ಸಂಖ್ಯಾಬಂಧ: ೫ X ೫ ರ ಚೌಕವೊಂದರಲ್ಲಿ ಹೇಗೇ ಕೂಡಿದರೂ ಒಂದೇ ಮೊತ್ತ ಬರುವಂತೆ ಒಂದು ಬಂಧವನ್ನು ಪೃಚ್ಛಕ ಮೊದಲೇ ರಚಿಸಿಕೊಂಡು ಬಂದಿರುತ್ತಾನೆ. ಕಾರ್ಯಕ್ರಮದ ಮೊದಲಲ್ಲಿ ಅವಧಾನಿಗೆ ಈ ಮೊತ್ತವನ್ನಷ್ಟೇ ಆತ ಕೊಡುತ್ತಾನೆ. ಆಮೇಲೆ ಮಧ್ಯ ಮಧ್ಯ ಮನಬಂದಾಗ ಈ ಬಂಧದ ಒಂದು ನಿರ್ದಿಷ್ಟ ಮನೆಯಲ್ಲಿ ಬರುವ ಸಂಖ್ಯೆಯನ್ನು ಕೇಳುತ್ತಾನೆ. ಉದಾಹರಣೆಗೆ, ಮೂರನೆಯ ಸಾಲಿನ ನಾಲ್ಕನೆಯ ಮನೆಯಲ್ಲಿ ಬರುವ ಸಂಖ್ಯೆ ಎಷ್ಟು? ಅವಧಾನಿ ಮನಸ್ಸಿನಲ್ಲೇ ಬಂಧವನ್ನು ರಚಿಸಿಕೊಂಡು ಆಯಾ ಮನೆಯಲ್ಲಿ ಬರುವ ಸಂಖ್ಯೆಯನ್ನು ಪೃಚ್ಛಕನು ಕೇಳಿದಾಗಲೆಲ್ಲಾ ಹೇಳಬೇಕಾಗುತ್ತದೆ. ಅದನ್ನು ಪೃಚ್ಛಕನು ಪ್ರೇಕ್ಷಕರಿಗೆ ಮಾತ್ರ ಕಾಣುವಂತೆ ಬಂಧದಲ್ಲಿ ಬರೆಯುತ್ತಾ ಹೋಗುತ್ತಾನೆ. ಕೊನೆಯಲ್ಲಿ ಅವುಗಳನ್ನು ಕೂಡಿದಾಗ ಮೊದಲು ನೀಡಿದ ಮೊತ್ತ ಬಂದಿರಬೇಕು.
ನನ್ನ ಇತರ ಬ್ಲಾಗುಗಳು
ಶೀರ್ಷಿಕೆಗಳು
- ೦೧. ಒಳಹೋಗುವ ಮುನ್ನ ಒಂದು ನಿಮಿಷ... (1)
- ೦೨. ಕವನಗಳು (32)
- ೦೩. ಅನುವಾದಿತ (12)
- ೦೪. ಹನಿ-ಮಿನಿ; ಚೂರು-ಚುಟುಕ (5)
- ೦೫. ಕೆಲವು ವಚನಗಳು (4)
- ೦೬. ಪ್ರಚಲಿತ (14)
- ೦೭. ಲಹರಿ (15)
- ೦೮. ಭಾಷೆ (16)
- ೦೯. ಪ್ರವಾಸ (2)
- ೧೦. ಚುಚ್ಚಿದ್ದು - ಕಚ್ಚಿದ್ದು (9)
- ೧೧. ವಿಚಾರ (4)
- ೧೨. ನಾಟಕ/ಮಾತು-ಕತೆ/ಪ್ರಹಸನ... (1)
- ೧೩. ವ್ಯಕ್ತಿಗಳು (6)
- ೧೪. ಅರ್ಥಚಿಂತನೆ (2)
- ೧೫. ಪುಸ್ತಕ (2)
- ೧೬. ಕಾವ್ಯದ ಕುಣಿತ (ಪ್ರಾಸ ಛಂದಸ್ಸು ಇತ್ಯಾದಿ) (3)
- ೧೭ ಪಾಕ (2)
- ೧೮ ಸಂಗೀತರಚನೆಗಳು (3)
- ೧೯. ಭಾರತೀಯಕಾವ್ಯಮೀಮಾಂಸೆ (1)
- ೨೦. ಹಬ್ಬ-ಹರಿದಿನ (1)
- ೯೮. ಇತ್ಯಾದಿ... (6)
- ೯೯. ಇತರ ಬ್ಲಾಗ್ ಬರಹ ಸೇರ್ಪಡೆಗಳು (6)
Thursday, November 29, 2012
ಅವಧಾನಕಲೆ
ಸಂಖ್ಯಾಬಂಧ: ೫ X ೫ ರ ಚೌಕವೊಂದರಲ್ಲಿ ಹೇಗೇ ಕೂಡಿದರೂ ಒಂದೇ ಮೊತ್ತ ಬರುವಂತೆ ಒಂದು ಬಂಧವನ್ನು ಪೃಚ್ಛಕ ಮೊದಲೇ ರಚಿಸಿಕೊಂಡು ಬಂದಿರುತ್ತಾನೆ. ಕಾರ್ಯಕ್ರಮದ ಮೊದಲಲ್ಲಿ ಅವಧಾನಿಗೆ ಈ ಮೊತ್ತವನ್ನಷ್ಟೇ ಆತ ಕೊಡುತ್ತಾನೆ. ಆಮೇಲೆ ಮಧ್ಯ ಮಧ್ಯ ಮನಬಂದಾಗ ಈ ಬಂಧದ ಒಂದು ನಿರ್ದಿಷ್ಟ ಮನೆಯಲ್ಲಿ ಬರುವ ಸಂಖ್ಯೆಯನ್ನು ಕೇಳುತ್ತಾನೆ. ಉದಾಹರಣೆಗೆ, ಮೂರನೆಯ ಸಾಲಿನ ನಾಲ್ಕನೆಯ ಮನೆಯಲ್ಲಿ ಬರುವ ಸಂಖ್ಯೆ ಎಷ್ಟು? ಅವಧಾನಿ ಮನಸ್ಸಿನಲ್ಲೇ ಬಂಧವನ್ನು ರಚಿಸಿಕೊಂಡು ಆಯಾ ಮನೆಯಲ್ಲಿ ಬರುವ ಸಂಖ್ಯೆಯನ್ನು ಪೃಚ್ಛಕನು ಕೇಳಿದಾಗಲೆಲ್ಲಾ ಹೇಳಬೇಕಾಗುತ್ತದೆ. ಅದನ್ನು ಪೃಚ್ಛಕನು ಪ್ರೇಕ್ಷಕರಿಗೆ ಮಾತ್ರ ಕಾಣುವಂತೆ ಬಂಧದಲ್ಲಿ ಬರೆಯುತ್ತಾ ಹೋಗುತ್ತಾನೆ. ಕೊನೆಯಲ್ಲಿ ಅವುಗಳನ್ನು ಕೂಡಿದಾಗ ಮೊದಲು ನೀಡಿದ ಮೊತ್ತ ಬಂದಿರಬೇಕು.
Wednesday, February 1, 2012
ಕಾವ್ಯದ ಕುಣಿತ - ಮೊದಲ ಹೆಜ್ಜೆಗಳು 3: ಮಾತ್ರೆ-ಗಣ (ಮುಂದುವರೆದಿದೆ)
ಸುಮ್ಮನೆ ಒಂದು ಸಲ ನೆನಪಿಸಿಕೊಳ್ಳೋಣ. ಲಘುವನ್ನೇ ಬಳಸಿ ಎರಡು, ಮೂರು, ನಾಲ್ಕು, ಐದು ಮತ್ತು ಏಳು ಮಾತ್ರೆಗಳ ಗುಂಪಿರುವಂತೆ ಸಾಲುಗಳನ್ನು ರಚಿಸಿದೆವು, ಹಾಗೇ ಗುರುವನ್ನೇ ಬಳಸಿ ಎರಡು, ನಾಲ್ಕು ಮತ್ತು ಆರು ಮಾತ್ರೆಗಳ ಗುಂಪಿರುವಂತೆಯೂ ಸಾಲುಗಳನ್ನು ರಚಿಸಿದೆವು.
ಆದರೆ ನಾವು ಯಾವಾಗಲೂ ಬರೀ ಲಘುವಿನಲ್ಲಿ ಅಥವಾ ಬರೀ ಗುರುವಿನಲ್ಲಿ ಮಾತಾಡುತ್ತೀವಾ? ಖಂಡಿತಾ ಇಲ್ಲ. ನಮ್ಮ ಮಾತಲ್ಲಿ ಲಘು-ಗುರು ಎರಡೂ ರೀತಿಯ ಅಕ್ಷರಗಳು ಇದ್ದೇ ಇರುತ್ತವೆ ಅಲ್ಲವೇ? ಹಾಗೇ ಪದ್ಯದಲ್ಲೂ ಕೂಡ. ಯಾವುದೇ ಪದ್ಯವಾದರೂ ಲಘು-ಗುರುಗಳ ಮಿಶ್ರಣ. ಕೆಲವು ಅಕ್ಷರ ತುಂಡು (ಲಘು), ಕೆಲವಕ್ಕೆ ಎಳೆತ (ಗುರು). ಮೊದಲು ಮಾಡಿದೆವಲ್ಲ, ಮೂರು, ನಾಲ್ಕು, ಐದು, ಏಳು ಇತ್ಯಾದಿ ಲಯಬದ್ಧ ಗುಂಪು? ಅಲ್ಲಿ ಬರೀ ಲಘು ಅಥವ ಬರೀ ಗುರು ಬಳಸುವ ಬದಲು, ಲಘು ಮತ್ತು ಗುರು ಎರಡನ್ನೂ ಬೇರೆಬೇರೆ ರೀತಿಗಳಲ್ಲಿ ಬಳಸಿ ಬೇರೆ ಬೇರೆ ಲಯಗಳನ್ನು ಸೃಷ್ಟಿಸಬಹುದು.
ಇಲ್ಲಿ ನೋಡಿ (ಇದನ್ನು ಜೋರಾಗಿ ಹೇಳಿ):
ಬಳಸಿ ಬಳಸಿ ನುಡಿಯ ಬೇಡ ನೇರ ನುಡಿಯ ನೂ (ತಕಿಟ ತಕಿಟ ತಕಿಟ ತಕಿಟ ತಾತ ತಕಿಟ ತಾ ಎಂಬಂತೆ) [ಬಳಸಿ (UUU) ಬಳಸಿ (UUU) ನುಡಿಯ (UUU) ಬೇಡ ( _U) ನೇರ ( _U) ನುಡಿಯ (UUU) ನೂ - ಇಲ್ಲಿ ಮೂರುಮೂರು ಮಾತ್ರೆಯ ಜೊತೆ ಬಂದಿದೆ, ಆದರೆ ಕೆಲವು ಗುಂಪುಗಳಲ್ಲಿ ಎಲ್ಲವೂ ಲಘು, ಕೆಲವರಲ್ಲಿ ಲಘು-ಗುರುಗಳ ಮಿಶ್ರಣ]
ಗಣಪತಿ ಬಪ್ಪಾ ಬಂದಾ ನೋಡೂ (ತಕತಕ ತಾತಾ ತಾತಾ ತಾತಾ ಎಂಬಂತೆ) [ಗಣಪತಿ (UUUU) ಬಪ್ಪಾ ( _ _ ) ಬಂದಾ ( _ _ ) ನೋಡೂ ( _ _ ) - ನಾಲ್ಕುನಾಲ್ಕು ಮಾತ್ರೆಯ ಜೊತೆ, ಲಘು-ಗುರುಗಳ ಮಿಶ್ರಣ]
ತೂಕಡಿಸಿ ತೂಕಡಿಸಿ ಬೀಳದಿರು ತಮ್ಮಾ (ತಾತಕಿಟ ತಾತಕಿಟ ತಾತಕಿಟ ತಾತಾ ಎಂಬಂತೆ) [ತೂಕಡಿಸಿ ( _UUU) ತೂಕಡಿಸಿ ( _UUU) ಬೀಳದಿರು ( _UUU) ತಮ್ಮಾ ( _ _ ) - ಐದೈದು ಮಾತ್ರೆಗಳ ಜೊತೆ, ಲಘು ಗುರುಗಳ ಸೊಗಸಾದ ಮಿಶ್ರಣ ಇಲ್ಲಿ]
ಶಾಲೆಯಲಿ ನೀ ಓತ್ಲ ಹೊಡೆದರೆ ನಾಕು ಬಾರಿಸಿ ಬಿಡುವೆನು (ತಾತಕಿಟತಾ ತಾತಕಿಟತಕ ತಾತತಾಕಿಟ ತಕಿಟತಾ ಎಂಬಂತೆ) [ಶಾಲೆಯಲಿ ನೀ ( _UUU _) ಓತ್ಲ ಹೊಡೆದರೆ ( _U UUUU) ನಾಕು ಬಾರಿಸಿ ( _U _UU) ಬಿಡುವೆನು (UUUU) - ಏಳೇಳು ಮಾತ್ರೆಯ ಜೊತೆ, ಲಘು-ಗುರುಗಳ ಹದವಾದ ಮಿಶ್ರಣ ಇಲ್ಲಿದೆ]
ಗೆಳೆಯರೇ, ಇಷ್ಟು ಓದಿದಮೇಲೆ, ಹಾಡಿದ ಮೇಲೆ, ನಿಮಗೆ ಮಾತ್ರೆ-ಲಯದ ಮರ್ಮ ಅರ್ಥವಾಗಿರಬೇಕು. ಇನ್ನು ವಿಜೃಂಭಿಸಿ. ೧-೨ (ಲಘು-ಗುರು) ಗಳನ್ನು ವಿವಿಧ ರೀತಿಯಲ್ಲಿ ಬಳಸಿ ಎರಡೋ ಮೂರೋ ನಾಲ್ಕೋ ಹೀಗೆ ನಿಮ್ಮ ಮನಸ್ಸಿನಲ್ಲಿ ಮೂಡಿದ ಲಯದಲ್ಲಿ ಸಾಲುಗಳನ್ನು ರಚಿಸಿ. ನೆನಪಿರಲಿ, ಇದು ಕಾವ್ಯವಾಗಬೇಕಿಲ್ಲ, (ಕಾವ್ಯವಾದರೂ ತಪ್ಪಲ್ಲ) ಒಟ್ಟಿನಲ್ಲಿ ಲಯಬದ್ಧವಾದ, ಅರ್ಥಬದ್ಧವಾದ ಸಾಲುಗಳು ಬಂದರೆ ಸರಿ.
ಮತ್ತೆ ನೆನಪಿಸುತ್ತೇನೆ, ಬರೀ ಯಾಂತ್ರಿಕವಾಗಿ ಲಘು ಗುರುಗಳನ್ನು ಲೆಕ್ಕಹಾಕಿ ಬರೆಯಬೇಡಿ. ನೀವು ಬರೆದದ್ದು ನಿಮಗೇ ತಾಳಹಾಕಿಕೊಂಡು ಓದಲು ಸಿಗಬೇಕು. ಲಯ ಮನಸ್ಸಿನಲ್ಲಿ ಮೂಡಬೇಕಷ್ಟೇ ಬರೀ ಲೆಕ್ಕದಲ್ಲಿ ಅಲ್ಲ.
ಇದು ನಿಮ್ಮ ಹಿಡಿತಕ್ಕೆ ಸಿಕ್ಕಿದ ಮೇಲೆ ಮುಂದೆ ನೋಡೋಣ.
Tuesday, January 17, 2012
ಕಾವ್ಯದ ಕುಣಿತ - ಮೊದಲ ಹೆಜ್ಜೆಗಳು 2: ಮಾತ್ರೆ-ಗಣ (ಮುಂದುವರೆದಿದೆ)
ಸುಮ್ಮನೇ ಒಂದು ಸಲ ನೆನಪಿಸಿಕೊಳ್ಳೋಣ. ಲಘು ಅಂದರೆ ಒಂದು ಚಿಟುಕೆ ಹೊಡೆಯುವಷ್ಟು ಕಾಲ. ಗುರು ಅಂದರೆ ಅದರ ಎರಡರಷ್ಟು ಕಾಲ. ಆದ್ದರಿಂದ ಸಾಮಾನ್ಯವಾಗಿ ಎಲ್ಲ ಹ್ರಸ್ವಾಕ್ಷರಗಳೂ ಲಘು; ಎಲ್ಲಾ ಧೀರ್ಘಾಕ್ಷರಗಳೂ ಗುರು. ಒತ್ತಕ್ಷರದ ಹಿಂದಿನ ಅಕ್ಷರ ಅದೇನೇ ಇದ್ದರೂ ಗುರುವೇ. ಸರಳವಾಗಿ ತಿಳಿಯಲು ಇದಿಷ್ಟು ಈಗ್ಗೆ ಸಾಕು. ಈಗ ಬಳಕೆಯಲ್ಲಿ ಈ ಲಘು-ಗುರುಗಳನ್ನು ಸ್ವಲ್ಪ ನೋಡೋಣ.
ಈ ಸಾಲುಗಳನ್ನು ಜೋರಾಗಿ ಓದಿ:
ಚಿಲಿಪಿಲಿ ಉಲಿಯುತ ನಲಿವುದೆ ಸೊಗಸು (ತಕ ತಕ ತಕ ತಕ ಎಂಬಂತೆ - ಚಿಲಿ| ಪಿಲಿ| ಉಲಿ| ಯುತ| ನಲಿ| ವುದೆ| ಸೊಗ| ಸು - ಇಲ್ಲೆಲ್ಲಾ ಎರಡೆರಡು ಮಾತ್ರೆಯ ಜೊತೆಯಾಗಿ ಬಂದಿದೆ)
ಇಲಿಯು ಗಣಪಗೊಲಿಯಿತು (ತಕಿಟ ತಕಿಟ ತಕಿಟ ಎಂಬಂತೆ - ಇಲಿಯು| ಗಣಪ| ಗೊಲಿಯಿ| ತು - ಇಲ್ಲಿ ಮೂರುಮೂರು ಮಾತ್ರೆಯ ಜೊತೆಗಳು ಬಂದುವು)
ತಲೆಯನು ಪರಪರ ಕೆರೆಯುತಲಿಹಳು (ತಕತಕ ತಕತಕ ತಕತಕ ಎಂಬಂತೆ - ತಲೆಯನು| ಪರಪರ| ಕೆರೆಯುತ| ಲಿಹಳು| - ಇಲ್ಲಿ ನಾಲ್ಕು ನಾಲ್ಕು ಮಾತ್ರೆಯ ಜೊತೆ)
ಮನೆಗೆಲಸ ಮುಗಿಸದೆಯೆ ತರಗತಿಗೆ ಹೊರಟ (ತಕತಕಿಟ ತಕತಕಿಟ ತಕತಕಿಟ ಎಂಬಂತೆ - ಮನೆಗೆಲಸ| ಮುಗಿಸದೆಯೆ| ತರಗತಿಗೆ| ಹೊರಟ| - ಇಲ್ಲಿ ಐದೈದು ಮಾತ್ರೆಯ ಜೊತೆ)
ಮನೆಯ ಕೆಲಸವ ಬರೆದು ಮುಗಿಸದೆ ತರಗತಿಗೆ ಇವ ಹೊರಟನು (ತಕಿಟತಕತಕ ತಕಿಟತಕತಕ ಎಂಬಂತೆ - ಮನೆಯ ಕೆಲಸವ| ಬರೆದು ಮುಗಿಸದೆ| ತರಗತಿಗೆ ಇವ| ಹೊರಟನು| - ಇಲ್ಲಿ ಏಳೇಳು ಮಾತ್ರೆಯ ಜೊತೆ)
ಇಲ್ಲಿ ನೀವು ಗಮನಿಸಬೇಕಾದ್ದು ಮೇಲೆ ಬಳಸಿರುವುದೆಲ್ಲಾ ಲಘು (U) ಅಕ್ಷರಗಳೇ! ಅಂದರೆ ಕೇವಲ ಒಂದು ಮಾತ್ರೆಯ (ಒಂದು ಚಿಟುಕೆ ಹೊಡೆಯುವಷ್ಟೇ) ಅಕ್ಷರಗಳು.
ಇದೇ ರೀತಿ ಕೆಲವು ಅಭ್ಯಾಸಗಳನ್ನು ಮಾಡೋಣವೇ? ಮೇಲೆ ಹೇಳಿದ ಯಾವುದಾದರೂ ಲಯದಲ್ಲಿ, ಬರೀ ಲಘು ಅಕ್ಷರಗಳನ್ನೇ ಬಳಸಿ ಏನಾದರೂ ಬರೆಯಿರಿ (ಅದು ಅದ್ಭುತ ಕಾವ್ಯವಾಗಿರಬೇಕಿಲ್ಲ, ಏನಾದರೂ ಆಗಬಹುದು)
ಈಗ ಈ ಸಾಲುಗಳನ್ನು ಜೋರಾಗಿ ಓದೋಣ.
ಕಾ ಕಾ ಕಾಗೇ ಬಂತೂ ನೋಡೀ (ತಾ ತಾ ತಾ ತಾ ಎಂಬಂತೆ - ಕಾ| ಕಾ| ಕಾ| ಗೇ| ಬಂ| ತೂ| ನೋ| ಡೀ| - ಇಲ್ಲಿ ಎರಡೆರಡು ಮಾತ್ರೆಗಳು ಬಂದಿದಿವೆ, ಆದರೆ ಒಂದೊಂದರ ಎರಡು ಲಘುವಿನ ಬದಲು ಒಂದೇ ಗುರು ಬಂದಿದೆ)
ಬಂದಾ ಬಂದಾ ಚಂದಾ ಮಾಮಾ (ತಾತಾ ತಾತಾ ತಾತಾ ತಾತಾ ಎಂಬಂತೆ - ಬಂದಾ| ಬಂದಾ| ಚಂದಾ| ಮಾಮಾ| - ಇಲ್ಲಿ ನಾಲ್ಕು ನಾಲ್ಕು ಮಾತ್ರೆಯ ಜೊತೆ, ಅಂದರೆ ಒಂದೊಂದು ಗುಂಪಿನಲ್ಲೂ ಎರಡೆರಡು ಗುರು)
ರಂಗಯ್ಯಾ ಬಂದವ್ನೇ ಬಾಗ್ಲಲ್ಲೀ ನಿಂದವ್ನೇ (ತಾತಾತಾ ತಾತಾತಾ ತಾತಾತಾ ತಾತಾತಾ ಎಂಬಂತೆ - ರಂಗಯ್ಯಾ| ಬಂದವ್ನೇ| ಬಾಗ್ಲಲ್ಲೀ| ನಿಂದವ್ನೇ| - ಇಲ್ಲಿ ಆರಾರು ಮಾತ್ರೆಯ ಜೊತೆ, ಅಂದರೆ ಒಂದೊಂದು ಗುಂಪಿನಲ್ಲೂ ಮೂರುಮೂರು ಗುರು)
ಇಲ್ಲಿ ನೀವು ಗಮನಿಸಬೇಕಾದ್ದು ಮೇಲೆ ಬಳಸಿರುವುದೆಲ್ಲಾ ಗುರು ( _ ) ಅಕ್ಷರಗಳೇ! ಅಂದರೆ ಎರಡು ಮಾತ್ರೆಯ (ಎರಡು ಚಿಟುಕೆ ಹೊಡೆಯುವಷ್ಟು) ಅಕ್ಷರಗಳು.
ಇದೇ ರೀತಿ ಕೆಲವು ಅಭ್ಯಾಸಗಳನ್ನು ಮಾಡೋಣವೇ? ಮೇಲೆ ಹೇಳಿದ ಯಾವುದಾದರೂ ಲಯದಲ್ಲಿ, ಬರೀ ಗುರು ಅಕ್ಷರಗಳನ್ನೇ ಬಳಸಿ ಏನಾದರೂ ಬರೆಯಿರಿ
ಗೆಳೆಯರೇ, ಇಲ್ಲಿಂದಾಚೆಗೆ ಇದು ನಿಮ್ಮೆಡೆಯಿಂದ ತುಸು ಅಭ್ಯಾಸವನ್ನು ನಿರೀಕ್ಷಿಸುತ್ತದೆ. ಅಭ್ಯಾಸರೂಪದ ಪ್ರತಿಕ್ರಿಯೆಗಳು ಬಂದಷ್ಟೂ ಮುಂದುವರೆಸಲು ಹುರುಪು.
ಇದು ಸ್ವಲ್ಪ ಕೈವಶವಾದ ನಂತರ ಮುಂದುವರೆಯೋಣ.
ಈ ಸರಣಿಯ ಮುಂದಿನ ಬರಹ ಇಲ್ಲಿದೆ.
Monday, January 9, 2012
ಚೊಚ್ಚಿಲ ಕಂದನನ್ನು ಕಾಯುತ್ತಾ
ಮುಗಿಲ ಮೊದಲನೆ ಮಳೆಗೆ ನೆನೆದ ಮಣ್ಣಿನ ಕಂಪು
ಮುಗಿದ ಹಚ್ಚನೆ ಮೊಗ್ಗು ಬಿರಿವ ಕೆಂಪು
ಬಗೆ-ಮೈಗಳುಬ್ಬೆ ಮೊದಲಬ್ಬೆತನದಾ ಪೆಂಪು
ನಗೆಸೂಸಿ ಹರಡುತಿದೆ ಮನೆಗೆ ತಂಪು.
ಉತ್ಫಲಮಾಲಾ
ಬೆಚ್ಚನೆ ರಾತ್ರೆಯೊಳ್ ಮನದಿ ಶಂಕೆಯು ಹಿಗ್ಗುತ ಚುಚ್ಚಿ ಕಾಡಿರಲ್
ಬೆಚ್ಚುತ ಚಿಂತಿಪಳ್ ಮಗುವಿದೇಂ ಮಲಗಿಪ್ಪುದೊ ಸತ್ತುದೊ ಕಾಣೆನೇ ಶಿವಾ
ಮುಚ್ಚಿದ ಕಂಗಳೊಳ್ ನಿದಿರೆ ಬಾರದೆ ಬೇಗುದಿ ಭಾರವಾಗಿರಲ್
ಕೆಚ್ಚನೆ ಕಾಲೊಳೊದ್ದು ಬಸಿರಂ ತನಯಂ ಹಿರಿ ಚಿಂತೆನೀಗುವಂ
ಕಂದ
ಕಂದಂ ಬಸಿರೊದೆವಂದಂ
ಬಂಧುರಮೀ ತಾಯ್ ಕುಲಾವಿಗನಸಿನ ಚಂದಂ
ಕಂದಂ ನಸುನಗುವೋಲ್ ಮೇಣ್
ಮುಂದೋಡುತ ಬಿಳ್ದು ಭೋರಿಡುವವೋಲ್ ನೆನೆವಳ್
ಮತ್ತೇಭವಿಕ್ರೀಡಿತ
ಮೆರೆವಳ್ ಮೋದದಿ ಮತ್ತೆ ಮೈಯ ಮರೆವಳ್ ಮತ್ತಾಲಸಂ ಬಾಧಿಸಲ್
ಒರಗುತ್ತುಂ ಕಿರು ಮಂಚದೊಳ್ ನಲುಮೆ ತೋಳ್ ಸಾಂಗತ್ಯಮಂ ಧೇನಿಪಳ್
ಕಿರಿದೊಂದೇ ಕ್ಷಣದೊಳ್ ಮನೋನಯನದೊಳ್ ಕಂದಂ ನಗುತ್ತೈತರಲ್
ಸಿರಿಯಂ ಕಂಡವೊಲಾಗಿ ಕಂಡ ಕನಸೊಳ್ ತೇಲುತ್ತಲಾನಂದಿಪಳ್
ರಗಳೆ
ಮೊದಲಿನ ಹಿಗ್ಗದು ಆಗಸಮುಟ್ಟಲ್
ಬೆದರಿಪ ಭಯವದು ಮೈ ಮನ ತಟ್ಟಲ್
ಬಗೆಬಗೆ ಬಯಕೆಯ ತೆನೆಯೊಡೆಯುತಿರಲ್
ಚಿಗುರುವ ಲತೆಯೊಲ್ ಬಸಿರದು ಬೆಳೆಯಲ್
ತೆಗೆವಾ ನೋವದು ಬೆಳೆದಿರೆ ಒಡಲೊಳ್
ಬಗೆಯೊಳ್ ಕಂದಂ ನೋವ ಮರೆಸಿರಲ್
ಬೆವರುತ ಸುಖದೊಳ್ ಬೆದರುತ ಭಯದೊಳ್
ನವೆವಳ್ ಬೆಳೆವಳ್ ಚೊಚ್ಚಲ ಬಸಿರೊಳ್
ಆರರ ಮೇಲಿನೊಂದು ಗಣ ದೋಷಮದುತ್ಫಲ ಮಾಲೆಗೆಂದಪರ್
ಮೀರಿರೆ ಪದ್ಯದಂದಗಿಡುಗುಂ ಸರಿ ತೋರದು ಛಂದಕೆಂದಿರಲ್
ಆರನೆ ಕಾಲ್ವೆರಲ್ ದೊರೆಯ ಕಂದನ ಚಂದವ ಕೀಳುಗಟ್ಟಿತೇಂ
ಮೀರಿದ ಭಾರಮುತ್ಫಲಿತ ಗರ್ಭಕೆ ಶೋಭೆಯ ತರ್ಪುದೇ ದಿಟಂ
ಮರೆಯಲ್ ಭಾವದದೊಂದು ಜೋರ ಸೆಳೆಯೊಳ್ ಮೇಲಾಗಿ ಮೂರಕ್ಕರಂ
ನೆರೆಯಲ್ ತಾಳವು ತಪ್ಪಿ ಮುಗ್ಗರಿಸಲುಂ ಛಂದಸ್ಸದೇಂ ಬೇರೆಯೇಂ?
ಸರಿಯೈದೇವೆರಲಿದ್ದೊಡಂ ಮನುಜಗಾರಾಯ್ತೆಂದು ಬೇರಾದನೇಂ?
ಮರೆವೀ ಮಾನವ ಜನ್ಮಜಾತ ಗುಣವೈ ಬ್ರಹ್ಮಾದಿಗಳ್ ಮೀರರೇಂ?
Saturday, January 7, 2012
ಕಾವ್ಯದ ಕುಣಿತ - ಮೊದಲ ಹೆಜ್ಜೆಗಳು 1: ಲಘು-ಗುರು
ಆದರೆ ನನ್ನ ಈ ಲೇಖನ ಸರಣಿಯ audience ಈ ಗಂಭೀರ ವಿದ್ಯಾರ್ಥಿಗಳೂ ಅಲ್ಲ - ಈಗಷ್ಟೇ ಪದ್ಯರಚನೆಗೆ ಕೈಹಾಕಿ, ನವ್ಯ ಕವನಗಳ ಮಾದರಿಯ ಗದ್ಯರೂಪದ ಪದ್ಯಗಳನ್ನು ಬರೆಯುತ್ತಾ, ಛಂದಸ್ಸು, ಹಳಗನ್ನಡ ಇವುಗಳ ಗಂಧಗಾಳಿಯೂ ಇಲ್ಲದಿದ್ದರೂ ಛಂದೋಬದ್ಧವಾಗಿ ರಚಿಸಬೇಕೆಂಬ ಆಸಕ್ತಿ, ಆದರೆ ಲಘು-ಗುರುಗಳ ಮಾತ್ರೆ ನುಂಗಲು ಹೇವರಿಕೆ ಇವೆರಡೂ ಸಮಾನವಾಗಿ ಸಮ್ಮಿಳಿತವಾಗಿರುವ ಉತ್ಸಾಹೀ ಕವಿ ಕಿಶೋರರಿಗೆ, ಕಿಶೋರ ಕವಿಗಳಿಗೆ ಈ ಸರಣಿ ಅರ್ಪಿತ. ಅದಕ್ಕೆಂದೇ ತೀರ ತೀರ ಪ್ರಾಥಮಿಕ ಮಟ್ಟದಿಂದ ಆರಂಭಿಸಿ ಛಂದೋಪ್ರಪಂಚದ ಕೆಲವು ಹೊಳಹುಗಳನ್ನಷ್ಟೇ ಕಾಣಿಸುವುದು ಈ ಸರಣಿಯ ಉದ್ದೇಶ. ಇದರಿಂದ ಕಾವ್ಯಕ್ಕೆ ಲಯಪ್ರಾಸಗಳೂ ರುಚಿಕರ ವ್ಯಂಜನ ಹೌದೆಂಬ ವಿಷಯ ಉತ್ಸಾಹೀ ಓದುಗರ ಮನಕ್ಕೆ ಹತ್ತಿದರೆ, ಛಂದಸ್ಸನ್ನು ಗಂಭೀರವಾಗಿ ಅಧ್ಯಯನಮಾಡಬೇಕೆಂಬ ಹುಕ್ಕಿ ಬಂದರೆ, ನಾನು ಧನ್ಯ. ಒಮ್ಮೆ ಇದು ಬಂದಮೇಲೆ ಮೇಲ್ಕಾಣಿಸಿದ ಪುಸ್ತಕ-ಜಾಲತಾಣಗಳಿದ್ದೇ ಇವೆ; ಜೊತೆಗೆ ಅಪಾರ ಸಾಹಿತ್ಯವೂ ಇದೆ.
ಸರಣಿಯ ಹೆಸರೇ ಸೂಚಿಸುವಂತೆ ಕಾವ್ಯದ ಕುಣಿತದ ಭಾಗವನ್ನು ತೋರಿಸುವುದೇ ಈ ಸರಣಿಯ ಉದ್ದೇಶ. ಕುಣಿತ ಎಂಬುದರ ಬದಲು ನಡಿಗೆಯೆಂಬುದು ಹೆಚ್ಚು ಗಂಭೀರವಾಗಿರುತ್ತಿತ್ತಲ್ಲವೇ ಎಂಬ ಪ್ರಶ್ನೆಗೆ, "ಹೌದು, ಅದಕ್ಕೇ ನಡಿಗೆಯ ಬದಲು ಕುಣಿತ ಆದದ್ದು" ಎಂಬುದು ನನ್ನ ಉತ್ತರ. ಮೊದಲೇ ಹೇಳಿದಂತೆ ಕಾವ್ಯದ ಗಂಭೀರ ನಡಿಗೆಯನ್ನೂ ಗಜಗಮನವನ್ನೂ ತೋರಿಸುವ ಅನೇಕ ಪ್ರೌಢಾತಿಪ್ರೌಢ ಗ್ರಂಥಗಳು ಈಗಾಗಲೇ ಇವೆ. ಆದರೆ ಆಡುವ ಮಕ್ಕಳಿಗೆ ಬ್ರಹ್ಮಸೂತ್ರದಿಂದೇನು ಪ್ರಯೋಜನ?
ಮೊದಲೇ ಹೇಳಿದಂತೆ ಈ ಸರಣಿ ಕೇವಲ ಆರಂಭಿಕರಿಗೋಸ್ಕರ. ಪರಿಭಾಷೆಯನ್ನು ಆದಷ್ಟು ಕಡಿಮೆಗೊಳಿಸುವುದು ಇಲ್ಲಿ ಉದ್ದೇಶ. ಹಾಗೂ ಬಳಸಿದ ಪರಿಭಾಷೆಯಲ್ಲಿ ಸೂಕ್ಷ್ಮ ಅದಲುಬದಲು (interchange) ಆಗಲೂ ಬಹುದು. ಈ ಸರಣಿಯಲ್ಲಿ ಒಂದೊಂದು ಲೇಖನವೂ ಒಂದೊಂದು ಹೊಸ ವಸ್ತು-ವಿಷಯವನ್ನೊಳಗೊಂಡಿರುತ್ತದೆ. ಬರೆದಿದ್ದಕ್ಕೆ ತಕ್ಕಷ್ಟು ಉದಾಹರಣೆಗಳನ್ನೂ ಕೊಡುತ್ತೇನೆ. ಇದರ ಉದ್ದೇಶ ಸುಮ್ಮನೇ ಬರೆದು ಮರೆಯುವುದಲ್ಲ. ಆಸಕ್ತರು ತಾವೂ ಆಯಾ ಪ್ರಕಾರದಲ್ಲಿ ಪದ್ಯವನ್ನು ರಚಿಸಲು ಪ್ರಯತ್ನಿಸಬಹುದು. ನಿಜಕ್ಕೂ ಇದೊಂದು ಆಟದಂತೆ, ಹರಟೆ ಕಟ್ಟೆಯಂತೆ ಚೇತೋಹಾರಿಯಾಗಬೇಕೆಂದು ನನ್ನ ಆಸೆ. ಇಲ್ಲಿ ನೀವು ಮಾಮೂಲಾಗಿ ಹರಟಿದರೂ ಅಡ್ಡಿಯಿಲ್ಲ, ಒಬ್ಬರು ಇನ್ನೊಬ್ಬರ ಕಾಲೆಳೆದರೂ ಅಡ್ಡಿಯಿಲ್ಲ, ಆದರೆ ಒಂದೇ ಒಂದು ಶರತ್ತೆಂದರೆ ಹರಟಿದರೂ ಪದ್ಯದಲ್ಲೇ ಹರಟಬೇಕು, ಕಾಲೆಳೆದರೂ ಪದ್ಯದಲ್ಲೇ ಕಾಲೆಳೆಯಬೇಕು, ಒದ್ದರೂ ಪದ್ಯದಲ್ಲೇ ಒದೆಯಬೇಕು [:)]
ಇನ್ನು ಮುಂದುವರೆಯೋಣ. ಮೊದಲಿಗೆ, ಛಂದಸ್ಸು ಅಂದ್ರೆ ಏನು? ಛಂದಸ್ಸು ಅಂದ್ರೆ, ಕವನಕ್ಕೆ ಬೇಕಾದ ಲಯ, ಪ್ರಾಸಗಳ ಕಟ್ಟುಪಾಡು. ಅರೇ, ಒಂದು ನಿಮಿಷ! ಈ ಲಯ ಅಂದ್ರೆ ಏನಪ್ಪಾ?!!
ಈ ಕೆಳಗಿನ ಸಾಲುಗಳನ್ನು ನೋಡಿ (ಜೋರಾಗಿ ಹೇಳಿ, ಬೇಕಿದ್ರೆ ಕೈ ಚಪ್ಪಾಳೆ ಹಾಕಿಕೊಂಡು ಹೇಳಿ):
ಅನಂತದಿಂ ದಿಗಂತದಿಂ
ಅನಂತದಾ ದಿಗಂತದಿಂ|
ಏನಿದು ಧೂಳೀ ಓಹೋ ಗಾಳೀ
ಸುರ್ರನೆ ಬಂತೈ ಸುಂಟರಗಾಳೀ|
ಆಟಕ್ಕುಂಟೂ ಲೆಕ್ಕಕ್ಕಿಲ್ಲಾ|
ಬಂದಾ ಬಂದಾ ಸಣ್ ತಮ್ಮಣ್ಣಾ|
ಬೇಕೇ ಬೇಕೂ
ನ್ಯಾಯಾ ಬೇಕೂ|
ಲಗ್ಗ ಲಗಾ ಲಗಾ ಲಗಾ
ಲಗ್ಗ ಲಗಡಿ ಲಗಾ ಲಗಾ|
ಇಲ್ಲೊಂದು ಕುಣಿತದ ಸ್ಥಿತಿ ಕಾಣುತ್ತದೆ ಅಲ್ಲವೇ? ಅದೇ ಲಯ/rhythm. ಅದು ಹೇಗೆ ಬಂತು? ಹೇಗೆ ಅಂದ್ರೆ, ಕೆಲವು ಅಕ್ಷರಗಳು ಚಿಕ್ಕವು, ಕೆಲವು ಉದ್ದ; ಕೆಲವಕ್ಕೆ ಕಡಿಮೆ ಕಾಲ ತೆಗೆದುಕೊಂಡರೆ ಕೆಲವಕ್ಕೆ ಜಾಸ್ತಿ ಕಾಲ. ಅದಕ್ಕೇ ಅಲ್ಲೊಂದು ಕುಣಿತದ ಲಯ ಮೂಡಿಬರುತ್ತದೆ. ಅನೇಕ ವೇಳೆ ನಮಗೆ ಅರಿವಿಲ್ಲದೇ ನಾವು ಲಯಬದ್ಧವಾಗಿ ಮಾತಾಡಿಬಿಡುತ್ತೇವೆ. ಇನ್ನು ಮೇಲಿನ ಉದಾಹರಣೆ ತಗೊಂಡ್ರೆ, "ಅನಂತ" ಅನ್ನೋ ಪದಾನೇ ನೋಡಿ. ಅ ಎನ್ನುವ ಅಕ್ಷರದ ಎರಡರಷ್ಟು ಸಮಯ ನಂ ಅನ್ನುವ ಅಕ್ಷರಕ್ಕೆ ಬಂತು; ಹಾಗೇ ತ ಎಂಬ ಅಕ್ಷರವು ಅ ಎಂಬ ಅಕ್ಷರದಷ್ಟೇ ಸಮಯ ತೆಗೆದುಕೊಂಡಿತು. ಹೀಗೆ ಒಂದು ಎರಡರಷ್ಟು ಸಮಯ ತೆಗೆದುಕೊಳ್ಳುವ ಅಕ್ಷರಗಳನ್ನು ಯಾವುದೋ ಕ್ರಮದಲ್ಲಿ ಜೋಡಿಸಿದರೆ ಅಲ್ಲಿ ಲಯ ಮೂಡುತ್ತದೆ. ಉದಾಹರಣೆಗೆ ಲ(2)ಗ್ಗ(1) = 3; ಲ(1)ಗಾ(2) = 3; ಲ(1)ಗಾ(2) = 3; ಲ(1)ಗಾ(2) = 3 ಇಲ್ಲಿ ಮೂರುಮೂರಕ್ಷರದ 123,123,123,123 ಎನ್ನುವ ಲಯವನ್ನು ಕಾಣುತ್ತೇವಲ್ಲವೇ (ಮತ್ತೆ ಜೋರಾಗಿ ಓದಿ ನೋಡಿ)?
ಅಂದರೆ ಅಕ್ಷರಗಳನ್ನು ನುಡಿಯುವ ಕಾಲಾವಧಿಯೇ ಲಯಕ್ಕೆ ಮೂಲ ಎಂದಾಯಿತು. ಈ ಕಾಲಾವಧಿಯನ್ನೇ ಮಾತ್ರಾಕಾಲ ಅಂತೀವಿ. ಮಾತ್ರೆ ಎಂದರೆ ಒಂದು ಚಿಟಿಕೆ ಹಾಕುವಷ್ಟು ಕಾಲ (ಮಾತ್ರೆ ಅಂದ್ರೆ tablet ಅನ್ಕೊಂಡೀರಿ ಮತ್ತೆ [:)] ).
ಈ ಅಕ್ಷರಗಳನ್ನು ಎಲ್ಲೂ ನಿಲ್ಲಿಸದೇ ಜೋರಾಗಿ ಹೇಳಿ ನೋಡಿ:
ಅ, ಇ, ಉ, ಋ, ಎ, ಒ
ಕ, ಖ, ಗ, ಘ, ಙ, ಯ, ರ, ಲ, ವ...
ಇವನ್ನು ಹೇಳಲು ಒಂದು ಚಿಟಿಕೆಯಷ್ಟು ಕಾಲವಷ್ಟೇ ಬೇಕಾಗುವುದು. ಇದಕ್ಕೆ ಛಂದಸ್ಸಿನ ಭಾಷೆಯಲ್ಲಿ "ಲಘು" ಎನ್ನುತ್ತೇವೆ. ಬರಹದಲ್ಲಿ ಇದನ್ನು ( U ) ಎಂದು ಸೂಚಿಸುತ್ತೇವೆ.
ಇನ್ನು ಇವನ್ನು ಜೋರಾಗಿ ಹೇಳಿ:
ಆ, ಈ, ಊ, ೠ, ಏ, ಐ, ಓ, ಔ, ಅಂ, ಅಃ,
ಕಾ, ಖಾ, ಗಾ, ಘಾ, ಗೀ, ಮೀ, ಯೂ, ಲೇ, ರೌ...
ಇವನ್ನು ಹೇಳಲು ಮೇಲಿನ ಎರಡರಷ್ಟು ಕಾಲ ಬೇಕಾಗುವುದು (ಎರಡು ಚಿಟಿಕೆಯಷ್ಟು ಎನ್ನೋಣ). ಇದಕ್ಕೆ ಛಂದಸ್ಸಿನ ಭಾಷೆಯಲ್ಲಿ "ಗುರು" ಎನ್ನುತ್ತೇವೆ. ಬರಹದಲ್ಲಿ ಇದನ್ನು ( _ ) ಎಂದು ಸೂಚಿಸುತ್ತೇವೆ.
ಗಮನಿಸಿ: ಯಾವುದಾದರೂ ಒತ್ತಕ್ಷರದ ಹಿಂದಿರುವ ಅಕ್ಷರ ಸಹಜವಾಗಿಯೇ ಎಳೆಯುತ್ತದೆ. ಉದಾಹರಣೆಗೆ, ಅಣ್ಣ. ಇಲ್ಲಿ ಅ ಎನ್ನುವುದು ಒಂದೇ ಚಿಟುಕೆಯಲ್ಲಿ ಪೂರೈಸುವ ಅಕ್ಷರವಾದರೂ ಮುಂದೆ ಣ್ಣ ಇರುವುದರಿಂದ ಅ ಎಂಬ ಅಕ್ಷರ ಆ ಎಂಬಷ್ಟೇ ಕಾಲವನ್ನು ತೆಗೆದುಕೊಳ್ಳುತ್ತದೆ.
ಈ ಪದಗಳನ್ನು ಜೋರಾಗಿ ಹೇಳಿ ನೋಡಿ: ಅಣ - ಅಣ್ಣ, ಹಿಗು - ಹಿಗ್ಗು; ಬಕ - ಭಕ್ಷ್ಯ - ಇಲ್ಲೆಲ್ಲಾ ಮೊದಲನೆಯ ಪದದಲ್ಲಿ ಅ ಎನ್ನುವ ಅಕ್ಷರ ಮಾಮೂಲಾಗೇ ಬಂತು. ಎರಡನೆಯ ಪದಗಳಲ್ಲಿ ಅ ಎನ್ನುವುದು ಎರಡರಷ್ಟು ಸಮಯ ತೆಗೆದುಕೊಂಡಿತು.
ಆದ್ದರಿಂದ ಒತ್ತಕ್ಷರದ ಹಿಂದಿನ ಅಕ್ಷರವು ಲಘುವಾಗಿದ್ದರೂ ಅದನ್ನು ಗುರುವೆಂದೇ ಲೆಕ್ಕಹಾಕಬೇಕು
ಈ ಸರಣಿಯ ಮುಂದಿನ ಬರಹ ಇಲ್ಲಿದೆ.
Wednesday, December 21, 2011
ಹಾಯ್ಕುಗಳು
ನಮ್ಮ ಹನಿಗವನಗಳಂತೆ ಅಂದೆ, ಆದರೆ ನಮ್ಮ ಹನಿಗವನಗಳಂತೆ ಅಳತೆಯಿಲ್ಲದ ಕವನಗಳಲ್ಲ ಇವು. ನಮ್ಮ ಹಳೆಗನ್ನಡದ ಕಂದಪದ್ಯಗಳಂತೆ ಚುಟುಕು, ಆದರೆ ಲೆಕ್ಕಾಚಾರದಿಂದ ಕೂಡಿದ ಪದ್ಯಗಳು. ಆದರೆ ನಮ್ಮ ಕಂದಪದ್ಯಗಳಲ್ಲಿ ಮಾತ್ರಾಕಾಲವನ್ನು ಪರಿಗಣಿಸುತ್ತೇವೆ, ಹಾಯ್ಕುಗಳಲ್ಲಿ ಅಕ್ಷರಗಳನ್ನು.
ಹಾಯ್ಕುಗಳು ಮೂರುಸಾಲಿನವು. ಮೊದಲನೆಯ ಸಾಲಿನಲ್ಲಿ ೫, ಎರಡನೆಯ ಸಾಲಿನಲ್ಲಿ ೭ ಮತ್ತು ಮೂರನೆಯ ಸಾಲಿನಲ್ಲಿ ೫ ಅಕ್ಷರಗಳು. ಜಪಾನೀಯರು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ.
ಹಾಯ್ಕುಗಳ ಅಕ್ಷರವಿನ್ಯಾಸದ ಬಗ್ಗೆ ಹೇಳಿದ್ದೆ (ಮೊದಲ, ಎರಡನೆಯ ಮತ್ತು ಮೂರನೆಯ ಸಾಲುಗಳಲ್ಲಿ ಕ್ರಮವಾಗಿ ೫,೭ ಮತ್ತು ೫ ಅಕ್ಷರಗಳು). ಆದರೆ ಇಲ್ಲಿ ಒಂದು ವಿಷಯವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಜಪಾನೀ ಭಾಷೆ ಕನ್ನಡದಂತಲ್ಲ. It is a highly phonetic language (ಅಂದರೆ ಸ್ವರಬದ್ಧವಾದ ಭಾಷೆ). ಆದ್ದರಿಂದ ಅಲ್ಲಿನ ಅಕ್ಷರಗಳ ಎಣಿಕೆ ನಮ್ಮ ಕನ್ನಡದ ಅಕ್ಷರದ ಎಣಿಕೆಯಂತಲ್ಲ. ನಾವು ಕಣ್ಣಿಗೆ ಕಾಣುವ ಅಕ್ಷರಗಳನ್ನು ಎಣಿಸಿದರೆ ಅವರು ಉಚ್ಛಾರಣೆಯಲ್ಲಿ ಬರುವ ಘಟಕಗಳನ್ನು (syllableಗಳನ್ನು) ಎಣಿಸುತ್ತಾರೆ. Syllable ಎಂದರೆ ಒಂದೇ ಉಚ್ಚಾರಣೆಯ ಪ್ರಯತ್ನದಲ್ಲಿ ಉಚ್ಚರಿಸಲ್ಪಡುವ ಶಬ್ದ. ಅದು ಒಂದೇ ಅಕ್ಷರವಿರಬಹುದು, ಅಥವ ಒಂದಕ್ಕಿಂತ ಹೆಚ್ಚು ಅಕ್ಷರಗಳ ಗುಂಪೂ ಇರಬಹುದು. ಇದನ್ನು ಕೆಲವು ಉದಾಹರಣೆಗಳೊಂದಿಗೆ ಹೀಗೆ ವಿವರಿಸೋಣ:
"ಲವ್ (love)" ಇಲ್ಲಿ ಕಣ್ಣಿಗೆ ಕಾಣುವುದು ಕನ್ನಡದಲ್ಲಿ ಎರಡು ಅಕ್ಷರಗಳು, ಇಂಗ್ಲಿಷಿನಲ್ಲಿ ನಾಲ್ಕು ಅಕ್ಷರಗಳು. ಆದರೆ ಉಚ್ಚಾರಣೆಯ unit (syllable) ಕೇವಲ ಒಂದೇ (ಲೌ). ಆದ್ದರಿಂದ ಹಾಯ್ಕುಗಳ ವಿಷಯದಲ್ಲಿ ಇದನ್ನು ಒಂದು ಎಂದು ಎಣಿಸಬೇಕು.
"ಕಣ್" ಇದೂ ಹಾಗೆಯೇ, ಎರಡು ಅಕ್ಷರಗಳು ಕಂಡರೂ ಉಚ್ಚಾರಣೆಯ syllable ಒಂದೇ. ಆದ್ದರಿಂದ ಹಾಯ್ಕಿನಲ್ಲಿ ಇದು ಒಂದೇ ಅಕ್ಷರವೆಂದಾಗುತ್ತದೆ.
"ಜಂಪ್" ಎನ್ನುವುದೂ ಹಾಗೇ. ಆದರೆ "ಜಂಪು" ಎಂದಾಗ ಮಾತ್ರ ಅಲ್ಲಿ ಎರಡು syllables ಬರುತ್ತವೆ, ಜಂ ಮತ್ತು ಪು.
ಹಾಗೆಯೇ "ಬಂಪರ್ (bumper)" ಎನ್ನುವುದರಲ್ಲಿ 3 (ಇಂಗ್ಲಿಷಿನ 6) ಅಕ್ಷರಗಳು ಆದರೆ ಎರಡೇ syllableಗಳು (ಬಂ + ಪರ್), ಆದರೆ "ಬಂಪರು" ಎನ್ನುವುದರಲ್ಲಿ ಮೂರು syllables ಮತ್ತು ಮೂರು ಅಕ್ಷರಗಳು.
"ಕಾವೇರಿ" ಇಲ್ಲಿ ಕಣ್ಣಿಗೆ ಕಾಣುವುದೂ ಮೂರು ಅಕ್ಷರ, ಉಚ್ಚಾರಣೆಯಲ್ಲೂ ಮೂರು ಅಕ್ಷರ (3 letters and 3 syllables).
ಆದ್ದರಿಂದ ಹಾಯ್ಕುಗಳನ್ನು ಬರೆಯುವಾಗ ೧,೨ ಮತ್ತು ೩ನೆಯ ಸಾಲುಗಳಲ್ಲಿ ೫,೭ ಮತ್ತು ೫ ಅಕ್ಷರಗಳನ್ನು ಎಣಿಸುವ ಬದಲಿಗೆ ೫,೭ ಮತ್ತು ೫ ಸಿಲೆಬಲ್ಲುಗಳನ್ನು ಎಣಿಸುವುದು ಸೂಕ್ತ.
ಹೀಗೆ ಹಾಯ್ಕುಗಳ ಸಾಮಾನ್ಯ format ಹೀಗಿರಬಹುದು:
ನನ ನನನ
ನನ ನನ ನನನ
ನನ ನನನ
(ಮೇಲೆ ಹೇಳಿದಂತೆ ಅದು ಹ್ರಸ್ವಾಕ್ಷರವೇ ಆಗಬೇಕಿಲ್ಲ, "ನ" ಅನ್ನುವುದರ ಬದಲು "ನಾ" ಎಂದು ಕೂಡ ಆಗಬಹುದು, ಅಥವ "ನನ್" ಕೂಡ ಆಗಬಹುದು)
ಮತ್ತೆ, ಮೊದಲೇ ಹೇಳಿದಂತೆ ಜಪಾನೀ ನುಡಿ ಕನ್ನಡಕ್ಕಿಂತ ಹೆಚ್ಚು phonetic ನುಡಿಯಾದ್ದರಿಂದ ಅವರು ಈ ಎಣಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಾರೆ. ಕನ್ನಡದ ಜಾಯಮಾನ ಹಾಗಲ್ಲವಾದ್ದರಿಂದ ನಾವು ಅದನ್ನು ಅಷ್ಟು ಕಟ್ಟುನಿಟ್ಟಾಗಿ ಅನುಸರಿಸಬೇಕಿಲ್ಲವೆಂಬುದು ನನ್ನ ಅನಿಸಿಕೆ. ಆದರೂ ಆದಷ್ಟು ಈ ಲಕ್ಷಣಗಳನ್ನು ಅನುಸರಿಸುವುದು ಒಳ್ಳೆಯದು. ಒಂದೋ ಎರಡೋ ಸಿಲೆಬಲ್ಲುಗಳು ಹೆಚ್ಚು ಕಡಿಮೆಯಾದರೆ ಪರವಾಗಿಲ್ಲ, ಆದರೆ ತೀರ ಎಣಿಕೆಗೇ ಸಿಗದಂತಿರಬಾರದೆಂಬುದು ನನ್ನ ನಿಲುವು.
ಮತ್ತೆ, ಪ್ರಾಸದ ಬಗ್ಗೆ ಯಾವ ನಿಯಮವೂ ಇದ್ದಂತಿಲ್ಲ, ಆದರೆ ಪ್ರಾಸವಿರಬಾರದೆಂದೇನೂ ಇಲ್ಲ. ಅರ್ಥದ ಮಿಂಚಿಗೆ ಮತ್ತಷ್ಟು ಹೊಳಪು ಸೇರಿಸುವುದಾದರೆ ಏಕಿರಬಾರದು? ಹೀಗೇ ಗೀಚಿದ ಕೆಲವು ಹಾಯ್ಕುಗಳು ಇಲ್ಲಿವೆ (ಮತ್ತೆ ಮೊದಲೇ ಹೇಳಿದಂತೆ, ಇವನ್ನು ನಿಜಾರ್ಥದಲ್ಲಿ ಹಾಯ್ಕು ಎನ್ನಲಾಗುವುದಿಲ್ಲ, ಏಕೆಂದರೆ ಹಾಯ್ಕೊಂದರಲ್ಲಿ ಮುಖ್ಯವಾಗಿ ಇರಲೇ ಬೇಕಾದ ಆ ಒಂದು ಕ್ಷಣವನ್ನು, ಸಾರ್ಥಕಕ್ಷಣವನ್ನು ಚಿತ್ರಪಟದಂತೆ ಹಿಡಿದಿಡುವ ಪಂಚ್ ಲೈನ್ ಇಲ್ಲಿಲ್ಲ - ಕೇವಲ ಹಾಯ್ಕಿನ ಭೌತಿಕ ರೂಪವನ್ನಷ್ಟೇ ಗಮನಿಸುವುದು):
ಐದು ಏಳರ
ಮೇಲೈದುಲಿಯಂ ಹಾಕು
ಬಂದಿತು ಹಾಯ್ಕು
ಬಂಪರ್ ಟು ಬಂಪರ್
ಜೋರಾಗಿ ಗುದ್ದಿದರೆ
ಬಂಪರ್ ಹೊಡೆತ
ನಿನ್ನ ನಗೆ ಹೂ
ಮೊಲ್ಲೆಯ ಚೆಲ್ಲಿಬಿಡು
ಹೂಮಂಚವೇಕೆ?
ಆ ಕಣ್ಣು ತುಟಿ
ಹೀರಿ ತೂರಾಡುವನು
ಇವ, ಕುಡುಕ!
ನಗೆಯ ಮಿಂಚ
ಮುಂದೆ ಮಳೆಯ ಮಿಂಚು
ಮಂಕಾಯಿತಲ್ಲ!
ಮಳೆ ಗುಡುಗು
ಮಿಂಚಿ ತೋರಿಸಿದ್ದೇನು?
ಊಳಿಡೋ ದೆವ್ವ!
ಕಣ್ಣ ಮುಚ್ಚಿದೆ
ನಿದ್ದೆಯಲೂ ನೀ ಬಂದೆ
ನಿದ್ದೆ ಬಿಟ್ಟೆದ್ದೆ
ಕಾಡದಿರು ನೀ
ಗೆಳತಿ, ನೋಡುವಳು
ನಿನ್ನ ಸವತಿ!
ಕಾಡೆ ನೀ ಹೀಗೆ,
ಬೇಜಾರುಗೊಳ್ಳುವನು
ಶನಿರಾಯನು
ಎಕ್ಸಾಮಂದ್ರಿಷ್ಟೇ,
ಜಸ್ಟ್ ಕಾಪಿ ಪೇಸ್ಟ್, ಕಾಪಿ ಪೇಸ್ಟ್
ಓದೋದೆಲ್ಲಾ ವೇಸ್ಟ್
ದೆವ್ವದ್ ಕತೇಲೇ
ಹೆದ್ರುಸ್ತಿದ್ದಾ ನಂ ತಾತ
ಈಗವ್ನೇ ಭೂತಾ!
ಎತ್ತಣ ಮಾವೋ
ಎತ್ತಣ ಕೋಗಿಲೆಯೋ
ಬಂದೂಕು ಶಬ್ದ!
ಹೊಟ್ಗಿಲ್ಲ ಅನ್ನಾ
ತಿರ್ಕೊಂಡ್ ತಿನ್ನೋದ್ ಏನ್ ಚೆನ್ನ?
ಹಾಕ್ತೀನಿ ಕನ್ನ
ಹಾಯ್ಕುವಿನ ಗಮ್ಮತ್ತೇ ಅದು. ಸುಮ್ನೇ ಚಾಟ್ ಮಾಡಿದಹಾಗೆ ಬರೀತಾನೇ ಹೋಗಬಹುದು.
ಈ ಮಾತೇ ಮುತ್ತು
ಮಾತೇ ಮತ್ತು, ಮಾತಲ್ಲೇ
ಕಾಣೋ ಗಮ್ಮತ್ತು
ಚಾಟ್ ಮಾಡ್ದಾಗೆ, ಚಾಟ್
ತಿಂದ್ ಹಾಗೆ, ಚಾಟೀ ಹಾಯ್ಕೊಂಡ್
ಬಂದ್ ಹಾಗ್ ಮಾತು
ನೀನಾಡೋ ಮಾತ್ನೇ
ಕಟ್ ಕಟ್ ಮಾಡು, ಹಾಯ್ಕೊಂದಲ್
ಬಂದಯ್ತೆ ನೋಡು
ಒಂದಷ್ಟು ಸೀರಿಯಸ್ ಹಾಯ್ಕುಗಳು:
ಎಲೆ ಹುಳಕೆ
ಕಪ್ಪೆ ಹಾರಲು ತಡೆ
ಆಡುವ ಹೆಡೆ
ತುಟಿ ಚಾಚಿದೆ
ಮುತ್ತೆಲ್ಲೋ ಉದುರಿದೆ
ಮೆದೆಯ ಸೂಜಿ
ಒಂದು ಎರಡು
ಬಾಳೆಲೆಯ ಹರಡು
ಚುರುಗುಟ್ಟಿದೆ
ಹುಲಿ ಹಸಿದು
ನೆಗೆದಿದೆ; ಗೋವಿಗೋ
ಕರು ಯೋಚನೆ
ರವಿ ಮುಳುಗಿ
ಗಡಂಗು ಕರೆದಿದೆ
ಖಾಲಿ ಜೇಬು
ನೇಣೆತ್ತುವ ಕೈ
ಕಾಣುತ್ತಿಲ್ಲ ಕೈಮರ
ಕಣ್ಣೊರಸಿದೆ
ನೇಣೆತ್ತುವ ಕೈ
ಕಾಣುತ್ತಿಲ್ಲ ಕೈಮರ
ಕಣ್ಣರಸಿದೆ
ಎಂಜಲು ರೊಟ್ಟಿ
ತುಪ್ಪದೊಳಗೆ ಬಿತ್ತು
ಕೇಜಿ ಐನೂರು
Tuesday, November 29, 2011
ಭಾವಸಿಂಚನ - ಪುಸ್ತಕ ಬಿಡುಗಡೆ ಸಮಾರಂಭ
ಆ ಸಮಾರಂಭದ ಕೆಲವು ಚಿತ್ರಗಳು ಇಲ್ಲಿವೆ (ಚಿತ್ರ ಕೃಪೆ, ತಂಡದ ಸದಸ್ಯರು)
ಆಸಕ್ತರು ಈ ಪುಸ್ತಕಗಳನ್ನು ಬೆಂಗಳೂರಿನ ಸಪ್ನಾ ಪುಸ್ತಕ ಮಳಿಗೆ ಮತ್ತಿತರ ಕಡೆಗಳಲ್ಲಿ ಪಡೆಯಬಹುದು. ಯಾವುದೇ ಕನ್ನಡ ಪುಸ್ತಕದ ಖರೀದಿಯೊಂದಿಗೆ ಈ ಪುಸ್ತಕ ಉಚಿತವಾಗಿ ದೊರೆಯುತ್ತದೆ ಎಂದು ಸಮುದಾಯದ ಪ್ರಕಟಣೆ ಹೇಳುತ್ತದೆ.
Monday, November 21, 2011
ಕೆಲವು ವಚನಗಳು
ಕಾಗೆ ಕರುಬಿ ಮಾವಿನ ಚಿಗುರುಂಬೊಡೆ
ಬಾಯಿ ಕಹಿಗೊಂಡಿತ್ತಲ್ಲದೆ
ಕೋಗಿಲೆಯ ಸೊಲ್ಲು ದೊರಕೊಂಡಿತೇ
ಕಾಡ ಮಂಗ ಸಿರಿಗಂಧದ ಮರಕೆ ಜೋತೊಡದರ ನಡೆ ಸಿರಿಗೊಂಡಿತೇ?
ಭಾವದ ಮಿಂಚೊಡೆದ ಬೆಡಗಿಂಗೆ ಮೈಯಿಕ್ಕದೆ ಮನವೀಯದೆ
ಬರಿದೇ ನುಡಿನುಡಿಯೆಂದುರೆ ಬೊಬ್ಬೆ ಹೊಯ್ದೊಡೆ
ಆ ಬೊಬ್ಬೆ ನುಡಿಯೇ? ಹೊಯ್ದವ ನುಡಿಗನೇ? ನುಡಿ ಕನ್ನುಡಿಯೇ?
ನುಡಿಯೊಳನುಡಿ
ನಾನೀನೆಂದು ಗಳಹುವ ಬಾಯಿಬಡುಕರನೇನೆಂಬೆನಯ್ಯಾ
ದಮ್ಮಪುರದ ಮಂಜಯ್ಯಾ ನಿಮ್ಮ ನುಡಿಯೆಮಗೆ ಶರಣು.
(೨)
ಈ ನುಡಿ ಕನ್ನುಡಿಯೆಂಬರು
ಮತ್ತಾನುಡಿ ಪರನುಡಿಯೆಂಬರು,
ತೊದಲುವ ಕಂದನ ನುಡಿಯಾವುದಯ್ಯಾ
ಬಿರಿವೂವಿ
ನುಡಿವುಟ್ಟುವ, ಹೊಮ್ಮುವ, ನೆಗೆಯುವ, ಚಿಮ್ಮುವ ಜೀವದ ನಡೆಯರಿಯದೆ,
ಪೆಣಕೆ ದಾರವನಿಕ್ಕಿ ಜಾತಿಯ ಹೊಲಸುಂಬರಯ್ಯಾ
ಅಯ್ಯಾ ನಿಮ್ಮ ಕರುಣೆಯದಾವ ನುಡಿ
ಕಡುಮೌನವದಾವ ನುಡಿ ಪೇಳಾ ದಮ್ಮಪುರದ ಮಂಜಯ್ಯಾ
Sunday, November 20, 2011
ಭಾವಸಿಂಚನ - ಕವಿಗಳಲ್ಲದವರ ಕವನಗಳು
Thursday, October 27, 2011
ಬೆಳಕಿನ ಹಾಡು
Wednesday, October 12, 2011
ಹೂರಣದಿ ಹುಲ್ಲು ಕಲ್ಲುಗಳಿಗೂ ಹಿರಿಮೆಯುಂಟು
Sunday, October 2, 2011
ಸ್ತನ ದೊಡ್ಡತನದಲ್ಲಿ ಶೋಭಿಸಿಹುದು
"ಪದ್ಯಪಾನ" ಕಾವ್ಯಕುತೂಹಲಿಗಳ ಜಾಲತಾಣದಲ್ಲಿ (padyapana.com) ಪಂಚಮಾತ್ರೆಯ ಚೌಪದಿಯಲ್ಲಿ "ಸ್ತನ ದೊಡ್ಡತನದಲ್ಲಿ ಶೋಭಿಸಿಹುದು" ಎಂಬ ಸಾಲನ್ನು ಬಳಸಿ ಸಮಸ್ಯೆಯನ್ನು ಪೂರ್ತಿಗೊಳಿಸುವ ಸವಾಲಿತ್ತು. ಅದಕ್ಕಾಗಿ ರಚಿಸಿದ್ದು ಈ ಚೌಪದಿಗಳು:
ಮನೆಗಲ್ಲದೆಯೆ ನೆಂಟ ಮಠಕೆ ಬರುವನೆ ಪೇಳು
ಒಣಮರಕೆ ಬಹುದೆ ಕೋಗಿಲೆಯು ಗಿಳಿವಿಂಡು
ಮನದಣಿಯೆ ಉಣಬಡಿಪ ಸಿರಿವನೆಯು ಮನೆತನ-
ಸ್ತನ ದೊಡ್ಡತನದಲ್ಲಿ ಶೋಭಿಸಿಹುದು.
ಇನಸುತಗೆ ತಿಳಿದೊಡೇಂ ತನ್ನ ಹುಟ್ಟಿನ ಹಿರಿಮೆ
ಅನುಮಾನವಿನಿತಿಲ್ಲ ಜೀಯನೊಲವಿನೊಳು
ಧನವದುವೆ ಕೌರವನ ಮಾನಧನ ನಂಬಿಕ-
ಸ್ತನ ದೊಡ್ಡತನದಲ್ಲಿ ಶೋಭಿಸಿಹುದು.
ವನಕೆ ಹೆಮ್ಮರ ಸೊಗಸು ಗಿರಿಗಾ ಶಿಖರ ಸೊಗಸು
ಮನೆಗೆ ಹಿರಿಗಂಬದಾಲಂಬ ಸೊಗಸು
ಇನಿವೆಣ್ಣಿನೊಡಲಿಗಾಲಂಬವೆನೆ ಚೆಲುವಿನಾ
ಸ್ತನ ದೊಡ್ಡತನದಲ್ಲಿ ಶೋಭಿಸಿಹುದು.
ಜನಕಗಲ್ಲದೆ ಶುನಕಕಹುದೆ ರಾಮನ ನಂಟು
ಘನಶೈಲಿ ಶೂಲಿ ಹುಲು ಮೊರಡಿ ಬಯಸುವನೇ
ವನಮಾಲಿಯಲ್ತೆ ಸಾಗರನಳಿಯ?ಹಿರಿನಂಟ-
ತನ ದೊಡ್ಡತನದಲ್ಲಿ ಶೋಭಿಸಿಹುದು
ಕೊನೆಯ ಚೌಪದಿ “ಸ್ತನ ದೊಡ್ಡತನದಲ್ಲಿ ಶೋಭಿಸಿಹುದು” ಎಂದು ಬಳಸಿದರೆ ಮೂರನೆಯ ಸಾಲಿನ ಛಂದಸ್ಸು ಕೆಡುತ್ತದೆಯಾದ್ದರಿಂದ ಅದು ಸಮಸ್ಯೆಯನ್ನು ಯಥಾವತ್ತಾಗಿ ಪೂರೈಸುವುದಿಲ್ಲ, ಆದರೂ ಉಳಿದ ಸಾಲುಗಳು ಬಂದುವಲ್ಲ ಎಂದು ಪೋಸ್ಟಿಸಿದೆ ಅಷ್ಟೇ.
Friday, September 23, 2011
ಪ್ರಭಾತ ಚತುರ್ಮುಖ
(೧)
ಸೋರೆ ಕತ್ತಲ ಸಾರ ನೇಸರನ ಮೆಲ್ಬರವ
ಸಾರೆ ಗಗನಾಂಗನೆಯ ಕೆಂಪು ಕದಪು|
ವಾರಿಜದ ಮೊಗವರಳಿ ಮಲಗಿದಿಬ್ಬನಿ ಹೊರಳಿ
ಕೋರಿದುವು ಮಂಗಳದ ಮುಂಬೆಳಗನು||
(೨)
ತಂಗದಿರನಗಲಿಕೆಯ ವಿರಹಕಾಡಲು ರಾತ್ರಿ
ಯಂಗನೆಯ ಕೆನ್ನೆ ತುಸು ಬಿಳುಪಡರಿದೆ|
ಸಂಗಡಲೆ ರವಿಯು ಝುಮ್ಮನೆ ಸೋಂಕೆ ಬಿಸುಪಿನಾ
ಲಿಂಗನದಿ ನಾಚಿ ಮೊಗ ಕೆಂಪೇರಿದೆ||
(೩)
ಮುಂಗೋಳಿ ಕೂಗಿರಲು, ಹಕ್ಕಿಗಳು ಹಾಡಿರಲು
ರಂಗೋಲಿ ನಗುತಲಿವೆ ಅಂಗಳದೊಳು|
ಅಂಗಡಿಯು ತೆರೆಯುತಿದೆ, ತರಕಾರಿ ಕೂಗು ಮನೆ
ಮುಂಗಡೆಯೆ ಸಾಗುತಿದೆ ಏನು ಬೇಕು?
(೪)
ಮಾಗಿಯಿರುಳಿನ ಕೊನೆಗೆ ಮೂಡಣದಿ ನಸುವೆ ಬೆಳ
ಗಾಗೆ ಜಗವೆದ್ದು ಚಡಪಡಿಸುತಿಹುದು|
ಸಾಗೆ ಭರಗುಟ್ಟಿ ಮೋಟಾರುಗಳು ಒಣಮರದ
ಕೋಗಿಲೆಯೆ ಶ್ರುತಿಗೆಟ್ಟು ಕಾಗುತಿಹುದು||
Friday, September 9, 2011
ದ್ವೈತ - ಅದ್ವೈತ: ಒಂದು ಚಿಂತನೆ
ಇನ್ನು ದ್ವೈತದ ವಿಷಯಕ್ಕೆ ಬಂದರೆ, ಇದೂ ಮೂಲತಃ ದ್ವೈತಸಿದ್ಧಾಂತವೆಂದು ಕರೆಯಲ್ಪಟ್ಟದ್ದಲ್ಲ. ಇದರ ಮೂಲ ಹೆಸರು "ತತ್ವವಾದ". ದ್ವೈತಿಗಳು ಅದ್ವೈತ ಸಿದ್ಧಾಂತವನ್ನು ಮಾಯಾವಾದವೆಂದು ನಿರ್ದೇಶಿಸುತ್ತಾರೆ (ಜಗತ್ತು ಮಾಯೆಯೆಂಬುದರಿಂದ). ಅದಕ್ಕೆ ಪ್ರತಿಯಾಗಿ ಈ ವಾದದ ಮುಖ್ಯನಿಲುವು ಸತ್ಯತ್ವ. ಬ್ರಹ್ಮನಷ್ಟೇ ಅಲ್ಲ, ಬ್ರಹ್ಮನಿಂದ ನಿರ್ಮಿತವಾದ ಜಗತ್ತೂ, ಅವುಗಳ ನಡುವಿನ ಸಾಮ್ಯ, ವೈಷಮ್ಯ, ತಾರತಮ್ಯಗಳೂ, ಸ್ವರೂಪ-ಸ್ವಭಾವಗಳೂ ಸತ್ಯ ಹಾಗೂ ನಿತ್ಯವೆಂದೇ ಸಾರುವುದರಿಂದ ಇದು ತತ್ವವಾದ. ಈ ತತ್ತ್ವವಾದವೇ ಆರ್ಷೇಯದರ್ಶನವೆಂದೂ, ಕಾಲಕ್ರಮದಲ್ಲಿ ಬೇರೆಬೇರೆ ಸಿದ್ಧಾಂತಗಳ ವಿಜೃಂಭಣೆಯಿಂದ ತತ್ವವಾದದ ಬೆಳಕು ಮರೆಯಾಯಿತೆಂದೂ, ಮುಂದೆ ಹದಿಮೂರನೆಯ ಶತಮಾನದಲ್ಲಿ ಬಂದ ಮಧ್ವಾಚಾರ್ಯರು (ಇವರ ಆಶ್ರಮನಾಮ ಪೂರ್ಣಪ್ರಜ್ಞತೀರ್ಥರು; ಬಳಿತ್ಥಾಸೂಕ್ತದ ಮಧ್ವ ಆಧವೇ ಎಂಬ ವಾಕ್ಯದಿಂದ ಮಧ್ವಾಚಾರ್ಯರೆಂದು ಪ್ರಸಿದ್ಧಿ - "ಯದೀಮನು ಪ್ರದಿವೋ ಮಧ್ವ ಆಧವೇ ಗುಹಾ ಸಂತಂ ಮಾತರಿಶ್ವಾ ಮಥಾಯತಿ") ಈ ಮರೆಯಾಗಿದ್ದ ತತ್ವವಾದವನ್ನು ಪುನರುಜ್ಜೀವಿಸಿ ಪ್ರಚುರಗೊಳಿಸಿದರೆಂದೂ ದ್ವೈತ ಸಂಪ್ರದಾಯ ನಂಬುತ್ತದೆ. ಆದ್ದರಿಂದ ಇದಕ್ಕೆ ಪೂರ್ಣಪ್ರಜ್ಞದರ್ಶನವೆಂದೂ ಹೆಸರು. ೧೩-೧೪ನೆಯ ಶತಮಾನದ ಮಾಧವಾಚಾರ್ಯರ "ಸರ್ವದರ್ಶನ ಸಂಗ್ರಹ"ದಲ್ಲೂ ಈ ದರ್ಶನ ಪೂರ್ಣಪ್ರಜ್ಞದರ್ಶನವೆಂದೇ ಕರೆಯಲ್ಪಟ್ಟಿದೆ. ದ್ವೈತಸಿದ್ಧಾಂತವೆಂಬ ಹೆಸರು ಮೇಲಿನ ಆತ್ಮೈಕತ್ವದ (ಅದ್ವೈತದ) ಪ್ರತಿಯಾಗಿ ಬಳಕೆಗೆ ಬಂದ ವ್ಯವಹಾರವಿರಬೇಕು. ಶಂಕರರ ಸೂತ್ರಭಾಷ್ಯಗಳಲ್ಲೂ ದ್ವೈತಿಗಳ ಉಲ್ಲೇಖ ಬಂದಿದ್ದರೂ ಸ್ಪಷ್ಟವಾಗಿಯೇ ಅದು ಮಧ್ವಸಿದ್ಧಾಂತದ ಉಲ್ಲೇಖವಲ್ಲ, ಬದಲಿಗೆ ಅದು ಸಾಂಖ್ಯ ಮತ್ತು ಯೋಗದರ್ಶನಗಳನ್ನು ಕುರಿತದ್ದು (ದ್ವೈತಿನೋ ಹಿ ತೇ ಸಾಂಖ್ಯಾ ಯೋಗಾಶ್ಚ - ಸೂತ್ರ ಭಾಷ್ಯ.೨.೧.೩). ದ್ವೈತವೆಂಬಲ್ಲಿ ಒತ್ತು ಎರಡು ಎಂಬ ಸಂಖ್ಯೆಯ ಮೇಲಲ್ಲ, ಬದಲಿಗೆ ನಾನಾತ್ವದ ಮೇಲೆ.
- ಹರಿಃ ಪರತರಃ
- ಸತ್ಯಂ ಜಗತ್
- ತತ್ತ್ವತೋ ಭೇದಃ
- ಜೀವಗಣಾಃ ಹರೇರನುಚರಾಃ
- ನೀಚೋಚ್ಛ ಭಾವಂ ಗತಾಃ
- ಮುಕ್ತಿಃ ನೈಜ ಸುಖಾನುಭೂತಿಃ, ಅಮಲಾ
- ಭಕ್ತಿಶ್ಚ ತತ್ಸಾಧನಂ
- ಅಕ್ಷಾದಿ ತ್ರಿತಯಂ ಹಿ ಪ್ರಮಾಣಂ
- ಅಖಿಲಾಮ್ನಾಯೈಕ ವೇದ್ಯೋ ಹರಿಃ
- ಹರಿಯೇ ಪರದೈವ;
- ಜಗತ್ತು ಸತ್ಯ;
- ಭೇದವು ಬ್ರಹ್ಮ-ಜಗತ್ತುಗಳ ಸ್ವಭಾವ (ತತ್ವ)ದಲ್ಲೇ ಇದೆ. ಆಚಾರ್ಯರು ಪಂಚಭೇದಗಳನ್ನು ನಿರೂಪಿಸುತ್ತಾರೆ ಬ್ರಹ್ಮ-ಜೀವ, ಬ್ರಹ್ಮ-ಜಡ, ಜೀವ-ಜೀವ, ಜೀವ-ಜಡ ಮತ್ತು ಜಡ-ಜಡ;
- ಸಕಲಜೀವರೂ ಹರಿಯ ಅನುಚರರು (ಇಲ್ಲಿ ಅನುಚರ ಅನ್ನುವುದನ್ನು ಅದರ ನಿಜ ಅರ್ಥದಲ್ಲಿ ಬಳಸಲಾಗಿದೆ, ಹರಿಯ ಅನುವರ್ತಿ, ವಶವರ್ತಿ, ಅಧೀನ ಎಂಬ ಅರ್ಥದಲ್ಲಿ, ಜೊತೆಗಾರರು ಎಂಬರ್ಥದಲ್ಲಲ್ಲ);
- ಮೇಲೆ ಹೇಳಿದ ಬ್ರಹ್ಮ-ಜೀವ, ಬ್ರಹ್ಮ-ಜಡ, ಜೀವ-ಜೀವ, ಜೀವ-ಜಡ ಮತ್ತು ಜಡ-ಜಡಗಳಲ್ಲಿ ಕೇವಲ ಭೇದವಷ್ಟೇ ಅಲ್ಲ ತಾರತಮ್ಯ ಕೂಡ ಇದೆ; ಒಂದು ಮತ್ತೊಂದಕ್ಕೆ ಸಮನಲ್ಲ (ಅಸಮಭವ ಕಾಗಿನೆಲೆಯಾದಿಕೇಶವರಾಯ - ಕನಕದಾಸರು);
- ಕುಂದಿಲ್ಲದ (flawless) ನೈಜ ಸುಖಾನುಭೂತಿಯೇ ಮುಕ್ತಿ (ಇಲ್ಲಿ ನೈಜ ಎನ್ನುವುದನ್ನು ಜೀವದ ಸ್ವಭಾವಕ್ಕೆ ನಿಜವಾದ (ತಕ್ಕುದಾದ) ಎಂದು ಅರ್ಥೈಸಲಾಗುತ್ತದೆ. ಅಂದರೆ ಮುಕ್ತಿ ಸಹ ಎಲ್ಲ ಜೀವರಿಗೂ ಒಂದೇ ಅಲ್ಲ, ಬೇರೆಬೇರೆ - ಅದರ ನೆಲೆ ಬೇರೆ, ಆಳ-ಅಗಲಗಳು ಬೇರೆ, ತೀವ್ರತೆ ಬೇರೆ ಇತ್ಯಾದಿ) ಆದ್ದರಿಂದ ಮೇಲೆ ಹೇಳಿದ ಭೇದವೂ ತಾರತಮ್ಯವೂ ಮುಕ್ತಿಯಲ್ಲೂ ಇರುತ್ತದೆ. ಜೀವರು ಮಾತ್ರ ಮುಕ್ತಿಯೋಗ್ಯರು, ಜಡವಲ್ಲ. ಮತ್ತೆ ಜೀವರಲ್ಲಿ ಅವರವರ ಸ್ವಾಭಾವಿಕ ಭೇದಕ್ಕನುಗುಣವಾಗಿ (ತತ್ತ್ವತೋ ಭೇದಃ) ಅವರವರ ಮುಕ್ತಿಯೋಗ್ಯತೆಯೂ ನಿರ್ಧರಿತವಾಗುತ್ತದೆ. ಮತ್ತೆ ಇದರಲ್ಲಿ ಸತ್ವ, ರಜಸ್ ತಮೋಗುಣಗಳ ವರ್ಗೀಕರಣ ಬರುತ್ತದೆ, ಮತ್ತು ಅದಕ್ಕನುಗುಣವಾಗಿ ಜೀವವೊಂದು ತಮೋಯೋಗ್ಯವೋ, ನಿತ್ಯಸಂಸಾರಿಯೋ ಅಥವಾ ಮುಕ್ತಿಯೋಗ್ಯವೋ ಇರಬಹುದು ("ಸಾತ್ವರಿಗೆ ಸುಖ; ಸಂಸಾರ ಮಿಶ್ರರಿಗೆ; ಅಧಮ ಜನರಿಗಪಾರ ದುಃಖಗಳೀವ" - ಹರಿಕಥಾಮೃತಸಾರ, ಜಗನ್ನಾಥದಾಸರು);
- ಹೀಗೆ ಮುಕ್ತಿಯೋಗ್ಯವಾದ ಜೀವಿಗೆ ಮುಕ್ತಿ ತಾನೇತಾನಾಗಿ ದೊರೆಯುವುದಿಲ್ಲ. ಅದಕ್ಕೆ ಹರಿಕೃಪೆ ಬೇಕು. ಅದಕ್ಕಿರುವ ಮಾರ್ಗವೆಂದರೆ, ಭಕ್ತಿ (ಹರಿಯ ಗುಣಗಳ ಜ್ಞಾನದಿಂದ ಭಕ್ತಿಯ ಹುಟ್ಟು - ಜ್ಞಾನಚಂದ್ರಿಕೆ ಬೆಳಗೆ ಭಕ್ತಿವಾರಿಧಿಯುಕ್ಕೆ ಮನಚಕೋರವು ವಿಷ್ಣುಪಥದಿ ನಲಿಯೆ; ದೀನಜನಭಯವಡಗೆ ತಾಪತ್ರಯಗಳೋಡೆ ಮಧ್ವೇಂದು ಶ್ರೀಕೃಷ್ಣ ನೋಡಿ ತಾ ನಲಿಯೆ - ವ್ಯಾಸರಾಜರು)
- ಇದಕ್ಕೆ ಪ್ರಮಾಣವೇನು? ಅಕ್ಷಾದಿ ತ್ರಿತಯಂ ಹಿ. ಅಂದರೆ ಪ್ರತ್ಯಕ್ಷ, ಅನುಮಾನ ಮತ್ತು ಆಗಮಗಳೆಂಬ ಈ ಮೂರೇ ಪ್ರಮಾಣ. ಇಲ್ಲೂ ಆಗಮೈಕಪ್ರಮಾಣವೆನ್ನುವ ಬದಲು ಪ್ರತ್ಯಕ್ಷ ಮತ್ತು ಆಗಮಗಳಿಗೆ ಸಮಾನ ಪ್ರಾಮುಖ್ಯ ಕಲ್ಪಿಸಿದ್ದಾರೆ ಆಚಾರ್ಯರು. ಪ್ರತ್ಯಕ್ಷ ಮತ್ತು ಆಗಮಪ್ರಮಾಣಗಳಲ್ಲಿ ವಿರೋಧವಿರದು ಎಂದು ಅಭಿಪ್ರಾಯ. ಮತ್ತೂ ವಿರೋಧ ಕಂಡುಬಂದರೆ ಲೌಕಿಕ ವಿಷಯಗಳಲ್ಲಿ ಪ್ರತ್ಯಕ್ಷವೂ ಅಲೌಕಿಕ ವಿಷಯಗಳಲ್ಲಿ ಆಗಮವೂ ಪ್ರಾಮುಖ್ಯವನ್ನು ಪಡೆಯುವುದು (ಇದು ನನ್ನ ಊಹೆ, ತಿಳಿದವರು ತಿದ್ದಬೇಕು). ಹಾಗೆ ಯಾವುದೇ ಪ್ರತ್ಯಕ್ಷವಿಷಯವನ್ನೋ ಆಗಮವಾಕ್ಯವನ್ನೋ ಪ್ರಮಾಣವೆಂದು ಒಪ್ಪಿಕೊಳ್ಳುವ ಮೊದಲು ಆ "ಪ್ರಮಾಣ" ಶುದ್ಧವಿರಬೇಕು (ಬೇರೆಬೇರೆ ಪ್ರತ್ಯಕ್ಷ ಪ್ರಮಾಣಗಳಲ್ಲಿ ವಿರೋಧಾಭಾಸವಿರಬಾರದು; ಹಾಗೇ ಆಗಮವಾಕ್ಯಗಳ "ಪ್ರಮಾಣ"ಗಳಲ್ಲಿ ವಿರೋಧಾಭಾಸವಿರಬಾರದು. ಅಪೌರುಷೇಯವಾದ ವೇದವಾಕ್ಯಗಳಲ್ಲಿ ವಿರೋಧವಿರಲು ಸಾಧ್ಯವಿಲ್ಲ, ಆದರೆ ಮೇಲ್ನೋಟಕ್ಕೆ ಕಾಣಬರುವ ವಿರೋಧಾಭಾಸಗಳನ್ನು ಅನುಮಾನ ಮತ್ತು ಬೇರೆ ಪ್ರಮಾಣಗಳ ಮೂಲಕ ಸಮನ್ವಯಿಸಿಕೊಳ್ಳಬೇಕು, ಸಮನ್ವಯವೊದಗುವಂತೆ ಅರ್ಥೈಸಬೇಕು).
- ಹರಿಯೇ ಸಕಲ ವೇದಪ್ರತಿಪಾದ್ಯನಾದ, ಸತ್ಯಸ್ವರೂಪನಾದ ಬ್ರಹ್ಮ.
Tuesday, September 6, 2011
Sunday, August 14, 2011
ವಂದೇ ಮಾತರಂ (ತಾಯೇ ಬಾಗುವೆ)
ವಂದೇ ಮಾತರಂ
ಸುಜಲಾಂ ಸುಫಲಾಂ
ಮಲಯಜ ಶೀತಲಾಂ
ಸಸ್ಯಶಾಮಲಾಂ ಮಾತರಂ
ವಂದೇ ಮಾತರಂ...
ಶುಭ್ರಜ್ಯೋತ್ಸ್ನಾಪುಲಕಿತ ಯಾಮಿನೀಂ
ಫುಲ್ಲಕುಸುಮಿತಧ್ರುಮದಳ ಶೋಭಿನೀಂ
ಸುಹಾಸಿನೀಂ ಸುಮಧುರ ಭಾಷಿಣೀಂ
ಸುಖದಾಂ ವರದಾಂ ಮಾತರಂ
ವಂದೇ ಮಾತರಂ...
====================

ಇದರ ಕನ್ನಡ ಅವತರಣಿಕೆ ಇಲ್ಲಿದೆ. ಮೂಲದ ಸೊಬಗನ್ನು, ಅಷ್ಟೇ ತುಸುಮಾತುಗಳಲ್ಲಿ ಕನ್ನಡದಲ್ಲಿ ಹಿಡಿದಿಡುವುದು ಕಷ್ಟವೇ ಸರಿ. ಆದರೂ ಮೂಲದ ಭಾವವನ್ನಾದರೂ ಹಿಡಿದಿಟ್ಟಿದ್ದೇನೆನಿಸುತ್ತದೆ. ಭಾವಾನುವಾದದ ಅನುಕೂಲಕ್ಕಾಗಿ, ಮೂಲದ ದ್ವಿತೀಯಾ ವಿಭಕ್ತಿಯನ್ನು ("ಅನ್ನು") ಕನ್ನಡದಲ್ಲಿ ಸಂಬೋಧನೆಯಾಗಿ ಬದಲಿಸಿಕೊಂಡಿದ್ದೇನೆ. ಗೆಳೆಯ ಭರತಕುಮಾರರು ಗೂಗಲ್ ಬಜ಼್ ನಲ್ಲಿ "ನಲ್ನೀರು ನಲ್ವಣ್ಣು ತಾಯಿಯೇ ಬಾಗುವೇ ತಾಯಿಯೇ" ಎಂದು ಹೇಳಿ ಸುಮ್ಮನಾಗಿದ್ದರು. ಇಲ್ಲಿನ ಅನುವಾದಕ್ಕೆ ಈ ಒಂಟಿ ಸಾಲೇ ಸ್ಫೂರ್ತಿ. ಇದಕ್ಕಾಗಿ ಭರತಕುಮಾರರಿಗೆ ಧನ್ಯವಾದ.
ತಾಯೇ ಬಾಗುವೆ
ಸವಿನೀರ್, ತನಿವಣ್,
ತಂಬೆಲರೀವಳೇ
ಸಿರಿಹಸಿರವಳೇ, ಬಾಗುವೆ
ತಾಯೇ ಬಾಗುವೆ...
ಮುಂಜಾವದ ಬಿಳಿ ಸೋನೆಯ ಚುಮಚುಮವೇ
ಅರಳಿ ನಗುವ ಹೂ ಮರಗಳ ಗಮಗಮವೇ
ಮೆಲುನಗೆಯೇ, ನಲ್ನುಡಿಗಾತಿಯೇ
ಸೊಗವೀವಳೆ ವರವೀವಳೇ
ತಾಯೇ ಬಾಗುವೆ...
ಇದರ ಧ್ವನಿಮುದ್ರಿಕೆಯನ್ನು ಸ್ವಾತಂತ್ರ್ಯದಿನಾಚರಣೆಯ ಈ ದಿನವೇ ಪ್ರಕಟಿಸಬೇಕೆಂದಿದ್ದೆ, ಸಾಧ್ಯವಾಗಲಿಲ್ಲ. ಇಷ್ಟರಲ್ಲೇ ಪ್ರಕಟಿಸುತ್ತೇನೆ.
ನಿಮಗೆಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು
ಟಿಪ್ಪಣಿ - ೧೯/೦೯/೨೦೧೮
=================
ಮೇಲಿನ ಅನುವಾದದಲ್ಲಿ ಮೂಲಕ್ಕೆ ಹತ್ತಿರವಲ್ಲದ ಒಂದು ಸಾಲನ್ನು ಗಮನಿಸಬೇಕು - "ಮುಂಜಾವದ ಬಿಳಿ ಸೋನೆಯ ಚುಮಚುಮವೇ" ಮೂಲದಲ್ಲಿರುವುದು "ಶುಭ್ರಜ್ಯೋತ್ಸ್ನಾಪುಲಕಿತ ಯಾಮಿನೀಂ" (ತುಂಬು ಬೆಳುದಿಂಗಳಿಂದ ಪುಳಕಿತವಾದ ಇರುಳುಗಳನ್ನು ಹೊಂದಿರುವವಳೇ). "ಬೆಳುದಿಂಗಳ ರಾತ್ರಿ"ಯು ಅನುವಾದದಲ್ಲಿ "ಮುಂಜಾವದ ಬಿಳಿ ಸೋನೆಯ ಚುಮಚುಮ" ಆಗಿದ್ದು ವಿಚಿತ್ರ, ಆದರೆ ಸ್ವಾರಸ್ಯದ ವಿಷಯ - ಯಾವುದೋ ಒಂದು ಲಹರಿಯಲ್ಲಿ ಬಂದ ಅನುವಾದವದು; ಮೂಲದ ಅರ್ಥ-ಭಾವಗಳಿಗಿಂತ ನನ್ನದೇ ಆ ಕ್ಷಣದ ಲಹರಿಯನ್ನಾಧರಿಸಿ ಹೊಮ್ಮಿದ್ದು. ಅದಕ್ಕೆ ತಕ್ಕಂತೆ ಮೂಲದಿಂದ ಚಿಕ್ಕದೊಂದು ಬದಲಾವಣೆಯನ್ನು ಮಾಡಿಕೊಂಡೆನೆಂದು ನೆನಪು. ದಿನಾ ಬೆಳಗಿನ ಜಾವ ರೇಡಿಯೋದಿಂದ ಬಿತ್ತರಗೊಳ್ಳುತ್ತಿದ್ದ ವಂದೇಮಾತರಂ ನನ್ನ ಬಾಲ್ಯಕಾಲದ ಬೆಳಗಿನ ಜಾವದ ಮಧುರ ನೆನಪುಗಳಲ್ಲೊಂದು. ಇದನ್ನು ಅನುವಾದಿಸುವಾಗ ಆ ನೆನಪಿನ ಲಹರಿಯೇ ನನ್ನ ಮನದಲ್ಲಿದ್ದುದು. ಯಾಮಿನಿಯು ಇರುಳ್ವೆಣ್ಣಾಗುವುದಕ್ಕಿಂತ ಸುಂದರ ಮುಂಬೆಳಗಿನ ಯಾಮವಾಗುವುದು, ಜ್ಯೋತ್ಸ್ನೆಯ ಜಾಗವನ್ನು ಬೆಳಗಿನ ಜಾವದ ಬೆಳ್ಳನೆಯ ಹಿಮದ ಜವನಿಕೆಯು ತುಂಬುವುದೂ ಹೆಚ್ಚು ಸೊಗಸಾಗಿ ಕಂಡಿತ್ತು. "ಪುಲಕಿತ" ಶಬ್ದವು ಅದಕ್ಕಿಂತ ಇಲ್ಲೇ ಹೆಚ್ಚು ಸಾರ್ಥಕವಾಗುವುದೆಂದೂ, ಈ ಪ್ರತಿಮೆಯು ಮೂಲಪ್ರತಿಮೆಗಿಂತ ಕವಿಯ ಭಾವವನ್ನು ಹೆಚ್ಚು ಪರಿಣಾಮಕಾರಿಯಾಗಿ ಧ್ವನಿಸಬಹುದೆಂದೂ ಎನಿಸಿ ಮೇಲ್ಕಂಡ ಮಾರ್ಪಾಟು ಮಾಡಿಕೊಂಡೆ. ಆಮೇಲೆ ಅದರ ಬಗ್ಗೆ ಹೆಚ್ಚು ಚಿಂತಿಸಹೋಗಿರಲಿಲ್ಲ. ಆದರೆ ಮೊನ್ನೆ ಅದರ ಇಂಗ್ಲಿಷ್ ಅನುವಾದವನ್ನು ಮಾಡಿದಾಗ (ಅನುವಾದವು ಈ ಬರಹದ ಕೊನೆಯಲ್ಲಿದೆ), ಅದೂ ಈ ಕನ್ನಡಾನುವಾದದ ಜಾಡನ್ನೇ ಹಿಡಿದುದನ್ನು ಗಮನಿಸಿ ನನ್ನ ಗಮನ ಸೆಳೆದವರು ವಿದ್ವನ್ಮಿತ್ರರಾದ ಶ್ರೀ ಶ್ರೀಕಾಂತಮೂರ್ತಿ. ಅಂತೆಯೇ ಇಂಗ್ಲಿಷ್ ಅನುವಾದವನ್ನು ತಿದ್ದಿದೆ, ಆದರೆ ಕನ್ನಡದ ಅನುವಾದ ಆಗ ಅದು ಬಂದ ಹಾಗೆಯೇ ನನಗೆ ಹೆಚ್ಚು ಪ್ರಿಯವೆನಿಸಿದ್ದರಿಂದ ಅದನ್ನು ಹಾಗೆಯೇ ಉಳಿಸಿಕೊಂಡಿದ್ದೇನೆ. ಆದರೆ ಮೂಲಕ್ಕನುಗುಣವಾಗಿ ತಿದ್ದಿದ ಅನುವಾದ ಇಲ್ಲಿದೆ (ಎರಡನೆಯ ಚರಣದ ಮೊದಲ ಸಾಲನ್ನು ಗಮನಿಸಿ):
ತಾಯೇ ಬಾಗುವೆ
ಸವಿನೀರ್, ತನಿವಣ್,
ತಂಬೆಲರೀವಳೇ
ಸಿರಿಹಸಿರವಳೇ, ಬಾಗುವೆ
ತಾಯೇ ಬಾಗುವೆ...
ಬೆಳುದಿಂಗಳ ಹಾಲ್ಜೊನ್ನದ ಚುಮಚುಮವೇ
ಮೆಲುನಗೆಯೇ, ನಲ್ನುಡಿಗಾತಿಯೇ
ಸೊಗವೀವಳೆ ವರವೀವಳೇ
ತಾಯೇ ಬಾಗುವೆ...
Monday, June 27, 2011
ಮರಳು ಜೇನಳೂ ಮತ್ತು ಪಾದ್ರಿಯೂ (ಮತ್ತೊಂದು ಅನುವಾದ)
Tuesday, June 14, 2011
ಅದು ನೀನಲ್ಲ
ಹಿಂದೊಂದು ಕಾಲದಲಿ, ದೇಶದಲಿ,
ವರ್ತಮಾನದಿ ಸುಳಿವ ಭೂತದಲ್ಲಿ.
ಕುಡಿಹುಬ್ಬು, ಸುಳಿಗಣ್ಣು
ಮೂಗು ಸಂಪಿಗೆಯೆಸಳು
ನಗೆಯ ಮಲ್ಲಿಗೆಯರಳು
ಮುದ್ದು ಸುರಿಯುವ ಗಲ್ಲ,
ಆಗೆಲ್ಲ;
ಹಾಲ್ಬಿಳುಪು, ಕಡುಗಪ್ಪು,
ಚೆಂಗುಲಾಬಿಯ ಕೆಂಪು,
ನರುಗಂಪು;
ಮಳೆಸುರಿವ ಮುಗಿಲು
ನವಿಲು
ಗರಿ
ಕಾಮನಬಿಲ್ಲು
ಎಲ್ಲೆಲ್ಲು;
ಎಲೆ ಹಸಿರು ಚೆಲ್ಲಾಡಿ,
ಹಳದಿ ಕಿತ್ತಳೆ ಮೋಡಿ;
ಬಣ್ಣಗಳ ರಾಡಿ,
ನೆತ್ತರಿನ ಕಡುಗೆಂಪು-
ಸುರಿಯುವ ಕಣ್ಣ
ನೀರಿಗದ್ದಿದ ಕುಂಚ
ತೊಳೆದಿಟ್ಟು,
ಬಿಸಿಲಿಗಿಕ್ಕಿದ ಚಿತ್ರ;
ಒಣಗಿ ರಟ್ಟು-
ಗಟ್ಟಿದ ನೂರು ಪತ್ರ-
ಗಳ
ಕೆಳಗೆಲ್ಲೋ ಹೂತು ಪೆಟ್ಟಿಗೆಯ
ಬೀಗವ ಜಡಿದು
ಕಳೆದಿದ್ದೆನಲ್ಲ
ಕೈ!
ಆ ಮೇಲೆ
ಸವೆದದ್ದೆಷ್ಟು ವೈಶಾಖ
ಸುರಿದು ಸರಿದದ್ದೆಷ್ಟು ಆಷಾಢ
ಶಿಶಿರ!
ಕಿತ್ತೊಗೆದ ಸುಳಿಬಳ್ಳಿ ಮತ್ತೆಲ್ಲೋ ಬೇರಿಳಿಸಿ
ಮರವನೊಂದನು ಹಬ್ಬಿ,
ಹೂತು, ಮಿಡಿ ಕಾಯಾಗಿ
ತೂಗು ತೊಟ್ಟಿಲು ತೂಗಿ,
ನನಗೊಬ್ಬ ಪುಟ್ಟ, ನಿನಗೆ ಪುಟ್ಟಿ.
ಮೊನ್ನೆ,
ಅದೇನೋ, ತುಕ್ಕಿಡಿದ ತಗಡಿನ ಪೆಟ್ಟಿಯೊಳಗಿಂದ
ದಡದಡನೆ ತಟ್ಟಿದಂತಾಗಿ,
ಕ್ಷಣ ಎದೆ ನಡುಗಿ
ತೆರೆದು ನೋಡಿದರೆ
ನೀನು,
ನಗುತ್ತಲಿದ್ದಿ!
"ನೀ ಒಂಚೂರೂ ಬದಲಾಗಿಲ್ಲ"ವೆಂದಿ
"ಬದಲಾಗು" ಎಂದಿ
ಅದ ಅರಗಿಸಿಕೊಳಲು ನಾನಿಲ್ಲಿ ಹೆಣ-
ಗುತ್ತಿರಲು
ನೀ ಆರಾಮ
ಮಾತಾಡುತ್ತಲೇ ಹೋದಿ -
ಪುಟ್ಟನಿಗೆ ವಯಸೆಷ್ಟು? ಪುಟ್ಟಿಯೇನೋದುವಳು;
ಮನೆ, ಗಂಡ, ಕಾರು, ಹೆಂಡತಿ-
ಪಟ್ಟ
ಆನೆ ಬಂತೊಂದಾನೆ...
ಹೌದೇ? ಅದು ನೀನೇನೆ?
ಆ ಕೆನ್ನೆ, ಆ ಕದಪು
ಆ ಚೆದುರು, ನುಡಿ-ನವಿರು,
ಬರಿಯ ಕಿರುನೋಟದೊಳೆ ಸುತ್ತೆಲ್ಲ ಎಳೆಚಿಗುರು -
ಒಳಗೇ ಹೋಲಿಸಿಕೊಂಡೆ;
ಇಲ್ಲ,
ಅದು ನೀನಲ್ಲವೆಂದು ಹೊಳೆದು,
ಎಂದೂ ಅದು ನೀನಾಗಿರಲೇ ಇಲ್ಲೆಂದು ತಲೆಗಿಳಿದು,
ನೆಮ್ಮದಿಯ ನಿಟ್ಟುಸಿರ ಹೊರದಬ್ಬಿದೆ;
ಮತ್ತಷ್ಟು ಖುಶಿಯಿಂದ ನಿನ್ನೊಡನೆ ಹರಟಿ
ಲೋಕಾಭಿರಾಮದಾರಾಮ
ಅನುಭವಿಸಿದೆ;
ಕೊನೆಗೊಮ್ಮೆ ಸ್ಟೈಲಾಗಿ ಬೈ ಹೇಳಿ
ಪೆಟ್ಟಿಗೆಯ ಮೇಲೆ ಮತ್ತೊಂದು
ಹೂವಿಟ್ಟು ಹಗುರಾಗಿ
ನಿದ್ದೆಹೋದೆ.
Thursday, June 2, 2011
ಸಕ್ಕದಮೋ ಕನ್ನಡಮೋ ನುಡಿಯೋ...
ನೊಜ್ಜೆಯೊಳಿಕ್ಕುವರೆ ಮಜ್ಜಿಗೆಗೆ ರುಚಿಯರಿಗರ್
ಮಜ್ಜನಕೆಣ್ಣೆಯನೆರೆಯದೆ
ಯುಜ್ಜುವವೋಲ್ ತಲೆಗೆ ತುಪ್ಪಮನ್ ಸಕ್ಕರೆಯನ್ ೧
ಎಣ್ಣೆಯೆ ರುಚಿಯೋಗರಕೆನೆ
ಬೆಣ್ಣೆಯದರ ಸವಿಯನೆತ್ತದೇಂ ಕಿಡಿಸುಗುಮೇ
ಎಣ್ಣೆಯಬೆಣ್ಣೆಯ ಸವಿಯರಿ
ದುಣ್ಣುವ ರಸಿಗನವಗಲ್ತೆ ಸೊಗಯಿಪುದಿನಿಗಳ್ ೨
ನುಡಿಯೇಂ ಬರಿ ಪದಮೇ ಕ
ನ್ನಡಪದವೊಟ್ಟುತಲೆ ಸಕ್ಕದಮನಕ್ಕಜದಿಂ
ಬಡಿದಟ್ಟಲ್ಕಾನುಡಿ ಕ
ನ್ನುಡಿಯಪ್ಪುದೆ ಮರುಳೆ ಕನ್ನಡಮದನೆ ಮರೆವಾ ೩
ಪದನರಿದುಲಿಯದೆ ಸವಿಯದೆ
ಪದವಿಡಿದೆಳೆಯುತಿದು ಕನ್ನಡಂ ಸಕ್ಕದಮೆಂ
ದದರುೞಿವಿಡಿಯಲ್ ಕಬ್ಬದ
ಪದಮದು ಕಿಡದುಳಿವುದೆಂತುಪುೞಿವಾಲಿನವೋಲ್ ೪
ನುಡಿಯೊಳನುಡಿತಕೆ ಗಮನಂ
ಗುಡುತೆಸೆವನುನಯದಿ ನಾದದೊಳ್ ಮನವಿಡುವನ್
ನುಡಿಯರಿಗನ್ ಗಮನಂಗಿಡೆ
ನುಡಿದರಿಗನೆನಲ್ ಸಮಂತು ನುಡಿಗದೆ ಲಕ್ಷ್ಯಂ ೫
Wednesday, May 11, 2011
ಅರಿವಿನ ದಾರಿ
![]() |
ಚಿತ್ರಕೃಪೆ: ಅಂತರ್ಜಾಲ |
Monday, November 22, 2010
Wednesday, November 17, 2010
ಎರಡು ಸಂಸ್ಕೃತ ಶ್ಲೋಕಗಳು
ಸರಸ್ವತೀ:ವಂದೇ ವಾಗೀಶ ವಾಣೀವಿಲಸಿತ ವರ ಚತ್ವಾರಿ ವಾಣೀಂ ಪುರಾಣೀಂ
ವಂದೇಹಂ ಹಂಸಿನೀಂ ತಾಂ ಸದಮಲ ಧವಳಾಂ ಸರ್ವವರ್ಣಾಂ ಸುವಾಣೀಂ
ಯುಕ್ತಿಸ್ಸಂಧಾನವಾದಾದ್ಯಖಿಲ ಪಟುಕಲಾ ಕಾರಿಣೀಂ ಚಾರುವಾಣೀಂ
ಬ್ರಹ್ಮಾಣೀಂ ಬ್ರಾಹ್ಮಣೀಂ ಸತ್ಪ್ರಗತಿವಿಗತಿ ಸಂದಾಯಿನೀಂ ಭಾವಯೇಹಂ - ಸ್ರಗ್ಧರಾವೃತ್ತ
ಗಣಪತಿ:ಗಜವಕ್ತ್ರಂ ಸುಜನಾಳಿವಂದಿತಲಸತ್ಪದ್ಮಾರುಣಶ್ರೀಪದಂ
ದುರಿತಾರಿಷ್ಟಸಮಸ್ತಮಸ್ತಕದಳೀಮತ್ತೇಭವಿಕ್ರೀಡಿತಂ
ಸಕಲಾರಂಭ ಸುಪೂಜಿತಂ ಶುಭಕಲಾ ಸೌಭಾಗ್ಯರತ್ನಾಕರಂ
ಅಖಿಳಾರ್ಥಪ್ರಗತಿಪ್ರದಂ ಶುಭಕರಂ ವಂದೇ ಸದಾ ಶ್ರೀಕರಂ - ಮತ್ತೇಭವಿಕ್ರೀಡಿತವೃತ್ತ
ಇದು ಮತ್ತೇಭವಿಕ್ರೀಡಿತವೃತ್ತದಲ್ಲಿದೆ (ಮತ್ತ + ಇಭ = ಮತ್ತೇಭ, ಮದಿಸಿದ ಆನೆ; ಅರಿಷ್ಟವೆಂಬ ಹೆಬ್ಬಾಳೆಯ ವನಕ್ಕೆ ಹೊಕ್ಕ ಮದಿಸಿದ ಆನೆ ಎಂಬ ಎರಡನೆಯ ಸಾಲು ಇದನ್ನೇ ಸೂಚಿಸುತ್ತದೆ, ಜೊತೆಗೆ ಇದರ ಛಂದಸ್ಸನ್ನೂ)
ವಿ ಆರ್ ಭಟ್ಟರ ಕೋರಿಕೆಯ ಮೇರೆಗೆ ಮತ್ತೊಂದು ತರಲೆ ಪ್ರಯತ್ನ, ಮೇಲಿನ ಗಣಪತಿ ಸ್ತುತಿಯನ್ನು ಶಾರ್ದೂಲವಿಕ್ರೀಡಿತವೃತ್ತದಲ್ಲಿ ಅಂದರೆ ಹೇಗಿರುತ್ತದೆ? ಹೀಗೆ:
ವಿಘ್ನೇಶಂ ಸುರಮೌಳಿಮಂಡಿತಲಸತ್ಪದ್ಮಾರುಣಶ್ರೀಪದಂ
ವಿಘ್ನಾರಿಷ್ಟಸಮಸ್ತಮಸ್ತಕದಳೀವಿಧ್ವಂಸವಿಕ್ರೀಡನಂ
ಸರ್ವಾರಂಭ ಸುಪೂಜಿತಂ ಶುಭಕಲಾ ಸೌಭಾಗ್ಯರತ್ನಾಕರಂ
ಸರ್ವಾರ್ಥಪ್ರಗತಿಪ್ರದಂ ಶುಭಕರಂ ವಂದೇ ಸದಾಶಂಕರಂ
ಮೊದಲಿನ ಶ್ಲೋಕವನ್ನೇ ತುಸು ಮಾರ್ಪಡಿಸಿದ್ದೇನಷ್ಟೇ. ನಿಜಹೇಳಬೇಕೆಂದರೆ, ಇದೇ ನಾನು ಮೊದಲು ರಚಿಸಿದ್ದು. ಆಮೇಲೆ ಕದಳಿಯ ಸಾಲಿನಲ್ಲಿ "ಮತ್ತೇಭವಿಕ್ರೀಡಿತ" ಅನ್ನುವ ಪದ ಉತ್ತಮ ಪ್ರತಿಮೆಯಾಗಬಹುದಲ್ಲವೇ ಅನ್ನಿಸಿತು. ಅದು ಛಂದಸ್ಸನ್ನು ಸೂಚಿಸುವುದು ಕೂಡ. ಅದನ್ನು ಬಳಸುವ ಮನಸ್ಸು ಮಾಡಿದ್ದರಿಂದ ಇಡೀ ಶ್ಲೋಕವನ್ನು ತುಸು ಮಾರ್ಪಡಿಸಿ ಶಾರ್ದೂಲವಿಕ್ರೀಡಿತದಿಂದ ಮತ್ತೇಭವಿಕ್ರೀಡಿತವೃತ್ತವನ್ನಾಗಿ ಮಾರ್ಪಡಿಸಿದೆ
Tuesday, November 2, 2010
ಸ್ತಬ್ಧ ಚಿತ್ರ
ಹೊಸ ಹೊಳಪು ಹೊಳೆಯುತಿಹುದು;
ಬೀಸುಗತ್ತಿಯು ಕೂಡ ಕೂರಲಗ ಮೊನೆಯಿಂದ
ಹೂಮಿಂಚನೆಸೆಯುತಿಹುದು.
ಇರುಳಿಡೀ ಸೋನೆಯಲಿ ಮಿಂದು ಚಳಿಹಿಡಿದ ಮುಂ-
ಜಾವೀಗ ನಗುತಲಿಹುದು;
ಎಳೆಬಿಸಿಲ ಕಾಯಿಸುತ ಮಿಡಿಯ ನಾಗರವೊಂದು
ಹೆಡೆಬಿಚ್ಚಿ ತೂಗುತಿಹುದು.
ಹೊಡೆಯುವುದೆ, ಬೇಡ ಬಿಡು; ಎಷ್ಟು ಚೆನ್ನಿದೆ ನೋಡು,
ಕಾಣಿಸದು ರೋಷ ಲೇಶ;
ಏಕೆ ಬಂದಿತೊ ಏನೊ ಸರಿದುಹೋಗಲಿ ತಾನೆ
ನಮಗೇಕೆ ನಾಗದೋಷ.
ಹರಿದ ಹಾದಿಯನಳೆದ ಸೌರಮಾನಗಳೆಷ್ಟೊ
ಸಪ್ತಪದಬಂಧದೊಳಗೆ;
ವೈಶಾಖದಿರುಳುಗಳ ಚಂದಿರನು ಕೂಡೆ ಬೆಳ
ದಿಂಗಳೊಂಭತ್ತರೊಳಗೆ.
ಇಬ್ಬರೊಳಗೊಂದಾಗಿ ಕೂಡಿದೆವು ಕಾಡಿದೆವು
ಬೇಡಿದೆವು ದೇವನಲ್ಲಿ;
ಚೆಂಗುಲಾಬಿಯ ಮೇಲೆ ಇಬ್ಬನಿಯು ನಗುತಿತ್ತು
ಕಂಪೊಡನೆ ತಂಪ ಚೆಲ್ಲಿ.
ಇಲ್ಲಿಬಾ, ತುಸುಹೊತ್ತು ಕೂರೋಣ ನಾವಿಲ್ಲಿ
ಹಚ್ಚಿ ಗಲ್ಲಕ್ಕೆ ಗಲ್ಲ;
ಅಮೃತಗಳಿಗೆಯನಿಂತು ಕಳೆಯುವುದು ತರವಲ್ಲ
ನಲ್ಲೆ ನಾ ನಿನ್ನ ನಲ್ಲ
Sunday, October 17, 2010
ಸಾಂಸ್ಕೃತಿಕ ಅನ್ವೇಷಣೆಯ ಸಾಹಿತಿ---ಎಸ್. ಎಲ್. ಭೈರಪ್ಪ?
ಭೈರಪ್ಪನವರ ಕಾದಂಬರಿಗಳ ಪ್ರಾತಿನಿಧಿಕ ಸೊಗಸಾದ ಕಿರುಪರಿಚಯ ಮಾಡಿಕೊಡುತ್ತಾ ಕೊನೆಗೆ "ಅವರನ್ನು ನಮ್ಮ ಸಾಂಸ್ಕೃತಿಕ ಅನ್ವೇಷಕ" ಎಂದು ಕರೆಯುತ್ತಾರೆ ಲೇಖಕರು. ನಾನು ಮತ್ತೊಂದು ಹೆಜ್ಜೆ ಮುಂದೆ ಹೋಗಿ ಅವರನ್ನು ನಮ್ಮ ಸಾಂಸ್ಕೃತಿಕ ಪ್ರತಿಪಾದಕನೆಂದು ಕರೆಯುತ್ತೇನೆ. ಏಕೆಂದರೆ ಅನ್ವೇಷಣೆಯಲ್ಲಿ ನಮಗೆ ತಿಳಿಯದ/ಹೊಸದಾಗಿ ತಿಳಿಯುವ, ಹಾಗೆ ತಿಳಿದಿದ್ದನ್ನು ಮುಕ್ತವಾಗಿ ಒಪ್ಪುವ ಅಂಶವಿರುತ್ತದೆ, ಚಿಂತನೆಯ ಅಂಶವಿರುತ್ತದೆ. ಆದರೆ ಭೈರಪ್ಪನವರಿಗೆ ನಮ್ಮ (ಹಾಗೇ ಪರ)ಸಂಸ್ಕೃತಿಯಬಗ್ಗೆ ಈಗಾಗಲೇ ಪ್ರಬಲವಾದ ಅಭಿಪ್ರಾಯಗಳಿರುವುದರಿಂದ, ಅದರ ಬಗ್ಗೆ ಅನ್ವೇಷಣೆ/"ಚಿಂತನೆ" ಈಗಾಗಲೇ ಆಗಿಹೋಗಿದೆ. ಅದರ ಪ್ರತಿಪಾದನೆಯೇ ಅವರ (ಕೊನೆಯ ಪಕ್ಷ ಇತ್ತೀಚಿನ) ಕಾದಂಬರಿಗಳ ಗುರಿಯಾದಂತೆನಿಸುತ್ತದೆ. ಸುನಾಥರೇ ಮುಂದೊಂದುಕಡೆ ಬಳಸುವಂತೆ, "ವಕಾಲತ್ತು" ಎನ್ನುವ ಪದ ಹೆಚ್ಚು ಸೂಕ್ತವೆನಿಸುತ್ತದೆ. ವಕೀಲನಿಗೆ ಚಿಂತನೆಗಿಂತಾ ಪ್ರತಿಪಾದನೆಯೇ ಮುಖ್ಯವಾಗುತ್ತದೆ.
ಅದೇನೇ ಇರಲಿ ಕಾದಂಬರಿಯ ತಂತ್ರಗಾರಿಕೆ, ಕತೆ ಹೇಳುವ ಅನನ್ಯಶೈಲಿ, ಕತೆಯ ಓಟಕ್ಕೆ ಭಂಗತಾರದೆ ಪಾತ್ರಗಳ ತಾತ್ವಿಕ/ನೈತಿಕ ಒಳತೋಟಿಗಳಲ್ಲಿ ಓದುಗರನ್ನು ಒಳಗೊಳಿಸುವ ಪರಿ ಇತ್ಯಾದಿ ಕಾರಣಗಳಿಗಾಗಿ ಭೈರಪ್ಪ ನನ್ನ ನೆಚ್ಚಿನ ಲೇಖಕರಲ್ಲಿ ಒಬ್ಬರು, ಇಂದಿಗೂ ಕೂಡ. ಅವರ ಈ ಹಿಂದಿನ ಕಾದಂಬರಿಗಳ ಬಗ್ಗೆ ನನ್ನ (ಮತ್ತು ನನ್ನಂತಹ ಇತರರ) ತಕರಾರೆಂದರೆ ಇದು: ಪ್ರಸ್ತುತ ವ್ಯವಸ್ಥೆಯೊಡನೆ ಬದಲಾದ ಪರಿಸ್ಥಿತಿಯ ಮುಖಾಮುಖಿ, ಅದು ಪಾತ್ರಗಳಲ್ಲಿ ತಂದೊಡ್ಡುವ ಸಂಘರ್ಷ, ಉಸಿರುಗಟ್ಟಿಸುವ ಪರಿಸ್ಥಿತಿ ಇವುಗಳನ್ನು ಭೈರಪ್ಪನವರು ವಸ್ತುವನ್ನಾಗಿಸಿಕೊಂಡರೂ, ಇಷ್ಟೆಲ್ಲಾ ತುಮುಲ/ಒಳತೋಟಿಗಳನ್ನನುಭವಿಸಿಯೂ ಅವರ ಪಾತ್ರಗಳು ಈ ಉಸಿರುಗಟ್ಟಿಸುವ ವ್ಯವಸ್ಥೆಯಿಂದ ಹರಿದುಕೊಂಡು ಹೊರಬರದೇ ಕೊನೆಗೆ ಅದಕ್ಕೇ ಜೋತುಬಿದ್ದುಬಿಡುತ್ತವೆಂಬುದು. ಆ ಕಾರಣಕ್ಕೇ ಭೈರಪ್ಪನವರು ಸನಾತನ ಜೀವನಶೈಲಿ ಎತ್ತಿಹಿಡಿಯುವ ಭರದಲ್ಲಿ ಹಳೆಯ ಕಂದಾಚಾರಕ್ಕೇ ಶರಣು ಹೊಡೆದುಬಿಡುತ್ತಾರೆಂಬುದು ಒಂದು ಅನಿಸಿಕೆಯಾಗಿತ್ತು. ಇಂಥದ್ದೊಂದು "ಕ್ರಾಂತಿ" ಆ ಪಾತ್ರ ಅನುಭವಿಸುವ ತುಮುಲಕ್ಕೆ ಅತಿ ಸಹಜವಾದ ಹೊರಹರಿವಾಗಿದ್ದರೂ ಕೊನೆಯ ಗಳಿಗೆಯಲ್ಲಿ ಅದು ಹಿಂದಿರುಗಿ ಬಂದುಬಿಡುತ್ತದೆ, ಮತ್ತು ಅದೊಂದು ರೀತಿಯ ರಸಾತ್ಮಕ ಅಸಮಾಧಾನ/ಅಸಂತುಷ್ಟಿಯನ್ನು ಓದುಗನಲ್ಲಿ ಉಳಿಸಿಬಿಡುತ್ತವೆ. ಹಾಗಿದ್ದಮೇಲೆ ಅಂಥದ್ದೊಂದು ಸಂಘರ್ಷವನ್ನು ಕಾದಂಬರಿಯ ಸಮಸ್ಯೆಯನ್ನಾಗಿ ತೆಗೆದುಕೊಳ್ಳುವ ಅಗತ್ಯವಾದರೂ ಏನು? ಆದರೆ ನಮ್ಮ ಈ ಭಿನ್ನಾಭಿಪ್ರಾಯವೇನಿದ್ದರೂ ತಾತ್ವಿಕ ಮಟ್ಟದಲ್ಲಿ ಮಾತ್ರವೇ ಹೊರತು, ಕಾದಂಬರಿಗಳ ಕಲಾದೃಷ್ಟಿಯ ಬಗ್ಗೆ ಮಾತ್ರ ಎರಡು ಮಾತಿರಲಿಲ್ಲ.
ಆದರೆ ಆವರಣದಿಂದೀಚಿನ ಕಾದಂಬರಿಗಳ ಬಗೆಗೆ ಇಷ್ಟೇ ಹೇಳಿ ಸುಮ್ಮನಾಗಲು ಬರುವುದಿಲ್ಲ. ಅವರ ಹಳೆಯ ಕಾದಂಬರಿಗಳ ಕಲಾದೃಷ್ಟಿ, ಸೂಕ್ಷ್ಮ ಪ್ರಬುದ್ಧ ಮಂಡನೆ ಇಲ್ಲಿ ಮರೆಯಾಗಿದೆ. ಪಾತ್ರಗಳ ಒಳತೋಟಿ, ಅದರ ವೈಯಕ್ತಿಕ ಸೂಕ್ಷ್ಮ ಕಳೆದುಕೊಂಡು ಎರಡು ಪಂಗಡಗಳ/ಜನಾಂಗಗಳ/ಸಮಾಜಗಳ/ಲಿಂಗಗಳ ಜೋರುಬಾಯಿಯಾಗಿ ಪರಿವರ್ತನೆಗೊಂಡಿದೆ. ಈ ಇಡೀ ಸಮಾಜಗಳ ಭಾರವನ್ನು ಕೇವಲ ಒಂದೆರಡು ದುರ್ಬಲ ಪಾತ್ರಗಳು ತಡೆದುಕೊಳ್ಳುವುದು ಸಾಧ್ಯವಾಗದೇ, ಪಾತ್ರಗಳಾಗಿ ಅವು ಕುಸಿದಿವೆ. ಪಾತ್ರವೊಂದು ಗುಣವೊಂದರ ಪ್ರತಿನಿಧಿಯಾಗಿ ಕೆಲಸಮಾಡುವುದು ಅಷ್ಟು ಸುಲಭವೂ ಅಲ್ಲ, ಮತ್ತು ಇದೇ ಮೊದಲೂ ಅಲ್ಲ. ವ್ಯಾಸರು ಇದನ್ನು ಬಹು ಯಶಸ್ವಿಯಾಗಿ ಮಾಡಿದ್ದಾರೆ; ರನ್ನ-ಪಂಪರು ಮಾಡಿದ್ದಾರೆ; ಅಷ್ಟೇಕೆ, ಸ್ವತಃ ಭೈರಪ್ಪನವರೇ ಇದನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ, ಪರ್ವದಲ್ಲಿ. ಆದರೆ ಆವರಣದೀಚೆಯ ಅವರ ಕಾದಂಬರಿಗಳಲ್ಲಿ ಈ ಕೌಶಲ ಸಂಪೂರ್ಣ ಮರೆಯಾಗಿದೆಯೆಂದೇ ಹೇಳಬೇಕು. ಅಲ್ಲಿ ಪಾತ್ರಗಳು ಪಾತ್ರಗಳಾಗಿ ಉಳಿದಿಲ್ಲ. ಅಷ್ಟೇಕೆ, ರಾತ್ರಿ ಗಂಡಹೆಂಡಿರು ಪಕ್ಕಪಕ್ಕ ಮಲಗಿದಾಗಲೂ, ಮಿಲನದ ವೇಳೆಯಲ್ಲೂ ಮಾತಾಡುವುದು ಆ ಎರಡು ದೇಹಗಳಲ್ಲ, ಎರಡು ಮನಸ್ಸುಗಳಲ್ಲ, ಬದಲಿಗೆ ಎರಡು ಸಮಾಜಗಳು, ಎರಡು ಧರ್ಮಗಳು (ಆವರಣ)! ಕಾದಂಬರಿಯಲ್ಲಿ ಭೈರಪ್ಪನವರದ್ದೇ ಛಾಪು ಹೊತ್ತು ಮೂಡಿರುವ ತಲೆದೂಗಿಸುವ ಕಥನತಂತ್ರವೂ ಈ ಅಧ್ವಾನವನ್ನು ಮುಚ್ಚುವಲ್ಲಿ ಯಶಸ್ವಿಯಾಗುವುದಿಲ್ಲ.
"ನನ್ನ ದೃಷ್ಟಿ ಬಹುಜನದ ದೃಷ್ಟಿ, ಆದ್ದರಿಂದ ನನ್ನದು ಸರಿ, ಆದ್ದರಿಂದಲೇ ನಿನ್ನದು ತಪ್ಪು, ಆದ್ದರಿಂದಲೇ ನಿನ್ನದೆಂಬುದೆಲ್ಲವೂ ತಪ್ಪೇ, ನಿನ್ನ ಅಪ್ಪ, ತಾತ ಮುತ್ತಾತಂದಿರೆಲ್ಲಾ ತಪ್ಪು" ಮತ್ತು ಇನ್ನೊಂದು ರೀತಿಯಿಂದ "ನಿನ್ನ ಅಪ್ಪ, ತಾತ ಮುತ್ತಾತಂದಿರು ನಮಗೆ ಹೀಗೆ ಹೀಗೆ ಮಾಡಿದರು ( ಐತಿಹಾಸಿಕ ಪುರಾವೆ); ಆದ್ದರಿಂದ ನೀವೆಲ್ಲರೂ ನಮ್ಮೆಲ್ಲರನ್ನೂ ನಾಶ ಮಾಡಿದಿರಿ, ಮಾಡುತ್ತಿದ್ದೀರಿ, ಮಾಡುವಿರಿ; ಆದ್ದರಿಂದ ನಿಮ್ಮದೆಲ್ಲವೂ ತಪ್ಪೇ; ನಾನು ಸನಾತನ ಧರ್ಮದ ಪ್ರತಿನಿಧಿ, ನೀನು ನಮ್ಮನ್ನು ನಾಶಮಾಡಿದ ಪಾಶವೀ ಧರ್ಮದ ಪ್ರತಿನಿಧಿ" ಈ ರೀತಿಯ ವಾದಸರಣಿಗಳು ಚರ್ಚಾಸ್ಪರ್ಧೆಗೆ ಸರಿಹೊಂದಬಹುದೇ ಹೊರತು ಕಾದಂಬರಿಯಂಥ ಸೂಕ್ಷ್ಮ ವೈಯಕ್ತಿಕ ಬರವಣಿಗೆಗಲ್ಲ; ಮತ್ತು ಈ ವಾದಸರಣಿಯನ್ನು ಸಮರ್ಥಿಸಲೆಂದೇ ಸೃಷ್ಟಿಗೊಂಡ ಪಾತ್ರನಿರೂಪಣೆ ಘಟನಾವಳಿಗಳು. ಇತಿಹಾಸವೇ ಪ್ರಧಾನವಾದರೆ ಒಂದು ಸಂಶೋಧನ ಗ್ರಂಥವನ್ನು ಬರೆದರೆ ಅದಕ್ಕೊಂದು ಗಾಂಭೀರ್ಯ; ಇಲ್ಲ ವೈಯಕ್ತಿಕ ದೃಷ್ಟಿಕೋನವೇ ಪ್ರಧಾನವಾದರೆ ಅದನ್ನು ಪ್ರತಿಪಾದಿಸಿ ಒಂದು ಲೇಖನ ಪ್ರಕಟಿಸಿದರೆ ಅದರ ಬಗ್ಗೆ ಚರ್ಚಿಸಬಹುದು; ಆದರೆ ಕಾದಂಬರಿ ಬರೆದಾಗ ಅದರ ಪ್ರಥಮ ಬದ್ಧತೆ ಕಲಾದೃಷ್ಟಿಗೇ ಹೊರತು ಮತ್ತಾವುದಕ್ಕೋ ಅಲ್ಲ, ಅಲ್ಲವೇ? ಅದು ಬಿಟ್ಟು ಕೇವಲ ವೈಯಕ್ತಿಕ ದೃಷ್ಟಿಕೋನವನ್ನು "ಎಲ್ಲರೂ ಒಪ್ಪುವಂತೆ" ಪ್ರತಿಪಾದಿಸಲು ಕಾದಂಬರಿಯ ಹೊದಿಕೆಯಲ್ಲಿ ಇತಿಹಾಸವನ್ನು ತುರುಕಿದರೆ, ಅಷ್ಟಾಗಿಯೂ ಅದು ಒಂದು ದೃಷ್ಟಿಕೋನದ ಲೇಖನವಾಗಿ ಉಳಿದೀತೇ ಹೊರತು ಕಾದಂಬರಿಯಾಗುವುದಿಲ್ಲ, ಅಲ್ಲವೇ? ಹಾಗೆ ಲೇಖನವಾಗಿಯೇ ಬರೆಯುವುದಾದರೆ ಅದನ್ನು ಸಾಫ ಸೀದಾ ಹೇಳುವುದರ ಬದಲು ಕಾದಂಬರಿಯೊಂದರ ಕಲಾತ್ಮಕ ಅಸ್ಪಷ್ಟತೆ, ಮಾಯದ ಮುಸುಕು (fictionality) ಏಕೆ? ಅಂದರೆ ನಮ್ಮ ತಾತ್ವಿಕ ವಿರೋಧ, ಧರ್ಮ ಮತ್ತು ಅದರ ಸಾಮಾಜಿಕ ಆಯಾಮಗಳ ಬಗೆಗಿನ ಭೈರಪ್ಪನವರ ನಿಲುವಿನ ಬಗೆಗಲ್ಲ, ಬದಲಿಗೆ ಅದನ್ನು ಅವರು "ಕಾದಂಬರಿ"ಯನ್ನಾಗಿಸಲೆತ್ನಿಸುವ ಪರಿಯ ಬಗೆಗೆ. ಇಂಥದ್ದೊಂದು ಇತಿಹಾಸ, ವಿಚಾರ ಮತ್ತು ಕತೆಯ ಅಂಶಗಳ ಕಲಸುಮೇಲೋಗರ, ಆ ಅಂಶಗಳ ಪರಸ್ಪರ ಮೈಲಿಗೆಯಿಂದಾಗಿಯೇ ಆ ಬರಹಕ್ಕೆ ಇತಿಹಾಸಗ್ರಂಥವೊಂದರ authenticityಯನ್ನಾಗಲೀ ವೈಚಾರಿಕ ಬರಹವೊಂದರ ಗಾಂಭೀರ್ಯವನ್ನಾಗಲಿ ಕತೆಯ ಸೌಂದರ್ಯ/ಕಲಾತ್ಮಕತೆಯನ್ನಾಗಲಿ ದೊರಕಿಸಲು ವಿಫಲವಾಗುತ್ತದೆ. ಇದಕ್ಕೆ ಸರಿದೊರೆಯಾದ ಉದಾಹರಣೆಯಾಗಿ ತರಾಸು ಅವರ ಐತಿಹಾಸಿಕ ಕಾದಂಬರಿಗಳನ್ನು ನೆನೆಯೋಣ. ಅಲ್ಲೆಲ್ಲೂ ಕಾದಂಬರಿಯ ಪಾತ್ರವೊಂದು ಇಷ್ಟೆಲ್ಲಾ "ಐತಿಹಾಸಿಕ ಸಂಶೋಧನೆ"ಗಳನ್ನು ಮಾಡಿ, ತನ್ನದೇ ಕತೆಯ ಕೊನೆಯಲ್ಲಿ ತನ್ನ ಐತಿಹಾಸಿಕ ಸಂಶೋಧನೆಗಳ bibliography ಕೊಟ್ಟದ್ದು ಕಾಣಬರುವುದಿಲ್ಲ. ಇಷ್ಟಕ್ಕೂ ಇದೆಲ್ಲಾ ಚರ್ಚೆ, ಈ ಕಾದಂಬರಿಗಳ "ಕಾದಂಬರಿತನ"ವನ್ನು ಕುರಿತದ್ದೇ ಹೊರತು ಭೈರಪ್ಪನವರ ನಿಲುವು/"ಪ್ರತಿಪಾದನೆ"ಗಳ ಕುರಿತದ್ದಲ್ಲ (ಅವು ಬೇರೆಯೇ ಚರ್ಚೆಯ ವಿಷಯ).
ಇನ್ನು ಅನಂತಮೂರ್ತಿಯವರ ಬಗ್ಗೆ ಬಂದರೆ, ಭೈರಪ್ಪನವರ ಬಗೆಗಿನ ಚರ್ಚೆಯಲ್ಲಿ ಅನಂತಮೂರ್ತಿಯ ಪ್ರಸ್ತಾಪ ಬರಬೇಕಾದ ಯಾವುದೇ ಸಾಹಿತ್ಯಕ ಕಾರಣಗಳೂ ನನಗಂತೂ ಕಾಣುವುದಿಲ್ಲ. ಇಬ್ಬರ ಬರಹಗಳ ದಿಕ್ಕು ದೆಸೆಗಳು ನೀತಿ-ನಿಲುವುಗಳು, ಸೊಗಸುಗಳು ಬೇರೆಯೇ. ಜಿಲೇಬಿಯೇ ರುಚಿ, ಖೀರು ಅಲ್ಲ ಎನ್ನಲಾದೀತೇ? ಭೈರಪ್ಪನವರ ನಿಲುವಿನಲ್ಲಿ ಅದೆಷ್ಟೇ ಕುಂದುಗಳಿದ್ದಾಗ್ಯೂ ನಮ್ಮ ಕನ್ನಡ ಕಾದಂಬರಿಯ ಸಂದರ್ಭದಲ್ಲಿ ಭೈರಪ್ಪನವರೊಂದು ಮೈಲಿಗಲ್ಲು ಎಂಬುದನ್ನು ಅಲ್ಲಗಳೆಯುವಂತಿಲ್ಲ. ಅಂತೆಯೇ ಸಣ್ಣ ಕತೆಗಳ ಸಂದರ್ಭದಲ್ಲಿ ಅನಂತಮೂರ್ತಿಯವರು. ಆದರೆ ಇಬ್ಬರಿಗೂ ಎಲ್ಲಿಂದೆಲ್ಲಿಯ ಹೋಲಿಕೆ? ಆನಂದಭೈರವಿಗೂ ಕಲ್ಯಾಣಿಗೂ ಹೋಲಿಕೆಯೇ? ಆದರೆ ಇವತ್ತು ಭೈರಪ್ಪನವರ ಚರ್ಚೆ ಅನಂತಮೂರ್ತಿಯವರ ಪ್ರಸ್ತಾಪವಿಲ್ಲದೇ ಪೂರ್ಣಗೊಳ್ಳುವುದೇ ಇಲ್ಲ. ಇದಕ್ಕೆ ನಾವು ಕಾಣುವ ಒಂದೇ ಅಸಾಹಿತ್ಯಕ ಕಾರಣವೆಂದರೆ, ಅನಂತಮೂರ್ತಿಯವರು ಭೈರಪ್ಪನವರ ಕಾದಂಬರಿಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು, ಅದು ವಿವಾದವಾಯಿತು, in retaliation, ಅನಂತಮೂರ್ತಿಯವರ ಸಾಹಿತ್ಯದ "ಪುನರ್ವಿಮರ್ಶೆ" ನಡೆಯಿತು, ಹೊಸ ದೃಷ್ಟಿಕೋನದಿಂದ! ಮತ್ತೆ ಎರಡೂ ಬಣಗಳೂ ವೈಯಕ್ತಿಕ ನಿಂದನೆಗಳಲ್ಲಿ ತೊಡಗಿದುವು. ಇದು ಎಷ್ಟರಮಟ್ಟಿಗೆ ಸರಿ?
ಇನ್ನು specific ಆಗಿ "ಸಂಸ್ಕಾರ"ದ ಬಗ್ಗೆ ಮಾತಾಡುವುದಾದರೆ, ಸಂಸ್ಕಾರದ ಕತೆ ಅಥವ ಅದರ "ಒಳಕತೆ"ಯಲ್ಲಿ, ಹಾಗೆ ಅದನ್ನು ಬಳಸುವ ತಂತ್ರಗಾರಿಕೆಯಲ್ಲಿ ಲೇಖಕರು ಹೇಳುವ ದೂರ್ತತನವಾಗಲೀ ಅಥವ ಆ ದೂರ್ತತನ ಮಾಡುವ ಅಗತ್ಯವಾಗಲೀ ಕಾಣಬರುವುದಿಲ್ಲ. ಕತೆಯ ರೀತಿಯೇ ಅದಲ್ಲವೇ? ಹೇಳುವುದನ್ನು ಸಾಫ ಸೀದಾ ಹೇಳಿಬಿಟ್ಟರೆ ಅದು ಕತೆಯಾಗುವುದಿಲ್ಲ, ಬದಲಿಗೆ ಲೇಖನವೋ ಭಾಷಣವೋ ಇನ್ನೇನೋ ಆಗುವುದು, ಅಲ್ಲವೇ? ಆದರೆ ಇಲ್ಲಿ ಕತೆಗಾರನ ಉದ್ದೇಶ ಇದನ್ನು ಲೇಖನವೋ ಭಾಷಣವೋ ಆಗಿಸುವುದಲ್ಲ, ಬದಲಿಗೆ ಕತೆಯಾಗಿಯೇ ಉಳಿಸಿಕೊಳ್ಳುವುದು. ಮತ್ತು ಇದರಲ್ಲಿ ದೂರ್ತತನವನ್ನು ಆರೋಪಿಸುವ ಮೊದಲು ಸಂಸ್ಕಾರದ ಕತೆ ಬಂದ ಕಾಲಘಟ್ಟವನ್ನು ಗಮನಿಸಬೇಕು. ಅವತ್ತಿನ ಸಮಾಜ ಇವತ್ತಿನಷ್ಟು liberal ಆಗಿರಲಿಲ್ಲ. ಸಂಸ್ಕಾರದ "ಪ್ರತಿಭಟನೆ" ಅವತ್ತಿನ ಕಾಲಘಟ್ಟಕ್ಕಂತೂ ಖಂಡಿತಾ ಪ್ರಸ್ತುತವಾಗಿತ್ತು. ವ್ಯವಸ್ಥೆಯೇ ಬಲವಾಗಿದ್ದಾಗ ಅದರ ಬಗೆಗಿನ ಪ್ರತಿಭಟನೆ "ಲೇವಡಿ"ಯೆನ್ನಿಸಿಕೊಳ್ಳುವುದೇ? ಆದರೆ ಇವತ್ತು ಕಾಲ ಬದಲಾಗಿದೆ. ಸಮಾಜ ಹೆಚ್ಚು liberal ಆಗಿದೆ, ವ್ಯವಸ್ಥೆ ಮೊದಲಿನಷ್ಟು ಬಲವಾಗಿಲ್ಲ. ಆದ್ದರಿಂದ ಅದೇ ಕತೆ ಇವತ್ತಿನ ಕಾಲಘಟ್ಟದಲ್ಲಿ ಬಂದರೆ, ಬದಲಾದ ಬ್ರಾಹ್ಮಣ ಸಮಾಜದ ಹಿನ್ನೆಯಲ್ಲಿ ಅನಂತಮೂರ್ತಿಯವರ ಅಂಥ ಪ್ರಯತ್ನ ದೂರ್ತತನವೂ ಬ್ರಾಹ್ಮಣ ಸಮಾಜದ ಲೇವಡಿಯೂ ಖಂಡಿತ ಆಗುತ್ತಿತ್ತು, ಆದರೆ ಸಂಸ್ಕಾರದ ಅವತ್ತಿನ ಕಾಲಘಟ್ಟದಲ್ಲಿ ಅಲ್ಲ.
ಇದರ ಅರ್ಥ ಅನಂತಮೂರ್ತಿಯವರ ಇಂದಿನ ಅನೇಕ ಸಾಹಿತ್ಯೇತರ ಸಾಮಾಜಿಕ ನಿಲುವುಗಳಲ್ಲಿ ದೂರ್ತತನವಿಲ್ಲವೆಂದಲ್ಲ, ಅದನ್ನು ನಾನು ಸಮರ್ಥಿಸುತ್ತೇನೆಂದೂ ಅಲ್ಲ. ಅವರ "ಅಲ್ಪಸಂಖ್ಯಾತ" ಧ್ವನಿಯನ್ನು ತಾತ್ವಿಕವಾಗಿ ನಾನು ಸಮರ್ಥಿಸಿದರೂ ಅದು ಅತಿರೇಕಕ್ಕೆ ಹೋದಾಗೆಲ್ಲಾ ಕಟುವಾಗಿ ವಿರೋಧಿಸಿದವರಲ್ಲಿ ನಾನೂ ಒಬ್ಬ. ಆದರೂ ವ್ಯಕ್ತಿಯೊಬ್ಬನಿಗೆ ಸಾರಾಸಗಟಾಗಿ ದೂರ್ತ/ಸರಳ ಎಂಬ ಹಣೆಪಟ್ಟಿ ಹಚ್ಚುವುದಾಗಲೀ ಆ "ದೂರ್ತತನ/ಸರಳತೆ"ಗಳನ್ನು ಅವನ ಎಲ್ಲಾ (ಕಾಲಘಟ್ಟಗಳ) ಬರವಣಿಗೆಗೂ ಸಾರಾಸಗಟಾಗಿ ಅನ್ವಯಿಸುವುದು ಸಾಹಿತ್ಯಕ್ಕೆ, ಸೃಜನಶೀಲತೆಗೆ ಅಪಚಾರವಲ್ಲವೇ? ಅಂಥ ಸಾಹಿತ್ಯ/ಸೃಜನಶೀಲತೆ ಅನಂತಮೂರ್ತಿಯವರದ್ದಿರಬಹುದು, ಅಥವ ಭೈರಪ್ಪನವರದ್ದಿರಬಹುದು ಅಥವ ಇನ್ನಾರದೇ ಇರಬಹುದು.