುದುರೆಯಾಗುವಂತೆ, ಹುಲಿ ಹೊಟ್ಟನ್ನುಣ್ಣುವಂತೆ&lt;br /&gt;ನೆಲವೆ ನಾಕವಾಗುವಂತೆ, ನಾಯಿಬಾಲ ನಿಗುರುವಂತೆ&lt;br /&gt;ಮಾಡಬಲ್ಲ ದೊಂಬರು" &lt;/span&gt;&lt;/em&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;&lt;br /&gt;&lt;/span&gt;&lt;/em&gt;&lt;/div&gt;&lt;div align="justify"&gt;&lt;span style="font-size:85%;"&gt;&lt;/span&gt;&lt;/div&gt;&lt;div align="justify"&gt;&lt;span style="font-size:85%;"&gt;- "ಬರುತ್ತಾರೆ" ಕವನದಿಂದ &lt;/span&gt;&lt;/div&gt;&lt;div align="justify"&gt;&lt;span style="font-size:85%;"&gt;&lt;br /&gt;&lt;/span&gt;&lt;/div&gt;&lt;div align="justify"&gt;ಇದನ್ನು ಒಂದರ ಪಕ್ಕ ಒಂದು ಜೋಡಿಸಿ ನೋಡಿ, ಗದ್ಯವಾಗುತ್ತದೆಯೋ? &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;&lt;/div&gt;&lt;div align="justify"&gt;ಇಷ್ಟಕ್ಕೂ ಆದಿ ಕಾಲದ ಸಂಸ್ಕೃತ ಕಾವ್ಯದಿಂದ ಹಿಡಿದು ಇವತ್ತಿನ ನವ್ಯ/ನವ್ಯೋತ್ತರ ಕಾವ್ಯದ ವರೆಗೂ, ಕಾವ್ಯಕ್ಕೆ ಬದ್ಧತೆ ಹೊಂದಿದ ಯಾವುದೇ ಬರಹ ಕೂಡ, ಒಂದು ಮೂಲಭೂತ ನಿಯಮವನ್ನು ಪಾಲಿಸುತ್ತಾ ಬಂದಿದೆ; ಅದೆಂದರೆ ಸಹಜತೆ. ಕಾವ್ಯ ರುಚಿಯಾಗುವುದಕ್ಕೆ ಅಗತ್ಯವಾಗಿ ಬೇಕಾದ್ದು ಅದರ ಸೆಳೆಯುವ, ಮಿಡಿಯುವ, ಮಿಂಚು ಹೊಳೆಸುವ ಗುಣ; "ಆಗಲೇ ಅಲ್ಲೇ ಹುಟ್ಟಿಬಂತೆನಿಸುವ" ತಾಜಾತನ. W.B.Yeatsನ ಮಾತಿನಲ್ಲಿ ಹೇಳಬೇಕಾದರೆ: &lt;/div&gt;&lt;div align="justify"&gt;&lt;br /&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;"A line will take us hours maybe;&lt;br /&gt;Yet, if it doesn't seem a moment's thought&lt;br /&gt;Our stitching and unstitching has been naught.&lt;br /&gt;Better go down upon your marrow-bones&lt;br /&gt;And scrub a kitchen pavement, or break stones&lt;br /&gt;Like an old pauper, in all kinds of weather" &lt;/span&gt;&lt;/em&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;&lt;br /&gt;&lt;/span&gt;&lt;/em&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;&lt;/span&gt;&lt;/em&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;("ಕವಿತೆ ಸಾಲೊಂದ ಸಾಧಿಸಲು&lt;br /&gt;ಗಂಟೆಗಟ್ಟಲೆ ನಾವು ಹೆಣಗಬೇಕು;&lt;br /&gt;ಆದರೂ ಆ ಸಾಲು ಅಲ್ಲೆ, ಆ ಗಳಿಗೆಯೇ&lt;br /&gt;ಚಿಮ್ಮಿ ಬಂದದ್ದೆಂದು ಅನ್ನಿಸದೆ ಇದ್ದಲ್ಲಿ&lt;br /&gt;ಹೊಲೆದು ಬಿಚ್ಚಿದ್ದೆಲ್ಲ ಪೂರ ವ್ಯರ್ಥ.&lt;br /&gt;ಬೆನ್ನು ಬಗ್ಗಿಸಿ ಮಂಡಿಯೂರಿ ಕೊಳೆಯಡಿಗೆಮನೆ ನೆಲವನ್ನುಜ್ಜುವುದೋ,&lt;br /&gt;ಕಡುಭಿಕಾರಿಯ ಹಾಗೆ ಬಿಸಿಲು ಚಳಿ ಎನ್ನದೆ ಕಲ್ಲನ್ನೊಡೆಯುವುದೋ&lt;br /&gt;ಇದಕಿಂತ ಉತ್ತಮ" &lt;/span&gt;&lt;/em&gt;&lt;/div&gt;&lt;div align="justify"&gt;&lt;em&gt;&lt;span style="font-size:85%;"&gt;&lt;br /&gt;- ಅನು: ಡಾ. ಲಕ್ಷ್ಮೀನಾರಾಯಣಭಟ್ಟ)&lt;br /&gt;&lt;br /&gt;&lt;/span&gt;&lt;/em&gt;&lt;/div&gt;&lt;div align="justify"&gt;&lt;em&gt;&lt;u&gt;&lt;strong&gt;ಅಡಿಟಿಪ್ಪಣಿ:&lt;/strong&gt;&lt;/u&gt; ನವ್ಯೋತ್ತರ ಸಾಹಿತ್ಯದ ಪ್ರಕಾರಗಳೆಂದು ಬಂಡಾಯ ಸಾಹಿತ್ಯ, ದಲಿತ ಸಾಹಿತ್ಯ, ಸ್ತ್ರೀ ಸಾಹಿತ್ಯ ಇತ್ಯಾದಿಗಳು ಬಂದರೂ, ಅವೆಲ್ಲ ಕೆಲವು ನಿರ್ದಿಷ್ಟ ಸಾಮಾಜಿಕ ಸನ್ನಿವೇಶ, ಇಸಂ/ಸಿದ್ಧಾಂತ ಅಥವಾ ನಿರ್ದಿಷ್ಟಸಾಮಾಜಿಕ ಗುರಿಗೆ ಬದ್ಧವಾಗಿ "ಕಾವ್ಯ"ದ ಬದ್ಧತೆಯನ್ನು ಕಡೆಗಣಿಸಿದುವೆಂದೇ ನನ್ನ ಅನಿಸಿಕೆ. ಅಲ್ಲೂ ಗಟ್ಟಿ ಕಾವ್ಯ ಇರಲಿಲ್ಲವೆಂದಲ್ಲ, ಆದರೆ ನವ್ಯದಿಂದಲೇ ಬೇರೆಯಾದ "ಅಲೆ" ಎಬ್ಬಿಸಿದ್ದನ್ನು ಕಾಣೆ. ಅವುಗಳ ನಿರ್ದಿಷ್ಟ ಸಿದ್ಧಾಂತ-ಧೋರಣೆ-ಸಂವೇದನೆಗಳನ್ನು ಬಿಟ್ಟರೆ, ಶೈಲಿ, ರೂಪಗಳಲ್ಲಿ ನವ್ಯದ್ದೇ ಒಂದು ಪ್ರಭೇದವೆಂದು ಪರಿಗಣಿಸಬಹುದಾದ್ದರಿಂದ, ಅವುಗಳ ಬಗ್ಗೆ (ಕಾವ್ಯದ ಸಂದರ್ಭದಲ್ಲಿ) ಪ್ರತ್ಯೇಕವಾಗಿ ಬರೆಯಲು ಏನಾದರೂ ಇದೆ ಎನಿಸುವುದಿಲ್ಲ.&lt;/em&gt;&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-965160082322410621?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/965160082322410621/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=965160082322410621&amp;isPopup=true' title='9 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/965160082322410621'/><link rel='self' type='application/atom+xml' href='http://www.blogger.com/feeds/2037979210344114254/posts/default/965160082322410621'/><link rel='alternate' type='text/html' href='http://nannabaraha.blogspot.com/2009/08/blog-post_29.html' title='ಕನ್ನಡ ಕಾವ್ಯ ನಡೆದು ಬಂದ ದಾರಿ - ಒಂದು ಹಿನ್ನೋಟ'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>9</thr:total></entry><entry><id>tag:blogger.com,1999:blog-2037979210344114254.post-1940210495912100140</id><published>2009-08-02T10:52:00.002+05:30</published><updated>2011-04-14T18:32:01.501+05:30</updated><category scheme='http://www.blogger.com/atom/ns#' term='೦೫. ಲಹರಿ'/><title type='text'>ಕಂಡಿತು ಕಣ್ಣು ಸವಿದಿತು ನಾಲಗೆ ಪಡೆದೀತೀ ದೇಹಾ...</title><content type='html'>&lt;div align="justify"&gt;ನಡುಬೇಸಿಗೆಯ ಮಧ್ಯಾಹ್ನ, ಒಂದೆಲೆ ಅಲುಗುವಷ್ಟೂ ಗಾಳಿಯಿಲ್ಲ. ಮೋಡ ಕವಿದರೂ ಬಾರದ ಮಳೆ, ಮೂಗುಬ್ಬಸ. ಉರಿಯುವ ಬಿಸಿಲಿಗೆ ಮನೆಯ ತಾರಸಿ ಕಾದು ಒಳಗೂ ಹೊರಗೂ ಅಸಾಧ್ಯ ಧಗೆ. ಬೆಳಗಿನಿಂದ ಯಾವಯಾವುದೋ ವಿಚಾರಗಳಲ್ಲಿ ಸಿಕ್ಕಿ ಮನಸ್ಸು ಕೊಚ್ಚೆಯಾಗಿತ್ತು. ಹಣಕಾಸಿನ ಲೆಕ್ಕವಾಯಿತು, ಮನೆ ಖರ್ಚಿನ ಲೆಕ್ಕವಾಯಿತು, careerಬಗೆಗಿನ ಚಿಂತನೆಯಾಯಿತು, mail check ಮಾಡಿದ್ದಾಯಿತು, ಆರ್ಕುಟ್ ನೋಡಿದ್ದಾಯಿತು, ಟೀವಿ ಆಯಿತು... ಉಹೂಂ, ಮನಸ್ಸು ಅದೇಕೋ ವಿರಮಿಸಲೊಲ್ಲದು. ಎದ್ದು ಹೋಗಿ ನನ್ನ ಲೈಬ್ರರಿಯಿಂದ ಕವನ ಸಂಕಲನವೊಂದನ್ನು ಹೊರಗೆಳೆದೆ. ಬೇಂದ್ರೆಯವರ ಕವನ ಸಂಕಲನಗಳ ಸಂಕಲನ ಅದು. ಪುಸ್ತಕ ತೆರೆದಾಗ ಮೊದಲು ಸಿಕ್ಕ ಕವಿತೆ "ಬೆಳಗು", ನನ್ನ ಅಚ್ಚುಮೆಚ್ಚಿನ ಕವನಗಳಲ್ಲೊಂದು. "ವಾಹ್" ಅನ್ನಿಸಿತು. ಈ ಕವನ ತನ್ನ ವಿಶಿಷ್ಟ ಗೇಯತೆಯೊಂದಿಗೆ, ಕಾವ್ಯ ಗುಣದೊಂದಿಗೆ ಮತ್ತೆ ಮತ್ತೆ ಮನದಲ್ಲಿ ರಿಂಗಣಗೊಳ್ಳುತ್ತದೆ. ಬೆಳಗು ತರುವ ಚೈತನ್ಯದ ಸಾಂಕ್ರಾಮಿಕತೆ, ಅದು ತಾನೇ ತಾನಾಗಿ ಮುಟ್ಟಿದ್ದಕ್ಕೆಲ್ಲಾ ಊಡುವ ಜೀವ, ಅದನ್ನು ಚಿತ್ರಿಸುವ ಪರಿ, ಅನ್ಯಾದೃಶ.&lt;/div&gt;&lt;br /&gt;&lt;br /&gt;&lt;div align="justify"&gt;&lt;/div&gt;&lt;div align="justify"&gt;"ರತ್ನದ ರಸದಾ ಕಾರಂಜೀಯೂ ಪುಟಪುಟನೇ ಪುಟಿದು ತಾನೆ ಪುಟಪುಟನೇ ಪುಟಿದು ಮಘಮಘಿಸುವಾ ಮುಗಿದ ಮೊಗ್ಗೀ ಪಟಪಟನೇ ಒಡೆದು ತಾನೇ ಪಟಪಟನೇ ಒಡೆದು" ಎನ್ನುವಲ್ಲಿ ರತ್ನದ ರಸದ ಕಾರಂಜಿ ಪುಟಪುಟನೆ ಪುಟಿದಾಗ, ಮುಗಿದ ಮೊಗ್ಗು ತಾನಾಗೇ ಒಡೆಯುವುದು. ಕಾವ್ಯದ ಸೌಂದರ್ಯದೊಡನೆ ಇಲ್ಲಿ ಮತ್ತೆ ಮತ್ತೆ ಅನುರಣನಗೊಳ್ಳುವ ಸಾಲುಗಳು, ಅದಕ್ಕೆ ತಕ್ಕಂತೆ ಮೇಳದಂತೆ ಬರುವ ಪ್ರಾಸಗಳು ಅದಕ್ಕೊಂದು ವಿಚಿತ್ರ ಗೇಯತೆ ತಂದುಕೊಡುತ್ತದೆ. ಹಾಗೆಯೇ ಮತ್ತೊಂದು ಸಾಲು - "ತಂಗಾಳೀಯಾ ಕೈಯೊಳಗಿರಿಸೀ ಎಸಳಿನಾ ಚವರಿ ಹೂವಿನ ಎಸಳೀನಾ ಚವರಿ, ಹಾರಿಸಿಬಿಟ್ಟರು ತುಂಬಿಯ ದಂಡು ಮೈಯೆಲ್ಲಾ ಸವರಿ ಗಂಧಾ ಮೈಯೆಲ್ಲಾ ಸವರಿ" - ಎಸಳಿನ ಚವರಿ ಮತ್ತೆ "ಹೂವಿನ ಎಸಳಿನ ಚವರಿ" ಎಂದು ಅನುರಣನಗೊಳ್ಳುವ ಮೂಲಕ ಎಸಳಿನ ಚವರಿಗೆ ಹೊಸ ಅರ್ಥ ಕೊಡುತ್ತದೆ. ಚವರಿಯ ಕೆಲಸವೇ ತಂಗಾಳಿ ಬೀಸುವುದು. ಮತ್ತೆ ತಂಗಾಳಿಯೇ ಚವರಿ ಹಿಡಿದು ನಿಂತರೆ? ಅದಕ್ಕೆ ಅನುವಾದವಾಗಿ ಬರುವ ಮುಂದಿನ ಸಾಲು ನೋಡಿ, "ಹಾರಿಸಿಬಿಟ್ಟರು ತುಂಬಿಯ ದಂಡು, ಮೈಯೆಲ್ಲಾ ಸವರಿ.. ಗಂಧಾ ಮೈಯೆಲ್ಲಾ ಸವರಿ". ಹೂವಿಗೂ ದುಂಬಿಗೂ ಇರುವ ಸಂಬಂಧ ಸರ್ವ ಸಾಮಾನ್ಯ. ಹೂವಿನೆಸಳಿನ ಚವರಿ ಬಂದಾಗ ದುಂಬಿಯ ಪ್ರಸ್ತಾಪ ಸಹಜವೇ, ಆದರೆ ಅದನ್ನು ಸುಮ್ಮನೇ ಹಾರಿಸಿ ಬಿಡಲಿಲ್ಲ "ಹಾರಿಸಿಬಿಟ್ಟರು... ಮೈಯೆಲ್ಲಾ ಸವರಿ" ಅನ್ನುವಾಗಿನ ಆಪ್ಯಾಯತೆ, "ಗಂಧಾ ಮೈಯೆಲ್ಲಾ ಸವರಿ" ಎಂದು ಅನುರಣನಗೊಂಡಾಗ, ಹೂವು, ದುಂಬಿ, ಗಂಧಗಳ ಮಧುರ ಸಂಬಂಧ ಸುಂದರವಾಗಿ ಮೈದಳೆಯುತ್ತದೆ.&lt;/div&gt;&lt;br /&gt;&lt;br /&gt;&lt;div align="justify"&gt;&lt;/div&gt;&lt;div align="justify"&gt;ಕವನವನ್ನು ಮೆಚ್ಚುತ್ತಾ ಇರಬೇಕಾದರೆ, ಮೂರು ವರ್ಷದ ರಾಘವಾಂಕ "ಅಣ್ಣಾ" ಎಂದು ಕರೆದಿದ್ದು ಕೇಳಿಸಿತು. ತಲೆಯೆತ್ತಿ ನೋಡಿದೆ. ಕಂಪ್ಯೂಟರಿನಲ್ಲಿ ಅದಾವುದೋ ಭಾವಗೀತೆ ಸಣ್ಣಗೆ ಗುಯ್ ಗುಡುತ್ತಿತ್ತು. ಟೀವಿ ಬಡಬಡಿಸುತ್ತಿತ್ತು, ನೋಡುವರಾರೂ ಇಲ್ಲದೆ. ರಾಘವಾಂಕ ಮಾಡಲು ಚೇಷ್ಟೆಯೇನೂ ಹೊಳೆಯದೆ ಅದಾವುದೋ ಪುಸ್ತಕದ ಮೇಲೆ ಗೀಚುತ್ತಾ ಮಂಕಾಗಿ ಕುಳಿತಿದ್ದ. ಅವನು ಕೆಲವೊಮ್ಮೆ ಬೈಕಿನಂತೆ, ಕೆಲವೊಮ್ಮೆ ಕುದುರೆಯಂತೆ ಬಳಸುವ ದೊಡ್ಡ ನಾಯಿಯ ಬೊಂಬೆ ನಿರ್ಲಕ್ಷ್ಯಕ್ಕೊಳಗಾಗಿ ಅಲ್ಲೊಂದು ಕಡೆ ಬಿದ್ದಿತ್ತು. ಸಾಮಾನ್ಯವಾಗಿ ಸುಮ್ಮನೆ ಕುಳಿತಿರುವ ಜೀವವಲ್ಲ ರಾಘವಾಂಕ. ಏನಾದರೊಂದು ಮಾಡುತ್ತಿರಬೇಕು - ಗೋಡೆಯ ಮೇಲೆ ಗೀಚುವುದೋ, ರೇಡಿಯೋ-ಗೀಡಿಯೋ ಬಿಚ್ಚಿ "ರಿಪೇರಿ" ಮಾಡುವುದೋ, ಚತ್ತಿನ ಮೇಲೆ ಕುಳಿತ ದೊಡ್ಡ ಹಲ್ಲಿಗೆ ಕೂಗುಹಾಕಿ ಓಡಿಸಲು ಪ್ರಯತ್ನಿಸುವುದೋ, ಏನಾದರೊಂದು. ನೀರಾಟ ಅವನ ಅತಿ ಇಷ್ಟವಾದ ಕ್ರೀಡೆಗಳಲ್ಲೊಂದು. ಆದರೆ "ಮಗುವಿಗೆ ಶೀತ ಆಗಬಹುದೆಂಬ" ಕಾರಣದಿಂದ ಈ ಕ್ರೀಡೆಯಮೇಲೆ ಕಟ್ಟುನಿಟ್ಟಿನ ನಿಷೇಧವಿತ್ತು. ನಿಷೇಧಿತವಾಗಿದ್ದು ಇದೊಂದೇ ಅಲ್ಲ, ಟೆರೇಸಿನ ಮೇಲೆ ಹೋಗುವುದು, ಒಬ್ಬನೇ ಬಚ್ಚಲ ಮನೆಗೆ ಹೋಗುವುದು, ಗೇಟಿನ ಬಳಿ ಆಡುವುದು, ಮಣ್ಣು ಮುಟ್ಟುವುದು, ಬಿಸಿಲಲ್ಲಿ ಹೋಗುವುದು, ಪುಸ್ತಕ-ಪೆನ್ನು ಮುಟ್ಟುವುದು, ಹೀಗೆ ಅವನನ್ನು ಕಟ್ಟಿ ಹಾಕಿದ್ದ ಪಟ್ಟಿ ಸಾಕಷ್ಟು ದೊಡ್ಡದೇ ಇದೆ. ಆದರೆ ಅವನೋ, "ದೇವರಂತೆ ಬಂದು ಠಾವಿಲಿ ಕೂಡ"ಲು ಒಲ್ಲದ ಹುಲು ಮಾನವ ಶಿಶು. ನಾನು ಮನೆಯಲ್ಲಿದ್ದರೆ ಈ ಪಟ್ಟಿಯ ಕಟ್ಟು ಸ್ವಲ್ಪ ಸಡಿಲಗೊಳ್ಳುತ್ತದೆ. ಹಾಗೆ ದೊರಕುವ ಸ್ವಾತಂತ್ರ್ಯಕ್ಕಾಗಿ ಅವ ನನಗೋಸ್ಕರ ಪ್ರತಿ ವಾರ ಕಾದಿರುತ್ತಾನೆ. &lt;/div&gt;&lt;br /&gt;&lt;div align="justify"&gt;&lt;/div&gt;&lt;div align="justify"&gt;"ಅಣ್ಣಾ" ಎಂದು ಕರೆದಾಗೊಮ್ಮೆ ತಲೆಯೆತ್ತಿ ಮಗನ ಮುಖ ನೊಡಿದೆ. ಅನ್ಯಮನಸ್ಕನಾಗಿ ನನ್ನದೊಂದು ಪುಸ್ತಕದ ಮೇಲೆ ಗೀಚುತ್ತಾ ಕುಳಿತಿದ್ದ. ನಾನು ಪುಸ್ತಕ ಹಿಡಿದು ಕುಳಿತಿದ್ದಕ್ಕೆ ಅಸಮಾಧಾನ ಮುಖದ ಮೇಲೆ ಆಳವಾಗಿ ಕೊರೆದಿಟ್ಟಂತಿತ್ತು. ಮತ್ತೆ ತನ್ನ ಬಾಲಭಾಷೆಯಲ್ಲಿ ಹೇಳಿದ "ಅಣ್ಣಾ, ಆ ಪುಸ್ತಕ ಚೆನ್ನಾಗಿಲ್ಲ, ಮುಚ್ಚಿಡು. ಕಂಪ್ಯೂಟರು ಆರಿಸು... ಬಾ ಇಲ್ಲಿ". ಪುಸ್ತಕ ಪಕ್ಕಕ್ಕಿಟ್ಟು ಎದ್ದು ಹತ್ತಿರ ಹೋದೆ. ಅವನು ಗೀಚುತ್ತಿದ್ದ ಪುಸ್ತಕ ನನ್ನ Financial Management ಪುಸ್ತಕ! ಓದಲು ಬರದ ಮಗು, ಬರೆಯುತ್ತಿತ್ತು. ಬೈಯಲು ಮನಸ್ಸು ಬರಲಿಲ್ಲ. ಪೆನ್ನನ್ನು ಕಿತ್ತುಕೊಂಡು ಮಗನನ್ನು ಹತ್ತಿರ ಸೆಳೆದು ಹಗುರವಾಗಿ ಮುದ್ದಿಸಿದೆ. ಪೆನ್ನು ಕಿತ್ತುಕೊಂಡದ್ದಕ್ಕೆ ಪ್ರತಿಭಟನೆಯೇನೂ ವ್ಯಕ್ತವಾಗಲಿಲ್ಲ. ತನ್ನ ಬಾಲಭಾಷೆಯಲ್ಲಿ ಮತ್ತೆ ಹೇಳಿತು ಮಗು "ಅಣ್ಣಾ, ಕಂಪ್ಯುಟರ್ ಮಾಡಿದ್ದು ಸಾಕು, ಆರಿಸಿಬಿಡು, ಇಲ್ಲಿ ಕೂತುಕೋ ಬಾ" ಹಾಗೇ ಮಗುವನ್ನು ಅಪ್ಪಿಕೊಂಡು ಚಿಂತಿಸಿದೆ. ಬೆಳಗಿನಿಂದ ನಾನು ಕಾಲ ಕಳೆದಿದ್ದು ಕಾಗದ ಹೂಗಳ ನಡುವೆ ಅಲ್ಲವೇ! ಕ್ಷಣ ಸುಮ್ಮನಾದೆ.&lt;/div&gt;&lt;br /&gt;&lt;br /&gt;&lt;div align="justify"&gt;&lt;/div&gt;&lt;div align="justify"&gt;ಮೇಲೆ ನೀರಿನ ತೊಟ್ಟಿ ಕೊಳೆಯಾಗಿತ್ತು, ನಲ್ಲಿಯಲ್ಲಿ ಕೊಳೆನೀರು ಬರುತ್ತಿತ್ತು. ಕ್ಲೀನ್ ಮಾಡಬೇಕು. ಇಂಥ ಕೆಲಸವೆಲ್ಲಾ ಚಿಕ್ಕಂದಿನಿಂದ ನನ್ನದೇ. ಈಗ ನನ್ನ ಮಡಿಲಲ್ಲಿ ಕುಳಿತು ಮುದ್ದುಗರೆಯುತ್ತಿದ್ದ ರಾಘವಾಂಕನಿಗೆ ಹೇಳಿದೆ "ಮೇಲೆ ಟ್ಯಾಂಕ್ ಕ್ಲೀನ್ ಮಾಡೋಣ?" ಅಷ್ಟು ಹೇಳಿದ್ದೇ ತಡ, ಅದೆಲ್ಲಿತ್ತೋ ಉತ್ಸಾಹ, ದುಡುದುಡು ಓಡಿಹೋದ, ಒಂದು ಪುಟ್ಟ ಬಕೆಟ್ಟು, ಮಗ್ಗು ಮತ್ತೊಂದು ದೊಡ್ಡ ಬಕೆಟ್ ತಂದ. ತೊಟ್ಟಿ ಕ್ಲೀನ್ ಮಾಡುವ ಕ್ರಮ ಅವನಿಗೆ ಸಂಪೂರ್ಣ ಗೊತ್ತು. ಕೆಳಗೆ ನೆಲ್ಲಿಯಲ್ಲಿ ನೀರು ಬಿಟ್ಟು ಟ್ಯಾಂಕ್ ಖಾಲಿ ಮಾಡಬೇಕು. ಟ್ಯಾಂಕಿನ ನೀರು ತಳಮಟ್ಟ ಮುಟ್ಟಿದ ಮೇಲೆ ಟೆರೇಸಿನ ಮೇಲೆ ಹೋಗಿ ನಾನು ಟ್ಯಾಂಕಿನ ಕಟ್ಟೆಯ ಮೇಲೆ ಹತ್ತಬೇಕು; ದೊಡ್ಡ ಬಕೆಟ್ಟನ್ನು ಟ್ಯಾಂಕಿನ ಕಟ್ಟೆಯ ಕೆಳಗೆ ನೆಲದ ಮೇಲಿಡಬೇಕು; ಟ್ಯಾಂಕಿನ ತಳ ನನ್ನ ಕೈಗೆ ನಿಲುಕದ್ದರಿಂದ ಯಾರಾದರೊಬ್ಬರು ಅದರ ಒಳಗೆ ಇಳಿದು ಅಲ್ಲಿ ಉಳಿದ ನೀರು ಖಾಲಿ ಮಾಡಬೇಕು. ಅದಕ್ಕೆ ಎರಡಡಿ ಉದ್ದದ ರಾಘವಾಂಕನಲ್ಲದೆ ಇನ್ನಾರಿಗೆ ಸಾಧ್ಯ! ಅದು ಅವನ ಹಿಗ್ಗು. ಕ್ಲೀನ್ ಮಾಡುವ ಪರಿಕರಗಳನ್ನೆಲ್ಲಾ ಹೊತ್ತು ತಂದು, ಎಲ್ಲರಬಳಿಯೂ ಒಮ್ಮೆ ಹೋಗಿ ಹೇಳಿಕೊಂಡು ಬಂದ. ಅವನ ಅಮ್ಮನ ಬಳಿ ಹೋಗಿ "ಅಮ್ಮಾ, ಈಗ ಅಣ್ಣ ನನಗೆ ಟ್ಯಾಂಕ್ ಕ್ಲೀನ್ ಮಾಡಲು ಹೇಳಿದೆ. ನೀನು ನನ್ನ ಬಯ್ಯಕೂಡದು" ಎಂದು ತಾಕೀತಿನ ರೂಪದ ಅಪ್ಪಣೆ ಬೇಡಿದ್ದೂ ಆಯಿತು; ಅವಳು "ಸರಿ, ಅಪ್ಪ ಮಗನಿಗೆ ಇನ್ನೇನು ಕೆಲಸ, ಉರಿಬಿಸಿಲು, ಮಗು ನೀರಾಡಿ ಶೀತ ಬಂದರೆ ಡಾಕ್ಟರ ಬಳಿ ಹೋಗಲು ನಾನು ಗಟ್ಟಿಯಾಗಿದ್ದೀನಲ್ಲ" ಎಂದು ಆಕ್ಷೇಪಣಾರೂಪದ ಅನುಮತಿಯನ್ನು ನೀಡಿದ್ದೂ ಆಯಿತು. ನೀರಾಟದ, ಕ್ಷಮಿಸಿ, ಕ್ಲೀನ್ ಮಾಡುವ ಪರಿಕರಗಳನ್ನು ಹೊತ್ತು ನಾವಿಬ್ಬರೂ ಮೇಲೆ ನಡೆದೆವು.&lt;/div&gt;&lt;br /&gt;&lt;div align="justify"&gt;&lt;/div&gt;&lt;div align="justify"&gt;ಕೆಳಗೆ ನೆಲ್ಲಿ ಬಿಟ್ಟಿದ್ದರಿಂದ ಟ್ಯಾಂಕಿನ ನೀರು ತಳ ಮುಟ್ಟಿತ್ತು. ಇನ್ನಷ್ಟು ನೀರನ್ನು ಮೊಗೆದು ಈಚೆ ಸುರಿಯಬೇಕಿತ್ತು. ಮೇಲೆ ಬಿಸಿಲಿಗೆ ಟೆರೇಸು ಕಾದಿತ್ತು. ನಾನು ನೀರು ಮೊಗೆದು ಕೆಳಗಿದ್ದ ಬಕೀಟಿಗೆ ಸುರಿದರೆ, ರಾಘವಾಂಕ ಮತ್ತೊಂದು ಮಗ್ಗಿನಿಂದ ಅದನ್ನು ಮೊಗೆದು ಟೆರೇಸಿನ ಮೇಲೆ ಸುರಿಯುವುದು ವ್ಯವಸ್ಥೆ. ಆ ಹಿಗ್ಗನ್ನು ಮೊಗೆಯಲು ಅವನಾಗಲೇ ಉತ್ಸುಕನಾಗಿದ್ದ. ಹಿಗ್ಗು ಮೊಗದಲ್ಲಿ ಕುಣಿಯುತ್ತಿತ್ತು. ನಾನು ಮೇಲಿನಿಂದ ನೀರನ್ನು ಸುರಿಯಲು ಶುರು ಮಾಡಿದೆ. ಬಕೆಟ್ಟು ತುಂಬುವತನಕ ಕಾಯುವ ಮಾತೇ ಇಲ್ಲ. ಮಗ್ಗಿಗೆ ಸಿಕ್ಕಷ್ಟು ನೀರು ಮೊಗೆದು ಸಿಕ್ಕ ಸಿಕ್ಕಂತೆ ಎರಚತೊಡಗಿದ. ಪುಟ್ಟ ಮಗು ಇಷ್ಟಿಷ್ಟೇ ನೀರು ಎರಚಾಡುತ್ತಾ ಇಡೀ ಟೆರೇಸಿನ ತುಂಬಾ ಕುಣಿಯುತ್ತಿದ್ದರೆ, ಮೇಲಿನ ಸುಡುಬಿಸಿಲಿಗೂ ಅದರ ಲಯ ದಕ್ಕಿತ್ತು. ಮೋಡ ನೆರಳು ಬೆಳಕಿನಾಟ ನಡೆಸಿತ್ತು. ಮಕ್ಕಳನ್ನು ಬಿಸಿಲು ಸುಡುವುದುಂಟೇ? ಶೀತ ಮುಟ್ಟುವುದುಂಟೇ? ಇವಳಿಗೆಲ್ಲೋ ಭ್ರಾಂತು. ಮೇಲಿನ ಗದ್ದಲ ಕೇಳಿ ನನ್ನನ್ನು ಬೈಯಲೆಂದು ಮೇಲೆ ಬಂದ ಮಡದಿ, ಕುಣಿಯುತ್ತಿದ್ದ ಮಗನ ಚೆಲುವಿಗೆ ಮನಸೋತು ಕ್ಷಣ ನಿಂತು ಹಿಂದಿರುಗಿದಳು. ಅಲ್ಲೆಲ್ಲೋ ಏನೋ ಓದುತ್ತಿದ್ದ ನನ್ನ ತಮ್ಮ ಮೇಲೆ ಬಂದ. ಚಿಕ್ಕಪ್ಪನನ್ನು ನೋಡಿದ ಮಗುವಿಗೆ ಮತ್ತೂ ಉತ್ಸಾಹ. ಈ ಉತ್ಸಾಹದ ಭರದಲ್ಲಿ ನಾನು ಮೇಲಿನಿಂದ ಸುರಿಯುತ್ತಿದ್ದ ನೀರಿಗೆ ತಲೆ ಕೊಟ್ಟ. ತಲೆಯೆಲ್ಲಾ ತೊಯ್ದುಹೋಯ್ತು. ಒಂದು ಕ್ಷಣವಷ್ಟೇ ಚಕಿತನಾಗಿ ನಿಂತಿದ್ದು. ಮರುಕ್ಷಣ ಹಿಗ್ಗು ಕಿತ್ತು ಹರಿಯಿತು. ಸುಡುಬಿಸಿಲಿನಲ್ಲಿ, ಹಾಕಿಕೊಂಡಿದ್ದ ಬಟ್ಟೆ ಸಮೇತ ಅನಾಮತ್ತು ನೆನೆದಿತ್ತು ಮಗು. ಮುಂದಿನ ಒಂದು ಮಗ್ಗು ನೀರನ್ನು ಅವ ನೆಲಕ್ಕೆ ಸುರಿಯಲೇ ಇಲ್ಲ. ಸೀದಾ ತಲೆಯಮೇಲೆ ಸುರಿದುಕೊಂಡದ್ದೇ! ಆ ಕ್ಷಣಕ್ಕೆ ಅವನ ಮುಖ ನೋಡಬೇಕಿತ್ತು. ನೂರು ಭಾವದ ಮೆರವಣಿಗೆ, ನೀರಿನ ಕಟ್ಟಳೆ ಮೀರಿದ್ದೋ, ಅನಿರೀಕ್ಷಿತ ಸ್ನಾನವೋ, ಉಟ್ಟಬಟ್ಟೆ ಪೂರಾ ನೆಂದಿದ್ದೋ, ನೂರು ಬೆಳಕಿನ ಸಂತೆ ಅಲ್ಲಿತ್ತು. ಇಷ್ಟು ನೆನೆದ ಮೇಲೆ ಇನ್ನೇನು ಎಂದು ಇಡೀ ಬಕೆಟ್ಟಿನಲ್ಲಿದ್ದ ನೀರನ್ನು ತೆಗೆದು ಅನಾಮತ್ತಾಗಿ ಮೇಲೆ ಸುರಿದುಕೊಂಡು ದಬದಬನೆ ಕುಣಿಯಲಾರಂಭಿಸಿದ. ವಿಚಿತ್ರ ಉನ್ಮಾದ ಮುಖದಲ್ಲಿ ಕುಣಿಯುತ್ತಿತ್ತು. ಅವನ ಕಾಲಿನ ಹುಚ್ಚು ಲಯಕ್ಕೆ ಸಿಕ್ಕಿ ಟೆರೇಸು ಪೂರಾ ನರ್ತಿಸುತ್ತಿತ್ತು. ಆ ಕ್ಷಣಕ್ಕೆ ಆ ಮೊಗದಲ್ಲಿ ಮೂಡಿದ ಹಿಗ್ಗು, ಚೊಂಬು ನೀರಿನ ಕಿಂಚಿತ್ತಿನಿಂದ ಪಡೆದ ಧನ್ಯತೆಯ ಮಹತ್ತು, ನೋಡಿಯೇ ಅನುಭವಿಸಬೇಕಾದ್ದು. ಕೆಳಗೆಲ್ಲೋ ಕಾವ್ಯದ ಪುಸ್ತಕದಲ್ಲಿ ಮಲಗಿದ್ದ ನಿರ್ಜೀವ ಸಾಲುಗಳು ಜೀವ ಪಡೆದು ಕಣ್ಣ ಮುಂದೆ ನಿಂತಿತ್ತು.&lt;/div&gt;&lt;br /&gt;&lt;div align="justify"&gt;&lt;/div&gt;&lt;div align="justify"&gt;ಕಂಡಿತು ಕಣ್ಣು ಸವಿದಿತು ನಾಲಗೆ ಪಡೆದಿತೀ ದೇಹ&lt;br /&gt;ಸ್ಪರ್ಶಾ ಪಡೆದೀತೀ ದೇಹ&lt;br /&gt;ಕೇಳಿತು ಕಿವಿಯು ಮೂಸಿತು ಮೂಗು ತನ್ಮಯವೀ ಗೇಹ&lt;br /&gt;ದೇವರದೀ ಮನಸಿನ ಗೇಹಾ&lt;/div&gt;&lt;br /&gt;&lt;div align="justify"&gt;&lt;/div&gt;&lt;div align="justify"&gt;ಅಲ್ಲವೇ? ಮೈ-ಕೈ ಕಟ್ಟಿ ಕಿಟಕಿ-ಬಾಗಿಲು ಮುಚ್ಚಿ ಮಾಡುವ ಅದಾವ ಧ್ಯಾನ, ಅದಾವ ಯೋಗ ನೀರಾಟವಾಡಿದ ಈ ಪೋರನ ಆನಂದ ತರಬಲ್ಲುದು? ಚೈತನ್ಯದ ಪರಮ ಸುಖ ಮೈಯ ಮೂಲಕವೇ ಅಲ್ಲವೇ ಮನವನ್ನು ಮುಟ್ಟುವುದು. ಅದು ರಾಘವಾಂಕನ ನೀರಾಟವಿರಬಹುದು, "ಮಘಮಘಿಸುವ ಹೂವಿನ ಮೊಗ್ಗೀ" ಇರಬಹುದು, ಬೆಳಗಿನ ಚೈತನ್ಯಪೂರ್ಣ ಆನಂದವಿರಬಹುದು, ಅದು ಮೈಯ ಗೇಹದ ಮೂಲಕವೇ ಅಲ್ಲವೇ ಸುಳಿದು ಮನಸಿನ ದೇವರನ್ನು ಮುಟ್ಟುವುದು. ಇಂದ್ರಿಯವಾದದ ಕಾವ್ಯಮಯ ಪ್ರಸ್ತುತಿ ಇದೇ ಅಲ್ಲವೇ?&lt;/div&gt;&lt;br /&gt;&lt;div align="justify"&gt;&lt;/div&gt;&lt;div align="justify"&gt;ಕವಿಗೆ ಅದೊಂದು ಒಳಗಣ್ಣಿದೆ, ನಿಜ, ಆದರೆ ಅವನು ಹೊರಗಣ್ಣನ್ನು ಮುಚ್ಚಿ ಕೂಡುವುದಿಲ್ಲ. ಹೊರಗಣ್ಣಿಲ್ಲದೇ ಒಳಗಣ್ಣಿಲ್ಲ. ಅವನಿಗೆ ಪ್ರಪಂಚ ಇಂದ್ರಿಯಗಳ ಮೂಲಕವೇ ಒಳಗಿಳಿಯಬೇಕು; ಅದು ಕೊಡುವ ಸಮಸ್ತ ಅನುಭವಗಳೂ ಅವನಿಗೆ ಬೇಕು, ಬೇರೆಯವರಿಗಿಂತ ಹೆಚ್ಚು ಬೇಕು, ಯಾಕೆಂದರೆ, ಬೇರೆಯವರು ಅದನ್ನು ಸುಮ್ಮನೇ ಅನುಭವಿಸಿ ಮರೆಯುತ್ತಾರೆ, ಆದರೆ ಕವಿ ಹಾಗಲ್ಲ, ಪಡೆದದ್ದನ್ನು ನೂರ್ಮಡಿ ಅನುಭಿಸುತ್ತಾನೆ, ಅನುಭವಿಸಿ ಹಾಡುತ್ತಾನೆ, ಹಾಡಿ ತನ್ನ ಅನುಭವನ್ನು ಕಣ್ಣಿಗೆ ಕಟ್ಟುವಂತೆ, ಮನ ಮುಟ್ಟುವಂತೆ ಹಂಚುತ್ತಾನೆ.&lt;/div&gt;&lt;br /&gt;&lt;div align="justify"&gt;&lt;/div&gt;&lt;div align="justify"&gt;ಅದಕ್ಕೇ, ಹೆರರಿಗೆ ಇದು ಬರೀ ಬೆಳಗಾದರೆ, ಕವಿಗೆ ಅದು ಬರಿ ಬೆಳಗಲ್ಲ... ಅಮೂರ್ತವಾದ ಶಾಂತಿರಸದ ಮೂರ್ತರೂಪ. &lt;/div&gt;&lt;br /&gt;&lt;div align="justify"&gt;&lt;/div&gt;&lt;div align="justify"&gt;ಅರಿಯದು ಅಳವು ತಿಳಿಯದು ಮನವುಕಾಣಾದೋ ಬಣ್ಣಾ&lt;/div&gt;&lt;div align="justify"&gt;ಕಣ್ಣಿಗೆ ಕಾಣಾದೋ ಬಣ್ಣಾ&lt;/div&gt;&lt;div align="justify"&gt;ಶಾಂತಿರಸವೇ ಪ್ರೀತಿಯಿಂದಾಮೈದೊರೀತಣ್ಣಾ&lt;/div&gt;&lt;div align="justify"&gt;ಇದು ಬರಿ ಬೆಳಗಲ್ಲೋ ಅಣ್ಣಾ..&lt;/div&gt;&lt;br /&gt;&lt;div align="justify"&gt;&lt;/div&gt;&lt;div align="justify"&gt;ಸ್ವಭಾವತಃ ಅಮೂರ್ತವಾದ ಶಾಂತಿರಸ ಹೀಗೆ ಪ್ರೀತಿಯಿಂದ ಮುಂಜಾವಿನ ರೂಪದಲ್ಲಿ ಮೈದೋರದಿದ್ದರೆ, "ಅರಿಯದು ಅಳವು ತಿಳಿಯದು ಮನವು ಕಾಣಾದೋ ಬಣ್ಣಾ, ಕಣ್ಣಿಗೆ ಕಾಣಾದೋ ಬಣ್ಣಾ" ಎಂದು ಮೂರ್ತಕ್ಕೇ ಒಗ್ಗಿಕೊಂಡ ಈ ಮನಸ್ಸಿಗೆ ತನ್ನ ಸುತ್ತಮುತ್ತಲ ಈ ಚಿಲಿಪಿಲಿಯಲ್ಲೂ ಅಂತರ್ಗತವಾದ ಶಾಂತಿ ಅರಿವಿಗೆ ಬರುವುದಾದರೂ ಹೇಗೆ.&lt;/div&gt;&lt;br /&gt;&lt;div align="justify"&gt;&lt;/div&gt;&lt;div align="justify"&gt;ಮೂರ್ತದಿಂದ ಅಮೂರ್ತದೆಡೆಗೆ, ಹುಚ್ಚು ಉನ್ಮಾದದಿಂದ ಪರಮ ಶಾಂತಿಯೆಡೆಗೆ; ಲೋಕೋತ್ತರದ ಪಯಣಕ್ಕೆ ಹೆಬ್ಬಾಗಿಲು ಲೋಕವೇ ಅಲ್ಲವೇ?&lt;/div&gt;&lt;div class="blogger-post-footer"&gt;&lt;img width='1' height='1' src='https://blogger.googleusercontent.com/tracker/2037979210344114254-1940210495912100140?l=nannabaraha.blogspot.com' alt='' /&gt;&lt;/div&gt;</content><link rel='replies' type='application/atom+xml' href='http://nannabaraha.blogspot.com/feeds/1940210495912100140/comments/default' title='Post Comments'/><link rel='replies' type='text/html' href='http://www.blogger.com/comment.g?blogID=2037979210344114254&amp;postID=1940210495912100140&amp;isPopup=true' title='5 Comments'/><link rel='edit' type='application/atom+xml' href='http://www.blogger.com/feeds/2037979210344114254/posts/default/1940210495912100140'/><link rel='self' type='application/atom+xml' href='http://www.blogger.com/feeds/2037979210344114254/posts/default/1940210495912100140'/><link rel='alternate' type='text/html' href='http://nannabaraha.blogspot.com/2009/08/blog-post.html' title='ಕಂಡಿತು ಕಣ್ಣು ಸವಿದಿತು ನಾಲಗೆ ಪಡೆದೀತೀ ದೇಹಾ...'/><author><name>Manjunatha Kollegala</name><uri>http://www.blogger.com/profile/06597757236883289208</uri><email>noreply@blogger.com</email><gd:image rel='http://schemas.google.com/g/2005#thumbnail' width='27' height='32' src='http://2.bp.blogspot.com/-vcoeA-K0gYA/TtZ6WtTX2MI/AAAAAAAABB4/ruRIcS1H-FY/s220/manju1.JPG'/></author><thr:total>5</thr:total></entry><entry><id>tag:blogger.com,1999:blog-2037979210344114254.post-5698704410787845634</id><published>2009-07-12T02:27:00.000+05:30</published><updated>2009-07-12T21:10:35.376+05:30</updated><category scheme='http://www.blogger.com/atom/ns#' term='೦೨. ಕವನಗಳು'/><title type='text'>ನಮ್ಮೂರಲೊಂದು ಸುತ್ತು</title><content type='html'>ಬಹಳ ದಿನವಾಗಿತ್ತು;&lt;br /&gt;ಸಿಕ್ಕೆರಡು ಕ್ಷಣವ ದಿನಕೆಳೆದು, ಕಳೆಯಲು ಹೊತ್ತು,&lt;br /&gt;ಹೊರಟಿದ್ದೆ ನಾನಂದು ನಮ್ಮೂರಿಗೆ.&lt;br /&gt;&lt;br /&gt;ಬೆಂಗಳೂರಿಂದ ನಮ್ಮೂರು,&lt;br /&gt;ಬಹುದೂರ&lt;br /&gt;ಏನಿಲ್ಲ; ಮೂರು&lt;br /&gt;ಗಂಟೆಯ ಪಯಣ.&lt;br /&gt;(ಆದರೂ ಬೆಂಗಳೂರಿನ ಗಜಿ-&lt;br /&gt;ಬಿಜಿಯ ಮಂದಿಗೆ,&lt;br /&gt;ಹತ್ತಿರದ ಶೌಚವೂ ನಿತ್ಯ ಮರಣ)&lt;br /&gt;&lt;br /&gt;ಬಹುದೂರವೇನಿಲ್ಲ...&lt;br /&gt;ರಾಮನಗರ-&lt;br /&gt;ದಲ್ಲೊಂದು ಹಿಡಿ ಕಡಲೆ ಬೆಲ್ಲ;&lt;br /&gt;ಮದ್ದೂರಿನೊಂದು ಕಡೆ ಒಂದೆರಡು ವಡೆ&lt;br /&gt;ನಂಚಿಕೊಳ್ಳಲು ದೆವ್ವದ್ದೋ ಭೂತದ್ದೋ ಕತೆಯ ಕಂತೆ -&lt;br /&gt;ಮೆದ್ದು ಮುಗಿವುದರೊಳಗೆ&lt;br /&gt;ಅದೋ ಅಲ್ಲಿ,&lt;br /&gt;ಕೊಳ್ಳೆ-&lt;br /&gt;ಗಾಲ!&lt;br /&gt;ಕೊಳ್ಳೆ ಹೊಡೆದವರಿಲ್ಲ, ಗಾಲ ಪಿಡಿದವರಿಲ್ಲ,&lt;br /&gt;ಆದರೂ ನಮ್ಮೂರು,&lt;br /&gt;ಕೊಳ್ಳೆಗಾಲ.&lt;br /&gt;&lt;br /&gt;ಬೆಂಗಳೂರಿನ ಕಾಡಿಗೆನ್ನನಟ್ಟಿದಮೇಲೆ&lt;br /&gt;ಬಹಳ ಬದಲಾಗಿಹುದು&lt;br /&gt;ಊರು-ಕೇರಿ&lt;br /&gt;&lt;br /&gt;ಬಸ್ಸಿಳಿದ ಒಡನೆ&lt;br /&gt;ಮುರುಕು ಸೊಂಡಿಲ ಬೀಸಿ&lt;br /&gt;ಸ್ವಾಗತಿಪ ಗಣಪ ಕಾಣಲಿಲ್ಲ&lt;br /&gt;ಗೋಪುರದ ಮೇಲೆ&lt;br /&gt;ಝಗಝಗಿಸಿತ್ತು ಪಾಶಾಂಕುಶ ಕರ&lt;br /&gt;ರಕ್ತಾಂಬರಧರ&lt;br /&gt;ಲಂಬೋದರ&lt;br /&gt;ಮಂಡಿತ ಸೊಂಡಿಲು ಪೂರ!&lt;br /&gt;&lt;br /&gt;ಮೊಗದಿರುಹಿ&lt;br /&gt;ಎಡಕೆ ನಡೆದರೆ ಪೇಟೆ&lt;br /&gt;ಬೀದಿ&lt;br /&gt;ಮಾರ್ಕೆಟ್ ಚೌಕದ ಅರವಟ್ಟಿಗೆ ಜಾಗದಲ್ಲೀಗ&lt;br /&gt;ಹೊಸ ಮಸೀದಿ ಮಿನಾರ!&lt;br /&gt;ಮುಂದೀಗ ಮಾರುವರು ಕೋಕ-ಕೋಲ&lt;br /&gt;ಹಿಂದೆಯೇ ಶಿವನ ಗೋಪುರ ಬಸವ,&lt;br /&gt;ಮತ್ತದರ ಬಾಲ.&lt;br /&gt;&lt;br /&gt;ತರಕಾರಿ ಮಾರುಕಟ್ಟೆಯಲಿ ಸೊಪ್ಪನು ಮೆದ್ದು&lt;br /&gt;ಓಡುತಿದ್ದುವು ತೊಂಡು ದನದ ಹಿಂಡು&lt;br /&gt;ಮೂವತ್ತು ವರ್ಷಗಳ ಹಿಂದೆಯೂ ಇದೆ ಕೆಲಸ&lt;br /&gt;ಹಿಡಿದು ನಡೆಸಿತ್ತಿದರ ಪೂರ್ವಜರ ದಂಡು&lt;br /&gt;&lt;br /&gt;ಗುಡಿಬೀದಿಯಲಿ ನಾವು ಬಾಡಿಗೆಗಿದ್ದ ಮನೆ&lt;br /&gt;ಕೆಡವಿ&lt;br /&gt;ಹೊಸಮನೆ ಕಟ್ಟಿದ್ದಾರೆ;&lt;br /&gt;ಮನೆಮುಂದಿನೊಗೆಯುವ ಕಲ್ಲು,&lt;br /&gt;ನೆರೆಮನೆಯ ಹುಡುಗಿ&lt;br /&gt;ದಿನವು ಎದೆಯಲ್ಲಿ ಮಿಡಿಸುತ್ತಿದ್ದ ಝಲ್ಲು&lt;br /&gt;ಮುಗಿಲೆತ್ತರದ ತೆಂಗಿನ ಮರ&lt;br /&gt;ಕೆ&lt;br /&gt;ಹೆದೆಯೇರಿಸಿದ ಕಾಮ&lt;br /&gt;ನ ಬಿಲ್ಲು&lt;br /&gt;ಇಂದಿಲ್ಲ.&lt;br /&gt;&lt;br /&gt;ಮುಟ್ಟು ಚಟ್ಟಾದರೂ ಹೊತ್ತಿ ಉರಿಯುತ್ತಿದ್ದ&lt;br /&gt;ಹನುಮನ ಕಿತ್ತೆತ್ತಿ ತಂದು&lt;br /&gt;ಹೊಸ ಗುಡಿಯಲಿಟ್ಟಿದ್ದಾರೆ&lt;br /&gt;ಹಾರಿ ಹೋಗದ ಹಾಗೆ ಸರೀ ಕಟಕಟೆಯ ಕಟ್ಟಿದ್ದಾರೆ.&lt;br /&gt;&lt;br /&gt;ಪಾಂಡವರು ಪೂಜಿಸಿದ&lt;br /&gt;ಊರ ನಾರಾಯಣನ&lt;br /&gt;ದೇಗುಲಕೆ,&lt;br /&gt;ಹೊಸ ಬೊಂಬೆಗಳ ಜಡಿದು,&lt;br /&gt;ಮೇಲೆ ಬಣ್ಣವ ಬಡಿದು ಚೊಕ್ಕ ಮಾಡಿದ್ದಾರೆ.&lt;br /&gt;&lt;br /&gt;ಮಜ&lt;br /&gt;ಬೂತಾದ ತೇರಿಗೀಗೊಂದು ಭಾರಿಯ ಶೆಡ್ಡು.&lt;br /&gt;ತೇರ ತುಂಬೆಲ್ಲ ಗಿಜಿಗುಡುತಿದ್ದ&lt;br /&gt;ಪಡ್ಡೆದೆವ
